Category: ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಪುಸ್ತಕಸಂಗಾತಿ

ಹೋಗಿ ಬಾ ಮಗಳೆ. ಹೋಗಿ ಬಾ ಮಗಳೇ ಲೇಖಕರು: ಡಾ||ವಿರೂಪಾಕ್ಷ ದೇವರಮನೆಪ್ರಕಾಶಕರು: ಸಾವಣ್ಣ ಎಂಟರ್ಪ್ರೈಸಸ್ಪುಸ್ತಕದ ಬೆಲೆ: ೧೫೦.೦೦ರೂ ಡಾ||ವಿರೂಪಾಕ್ಷ ದೇವರಮನೆಯವರಿಂದ ರಚಿತವಾದ “ಹೋಗಿ ಬಾ ಮಗಳೇ” ಜವಾಬ್ದಾರಿಯುತ ಅಪ್ಪನೊಬ್ಬ ತನ್ನ ಮಗಳಿಗೆ ವೈವಾಹಿಕ ಜೀವನದ ಅನೇಕ ಆಗು ಹೋಗುಗಳ ಬಗ್ಗೆ ಹಿತವಾಗಿ ಮುಖಾಮುಖಿ ಮಾತನಾಡಿದಂತೆ ತೋರುವ ಪುಸ್ತಕ ರೂಪದ ಕೈಗನ್ನಡಿ. ಮದುವೆ ಎನ್ನುವ ಮೂರಕ್ಷರಗಳೊಂದಿಗೆ ಆರಂಭವಾಗುವ ಎರಡು ವಿಭಿನ್ನ ಕುಟುಂಬಗಳ ನಡುವಿನ ಸೇತುವೆ. ಯಾವುದೇ ಮದುವೆಯ ಸಂದರ್ಭದಲ್ಲಿ ಎರಡೂ ಕಡೆ ಕೊಂಚವಾದರೂ ತಕರಾರಿಲ್ಲದೇ ಕಾರ್ಯಕ್ರಮ ನೆರವೇರದು. ಮದುವೆ […]

ಪುಸ್ತಕ ಸಂಗಾತಿ

ಚರಿತ್ರೆಯ ಪುಟಗಳ ಕಟ್ಟ ಹೊತ್ತ ಪರಿಸರದ ಕಥಾ ಮಾಲೆ. ಮಧ್ಯಘಟ್ಟ – ಕಾದಂಬರಿಶಿವಾನಂದ ಕಳವೆಸಾಹಿತ್ಯ ಪ್ರಕಾಶನ, ಹುಬ್ಬಳ್ಳಿ. ಪರಿಸರದ ಬಗೆಗಿನ ಕಾಳಜಿ ಮತ್ತು ಜ್ಞಾನ, ಅಪಾರ ತಿರುಗಾಟ, ಗ್ರಾಮೀಣರ ಒಡನಾಟ ಮತ್ತು ಅಧ್ಯಯನಪೂರ್ಣ ಬರಹಗಳ ಮೂಲಕ ಹೆಸರಾದವರು ಪತ್ರಕರ್ತ ಶಿವಾನಂದ ಕಳವೆ. ಶಿರಸಿಯ ಬಳಿಯ ಕಳವೆಯಲ್ಲಿ ಅವರ ನೇತೃತ್ವದ ಮಾಧ್ಯಮ ಸಂಸ್ಕೃತಿ ಅಭಿವೃದ್ಧಿ ಕೇಂದ್ರ, ಕಾನ್ಮನೆ – ಪರಿಸರಾಸಕ್ತರ, ಪತ್ರಿಕೋದ್ಯಮ ವಿದ್ಯಾರ್ಥಿಗಳ ಆಸಕ್ತಿಯ ಕೇಂದ್ರವಾಗಿದೆ. ಅವರು ಈ ಹೊತ್ತಿಗೆಯಲ್ಲಿ ಮತ್ತಿಘಟ್ಟ ಎಂಬ ಕಾನನದ ನಡುವಿನ ಪ್ರದೇಶದ ಕಥನವನ್ನು […]

ಪುಸ್ತಕ ಸಂಗಾತಿ

ಕವಿ ಶಿವಪ್ರಕಾಶ ಅವರ ಚೈತನ್ಯದ ಚಿಲುಮೆಯಾದ ಅಕ್ಕರೆಯ ಮಗಳು “ನೇರಿಶಾ”ಳ ಬಗೆಗೆ ಹೊಂದಿದ ಅಪಾರ ನಿರೀಕ್ಷೆ, ಭರವಸೆ, ವಾತ್ಸಲ್ಯ ಇಲ್ಲಿ ಕಾಣಬಹುದು.

ಪುಸ್ತಕ ಸಂಗಾತಿ

ಹಸಿರಿನೆಡೆಗೆ ನಮ್ಮನ್ನು ನಡೆಸುವ ‘ಹೂ ಹಸಿರಿನ ಮಾತು’ ಹೂ ಹಸಿರಿನ ಮಾತುಲೇಖಕಿ : ಡಾ.ಎಲ್.ಸಿ.ಸುಮಿತ್ರಾಪ್ರಕಾಶಕರು : ಅಂಕಿತ ಪುಸ್ತಕ, ಬೆಂಗಳೂರುಪ್ರಕಟಣಾ ವರ್ಷ :೨೦೧೨ಪುಟಗಳು : ೯೬ ಬೆಲೆ : ರೂ.೧೨೦ ಹಿರಿಯ ಲೇಖಕಿ ಡಾ.ಎಲ್.ಸಿ.ಸುಮಿತ್ರಾ ಅವರ ‘ಹೂ ಹಸಿರಿನ ಮಾತು’ ಸಾರ್ವಕಾಲಿಕ ಪ್ರಸ್ತುತಿಯುಳ್ಳ ಒಂದು ಕೃತಿ.  ಎಲ್ಲೆಲ್ಲೂ ಕಾಡು ಕಡಿದು, ಗುಡ್ಡಗಳನ್ನು  ಅಗೆದು, ಗದ್ದೆಗಳನ್ನು ಮುಚ್ಚಿ ಕಾಂಕ್ರೀಟು ಕಾಡುಗಳನ್ನಾಗಿ ಪರಿವರ್ತಿಸಿ ನಾವು ಪ್ರಕೃತಿಯ ಮುನಿಸಿಗೆ  ತುತ್ತಾಗುತ್ತಿರುವ ಇಂದು ಎಚ್ಚೆತ್ತುಕೊಳ್ಳಬೇಕಾದ ಕಾಲ. ಬಂದಿರುವ ಇಂದಿನ ಸಂಧರ್ಭದಲ್ಲಿ ಪರಿಸರದ ಬಗ್ಗೆ […]

ಪುಸ್ತಕ ಸಂಗಾತಿ

ಪುಸ್ತಕ ಪರಿಚಯ ಅಲೆಮಾರಿಯ ದಿನದ ಮಾತುಗಳು  ಪುಸ್ತಕ : ಅಲೆಮಾರಿಯ ದಿನದ ಮಾತುಗಳು  ( ಪದ್ಯ – ಗದ್ಯಗಂಧಿ ಚಿಂತನ ಬರಹಗಳು ) ಲೇಖಕ: ಗಂಗಾಧರ ಅವಟೇರ ಪ್ರಕಾಶನ: ಪ್ರತೀ(ಕ)ಕ್ಷಾ ಪ್ರಕಾಶನ, ಕುಕನೂರ ಜಿ|| ಕೊಪ್ಪಳ ಪುಟಗಳು: 96 ಬೆಲೆ: 100/- ಪ್ರಕಟಿತ ವರ್ಷ: 2019 ಲೇಖಕರ ದೂರವಾಣಿ: 9449416270          ಮಾನವ ಸಮಾಜಜೀವಿ. ಅವನು ಸಮಾಜವನ್ನು ಬಿಟ್ಟು ಬಾಳಲಾರ-ಬದುಕಲಾರ. ಅರಿಸ್ಟಾಟಲ್ ಹೇಳುವಂತೆ ‘ಸಮಾಜವನ್ನು ಬಿಟ್ಟು ಬದುಕುವ ಮಾನವ ದೇವರು ಇಲ್ಲವೇ ಪಶು ಆಗಿರುತ್ತಾನೆ’. ಮಾನವ ಭಾಗಶಃ […]

ಪುಸ್ತಕ ಸಂಗಾತಿ

ಬೀಳದ ಗಡಿಯಾರ. ಕೃತಿಯ ಹೆಸರು: ಬೀಳದ ಗಡಿಯಾರ.ಪ್ರಕಟಣೆ: 2018ಬೆಲೆ: 90ರೂ.ಪ್ರಕಾಶಕರು: ಪ್ರೇಮ  ಪ್ರಕಾಶನ, ಮೈಸೂರು-570029 ಡಾ. ಬಸು ಬೇವಿನಗಿಡದ ಅವರ “ಬೀಳದ ಗಡಿಯಾರ” ಹಿಂದೆಲ್ಲ ಕೆಲವು ಮನೆಗಳಲ್ಲಿ ಎಷ್ಟು ಗಂಟೆಯಾಗಿದೆಯೋ ಅಷ್ಟುಸಲ ಢಣ್ ಢಣ್ ಎಂದು ಗಂಟೆ ಹೊಡೆಯುವ ಗಡಿಯಾರಗಳಿದ್ದವು. ಅಂತಹ ಗಡಿಯಾರ ಆಗ ಮಕ್ಕಳಾಗಿದ್ದ ನಮಗೆ ಆಕರ್ಷಣೆಯ ಕೇಂದ್ರವಾಗಿತ್ತು. ಹನ್ನೆರಡು ಗಂಟೆಯಾಗುವಾಗ ಅದು ಹನ್ನೆರಡುಸಾರಿ ಗಂಟೆ ಬಾರಿಸುವುದರಿಂದ ಅದನ್ನು ಕೇಳಲು ಗಡಿಯಾರದ ಮುಂದೆ ಕಾತುರದಿಂದ ನಿಂತಿರುತ್ತಿದ್ದುದೂ ಇದೆ. ಆದರೆ ಹಾಗೇ ಮುಂದುವರಿದು ಹದಿಮೂರು, ಹದಿನಾಲ್ಕು ಹೀಗೆ […]

ಪುಸ್ತಕ ಸಂಗಾತಿ

ಹುಳುಕ ಹೂರಣದ ಹೋಳಿಗೆ ತೋರಣ ‘ರಾಯಕೊಂಡ’ ಕರಣಂ ಪವನ ಪ್ರಸಾದರ ಬಹುನಿರೀಕ್ಷಿತ ಕಾದಂಬರಿ. ಕಾನ್ಕೇವ್ ಪ್ರಕಾಶನ ಇದನ್ನು ಪ್ರಕಟಿಸಿದೆ. ನನ್ನಿ, ಗ್ರಸ್ತ, ಕರ್ಮ ಕಾದಂಬರಿಗಳನ್ನು, ಕರಣಂ ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದವರು. ಅವರೇ ಹೇಳಿಕೊಂಡಂತೆ ಇದು ಡಾರ್ಕ್ ಹ್ಯೂಮರ್ ಪ್ರಕಾರಕ್ಕೆ ಸೇರುವ ಕಾದಂಬರಿ. ಈ ವಿಭಾಗವು ಸಾಮಾನ್ಯವಾಗಿ ನಿಷೇಧವೆಂದು ಭಾವಿಲ್ಪಡುವ ವಿಷಯದ ಬೆಳಕನ್ನು ಚೆಲ್ಲುತ್ತದೆ. ವಿಶೇಷವಾಗಿ ಗಂಭೀರ ಅಥವಾ ವಿಷಾದದಿಂದ ಕೂಡಿದ ವಿಷಯಗಳನ್ನು ಕಪ್ಪು ಹಾಸ್ಯದ ಮಾದರಿಯಲ್ಲಿ ಚರ್ಚಿಸುತ್ತದೆ. ಎಂ. ವ್ಯಾಸರ ಕಪ್ಪು ದರ್ಶನದ ಕಥೆಗಳೇ ಬೇರೆ, […]

ಪುಸ್ತಕ ಸಂಗಾತಿ

Anyone but the Spouse ವಾಸ್ತವ ಸಂಗತಿಗಳ ಯಥಾವತ್ ನಿರೂಪಣೆ ಪುಸ್ತಕ:Anyone but the Spouse ಸಣ್ಣ ಕಥೆಗಳು ಲೇಖಕಿ:ಪೂರ್ಣಿಮಾ ಮಾಳಗಿಮನಿ Anyone but the Spouse ಪೂರ್ಣಿಮಾ ಮಳಗಿಮನಿಯವರು ಇಂಗ್ಲಿಷ್ ನಲ್ಲಿ ಬರೆದು ಪ್ರಕಟಿಸಿರುವ ಸಣ್ಣ ಕಥಾ ಸಂಕಲನ. ಪಾಶ್ಚಾತ್ಯ ಸಂಸ್ಕೃತಿಯ ನೇರ ಪ್ರಭಾವಕ್ಕೊಳಗಾಗಿರುವ ಆಧುನಿಕ ಭಾರತೀಯ ಸಮಾಜದಲ್ಲಿ ಗಂಡು- ಹೆಣ್ಣುಗಳ ನಡುವಣ ಸಂಬಂಧ, ವೈವಾಹಿಕ ವ್ಯವಸ್ಥೆ ಮತ್ತು ಕೌಟುಂಬಿಕ ಬದುಕುಗಳಲ್ಲಿ ಆಗಿರುವ ಬದಲಾವಣೆಯ ಯುಕ್ತಾಯುಕ್ತತೆಯ ಕುರಿತು ಈ ಕಥೆಗಳು ತಣ್ಣಗೆ ಸಂಶೋಧನೆ ನಡೆಸುವಂತಿವೆ.   […]

ಕೂರಿಗಿ ತಾಳು

ಪುಸ್ತಕ ಪರಿಚಯ ಕವಿತೆ ಭಾಷೆಯ ಉಪಯೋಗದ ಒಂದು ಕಲೆ. ಭಾಷೆಯ ಉಪಯೋಗದಲ್ಲಿ ಭಾಷೆಯ ಅರ್ಥದೊಂದಿಗೆ ಅಥವಾ ಅರ್ಥದ ಬದಲು ಸೌಂದರ್ಯ ಮತ್ತು ಭಾವನಾತ್ಮಕತೆಯನ್ನು ಹೊರತರುವ ಪ್ರಕಾರ ಇದು.ಕಾವ್ಯವೆನ್ನುವುದು ಹುಡುಕಾಟವಲ್ಲ, ಅದೊಂದು ಮಿಡುಕಾಟ. ಕಾವ್ಯದಲ್ಲಿ ಮನರಂಜನೆ, ಶ್ರೀಮಂತಿಕೆ ಮತ್ತು ಉದಾತ್ತತೆ ಇರಬೇಕು. ಅದನ್ನು ಓದಿದವರು ಮೊದಲಿಗಿಂತ ಬೇರೆಯದ್ದೇ ವ್ಯಕ್ತಿತ್ವ ಹೊಂದಿದವರಾಗಿರಬೇಕು. ಅಂತಹ   ಕಾವ್ಯ ಶ್ರೇಷ್ಠ ಕಾವ್ಯ ಎನಿಸಿಕೊಳ್ಳುತ್ತದೆ .  ಕಾವ್ಯದಲ್ಲಿ ಭಾವದ ಅತೀ ಸಾಮಾನ್ಯತೆ ಇದ್ದರೆ ಅದು ಕಾವ್ಯದ ದೋಷ. ಇದರ ಸೀಮೋಲ್ಲಂಘನ ಮಾಡಬೇಕು. ಅಂತೆಯೇ ಕಾವ್ಯದಲ್ಲಿ ಅಲಂಕಾರ […]

ಮೌನಯುದ್ಧ

ಪುಸ್ತಕ ಪರಿಚಯ ಮೌನ ಯುದ್ದ(ಕವನಸಂಕಲನ) ಕವಿ: ಸುರೇಶ್ ಎಲ್. ರಾಜಮಾನೆ ಪ್ರಕಾಶನ: ವಿಶ್ವ ಖುಷಿ ಪ್ರಕಾಶನ, ನವನಗರ ಬಾಗಲಕೋಟ. ಪುಟಗಳು: 92  ಬೆಲೆ: 120/- ಪ್ರಕಟಿತ ವರ್ಷ: 2018 ಕವಿಯ ಸಂಪರ್ಕ ಸಂಖ್ಯೆ: 8105631055          ಗಂಭೀರ ಕಾವ್ಯಾಧ್ಯಯನ ಮೂಲಕ ನಿರಂತರ ಅನುಸಂಧಾನದಲ್ಲಿ ತೊಡಗಿ ಕಾವ್ಯ ರಚನೆ ಕೃಷಿಗೆ ಮುಂದಾಗಿರುವ ರನ್ನಬೆಳಗಲಿಯ ಯುವಕವಿ ಸುರೇಶ್ ರಾಜಮಾನೆಯವರು “ಸುಡುವ ಬೆಂಕಿಯ ನಗು” ಎನ್ನುವ ಕೃತಿಯನ್ನು ಪ್ರಕಟಿಸುವ ಮೂಲಕ ಸಾಹಿತ್ಯ ಲೋಕವನ್ನು ಪ್ರವೇಶಿಸಿದರು. ಈಗ “ಮೌನಯುದ್ಧ”ದ ಮೂಲಕ ನಮ್ಮೊಂದಿಗೆ ಮಾತಿಗಿಳಿದಿದ್ದಾರೆ. […]

Back To Top