ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ಗಜಲ್

ಗಝಲ್ ರಜಿಯಾ ಬಳಬಟ್ಟಿ ಬಂದ ದಾರಿಗೆ ಸುಂಕವಿಲ್ಲದಂತೆ ಹೋಗಲೇಬೇಕೀಗ.ಬಂದ ಹಿಸಾಬು ಮುಗಿಯದಿದ್ದರೂ ಮರಳಲೇಬೇಕೀಗ. ಅರಿತವರಾರೋ ತಿರುಗಿಬಿದ್ದವರಾರೋ ಬಂಧ ದೂರಾದಾಗ,ಎಲ್ಲ ಕೊಂಡಿಗಳ ಕಳಚಿ ಹೊರಳಲೇ ಬೇಕೀಗ. ನನ್ನ ನಿನ್ನ ಮಾತು ಅದೆಷ್ಟು ಬಾಕಿ ಉಳಿದರೇನೀಗ,ಗಾಡಿಯ ಪೆಟ್ರೋಲು ತೀರಿದಾಗ ನಡೆದು ಹೋಗಲೇಬೇಕೀಗ. ಅದೆಷ್ಟು ಕಸ ಮುಸುರೆಯ ತಾಣವಾದರೇನೀಗ,ಮೂಗು ಮುಚ್ಚಿ ಕೈ ಬಿಡಿಸಿ ಹೆಜ್ಜೆ ಹಾಕಲೇಬೇಕೀಗ. ನಿನ್ನ ಪ್ರೀತಿಯ ಹಂಬಲಿಸಿ ಅದೆಷ್ಟು ಮಿಡಿದರೇನೀಗ,ಅಗಲಿಕೆಯನು ಬೆನ್ನಿಗಂಟಿಸಿ ರಾಜಿ ಚಡಪಡಿಸುವ ದಿನಗಳೇ ಎಲ್ಲ ಈಗ ******************************************

ಗಜಲ್ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಎ.ಹೇಮಗಂಗಾ ನಿನ್ನ ಮನ ಪರಿತಾಪದಿ ಬೇಯುವ ಮೊದಲು ಮರಳಿಬಿಡು ನನ್ನೆಡೆಗೆಅಂತರಾಳದಿ ಕಹಿಭಾವ ಬೇರೂರುವ ಮೊದಲು ಮರಳಿಬಿಡು ನನ್ನೆಡೆಗೆ ಬಾಳದೋಣಿ ಮುನ್ನಡೆಸಲು ಹುಟ್ಟು ಹಾಕಬೇಕಿತ್ತು ಜೊತೆ ಸೇರಿಕಾಲದ ಕಡಲಲಿ ಮುಳುಗುವ ಮೊದಲು ಮರಳಿಬಿಡು ನನ್ನೆಡೆಗೆ ಹೃದಯ ನಿನಗಾಗಿ ಮಿಡಿಯುವುದನ್ನು ಈ ಕ್ಷಣಕ್ಕೂ ನಿಲ್ಲಿಸಿಲ್ಲಅಂತರದ ಕಂದಕ ಆಳವಾಗುವ ಮೊದಲು ಮರಳಿಬಿಡು ನನ್ನೆಡೆಗೆ ಅರಳಿದೊಲವ ಹೂವ ಬಿಸುಟು ನಡೆದ ನಿನ್ನ ನಡೆ ಸರಿಯೇ ಹೇಳುಕಣ್ಣೆದುರೇ ಮಣ್ಣಲಿ ಮಣ್ಣಾಗುವ ಮೊದಲು ಮರಳಿಬಿಡು ನನ್ನೆಡೆಗೆ ಪ್ರೀತಿಸುಧೆಯ ಉಂಡ ಜೀವ ವಿಷವ ಉಣಿಸಬಹುದೇ ಹೇಮ?ಕೊನೆ ಉಸಿರು ದೇಹ ತೊರೆವ ಮೊದಲು ಮರಳಿಬಿಡು ನನ್ನೆಡೆಗೆ **********************

ಗಝಲ್ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಅಮೃತ ಎಂ ಡಿ ನೋವಲ್ಲೂ ನಲಿವಿನ ಟಾನಿಕಿನ ಗುಟುಕುಂಟು ಗಾಲಿಬ್ಬದುಕೆಲ್ಲವು ಹಗದ ಮೇಲೆ ನಡೆದ ಕುರುಹುಂಟು ಗಾಲಿಬ್ ಹೇಳತಿರದ ಬೇಗೆಯೋದು ಸಜೀವ ದಹನ ಮಾಡಿದೆನಗುವಿನ ಮುಖವಾಡ ಧರಿಸಿ ಜೀವಿಸಿದ್ದುಂಟು ಗಾಲಿಬ್ ನನ್ನೊಳಗಿನ ಸಾಮರ್ಥ್ಯವನ್ನೆಲ್ಲಾ ಈ ಪ್ರೀತಿಯು ಕೊಂದಿದೆಗೈರುಹಾಜರಿಯಲ್ಲೂ ನಿರ್ಲಿಪ್ತ ಹಾಜರಿಯುಂಟು ಗಾಲಿಬ್ ನನ್ನರಸ ಮಧುಶಾಲೆಯಲ್ಲೇ ಜೀವನಪೂರ್ತಿ ಕಳೆದುಬಿಟ್ಟಬಾಳ ನೊಗಕ್ಕೆ ಹೆಗಲ್ಕೊಟ್ಟು ಹೈರಾಣಾಗಿದ್ದುಂಟು ಗಾಲಿಬ್ ಅಮ್ಮುವಿನ ನಸೀಬು ಬ್ರಹ್ಮಂಗು ಕಾರುಣ್ಯ ಪರಿಚಯಿಸಿದೆಅನುಗಾಲದ ಹೋರಾಟವು ಚಿರನಿದ್ರೆಯಲ್ಲುಂಟು ಗಾಲಿಬ್ *****************************************

ಗಝಲ್ Read Post »

ಕಾವ್ಯಯಾನ, ಗಝಲ್

ಮನಿಷಾಗೊಂದು ಗಝಲ್

ಮನಿಷಾಗೊಂದು ಗಝಲ್ ಅರುಣಾ ನರೇಂದ್ರ ನಾನಿಲ್ಲಿ ಮೂಕಳಾಗಿರಬೇಕು ಮಾತನಾಡಿದರೆ ನಾಲಿಗೆ ಕತ್ತರಿಸುತ್ತಾರೆನೀನಿಲ್ಲಿ ಜೀವಂತ ಶವವಾಗಿರಬೇಕು ಪ್ರತಿಭಟಿಸಿದರೆ ಗುಂಡಿ ತೋಡಿಸುತ್ತಾರೆ ರಾಮನಾಳಿದ ಈ ನೆಲದಲ್ಲಿ ನಾನು ಮತ್ತೆ ಹೆಣ್ಣಾಗಿ ಹುಟ್ಟಿದ್ದೇನೆ ಗೆಳತಿಹೊಸಿಲು ದಾಟಿ ಲಕ್ಷ್ಮಣ ರೇಖೆಯನ್ನೂ ದಾಟುತ್ತೇನೆಂದರೆ ವನವಾಸ ಕಳಿಸುತ್ತಾರೆ ನಿರ್ಭಯಾ ಮಧು ದಿಶಾ ಮತ್ತೆಲ್ಲರ ಆರ್ತನಾದ ಇನ್ನೂ ಕೇಳಿಸಿದರೂ ಮತ್ತೆ ಎಂಥ ನಿರ್ಲಕ್ಷ್ಯಇಂದು ಮನಿಶಾ ನಾಳೆ ನನ್ನ ಸರದಿ ಬೇಡವೆಂದರೆ ಮಸಣದ ಮನೆ ತೋರಿಸುತ್ತಾರೆ ಯುಗ ಯುಗಗಳು ಅಳಿದರೂ ಇನ್ನೆಷ್ಟು ಹೆಣ್ಣು ಬಲಿಯಾಗಬೇಕು ಇವರ ಕಾಮದ ತೀಟೆಗೆಅಂಗಾಂಗಗಳ ಹರಿದು ತಿನ್ನುವ ಹೃದಯ ಹೀನರು ಪ್ರಶ್ನಿಸಿದರೆ ಪ್ರಾಣ ತಗೆಯುತ್ತಾರೆ ಭದ್ರತೆ ಬೇಡಿದರೆ ಹೇಗೆ ಸಿಕ್ಕೀತು ಅರುಣಾಗೆ ಕಡತದಲ್ಲೇ ಕಾನೂನಿಗೆ ಕೈ ಕಾಲು ಕಟ್ಟಿದ್ದಾರೆಬೇಲಿ ಇಲ್ಲದ ಹೊಲವ ಗೂಳಿಯಂತೆ ತಿಂದು ಹೆಣ ಮಾಡಿ ಸುಟ್ಟು ಕತೆ ಮುಗಿಸುತ್ತಾರೆ ******************************

ಮನಿಷಾಗೊಂದು ಗಝಲ್ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಸುಜಾತಾ ರವೀಶ್ ಬಾಳಿನ ಪಥದಲಿ ಬೀಸಿದ ತಂಗಾಳಿ ನೆನಪುಗಳ ಹಸಿಯಾಗಿಸಿತು ನಾಳಿನ ಕನಸಿನ  ಕಲ್ಪನೆ ಹಾದಿಯು ಮೆಲುಕುಗಳ ಬಿಸಿಯಾಗಿಸಿತು  ಧುತ್ತನೆ ಕವಿದಿಹ ಕಾರ್ಮೋಡ ಬಾನನು ಮಂಕಾಗಿಸಿತು ಒಮ್ಮೆಲೆಯೇ ಮೆತ್ತನೆ ಬರುತಿಹ ಹೊಂಗಿರಣ ನಗುವಿನ ಹೂಬಿಸಿಲಲಿ ಸೊಗಸಾಗಿಸಿತು ಮಾರ್ದವ  ಭಾವವ ಮುಳ್ಳಿನ ಮೊನೆಯೊಲು ಚುಚ್ಚ ತೊಡಗಿತು ಚಿಂತೆಯು ಹಾರ್ದಿಕ ಆಶಯ ಹೃದಯವ ಮುಟ್ಟುತ ಶಂಕೆಗಳನು ಮರೆಯಾಗಿಸಿತು ಜೀವನ ನೌಕೆಯು ಸಿಲುಕಿ ಬಿರುಗಾಳಿಗೆ ಹೊಯ್ದಾಡುತಿದೆ ಹೀಗೇಕೆ? ದೇವನ ಒಲುಮೆ ಭದ್ರತೆ ನೀಡುತ ಭರವಸೆಯಲಿ ಖುಷಿಯಾಗಿಸಿತು ಹಂಬಲ ಕಾಮನೆ ಮನುಜನ ಬದುಕಲಿ ನನಸಾದರೆನಿತು ಒಳಿತು ನಂಬಿದ ದೈವದ ಸನ್ನಿಧಿ ಸುಜಿಯ ಅಂತರಂಗದಲಿ ಮೊರೆಯಾಗಿಸಿತು   *******************************************

ಗಝಲ್ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಮುತ್ತು ಬಳ್ಳಾ ಕಮತಪುರ ಗಾಂಧಿ ನಾಡಿನಲಿ ಮಾತುಗಳು ಮೌನ ಅರ್ಥ ಕಳೆದುಕೊಂಡಿವೆ |ಗಾಂಧಿ ನಾಡಿನಲಿ ಕನಸುಗಳು ಹೊಸಕಿ ಬಿಸಾಕಿ ಹಾಕಲಾಗುತ್ತಿವೆ || ಬಾಪೂಜಿ ದೇಶದಲಿ ನಾಲಿಗೆ ಹರಿತವಾದರೆ ಕತ್ತರಿಸಲಾಗುತ್ತದೆ |ಇಲ್ಲಿ ಎಲ್ಲವೂ ಭಕ್ತಿಯ ಪರಾಕಾಷ್ಠೆ ಉಧೋಒಪ್ಪಿತ ನಿರ್ಧಾರಗಳಿವೆ || ಮಲಗಿದವರ ಎಬ್ಬಿಸಬಹುದು ಸತ್ತಂತೆ ನಟಿಸುವ ದುರುಳರು ತುಂಬಿದ್ದಾರೆ |ಕಟ್ಟೆ ಪಂಚಾಯತಿ ನ್ಯಾಯ ತೀರ್ಮಾನ ಕಚ್ಚೆ ಹರುಕರೆ ತುಂಬಿಕೊಂಡಿವೆ || ಉಳ್ಳವರ ಕಾಯ್ದೆಗೆ ಹೆಣ್ಣು ಭೋಗ ವಸ್ತು ಆಕೆಯ ರಕ್ತವೇ ಗುಲಾಲು |ರಾತ್ರಿಯೂ ಕೆಲಸಗಳು ನಡೆಯುತ್ತಿವೆ ಸತ್ತ ಹೆಣಗಳು ಬೂದಿಯಾಗಿವೆ || ‘ಮುತ್ತು’ಬದಲಾವಣೆಗೆ ಕಾಯದಿರು ಮನೆ ಹೆಣ್ಣು ಮಕ್ಕಳ ಕಾವಲುಗಾರನಾಗು |ನನ್ನ ಸುಟ್ಟ ಹೊಗೆಯ ವಾಸನೆ ಪಕ್ಕದ ಗೂಡಸಲಿಗೂ ಹಬ್ಬಲಿದೆ ಎಚ್ಚರಿಸಿರುವೆ | ****************************

ಗಝಲ್ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಪ್ರಭಾವತಿ ಎಸ್ ದೇಸಾಯಿ ಅರಳಿದ ಸುಮ ದೇವರಿಗೆ ಅಪಿ೯ತವಾಗಲಿ ಬಾಡುವ ಮುನ್ನವೀಣೆ ತಂತಿ ಮೀಟಿ ಶ್ರುತಿ ಸರಾಗವಾಗಲಿ ಹಾಡುವ ಮುನ್ನ ಜಗದ ನಿಂದೆ ಅಪಹಾಸ್ಯ ಗಳಿಗೆ ನೊಂದು ಅನುಮಾನಿಸದಿರುಜೀವಿಗಳ ಪ್ರೀತಿ ಬೆಸುಗೆ ಗಟ್ಟಿಯಾಗಲಿ ಕೂಡುವ ಮುನ್ನ ನೆರಳಿರದ ಹಾದಿಯಲಿ ಬದುಕಿನ ಬಂಡಿ ಸಾಗಿದೆ ಅನವರತಬಾಳಿನ ಕಹಿ ನೆನಪ ದಿನಗಳು ಮರೆಯಾಗಲಿ ಕಾಡುವ ಮುನ್ನ ವಿರಹ ದಳ್ಳುರಿಯಲಿ ನಿತ್ಯ ದಹಿಸುತಿವೆ ಪ್ರೇಮಿಗಳ ಉಸಿರುಅನುರಾಗ ಚುಂಬನಕೆ ಹೃದಯ ಹಗುರಾಗಲಿ ಬೇಡುವ ಮುನ್ನ ಕೋಶ ಕೀಟಕೆ ರೆಕ್ಕೆಗಳ ಹಚ್ಚಿ ಕೊಂಡು ಹಾರುವ ಆತುರಪ್ರಭೆಯ ಮೋಹ ಇರುಳ ಧ್ಯಾನ ದೂರಾಗಲಿ ಹೊರಡುವ ಮುನ್ನ *************************************************

ಗಝಲ್ Read Post »

ಕಾವ್ಯಯಾನ, ಗಝಲ್

ಗಝಲ್

ಕವಿತೆ ಗಝಲ್ ರತ್ನರಾಯ ಮಲ್ಲ ಒರಟಾದ ಅಧರಗಳಲಿ ನುಲಿಯುತಿದೆ ನಿನ್ನದೆ ಹೆಸರುಎದೆಯ ಎಡ ಭಾಗದಲ್ಲಿ ಕುಣಿಯುತಿದೆ ನಿನ್ನದೆ ಉಸಿರು ಹಗಲಿರುಳು ಕಳೆಯುತಿರುವೆ ನಿನ್ನಯ ಕನವರಿಕೆಯಲ್ಲಿಕನಸುಗಳೆಂಬ ಹೆಪ್ಪಿನಿಂದ ಭಾವವು ಆಗಿದೆ ಮೊಸರು ಈ ರಾತ್ರಿಯು ಹರಿಯುತಿದೆ ನಿದ್ರೆಯ ಆಲಿಂಗನವಿಲ್ಲದೆಹಾಸಿಗೆಯ ತುಂಬೆಲ್ಲ ಬರಿ ನಿನ್ನ ಮಾದಕತೆಯ ಒಸರು ಗಾಳಿ ಬೀಸುತಿದೆ ಅನುರಾಗದ ಕಡಲು ಭೋರ್ಗರೆಯಲುಕಂಗಳ ಬಾಯಾರಿಕೆಯಲ್ಲಿ ಬರಿ ನಿನ್ನ ಬಿಂಬದೆ ಕೊಸರು ‘ಮಲ್ಲಿ’ಯ ಈ ಬಿಳಿ ಬಾಹುಗಳು ನಿನ್ನನ್ನೇ ಹುಡುಕುತಿವೆಅಂತರವನ್ನು ಮುಗಿಸಲು ಅನುವಾಗಿದೆ ಪ್ರಣಯದ ಕೆಸರು ********************************

ಗಝಲ್ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ತೇಜಾವತಿ ಹೆಚ್.ಡಿ. ಮತ್ಲಾಸಾನಿ /ಹುಸ್ನೆಮತ್ಲಾ ಗಜಲ್ ಕಂಡ ಕನಸೆಲ್ಲವೂ ಗುರಿಯ ಮುಟ್ಟವು ಕೇಳುನಡೆದ ಘಟನೆಯೆಲ್ಲವೂ ನನಸಾಗವು ಕೇಳು ವನದ ಸುಮವೆಲ್ಲವೂ ಗುಡಿಯ ಸೇರವು ಕೇಳುಬೀರಿದ ಕಂಪೆಲ್ಲವೂ ಸುಗಂಧ ದ್ರವ್ಯವಾಗವು ಕೇಳು ಅವನಿಯೆದೆಯ ಗೂಡ ಸ್ಪರ್ಶಿಸುವುದು ವರ್ಷಧಾರೆಬಿದ್ದ ಹನಿಗಳೆಲ್ಲವೂ ಸ್ವಾತಿಯ ಮುತ್ತಾಗವು ಕೇಳು ಬಯಲ ಭೂಮಿಯನ್ನೆಲ್ಲ ಹಸನು ಮಾಡಿ ಉಳಬಹುದುಬಿತ್ತಿದ ಬೆಳೆಗಳೆಲ್ಲವೂ ಫಲವ ನೀಡವು ಕೇಳು ಭವದ ಸಾಗರವು ವಿಸ್ತಾರವಾಗಿರುವುದು ಈ ಜಗದಲ್ಲಿಹೊರಟ ನಾವೆಗಳೆಲ್ಲವೂ ದಡವ ಸೇರವು ಕೇಳು ಸಪ್ತ ವರ್ಣಗಳ ಮೂಲವು ಶ್ವೇತವೇ ಆಗಿರುವುದುನೋಡಿದ ಬಿಳುಪೆಲ್ಲವೂ ಕ್ಷೀರವಾಗಲಾರವು ಕೇಳು ಇತಿಹಾಸದ ಚರಿತ್ರೆಯು ದೀರ್ಘವಾಗಿರುವುದು ‘ತೇಜ’ನೆಟ್ಟ ಹೆಜ್ಜೆಗಲೆಲ್ಲವೂ ಗುರುತಾಗಲಾರವು ಕೇಳು ******************************

ಗಝಲ್ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಶುಭಲಕ್ಷ್ಮಿ ಆರ್ ನಾಯಕ ಹೃದಯ ಸಿರಿವಂತಿಕೆಗೆ ಅರಮನೆ ಗುಡಿಮನೆಗಳೆಂಬ ಭೇದವುಂಟೇ ಸಖೀಗುಣ ಅವಗುಣಗಳಿಗೆ ಬಡವನು ಬಲ್ಲಿದನೆಂಬ ಅಂತರಗಳುಂಟೇ ಸಖೀ ಅವರವರ ಭಾವಗಳಲಿ ಅವರವರ ಅರಿವಿಂಗೆ ಬಂದಂತೆ ಮಾಡುತಿಹರುಸನ್ನಡತೆ ದುರ್ನಡತೆಗಳಿಗೆ ನಾನು ನೀನೆಂಬ ದೂರಗಳುಂಟೇ ಸಖೀ ಸಂಕುಚಿತ ಭಾವದಲಿ ಸ್ವಾರ್ಥದ ಬೆಂಬತ್ತಿ ತಮ್ಮ ತನಗಳ ಮರೆತಿಹರುಜೀವನದಿ ಸ್ವಾರ್ಥವೆಂಬ ಮುಸುಕಿಗೆ ಬಲಿಯಾಗಿ ಗೆದ್ದವರುಂಟೇ ಸಖೀ ಬಡವನಲಿ ಕಾಣಬಹುದಲ್ಲವೇ ನಯ ವಿನಯತುಂಬಿರುವ ವಿಶಾಲ ಹೃದಯವಅವನ ಕಷ್ಟ ತ್ಯಾಗ ಸಹನೆಗಳ ಅಸಹನೆಯಿಂದ ಮರೆಯಲುಂಟೇ ಸಖೀ ಸಂಕುಚಿತ ಸ್ವಾರ್ಥದ ಬದುಕ ಕಂಡು ಶುಭ ಳ ಕೋಮಲ ಹೃದಯ ಚೂರಾಗಿದೆಭೇದ ಭಾವ ಸ್ವಾರ್ಥ ಮೋಹಗಳಿಂದ ಮಹಲುಗಳ ಕಟ್ಟಲುಂಟೇ ಸಖೀ *****************************

ಗಝಲ್ Read Post »

You cannot copy content of this page

Scroll to Top