Category: ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಪುಸ್ತಕ ಬಿಡುಗಡೆ-ಕನ್ನಡ ಪ್ರಜ್ಞೆಯ ಸುತ್ತ ಮುತ್ತ

ಪುಸ್ತಕ ಬಿಡುಗಡೆ- ಕನ್ನಡ ಪ್ರಜ್ಞೆಯ ಸುತ್ತ ಮುತ್ತ

ತುಮುಲಗಳು

ಪುಸ್ತಕ ಸಂಗಾತಿ ತುಮುಲಗಳು ಹಿರಿಯ ಗೆಳೆಯರಾದ ಪ್ರೇಮಸಾಗರ ಕಾರಕ್ಕಿಯವರ ಕವನ ಸಂಕಲನವಾದ ” ತುಮುಲಗಳು ” ಹೆಸರೇ ತಿಳಿಸುವ ಹಾಗೆ ಅಂತರಾಳದ ಬೇಗುದಿಗಳನ್ನ, ತಳಮಳವನ್ನ ಹೊರ ಹಾಕುವ ಪ್ರಕ್ರಿಯೆಯಾಗಿ ಮೂಡಿ ಬಂದ ಸಂಕಲನವಾಗಿದೆ. ಅವರೇ ಬರೆದ ಹಾಗೆ ನನ್ನನ್ನು ಪ್ರೀತಿಸಿದ, ದ್ವೇಷಿಸಿದ, ಜೊತೆಯಾದ, ತೊರೆದ, ಗೌರವಿಸಿದ, ಅವಮಾನಿಸಿದ, ಪ್ರೋತ್ಸಾಹಿಸಿದ, ಹೀಗಳೆದ ಎಲ್ಲರಿಗೂ ಕೃತಜ್ಞನಾಗಿದ್ದೇನೆ ಎಂದು ಹೇಳುವುದರಲ್ಲೇ ಅವರ ತುಮುಲಗಳನ್ನ ಅರ್ಥೈಸಿಕೊಳ್ಳಬಹುದು. ಸ್ನೇಹಿತರಾದ ಪ್ರೇಮಸಾಗರ ಕಾರಕ್ಕಿಯವರ ಕೆಲವು ಬರಹಗಳನ್ನ ಫೇಸ್ಬುಕ್ ನಲ್ಲಿ ಗಮನಿಸುತ್ತಲೇ ಬಂದಿರುವ ನಾನು ಅವರು ಆಲ್ಬರ್ಟ್ […]

ಪುಟ್ಟನ ಕನಸು’

ಮನೆ ಬೀದಿ ದೇಗುಲದಲಿ ನಿರುತ ಸೇವೆಯು ಪ್ರತಿಪಲಾಕ್ಷೆ ಇಲ್ಲದಿರುವ ನಿಸರ್ಗ ದೈವವು’ ಪೊರಕೆಯನ್ನು ಎಲ್ಲಂದರಲ್ಲಿ ಬಳಕೆಯಾಗುವ ಮೌನವಾಗುವ ಪರಿಯನ್ನು ಸೂಚಿಸಿದ್ದಾರೆ. ಇದಲ್ಲದೆ ತಮ್ಮೂರಾದ ಜಮಖಂಡಿಯ ವರ್ಣನೆಯನ್ನು ಕವಿತೆಯಲ್ಲಿ ಮನೋಹರವಾಗಿ ಕಟ್ಟಿದ್ದಾರೆ

ಗಾಂಧಿ ನೇಯ್ದಿಟ್ಟ ಬಟ್ಟೆ

ಪುಸ್ತಕ ಸಂಗಾತಿ ಗಾಂಧಿ ನೇಯ್ದಿಟ್ಟ ಬಟ್ಟೆ ಕೃತಿ: ಗಾಂಧಿ ನೇಯ್ದಿಟ್ಟ ಬಟ್ಟೆ ಲೇ: ರಾಯಸಾಬ ಎನ್ ದರ್ಗಾದವರ ಪೋ:7259791419 ಪ್ರಕಾಶಕರು: ಅನಾಯ ಪ್ರಕಾಶನ, ಕಟ್ನೂರು, ಹುಬ್ಬಳ್ಳಿ(ತಾ). ಪುಟಗಳು: ೮೦ ಬೆಲೆ: ೯0/- _________________________ “ಗಾಂಧಿ ನೇಯ್ದಿಟ್ಟ ಬಟ್ಟೆಯ ಬಿಡಿಸಿದಾಗ….” ರಾಯಸಾಬ ಎನ್. ದರ್ಗಾದವರ ಚೊಚ್ಚಲ ಕೃತಿಯಾದ, *”ಗಾಂಧಿ ನೇಯ್ದಿಟ್ಟ ಬಟ್ಟೆ”* ಎಂಬ ವಿಶೇಷ ಶೀರ್ಷಿಕೆಯಿಂದಲೇ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿರುವ, ಆಕರ್ಷಕ ಮುಖಪುಟದೊಂದಿಗೆ ಬಿಡುಗಡೆಯ ಮೊದಲೇ ಸದ್ದು ಮಾಡುತ್ತಿರುವುದು ಕುತೂಹಲವನ್ನು ಹುಟ್ಟುಹಾಕಿದೆ. “ನನ್ನವರ ಮನೆಗಳು ಎಂದೆಂದಿಗೂ ಮನೆಗಳಾಗಿರಲಿಲ್ಲ […]

ಮಾನವೀಯತೆ, ಪ್ರೀತಿ-ಪ್ರೇಮ ಹನಿಸುವ ಒಗರು ಕವನಗಳು

ಪುಸ್ತಕಸಂಗಾತಿ ಮಾನವೀಯತೆ, ಪ್ರೀತಿ-ಪ್ರೇಮ ಹನಿಸುವ ಒಗರು ಕವನಗಳು ಡಾ. ರಮೇಶ್ ಕತ್ತಿ ಬಾಲ್ಯದಿಂದಲೂ ಅಳವಡಿಸಿಕೊಂಡಿರುವ ಅಧ್ಯಯನ ಶಿಸ್ತು, ಸಾಹಿತ್ಯ-ಸಾಂಸ್ಕೃತಿಕ ಕೂಟಗಳ ಒಡನೆ ನಡೆಸಿದ ಅನುಸಂಧಾನಗಳು ಈ ಕೃತಿಗೆ ಮೂಲ ಶ್ರೋತವಾಗಿವೆ.      ಈ ಕವನ ಸಂಕಲನದಲ್ಲಿ 27 ಕವನಗಳಿವೆ. ಏನನ್ನು ಹೇಳುವುದಿಲ್ಲ, ಕಲ್ಯಾಣ ಕ್ರಾಂತಿ, ಏನೋ ಹೇಳುವುದಿದೆ, ನೋಟ, ಕಾಡು, ಕುಸುಮ, ಹೂ- ಮುತ್ತು, ಉಪ್ಪಿನ, ಚಿತ್ರ ಪರದೆ, ಕಾಣದ ಚಂದ್ರ, ಹಕ್ಕು, ಮೌನ ಪ್ರಶ್ನೆ, ಗೀಗೀ ಗಾರುಡಿಗನಿಗೆ,ನಲವತ್ತಕ್ಕೆ ಚಾಲಿಸು, ಹುಡುಗಿಯರ ಗುಂಪಿನೊಳಗೆ, ಮಗಳು ಹುಟ್ಟಿದಳು, ಮಹಾಮಳೆಗೆ […]

“ಅವತಾರ ಮತ್ತು ಹಾರುವ ಕುದುರೆ “

ಕಲಘಟಗಿಯ ಸಮೀಪದ ಕಾರವಾರ ಸರಹದ್ದಿನ ಕಿರವತ್ತಿಯ ಹತ್ತಿರದ ಬೈಲಂದೂರ ಗೌಳಿವಾಡ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ನಾಗರಾಜ ಹುಡೇದ ಅವರು ಸಾಹಿತ್ಯದ ಓದು ಒಲವಿನ ಸೆಳೆತದಿಂದ ಪರಿಚಿತರಾದವರು.
ನಾಗರಾಜ ಓರ್ವ ಕವಿಹೃದಯದ ಶಿಕ್ಷಕರು. ‘ನಗುವ ತುಟಿಗಳಲ್ಲಿ’ ‘ಭರವಸೆ’ ದೊಡ್ಡವರ ಕವನಸಂಕಲನಗಳನ್ನು ಪ್ರಕಟಿಸಿ ಓದುಗರ ವಲಯಕ್ಕೆ ಹರಿಬಿಟ್ಟಿದ್ದಾರೆ. ಇದಲ್ಲದೆ ತಾವು ಸೇವೆ ಸಲ್ಲಿಸುತ್ತಿರುವ ಆ ಊರಿನ ಗೌಳಿ ಜನಾಂಗದ ಭಾಷೆಯನ್ನು ಅರಿತುಕೊಂಡು ಕನ್ನಡ ಇಂಗ್ಲೀಷ್ ಭಾಷೆಯ ಶಬ್ದಕೋಶವನ್ನು ರಚಿಸಿ ಪ್ರಕಟಿಸಿದ್ದಾರೆ.
ಮಕ್ಕಳಲ್ಲಿ ಸಾಹಿತ್ಯ ಪ್ರೀತಿ ಬೆಳೆಸಲು ಹಾಗೂ ಪೋಷಿಸಲು ಸ್ವತಃ ‘ ಅರಳು ಮೊಗ್ಗು’ ಎನ್ನುವ ದ್ವೈಮಾಸಿಕ ಮಕ್ಕಳ ಪತ್ರಿಕೆಯನ್ನು ಪ್ರಕಟಿಸುವ ಸಾಹಸಕ್ಕೂ ಕೈ ಹಾಕಿ ಯಶಸ್ವಿಯಾಗಿದ್ದಾರೆ. ದೊಡ್ಡವರು, ಚಿಕ್ಕವರು ಬರೆದ ಕಥೆ,ಕವನಗಳು ಇಂದಿಗೂ ಪ್ರಕಟವಾಗುತ್ತಿವೆ. ಈ ಪತ್ರಿಕೆಯನ್ನು ಯಲ್ಲಾಪೂರ ತಾಲೂಕಿನ ಬಹುತೇಕ ಶಾಲೆಗಳಿಗೂ ತಲುಪಿಸುತ್ತಿದ್ದಾರೆ.
ಇತ್ತೀಚಿಗೆ ಮಕ್ಕಳಿಗಾಗಿ ಹೊಸ ಬಗೆಯ ಕವಿತೆಗಳನ್ನು ರಚಿಸಿ ಪತ್ರಿಕೆಗಳಲ್ಲಿ ಪ್ರಕಟಿಸುವ ದಾವಂತ ಮುಂದುವರೆದಿದೆ. ಹೊಸ ಬಗೆಯ ಪುಸ್ತಕಗಳನ್ನು ಓದುತ್ತಾ ಅವುಗಳ ಕುರಿತಾಗಿ ಪರಿಚಯಾತ್ಮಕ ಬರೆದ ಲೇಖನಗಳು ಪತ್ರಿಕೆಯಲ್ಲಿ ಪ್ರಕಟವಾಗುತ್ತಿವೆ. ಹೀಗೆ ಓದಿನೊಂದಿಗೆ, ಅಧ್ಯಯನದೊಂದಿಗೆ ಬರವಣಿಗೆ ಸಾಗಿದೆ.
ಇದರ ಜೊತೆಯಲ್ಲಿ ಮಕ್ಕಳಿಗಾಗಿ ಹೊಸ ಬಗೆಯ ಕತೆಗಳನ್ನು ರಚಿಸುತ್ತಿದ್ದಾರೆ ಇವೆಲ್ಲಾ ನಾಗರಾಜ ಹುಡೇದ ಅವರ ಸಾಹಿತ್ಯ ಸಮೃದ್ಧಿಯ ಕೆಲಸಗಳು.
ಹೊಸ ರಚನೆಗಾಗಿ ಹೊಸ ಓದಿಗೆ ನಮ್ಮನ್ನು ನಾವು ತೆರದುಕೊಳ್ಳಬೇಕು ಅಂದಾಗ ಹೊಸಹೊಳವಿನ ಬರವಣಿಗೆಗೆ ಅಣಿಯಾಗಬಹುದು.
ಮಕ್ಕಳ ನಡುವೆ ಸದಾ ಕಳೆಯುವ ನಾಗರಾಜ ಬಿಡಿ ಬಿಡಿಯಾದ ಎಲ್ಲಾ ಕಥೆಗಳನ್ನು ಒಗ್ಗೂಡಿಸಿ ಪ್ರಥಮ ಮಕ್ಕಳ ಕಥಾಸಂಕಲನ ಪ್ರಕಟಿಸಿದ್ದಾರೆ.
ಹದಿಮೂರು ಕಥೆಗಳಿವೆ. ಹತ್ತರಿಂದ ಮೇಲ್ಪಟ್ಟ ವಯೋಮಾನದ ಮಕ್ಕಳ ಓದಿಗೆ ನಿಲುಕಬಲ್ಲ ಕಥೆಗಳಿವು. ಕುತೂಹಲದಿಂದ ಸಾಗುವ ಕತೆಗಳ ಕಥಾತಂತ್ರ, ಬೆರಗುಗೊಳಿಸುವ ಕತೆಗಳ ಶೀರ್ಷಿಕೆಗಳು ಸಂಕಲನದ ವಿಶೇಷತೆ. ಬಹತೇಕ ಕತೆಗಳು ಪರಿಸರದ ಕಾಳಜಿಯನ್ನು ವ್ಯಕ್ತಪಡಿಸುತ್ತವೆ.
‘ಗೂಗಲ್ ಭೀಮಪ್ಪ’ ಈ ಕಥೆಯಲ್ಲಿ ಅಪ್ಪ ತನ್ನ ಮಗನಿಗೆ ತನ್ನ ಬಾಲ್ಯದ ಕತೆ ಹೇಳುವಾಗ ಭೀಮಪ್ಪ ಅಜ್ಜ ಏನೆಲ್ಲಾ ಸಂಗತಿಗಳನ್ನು ಹೇಳಿ ನಗಿಸುತ್ತಿದ್ದ. ಆತ ನಮ್ಮ ಪಾಲಿಗೆ ನಡೆದಾಡುವ ವಿಶ್ವಕೋಶವಾಗಿದ್ದ ಎಂದೆಲ್ಲಾ ವಿಷಯಗಳನ್ನು ಮಗನಿಗೆ ಹೇಳುವ ಬಗೆ ಕುತೂಹಲ ಹುಟ್ಟಿಸುತ್ತದೆ. ಈಗ ಮೊಬೈಲ್ ಆ ಸ್ಥಳವನ್ನು ಆಕ್ರಮಿಸಿಕೊಂಡಿದೆ ಎನ್ನುವ ಅಂಶ ಬದಲಾವಣೆ ಜಗದ ನಿಯಮ ಎನ್ನುವ ಸಂದೇಶ ಸಾರುತ್ತದೆ. ಇವೆಲ್ಲಾ ಮಕ್ಕಳಿಗೆ ಬಲು ಪ್ರೀತಿ ನೀಡುತ್ತದೆ.
ಮಕ್ಕಳ ಹಸಿರು ಪ್ರೀತಿಯ ಅನಾವರಣದ ಬಗ್ಗೆ ” ರಾಪಾ ದಿಬ್ಬ” ಕತೆ ಹೇಳುತ್ತದೆ. ಮಲೆನಾಡಿನ ಬೆಟ್ಟಗಳಲ್ಲಿ ಹಸಿರು ಹೆಚ್ಚಿಸುವ ಪ್ರಯತ್ನ ಇಲ್ಲಿದೆ. ಮಳೆಗಾಗಿ ಮಕ್ಕಳು ಕಪ್ಪೆಯ ಮದುವೆಗಾಗಿ ಕಪ್ಪೆಗಳನ್ನು ಹಿಡಿಯುವುದಕ್ಕಾಗಿ ತಡಕಾಡುವ ಮೋಜಿನ ಸಂಗತಿಗಳನ್ನು ” ಕಪ್ಪೆಗಳ ಮದುವೆ” ಕತೆಯಲ್ಲಿ ಕಾಣಬಹುದು.
” ಮಾತಾಡುವ ಮರಗಳು” ಪ್ಯಾಂಟಸಿಯ ಗುಣಹೊಂದಿರುವ ವಿಶೇಷ ಕಥೆಯಾಗಿದೆ. ಈ ಕತೆಯಲ್ಲಿ ಗಿಡ, ಮರ, ಬಳ್ಳಿಗಳು ಮನುಷ್ಯರಂತೆ, ನಡೆಯಬಲ್ಲವು. ತಮ್ಮದೇ ಆದ ಭಾಷೆಯಲ್ಲಿ ಮಾತಾಡಬಲ್ಲವು. ಮನಸ್ಸಿನ ಭಾವನೆಗಳನ್ನು ತಿಳಿಯಬಲ್ಲವು. ಗದುಗಿನ ಗುಂಡಣ್ಣ ಸಮುದ್ರಯಾಣದಲ್ಲಿ ಬಿರುಗಾಳಿಗೆ ಸಿಕ್ಕು ವಿಚಿತ್ರ ದ್ವೀಪದಲ್ಲಿ ಎಚ್ಚರಗೊಂಡಾಗ ಆಗುವ ವಿಚಿತ್ರ ಘಟನೆಗಳು ಮಕ್ಕಳಿಗೆ ಮೋಜು, ಖುಶಿ ನೀಡುತ್ತವೆ.
“ಯಾರು ಹೆಚ್ಚು” ಇದು ಜನಪದ ಶೈಲಿಯ ಕತೆಯಾಗಿದೆ. ಇಲ್ಲಿಯ ಕತೆಗಳಲ್ಲಿ ಅಜ್ಜನ ಪಾತ್ರ ಸೃಷ್ಠಿಸಿ ಆತನಿಂದಲೇ ಕತೆ ಹೇಳಿಸುವ ಶೈಲಿ ಓದುಗನಿಗೆ ಹಿಡಿಸುತ್ತದೆ.
“ಬಕ್ಕೂ ಅಂದ್ರೆ ಬಕ್ಕೂ” “ಹಾಂ! ಅದೇ ಬಸಪ್ಪ” ” ಬಂಗಾರದ ಸರ” ” ಸೊಂಡಿಲು, ಜಿಂಕೆಗಳ ಮೈ ಮುಟ್ಟೋಣ ಬನ್ನಿ” “ಬಂಗಾಳಿ ಮರ” ಕಬ್ಬಿನ ಗದ್ದೆ ಮತ್ತು ಗೊದ್ದಿರುವೆ” ಓದುಗರಿಗೆ ಮೆಚ್ಚಿಗೆಯಾಗುವ ಹಾಗೂ ಗಮನ ಸೆಳೆಯುವ ಕತೆಗಳಾಗಿವೆ. ಪ್ಯಾಂಟಸಿ, ಜಾನಪದ, ಹಾಗೂ ವಾಸ್ತವ ಅಂಶ ಇರುವ ವೈವಿಧ್ಯಮಯ ಕತೆಗಳಿವೆ.
ಗ್ರಾಮ್ಯ ಭಾಷೆಯ ಸಹಜ ಸಂಭಾಷಣೆಗಳು, ನವೀರಾದ ನಿರೂಪಣೆ ಇವು ಕತೆಗಳ ಸೊಗಸು ಹೆಚ್ಚಿಸಿವೆ. ಸಂತೋಷ ಸಸಿಹಿತ್ಲು ಬರೆದ ಚಿತ್ರಗಳು, ಮುಖಪುಟ ಆಕರ್ಷಕವಾಗಿವೆ.
ನಾಗರಾಜ ಹುಡೇದ ಅವರು ಪ್ರಥಮ ಪ್ರಯತ್ನದಲ್ಲಿ ಮಕ್ಕಳಿಗೆ ಸುಂದರವಾದ ಕತೆಗಳನ್ನು ನೀಡಿದ್ದಾರೆ.
ಮಕ್ಕಳ ಸಾಹಿತ್ಯಕ್ಕೆ ಮುಂಬರುವ ದಿನಗಳಲ್ಲಿ ವಿಭಿನ್ನ ವಿಷಯ ವಸ್ತುಗಳನ್ನು ಹೊತ್ತ ಕತೆಗಳನ್ನು ರಚನೆ ಮಾಡುವಂತಾಗಲಿ. ಉತ್ತಮ ಕೃತಿ ನೀಡಿದ್ದಕ್ಜೆ ಅವರನ್ನು ಅಭಿನಂದಿಸುತ್ತಾ, ಶುಭಕೋರುತ್ತೇನೆ.
– ವೈ,ಜಿ,ಭಗವತಿ ಕಲಘಟಗಿ 9448961199

ಆದರ್ಶ ಶಿಕ್ಷಕಿಯ ಬಾಲ್ಯದೊಂದಿಗೆ ಮಕ್ಕಳು…

ಮಕ್ಕಳು ಓದಿದ ಟೀಚರ ಡೈರಿ
ಲೇ: ವೈ.ಜಿ.ಭಗವತಿ.
ಪ್ರಕಟಣೆ:೨೦೨೧
ಪುಟಗಳು:೧೧೪
ಬೆಲೆ:೧೧೦ರೂ.
ವಿಜಯಾ ಪ್ರಕಾಶನ.ಪರಿಶ್ರಮ ನಿಲಯ. ಕಲಘಟಗಿ.ಧಾರವಾಡ ೫೮೧೨೦೪. ಮೊ:9448961199

ಮಲ್ಲಿಗೆ ಸಿಂಚನ (ಗಜಲ್ ಹೂದೋಟ

ಪುಸ್ತಕ ಸಂಗಾತಿ ಮಲ್ಲಿಗೆ ಸಿಂಚನ (ಗಜಲ್ ಹೂದೋಟ) ಕೃತಿ ಹೆಸರು…. ಮಲ್ಲಿಗೆ ಸಿಂಚನ (ಗಜಲ್ ಹೂದೋಟ)ಲೇಖಕರು…ಡಾ.ಮಲ್ಲಿನಾಥ ಎಸ್ ತಳವಾರಪ್ರಕಾಶಕರು…ಅನ್ನಪೂರ್ಣ ಪ್ರಕಾಶನ.ಸಿರಿಗೇರಿ ತಾ.ಸಿರುಗುಪ್ಪ ಜಿಲ್ಲಾ ಬಳ್ಳಾರಿ ಮೊ೮೭೬೨೪೭೯೨೧೬ಪ್ರಕಟಿತ ವರ್ಷ ೨೦೨೧ ಸತತವಾದ ಅಧ್ಯಯನ ಶೀಲತೆ,ಉತ್ತಮವಾದ ಬರಹಗಳು,ಹಾಗೂ ಗಜಲ್ ಸಾಹಿತ್ಯ ಬಗ್ಗೆ ಆಳವಾದ ಅಭ್ಯಾಸ, ಗೂಗಲ್ ಮೀಟಗಳಲ್ಲಿ ಗಜಲ್ ಸಾಹಿತ್ಯ ಬಗ್ಗೆ ನಿರರ್ಗಳವಾಗಿ  ಉಪನ್ಯಾಸ ನೀಡಿ ಮೆಚ್ಚಿಗೆಯನು ಗಳಿಸಿದ ಡಾ,ಮಲ್ಲಿನಾಥ ಎಸ್ ತಳವಾರ ಇವರು ಕನ್ನಡ ಉಪನ್ಯಾಸಕರಾಗಿ ನೂತನ ಪದವಿ ಕಾಲೇಜ ಗುಲಬರ್ಗಾ ದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೂ ಪ್ರವೃತ್ತಿ ಯಲ್ಲಿ […]

ಆತ್ಮಕಥನ:ಬಾಬಾಸಾಹೇಬರ ಆಲೋಚನೆಗಳು.

ಬಾಬಾಸಾಹೇಬರ ಜೀವನ ಹೋರಾಟ ಕುರಿತು ಧನಂಜಯ ಕೀರ್ ಅವರು ಬರೆದ ಕೃತಿಯನ್ನು ನೋಡಿದ ಬಾಬಾಸಾಹೇಬರು “ಚೆನ್ನಾಗಿದೆ, ಆದರೆ ನನ್ನದು  ಸುದೀರ್ಘ ಮತ್ತು ಅಂತ್ಯ ಕಾಣದ ಜೀವನಗಾಥೆ,  ಅದು ಯಾರಿಗೂ ತಿಳಿಯದು ಬೇರಾರು ಬರೆಯುವಂತಹದ್ದಲ್ಲ” ಎನ್ನುತ್ತಾರೆ. ‘ ಆತ್ಮ ಚರಿತ್ರೆ ಬರೆಯಲು ಸಮಯ ಎಲ್ಲಿದೆ?’ ಎಂಬುದು ಅಂಬೇಡ್ಕರ್ ಅವರ ಬಗೆಹರಿಯದ ಪ್ರಶ್ನೆಯಾಗಿತ್ತು. ‘ನನ್ನ ಜನರಿಗೊಂದು  ಮಾತೃಭೂಮಿ ಇಲ್ಲ’ ಎಂದ ಬಾಬಾಸಾಹೇಬರು,ಮಾತು ಸೋತ ಎಲ್ಲರಿಗೂ ಮಾತೃಭೂಮಿಯ ಹಕ್ಕು ಕೊಟ್ಟವರು, ಅವರು ಬರೆದದ್ದೆಲ್ಲ ಆತ್ಮಚರಿತ್ರೆಯೇ ಆದೀತು.

ಆದಿಯೂ ನೆಟ್ ನ ಪಾಠವೂ

ಆದಿಯೂ ನೆಟ್ ನ ಪಾಠವೂ
( ಮಕ್ಕಳ ಕವಿತೆಗಳು)
ಲೇ: ಬೆಂ ಶ್ರೀ ರವೀಂದ್ರ.
ಹೂಬಳ್ಳಿ ಪ್ರಕಾಶನ
ದೂ: 9448994199

Back To Top