ಧೂರ್ತ ಆಮೆ ನೀ.ಶ್ರೀಶೈಲ ಹುಲ್ಲೂರು ಹಂಸವೆರಡು ಕೊಳದ ಬಳಿನೀರನರಸಿ ಬಂದವುನೀರು ಕುಡಿದು ತಣಿದ ಮೇಲೆಆಮೆ ನೋಡಿ ನಿಂದವು ಹರಟೆ ಮಲ್ಲ ಆಮೆ ತಾನೆಕೊಳದ ರಾಜನೆಂದಿತುಅದನು ಇದನು ಏನೊ ಹೇಳಿಅವುಗಳ ತಲೆ ತಿಂದಿತು ಸರಿ,ನಾವು ಬರುವೆವಿನ್ನುಮತ್ತೆ ಸಿಗುವೆವೆಂದವುಬಿಡದ ಆಮೆ ನಡೆಯ ನೋಡಿಮನದಿ ತಾವೆ ನೊಂದವು ನನಗೆ ಕೊಳದ ಸಂಗ ಸಾಕುನದಿಯಲೀಜಬೇಕುಹಾಡಿ ಜಿಗಿದು ಕುಣಿದು ತಣಿದುಜಲದಿ ತೇಲಬೇಕು ದಮ್ಮಯ್ಯ ಎನುವೆ ನಾನುಮಾಡಿ ನೀವ್ ಉಪಾಯವಏನೆ ಬಂದರೂ ಸರಿಯೆಗೆಲುವೆ ನಾ ಅಪಾಯವ ಹಂಸವೆರಡು ಬಡಿಗೆ ತಂದುಆಚೆ ಈಚೆ ಹಿಡಿದವುನಡುವೆ ಆಮೆ ಬಡಿಗೆ […]
Read More
ಇರುವೆ-ಆನೆ ಗಣಪ ಮತ್ತು ಪುಟ್ಟಿ ವಿಜಯಶ್ರೀ ಹಾಲಾಡಿ ಗಣಪನ ತಿಂಡಿ ಇರುವೆ ತಿಂದರೆತಪ್ಪು ಏನಮ್ಮಆನೆಮರಿಯೇ ಗಣಪ ಎಂದುಅಜ್ಜಿ ಅಂದಿಲ್ವ? ಆನೆಗೆ ಇರುವೆ ಗೆಳೆಯನು ತಾನೇನಾನೇ ನೋಡಿಲ್ವಕಾಡಿನ ಬಿಲದಲಿ ಹುಲ್ಲಿನ ಬೀಜಕೂಡಿ ಹಾಕಿಲ್ವ? ಹುಲ್ಲು ಮೊಳೆತು ಮಳೆಯ ಬೆರೆತುಆನೆಯು ತಿಂದಿಲ್ವಆನೆಗು ಇರುವೆಗು ಭೇದವೆ ಇಲ್ಲಬೆಲ್ಲ ಕದ್ದಿಲ್ವ? ಪುಟ್ಟಿಯ ಮಾತು ಸಿಡಿಯೋ ಅರಳುತಲೆಯು ಕೆಟ್ಟಿಲ್ವ!!ಅಮ್ಮ ಅಪ್ಪ ಅಜ್ಜಿ ಅಜ್ಜಬಿದ್ದು ನಕ್ಕಿಲ್ವ? ******************************
Read More
ಬಾವುಟ ಪದ್ಯ ಮಲಿಕಜಾನ ಶೇಖ ಅತ್ತ ನೋಡು ಇತ್ತ ನೋಡು ಸುತ್ತ ನೋಡು ಎತ್ತ ನೋಡುಬೀದಿ ನೋಡು ಕೇರಿ ನೋಡುನೋಡು ನೀನು ಬಾವುಟ ಮಾಡು ನೀನು ಸೆಲ್ಯೂಟ್… ಕೆಸರಿ ಬಿಳಿ ಹಸಿರು ಮೂರು ಬಣ್ಣ ನಡುವೆ ಚಕ್ರ ಒಂದು ನೀಲಿ ನೋಡು ಸತ್ಯ ಶಾಂತಿ ನ್ಯಾಯ ಪ್ರೀತಿತ್ಯಾಗ ಶೌರ್ಯ ನೀತಿ ಮೌಲ್ಯಐಕ್ಯ ಒಂದು ಪ್ರತೀಕ ನೋಡು ಪರತಂತ್ರವ ಕಳಚಿ ಬಿಟ್ಟುಸ್ವಾತಂತ್ರವ ಮೆರೆಸಿ ಕೊಟ್ಟುದೇಶದೊಂದು ಪ್ರತೀಕ ನೋಡು ಮೆಡಂ ಕಾಮಾ ಹಾರಿಸಿದಭಗತ ಗುರು ಪ್ರೇಮಿಸಿದಗಾಂಧೀನೆಹರು ಪ್ರೀತಿಸಿದ ಪ್ರತೀಕ ನೋಡು ಹಲವು ಭಾವ ಹಲವು ಭಾಷೆಹಲವು […]
Read More
ಅನುಭವ ಕಥನ(ಮಕ್ಕಳಿಗಾಗಿ) ವಿಜಯಶ್ರೀ ಹಾಲಾಡಿ ‘ಮುದೂರಿ’ ಒಂದು ಸಣ್ಣ ಹಳ್ಳಿ. ಅಲ್ಲಿ ವಿಜಿಯ ಮನೆ . ಅವರ ಊರಿನಲ್ಲಿ ಫರ್ಲಾಂಗು ದೂರಕ್ಕೊಂದೊಂದು ಮನೆಗಳು. ಆ ಊರು ಕಾಡು-ಗುಡ್ಡಗಳ ನಡುವೆ ಅವಿತುಕೊಂಡಿತ್ತು. ಜನರ ಸಂಖ್ಯೆಯೂ ಕಡಿಮೆ. ಅಲ್ಲಿಂದ ವಾಹನ ಓಡಾಡುವ ರಸ್ತೆ ತಲುಪಲು ಎರಡೂವರೆ ಮೈಲು ನಡೆದುಹೋಗಬೇಕಿತ್ತು. ಹಾಗೆ ಹೋದಾಗ ಸಿಗುವುದೇ ಹಾಲಾಡಿ. ಅಲ್ಲಿ ಕೆಲವು ಅಂಗಡಿಗಳು, ಪೋಸ್ಟ್ ಆಫೀಸ್, ಶಾಲೆ, ಹಾಲಿನ ಡೈರಿ, ಬ್ಯಾಂಕು ಇದ್ದವು . ಬಸ್ಸುಗಳು ಓಡಾಡುತ್ತಿದ್ದವು. ಡಾಕ್ಟರರನ್ನು ಕಾಣಬೇಕಾದರೆ ಅಲ್ಲಿಂದ ಬಸ್ಸು […]
Read More| Powered by WordPress | Theme by TheBootstrapThemes