ಪುಸ್ತಕ ಸಂಗಾತಿ
ನೂರು ಜನಪದ ಹಾಡುಗಳು ಕೆ.ಶಿವು ಲಕ್ಕಣ್ಣವರ ಬೈಲೂರ ಬಸವಲಿಂಗಯ್ಯನವರ ಸಮೃದ್ಧ ಜನಪದ ಹಾಡಿನ ಕೃತಿಯೇ ‘ನೂರು ಜನಪದ ಹಾಡುಗಳು’ ಎಂಬ ಪುಸ್ತಕವು! ಪ್ರಸ್ತುತವಾಗಿ ಈ ‘ನೂರು ಜನಪದ ಹಾಡುಗಳು’ ಕೃತಿಯು ವಿಸ್ತೃತವಾಗಿ ಗರ್ಭಸೇರಲಿದ್ದ ಬೀಸೂಕಲ್ಲಿನ ಪದಗಳು, ಸೋಬಾನೆ ಪದಗಳು, ಜೋಗುಳ ಪದಗಳು, ಚೌಡಿಕೆ ಪದಗಳು, ಕಿನ್ನರಿ ಪದಗಳು, ಹಬ್ಬದ ಹಾಡುಗಳು, ಕೋಲಾಟದ ಪದಗಳು, ಗೀಗೀ ಪದಗಳು, ಹೀಗೆಯೇ ಹತ್ತಾರು ಪ್ರಕಾರಗಳನ್ನು ಒಳಗೊಂಡಿದೆ ಈ ‘ನೂರು ಜನಪದ ಹಾಡುಗಳು’ ಎಂಬ ಕೃತಿಯು… ಒಟ್ಟಾರೆ ಜನಪದ ಹಾಡು ಅಥವಾ ಜಾನಪದವೆಂದರೆ […]
Read More
ತಗಿ ನಿನ್ನ ತಂಬೂರಿ , ಶರೀಫರ ತತ್ವ ಭಾಷ್ಯ” ಕೃತಿ: ತಗಿ ನಿನ್ನ ತಂಬೂರಿ(ಶರೀಫರ ತತ್ವ ಭಾಷ್ಯ) ಲೇಖಕಿ; ಚಂದ್ರಪ್ರಭ ಬಿ. ಪ್ರಕಾಶಕರು: ಅಜಬ್ ಪ್ರಕಾಶನ, ನಿಪ್ಪಾಣಿ ತಗಿ ನಿನ್ನ ತಂಬೂರಿ , ಶರೀಫರ ತತ್ವ ಭಾಷ್ಯ” ಅಜಬ್ ಪ್ರಕಾಶನ, ನಿಪ್ಪಾಣಿ ರವರ ಹೊಸ ಪ್ರಕಟಣೆ. ಬನಹಟ್ಟಿಯ ಚಂದ್ರಪ್ರಭಾ ಲೇಖನಿಯಿಂದ ಇದು ಚೊಚ್ಚಲ ಪುಸ್ತಕ. ಕನ್ನಡ ನಾಡಿನ ಬಹು ಜನಪ್ರಿಯ ಜಾನಪದ ಕವಿ, ತತ್ವ ಪದಕಾರ ಶರೀಫ ಸಾಹೇಬರ ಆಯ್ದ ೨೫ ತತ್ವ ಪದಗಳನ್ನು ಇಲ್ಲಿ ಲೇಖಕರು […]
Read More
‘ಗಂಗವ್ವ ಗಂಗಾಮಾಯಿ‘ ಶಂಕರ ಮೊಕಾಶಿ ಪುಣೇಕರ ಕೆ.ಶಿವು ಲಕ್ಕಣ್ಣವರ ಗಂಗವ್ವ ಗಂಗಾಮಾಯಿಯಾಗುವ ಅಪೂರ್ವ ಕಥನವೇ ಶಂಕರ ಮೊಕಾಶಿ ಪುಣೇಕರರ ‘ಗಂಗವ್ವ ಗಂಗಾಮಾಯಿ’..! ಕನ್ನಡದ ಮುಖ್ಯ ಸ್ತ್ರೀಪಾತ್ರಗಳ ಜೊತೆ ನಡೆಸುವ ಈ ಸಂವಾದಕ್ಕೆ ಹಲವು ಆಸೆಗಳು, ಉದ್ದೇಶಗಳು ಇವೆ. ಕನ್ನಡ ಮನಸ್ಸನ್ನು ಆವರಿಸಿರುವ, ಕಾಡಿರುವ ಈ ಸ್ತ್ರೀಪಾತ್ರಗಳನ್ನೆಲ್ಲ ಒಂದು ವೇದಿಕೆಗೆ ತಂದಾಗ ಸೃಷ್ಟಿಯಾಗುವ ಹೆಣ್ಣಿನ ಚಿತ್ರ ಹೇಗಿರಬಹುದು ಎನ್ನುವ ಕುತೂಹಲ, ಹೆಣ್ಣನ್ನು ನೋಡುವ, ಪರಿಭಾವಿಸುವ ನಿರ್ದಿಷ್ಟ ವಿನ್ಯಾಸಗಳು ಇವೆಯೇ ಎನ್ನುವ ಹುಡುಕಾಟವೇ ಲೇಖಕನದ ಮತ್ತು ಲೇಖಕನ ದೃಷ್ಟಿಕೋನ… ಆಯ್ಕೆ, […]
Read More
‘ಉಚಲ್ಯಾ’ ಕೆ.ಶಿವುಲಕ್ಕಣ್ಣವರ ಲಕ್ಷ್ಮಣ ಗಾಯಕವಾಡರ ‘ಉಚಲ್ಯಾ’ ಎಂಬ ಹೀಗೊಂದು ಮುಟ್ಟಬಾರದವರ ಮರಾಠಿ ಕಥೆ..! ಅನುವಾದಕರು- ಚಂದ್ರಕಾಂತ ಪೋಕಳೆ Pages 120 ₹ 75.00 Year of Publication: 2017 Published by: ನವಕರ್ನಾಟಕ ಪ್ರಕಾಶನ Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001 Phone: 080-22203580/01/02 ಉಚಲ್ಯಾ’ ಮರಾಠಿಯ ಪ್ರಖ್ಯಾತ ಲೇಖಕ ಲಕ್ಷ್ಮಣ ಗಾಯಕವಾಡರ ಆತ್ಮಕತೆಯ ಕನ್ನಡಾನುವಾದ. ಚಂದ್ರಕಾಂತ ಪೋಕಳೆಯವರು ಉಚಲ್ಯಾವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಬುಡಕಟ್ಟು ಸಮುದಾಯದಿಂದ ಬಂದ ಲೇಖಕ ತನ್ನ ಜೀವನದ ಭೀಕರೆಯನ್ನು […]
Read More
ಕಾಮೋಲವೆಂಬ ಅಂತರಂಗದ ಶೋಧ. ಸ್ಮಿತಾ ಅಮೃತರಾಜ್ ಕೃತಿ: ಕಾಮೋಲ (ಕಥಾ ಸಂಕಲನ) ಲೇಖಕ: ಅಜಿತ್ ಹರೀಶಿ ವೃತ್ತಿಯಲ್ಲಿ ವೈದ್ಯರಾಗಿ ಪ್ರವೃತ್ತಿಯಲ್ಲಿ ಬರಹಗಾರರಾಗಿರುವ ಡಾ. ಅಜೀತ್ ಹರೀಶಿ ಶಿವಮೊಗ್ಗದ ಸೊರಬದವರು. ಕೃಷಿ, ವೈದ್ಯವೃತ್ತಿಯ ಬಿಡುವಿಲ್ಲದ ಕಾರ್ಯ ಬಾಹುಳ್ಯದ ನಡುವೆಯೂ ಕತೆ, ಕವಿತೆ ಬರೆಯುತ್ತಾ ತನ್ನ ಸೃಜನಶೀಲತೆಯನ್ನು ಬತ್ತದಂತೆ ಕಾಪಿಟ್ಟುಕೊಂಡಿರುವ ಅಜೀತ್ ಹೆಗಡೆಯವರು ಈಗಾಗಲೇ ತಮ್ಮ ಬರಹಕ್ಕೆ ಅನೇಕ ಬಹುಮಾನ ಮತ್ತು ಪ್ರಶಸ್ತಿಗಳನ್ನು ಪಡೆದುಕೊಂಡವರು. ಅವರ ವೈವಿಧ್ಯಮಯ ಬರಹದ ಓಘದ ಕುರಿತು ನನಗೆ ಯಾವೊತ್ತು ತೀರದ ಅಚ್ಚರಿ. ಈಗಷ್ಟೇ ಓದಿ […]
Read More
ವಲಸೆ, ಸಂಘರ್ಷ ಮತ್ತು ಸಮನ್ವಯ ಪುಸ್ತಕ ವಿಮರ್ಶೆ ಪುಸ್ತಕದ ಹೆಸರು: ವಲಸೆ ಸಂಘರ್ಷ ಸಮನ್ವಯ ಲೇಖಕರು: ಪುರುಷೋತ್ತಮ ಬಿಳಿಮಲೆ ಪ್ರಕಟನ ವರ್ಷ: 2019 ಬೆಲೆ: 400 ರೂಪಾಯಿ ಪ್ರಕಾಶಕರು: ಅಕೃತಿ ಆಶಯ ಪಬ್ಲಿಕೇಶನ್ ಮಂಗಳೂರು ಲೋಕೇಶ ಕುಂಚಡ್ಕ ಡಾ. ಪುರುಷೋತ್ತಮ ಬಿಳಿಮಲೆಯವರ 400 ಪುಟಗಳ ಈ ಕೃತಿಗೆ 1985ರಲ್ಲಿ ಮಂಗಳೂರು ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ನೀಡಿದೆ. ಅಲ್ಪ ಸ್ವಲ್ಪ ಬದಲಾವಣೆಯೊಂದಿಗೆ ಪ್ರಸ್ತುತ ಸಂಶೋಧನ ಕೃತಿಯು ಇದೀಗ ಪ್ರಕಟವಾಗಿದೆ. ಒಮ್ಮೆ ಬರೆದಾದ ಸಂಶೋಧನ ಪ್ರಬಂಧವನ್ನು ಪರಿಷ್ಕರಣೆ ಮಾಡುವುದು ಸುಲಭದ ಕೆಲಸವಲ್ಲ, ಇನ್ನೊಂದು ಪ್ರಬಂಧವನ್ನು ಬರೆದ ಹಾಗೆ […]
Read More
ಕೃತಿ:ಮೆಟ್ಟಿಲಿಳಿದು ಹೋದ ಪಾರ್ವತಿ’..! ಲೇಖಕಿ: ಡಾ.ಕಮಲಾ ಹೆಮ್ಮಿಗೆ ಕೆ.ಶಿವು ಲಕ್ಕಣ್ಣವರ ‘ಅಗ್ನಿದಿವ್ಯ’ದಿಂದೆದ್ದು ಬಂದ ಹೆಣ್ಣುಗಳ ಕಥೆಗಳಿವು ಈ ಡಾ.ಕಮಲಾ ಹಮ್ಮಿಗೆಯವರ ‘ಮೆಟ್ಟಿಲಿಳಿದು ಹೋದ ಪಾರ್ವತಿ’..! ಕಥೆ ಕಟ್ಟುವುದು ಧ್ಯಾನದ ಪ್ರತೀಕ. ತಾಳ್ಮೆ, ಸಾಮಾಜಿಕ ಕಳಕಳಿ, ಪಾತ್ರದ ವೈವಿಧ್ಯ, ಅಭಿಪ್ರಾಯ ಮತ್ತು ಅಭಿವ್ಯಕ್ತಿಗಳ ನಿಪುಣತೆಯನ್ನು ಬೇಡುತ್ತದೆ ಕಥೆ ಕಟ್ಟುವ ಕಲೆ. ಆ ಕಲೆ ಮತ್ತು ವೈವಿಧ್ಯ ಮತ್ತು ಕಥೆ ಕಟ್ಟುವ ತಾಳ್ಮೆಯ ನಿಪುಣತೆಯನ್ನು ಕಮಲಾ ಹೆಮ್ಮಿಗೆಯವರು ಉಳ್ಳವರುವರಾಗಿದ್ದಾರೆ… ಸೂಕ್ಷ್ಮ ಕೆನ್ವಾಸಿನಲ್ಲಿ ಒಡಮೂಡುವ ಚಿತ್ರ ಮತ್ತು ಅತೀ ಸೂಕ್ಷ್ಮ ಸಂಗತಿಗಳ […]
Read More
ಕೃತಿ-ಮುಳುಗದಿರಲಿ ಬದುಕು(ಅನುವಾದಿತ) ಲೇ:-ಡಾ.ಸುಭಾಷ್ ರಾಜಮಾನೆ ಎಪಿಕ್ಟೆಟಸ್ ನ ‘ ದಿ ಆರ್ಟ್ ಆಫ್ ಲಿವಿಂಗ್’ ಕೃತಿಯ ಬಗ್ಗೆ ಒಂದು ಟಿಪ್ಪಣಿ ಡಾ.ಮಹಾಲಿಂಗ ಪೋಳ ದಿನಾಂಕ ೦೮-೧೨-೨೦೧೯ ರಂದು ಭಾನುವಾರ ಬಿಡುಗಡೆಯಾಗುತ್ತಿರು ‘ಮುಳುದಿರಲಿ ಬದುಕು’ ಡಾ.ಸುಭಾಷ್ ರಾಜಮಾನೆಯವರ ೪ ನೇ ಕೃತಿ. ೩ ನೇ ಅನುವಾದದ ಕೃತಿ.ಈಗಾಗಲೆ ಸಿನಿಮಾಕ್ಕೆ ಸಂಬಂಧಿಸಿದ ‘ ದಿ ಆರ್ಟಿಸ್ಟ್’ ಮತ್ತು ವಿಕ್ಟರ್ ಪ್ರ್ಯಾಂಕಲ್ ನ ‘ ಬದುಕಿನ ಅರ್ಥ ಹುಡುಕುತ್ತಾ’ ಎಂಬ ಕೃತಿಗಳನ್ನು ಅನುವಾದಿಸಿದ್ದಾರೆ. ಕನ್ನಡದಲ್ಲಿ ಇಲ್ಲದ ವಿಶಿಷ್ಟವಾದ ವಸ್ತುವುಳ್ಳ ಪುಸ್ತಕವನ್ನು ಆಯ್ದುಕೊಂಡು […]
Read More
ನಾನು ಕಸ್ತೂರ್ ಇತ್ತೀಚೆಗೆ ಲೋಕಾರ್ಪಣೆಗೊಂಡ ಡಾ. ಎಚ್.ಎಸ್.ಅನುಪಮಾ ಕೃತಿ. ಲಡಾಯಿ ಪ್ರಕಾಶನದಿಂದ ಪ್ರಕಟಿತ.. ಚಂದ್ರಪ್ರಭಾ ಬಿ. ಒಂದು ಒಳನೋಟು ಭಿನ್ನ ಆಲೋಚನೆ, ಭಿನ್ನ ನಿಲುವಿನ ಡಾ. ಎಚ್.ಎಸ್.ಅನುಪಮಾ ಏನು ಮಾಡಿದರೂ ಅದು ವಿಭಿನ್ನವೇ ಆಗಿರುತ್ತದೆ ಎಂಬ ಮಾತಿಗೆ ಕಸ್ತೂರ್ ಜೀವನ ಕಥನ ಒಂದು ಉದಾಹರಣೆ. ಮೈಸೂರಿನಲ್ಲಿ ಪುಸ್ತಕ ಲೋಕಾರ್ಪಣೆ ಮಾಡುತ್ತ ಮಮತಾ ಸಾಗರ್ ಹೇಳಿದ ಹಾಗೆ ಅನುಪಮಾ ಸ್ವತಃ ನಿವೇದಿಸಿದ ಪ್ರಸ್ತಾವನೆ ರೂಪದ ಬರಹವನ್ನು ಓದಿಯೇ ಪ್ರತಿ ಓದುಗ ಮುಂದೆ ಸಾಗಬೇಕು. ಕೃತಿ ರಚನೆಯ ಹಿನ್ನೆಲೆಯ ಜೊತೆಗೇ […]
Read More
ಕೃತಿ ಬಿಕರಿಗಿಟ್ಟ ಕನಸು-ಕಾವ್ಯ ಲೇಖಕರು: ದೇವು ಮಾಕೊಂಡ ಡಾ.ವಿಜಯಶ್ರೀ ಇಟ್ಟಣ್ಣವರ ಕವಿಯೊಬ್ಬ ಕಾವ್ಯ ನರ್ಮಿತಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಬೇಕೆಂದರೆ ಕಾವ್ಯ ಪ್ರತಿಭೆ ಅವಶ್ಯ. ಅದನ್ನೇ ಆಲಂಕಾರಿಕರು ‘ಕವಿತ್ವ ಬೀಜಂ ಪ್ರತಿಭಾನಂ’ ಎಂದಿದ್ದಾರೆ. ಹಾಗಾದರೆ ಕಾವ್ಯ ನರ್ಮಿತಿಗೆ ಪ್ರತಿಭೆಯೊಂದೇ ಸಾಕೆ? ಎಂಬ ಪ್ರಶ್ನೆ ಉದ್ಭವಿಸುತ್ತದೆ. ಇಲ್ಲ, ಪ್ರತಿಭೆಯ ಜೊತೆಗೆ ಬದುಕಿನ ವಿಭಿನ್ನ ಅನುಭವ, ಆಲೋಚನೆಗಳು ಕವಿಯೊಬ್ಬನನ್ನು ನರ್ಮಿಸುತ್ತವೆ. ಹೊಸದನ್ನು ಕಾಣುವ, ಕಾಣಿಸುವ ಮನಸ್ಸು, ಪ್ರಜ್ಞೆ ಕವಿಗೆ ಬೇಕು.ಇದನ್ನೇ ಆಲಂಕಾರಿಕರು ‘ಪ್ರಜ್ಞಾ ನವನವೋನ್ಮೇಶ ಶಾಲಿನಿ’ ಎಂದಿದ್ದಾರೆ. ಜೊತೆಗೆ ಕಟ್ಟಿದ ಕಾವ್ಯವನ್ನು […]
Read More| Powered by WordPress | Theme by TheBootstrapThemes