Category: ಕೇರಿ ಕೊಪ್ಪಗಳ ನಡುವೆ

ರಾಮಕೃಷ್ಣ ಗುಂದಿ ಆತ್ಮಕಥೆ

ಭಾಗ – 54

ಪ್ರಚಾರ ಬಯಸದ ಪ್ರತಿಭಾ ಸಂಪನ್ನ : ನನ್ನ ತಂದೆ ಗಣಪು ಮಾಸ್ತರ

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—52 ಯಕ್ಷಗಾನದ ಸಿಹಿ-ಕಹಿ ನೆನಪುಗಳು ಹವ್ಯಾಸಿ ಕಲಾವಿದನಾಗಿ ನಾನು ಯಕ್ಷಗಾನ ರಂಗದಲ್ಲಿ ತೊಡಗಿಕೊಂಡ ಬಳಿಕ ಕಾಲೇಜಿನ ಆಚೆಗೂ ನನ್ನ ಜೀವನಾನುಭವಗಳು ವಿಸ್ತಾರಗೊಂಡವು. ಪ್ರೇಕ್ಷಕರ ಅಭಿಮಾನ ಒಲವುಗಳು ಒಂದು ಕಡೆ ರೋಮಾಂಚನಗೊಳಿಸಿದರೆ ಸಂಘಟಕರ ಅಪೇಕ್ಷೆಯಂತೆ ನಡೆದುಕೊಳ್ಳಲು ಸಾಧ್ಯವಾಗದ ಸಂದರ್ಭಗಳಲ್ಲಿ ಅವರ ನಿಷ್ಠುರವನ್ನು, ವಿರೋಧವನ್ನು ಎದುರಿಸಬೇಕಾದ ಅನಿವಾರ್ಯ ಸನ್ನಿವೇಶಗಳೂ ಸೃಷ್ಟಿಯಾಗುತ್ತಿದ್ದವು. ಬೇರೆ ಬೇರೆ ಕೌಟುಂಬಿಕ ಪರಿಸರದಿಂದ ಬಂದ ಕಲಾವಿದರ ಆಲೋಚನೆ, ಸ್ವಭಾವಗಳಿಗೆ ಹೊಂದಿಕೊಳ್ಳುವುದು ಹಲವು ಬಾರಿ ಕಷ್ಟವೇ ಎನಿಸಿದರೂ ಯಕ್ಷಗಾನದ ಮೇಲಿನ ಪ್ರೀತಿಯಿಂದ […]

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—51 ಅಘನಾಶಿನಿಯಲ್ಲಿ ಪಾರಾದೆ, ಪುತ್ರೋದಯದ ಸಂತಸದಲ್ಲಿ ಮುಳುಗಿದೆ ಕುಮಟಾ ತಾಲೂಕಿನ ಮಿರ್ಜಾನಿನಲ್ಲಿ ಒಂದು ಆಟ. ನಾನು ‘ಗದಾಪರ್ವ’ ಪ್ರಸಂಗದಲ್ಲಿ ಕೌರವನ ಪಾತ್ರ ನಿರ್ವಹಿಸಬೇಕಿತ್ತು. ಮಿರ್ಜಾನ್‌ನಂಥ ಊರಿನಲ್ಲಿ ನನ್ನ ಮೊದಲ ಪಾತ್ರವಾದ್ದರಿಂದ ಸರಿಯಾದ ಸಿದ್ಧತೆಯೊಂದಿಗೆ ಪ್ರದರ್ಶನ ನೀಡಿ ಜನರ ಮನಗೆಲ್ಲುವ ಅನಿವಾರ್ಯತೆಯೂ ಇತ್ತು. ಥಿಯೇಟರ್ ಆಟ ಬೇರೆ. ಹಣ ಕೊಟ್ಟು ಬರುವ ಪ್ರೇಕ್ಷಕರಿಗೆ ಸಂತೋಷವಾಗುವಂತೆ ಪಾತ್ರ ನಿರ್ವಹಣೆ ಸಾಧ್ಯವಾಗದಿದ್ದರೆ ಅವರ ಟೀಕೆಗಳನ್ನು ಸಹಿಸಲೇ ಬೇಕಾಗುತ್ತದೆ. ನಾನು ಕಾಳಜಿ ಪೂರ್ವಕವಾಗಿ ಪಾತ್ರಕ್ಕೆ ಬೇಕಾದ […]

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—50 ಯಕ್ಷರಂಗದ ಮಾನಾಪಮಾನಗಳು ೧೯೭೦-೮೦ ದಶಕವೆಂದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಯಕ್ಷಗಾನದ ಸುಗ್ಗಿಕಾಲ. ಅಪರೂಪಕ್ಕೆ ಕಾಣಲು ಸಿಗುವ ಸಿನೇಮಾ ಹೊರತು ಪಡಿಸಿದರೆ ಹಳ್ಳಿ-ಹಳ್ಳಿಗಳಲ್ಲಿ ನಡೆಯುವ ಯಕ್ಷಗಾನ ಬಯಲಾಟ, ನಾಟಕ ಪ್ರದರ್ಶನಗಳೇ ಜನಸಾಮಾನ್ಯರಿಗೆ ಮನರಂಜನೆಯ ಪ್ರಮುಖ ಮಾದ್ಯಮಗಳಾಗಿದ್ದವು. ಎಲ್ಲ ಆಟ-ನಾಟಕಗಳಿಗೂ ಸಮೃದ್ಧವಾದ ಪ್ರೇಕ್ಷಕ ಸಮುದಾಯದ ಹಾಜರಿ ಇರುತ್ತಿತ್ತು. ಜಿಲ್ಲೆಯ ಕೆರೆಮನೆ, ಕರ್ಕಿ, ಬಚ್ಚಗಾರು ಇತ್ಯಾದಿ ವೃತ್ತಿಮೇಳಗಳ ತಿರುಗಾಟವಲ್ಲದೆ ದಕ್ಷಿಣದ ಕಡೆಯಿಂದಲೂ ಸೂರತ್ಕಲ್, ಧರ್ಮಸ್ಥಳ, ಮೂಲ್ಕಿ, ಮಂಗಳೂರು, ಕೋಟ ಮುಂತಾದ ಮೇಳಗಳು ಕನಿಷ್ಟ […]

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—49 ಯಕ್ಷಗಾನ-ನಾಟಕ ರಂಗಭೂಮಿಯಲ್ಲಿ. ನನ್ನ ಕಾಲೇಜು ಅಧ್ಯಾಪಕರ ವೃತ್ತಿಯೊಡನೆ ನಾನು ಪ್ರೀತಿಯಿಂದ ಎದೆಗೆ ಹಚ್ಚಿಕೊಂಡ ಯಕ್ಷಗಾನ ಮತ್ತು ನಾಟಕ ರಂಗಭೂಮಿಯ ಹವ್ಯಾಸಗಳು ನನ್ನ ವ್ಯಕ್ತಿತ್ವದ ಇನ್ನೊಂದು ಮುಖದ ಬೆಳವಣಿಗೆಗೆ ಕಾರಣವಾದವು. ಈ ನಂಟಿನಿಂದಲೇ ಕಾಲೇಜು ಕ್ಯಾಂಪಸ್ಸಿನ ಆಚೆಯೂ ನನಗೊಂದು ಜನಪ್ರಿಯ ವಲಯ ಸೃಷ್ಟಿಯಾಯಿತು. ಹಾಗೆಂದು ನಾನು ಕ್ರಮಿಸಿದ ಯಕ್ಷಗಾನ ಮತ್ತು ರಂಗಭೂಮಿಯ ದಾರಿ ಕೇವಲ ಸುಗಂಧಯುಕ್ತ ಹೂವಿನ ಹಾಸಿಗೆಯಷ್ಟೇ ಆಗಿರಲಿಲ್ಲ. ಅಲ್ಲಿ ಶ್ಲಾಘನೆಯ ಪರಿಮಳದೊಡನೆ ವಿಮರ್ಶೆಯ ಟೀಕೆ ಟಿಪ್ಪಣಿಗಳ ಕಲ್ಲು […]

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—48 ಮತ್ತೆ ಮರುದನಿಗೊಂಡ ಅಸ್ಪೃಶ್ಯತೆ ನೋವುಗಳು…… ನನ್ನ ವಿವಾಹವೇನೋಸಹಜ ಪ್ರಕ್ರಿಯೆಯಂತೆ ನಿರಾತಂಕವಾಗಿ ನಡೆಯಿತು. ಹಲವರು ಶುಭಹಾರೈಕೆಗಳಿಂದ ನಮ್ಮ ನಿಲುವುಗಳನ್ನು ಬೆಂಬಲಿಸಿದರು. ಕೆಲವರು ನೇರ ನನ್ನ ಕಿವಿಗೂ ಕೇಳಿಸುವಂತೆ ಟೀಕಾಸ್ತ್ರಗಳ ಬಳುವಳಿಯನ್ನೂ ಕೊಡಮಾಡಿದರು. ಬಹುತೇಕ ನಮ್ಮ ಜಾತಿಯ ಬಂಧುಗಳಿಗೆ ನಾನು ಅಂತರ್ಜಾತಿಯ ವಿವಾಹ ಮಾಡಿಕೊಂಡದ್ದು ಸಮಂಜಸವೆನಿಸಲಿಲ್ಲ. “ಉತ್ತಮ ಶಿಕ್ಷಣ ಪಡೆದು ಒಂದು ಒಳ್ಳೆಯ ಉದ್ಯೋಗದಲ್ಲಿ ಇದ್ದವನು ಸ್ವಜಾತಿಯ ಹುಡುಗಿಯನ್ನೇ ಮದುವೆ ಮಾಡಿಕೊಂಡು ಸ್ವಜಾತಿಯ ಹುಡುಗಿಯೊಬ್ಬಳಿಗೆ ಬದುಕು ನೀಡಬಹುದಿತ್ತು. ಓದಿದ ಮತ್ತು ಉತ್ತಮ […]

ಅಂಕಣ ಬರಹ

ರಾಮಕೃಷ್ಣ ಗುಂದಿ ಅವರ ಆತ್ಮಕಥೆ—47 ಆತ್ಮಾನುಸಂಧಾನ ನಾಲ್ಕಾರು ಬಂಧುಗಳ ನಡುವೆ ವಿವಾಹ ಬಂಧನಕ್ಕೆ….. : ಬದುಕು ಅನೇಕ ವಿಧದ ಸಂಬಂಧಗಳ ಬೆಸುಗೆ. ನಮ್ಮ ಜೀವಿತದ ಕಾಲಾವಧಿಯ ಉದ್ದಕ್ಕೂ ಈ ಸಂಬಂಧಗಳ ಬೆಸುಗೆ ವಿಸ್ತಾರಗೊಳ್ಳುತ್ತ ಸಾಗುತ್ತದೆ. ಅಂತಹ ಸಂಬಂಧಗಳಲ್ಲಿ ಪ್ರೇಮ ಸಂಬಂಧವೆಂಬುದು ಒಂದು ಅಪರೂಪದ, ವಿಶಿಷ್ಟವಾದ ಭಾವ ಬಂಧ. ಇದು ಗಂಡ-ಹೆಂಡತಿಯ ಸಾಮಾಜಿಕ ಅಂತಸ್ತುಗಳ ರೂಪದಲ್ಲಿ ಸಮಾಜದ ಮುಂದುವರಿಕೆಗೂ ನೆರವಾಗುತ್ತದೆ. ‘ಪ್ರೇಮ’ ಎಂಬುದು ಮುಂಗಡ ಬುಕಿಂಗ್ ಮಾಡುವಂತಹುದಲ್ಲ. ಅದು ಹೊತ್ತು ಗೊತ್ತಿಲ್ಲದೆ ತೀರ ಆಕಸ್ಮಿಕವಾಗಿ ಘಟಿಸುವಂತಹದು. ಅದಕ್ಕೇ ಇರಬಹುದೇನೋ […]

Back To Top