ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅನುವಾದ

ಅನುವಾದ ಸಂಗಾತಿ

ಸುನೀತ ಸಹಮನಸ್ಕರ ಮದುವೆಗೆ ತಡೆಯ ತರಲಾರೆನಾನು. ಪ್ರೀತಿಯದು ಪ್ರೀತಿಯಲ್ಲ ಕಂಡಂತೆಬದಲಾದ ಪರಿಸರವ ತಾನೂ ಬದಲುತ್ತಲಿರೆ,ಅಥವಾ ಪ್ರೇಮಿ ನಿಲುವಲ್ಲಿ ಪಲ್ಟಿಯಾದಂತೆ:ಇಲ್ಲವೇ ಇಲ್ಲ! ಅದೊಂದು ಸದಾಸ್ಥಿರ ಚಿನ್ಹೆಬಿರುಗಾಳಿಯೆದುರಿಗೂ ಕಂಪಿಸದೆ ನಿಲುವದು.ಅಲೆವ ಹಡಗುಗಳಿಗೆಲ್ಲ ಅದುವೆ ಸ್ಥಾಯಿ ಚುಕ್ಕೆದೂರ ತಿಳಿದರೂ ಅದರ ಬೆಲೆ ಅರಿವ ಮೀರಿದ್ದುಪ್ರೀತಿಯಲ್ಲ ಕಾಲನ ಗುಲಾಮ, ಸುಂದರಾಂಗಗಳುಇವೆ ಅವನ ಡೊಂಕು ಕುಡುಗೋಲಿನ ಅಂಕೆಯಲಿಪ್ರೀತಿಯ ಬದಲಿಸದು ಅವನ ಕ್ಷಣಿಕ ತಾಸು ವಾರಗಳುನಾಶದಂಚಿನವರೆಗೂ ತಾಳುವುದು ಕೆಚ್ಚಿನಲಿ.ರುಜುಮಾಡಿ ತೋರಿದರೆ ನನ್ನೀ ಮಾತು ತರವಲ್ಲನಾನು ಕವಿಯೇ ಅಲ್ಲ, ಪ್ರೇಮಿಯೂ ಎಲ್ಲಿಲ್ಲ. ***** Let me not to the marriage of true mindsAdmit impediments. Love is not loveWhich alters when it alteration finds,Or bends with the remover to remove.O no! it is an ever-fixed markThat looks on tempests and is never shaken;It is the star to every wand’ring bark,Whose worth’s unknown, although his height be taken.Love’s not Time’s fool, though rosy lips and cheeksWithin his bending sickle’s compass come;Love alters not with his brief hours and weeks,But bears it out even to the edge of doom.If this be error and upon me prov’d,I never writ, nor no man ever lov’d. ******** ಮೂಲ: ವಿಲಿಯಂ ಶೇಕ್ಸ್ ಪಿಯರ್ ಕನ್ನಡಕ್ಕೆ: ಕಮಲಾಕರ ಕಡವೆ

ಅನುವಾದ ಸಂಗಾತಿ Read Post »

ಇತರೆ

ಬದುಕು

ಬದುಕು ತಂತಿಯ ಆಟ ಡಾ.ಗೋವಿಂದ ಹೆಗಡೆ ಮೊನ್ನೆ ೧೧ರಂದು ಅಪರಾತ್ರಿಯಲ್ಲಿ ಬೇಲೂರು ತಲುಪಿದ್ದು. ನಿನ್ನೆ ಬೆಳಿಗ್ಗೆ (೧೨/೧/೨೦) ಚೆನ್ನಕೇಶವನ ದರ್ಶನ ಮುಗಿಸಿ ಚಪ್ಪಲಿ ಸ್ಟ್ಯಾಂಡ್ ಗೆ ತೆರಳಿದೆ. ನಾಲ್ಕು ಹೆಜ್ಜೆ ಗಳ ದೂರದಲ್ಲಿ ಆ ವೃದ್ಧರು ಕೂತಿದ್ದರು. ಕೈಯಲ್ಲಿ ಮೇಲೆ ತೋರಿಸಿದ ಚಿತ್ರದ ತಂತಿಗಳ ಗೊಂಚಲು ‌‌. “ಯಜಮಾನರೇ ಏನಿದು” ಅಂದೆ. ಇವು ಪಜಲ್ಸ್ ಅಂದರು. ತಮ್ಮ ಕೈಯಲ್ಲಿ ಬಿಡಿಯಾಗಿ ಇರಿಸಿಕೊಂಡಿದ್ದ ತಂತಿಯ ಆಟಿಕೆಯನ್ನು ತೋರಿಸಿ “ನೋಡಿ ಈ ರಿಂಗ್ ಇದೆಯಲ್ಲ, ಇದನ್ನು ಹೊರತೆಗೆಯಬೇಕು” ಅಂತ ತೋರಿಸಿದರು. ಕುತೂಹಲದಿಂದ ಕೈಯಲ್ಲಿ ತೆಗೆದುಕೊಂಡು ನೋಡಿದೆ. ನಮ್ಮ ಬುದ್ಧಿಶಕ್ತಿಯನ್ನು ಕೆಣಕುವ ಸಾಧನಗಳು ಅವು. “ಅಜ್ಜಾ, ನೀವು ತಂದು ಮಾರತೀರಾ ಅಥವಾ ನೀವೇ ತಯಾರು ಮಾಡ್ತೀರಾ?” ಕೇಳಿದೆ.”ನಾನೇ ತಯಾರು ಮಾಡೋದು, ನಾನು ಫಜಲ್ ಮೇಕರ್” ಎಂದು ಉತ್ತರಿಸಿದರು. ಈಗ ಅವರನ್ನು ಮತ್ತಷ್ಟು ಗಮನಿಸಿದೆ. ಹಳೆಯದಾದರೂ ಶುಭ್ರವಾಗಿದ್ದ ಬಟ್ಟೆಗಳ, ಮಿಂಚು ಕಣ್ಣುಗಳ, ಎಪ್ಪತ್ತರ ಆಸುಪಾಸಿನ ವಯಸ್ಸಿನ ಈ ವೃದ್ಧರು ಜೀವನೋಪಾಯಕ್ಕಾಗಿ ಈ ಪಜಲ್ ಗಳನ್ನು ತಯಾರಿಸಿ ಹೀಗೆ ದೇಗುಲದ ಎದುರು ಬಿಸಿಲಿನಲ್ಲಿ ಕೂತು ಮಾರುವ ದೃಶ್ಯ… ಕರುಳು ಹಿಂಡಿತು. ಪ್ರಾಯಶಃ ಹೆಚ್ಚೇನೂ ಓದಿರದ ಅವರ ಬುದ್ಧಿಶಕ್ತಿ,ಕೌಶಲಗಳ ಬಗ್ಗೆ ಮೆಚ್ಚುಗೆ ಕೂಡ. “ಅಜ್ಜಾ, ಹೇಗೆ ಇವು” ಅಂದೆ. “ಒಂದಕ್ಕೆ ಇಪ್ಪತ್ತು ರೂಪಾಯಿ. ಹತ್ತರ ಗೊಂಚಲಿಗೆ ನೂರೈವತ್ತು” ಎಂದರು. ಆ ಗೊಂಚಲಿನ ಚಿತ್ರ ಇದು. ಬೇಲೂರಿಗೆ ಹೋದರೆ ನೀವು, ದೇಗುಲದ ಚಪ್ಪಲಿ ಸ್ಟ್ಯಾಂಡ್ ಬಳಿ ಅವರು ಸಿಕ್ಕರೂ ಸಿಗಬಹುದು. ಇಲ್ಲವೇ ಸ್ಟ್ಯಾಂಡ್ ನಲ್ಲಿನ ಅಶೋಕ್ ಅವರನ್ನು ಕೇಳಿ. ಅವರು ಕೃಷ್ಣಪ್ಪ,ಫಜಲ್ ಮೇಕರ್. ಅವರ ಬಳಿ ಫಜಲ್ ಕೊಂಡು ತನ್ನಿ. ನಿಮ್ಮ ಬುದ್ಧಿಶಕ್ತಿಯನ್ನು ಪರೀಕ್ಷಿಸಿಕೊಳ್ಳಿ. ಜೊತೆಗೆ ಈ ವಯಸ್ಸಿನಲ್ಲೂ ಸಕ್ರಿಯರಾಗಿರುವ ಅವರ ಕಾಯಕ ನಿಷ್ಠೆಗೆ,ಕೌಶಲಕ್ಕೆ, ನಿಮ್ಮದೂ ಒಂದು ಸೆಲ್ಯೂಟ್ ಇರಲಿ. ******* ಚಿತ್ರ-ಬರಹ : ಗೋವಿಂದ ಹೆಗಡೆ

ಬದುಕು Read Post »

ಕಾವ್ಯಯಾನ

ಕಾವ್ಯಯಾನ

ರಥ ಸಪ್ತಮಿ ಹೊಸ ಪಥದಿ ಮೂಡಿ ಬಂದ ಮಂಜಿನ ತೆರೆ ಸರಿಸಿ ನಕ್ಕಳಿವಳು ಎಳ್ಳು ಬೆಲ್ಲವ ನೀಡಿ ‘ಒಳ್ಳೆಯ ಮಾತಾಡು’ಅಂದಳು ಸೂರ್ಯ ನಕ್ಕಿದ್ದುಂಟೇ! ಸಿಡಿ ಮಿಡಿ ಅನ್ನುತ್ತಲೇ ಬಿಸಿ ತೋಳುಗಳ ಬಳಸಿ ಅಪ್ಪಿಕೊಂಡ. ******** ಪ್ರೇಮಲೀಲಾ ಕಲ್ಕೆರೆ

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಸಂಕ್ರಾಂತಿ

ಪರಿವರ್ತನೆಯ ಪರ್ವಕಾಲ  ಅವ್ಯಕ್ತ ಅನಂತ ಆಗಸದಿ ಸ್ವಚ್ಛಂದ ಕ್ರಮಿಸುವನು, ಆದಿತ್ಯ ಸ್ನೇಹರಾಶಿಗಳ ಮನೆಯಿಂದ ಮನೆಗೆ, ಧನುವಿಗೆ ಕೈಬೀಸಿ ಮಕರನಿಗೆ ಕೈಚಾಚುತಲಿ, ಕಾಯದ ನಾಡಿಗಳಿಗೆ ಉತ್ತರಾಯಣಾಗಮನದ ಸಂಭ್ರಮ… ಜೀವಲೋಕದ ದಿನಕರನ ಕಣಕಣದ ಆಟದ ಪರಿಯೋ ! ರಾತ್ರಿ ಮಾಗಿ ಹಗಲು ಹಿಗ್ಗಿ, ವಿರಸ ಕಳೆದು ಸರಸ ಬೆಳೆದು, ಶೀತ ಕರಗಿ ಶಾಖವರಳಿ, ಬಂಜೆ ಬಾಡಿ ಭೂ ರಮೆಯಾಗಿರಲು, ರವಿತೇಜನ ತಂಪಿಗೆ ಹಬ್ಬಿತೆಲ್ಲೆಡೆ ಸಂಕ್ರಮಣದ ಸಡಗರ… ಸ್ವಾಗತಿಸುವ ಸಂಭ್ರಮದಿ ಸಂತಸವ ಹಂಚುತಲಿ, ಎಳ್ಳು ಬೆಲ್ಲ ಕಡಲೆ ಕೊಬ್ಬರಿ ಕಬ್ಬು ಬಾಳೆ ಅಚ್ಚು ಮೆಚ್ಚು, ವೃದ್ಧಿಸಲು ನಾಲಿಗೆಗೆ ಸವಿರುಚಿ ಆರೋಗ್ಯದ ಅಭಿರುಚಿ, ಮುತ್ತಿನ ಮಾತುಗಳು ಮಾಗಿಸುತಲಿ ಮನದ ದುಗುಡವ… ಪಂಜಾಬಲಿ ಲೋರಿ, ಆಂದ್ರದ ಭೋಗಿ, ತಮಿಳರ ಪೊಂಗಲ್, ಅಸ್ಸಾಮಿನ ಮಾಗಬಿಹು, ಝಾರ್ಖಂಡಲಿ ಸಂಕ್ರಾತ್, ಉತ್ತರಪ್ರದೇಶದ ಕಿಚರಿ, ಗುಜರಾತಿಯರ ಉತ್ತರಾಯಣ್, ರಾಜಸ್ಥಾನಿಯರಿಗೆ ಪಟದ ಹಬ್ಬ, ಕನ್ನಡಿಗರಿಗೆ ಸಂಕ್ರಮಣದ ಹಬ್ಬ. ಬನ್ನಿ ಎಲ್ಲರೂ ಒಂದುಗೂಡಿ ಎಳ್ಳು ಬೆಲ್ಲ ಹುಗ್ಗಿಯ ಹಂಚಿ, ಸದ್ಭಾವನೆಯ ಅಮೃತವ ಲೋಕದೆಲ್ಲೆಡೆ ಹರಡುವ, ಒಳಿತಿನ ಪಥದಲಿ ಶುಭವ ಅರಸುತ ಹಾರೈಸುವ, ಸಾಧನೆ ಸಹನೆ ಸರಸ ಸಾಮರಸ್ಯದ ಬಾಂಧವ್ಯ ಮೆರೆಯುವ… ********

ಕಾವ್ಯಸಂಕ್ರಾಂತಿ Read Post »

ಕಾವ್ಯಯಾನ

ಕಾವ್ಯಸಂಕ್ರಾಂತಿ

ಸಂಕ್ರಾಂತಿ ಪ್ರಮಿಳಾ ಎಸ್.ಪಿ. ಪಥ ಬದಲಿಸುವ ನೇಸರನನ್ನು ಶರಶೆಯ್ಯಯ ಮೇಲೆ ಮಲಗಿ ಕಾದಿದ್ದನಂತೆ ಗಾಂಗೇಯ…. ಪುಣ್ಯಕಾಲಕ್ಕಾಗಿ! ಪೃಥ್ವಿಯ ತಿರುಗುವಿಕೆಯಲಿ ದಿನಕರನ ಮೇಲಾಟದಲಿ ಋತುಗಳ ಓಡಾಟದಲಿ ಇಳೆಯ ಜೀವಿಗಳ ಹೊಸ ವರುಷದ ಹುರುಪಿನಲಿ ವರುಷಕ್ಕೊಮ್ಮೆ ಬರುವುದೇ ಸಂಕ್ರಾಂತಿ ಉಳುವ ಯೋಗಿಯು ಬೆಳೆದ ಹುಲುಸಾದ ಫಸಲು ಮನ ತುಂಬಿ ಮನೆ ತುಂಬುವ ತವಕದಲಿರೆ ದುಡಿದ ದನಕರುಗಳ ಮಜ್ಜನಕ್ಕಿಳಿಸಿ ಮೈದಡವಿ ಹಿಗ್ಗು ತರುವುದೇ ಸಂಕ್ರಾಂತಿ ಕುಗ್ಗಿದ ಕೊರಗಿದ ಅಹಂ ಒಳಗೆ ಬೀಗಿದ ಮನಗಳು ಎಳ್ಳು ಬೆಲ್ಲ ನೀಡಿ-ಪಡೆದು ಹಗುರಾಗುವ ಘಳಿಗೆಯೇ ಸಂಕ್ರಾಂತಿ ಮೇಲೇರಿದವ ಕೆಳಗಿಳಿಯಲೇ ಬೇಕೆಂಬುದ ಆಡದೇ ತೋರಿಸುವ ಉದಯನು ತಂಪುಣಿಸುವ ಗಾಳಿ ನಿಲ್ಲಿಸಿ ಬಿರುಬಿಸಿಲಿಗೆ ಮುನ್ನುಡಿ ಬರೆಯುವ ದಿನವೇ ಸಂಕ್ರಾಂತಿ. *********

ಕಾವ್ಯಸಂಕ್ರಾಂತಿ Read Post »

ಕಾವ್ಯಯಾನ

ಕಾವ್ಯಸಂಕ್ರಾಂತಿ

ಸುಗ್ಗಿಯ ಸಂಭ್ರಮ ರತ್ನಾ ಬಡವನಹಳ್ಳಿ ಬಂದಾನೋ ಭಾಸ್ಕರ ಬೆಳ್ಳಿಯಾ ರಥವೇರಿ ಬುವಿಗೆ ಚೆಲ್ಲುತ ಬೆಳಕ ಹೊನ್ನಕಿರಣಗಳ ಕಾಂತಿ ದಿಕ್ಕು ಬದಲಿಸು ದೆಸೆಯ ತಿರುಗಿಸುತ ಸವಾರಿ ತಂದು ಧರೆಯಲಿ ಮಕರ ಸಂಕ್ರಾಂತಿಯ ಸಂಭ್ರಮ ಊರ ಬಾಗಿಲಿಗೆ ಹಸಿರು ತೋರಣವ ಕಟ್ಟಿ ತಲೆಗೊಂದು ಚೌಕದಾ ಪೇಟವಾ ಧರಿಸಿ ಎಳ್ಳು,ಬೆಲ್ಲ,ಕೊಬ್ಬರಿ ಕಬ್ಬಿನ ಸವಿಯ ಸವಿಯುತ ಬೆಳೆದ ಧಾನ್ಯಗಳ ರಾಶಿಯ ಮಾಡುವ ಸಂಭ್ರಮ ಎತ್ತುಗಳ ಅಲಂಕರಿಸಿ ಮೆರವಣಿಗೆ ಮಾಡುತಾ ಸುಗ್ಗಿಯ ಸಡಗರದಿ ಹುಗ್ಗಿಯನು ತಿನ್ನುತಾ ಕುಣಿ ಕುಣಿದು ನಲಿ ನಲಿದು ಹೆಜ್ಜೆ ಹಾಕುತ ಆಚರಿಸಿ ಹಬ್ಬದಾ ಸಂಭ್ರಮ ವಕ್ಕಲು ಮಕ್ಕಳಿಗೆ ವರುಷವೆಲ್ಲ ದುಡಿದ ದಣಿವು ಒಳ್ಳೆಯ ಫಸಲು ಬಂದರೆ ಜೀವಕೆ ಗೆಲುವು ತಂದಿತೋ ಎಲ್ಲರ ಮನಸಿಗೂ ಚೈತನ್ಯದ ನಲಿವು ನಗುತ ಬೆರೆತ ಊರಿನ ಜನರ ಕೊನೆಯಿರದ ಸಂಭ್ರಮ *******

ಕಾವ್ಯಸಂಕ್ರಾಂತಿ Read Post »

ಕಾವ್ಯಯಾನ

ಕಾವ್ಯಸಂಕ್ರಾಂತಿ

ಹಳ್ಳಿಯ ಸಂಕ್ರಾಂತಿ ಸಂಭ್ರಮ ಸುಜಾತ ರವೀಶ್ ಹಬ್ಬಿದ ಮಬ್ಬು ಕಾವಳ ಹರ್ಯೋ ಹೊತ್ತು ನೇಸರ ತನ್ನ ರಥ್ವಾ ಹೊರಳ್ಸೋ ಹೊತ್ತು ಆರಂಬದ ಕೆಲ್ಸ ಮುಗಿದು ಇನ್ನ ಸ್ವಲ್ಪ ಪುರುಸೊತ್ತು ಪಟ್ಟ ಕಷ್ಟಕ್ಕೆ ಪ್ರತಿಫಲ ಎಣಿಸೋ ಹೊತ್ತು . ಭೂಮ್ತಾಯಿ ನಮ್ನೆಲ್ಲಾ ಹರಸ್ತಾ ನಿಂತವಳೇ ಕಾಳ್ಕಡ್ಡಿ ರೂಪ್ದಾಗೆ ಕಣಜಕ್ಕೆ ಬರ್ತೌಳೆ ಕಣದಾಗೆ ರಾಸಿ ರಾಸಿ ತುಂಬೈತೆ ನೆಲ್ಲು ಆಳೆತ್ತರ ಪೇರ್ಸೈತೆ ಮೇವಿಗೆ ಒಣಹುಲ್ಲು . ಬನ್ನಿ ಎಲ್ಲ ಸಂತೋಸ್ವಾಗಿ ಹಬ್ಬ ಮಾಡೋಣ ಹಸಿರು ತಂದು ತಲ್ಬಾಗ್ಲಿಗೆ ತೋರ್ಣಾವಾ ಕಟ್ಟೋಣ ತಲೆದೂಗಿ ಆಡ್ತ್ಯಾವೆ ತೆಂಗು ಕಂಗು ಬಾಳೆ ತನ್ನಿ ಕಲಸ ಕಟ್ಟೋಕೆ ಬಿರ್ನೆ ಒಂದು ಹೊಂಬಾಳೆ. ಕೇರಿ ಕೇರೀನಾಗೆ ಅರಳಿ ನಿಂತ್ಯಾವೆ ರಂಗೋಲಿ ಹೆಂಗೇಳೇರು ಹಾಕವ್ರೆ ಒಬ್ರಿಗೊಬ್ರು ಪೈಪೋಟೀಲಿ ಚುಕ್ಕಿ ಎಳೆ ಹೂಗೋಳು ಸೇರಿ ಆಗವೆ ಚಿತ್ತಾರ ಒಡ್ಲಾಗೆ ರಂಗು ತುಂಬಿಸ್ಕೊಂಡೂ ಮಾಡ್ತಿವೆ ವಯ್ಯಾರ. ಹಾದಿಬೀದೀ ಪೂರಾ ಹೂರ್ಣದ ಹೋಳ್ಗೆ ಘಮಲೂ ಮೈಮನ ಆವರಿಸೈತೆ ಹಿಗ್ಗಿನಾ ಅಮಲೂ ಬೀಗರು ಬಿಜ್ಜರು ಭಾವ್ನೆಂಟ್ರು ಮನೇಕ್ ಬಂದಿರಲು ನಗೆಸಾರಕ್ಕೇನ್ ಕಮ್ಮಿ ಇಲ್ಲˌ ಮಾಡ್ತೌವ್ರೆ ಕುಸಾಲು. ಒಸ್ಬಟ್ಟೆ ಅಲಂಕಾರ ಹುಡ್ಗೀರ್ ಓಡಾಟ ಸರಭರ ಗಂಡೈಕ್ಳ ಎದೇಲಿ ಏನೋ ಮಿಂಚು ಸಂಚಾರ ಎಳ್ಳು ಬೀರೋಕ್ ಹೋಗೋರ್ನ ನೋಡೋದೇ ಹಬ್ಬ ದಿನಾ ದಿನಾ ಸಿಕ್ತಾದಾ ಕಣ್ಗೋಳ್ಗಿಂತಾ ಹಬ್ಬಾ. ಎತ್ತು ಗಿತ್ತು ರಾಸ್ಗೋಳಿಗೆ ಮಾಡಿಸ್ಬಿಟ್ಟು ಮಜ್ಜನ ಟೇಪು ರಿಬ್ಬನ್ ಸುತ್ತಿ ಮಾಡ್ತಾರಲಂಕಾರಾವಾ ಕೊಂಡ ಹಾಕಿ ಕಿಚ್ಚು ಹಾಯ್ಸಿ ಓಡ್ಸೋದ ನೋಡಿ ಬಿಟ್ಟೋಗ್ತೈತೆ ಕೆಟ್ ದೃಸ್ಟಿ ಇನ್ನೂ ಏನೇನೋ ಹಾವ್ಳಿ. ವರ್ಸಪೂರಾ ಜಂಜಡದಿಂದ ಖುಸಿ ಕೋಡೋದಿದು ರೈತಾಪಿ ಜನಗೋಳ ಅಚ್ಮೆಚ್ಚಿನ್ ಅಬ್ಬಾ ಇದು ಬನ್ನಿ ಎಲ್ಲಾ ಮಾಡೋಣ್ಕಂತೆ ಸಡ್ಗರದಾ ಸಂಕ್ರಾಂತಿ ಕೊಚ್ಚಿ ಓಗ್ಲಿ ರೋಸ ದ್ವೇಸ ಸಾಸ್ವತ್ವಾಗ್ಲಿ ಪ್ರೀತಿ. ****************************

ಕಾವ್ಯಸಂಕ್ರಾಂತಿ Read Post »

ಕಾವ್ಯಯಾನ

ಕಾವ್ಯಸಂಕ್ರಾಂತಿ

ಗಝಲ್ ಸಂಕ್ರಾಂತಿ ವಿಶೇಷ ಎ.ಹೇಮಗಂಗಾ ಹೊಸ ವರುಷದೊಡೆ ಹರುಷವಿನ್ನೂ ಮೂಡಲಿಲ್ಲ ಬಂದರೇನು ಸಂಕ್ರಾಂತಿ? ದುರ್ದಿನಗಳ ಕರಾಳ ನೆನಪಿನ್ನೂ ಮಾಸಲಿಲ್ಲ ಬಂದರೇನು ಸಂಕ್ರಾಂತಿ? ದಕ್ಷಿಣದಿಂದ ಉತ್ತರದೆಡೆಗೆ ನಿಶ್ಚಿತ ಪಥದಲಿ ಸೂರ್ಯನ ಚಲನ ಸ್ವಾರ್ಥದ ಪಥವ ಮನುಜನಿನ್ನೂ ಬದಲಿಸಲಿಲ್ಲ ಬಂದರೇನು ಸಂಕ್ರಾಂತಿ ? ಯಾಂತ್ರಿಕ ಬದುಕಲ್ಲಿ ತುಂಬುವುದು ಸುಗ್ಗಿಯ ಸಂಭ್ರಮ ಅಲ್ಪಕಾಲ ಬಡವನೊಡಲ ಬಡಬಾಗ್ನಿಯಿನ್ನೂ ತಣಿಯಲಿಲ್ಲ ಬಂದರೇನು ಸಂಕ್ರಾಂತಿ? ಸೃಷ್ಟಿಕರ್ತನ ದೃಷ್ಟಿಯಲಿ ಯಾರು ಮೇಲು, ಯಾರು ಕೀಳು ಇಲ್ಲಿ? ಅಸಮಾನತೆಯ ಗೋಡೆಯನಿನ್ನೂ ಕೆಡವಲಿಲ್ಲ ಬಂದರೇನು ಸಂಕ್ರಾಂತಿ ? ಮಂದಿರ, ಮಸೀದಿ, ಚರ್ಚುಗಳ ದೇವನೊಬ್ಬನೇ ನಾಮಗಳು ಹಲವು ಜಾತಿ, ಮತದ ಭೇದ ಭಾವವಿನ್ನೂ ಅಳಿಯಲಿಲ್ಲ ಬಂದರೇನು ಸಂಕ್ರಾಂತಿ? ಕಾಮಪಿಪಾಸುಗಳ ಕಿಚ್ಚಿಗೆ ಬಲಿಯಾದ ಮುಗ್ಧ ಹೆಣ್ಣು ಜೀವಗಳೆಷ್ಟೋ ! ರಣಹದ್ದುಗಳ ಕೊರಳನ್ನಿನ್ನೂ ಮುರಿಯಲಿಲ್ಲ ಬಂದರೇನು ಸಂಕ್ರಾಂತಿ ? ಪರರ ಸಮಾಧಿಯ ಮೇಲೆ ಬದುಕು ಕಟ್ಟಿಕೊಳ್ಳುವ ಹುನ್ನಾರವೇಕೆ ? ಮಾನವತೆ ಸತ್ತ ಸೂತಕವಿನ್ನೂ ಮುಗಿಯಲಿಲ್ಲ ಬಂದರೇನು ಸಂಕ್ರಾಂತಿ ? ಹುಟ್ಟು ಸಾವಿನ ನಡುವಿನ ಪಯಣಕೆ ಕೊನೆ ಇಹುದು ಕಾಲನ ಕರೆಯಲ್ಲಿ ನಿತ್ಯಸತ್ಯವಿದು ದುರುಳರಿಗಿನ್ನೂ ಅರಿವಾಗಲಿಲ್ಲ ಬಂದರೇನು ಸಂಕ್ರಾಂತಿ ? ******

ಕಾವ್ಯಸಂಕ್ರಾಂತಿ Read Post »

You cannot copy content of this page

Scroll to Top