ಶಾಲೆಯ ಹೆಡ್ ಬಾಯೋರು ಬಳಸಿದ ಹಳೆಯ ಕರಿ ಬಣ್ಣದ ಮೊಬೈಲನ್ನು ಸಾಳೂಗೆ ಕೊಟ್ಟಿದ್ದರು. ಅದೇ ಮೊಬೈಲು ರ್ಸಿನಿಂದ ತೆಗೆದು ಘಂಟೆ ಎಷ್ಟಾಯಿತೆಂದು ನೋಡಿದಳು. ಏಳು ಗಂಟೆಯಾಗುತ್ತಾ ಬಂತು ಬೇಗ ಮುಟ್ಟಬೇಕು ಎಂದುಕೊಳ್ಳುತ್ತಾ ದೊಡ್ಡ ದೊಡ್ಡ ಹೆಜ್ಜೆಗಳನ್ನು ಹಾಕಲು ಶುರು ಮಾಡಿದಳು. ಆದರೆ ಈಗೀಗ ಸಾಳೂಗೆ ನಡೆಯಲು ತುಂಬಾ ತ್ರಾಸು ಆಗುತ್ತಿತ್ತು
Category: ವಾರದ ಕತೆ

ಇಂದು ವಿಮಾನ ನಿಲ್ದಾಣದಲ್ಲಿ ನಾನು, ವೈಶಾಲಿ, ವೆಂಕಟೇಶ, ಶ್ರೀನಿವಾಸ, ರಾಜೇಶ ಹಾಗೂ ಶ್ರೀನಾಥ ಬೆಂಗಳೂರಿನ ವಿಮಾನಕ್ಕಾಗಿ ಕಾಯುತ್ತಿದ್ದೇವೆ. ವಿಮಾನ ಹೊರಡುವುದು ಆರು ಗಂಟೆ ತಡವಾಗಿದ್ದರಿಂದ ನಿಮ್ಮೊಂದಿಗೆ ನನ್ನ ಈ ಕತೆಯನ್ನು ಬರೆದು ಹಂಚಿಕೊಳ್ಳಲು ಸಾಧ್ಯವಾಯಿತು. ವಿಮಾನ ತಡವಾಗಿದ್ದೂ ಗೋವಿಂದನ ದಯೆಯೇ ಎಂಬುದು ನನ್ನ ನಂಬಿಕೆ. ಇಲ್ಲಾ ಅಂದ್ರೆ ನನ್ನ ಕತೆ ನಿಮ್ಮೊಂದಿಗೆ ಹೇಳೋಕ್ಕೆ ಸಮಯ ಎಲ್ಲಿ ಸಿಕ್ತಾ ಇತ್ತು ಹೇಳಿ. ಸರಿ ಹಾಗಾದ್ರೇ, ಮತ್ತೇ ಬೆಂಗಳೂರಿನಲ್ಲಿ ಸಿಗೋಣವೇ………..