Category: ಜೀವನ

ಶಿಕ್ಷಣ ಕ್ಷೇತ್ರ ಮತ್ತು ಎರಡು ದಶಕಗಳ ಪ್ರಯಾಣ

ಅನುಭವ ಶಿಕ್ಷಣ ಕ್ಷೇತ್ರ ಮತ್ತು ಎರಡು ದಶಕಗಳ ಪ್ರಯಾಣ ಮಮತಾ ಅರಸೀಕೆರೆ ಬಯಸಿ ಬಂದದ್ದಲ್ಲ. ಹಂಬಲಿಸಿ ಪಡೆದದ್ದಲ್ಲ. ಒಂದು ಬಗೆಯ ಓರೆ ನೋಟದ ಕಸಿವಿಸಿಯ ಬಿಗುವಿನೊಡನೆ ಅನಿಚ್ಛಾಪೂರ್ವಕವಾಗಿ ಇಲಾಖೆಗೆ ಕಾಲಿಟ್ಟದ್ದು. ನಂತರ ಜರುಗಿದ್ದು ಬರೋಬ್ಬರಿ ಇಪ್ಪತ್ತು ವರ್ಷಗಳ ಅನಿಯಮಿತ ಅಡೆತಡೆಯಿಲ್ಲದ ಪ್ರಯಾಣ. ಇದೇ ಅಕ್ಟೋಬರ್ ೨೫ ಕ್ಕೆ ನಾನು ಶಿಕ್ಷಣ ಇಲಾಖೆಯ ಸದಸ್ಯಳಾಗಿ ಎರಡು ದಶಕಗಳೇ ಆಗುತ್ತಿದೆ. ನನ್ನಮ್ಮ ಕೂಡ ಇದೇ ಇಲಾಖೆಯಲ್ಲಿದ್ದವರು.ಅಪ್ಪ ಅಂಚೆ ಇಲಾಖೆ ಉದ್ಯೋಗಿ.ಅದೇಕೋ ತನ್ನ ಇಲಾಖೆ ಬಗ್ಗೆ ಅಸಡ್ಡೆಯಿದ್ದಬಅಪ್ಪನ ಉದ್ಯೋಗಕ್ಕಿಂತ ಸುಲಭವಾಗಿ ಸರಳವಾಗಿ […]

ಬದಲಾದ ಕಾಲಕ್ಕೆ ಹಳ್ಳಿಯ ಬದುಕು

ಲೇಖನ ಬದಲಾದ ಕಾಲಕ್ಕೆ ಹಳ್ಳಿಯ ಬದುಕು ಸರಿತಾ ಮಧು ಹಳ್ಳಿಗಳ ದೇಶವೇ ನಮ್ಮದು. ಮೊದಲಾದರೆ ಸುಂದರ ಸ್ವರ್ಗದಂತೆ ಇದ್ದವು. ಕೂಡು ಕುಟುಂಬ, ಅದಕ್ಕೆ ಹೊಂದಿಕೊಂಡಂತೆ ಗದ್ದೆ- ತೋಟಗಳು, ರಕ್ತ ಸಂಬಂಧಗಳು ಹಾಗೂ ಮಾನವೀಯ ನೆಲೆಯಲ್ಲಿ ಒಟ್ಟಿಗೆ ಸೇರಿ ನಲಿಯುತ್ತಿದ್ದ ಸಂದರ್ಭಗಳು. ಮೂರು – ನಾಲ್ಕು ತಲೆಮಾರಿನ ಅನುಭವಗಳ ಬೆರೆತ ಸಂಸಾರ. ಮನೆಗಳಲ್ಲಿ ಆಡಂಬರವಿರಲಿಲ್ಲ ಮನಸಿನಲ್ಲಿ ಆತ್ಮೀಯತೆ ಇತ್ತು. ಅವಿಭಕ್ತ ಭಾವ ರಕ್ತಗತವಾಗಿ ಮುಂದುವರೆಯುತ್ತಿತ್ತು. ಹಣಕಾಸಿಗೆ ಅಡಚಣೆಯಿತ್ತು ಅದರ ಹೊರತು ಪರಿಶುದ್ಧವಾದ  ಬದುಕಿಗಲ್ಲ. ನಗರ ಜೀವನಕ್ಕೆ ಮನಸೋತ ಕೆಲವು […]

ಕಡಿವಾಣವೂ ಪ್ರೀತಿಯೇ!!!!!

ಲೇಖನ ಕಡಿವಾಣವೂ ಪ್ರೀತಿಯೇ!!!!! ಮಾಲಾ ಅಕ್ಕಿಶೆಟ್ಟಿ   ಕೊರೊನಾ ಲಾಕಡೌನ್ ಕ್ಕಿಂತ ಮುಂಚೆ ನಡೆದ ಮಾತಿದು.ಆತ್ಮೀಯರೊಬ್ಬರು ಚರ್ಚಿಸಿದ ವಿಚಾರ.ಅವರು ವಿವರಿಸಿದ ಹಾಗೆ ಈಗ ಒಂದು ವರ್ಷದಿಂದ ಶಾಲೆಗೆ ಹೋಗುವ ನಾಲ್ಕು ವರ್ಷದ ಮಗಳು ದಿನಾಲು ಒಂದಿಲ್ಲೊಂದು ವಸ್ತುಗಳನ್ನು ಶಾಲೆಯಲ್ಲಿ ಕಳೆದುಕೊಂಡು ಬಂದು ತಾಯಿಗೆ ಮತ್ತೆ ಹೊಸ ವಸ್ತುಗಳನ್ನು ಕೊಡಿಸುವಂತೆ ಪೀಡಿಸುತ್ತಿದ್ದಳು. ಮಗಳು ದಿನವೂ ಪೆನ್ಸಿಲ್, ರಬ್ಬರ್, ಶಾರ್ಪನರ್, ಕ್ರೆಯಾನ್ಸ್ ಗಳನ್ನು ಕಳೆದುಕೊಂಡು ಬರುವುದು ತಾಯಿಗೆ ತಲೆನೋವಾಗಿ ಪರಿಣಮಿಸಿತ್ತು. ಬೇಸತ್ತ ತಾಯಿ ಒಂದು ದಿನ ಮಗಳಿಗೆ ಸ್ಟ್ರಿಕ್ಟಾಗಿ ಎಚ್ಚರಿಕೆ […]

ಕಾಯಕದ ಮಹತ್ವ.

ಲೇಖನ ಕಾಯಕದ ಮಹತ್ವ. ಜಯಶ್ರೀ ಭ.ಭಂಡಾರಿ. ದಾಸೋಹ ಕಾಯಕವೆಂಬ ನಾಣ್ಯದ ಇನ್ನೊಂದು ಮುಖ.ಸಮಾಜದಲ್ಲಿ ಸಂಪತ್ತು ಉತ್ಪತ್ತಿಯಾಗಲು ಸತ್ಯಶುದ್ಧ ಕಾಯಕ ಬೇಕು.ಆದರೆ,ಸಂಪತ್ತು ಕೇಂದ್ರೀಕತವಾದರೆ ಎಲ್ಲಾ ಬಗೆಯ ಅಸಮಾನತೆಗಳು ಹುಟ್ಟುತ್ತವೆ.ಆದ್ದರಿಂದ ಬಸವಾದಿ ವಚನಕಾರರು ದಾಸೋಹ ತತ್ವವನ್ನು ಆವಿಷ್ಕರಿಸಿ ಆಚರಣೆಯಲ್ಲಿ ತಂದರು.ಅಣ್ಣನವರ ಸುಪ್ರಸಿದ್ಧ ವಚನ “ಕಾಗೆಯೊಂದಗುಳ ಕಂಡಡೆ ಕೂಗಿ ಕರೆಯದೆ ತನ್ನ ಬಳಗವ….”. ಸಮಾಜದಲ್ಲಿ ಸಂಪತ್ತಿನ ವಿತರಣೆಯಾಗಲೇಬೇಕೆಂದು ವಿಧಿಸುವ ನಿಯಮ. ಕಾಯಕ ಸಾರ್ಥಕವಾಗುವದೇ ದಾಸೋಹದಲ್ಲಿ.ಆದ್ದರಿಂದಲೇ “ಸೋಹಂ ಎಂದೆನಿಸದೆ ದಾಸೋಹಂ ಎಂದೆನಿಸಯ್ಯ” ಎಂದು ದೇವರಲ್ಲಿ ಪ್ರಾರ್ಥಿಸುತ್ತಾರೆ ಅಣ್ಣ.”ತನು ಮನ ಬಳಲಿಸಿ ತಂದು ದಾಸೋಹ […]

ಖುಷಿ ನಮ್ಮಲ್ಲೇ!!!

ಲೇಖನ ಖುಷಿ ನಮ್ಮಲ್ಲೇ!!! ಮಾಲಾ ಅಕ್ಕಿಶೆಟ್ಟಿ  ಕೈಯಲ್ಲಿ10 ರ ನೋಟು ಹಿಡಿದುಕೊಂಡು ಬಡ ಹುಡುಗ ರೋಡ್ ಮೇಲೆ ಇರುವ ಭಜಿ ಅಂಗಡಿಗೆ ಬಂದಿದ್ದ. ಆಸೆ ಕಂಗಳಿಂದ ಮೂರು ತರಹದ ಭಜಿ, ‌ಅಂದರೆ ‌ಕಾಂದಾ, ‌ಮಿರ್ಚಿ ‌ಮತ್ತು ‌ಮೈಸೂರ ‌ಭಜಿಯನ್ನು ‌‌ಒಂದೇ ‌ಸಮನೇ ನೋಡಿದ. ‌ಆ ‌ಅಂಗಡಿಯಲ್ಲಿ 4 ‌ಭಜಿಗಳ ‌ಪ್ಲೇಟ್ಗೆ 20 ‌ರೂಪಾಯಿ.ಒಂದು ಭಜಿಯನ್ನು ಕೊಡುವ ಸೌಲಭ್ಯವಿರುವದರಿಂದ 5ರೂಪಾಯಿಗೆ ‌ಯಾವುದಾದರು ‌ಭಜಿ ‌ತಿನ್ನಬಹುದು.ಆತ ‌ಡಿಸೈಡ್ ‌ಮಾಡಿ 5 ರೂ ‌ಕೊಟ್ಟು ‌ಮಿರ್ಚಿ ‌ಭಜಿಯನ್ನು ಸವಿದ.ಬಸಿಯಾಕಾರದಲ್ಲಿ ಕಣ್ಣು ತೆರೆದು, […]

ಯಾಕೆ ನೆಗೆಟಿವಿಟಿ?

ಲೇಖನ ಯಾಕೆ ನೆಗೆಟಿವಿಟಿ? ಮಾಲಾ.ಮ. ಅಕ್ಕಿಶೆಟ್ಟಿ.  “ಆಕೆ ಯಾವಾಗಲೂ ಹಾಗೆಯೇ ಬಿಡಿ. ಏನ್ ಹೇಳಿದ್ರು ನೆಗೆಟಿವ್ ಆಗಿ ಯೋಚಿಸಿ, ಅದರಲ್ಲೇ ಮುಳುಗಿರುತ್ತಾಳೆ. ಇದ್ದ ಗಳಿಗೆಯನ್ನು ಆನಂದಿಸಲು ಬರಲ್ಲ. ಬರೀ ನೆಗೆಟಿವ್. ಜೀವನವನ್ನು ಆನಂದಿಸುವುದೂ ಒಂದು ಕಲೆ. ಅದು ಆಕೆಗೆ ಗೊತ್ತಿಲ್ಲ. ಎಲ್ಲರದೂ ಒಂದೊಂದು ಸಮಸ್ಯೆ ಇದ್ದೇ ಇರುತ್ತೆ. ಯಾರಿಗೂ ಸಮಸ್ಯೆ ತಪ್ಪಿದ್ದಿಲ್ಲ. ಜೀವನ ಇದ್ದ ಹಾಗೆ ನಡೆದುಕೊಂಡು ಹೋಗಬೇಕು. ಅದು ಬಿಟ್ಟು ಸತತ ಇಪ್ಪತ್ತನಾಲ್ಕು ಗಂಟೆಯೂ ನಕಾರಾತ್ಮಕವಾಗಿ ಯೋಚಿಸಿದರೆ ಹೇಗೆ? ಅದೇನೊ ಅಂತಾರಲ್ಲ ಪ್ರತಿ ಪರಿಹಾರಕ್ಕೂ ಇಂಥವರು […]

ಥಾಂಕ್ಸ್ ಎಂದರೆ ಸಾಕೇ

ಲೇಖನ ಥಾಂಕ್ಸ್ ಎಂದರೆ ಸಾಕೇ ಶಾಂತಿವಾಸು ನನಗೆ ನಮ್ಮಪ್ಪ (ನಾವು ನಮ್ಮಪ್ಪನನ್ನು ಅಣ್ಣ ಅಂತಾನೇ ಕರೀತಿದ್ದಿದ್ದು) ಏನು ಅಂತ ಅರ್ಥವಾಗಿದ್ದು, ನಾನು ಮದುವೆ ಆದ ಮೇಲೇನೆ. ನನ್ನ ಮದುವೆಯಾದ ನಂತರ ಮೊದಲ ಸಲ ಅತ್ತೆ ಮನೆಗೆ ಹೊರಡಿಸಲು ಕೆಲವರು ಹಾಗೂ ಕರೆದುಕೊಂಡು ಹೋಗಲು ಬಂದ ನೆಂಟರು ಮನೆ ತುಂಬಾ ತುಂಬಿರುವಾಗ, ನಮ್ಮಪ್ಪ ಬಚ್ಚಲುಮನೆಯ ಒಳಗೆ ಸೇರಿಕೊಂಡು ಚಿಲಕ ಜಡಿದು ಕಿರಿಚಿ ಕಿರಿಚಿ ಅತ್ತಿದ್ದನ್ನು ಕಂಡು ಎಲ್ಲರಿಗೂ ಪರಮಾಶ್ಚರ್ಯ. ನಮ್ಮಪ್ಪನ ಹೃದಯದಲ್ಲಿಯೂ ಪ್ರೀತಿ ಎಂಬ ಒರತೆ ಜಿನುಗುತ್ತದೆ ಎಂದು […]

ಹೋಗಿ ಬರುತ್ತೇವೆ ಆ ಬೆಟ್ಟಕ್ಕೆ

ಅನುಭವ ಹೋಗಿ ಬರುತ್ತೇವೆ ಆ ಬೆಟ್ಟಕ್ಕೆ             ಪ್ರತಿ ಡಿಸೆಂಬರ್ ೨೨ಕ್ಕೆ ನಮ್ಮ ಶಾಲೆಯ ವಾರ್ಷಿಕೋತ್ಸವ, ಯಾವಾಗಲು ವಾರ್ಷಿಕೋತ್ಸವ ಮುಗಿದ ಬಳಿಕ ನಮಗೆ ಕ್ರಿಸ್ಮಸ್ರಜೆ. ರಜೆ ಕಳೆಯಲೆಂದೇ ಅಜ್ಜನ ಮನೆಗೆ ಹೋದೆವು. ನಮ್ಮ ಹಾಗೆ ಕ್ರಿಸ್ಮಸ್ ರಜೆ ಕಳೆಯಲು ನಮ್ಮಜ್ಜನ ದಾಯಾದಿಗಳ ಮನೆಮಕ್ಕಳೂ ಬಂದಿದ್ದರು. ಒಂದು ರೀತಿ ಮಕ್ಕಳ ಸೈನ್ಯವೇ ಸರಿ. ನಿಮ್ಮ ಶಾಲೆ ಹೇಗೆ? ನಿಮ್ಮ ಶಾಲೆಯಲ್ಲಿ ಏನೇನು ಕಲಿಸುತ್ತಾರೆ? ನಿಮಗೆ ಯಾವ ಟೀಚರ್ ಇಷ್ಟ? ಯಾರು ಹೇಗೆ ಬಯ್ಯುತ್ತಾರೆ? ಇತ್ಯಾದಿಗಳ ಚರ್ಚೆ ಮಾಡುತ್ತಿದ್ದೆವು. ರಜೆಗೆಂದು […]

ಮದ್ಯಪಾನ ಮತ್ತು ಮಾದಕ ದ್ರವ್ಯಗಳ ನಿಷೇಧ

ಪ್ರಸ್ತುತ       ಮದ್ಯಪಾನ ಮತ್ತು ಮಾದಕ ದ್ರವ್ಯಗಳ ನಿಷೇಧದ ಕುರಿತು ಮಹಾತ್ಮ ಗಾಂಧೀಜಿ ಡಾ.ಎಸ್.ಬಿ. ಬಸೆಟ್ಟಿ ಮಹಾತ್ಮ ಗಾಂಧೀಜಿಯವರು ಜನರು ಬಯಸುವ ಹಾನಿಕಾರಕ ಮತ್ತು ಅನಾವಶ್ಯಕ ಮಾದಕ ವಸ್ತುಗಳನ್ನು  ವಿರೋಧಿಸುತ್ತಿದ್ದರು. ಗಾಂಧೀಜಿಯವರು ತಂಬಾಕು ಮತ್ತು ಮಧ್ಯವನ್ನು ಜನರ ಆರೋಗ್ಯಕ್ಕೆ ಅತ್ಯಂತ ಹಾನಿ ಕಾರಕ ವಸ್ತುಗಳೆಂದು ಪರಿಗಣಿಸಿದ್ದರು ಜೊತೆಗೇ ಚಹಾ ಮತ್ತು ಕಾಫಿಯನ್ನು ಕೂಡಾ ಅನಾವಶ್ಯಕ ವಸ್ತುಗಳೆಂದು ಭಾವಿಸಿದ್ದರು. “ಬೆಂಕಿ ದೇಹವನ್ನು ನಾಶ ಮಾಡಿದರೆ, ಮದ್ಯ ಮತ್ತು ಮಾದಕ ವಸ್ತು ದೇಹ  ಮತ್ತು ಆತ್ಮ ಎರಡನ್ನೂ ನಾಶ ಮಾಡುತ್ತದೆ” […]

ಲೆಕ್ಕಕ್ಕೊಂದು ಸೇರ್ಪಡೆ

ಲೇಖನ ಲೆಕ್ಕಕ್ಕೊಂದು ಸೇರ್ಪಡೆ ಶಾಂತಿ ವಾಸು ಚೀನಿಯರ ಕೆಟ್ಟ ಮನಸ್ಥಿತಿಯ ಕನ್ನಡಿ ಕೊರೊನ, ಭಾರತವನ್ನು ಪ್ರವೇಶಿಸುವ ಮೊದಲೇ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದ, ಸಂಪೂರ್ಣ ದೇಹವನ್ನು ಅದೇನೋ ಹೊಸತರಹದ ದಿರಿಸಿನಿಂದ ಮುಖಸಹಿತ ಮುಚ್ಚಿಕೊಂಡ ಜನರು ಪ್ಲಾಸ್ಟಿಕ್ ಚೀಲದಲ್ಲಿ ಬಿಗಿಯಾಗಿ ಸುತ್ತಿದ ನೂರಾರು ಜನರ ಮೃತದೇಹಗಳನ್ನು ಒಟ್ಟೊಟ್ಟಿಗೇ, ಆಳವಾದ ಒಂದೇ ಹಳ್ಳದಲ್ಲಿ ಹಾಕಿ ಮಣ್ಣು ಮುಚ್ಚುವುದು ಹಾಗೂ ಪೆಟ್ರೋಲ್ ಸುರಿದು ಸಾಮೂಹಿಕವಾಗಿ ಸುಡುವುದನ್ನು ನೋಡಿಯೇ ಪ್ರಪಂಚವು ನಡುಗಿಹೋಗಿತ್ತು. ಇದೇನು?? ಹೊಸದಾಗಿ ನಡೆದದ್ದೇ? ಅಥವಾ ಯಾವುದಾದರೂ ಸಿನಿಮಾಗಾಗಿ ಇರಬಹುದೇನೋ ಎಂದು ಗೊಂದಲಗೊಂಡ ಕೋಟ್ಯಂತರ […]

Back To Top