Category: ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಪುಸ್ತಕ ವಿಮರ್ಶೆ

ಕೃತಿ ಬಿಕರಿಗಿಟ್ಟ ಕನಸು-ಕಾವ್ಯ ಲೇಖಕರು: ದೇವು ಮಾಕೊಂಡ ಡಾ.ವಿಜಯಶ್ರೀ ಇಟ್ಟಣ್ಣವರ ಕವಿಯೊಬ್ಬ ಕಾವ್ಯ ನರ‍್ಮಿತಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಬೇಕೆಂದರೆ ಕಾವ್ಯ ಪ್ರತಿಭೆ ಅವಶ್ಯ. ಅದನ್ನೇ ಆಲಂಕಾರಿಕರು ‘ಕವಿತ್ವ ಬೀಜಂ ಪ್ರತಿಭಾನಂ’ ಎಂದಿದ್ದಾರೆ. ಹಾಗಾದರೆ ಕಾವ್ಯ ನರ‍್ಮಿತಿಗೆ ಪ್ರತಿಭೆಯೊಂದೇ ಸಾಕೆ? ಎಂಬ ಪ್ರಶ್ನೆ ಉದ್ಭವಿಸುತ್ತದೆ. ಇಲ್ಲ, ಪ್ರತಿಭೆಯ ಜೊತೆಗೆ ಬದುಕಿನ ವಿಭಿನ್ನ ಅನುಭವ, ಆಲೋಚನೆಗಳು ಕವಿಯೊಬ್ಬನನ್ನು ನರ‍್ಮಿಸುತ್ತವೆ. ಹೊಸದನ್ನು ಕಾಣುವ, ಕಾಣಿಸುವ ಮನಸ್ಸು, ಪ್ರಜ್ಞೆ ಕವಿಗೆ ಬೇಕು.ಇದನ್ನೇ ಆಲಂಕಾರಿಕರು ‘ಪ್ರಜ್ಞಾ ನವನವೋನ್ಮೇಶ ಶಾಲಿನಿ’ ಎಂದಿದ್ದಾರೆ. ಜೊತೆಗೆ ಕಟ್ಟಿದ ಕಾವ್ಯವನ್ನು ಮತ್ತೆ ಮತ್ತೆ ಓರಣಗೊಳಿಸುವ ಪ್ರಯತ್ನವೂ ಅವಶ್ಯ. ಈ ಮೂರೂ ಮುಪ್ಪುರಿಗೊಂಡಾಗ ಯಶಸ್ವಿಗೊಂಡಾಗ ಯಶಸ್ವಿ ಕವಿಯೊಬ್ಬನನ್ನು ನರ‍್ಮಿಸುತ್ತವೆ. ಮೊದಲ ಪ್ರಯತ್ನದಲ್ಲೇ ಈ ಮೂರೂ ಲಕ್ಷಣಗಳನ್ನೊಳಗೊಂಡ ಕವಿ ದೇವಿ ಮಾಕೊಂಡ. ‌‌‌‌‌ ದೇವು ಮಾಕೊಂಡ ದೇಸೀ ಸಂಸ್ಕೃತಿ-ಪ್ರಜ್ಞೆಯನ್ನುಳ್ಳ ಕವಿ. ಹಳ್ಳಿ ವಿಭಿನ್ನ ಅನುಭವಗಳ ಆಗರ. ಲೊಕಜ್ಞಾನದ ಕೇಂದ್ರ. ಮನುಷ್ಯನಿಗೆ ಹಳ್ಳಿ ಕೊಡುವ ಅನುಭವ ಸಂಪತ್ತನ್ನು ಪಟ್ಟಣ ಕಟ್ಟಿಕೊಡಲಾರದು. ಪಟ್ಟಣದ ಕಂಪೌಂಡ ಸಂಸ್ಕೃತಿಯ ಅಡಿಯಾಳಾಗಿರುವ ನಾವುಗಳು ಇಂದು ನಮ್ಮ ಸುತ್ತ ಸ್ವರ‍್ಥದ ಗೋಡೆಕಟ್ಟಿಕೊಂಡಿದ್ದೇವೆ. ಆದರೆ ದೇವು ಮಾಕೊಂಡ ಹಳ್ಳಿಯೊಳಗೊಂದಾಗಿ ಬದುಕಿದ ಆಧುನಿಕ ಮನುಷ್ಯ. ಅಂತಲೇ ಈ ವ್ಯಕ್ತಿಗೆ ಹಳ್ಳಿಯಿಂದ ದಿಲ್ಲಿ ದಿಗಂತದವರೆಗಿನ ಅಪಾರ ಲೋಕಜ್ಞಾನವಿದೆ. ಅವರಿಗೆ ತಾನು, ತನ್ನ ವೈಯಕ್ತಿಕ ಬದುಕು ಇದಿಷ್ಟೇ ಜೀವನವಲ್ಲ. ಅದರಾಚೆಗೂ ತುಡಿತ-ತಲ್ಲಣಗಳಿವೆ. ಅಂತಲೇ ಅವರಿಗೆ ಅನ್ಯಾಯ, ಅತ್ಯಾಚಾರ, ಪರಿಸರ ನಾಶ, ಕೋಮು ಸಂರ‍್ಷ, ಜಾತಿ ಅಸಮಾನತೆಗಳ ಕುರಿತು ರೋಷವಿದೆ. ವಿರೂಪಗೊಂಡ ದೇಶದ ಚಿತ್ರಣದ ಜೊತೆಗೆ ನಮ್ಮಲ್ಲಿ ಇನ್ನೂ ಜೀವಂತವಿರುವ ಪ್ರೀತಿ, ಪ್ರೇಮ, ನನ್ನೂರು. ನನ್ನ ದೇಶಗಳ ಕುರಿತು ಅಭಿಮಾನವಿದೆ. ಇದನ್ನೆಲ್ಲ ನೋಡಿದಾಗ ಕವಿಗೆ ಒಟ್ಟು ಬದುಕಿನ ಬಗೆಗಿರುವ ವಿಶಾಲ ದೃಷ್ಟಿಕೋನದ ಅರಿವುಂಟಾಗುತ್ತದೆ. ಅದಕ್ಕೆ ಸಾಕ್ಷಿ ಬಿಕರಿಗಿಟ್ಟ ಕನಸುವಿನಲ್ಲಿನ ಕಾವ್ಯಾಭಿವ್ಯಕ್ತಿಗಳು.‍ ‘ಬಿಕರಿಗಿಟ್ಟ ಕನಸು’ ಸಮನ್ವಯ ಮಾದರಿಯ ಕವನ ಸಂಕಲನ. ಇಲ್ಲಿಯ ಕವನಗಳಲ್ಲಿ ನವೋದಯದ ಜೀವನ ಪ್ರೀತಿ, ರಾಷ್ಟ್ರಭಕ್ತಿ, ಪ್ರಕೃತಿ ಪ್ರೀತಿ, ಆರ‍್ಶ ಕಲ್ಪನೆಗಳಿವೆ. ಪ್ರಗತಿಶೀಲರ ಪ್ರಗತಿಯ ದೃಷ್ಟಿಕೋನವಿದೆ, ಡೋಂಗಿ ಬಾಬಾಗಳನ್ನು ಬಯಲಿಗೆಳೆಯುವ ದಿಟ್ಟತನವಿದೆ. ನವ್ಯರ ಪ್ರತೀಕಾತ್ಮಕವಾಗಿ ಹೇಳುವ ಕಲೆಗಾರಿಕೆ ಇದೆ, ಬದುಕು-ದೇಶದ ಬಗ್ಗೆ ಭ್ರಮನಿರಸನವಿದೆ. ಬಂಡಾಯದ ಪ್ರತಿಭಟನಾ ಗುಣವಿದೆ. ಹೀಗೆ ಇದುವರೆಗಿನ ಕನ್ನಡ ಸಾಹಿತ್ಯ ಚಳುವಳಿಗಳಿಗೆಲ್ಲ ಇಲ್ಲಿ ಸ್ಪಂದನೆ ಇದೆ. ಜೊತೆಗೆ ರ‍್ತಮಾನಕ್ಕೂ ಪ್ರತಿಕ್ರಿಯೆ ಇದೆ. ಈ ಸಂಕಲನದಲ್ಲಿ ಒಟ್ಟು ೪೩ ಕವನಗಳಿವೆ. ಅವನ್ನು ಸ್ಥೂಲವಾಗಿ ಐದು ವಿಭಾಗಗಳನ್ನಾಗಿ ಮಾಡಿಕೊಂಡು ನೋಡಬಹುದು. ಕೋಮು-ಜಾತಿ ಸಂರ‍್ಷ , ಪ್ರೇಮಕವಿತೆಗಳು , ಪರಿಸರ ಕಾಳಜಿ, ರ‍್ತಮಾನಕ್ಕೆ ಪ್ರತಿಕ್ರಿಯೆ ಹೀಗೆ ಅನೇಕ ಭಾವದ ಕವಿತೆಗಳು ಈ ಸಂಕಲನದಲ್ಲಿವೆ. ಮನುಷ್ಯ ಮನುಷ್ಯನನ್ನು ಒಡೆಯುವ ರ‍್ಮ ಜಾತಿಗಳ ಕುರಿತಾಗಿ ಕವಿಗೆ ಅಪಾರವಾದ ಆಕ್ರೋಶವಿದೆ. ಅದನ್ನು ಬಿಕರಿಗಿಟ್ಟ ಕನಸು, ಗುಲಾಮಗಿರಿ, ಚಂದ್ರನ ಸಾಕ್ಷಿಯಾಗಿ, ನನ್ನೆದೆಯೇ ಮಹಾಗ್ರಂಥಗಳಂತಹ ಕವನಗಳಲ್ಲಿ ಕಾಣಬಹುದು. ಉದಾಹರಣೆಗೆ, ಬಿಕರಿಗಿಟ್ಟ ಕನಸು ಕವಿತೆಯಲ್ಲಿ “ಬಂದೂಕಿನ ನಳಿಕೆಯಲಿ ಗೂಡು ಕಟ್ಟಲು ಹೋದ ಹಕ್ಕಿ ಮೊಟ್ಟೆ ಇಟ್ಟ ಭ್ರೂಣ ತಟ್ಟದೇ ಅಳಿಯುತ್ತಿದೆ” ಎಂಬ ಸಾಲುಗಳಲ್ಲಿ ಕವಿಯ ನೋವು ಅಭಿವ್ಯಕ್ತಗೊಳ್ಳುತ್ತದೆ. ಮಾನವೀಯತೆಯ ಆಶಯ ಬಂದೂಕಿನ ಬಾಯಲ್ಲಿ ಗುಬ್ಬಚ್ಚಿ ಗೂಡುಕಟ್ಟಬೇಕೆಂಬುದು. ಆದರೆ ಗುಬ್ಬಚ್ಚಿ ಬಂದೂಕಿನ ಬಾಯಲ್ಲಿ ಗೂಡು ಕಟ್ಟಿ ಇನ್ನೇನು ಆ ಭ್ರೂಣಕ್ಕೆ ಕಾವು ಕೊಟ್ಟು ಮರಿಮಾಡಬೇಕು ಅಷ್ಟರಲ್ಲಿ ಆ ಗೂಡು ತತ್ತಿ ಸಹಿತವಾಗಿ ಇಲ್ಲವಾಗುವದು ಇಂದಿನ ಕರಾಳ ವಾಸ್ತವ. ಇಂಥ ಸಾಲುಗಳು ಕವಿಯ ಕಾವ್ಯ ಶಕ್ತಿಗೆ ಕೈಗನ್ನಡಿ. ಬಿಕರಿಗಿಟ್ಟ ಕವಿತೆ ಕೋಮು ದಳ್ಳುರಿಯ ಬೆಂಕಿ ಹೇಗೆ ಜಗತ್ತನ್ನೇ ಬೇಯಿಸುತ್ತಿದೆ, ಶಾಂತಿ ಸೌಹರ‍್ದತೆಯ ನೆಲೆವೀಡಾದ ತಾಣಗಳನೇಕ ಇಂದು ರಕ್ತದ ಮಡುವಾಗಿ ಭಯ ಹುಟ್ಟಿಸುವ ತಾಣಗಳಾಗಿರುವುದರ ಬಗ್ಗೆ ಕವಿಗೆ ವಿಶಾದವಿದೆ. ಬೆಂಕಿಯ ಮಳೆ ಕವಿತೆಯಲ್ಲಿ ಇಂದು ದೇಶಾದ್ಯಂತ ಭಯೋತ್ಪಾದನೆ, ನಕ್ಸಲ್ ಚಟುವಟಿಕೆ, ಅತ್ಯಾಚಾರ, ಅನ್ಯಾಯ, ಅಸಹಿಷ್ಣುತೆ ತಾಂಡವವಾಡುತ್ತಿವೆ. ದೇಶಕ್ಕೊದಗಿದ ಇಂಥ ದರ‍್ದೆಸೆಗೆ ಕವಿ ಮನಸ್ಸು ಘಾಸಿಗೊಂಡಿದೆ. ಗುಲಾಮಗಿರಿ, ನೊಂದವರು ನೋಯುತ್ತಲೇ ಇರುತ್ತಾರೆಯಂಥ ಕವಿತೆಗಳಲ್ಲಿ ಪರಂಪರಾಗತವಾಗಿ ಬಂದ ಯಜಮಾನ್ಯ ಸಂಸ್ಕೃತಿಯನ್ನು ಪುರೋಹಿತಶಾಹಿಯನ್ನು ಕವಿ ಪ್ರತಿಭಟಿಸುತ್ತಾನೆ. ಆದರೆ ಈ ಪ್ರತಿಭಟನೆ ಸೌಮ್ಯ ತೆರನಾದದ್ದಾಗಿದೆ. ‘ಗುಲಾಮಗಿರಿ’ ಕವಿತೆಯಲ್ಲಿ “ನನ್ನ ಸುಕ್ಕುಗಟ್ಟಿದ ನಲುಗಿ ಬಾಡಿದ ದೇಹದ ಹನಿ ರಕ್ತದಿಂದ ನಿನ್ನ ಸುಖದ ಗೋಪುರ ಕಟ್ಟಿರುವೆ ನನ್ನ ನೋವಿನ ಮಡುವಿನಿಂದ ನಿನ್ನ ಜೀವನ ಸಾಗಿದೆ” ಎಂದು ಪ್ರತಿಭಟಿಸುತ್ತಾನೆ ಕವಿ. ‘ಚಂದಿರನ ಸಾಕ್ಷಿಯಾಗಿ’ ಕವಿತೆಯಂತೂ ಕತೆಯಾಗುವ ಕವಿತೆ. ಲಂಕೇಶರ ದಾಳಿ ಕಥೆಯನ್ನು ನೆನಪಿಸುವ ಕವಿತೆ. ಪ್ರಕೃತಿ ತಾನೆ ಮನುಷ್ಯನನ್ನು “ನಿಮ್ಮ ಮನೆಯ ಮಗಳೆಂದು ರಕ್ಷಿಸಿ” ಎಂದು ಬೇಡಿಕೊಳ್ಳುವ ದಯನೀಯತೆ ಪ್ರಕೃತಿ ಎದುರಾಗಿದ್ದನ್ನು ದುಃಖದಿಂದ ಹೇಳುತ್ತಾನೆ ಕವಿ. ಸಂಬಂಧ-ಸಾಂಗತ್ಯ ಕವಿತೆಯಲ್ಲಿ “ಕಣ್ಣು-ಕಿವಿ ಮೂಗು-ಬಾಯಿ ತುಂಡರಸಿ ಕಾಮನೋಟ ಬೀರಿ ನಿತಂಬ ಕತ್ತರಿಸಿ ಹಾಕುವಾಗ ತನಿರಸ ಧಾರೆ ಎರೆದ ಗಳಿಗೆ ನೆನಪಾಗಲಿಲ್ಲವೆ?” ಎನ್ನುತ್ತಾನೆ ಕವಿ. ಇದು ಕವಿತೆಯ ಕೊನೆಯ ನುಡಿ. ಈ ನುಡಿಗೆ ಬರುವವರೆಗೂ ಕವಿ ಪ್ರಕೃತಿ ಮತ್ತು ಜೀವ ಸಂಕುಲದ ಮಧ್ಯದ ಅವಿನಾಭಾವ ಸಂಬಂಧವನ್ನು ರ‍್ಣಿಸುತ್ತಾ ಕೊನೆಗೆ ಈ ಮೇಲಿನಂತೆ ಹೇಳುತ್ತಾನೆ. ಪ್ರಕೃತಿಯ ಮೇಲೆ ಮಾನವನ ಕಾಮದ ಕಣ್ಣು ಬಿದ್ದಿದೆ. ಎಲ್ಲೆಲ್ಲ ಕಾಮದ ಕಣ್ಣು ಬೀಳುವದೋ ಅಲ್ಲೆಲ್ಲ ಸ್ವರ‍್ಥ ಮನೆ ಮಾಡುತ್ತದೆ. ಮಾನವ ದಾನವನಾಗಿ ಅಮಾನುಷವಾಗಿ ರ‍್ತಿಸಲಾರಂಭಿಸುತ್ತಾನೆ. ಅದನ್ನೇ ಕವಿ ಇಲ್ಲಿ ಹೀಗೆ ಕವಿತೆಯಾಗಿಸಿದ್ದಾನೆ. ಇನ್ನು ವಸಂತಕಾಲದ ಚಿಟ್ಟೆ, ನಲ್ಲೆ, ಬರಿ ನೋಟವಲ್ಲದಂತಹ ಮುದನೀಡುವ ಪ್ರೇಮ ಕವಿತೆಗಳಿವೆ. ಆರ‍್ಶ ಮೌಲ್ಯಗಳನ್ನು ಪ್ರತಿಪಾದಿಸುವ ನಾಡ ಕಟ್ಟತೇವ, ಭಾವಕೋಶವೊಂದೇ ಭಾರತಯಂತಹ ಕವಿತೆಗಳು ಸಂಕಲನದ ಮೌಲ್ಯ ಹೆಚ್ಚಿಸುತ್ತವೆ. ಜೊತೆಗೆ ರ‍್ತಮಾನಕ್ಕೆ ಕವಿಯ ಪ್ರತಿಕ್ರಿಯೆಯಾಗಿ ಗೋರಿಯೊಳಗಿನ ಹೂವು, ಭೀಮೆಯ ಸಿರಿಯಂತಹ ಕವಿತೆಗಳಿವೆ. ಹೀಗೆ ಕವಿ ವಿಭಿನ್ನ ವಸ್ತು, ಆಶಯ, ಸನ್ನಿವೇಶಗಳಿಗೆ ತನ್ನದೇರೀತಿಯಲ್ಲಿ ಪ್ರತಿಕ್ರಿಯಿಸುತ್ತಾನೆ, ಅಭಿವ್ಯಕ್ತಿಸುತ್ತಾನೆ. ಕವಿಯೊಬ್ಬನ ಕವಿತೆಗಳೆಲ್ಲ ಒಂದೇ ಎತ್ತರದಲ್ಲಿರಲು ಸಾಧ್ಯವಿಲ್ಲ, ಅದನ್ನು ಕವಿಯಿಂದ ನಿರೀಕ್ಷಿಸಲೂ ಬಾರದು. ಎಷ್ಟೇ ದೊಡ್ಡ ಕವಿಯಾದರೂ ಸಾರಸ್ವತಲೋಕದಲ್ಲಿ ಕವಿಯೊಬ್ಬ ನೆಲೆ ನಿಲ್ಲುವದು ಕೆಲವು ಕವಿತೆಗಳಿಂದ ಮಾತ್ರ. ಅಂತೆಯೇ ದೇವು ಮಾಕೊಂಡ ಸಹ ಸುಡಗಾಡ ಹೂ, ಬಿಕರಿಗಿಟ್ಟ ಕನಸು, ಗುಲಾಮಗಿರಿ, ನೊಂದವರು ನೋಯುತ್ತಲೇ ಇರುತ್ತಾರೆ, ಚಂದ್ರನ ಸಾಕ್ಷಿಯಾಗಿ, ಗೋರಿಯೊಳಗಿನ ಹೂ, ಬಿಳಿ ಕ್ರಾಂತಿಯ ಶಿಶು ಅಂತಹ ಕವಿತೆಗಳಿಂದ ಒಂದಿಷ್ಟು ಕಾಲ ಈ ಸಾರಸ್ವತ ಲೋಕದಲ್ಲಿ ನೆಲೆ ನಿಲ್ಲುತ್ತಾರೆ. ಎಲ್ಲಕ್ಕೂ ಮಿಗಿಲಾಗಿ ಕಾವ್ಯ ರಸಾನಂದವನ್ನು ನೀಡಬೇಕು ಎನ್ನುವರು ಅಂಥ ರಸಾನಂದವನ್ನು ನೀಡುವ ಕವಿತೆ ಬಿಳಿ ಕ್ರಾಂತಿಯ ಶಿಶು. ಹೀಗೆ ಮೋದಲ ಸಂಕಲನದಿಂದಲೇ ಭರವಸೆಯನ್ನು ಮೂಡಿಸಿದ ಕವಿ ಮುಂದಿನ ದಿನಮಾನಗಳಲ್ಲಿ ಮತ್ತೊಂದಿಷ್ಟು ಸಂಕಲನಗಳ ಮೂಲಕ ಕಾವ್ಯ ಸಂಪತ್ತನ್ನು ಹೆಚ್ಚಿಸಲಿ.

ನಾನು ಓದಿದ ಪುಸ್ತಕ

ಮಣ್ಣಿಗೆ ಬಿದ್ದ ಹೂಗಳು ಬಿದಲೋಟಿ ರಂಗನಾಥ್ ಅರುಣ್ ಕುಮಾರ್ ಬ್ಯಾತ ಬಿದಲೋಟಿ ರಂಗನಾಥ್ ಸರ್ ಜಾಲತಾಣದ ಆತ್ಮೀಯರಾದರೂ ಅವರು ಭೇಟಿ ಆದದ್ದು, ಮೊನ್ನೆ ತುಮಕೂರಿನ ಕಾರ್ಯಕ್ರಮವೊಂದರಲ್ಲಿ. ಮಾತಾಡಿಸಿ ಕೈಗೆರಡು ಪುಸ್ತಕಗಳನಿಟ್ಟು ಓದು ಎಂದರು. ನಾನೂ ಬಿಡುವಿನಲ್ಲಿ ಹಾಗೇ ಕಣ್ಣಾಡಿಸಿದೆ ಒಂದು ಮೂರು ಹತ್ತು ಹೀಗೆ ಎಲ್ಲವೂ ಮುಗಿದುಹೋದವು…ಓದಿಕೊಂಡಾಗ ಉಳಿದ ನನ್ನವೇ ಒಂದಿಷ್ಟೇ ಇಷ್ಟು ಅನಿಸಿಕೆಯನ್ನು ಇಲ್ಲಿ ಬರೆಯುವುದಕ್ಕೆ ಪ್ರಯತ್ನಿಸಿರುವೆ… ಏನು ಮಣ್ಣಿಗೆ ಬಿದ್ದ ಹೂವುಗಳು..? ಯಾಕೆ ಇದೇ ಶೀರ್ಷಿಕೆ ಇಟ್ಟರು ಎಂದು ತಡಕಾಡಿದೆ…! ಒಂದೆರಡು ಸಾಲು ಉತ್ತರ ಹೇಳಿದಂತಿದ್ದವು..,ಬುಡ್ಡಿಯ ಬೆಳಕ ಕಳೆದುಕೊಂಡು ಬೆಳದಿಂಗಳ ಬೆಳಕಲ್ಲಿ ಗೂಡಿರಿಸಿ ಮಲಗಿದ್ದ ತಣ್ಣನೆಯ ನೆನಪುಗಳನ್ನು ಕರ ಜೋಡಿಸಿ ಕಣ್ಣಲ್ಲಿ ಕರೆದ ದಾರಿಯಲ್ಲಿ ಬಂದ ಕಾವ್ಯಗಳಿಗೆ ಜೋಕಾಲಿ ಕಟ್ಟಿದೆ..! ನಾನು ನಾನಗದೇ ಭಾವ ಬಿಂದುವಿಗೆ ಹೂ ಮುಡಿಸಿ ಅಂದ ತುಂಬಿಕೊಂಡು ಕುಣಿಯುತ್ತಿದ್ದೆ…! ಅಲ್ವಾ… ಕೊಂಚ ಶಾಂತಿ ಸಿಗಲು ನಾ, ಅಡವಿಟ್ಟ ಮೊದಲ ಎಸಳ ಕವಿತೆಯ ಸಾಲು ಕೊಡು ಅದರಿಂದ ನೂರು ಭಾವ ತುಂಬಿದ ಕವಿತೆ ಬರೆದು ಕೊಡುವೆ ನಾನು…! ಕವಿಯೊಬ್ಬನ ಅಂತರಂಗದಲ್ಲಿ ಮಂಥನ ಮಾಡಬಲ್ಲ ಭಾವಯಾನ ಇಲ್ಲಿ ವ್ಯಕ್ತವಾಗುತ್ತದೆ. ಇಲ್ಲೂ ಕವಿಗಳು ತಮ್ಮದೇ ನಿಲುವಿನಲ್ಲಿ ಜಾತಿಯನ್ನು ನಿಂದಿಸುತ್ತಾರೆ, ಒಳಗಿನ‌ ಸೇಡ ನಿರ್ಭೀತಿಯಿಂದ ಹೊರಹಾಕುತ್ತಾರೆ..”ನಾನು ನಾನಗಿರುವುದಿಲ್ಲ , ನಿನ್ನ ಜಾತಿ ಯಾವುದೆಂದರೆ ಮೈ ಕೈ ಪರಚಿಕೊಳ್ಳುತ್ತೇನೆ ಎಂದು ಒಳಗಿನ‌ ಒಡಬಾಗ್ನಿಯನ್ನು ರಾಚುತ್ತಾರೆ…! ಆಕಾಶ ಮಡಿಕೆ ತೂತು ಬಿದ್ದ ರಾತ್ರಿ ಕವಿತೆಯಲ್ಲಿ ಬಡತನದ ಅನಾವರಣ ತರೆದಿಟ್ಟಿದ್ದಾರೆ., ಹೌದು ನಾನು ಆ ತರಹದ ನಡುರಾತ್ರಿ ಬಡಿಸ ಮಳೆಗೆ ತಡಕಾಡಿದ ಅಪ್ಪನನ್ನು, ಬಡಿದಾಡಿದ ಅಮ್ಮನನ್ನು, ಮಿಸುಕಾಡದೇ ಕೂತ ನಮ್ಮನ್ನು ನಮಗೆ ನೆನಪಿಸಿದವು…ಅಸಹಾಯಕತೆಗೆ ಎಷ್ಟು ಸೇಡು…! ಅಂದು ತೊಟ್ಟಿಕ್ಕಿದ ಆ ತೂತಾದ ಸೂರಿನಲ್ಲಿ ಬಿದ್ದ ಹನಿಗಳ ಕಲರವ ಇನ್ನೂ ಕಿವಿಗಳಲ್ಲಿದೆ.. ಒಳಗೆ ನುಗ್ಗಿದ ನೀರು ಒಲೆಯ ಮೆದು ಮಾಡಿ ಎನ್ನುವಾಗ ಹಪಹಪಿಸಿದ ಹಸಿವು ಕಾಣುತ್ತದೆ…! ಕಾಲದೊಟ್ಟಿಗೆ ಪ್ರೀತಿಯನ್ನು ಅದರ ಬದಲಾವಣೆಯಲ್ಲಿ ತನ್ನನ್ನೂ ತಿರುಗಿಸುತ್ತಾ ಕವಿ ನನ್ನಿಂದಿಲ್ಲದ ಕಾಲ ಎಂಬ ಕವಿತೆಯಲ್ಲಿ ಅನುಭವವನ್ನು ಬಿಚ್ಚಿಟ್ಟಿದ್ದಾರೆ.. ಸಾಲುಗಳು ಎಷ್ಟು ಚಂದ…, ” ಪ್ರೀತಿ ಬದುಕಿದ್ದ ಕಾಲದಲ್ಲಿ ಭಾವ ಸುರುಳಿಯಾಗಿತ್ತು, ಅಕ್ಕ ಪಕ್ಕದ ಗುಳ್ಳೆಯ ಹಂಗಿರಲಿಲ್ಲ ಮನಸ್ಸು ತಿಳಿಯಾಗಿತ್ತು…ಕದಡಿರಲಿಲ್ಲ…! ಕನಸುಗಳನ್ನು ಹಾರಿ ಬಿಟ್ಟಿದ್ದೇನೆ ಎಲ್ಲಿದ್ದರೂ ಹಿಡಿದುಕೋ ಎಂಬ ಸಾಲು ಎಷ್ಟು ಸತ್ಯವಾಗಿವೆ…! ಮೂಕ ಹಕ್ಕಿಯ ಮಾತು ಕವಿತೆಯಲ್ಲಿ ” ನನ್ನನ್ನು ನಾನೇ ನೋಡಿಕೊಳ್ಳುತ್ತೇನೆ,‌ ನನಗೆ ನಾನೇ ಅರ್ಥವಾಗದ ಹಾಗೆ, ಸದ್ದು ಗದ್ದಲದ ನಡುವೆ ಒಬ್ಬನೇ ಕೂತು” ಎಂದು ಒಂಟಿತನದ ಸಂಕಟದಲ್ಲೇ ತನ್ನೊಳಗಿನ‌ ತನ್ನನ್ನು ಸಮಾಧಾನಿಸುತ್ತಾ ನೋಡುವ ಬಗೆಯ ಬರೆಯುತ್ತಾರೆ. ಹೀಗೆ ಒಂದೈವತ್ತು ಕವಿತೆಗಳು ಈ ಪುಸ್ತಕದಲ್ಲಿವೆ, ಅವರೇ ಹೇಳುವಂತೆ ದಿಕ್ಕೆಟ್ಟವರ ಅಸಹಾಯಕರ ನಿರ್ಗತಿಕರ ಕೈ ಹಿಡಿದು ಮೇಲುತ್ತವ ಕವಿತೆಗಳು ಹೆಚ್ಚು ಕಿವಿ ತಟ್ಟುತ್ತವೆ.. ನೆಲದ ಜೀವಗಳ ಅಂತಃಕರಣ ಕವಿಯನ್ನು ಹೆಚ್ಚಾಗಿ ಕಾಡಿವೆ..ಬದುಕನ್ನೇ ಅಕ್ಷರಗಳಿಗೆ ಕಟ್ಟಿಕೊಟ್ಟ ಕವಿತೆಗಳು ನಮ್ಮವೇ ಎಂಬ ಹಳೆಯ ನೆನಪುಗಳ ಮತ್ತೆ ನೆನಪಿಸುತ್ತವೆ. ಹಳ್ಳಿ ದಾಟಿ ಕವಿತೆಗಳ ವಸ್ತು ಹೊರಗೆ ಹೋಗಿಲ್ಲ…! ಅಪ್ಪ ಅಮ್ಮ ಸಂಸಾರ ಬಡತನ, ಜಾತಿ, ಬಣ್ಣ, ಹಸಿವು ಅಸಹಾಯಕತೆ, ಹೊಟ್ಟೆ ಚುರುಕಿನ ಹೊಯ್ದಾಟಗಳ ಇಲ್ಲಿ ಕಾಣಬಹುದು..! ಕವಿತೆ ಬರೆಯಲು ಹಪಹಪಿಸುವ ನಮಗೆ ಸಿಕ್ಕದ್ದನ್ನೇ ಗೀಚಾಡುವ ಸಮಯಕ್ಕೆ ಬರೆಯಲು ಇಷ್ಟು ನಮ್ಮವೇ ವಿಷಯ ಇದ್ದಾವಲ್ಲ ಎಂಬ ಅಚ್ಚರಿಯೂ ಈ ಪುಸ್ತಕ ಓದಿದ ಮೇಲೆ ಅನಿಸದೇ ಇರದು.. ಕವಿತೆಗಳಲ್ಲಿ ಕಣಬಹುದಾದ ಬಳಸಿದ ಪದಗಳಂತು ಅವರೆಕಾಯಿ ಸೊಗಡಿನಂತವು, ದಾರಿ ಬದಿಯ ಹೂಗಳ ಘಮದಂತವು, ಬಿದ್ದ ಗಾಯದ ಗುರುತಿನಂಥವು…! ಹಾಗೇ ನಮ್ಮನ್ನು ಮುಟ್ಟಿ ಹೋಗಿ ಮರೆಯಾಗಿ ಮತ್ತೆ ಬಂದು ಬಡಿದೆಬ್ಬಿಸುವಂತಹ ಪದಗಳ ಕೈ ಚಳಕವಿದೆ…! ಓದುತ್ತಾ ನನ್ನ ಬಾಲ್ಯವೂ ಮರುಕಳಿಸಿತು. ಅಗಾಧ ಶ್ರೀಮಂತಿಕೆಗೆ ಬಡತನದ ಹಸಿವಿನ ನೋವು ಅರ್ಥವಾಗುವುದಿಲ್ಲ..ನಾವು ಹಸಿದವರು ಅನ್ನದ ಬೆಲೆಯೂ ಅಕ್ಷರಗಳ ಅಕ್ಕರೆಯೂ ನನ್ನ ಹಸಿವಿಗೆ ತುತ್ತನಿಟ್ಟು ಸಂತೈಸಿದವು… ಇಂತಹದ್ದೊಂದು ಪುಸ್ತಕ ಕೈಯಲ್ಲಿ ಇರಿಸಿದ ನಿಮಗೆ ಹೃದಯ ಪೂರ್ವ ಧನ್ಯವಾದಗಳು ಸರ್..ಮತ್ತಷ್ಟು ಮಣ್ಣಿನ‌ ಸೊಗಡಿನ ಪುಸ್ತಕಗಳು ನಮ್ಮೊಳಗೆ ಉಸಿರಾಡಲಿ…. ಪ್ರೀತಿಯಿಂದ ——————————–

ವೈದೇಹಿ-75

ಇರುವಂತಿಗೆ ವೈದೇಹಿ ಗೌರವ ಗ್ರಂಥ ಸಮರ್ಪಣೆ ದಿನಾಂಕ:01-12-2019 ಭಾನುವಾರ ಬೆಳಿಗ್ಗೆ 10.30ಕ್ಕೆ ಪತ್ರಿಕಾಭವನ, ಶಿವಮೊಗ್ಗ ಸಾಹಿತ್ಯಾಸಕ್ತರಿಗೆ ಸ್ವಾಗತ

ಪುಸ್ತಕ ಸಂಭ್ರಮ

ಲೋಕಾರ್ಪಣೆ ಹೆಚ್.ಎಸ್.ಸುರೇಶ್ ಸೂರ್ಯನ ಕಥೆಗಳು(ಕಥಾಸಂಕಲನ) ಹೊಗರೆ ಖಾನ್ ಗಿರಿ(ಕಾದಂಬರಿ) ನಮ್ಮೂರಿನ ಕಾಡು ಮಲ್ಲಿಗ(ಕಥಾ ಸಂಕಲನ) ತೀರ್ಪು(ಕಥಾ ಸಂಕಲನ) ಹೀಗೂಇದ್ದನೇ ರಾವಣ(ನಾಟಕ) ಪ್ರಶ್ನಿಸುವ ಸಾಹಿತ್ಯಕ್ಕೆ ದೇಶದ್ರೋಹದ ಪಟ್ಟ “ಇಂದುಜನಪರ ಸಾಹಿತ್ಯವು ಆತಂಕದ ಸ್ಥಿತಿಯಲ್ಲಿದೆ.ವ್ಯವಸ್ಥೆಯ ಲೋಪದೋಷಗಳನ್ನುಪ್ರಶ್ನಿಸುವ ಸಾಹಿತಿಗಳಿಗೆ ದೇಶದ್ರೋಹಿಗಳ ಪಟ್ಟ ಕಟ್ಟುವಹೊಸಸಂಪ್ರದಾಯ ಪ್ರಾರಂಭವಾಗಿದೆ: ಎಂದು ಹಿರಿಯ ಸಾಹಿತಿ ಶ್ರೀ ಕು.ಸ.ಮಧುಸೂದನರಂಗೇನಹಳ್ಳಿ ವಿಷಾದಿಸಿದರು. ಶ್ರೀಯುತರು ಲೋಕಾರ್ಒಣೆ ಸಮಾರಂಭದ ಮುಖ್ಯ ಅತಿಥಿಗಳಾಗಿದ್ದರು  ತರೀಕೆರೆಯಲ್ಲಿ ಬಾನುವಾರ (17-11-2019ರಂದು)ಶ್ರೀ ಹೆಚ್.ಎಸ್.ಸುರೇಶ್ ಅವರ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದ್ಲಲ್ಲಿ ಅವರು ಮಾತನಾಡುತ್ತ “ಸಾಹಿತಿಗಳು ಪ್ರಶ್ನಿಸುವ ಮನೋಭಾವ ಬೆಳೆಸಿಕೊಂಡು,ಸತ್ಯಹುಡುಕಬೆಕು”ಎಂದು ಹೇಳಿದರು. ಜಿಲ್ಲಾ ಕನ್ನಡ ಸಾಹಿತ್ಯಪರಿಷತ್ತಿನಮಾಜಿ ಅದ್ಯಕ್ಷರಾದ ಶ್ರೀ ಹೆಚ್. ಚಂದ್ರಪ್ಪನವರು ಅದ್ಯಕ್ಷತೆ ವಹಸಿದ್ದು,ಕಿರುತೆರೆಕಲಾವಿದೆ ಶ್ರೀಮತಿ ನಂದಿನಿ ಪಟವರ್ಷನ್ ಉದ್ಘಾಟನೆ ಮಾಡಿದರು.ಸಾಹಿತಿಗಳಾದಶ್ರೀನಾಗೇನಹಳ್ಳಿತಿಮ್ಮಯ್ಯ,ಶ್ರೀಭಗವಾನ್,ಎಂ.ಕೆ.ವಿಜಯಕುಮಾರ್,ಶ್ರೀಓಂಕಾರಪ್ಪನವರು ಉಪಸ್ಥಿತರಿದ್ದು ಕೃತಿಗಳ ಬಗ್ಗೆ  ಮಾತನಾಡಿದರು.

ಪುಸ್ತಕ ಪರಿಚಯ

ಕೃತಿ-ಗುಣ (ಕಾದಂಬರಿ) ಲೇಖಕರು-ಡಾ.ಗುರುಪ್ರಸಾದ್ ಕಾಗಿನೆಲೆ ಛಂದ ಪುಸ್ತಕ ಡಾ.ಅಜಿತ್ ಹರೀಶಿ ಶಿವಮೊಗ್ಗದಲ್ಲಿ ಹುಟ್ಟಿ ಬಳ್ಳಾರಿಯಲ್ಲಿ ಎಂಬಿಬಿಎಸ್.ಎಂಡಿ ಮಾಡಿ ಪ್ರಸ್ತುತ ಅಮೆರಿಕದಲ್ಲಿ ಎಮರ್ಜೆನ್ಸಿ ವೈದ್ಯರಾಗಿ ಕೆಲಸಮಾಡುತ್ತಿರುವ ಗುರುಪ್ರಸಾದರು ಬರೆದಿರುವ ಕಾದಂಬರಿಯಿದು. ಬಿಳಿಯ ಚಾದರ,ಗುಣ ಮತ್ತು ಹಿಜಾಬ್ ಅವರ ಪ್ರಕಟಿತ ಕಾದಂಬರಿಗಳು. ನಿರ್ಗುಣ, ಶಕುಂತಳಾ ಕಥಾಸಂಕಲನಗಳು, ಲೇಖನ ಸಂಗ್ರಹ-ವೈದ್ಯ ಮತ್ತೊಬ್ಬ, ಆಚೀಚೆ ಕಥೆಗಳು- ಸಂಪಾದಿತ ಕಥಾಸಂಕಲನಗಳನ್ನು ಇವರು ಪ್ರಕಟಿಸಿದ್ದಾರೆ. ಹಿಂದಿನ ದಶಕದಲ್ಲಿ ಅಮೆರಿಕೆಯಲ್ಲಿ ಘಟಿಸಿರಬಹುದಾದ, ಈ ದಶಕದಲ್ಲಿ ಭಾರತದ ಮಹಾನಗರಗಳಲ್ಲಿ ನಡೆಯುತ್ತಿರಬಹುದಾದ ಮತ್ತು ಮುಂದಿನ ದಿನಮಾನಗಳಲ್ಲಿ ನಾವೇ ಕಾಣಬಹುದಾದ ವಿಶಿಷ್ಟ ಕಥಾನಕವೇ ‘ ಗುಣ ‘ ಎನ್ನಬಹುದು. ಇದು ವಿದೇಶಿ ನೆಲದಲ್ಲಿ ಚಲಿಸುವ ಘಟನಾವಳಿಗಳ ನೋಟವಾದರೂ ಇದರ ಕೇಂದ್ರ ಭಾರತೀಯ ಮನಸ್ಥಿತಿಯೇ ಆಗಿದೆ. ಗೌತಮ ಮತ್ತು ಭಾರತಿ ಎಂಬ ವೈದ್ಯರ ಬದುಕಿನ ಕಥೆಯನ್ನು ಹೇಳುತ್ತಾ ವಾಸ್ತವದ ಮೇಲೆ ಬೆಳಕನ್ನು ಚೆಲ್ಲುತ್ತದೆ. ಅಮಿಗ್ಡಲ್, ಥ್ಯಾಲಮಸ್, ಹೈಪೊಥ್ಯಾಲಮಸ್ ಸೇರಿ – ‘ಅಮಿಗ್ಡಲ ಸರ್ಕ್ಯೂಟ್’ ಆಗುತ್ತದೆ. ಈ ಸರ್ಕ್ಯೂಟ್ ಬೇಗ ಫೈರ್ ಆಗುತ್ತದೆ. ಇದರಿಂದ ಸಿಟ್ಟು ಬಲು ಬೇಗ ಬರುತ್ತದೆ. ಅದೇ ಹೈಪೊಥ್ಯಾಲಮಸ್, ಥ್ಯಾಲಮಸ್ ಜೊತೆ ಪ್ರಿಫ್ರಂಟಲ್ ಕಾರ್ಟೆಕ್ಸ್ ಸೇರಿದರೆ ‘ ಪ್ರಿಫ್ರಂಟಲ್ ಸರ್ಕ್ಯೂಟ್’ ಆಗುತ್ತದೆ. ಇದು ಶಾಂತಿ, ಪ್ರೀತಿ ಮತ್ತು ತಾಳ್ಮೆಯ ಸರ್ಕ್ಯೂಟ್ ‌. ಸೋ…. ಪ್ರಿಫ್ರಂಟಲ್ ಸರ್ಕ್ಯೂಟ್ ಸ್ಟಿಮ್ಯುಲೇಟ್ ಮಾಡಿಕೊಳ್ಳೋಣ. ಇದೇ ‘ ಮೈಂಡ್ ಫುಲ್ ಅವೇರ್ ನೆಸ್’ ಎಂಬಂತಹ ಶಕ್ತಿಯುತ ವೈದ್ಯಕೀಯ ಸಾಲುಗಳನ್ನು ಇಲ್ಲಿ ಕಾಣಬಹುದಾಗಿದೆ. ಜೊತೆಗೆ ಗೌತಮ ಮತ್ತು ಮಲಿಸ್ಸಾ ಎಂಬ ನರ್ಸ್ ಇರುವಾಗ ನಡೆಯುವ ಪೋಲಿ ಸಾಲುಗಳೂ ಇವೆ. ಗೌತಮ ಮತ್ತು ಭಾರತಿ ಅವರ ಮಗಳು ಕ್ಷಮಾಳ ಪಾತ್ರ ಸಶಕ್ತವಾಗಿದ್ದು ಗಮನ ಸೆಳೆಯುತ್ತದೆ. ಸ್ಟೀವ್ ವಾರೆನ್, ಕೀರ್ತಿ ಎಂಬ ಗೇ ಗಳ ಸಮಸ್ಯೆ ಮತ್ತು ಬದುಕು ಕಾಡುತ್ತದೆ. ಗುಂಡಪ್ಪ ಮತ್ತು ನರಸಿಂಹರಾಯರು ಈಗ ಬೆಂಗಳೂರಿನಲ್ಲಿ ಅಥವಾ ನಮ್ಮೂರಿನಲ್ಲಿ ಸಿಗಬಹುದು. ಅಂತೆಯೇ ಶಕುಂತಳಾ ಬಾಯಿ ಎಂಬ ಟಿಪಿಕಲ್ ವುಮನ್ ಕೂಡ. ಜನರೇಷನ್ ಗ್ಯಾಪ್, ಇಂದಿನ ತಲೆಮಾರು ಬಳಸುವ ಪದಪುಂಜ ಗೌತಮ ಮತ್ತು ಭಾರತಿ ಎಂಬ ಪಾಲಕರನ್ನು ಮಾತ್ರವಲ್ಲ, ನಮ್ಮನ್ನೂ ಯೋಚನೆಗೀಡುಮಾಡುತ್ತದೆ. ಫ್ರೆಂಡ್, ಬಾಯ್ ಫ್ರೆಂಡ್, ಗರ್ಲ್ ಫ್ರೆಂಡ್ ಗಳ ವ್ಯತ್ಯಾಸ ಪತ್ತೆ ಹಚ್ಚುವುದು ಅಷ್ಟು ಸುಲಭವಲ್ಲ. ಹೀಗೆ ವಿವಿಧ ಆಯಾಮಗಳನ್ನು ಹೇಳುತ್ತಾ ಕಥೆ ತೆರೆದುಕೊಳ್ಳುವ ಪರಿ ಅನನ್ಯವಾದುದು. ಒಂದು ಉತ್ತಮ ಕಾದಂಬರಿ ‘ಗುಣ’. ಗುಣಮಟ್ಟದ ಓದಿಗಾಗಿ ಖಂಡಿತಾ ಈ ಕೃತಿಯನ್ನು ಓದಿ.

ಫೋಟೋ ಆಲ್ಬಂ

ಪಂಚವರ್ಣದ ಹಂಸ ಸತ್ಯಮಂಗಲ ಮಹಾದೇವ ಕೃತಿ ಬಿಡುಗಡೆಯ ಸಂಭ್ರಮದ ಕ್ಷಣಗಳು ದಿನಾಂಕ: 04-11-2019 ಬಿಡುಗಡೆ: ಶ್ರೀ ಮಲ್ಲೇಪುರಂ.ಜಿ.ವೆಂಕಟೇಶ್ ಕೃತಿ ಕುರಿತು ಮಾತಾಡಿದವರು: ಡಾ.ಸಿ.ಎನ್. ರಾಮಚಂದ್ರನ್

ಕೃತಿ ಲೋಕಾರ್ಪಣೆ

ಬಂಟಮಲೆ ತಪ್ಪಲಿನಲ್ಲಿ ಪುಸ್ತಕಸಂಭ್ರಮ ದೆಹಲಿಯ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ಕನ್ನಡ ವಿಭಾಗದಮುಖ್ಯಸ್ಥ ಶ್ರೀ ಡಾ.ಪುರುಷೋತ್ತಮ ಬಿಳಿಮಲೆಯವರ-“ವಲಸೆ,ಸಂಘರ್ಷ ಮತ್ತು ಸಮನ್ವಯ” ಕೃತಿ ನವೆಂಬರ್ 9 ರಂದು ಲೋಕಾರ್ಪಣೆಗೊಳ್ಳಲಿದೆ. ಕೃತಿಯ ಹೆಸರು-“ವಲಸೆ, ಸಂಘರ್ಷ ಮತ್ತು ಸಮನ್ವಯ” ಲೇಖಕರು-ಡಾ.ಪುರುಷೋತ್ತಮ ಬಿಳಿಮಲೆ ಸ್ಥಳ-ಬಂಟಮಲೆ ತಪ್ಪಲಿನ ಬಿಳಿಮನೆ ಅದ್ಯಕ್ಷತೆ-ಟಿ.ಜಿ.ಮುಡೂರು ಬಿಡುಗಡೆ-ಪ್ರೊ.ಬಿ.ಎ.ವಿವೇಕ ರೈ ಅತಿಥಿಗಳು-ಪ್ರೊ.ಕೆ.ಚಿನ್ನಪ್ಪಗೌಡ ಮತ್ತು ಜಾಕೆ ಮಾದವಗೌಡರು.

ಪುಸ್ತಕ ವಿಮರ್ಶೆ

ಕೃತಿ: ಭಾವಗಳು ಬಸುರಾದಾಗ. ಕವಿ:ಅರುಣ್ ಕೊಪ್ಪ ವಿಮರ್ಶೆ: ಜಿ.ವಿ.ಕೊಪ್ಪಲತೋಟ ಭಾವಗಳು ಬಸುರಾದಾಗ ಕವನ ಸಂಕಲನಕ್ಕೆ ಹಿರಿಯ ಪತ್ರಕರ್ತ ಶ್ರಿÃ ಜಯರಾಮ ಹೆಗಡೆ ಶಿರಸಿ ಮುನ್ನುಡಿ ಬರೆದಿದ್ದಾರೆ. ಬೆನ್ನುಡಿಯಲ್ಲಿ ಸಾಹಿತಿ ಡಾ|| ಬೇರ್ಯರಾಮಕುಮಾರ ಅವರು ಅರುಣಕೊಪ್ಪ ಅವರನ್ನು ಪರಿಚಯಿಸಿದ್ದಾರೆ. ಸಾಲದೂ ಎಂಬಂತೆ ಡಾ|| ಅಜಿತ್ ಹೆಗಡೆ ಹರೀಶಿಯವರೂ ಕೂಡಾ ಇವರನ್ನು ಓದುಗರಿಗೆ ಪರಿಚಯಿಸಿದ್ದಾರೆ. ಇವರ ಮೊದಲ ಕವನ ಸಂಗ್ರಹ ಹನಿಗಳ ಹಂದರ ಎರಡನೆ ಸಾಹಿತ್ಯ ಕೃತಿಯೇ ಭಾವಗಳು ‘ಬಸುರಾದಾಗ’ (ಕವನ ಸಂಕಲನ) ಈ ಸಂಕಲನದಲ್ಲಿ ಸಣ್ಣದು ದೊಡ್ಡದು ಸೇರಿ ಒಟ್ಟೂ ೭೬ ಕವನಗಳಿವೆ. ಭಾವಗಳು ಬಸುರಾದಾಗ ಏನಾಗುತ್ತದೆ? ಎಂಬುದಕ್ಕೆ ಕವಿ ಅರುಣ ನಾಯ್ಕ ಕೊಪ್ಪದವರ ಈ ಕವನ ಸಂಕಲನವನ್ನು ಓದಿದರೆ ಎಲ್ಲವೂ ಗೊತ್ತಾಗುತ್ತದೆ. ಎಂದು ಒಂದೇ ಮಾತಿನಲ್ಲಿ ಇದಕ್ಕೆ ವಿಮರ್ಶಿಸಬಹುದು. ಆದರೆ ಅದು ವಿಮರ್ಶಕನ ತರ್ಕಬದ್ಧ ಲಕ್ಷಣವಲ್ಲ ಮತ್ತು ಔಚಿತ್ಯವೂ ಅಲ್ಲ. ಮತ್ತು ಕವಿ ಇಟ್ಟುಕೊಂಡ ವಿಶಾಲ ಆಸೆ, ಆಕಾಂಕ್ಷೆ ಹರವನ್ನು ಮೊಟಕುಗೊಳಿಸಿದಂತಾಗಬಹುದೇನೂ?! ಅಲ್ಲದೇ ಬೆಳೆವ ಸಿರಿ ಮೊಳಕೆಯಲಿಯೇ ಚಿವುಟುವುದು ವಿಮರ್ಶೆ ಆಗಲಾರದು. ಕಾವ್ಯದ ಸಾರ, ಅದು ಸಾಗಿದ ಸತ್ಪಥ ಮತ್ತು ಕಾವ್ಯದ ಓದು ಅದು ಹೇಳುವ ಫಲಶ್ರುತಿ ಮತ್ತು ಅದರ ಒಳಧ್ವನಿ ಏನು ಎಂಬುದನ್ನು ತೆರೆದಿಡುವುದೇ ಒಂದು ವಿಮರ್ಶೆ ಎನಿಸಿಕೊಳ್ಳುತ್ತದೆ. ಕಾವ್ಯ ಅಥವಾ ಕವನ ಅದೇನು ಅಷ್ಟು ಸುಲಭವೇನಲ್ಲ. ಹೀಗೆ ಕಾವ್ಯ ರೂಪದಲ್ಲಿ ಹೇಳುವಾಗ ವಿಷಯದ ಪ್ರತಿಪಾದನೆ ಇಟ್ಟುಕೊಂಡಿರುವ ವಸ್ತುವಿನ ಅಸ್ತಿತ್ವ ಮತ್ತು ಭಾವ ಪ್ರತಿಮೆಗಳ ತುಲನಾತ್ಮಕ ಚಿಂತನೆ ಮಾಡುವದು, ಕಾವ್ಯ ರಚನೆಯ ನೀತಿ ಸಂಹಿತೆಯ ಉಲ್ಲಂಘನೆಯಾಗದಂತೆ ರಚಿಸುವುದೇ ಕವಿಯ ಮೇಧಾಶಕ್ತಿಗೆ ಒಡ್ಡುವ ಸವಾಲಾಗಿರುತ್ತದೆ. ಒಳ ಮನಸ್ಸಿನ ಆಳದಲ್ಲಿ ಹುದುಗಿದ ಯೋಚನೆಯನ್ನು ಭಾವನಾತ್ಮಕವಾಗಿ ಹೊರಹಾಕುವ ಮುನ್ನ ಅದು ಬಸುರಲ್ಲಿ ಬೆಳೆಯುತ್ತಿರುವ ಮಗುವಂತೆಯೇ ಎಂಬುದನ್ನು ಶ್ರಿÃ ಕೊಪ್ಪರÀವರು ತಮ್ಮದೇ ಆದ ಶೈಲಿಯಲ್ಲಿ ಸಾಕಷ್ಟು ಅರ್ಥಪೂರ್ಣವಾಗಿ ಹೇಳಿದ್ದಾರೆ. ಉದಾ :- ಕವನ ೧ ಅವ್ವನ ಕನಸು ಪ್ರಿÃತಿ ಪಾತ್ರ ನಾ ಇಷ್ಟಿತ್ತು ಮಮತೆಯ ಘನತೆ ಸಲ್ಲಿಸುವ ಗೌರವಕೆ ಕಿಂಚಿತ್ತು ಹೆಚ್ಚಲ್ಲ ಈ ಹೃದಯದಿಂದ ಹಸಿವಾದ ಈ ಮನಸ್ಸಿಗೆ ನೀಗಲು ಸಾಕು ನನ್ನ ಅವ್ವನ ಕನಸು ಹೇಗೆ ತಮ್ಮ ಮನಸನ್ನು ಕಾವ್ಯಾತ್ಮಕವಾಗಿ ಮಾರ್ಪಡಿಸಿಕೊಳ್ಳುವ ರೀತಿ ತುಂಬಾ ಹರಿತ ಮತ್ತು ಮೇಲ್‌ಸ್ತರದ ವಿಚಾರಗಳಾಗಿವೆ. ಕವನ ೬ ವೇದಿಕೆ : ಒಂದೇ ಬೇರು ಒಂದೇ ಕೊಂಬೆ ಹಸಿರು ಹಲವು ಸದಾ ಏಕತೆಯ ಉಸಿರು ರಂಗು ಈ ಸಂಜೆ ಹೀಗೆ ಹಲವು ಹತ್ತು ಕವನಗಳ ಸಾಲಿನಲ್ಲಿ ಶೃಜನಶೀಲತೆ ಇದೆ. ಉದಾ : ಕವನ ೮ :- ಮೂಡುವ ಕಾಡುವ ಮನಗಳ ಮಾತಿಗೆ ಹಾಡು ಪಾಡುವ ಒಲವಿನ ಗಡಿಬಿಡಿಗೆ ನಾ ಹೇಗೆ ಹೋಗಿ ಸಹಿಸಲಿ ನೀ ಹೇಳು ಹೇಗೆ ಮನಸ್ಸಿನ ಭಾವನೆಗಳನ್ನು ಭಾವನೆಯ ಬಸುರಲ್ಲಿಟ್ಟು ಹೇಳುವ ಅವರ ಮನಸ್ಸಿನ ಸ್ಥಾಯಿ ಸ್ಥಿತಿ ಅದರ ಮೇರು ವಿಚಾರಕ್ಕೆ ಮೆರಗು ತಂದಿದೆ. ಉದಾಃ ಕವನ ೬೦ : – ಶೀರ್ಶಿಕೆಯ ಕವನ “ಭಾವಗಳ ಬಸುರಾದಾಗ” ಇದರಲ್ಲಿ ಭಾವಗಳು ಬಸುರಾದಾಗ ಹರಿಸುವುದು ಸಂಗೀತ ಸಾಹಿತ್ಯದ ಕಾವ್ಯ ರಸದೌತಣ ಎಂದಿದ್ದಾರೆ. ಭಾವದ ಅಭಿವ್ಯಕ್ತಿಗೆ ಸಾಹಿತ್ಯ ಸಂಗೀತಕಲೆ ಎಲ್ಲವೂ ಲೀನವಾಗುತ್ತದೆ ಎಂಬುದನ್ನು ಸಾರವತ್ತಾಗಿ ಬಣ್ಣಿಸಿದ್ದಾರೆ. ಕವಿಯನ್ನು ಹೊಗಳಿ ಹೊಗಳಿ ಹೊನ್ನ ಶೂಲಕ್ಕೆÃರಿಸುವುದು ವಿಮರ್ಶೆಯೆ ಸರಿ ಸಮರ್ಪಕ ಪರಿಕಲ್ಪನೆಯಾಗಲಾರದು. ಕೆಲವು ಕವಿತೆಗಳು ಪ್ರಾಸರಹಿತವಾಗಿ ಅತಿ ಉದ್ದುದ್ದ ಸಾಲುಗಳಾಗಿ ಗದ್ಯದ ರೂಪ ತಳೆದಿರುವುದು ಓದುಗನ ಸಹನೆಯನ್ನು ಪರೀಕ್ಷಿಸುವಂತಿದೆ. ಉದಾ ಹರಿಸಬೇಕೆಂದರೆ : ನಿನ್ನ ನೆನಪಲಿ, ಗುಬ್ಬಿಗೂಡು, ನಮ್ಮ ಭಾರತ ಸಂವಿಧಾನ, ಹೀಗೆ ಕೆಲವಷ್ಟು ಕವನಗಳು ಮಿತಿಮೀರಿ ಬೆಳೆದು ನಿಂತಿವೆ. ಇವುಗಳು ಕಾವ್ಯಕ್ಕೆ ಭೂಷಣವಲ್ಲ ಎಂದೆನಿಸುತ್ತದೆ. ಕಲ್ಪನೆಯನ್ನು ಕವನವನ್ನಾಗಿಸುವ ಶಕ್ತಿ ಈ ಕವಿಗೆ ಚೆನ್ನಾಗಿದೆ. ತುಂಬಾ ಭಾವಾಭಿವ್ಯಕ್ತಿಯಲ್ಲಿ ಅಭಿವ್ಯಕ್ತಿಸುವ ರೀತಿಯಲ್ಲಿ ಸುತ್ತು ಬಳಸದಿರುವುದು ಒಳ್ಳೆಯದು. ಉದಾ : ನಾನು ಕವಿಯಲ್ಲ ಕವನ ೯ : ಮೂಡಿದ ಮನದ ಮರದಿ ಭಾವವೆಂಬ ಕೊಂಬೆ ! ಎತ್ತರದಿ ಸಿಗದ ಹಾಗೆ ಹಸಿರು ಎಲೆಗಳ ಚಪ್ಪರ ಮುಗಿಯದ ಹಕ್ಕಿ ಸಾಲಿನ ಆಸನ ನೋಡಿದಾಕ್ಷಣ ಕವನ ನಾನು ಕವಿಯಲ್ಲ ಕವಿಯ ವಿಚಾರಧಾರೆ ಹರಿತವಾಗಿದೆ. ವೈಚಾರಿಕತೆಯ ಹರವು ವಿಷಾಲವಾಗಿದೆ. ಸಂವೇದನಾ ಶೀಲತೆ ಎಲ್ಲ ಕವನದಲ್ಲಿಯೂ ಇದೆ. ಮನಸ್ಸಿಗೆ ಮುದ ನೀಡುವ ಶಕ್ತಿ ಕವನಗಳಿಗಿದೆ. ಬಸಿರು ಎನ್ನುವ ಶಭಾರ್ಥವೇ ಹಡೆಯುವ ಮೊದಲು ಇರುವ ತಾಯಿಯ ಸ್ಥಿತಿ. ಹುಟ್ಟುವ ಮಗುವಿನ ಬಗ್ಗೆ ತಾಯಿ ಏನೆಲ್ಲ ಚಿಂತಿಸುತ್ತಾಳೆ. ಏನೆಲ್ಲ ಕನಸು ಕಾಣುತ್ತಾಳೆ. ಹೇಳತೀರದು. ಹುಟ್ಟುವ ಮಗುವಿನ ಬಗ್ಗೆ ತರತರದ ಕನಸು ಕಾಣುತ್ತಾಳೆ. ಸರ್ವಾಂಗ ಸುಂದರವಾಗಿ ಮಗು ಹುಟ್ಟಲಿ ಎಂದು ಹಾರೈಸುತ್ತಾಳೆ. ಈ ಕವಿಯ ಎಲ್ಲ ಕವಿತೆಯಲ್ಲಿಯೂ ಇಂತ ಹಾರೈಕೆ ಎದ್ದು ಕಾಣುತ್ತದೆ. ಶಬ್ದಗಳ ಕೊರತೆ ಈ ಕವಿಗೆ ಇಲ್ಲ. ವಸ್ತುವನ್ನು ಹುಡುಕುವ ದಿವ್ಯ ಶೋಧಕ ಶಕ್ತಿ ತುಂಬಾ ಇದೆ. ಗೂಡ ನಿಗೂಡವಾಗಿ ವಿಷಯವನ್ನು ಸಾದರಪಡಿಸುವ ರೀತಿ ಓದುಗನಿಗೆ ಸ್ವಲ್ಪ ಕಬ್ಬಿಣದ ಕಡಲೆಯಾದರೂ ಪ್ರಬುದ್ಧ ಓದುಗನಿಗೆ ಏನೂ ಕಷ್ಟವೆನಿಸಲಾರದು. ಇವರ ಬರಹ ಪ್ರಬುದ್ಧತೆಯ ಪ್ರಬಲ ಪ್ರತಿಬಿಂಬ ಇವರ ಮನಸ್ಸು ಎನ್ನಬಹುದು. ಕವಿಗೆ ತುಂಬಾ ಭವಿಷ್ಯವಿದೆ. ವಿಚಾರದ ಅರಿಕೆ ಸಾಕಷ್ಟು ಮನಸ್ಸಿನ ಆಳಕ್ಕಿಳಿದಾಗಲೇ ಚಿಗುರುವ ಸಾಹಿತ್ಯದ ಕೊಂಬೆ ಬಲಿಷ್ಠವಾಗುತ್ತದೆ. ಕಾವ್ಯಕ್ಕೆ ಗಟ್ಟಿತನ ಬರುತ್ತದೆ. ವಿಚಾರವ ಅದುಮಿ ಹಿಡಿದಾಗ ಭಾವನೆಗಳು ಸ್ಪೊÃಟಗೊಳ್ಳುತ್ತವೆ ಎಂಬುದನ್ನು ಕೆಲವು ಕವನಗಳು ಸಾಬೀತುಪಡಿಸಿವೆ. ಕಾವ್ಯವೆಂದರೆ ಕಲ್ಪನೆ ಮತ್ತು ಭಾವಗಳ ಸಂಗಮ (ಹ್ಯಾಜ್‌ಲೀಟ್) ಇಂಗ್ಲಿÃಷ್ ಕವಿ ಕಾವ್ಯವೆಂದರೆ ಸೌಂದರ್ಯದ ಲಯಬದ್ಧ ಸೃಷ್ಟಿ ಎಂದಿದ್ದಾರೆ. (ಕೆಬ್ಲ) ಕವಿ ಅಚಿಡಿಟಥಿಟe ಹೇಳಿದ್ದಾರೆ. Poeಣಡಿಥಿ ತಿe ತಿiಟಟ ಛಿಚಿಟಟ musiಛಿಚಿಟ ಣhough ಎohಟಿsoಟಿ ಸಂಗೀತಮಯ ಚಿಂತನೆಯೇ ಕಾವ್ಯ ಹೇಳುತ್ತಾರೆ. ಎohಟಿsoಟಿ ಹೇಳುತ್ತಾರೆ. Poeಣಡಿಥಿ is meಣಡಿiಛಿಚಿಟ ಛಿomಠಿosiಣioಟಿ (ಕಾವ್ಯವೆಂದರೆ ಚಂದೋಬಂದ ರಚನೆ) ಎರ್ಡಸ್ ವಿತ್ರ ಹೇಳುತ್ತಾನೆ (Poeಣಡಿಥಿ is ಣhe bಡಿeಚಿಣh ಚಿಟಿಜ ಜಿiಟಿeಡಿ sಠಿiಡಿiಣ oಜಿ ಚಿಟಟ ಞಟಿoತಿಟeಜge ) ಕಾವ್ಯವು ಎಲ್ಲ ಜ್ಞಾನಕ್ಕಿಂತ ಮಿಗಿಲಾದ ಚೈತನ್ಯ ಉಸಿರು. ಮೇಲೆ ಹೇಳಿದ ಈ ಎಲ್ಲ ಅಂಶಗಳನ್ನು ಈ ಕವಿ ತಿಳಿದುಕೊಂಡು ಮುನ್ನಡೆಯಲಿ ಸಮಕಾಲೀನ ಸಮಸ್ಯೆಗಳ ಬಗ್ಗೆ ಕವಿ ದೃಷ್ಟಿ ಹಾಯಿಸಿದರೆ ಒಳಿತು. ಒಟ್ಟಾರೆ ಕವಿಯ ಈ ಎರಡನೆ ಹೆಜ್ಜೆ ಗಟ್ಟಿತನದ ದಿಟ್ಟ ಹೆಜ್ಜೆಯಾಗಿದೆ. ಕವಿಯ ಭವಿಷ್ಯ ಉಜ್ವಲವಾಗಲಿ, ಸಾಹಿತ್ಯಯಾನ ಚೆನ್ನಾಗಿ ಸಾಗಲಿ ಎಂದು ಹಾರೈಸುವೆ. ==============================================

ಪುಸ್ತಕ ಬಿಡುಗಡೆಯ ಸಂಭ್ರಮ

ಲೋಕಾರ್ಪಣೆ ‘ಪಂಚವರ್ಣದ ಹಂಸ‘ ಸಾಹಿತ್ಯಾಸಕ್ತರಿಗೆ ಸ್ವಾಗತ ಕವಿ ಸತ್ಯಮಂಗಲ ಮಹಾದೇವ ಅವರ ಕವನ ಸಂಕಲನದ ಲೋಕಾರ್ಪಣೆಯ ಕಾರ್ಯಕ್ರಮ ದಿನಾಂಕ: 04/11/2019, ಸೋಮವಾರ ಸಮಯ: ಸಂಜೆ 6 ಗಂಟೆಗೆ ಸ್ಥಳ: ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಸಭಾಂಗಣ

ಪಸ್ತಕ ಲೋಕ

ಕೃತಿ: ಹಾಣಾದಿ(ಕಾದಂಬರಿ ಲೇಖಕರು: ಕಪಿಲ ಪಿ.ಹುಮನಾಬಾದ್ ದೀಪಾಜಿ “ಹಾಣಾದಿ‌‌‌‌” ಕಾದಂಬರಿ ಒಬ್ಬ ಅದ್ಭುತ ಕಲಾಕಾರನ ಕೈಚಳಕದ ಪ್ರತೀಕದಂತಿದೆ. ಹಾಣಾದಿಯ ಹಾದಿಯಲ್ಲಿ ನಡೆಯುವ ಪ್ರತಿ ಸಂಗತಿಯು ಇಲ್ಲೆ ಓದುಗನೆದುರಲ್ಲೆ ಜರುಗುತ್ತಿರುವಂತೆ ಗೋಚರಿಸುತ್ತವೆ. ಅದಕ್ಕೆ ಕಾರಣ ಕಥೆಗಾರನ ತೂಕದ ಶಬ್ಧಗಳು ಹಾಗೂ ಆ ಶಬ್ದಗಳನ್ನು ಹಂದರದಂತೆ ಅಚ್ಚುಕಟ್ಟಾಗಿ ಹೊಂದಿಸಿದ ಕಲ್ಪಾನಾ ಶಕ್ತಿ. ಜೊತೆಗೆ ಉತ್ತರ ಕರ್ನಾಟಕದ ಕಿರೀಟ‌ ಬೀದರದ ಮೆದು ಹೃದಯದ ಗಂಡು ಭಾಷೆ.     ಕಥೆ ಓದುತ್ತ ಹೋದಂತೆ ಉಪಮೇಯಗಳು ಎದುರಾಗುತ್ತವೆ . “ಚಂದ್ರನಿಗೆ ಒದ್ದು ಸೂರ್ಯ ಹುಟ್ಟಲೇಬಾರದು ಜನ ಎಷ್ಟು ಆರಾಮವಾಗಿರುತ್ತಿದ್ದರು? ಕೇವಲ ಮಲಗಿರುತ್ತಿದ್ದರಷ್ಟೆ “,  “ಶಿಲುಬೆಗೇರಿದ ಕ್ರಿಸ್ತನಿಗೆ ವಯಸ್ಸಾದಂತೆ ಕಂಡಿತು”, “ಈಗಿನವರಿಗೆ ಕಷ್ಟಗಳ ಸುಖ ಗೊತ್ತಿಲ್ಲ. ಸುಖದ ಸುಖ ಮಾತ್ರ ಗೊತ್ತು ಮಗ”.    ಈ ವಾಕ್ಯರಚನೆಗಳು ಅದೆಷ್ಟು ಮಜಬೂತಾಗಿವೆ ಎಂದರೆ ಓದುಗನನ್ನು ಒಂದು ಕ್ಷಣ ನಿಲ್ಲಿಸಿ ಶಬ್ಧಾರ್ಥಕ್ಕೂ ಸನ್ನಿವೇಶದ ಭಾವಾರ್ಥಕ್ಕೂ ಇರುವ ಮಧ್ಯದ ತೆಳು ಗೆರೆಯೊಂದನ್ನು ಹುಡುಕ ಹಚ್ಚುತ್ತವೆ.     ಪಾಳುಬಿದ್ದ ಊರಿಗೆ ಬಂದ ಅದೆ ಊರಿನ ಮಗನಿಗೆ ಕಾಲದ ಕಾಲಿಗೆ ಸಿಕ್ಕು ನಲುಗಿದ ತನ್ನೂರಿನ ಬದಲಾವಣೆಗಳು ದಿಗಿಲು ಹುಟ್ಟಿಸುವ ಬಗೆ ಮತ್ತದನ್ನು ಚಿತ್ರಿಸಿದ ಬಗೆ ಮಾರ್ಮಿಕವಾಗಿದೆ. ಕಥೆಗಾರನ ಕೈಯಲ್ಲಿ ಅರಳಿದ ಅಪ್ಪ‌ ಒಮ್ಮೆ ಓದುಗರ ಅಪ್ಪನೊಂದಿಗೆ ಹೋಲಿಸಿಕೊಳ್ಳದೆ ಇರಲಾರನು. ತಾನು ಆಡಿದ ಅಂಗಳ, ಶಾಲೆಯ ಬಯಲು ಊರಾಚೆಗಿನ ಗೌವ್ವನೆ ಗುಹೆ, ಹೊಲದ ದಾರಿ, ಹಳ್ಳದ ಹುತ್ತ ಕೆಡಿಸಿ ಬಡಿಸಿಕೊಂಡ ಮೈ ನೋವು ಮನೋಜ್ಞವಾಗಿದೆ.    ಅಕ್ಕನೆಂಬ ಬೆಂಬಲ, ಅವ್ವನೆಂಬ ಸೋತ ಜೀವ ಮತ್ತು ತನ್ನಪ್ಪನ ಜೀವಕ್ಕೆ-ಸಾವಿಗೆ ಜತೆಯಾದ ಬಾದಾಮ ಗಿಡ. ಮರದೊಡೆಯ ಅಪ್ಪ ಮರಕ್ಕಾಗಿ ಜೀವಿಸಿದ ಕಥೆ, ಜೀವ ತೆತ್ತ ಕಥೆ ಇಂದು ನಡೆಯುತ್ತಿರುವ ಪರಿಸರ ಪ್ರಜ್ಞೆಯ ಪ್ರತೀಕವೆನ್ನಿಸುವುದು ಸುಳ್ಳಲ್ಲ.     ಹಳ್ಳಿಯ ಬದುಕಿನಲ್ಲಿ ಸಾಕು ಪ್ರಾಣಿಗಳು, ಬೆಳಸಿದ ಮರಗಳು ನಮ್ಮದೆ ಮನೆಮಕ್ಕಳಾಗಿ ಬದುಕುತ್ತವೆ ಮತ್ತು ಬದುಕಿಸುತ್ತವೆ ಎಂಬುದಕ್ಕೆ ಇಲ್ಲಿ ಹೆಜ್ಜೆ ಹೆಜ್ಜೆಗೂ ಸಕಾರಣಗಳು ಸಿಗುತ್ತವೆ.     ಹೋರಾಟದ ಬದುಕಿಗೆ ಮುಳ್ಳಗಳು ಹೆಚ್ಚು, ಇಲ್ಲಿ ಕಥಾನಾಯಕನ ಅಪ್ಪನಿಗೆ ಸಿಕ್ಕ ನೆರೆ-ಹೊರೆಯ ಪಾತ್ರಗಳ ಕಾರ್ಯ ವೈಖರಿ ಕಂಡಾಗ ನಮ್ಮ ನಡುವಿರುವ ಖಳನಾಯಕರನ್ನು ಧೊಪ್ಪನೆ ಎಳೆದು ತಂದು ಎದುರಿಗೆ ನಿಲ್ಲಿಸುತ್ತವೆ. ಬೆಳೆದು ನಿಂತ ನೆರಳು ನೀಡುವ ಮರದೊಡನೆ ಜಿದ್ದಿಗೆ ಬಿದ್ದ ಊರ ಮಂದಿ, ಊರು ಬಿಟ್ಟು ಊಸಿರು ಬಿಟ್ಟು ಹೋದ ಕಥೆಯನ್ನು ಹೇಳುವ ಪರಿ-ವೈಖರಿ ಚಂದವಾಗಿದೆ.     ಕಥೆಯ ಆರಂಭದಲ್ಲಿ ಸಿಗುವ, ಊರಿಗೆ ಹೋಗುವಂತೆ ದುಂಬಾಲು ಬೀಳುವ ಯುವ ಪೀಳಿಗೆಯ ಪ್ರತೀಕದಂತಿರುವ ಗೆಳತಿಯ ಮಾತುಗಳು ಎಂತವರಿಗಾದರೂ ಎರಡು ನಿಮಿಷಗಳ ಕಾಲ ತಟಸ್ಥವಾಗುವಂತೆ ಮಾಡುತ್ತವೆ. “ನಿವೇಲ್ಲ ಗಂಡಸರೆ ಹೀಗೆ ಕಣೊ ಕುಡಿಯೋಕೆ,ಸೇದೋಕೆ, ರಾತ್ರಿ ಮೈ ಬಿಸಿ ಆರಿಸೊಕೆ ಒಂದು ಹುಡುಗಿ ಸಿಕ್ರೆ ಸಾಕು ಜೀವನ ಸಾರ್ಥಕ ಅಂತೀರಾ”-ಎಂತ ಪಕ್ವ ಮಾತು.ಇಷ್ಟು ಮಾತ್ರ ಕಂಡ ಹುಡುಗನೊಬ್ಬ ವರಷಾನುಗಟ್ಟಲೆ ಹುಟ್ಟುರಿನ ಗೋಜಿಗೆ ಹೋಗದೆ ಉಳಿದರೆ ಹೆತ್ತ ತಂದೆಗೆ  ಮರವೇ ಮಗನಂತೆ ಆಶ್ರಯಿಸುವ ಕಥೆ ಮನಕಲಕುತ್ತದೆ.    ಕಂಟಿ ಎಂಬ ಆಳು ಧರ್ಮಾಂತರದ ಕಥೆ ಹೇಳುತ್ತಾನೆ. “ಚರ್ಚ್ ನ ಪೂಜಾರಪ್ಪ”ನೆನ್ನುವ ಮುಗ್ಧತೆ, ಅಪ್ಪನಿಗೆ ಜೀವದ ಗೆಳೆಯನಂತುಳಿಯುವ ಭಾವೈಕ್ಯತೆ ಸನ್ನವೇಶಗಳು ಧರ್ಮಾಂಧರ ಮುಖಕ್ಕೆ ರಾಚುವಂತಿವೆ.    ಕಂಟಿಯ ಮಗ ತೋತ್ಯಾ ಕಥಾನಾಯಕನನ್ನು ಕೊನೆಯ ಪುಟಗಳಲ್ಲಿ ಕಾಯುವ ಬಗೆ,  “ಮಾಲಕ್” ಎಂಬ ಶಬ್ಧ ಎಲ್ಲವು ಭಾವನೆಗಳ ತಿಕ್ಕಾಟದಲ್ಲಿ ಅರೆಗಳಿಗೆ ವಿರಮಿಸುತ್ತವೆ.    ಇದು ಕಥೆಯಲ್ಲಿ ಬರುವ ಸಣ್ಣಪುಟ್ಟ ಪಾತ್ರಗಳ ವಿವರಣೆಯಾಯಿತು ಅಸಲಿ ಪಾತ್ರದ ಬಗೆಗೆ ನಾನೀನ್ನು ಎನನ್ನು ಹೇಳಲೆ ಇಲ್ಲ. ಪುಸ್ತಕದ ಮುಖಪುಟದಲ್ಲಿ ಕಾಣ ಸಿಗುವ ಹಣ್ಣು ಹಣ್ಣು  ಮುದುಕಿ, ಬದುಕಿನ ಜಂಜಾಟಕ್ಕೊ ಕಾಲದ ಹೊಡೆತಕ್ಕೊ, ವಯಸ್ಸಿನ ಪಕ್ವತೆಗೋ ಸಿಕ್ಕು-ಸುಕ್ಕಾದ ಹಿರಿ ಜೀವ ಕಥೆಗೆ ಬೇಕಾದ ಮೂಲ ವಸ್ತುಗಳನ್ನು ಒದಗಿಸುವಲ್ಲಿ ಯಶಸ್ವಿಯಾಗಿದ್ದಾಳೆ. ಅಸಲಿಗೆ ಕಥೆ ಹೇಳುವವಳು ಅವಳೆ ಇಲ್ಲಿ ಈ ಊರಿಗೆ ಬಂದ ಯುವಕ ತನ್ನ ನೆನಪನ್ನು ಅವಳ ಕಥೆಗೆ ಹೊಂದಿಸಿಕೊಳ್ಳುತ್ತಾ ಹೋಗುತ್ತಾನೆ. ಕಥೆಯಲ್ಲಿ ಅವಳ ಹೆಸರು ಗುಬ್ಬಿ ಆಯಿ. ಅವಳೆ ಹೇಳುವಂತೆ ಕಥೆ ಹೇಳಲಿಕ್ಕಾಗಿಯೆ ನಾನೊಬ್ಬಳು ಉಳಿದಿದ್ದೇನೆ ಎನ್ನುವ ಮಾತು ಕಥೆ ಓದುವವ ಗಮನಕ್ಕೆ ಬರದೆ ಇರಲಾರದು.    ಗುಬ್ಬಿ ಆಯಿ, ಗುಬ್ಬಿ ಆಯಿ ಹಿಂದೆ ಮುಂದೆ ಚಿಲಿಪಿಲಿಗುಟ್ಟುವ ಗುಬ್ಬಿಗಳು ಆಕೆಯ ಹೃದಯವಂತಿಕೆಗೆ ಹಿಡಿದ ಕೈಗನ್ನಡಿ. ಆಕೆಯನ್ನು ವಿಮರ್ಶಿಸುವ ಗೋಜಿಗೆ ನಾನಿಲ್ಲಿ ಹೋಗಲಾರೆ ಕಾರಣ ವಿಮರ್ಶೆಗೆ ದಕ್ಕದ ಗತಕಾಲದ ಪ್ರತೀಕವದು.    ಈ ಕಥೆಯ ರೂವಾರಿಯಾದ ತಮ್ಮನ ವಯಸ್ಸಿನ ಕಪಿಲ ಪಿ ಹುಮನಾಬಾದಿಯವರಿಗೆ ಸಾಕಷ್ಟು ಶುಭಕಾಮನೆಗಳು. ವಯಸ್ಸಿಗೆ ಮೀರಿದ ಬರವಣಿಗೆ ಒಂದನ್ನ ಓದುಗರಿಗೆ ನೀಡಿದ್ದೀರಿ ವಾಸ್ತವಕ್ಕೂ ಭೂತಕಾಲದ ಘಟನೆಗಳಿಗೂ ಕೊಂಡಿ ಹಾಕಿ ಹಾಣಾದಿಯಲ್ಲಿ ಹಳ್ಳ-ಕೊಳ್ಳ, ಜಾಲಿಯ ನೆರಳಲ್ಲಿ ನಡೆಸುವಾಗ ನಮ್ಮಲ್ಲೂ ಒಂದು ಜಾಲಿ ಮುಳ್ಳು ನಟ್ಟು ಕಿತ್ತಷ್ಟು ನೋವನ್ನು ಉಳಿಸುವ ತಾಕತ್ತು ನಿಮ್ಮ ಅಭಿವ್ಯಕ್ತಿ ಶೈಲಿಗೆದೆ. ಶುಭವಾಗಲಿ.     ಹಾಣಾದಿ ಪುಸ್ತಕವನ್ನು ನಮ್ಮ ಹಸಿವಿಗೆ ಪೂರೈಸಿದ ತಮ್ಮ ಚಾಂದ್ ಕವಿಚಂದ್ರ ಹಾಗೂ ಬಯಲ ಬಾಗಿಲು ಖ್ಯಾತಿಯ ಶಿವಮಾಧುವಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳು.

Back To Top