Category: ಕೇರಿ ಕೊಪ್ಪಗಳ ನಡುವೆ

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—34 ಆತ್ಮಾನುಸಂಧಾನ ಹಾಸ್ಟೆಲ್ ಊಟದಲ್ಲಿ ಮೈತುಂಬಿಕೊಂಡೆ ‘ಶಾಲ್ಮಲಾ ಹಾಸ್ಟೆಲ್‌ನ ಊಟದ ವ್ಯವಸ್ಥೆ ತುಂಬ ಸೊಗಸಾಗಿತ್ತು. ದಿನವೂ ಒಂದೊಂದು ಬಗೆಯ ಕಾಳು-ಕಡಿಯ ಬಾಜಿ, ಸೊಪ್ಪಿನ ಪಲ್ಯ, ಹಸಿ ತರಕಾರಿಯ ಕೋಸಂಬರಿ, ದಿನಕ್ಕೊಂದು ವಿಧದ ಚಟ್ನಿ, ಕೆನೆ ಮೊಸರು, ರೊಟ್ಟಿ ಇಲ್ಲವೆ ಚಪಾತಿ, ಬಯಸಿದಷ್ಟೂ ಅನ್ನ…. ಇತ್ಯಾದಿಗಳಿಂದ ಊಟವು ಸಮೃದ್ಧವಾಗಿರುತ್ತಿತ್ತು. ರವಿವಾರದಂದು ವಿಶೇಷ ಸಿಹಿ ತಿನಿಸು ಪೂರೈಕೆಯಾಗುತ್ತಿತ್ತು.                 ಇತರ ವಿದ್ಯಾರ್ಥಿಗಳ ಮಾತು ಅಂತಿರಲಿ, ನನಗೂ ನನ್ನಂಥ ಹಲವಾರು ವಿದ್ಯಾರ್ಥಿಗಳಿಗೆ ಇಲ್ಲಿನ ಊಟದ […]

ಇದ್ದ ಬದ್ದ ವಸ್ತ್ರ, ಪುಸ್ತಕಗಳಿಂದ ತುಂಬಿದ ನನ್ನ ಸೂಟ್‌ಕೇಸ್ ತುಂಬಾ ಭಾರವಾಗಿತ್ತು. ಪ್ರಯಾಸದಿಂದ ಅದನ್ನು ಹೇಗೂ ಬಳಸಿಕೊಂಡು ಸುಧಾರಿಸಿಕೊಳ್ಳುತ್ತ ಬಸ್‌ಸ್ಟಾಫಿನಲ್ಲಿ ನಿಂತು ನಾನು ಹೋಗಿ ಸೇರಿಕೊಳ್ಳಬೇಕಾದ ಮೊದಲ ವರ್ಷದ ವಿದ್ಯಾರ್ಥಿಗಳ ವಸತಿ ನಿಲಯ “ಶಾಲ್ಮಲಾ ಹಾಸ್ಟೆಲ್” ಯಾವ ದಿಕ್ಕಿನಲ್ಲಿದೆ? ಎಂಬುದನ್ನು ಅಲ್ಲಿಯೇ ನಿಂತಿರುವ ವಿದ್ಯಾರ್ಥಿಗಳ್ಲಿ ಕೇಳಿ ತಿಳಿದುಕೊಂಡೆ.

ಇದೀಗ ನಾನು ಓದುವುದಕ್ಕಾಗಿ ದೂರದ ಧಾರವಾಡಕ್ಕೆ ಹೊರಟಿದ್ದೇನೆ ಎನ್ನುವಾಗ ಅವನಿಗೆ ಅದು ಅಮೇರಿಕೆಗೋ ಇಂಗ್ಲೆಂಡಿಗೋ ಹೊರಟಂತೆ ದೂರ ಪ್ರಯಾಣವಾಗಿ ಕಂಡಿದೆ. ಆತ ನಾನು ಧಾರವಾಡಕ್ಕೆ ಹೋಗಲೇ ಬಾರದೆಂದು ಹಠ ಹಿಡಿದ. ಎರಡು ಮೂರು ದಿನ ಮನೆಯಲ್ಲಿ ಈ ವಿಷಯದ ಕುರಿತಾಗಿಯೇ ವಾದ-ವಿವಾದಗಳು ನಡೆದವು. ಇದು ಎಂತಹ ವಿಕೋಪಕ್ಕೆ ಹೋಯಿತೆಂದರೆ ಅಂತಿಮವಾಗಿ ಗ್ರಾಮದೇವರಲ್ಲಿ ಪ್ರಸಾದ ಕೇಳುವುದೆಂದೇ ತೀರ್ಮಾನವಾಯಿತು

ವಿಶ್ವನಾಥ ನಾಯಕ ಬಿ.ಎ. ಮುಗಿಯುತ್ತಿದ್ದಂತೆ ಎಂ.ಎ. ವ್ಯಾಸಂಗ ಮಾಡಲು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಸೇರಿದ ಅವನ ಮೂಲಕವೇ ನನಗೆ ವಿಶ್ವವಿದ್ಯಾಲಯ ಮತ್ತು ಎಂ.ಎ ವ್ಯಾಸಂಗದ ಕುರಿತು ಅಲ್ಲಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ದೊರೆಯುವ ಹಾಸ್ಟೆಲ್ ಮತ್ತು ಸ್ಕಾಲರ್‌ಶಿಪ್ ಸೌಲಭ್ಯಗಳ ಕುರಿತು ಮಾಹಿತಿ ದೊರೆಯಿತು. ಮತ್ತು ನನ್ನ ಎಂ.ಎ ಓದಿನ ಆಸೆಯೂ ಜಾಗೃತವಾಯಿತು

ಊಟ ಮುಗಿಸಿದ ನಮ್ಮಿಬ್ಬರ ಕೈಯಲ್ಲಿಯೂ ಮನೆಗೆ ಮುಟ್ಟಿಸುವಂತೆ ನೀಡಿದ ಕೋಳಿ ಮಸಾಲೆ ಡಬ್ಬಗಳ ಚೀಲ ಹಿಡಿದು ಮತ್ತೆ ಮಂಜಗುಣಿ ತಾರಿಯತ್ತ ಸಂತೃಪ್ತಿಯ ಹೆಜ್ಜೆ ಹಾಕಿದೆವು. ದಾರಿಯುದ್ಧದ ನಮ್ಮ ಚರ್ಚೆಯಲ್ಲಿ ಬಿ.ಎ. ಓದು ಮುಗಿಸಿದ ಬಳಿಕ ನಾವು ನೌಕರಿ ಸೇರುವುದಿದ್ದರೆ ಅದು ಸಾಲೆಯ ತಪಾಸಣಾಧಿಕಾರಿಯಾಗಿಯೇ ತೀರಬೇಕು ಎಂದು ಮನದಲ್ಲಿಯೇ ಸಂಕಲ್ಪ ಮಾಡಿಕೊಂಡಿದ್ದೆವು!

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—29 ಆತ್ಮಾನುಸಂಧಾನ ಯಕ್ಷಗಾನದ ಹುಚ್ಚು ಹಿಡಿಸಿದ ದಿನಗಳು ಗೋಖಲೆ ಸೆಂಟಿನರಿ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆಯುತ್ತಿರುವಾಗ ಆಯ್ದುಕೊಂಡ ಮುಖ್ಯ ಐಚ್ಛಿಕ ವಿಷಯ ಕನ್ನಡ, ಆಗ ನಮಗೆ ಕನ್ನಡ ಕಲಿಸಲು ಕಾಲೇಜಿನಲ್ಲಿ ಪ್ರೊ. ವಿ.ಏ, ಜೋಶಿ ಮತ್ತು ಪ್ರೊ. ಕೇ.ವಿ. ನಾಯಕ ಎಂಬ ಇಬ್ಬರು ಉಪನ್ಯಾಸಕರಿದ್ದರು. ಇಬ್ಬರೂ ಕನ್ನಡ ವಿಷಯ ಬೋಧನೆಯಲ್ಲಿ ಪರಿಣಿತರಾಗಿದ್ದರು. ಹಳಗನ್ನಡ – ಹೊಸಗನ್ನಡ ಕಾವ್ಯಗಳನ್ನು ಜೋಶಿಯವರು ಲೀಲಾಜಾಲವಾಗಿ ಪಾಠ ಮಾಡುತ್ತಿದ್ದರೆ, ನಡುಗನ್ನಡ ಕಾವ್ಯಗಳನ್ನು, ಗದ್ಯ ಮತ್ತು ವ್ಯಾಕರಣಗಳನ್ನು […]

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—28 ಆತ್ಮಾನುಸಂಧಾನ ಬಹುಮುಖೀ ವ್ಯಕ್ತಿತ್ವದ ರಾಕಜ್ಜ ನಮ್ಮ ತಾಯಿಯ ಚಿಕಪ್ಪ ರಾಕು. ಬಾಲ್ಯದಲ್ಲಿಯೇ ತಂದೆ, ಅವಳ ವಿವಾಹದ ಬಳಿಕ ತಾಯಿಯನ್ನು ಕಳೆದುಕೊಂಡ ಅವ್ವನಿಗೆ ತೌರುಮನೆಯ ಕಡೆಯಿಂದ ಕೊನೆಯವರೆಗೂ ಹತ್ತಿರದಲ್ಲಿ ಕುಟುಂಬದ ಸದಸ್ಯನೇ ಎಂಬಂತೆ ಆಧಾರವಾಗಿದ್ದವನು ಚಿಕ್ಕಪ್ಪ ರಾಕು. ನಮಗೆಲ್ಲ ಅಕ್ಕರೆಯ ರಾಕಜ್ಜ. ವಿಶೇಷವೆಂದರೆ ಬಾಲ್ಯದಿಂದಲೂ ನನ್ನನ್ನು ವಿಶೇಷವಾಗಿ ಎದೆಗೆ ಹಚ್ಚಿಕೊಂಡು ಅಕ್ಕರೆ ತೋರಿದವನು ರಾಕಜ್ಜನೇ. ಜಾತ್ರೆಗೋ, ಯಕ್ಷಗಾನ ಬಯಲಾಟ ನೋಡುವುದಕ್ಕೋ ನನ್ನನ್ನು ಹೆಗಲೇರಿಸಿಕೊಂಡು ಹೊರಡುವ ರಾಕಜ್ಜ ನಾನು ಬೇಡಿದುದನ್ನು ಕೊಡಿಸುತ್ತ […]

ನಮ್ಮ ಪೂರ್ವಜರು ನೆಲೆಸಿದ್ದ ‘ಗುಂದಿ ಹಿತ್ತಲು’ ನಮ್ಮ ಮನೆಯಿಂದ ಕೂಗಳತೆ ದೂರಮದಲ್ಲಿಯೇ ಇತ್ತಾದರೂ ಇತ್ತೀಚೆಗೆ ಅಲ್ಲಿ ನೆಲೆಸಿದ ಕುಟುಂಬಗಳು ಮಾಸ್ಕೇರಿ ಮತ್ತು ಅಗ್ಗರಗೋಣದ ಕಡೆಗೆ ವಲಸೆ ಹೋಗಿ ಸರಕಾರಿ ಭೂಮಿ ಪಡೆದು ನೆಲೆ ಕಂಡುಕೊಂಡಿದ್ದವು

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—25 ಆತ್ಮಾನುಸಂಧಾನ ತುಂಬ ಪ್ರಭಾವ ಬೀರಿದ ಪ್ರಾಚಾರ್ಯರು ಪ್ರಾಧ್ಯಾಪಕರು ಪದವಿ ಶಿಕ್ಷಣದ ಕಾಲೇಜು ಜೀವನದಲ್ಲಿ ಪ್ರಾಮಾಣಿಕ ನಿಷ್ಠೆ ತೋರಿದ್ದರೆ ಅಪಾರವಾದ ಜ್ಞಾನನಿಧಿ ಕೈವಶ ಮಾಡಿಕೊಳ್ಳುವ ಎಲ್ಲ ಅವಕಾಶಗಳೂ ಇದ್ದವು. ಆದರೆ ಸೂಕ್ತ ಮಾರ್ಗದರ್ಶನ, ತಿಳುವಳಿಕೆಯ ಕೊರತೆಯಿಂದಾಗಿ ಕೇವಲ ಹರೆಯದ ಹುಡುಗಾಟಿಕೆಯಲ್ಲಿ ಪದವಿ ಶಿಕ್ಷಣದ ಮೂರು ವರ್ಷಗಳು ತೀರ ಹಗುರವಾಗಿ ಕಳೆದು ಹೋದವು. ಆದರೂ ತಮ್ಮ ಪಾಠ ಕ್ರಮದ ವಿಶಿಷ್ಠತೆ, ವೇಷಭೂಷಣ, ನಡೆನುಡಿಗಳಿಂದಲೇ ಮನಸ್ಸನ್ನು ಗಾಢವಾಗಿ ಪ್ರಭಾವಿಸಿದ ಅಧ್ಯಾಪಕರು ಮತ್ತಿತರ ವ್ಯಕ್ತಿಗಳನ್ನು […]

ಬಸ್ಸು ಅಂಕೋಲೆಯ ಬಸ್ ನಿಲ್ದಾಣದಲ್ಲಿ ಬಂದು ನಿಲ್ಲುವ ಹೊತ್ತಿಗೆ ಸರಿಯಾಗಿ ಸುತ್ತಲಿನ ಬೇಲೇಕೇರಿ, ಭಾವಿಕೇರಿ, ಕಣಗಿಲ ಮುಂತಾದ ಊರುಗಳಿಂದಲೂ ಬಸ್ಸುಗಳು ಬಂದು ನಿಲ್ಲುತ್ತಿದ್ದವು. ಎಲ್ಲ ಬಸ್ಸುಗಳಲ್ಲಿಯೂ ಅಷ್ಟಿಷ್ಟು ಕಾಲೇಜು ವಿದ್ಯಾರ್ಥಿಗಳು ಇರುತ್ತಿದ್ದರು. ಎಲ್ಲರೂ ಕೂಡಿಯೇ ಕಾಲೇಜಿನವರೆಗೆ ಕಾಲ್ನಡಿಗೆಯಲ್ಲಿ ನಡೆಯುವಾಗ ಇಂದಿನ ‘ದಿನಕರ ದೇಸಾಯಿ ರಸ್ತೆ’ ಅಕ್ಷರಶಃ ಜಾತ್ರೆ ಹೊರಟಂತೆ ಕಾಣುತ್ತಿತ್ತು

Back To Top