ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಜೀವರಾಮ ಅಶ್ವಥ್ ವಾರಕ್ಕೆ ಮೂರುದಿನ ಮಡಿಯಾಗಿ , ಮಂಡಿನೋವು ತೀರಲೆಂದು ಕೋರಿಕೊಂಡಳು ಮಂಡಿಯೂರಿ ಪರಿಪರಿ ಬೇಡಿಕೊಂಡಳು ಕಡೆಗೆ ಅಮ್ಮ ತೀರಿಕೊಂಡಳು! ಬೇಡುವ ಆರ್ತನಾದ ಕೇಳಿ ನಿಂತ ಹುಡುಗ, ಬಿಕ್ಕಳಿಸೆ ಅಮ್ಮನ ತಪಸ್ಸಿಗೆ ಭಂಗವೆಂದು ಬಿಸಿಯುಸಿರು ಬಾಯೊಳಗೇ ಬಿಗಿಹಿಡಿದಿದ್ದು ದೂರದೂರಲಿ ಬಿಕ್ಕಳಿಸಿದ, ಅವಳಿಲ್ಲವೆಂದು. ಫಲಿಸಿಬಿಟ್ಟಿತೇ ಅಮ್ಮನ ಸುದೀರ್ಘ ಪ್ರಾರ್ಥನೆ? ಅಮ್ಮನೂ ಇಲ್ಲದ ಮೇಲೆ ಮಂಡಿನೋವೂ ಇಲ್ಲ. ಹಾಗೆಂದುಕೊಂಡು ಹುಡುಗ ಸುಮ್ಮನಾಗಲಿಲ್ಲ ನೋವು ತೀರಿಸುವ ಯೋಚನೆಯ ಬಿಡಲಿಲ್ಲ ಹುಡುಗನ ಇನ್ನಿಲ್ಲದೆ ಬಾಧಿಸಿ ಅಮ್ಮನ ನೋವು, ಅವಳ ಪ್ರಾರ್ಥನೆಯ ನೆನಪೆಲ್ಲವ ಬಿಗಿಹಿಡಿದ ಆಳ ಅಧ್ಯಯನ ಮಾಡಿಕೊಂಡು ತಜ್ಞನಾದ ನೋವು ನಿವಾರಿಸುವ ನಾರಾಯಣ ತಾನಾದ! ಪ್ರಾರ್ಥನೆಯ ಹರಿವಿನ ಬಗ್ಗೆ ಅವನಿಗೆ ಕುತೂಹಲ, ಕೋರಿಕೆಯ ಕಂಠವ ಆಲಿಸುವ ಕಿವಿಗಳಿರಬೇಕೆಂದು ಬೇಡುವುದಕೆ ಬೆಲೆ ಮಾನವೀಯತೆ ಒಂದೇಯೆಂದು ಬಂಡೆಗೂ ಜೀವವೆರೆಯಲು ಜೀವರಾಮನೇ ಬೇಕೆಂದು. ********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಮೂಖವೇದನೆ ಪ್ಯಾರಿಸುತ ಮತ್ತದೇ ಮಾತು ನನ್ನನ್ನು ಮೂಗನೆಂದೇನಿಸಿದೆ ನಿನ್ನ ಕಾಲಗೆಜ್ಜೆ ಮೌನ ತಾಳಿರುವಾಗ ಪಿಸುಮಾತಿನ ಧ್ವನಿಯು ನನ್ನೆದೆಯ ಇಣುಕದಿರುವಾಗ ಗಾಳಿಯೊಳಗೆ ಪ್ರೀತಿಗಂಧವಿಲ್ಲ ಮಾತಿನ ನಡುವೆ ಪ್ರೇಮ ಸೆಳೆತವಿಲ್ಲ ಕಣ್ಣೋಟದಲ್ಲಿ ಹರಿತಮೋಹವಿಲ್ಲ ಹೂವಿನ ಸುತ್ತ ಮಕರಂಧ ಹೀರುವ ದುಂಬಿಯಂತೆ ಅಲೆಯುತ್ತಿವನನ್ನು ಮತ್ತದೇ ಮಾತು ಮೂಗನಾಗಿಸಿದೆ ಅದೆಲ್ಲವೂ ಇಲ್ಲದ ಮೇಲೆ ಮೂಗನಾಗದೆ ಮಾತಿನಿಂದ ಹೇಗೆ ಸೆಳೆಯಲಿ ನೀ ಉಟ್ಟ ಸೀರೆ ಸೆರಗಿನ ಅಂಚಿನಲ್ಲಿದ್ದ ನನ್ನೆಲ್ಲ ಕನಸುಗಳ ಚಿತ್ತಾರಗಳು ಅವಿತುಕೊಂಡಿವೆ ಮುಸ್ಸಂಜೆಯಲಿ ಮಿಂಚುಹುಳುವಿನಂತೆ ಮಿಂಚುತಿದ್ದ ನಿನ್ನ ಚಲುವೆಲ್ಲ ಸಪ್ಪೆಯಾಗಿದೆ ಈ ಪುಟ್ಟ ಹೃದಯದೊಳಗಿದ್ದ ನಿನ್ನ ಮಧುರದನಿಯ ಹರ್ಷೋಘಾರವೂ ನನ್ನಂತೆ ನಿಶ್ಚಲವಾಗಿದೆ ಇಂದು ಅದೆಲ್ಲವೂ ಸಹಜ ದೂರದಿಂದ ಅಣಿಕಿಸುವಂತೆ ಮಾರ್ಪಟ್ಟಿವೆ ಅಥವಾ… ಮಾರ್ಪಡುವಂತೆ ನೀ ಪ್ರೇರಿಪಿಸಿದೆ…! **********************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯ ಯಾನ

ಆದೇ ಅಪ್ಪನಂತೆ ಏಕೆ? ಜಿ.ಲೋಕೇಶ್ ನನ್ನಪ್ಪಂಥನಾಗಲು ನನಗಿಷ್ಟೂ ಇಷ್ಟವಿರಲಿಲ್ಲ ಮೌನವಾಗಿರಲು ಬಯಸುತ್ತಿದ್ದ ನನಗೆ ಹೇಳಿದ್ದೆ ಹೇಳುತ್ತಿದ್ದ ಅವನ ಮಾತುಗಳು ಸದಾ ಅವೇ ಅಕ್ಷತೆಯ ಮಂತ್ರಗಳು ಶಾಲೆಯಲ್ಲಿ ಮಗುವೊಂದು ಮರೆಯದೇ ಹೇಳುತ್ತಿದ್ದ ರಾಷ್ಟ್ರಗೀತೆಯಂತೆ ಗುಡಿಯ ಕಲ್ಲು ವಿಗ್ರಹ ಕಿವಿಯಿದ್ದರೂ ಕೇಳಿಸಿಕೊಳ್ಳದಂತೆ ನಾನು ನಿಲ್ಲುತ್ತಿದ್ದೆ ತಡೆದು ವಾಕರಿಕೆ, ಬೇಸರಿಕೆ. ಯಾವತ್ತೂ ಪ್ರತಿಕ್ರಯಿಸದೇ ನನ್ನೊಳಗೆ ಸತ್ತೇ ಹೋಗುತ್ತಿದ್ದ ಪ್ರತಿ ಹೇಳಿಕೆ ಇದ್ದಕ್ಕಿದ್ದಂತೆ ಒಂದು ದಿನ ನನ್ನಪ್ಪ ಮಾತುಗಳನ್ನು ಅನಾಥವಾಗಿಸಿ ಹೊರಟುಬಿಟ್ಟ! ಎಂಥಾ ಆಶ್ಚರ್ಯ! ನಾನೀಗ ಸಲುಹುತ್ತಿದ್ದೇನೆ ಅವನದೇ ಮಾತುಗಳನ್ನು ಯಥಾ ಪ್ರಕಾರ! ಅಪ್ಪನಂತಾಗಲು ಒಂದಿಷ್ಟು ಇಷ್ಟವಿಲ್ಲದವನಾಗಿ ಬದುಕಿದ ಮೇಲು ನನ್ನ ಮಕ್ಕಳಿಗೆ ಥೇಟ್ ಅಪ್ಪನಂತೆ ಆಗಿ! **********************************

ಕಾವ್ಯ ಯಾನ Read Post »

ಕಾವ್ಯಯಾನ

ಕಾವ್ಯಯಾನ

ಯಾರು ಯಾರಿಗೆ ರೇಖಾ.ವಿ.ಕಂಪ್ಲಿ ಹೂಳುವ ಭೂಮಿಯನು ಹಾಳು ಮಾಡಿತಾ ಮನೆ ಮಠ ಮಸೀದಿ ಮಂದಿರ ಮಹಾಲ್ಗಳನು ಕಟ್ಟಿದರು….. ಯಾರು ಅವರು ಯಾರು? ಯಾರಿಗೆ ಯಾರು ಅಲ್ಲದ ಮಾನವರು…….. ಜಾಗತೀಕರಣದ ಜಾಗಟೆ ಮೊಳಗಿಸಿ ಜಾಗೃತಿ ಹೆಸರಲಿ ಜನಜೀನವದ ರಸವೀರಿದರು…….. ಯಾರು ಅವರು ಯಾರು? ಯಾರಿಗೆ ಯಾರು ಅಲ್ಲದ ಮಾನವರು…….. ಬಿರುಸು ಮಾತುಗಳ ಹುರುಪು ಹಚ್ಚುತ್ತಾ ತಮ್ಮ ತಮ್ಮ ಬೆಳೆ ಬೆಯಿಸಿಕೊಂಡರು……. ಯಾರು ಅವರು ಯಾರು? ಯಾರಿಗೆ ಯಾರು ಅಲ್ಲದ ಮಾನವರು…….. ರಂಗುರಂಗಿನ ಮಾತಿನಲಿ ಸೆಳೆಯುತ ಚಪಲದ ಉಪಟಳವ ತೀರಿಸಿಕೊಂಡರು…….. ಯಾರು ಅವರು ಯಾರು? ಯಾರಿಗೆ ಯಾರು ಅಲ್ಲದ ಮಾನವರು…….. ಹಣದ ಆಸೆಗೆ ಹೆಣದ ಮೇಲೆಯೂ ಹೆಗ್ಗಿಲ್ಲದೆ ಅತ್ಯಾಚಾರ ಎಸಗಿದರು………… ಯಾರು ಅವರು ಯಾರು? ಯಾರಿಗೆ ಯಾರು ಅಲ್ಲದ ಮಾನವರು…….. **********

ಕಾವ್ಯಯಾನ Read Post »

ಪುಸ್ತಕ ಸಂಗಾತಿ

ಪುಸ್ತಕ ಪರಿಚಯ

ನೂರು ಜನಪದ ಹಾಡುಗಳು ಕೆ.ಶಿವು ಲಕ್ಕಣ್ಣವರ ಬೈಲೂರ ಬಸವಲಿಂಗಯ್ಯನವರ ಸಮೃದ್ಧ ಜನಪದ ಹಾಡಿನ‌ ಕೃತಿಯೇ ‘ನೂರು ಜನಪದ ಹಾಡುಗಳು’‌ ಎಂಬ ಪುಸ್ತಕವು! ಪ್ರಸ್ತುತವಾಗಿ ಈ ‘ನೂರು ಜನಪದ ಹಾಡುಗಳು’ ಕೃತಿಯು ವಿಸ್ತೃತವಾಗಿ ಗರ್ಭಸೇರಲಿದ್ದ ಬೀಸೂಕಲ್ಲಿನ ಪದಗಳು, ಸೋಬಾನೆ ಪದಗಳು, ಜೋಗುಳ ಪದಗಳು, ಚೌಡಿಕೆ ಪದಗಳು, ಕಿನ್ನರಿ ಪದಗಳು, ಹಬ್ಬದ ಹಾಡುಗಳು, ಕೋಲಾಟದ ಪದಗಳು, ಗೀಗೀ ಪದಗಳು, ಹೀಗೆಯೇ ಹತ್ತಾರು ಪ್ರಕಾರಗಳನ್ನು ಒಳಗೊಂಡಿದೆ ಈ ‘ನೂರು ಜನಪದ ಹಾಡುಗಳು’ ಎಂಬ ಕೃತಿಯು… ಒಟ್ಟಾರೆ ಜನಪದ ಹಾಡು ಅಥವಾ ಜಾನಪದವೆಂದರೆ ಹಳ್ಳಿಯ ಜನರ ಸಂಗೀತ, ರೂಪಕ, ಮಣ್ಣಿನ ವಾಸನೆಯ ಬದುಕು. ಹಳ್ಳಿಯ ಜನರು ತಮ್ಮ ದಿನ ನಿತ್ಯ ಕೆಲಸಗಳನ್ನು ಮಾಡುವಾಗ ಹಾಗೂ ತಮ್ಮ ಬಿಡುವಿನ ಸಂದರ್ಭದಲ್ಲಿ ತಮ್ಮದೇ ಪದಗಳಲ್ಲಿ ಹಾಡುಗಳನ್ನು ಕಟ್ಟಿ ಹಾಡುತ್ತಿದ್ದರು ಮತ್ತು ಹಾಡುತ್ತಾರೆ. ಒಬ್ಬ ಮನುಷ್ಯ ಹೀಗೆ ಕಟ್ಟಿ ಹೇಳಿದ ಹಾಡು ಮತ್ತೊಬ್ಬರು ಹೇಳಿಕೊಳ್ಳುತ್ತ ಹೀಗೆಯೇ ಎಲ್ಲ ಜನಪದರ ಬಾಯಿಂದ ಬಾಯಿಗೆ ಹೊರಹೊಮ್ಮುವ ಪದದ ಅಥವಾ ಹಾಡುಗಳನ್ನು ಹಾಡುತ್ತಿದ್ದರು ಮತ್ತು ಇವು ರೋಮಾಂಚಕವೂ ಹೌದು… ಉದಾಹರಣೆಗೆ : ಒಬ್ಬ ತಾಯಿ ತನ್ನ ಮಗು ಮನೆಯಲ್ಲಿ ಓಡಾಡುತ್ತಿದ್ದರೆ ಆಗುವ ಖುಷಿಯನ್ನು ಹಾಡಿನಲ್ಲಿ ಬಣ್ಣಿಸುವ ರೀತಿಯ ಜಾನಪದ ಹಾಡಿನ ರೀತಿಯಲ್ಲಿ ಹೀಗಿದೆ. “ಕೂಸು ಇದ್ದ ಮನೆಗೆ ಬೀಸಣಿಕೆ ಯಾತಕ… ಕೂಸು ಕಂದಯ್ಯ ಒಳ ಹೊರಗ… ಕೂಸು ಕಂದಯ್ಯ ಒಳಹೊರಗ ಆಡಿದರ ಬೀಸಣಿಕೆ ಗಾಳಿ ಸುಳಿದಾವ…“ ಹೀಗೆ ಜನಪದ ಹಾಡು ತನ್ನತನವನ್ನು ಹಿಂದಿನಿಂದಲೂ ಉಳಿಸಿಕೊಳ್ಳುತ್ತಾ ಬಂದಿದೆ. ಹೀಗಿರುವ ಜಾನಪದ ಹಾಡಿಗೆ ವಿಶೇಷ ಸ್ಥಾನ-ಮಾನವನ್ನು ಕೊಡಲಾಗಿದೆ. ಈ ಜನಪದ ಹಾಡುಗಳಿಂದಾಗಿ ಹಳ್ಳಿಯಿಂದ ಹಳ್ಳಿಗೆ, ನಗರದಿಂದ ನಗರಕ್ಕೆ, ಪಟ್ಟಣದಿಂದ ಪಟ್ಟಣಕ್ಕೆ ಜನಪದ ಹಾಡಿನ ಮಹತ್ವವನ್ನು ಜನಪದರು ಪರಿಚಯಿಸಿದ್ದಾರೆ. ಹೀಗೆ ಜನಪದ ಹಾಡುಗಳು ಎಲ್ಲಾ ಕಡೆ ಪರಿಚಯವಾಗಿಬಿಟ್ಟಿದೆ… ಬೈಲೂರ ಬಸವಲಿಂಗಯ್ಯನವರ ‘ನೂರು ಜನಪದ ಹಾಡುಗಳು’ ಎಂಬ ಕೃತಿಯು ಇದನ್ನೇ ಹೇಳುತ್ತದೆ ಮತ್ತು ಕಟ್ಟಿಕೊಡುತ್ತದೆ… ಒಟ್ಟಾರೆ ಜನಪದವೆಂದರೆ ಮನುಷ್ಯ ಬದುಕಿನ ಕ್ರಿಯೆಗಳು, ವಸ್ತುಗಳು, ಮನರಂಜನೆಯ ಸಾಧನಗಳು, ಮನುಷ್ಯನ ಸಂಸ್ಕಾರ, ಆರಾಧನೆ, ನಂಬಿಕೆಗಳು: ಉಡುಪುಗಳು, ಹಬ್ಬ ಹರಿದಿನಗಳು, ಇದೇ ರೀತಿಯಾಗಿ ಒಟ್ಟಾರೆ ಬದುಕಿನ ಸರ್ವ ಲಯಗಳನ್ನು ಒಳಗೊಂಡಿರುವಂತದೇ ಆಗಿದೆ… ಮನುಷ್ಯ ಜೀವಿ ತನಗೆ ಎದುರಾಗುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಜಾನಪದ ಸಾಹಿತ್ಯಕ್ಕೆ ಮೊರೆಹೋಗುತ್ತಾನೆ. ಹೀಗೆಂದು ಸಾರಿಹೇಳುತ್ತದೆ ಬೈಲೂರ ಬಸವಲಿಂಗಯ್ಯ ಹಿರೇಮಠರವರ ಈ ಕೃತಿಯು ‘ನೂರು ಜನಪದ ಹಾಡುಗಳು’ ಎಂಬ ಕೃತಿಯಾಗಿದೆ… ಈಗಂತೂ ಮನುಷ್ಯ ಬಹು ಎತ್ತರಕ್ಕೆ ಬೆಳೆದಿದ್ದಾನೆ. ‘ಸಂಸ್ಕೃತಿ’ ಎಂಬ ಪರಿಕಲ್ಪನೆಯ ಹಿನ್ನೆಲೆಯಲ್ಲಿ ಎಲ್ಲವನ್ನೂ ಸಂಶೋಧನೆಯ ತೆಕ್ಕೆಯಲ್ಲೇ ತಬ್ಬಿಕೊಳ್ಳಲು ಮನುಷ್ಯ ನಿರಂತರವಾಗಿ ಹೋರಾಡುತ್ತಿದ್ದಾನೆ. ಇದರ ಪರಿಣಾಮವಾಗಿ ಇಂದು ಅನೇಕಾನೇಕ ಜ್ಞಾನಶಿಸ್ತುಗಳು ಆವಿಷ್ಕಾರಗಳು ಒಡಮೂಡಿವೆ. ಇಂತಹ ಜ್ಞಾನಶಿಸ್ತುಗಳಲ್ಲಿ ಅಂತರಶಿಸ್ತೀಯ ಅಧ್ಯಯನವೂ ಒಂದು. ಈ ಶಿಸ್ತಿನ ಮೂಲಕ ವಿದ್ವಾಂಸರು ಇತರ ಜ್ಞಾನ ಶಾಖೆಗಳೊಂದಿಗೆ ಜಾನಪದ ಸಾಹಿತ್ಯದ ಅಂತರ್ ಸಂಬಂಧವನ್ನು ಗುರುತಿಸುವ ಸವಾಲುಗಳನ್ನು ಎದುರಿಸುವ ಕಾರ್ಯದಲ್ಲಿ ತೊಡಗಿರುವುದು ಈ ಸಾಹಿತ್ಯದ ಸತ್ವವಾಗಿದೆ. ಜಾನಪದ ಬಿಟ್ಟು ಬದುಕಿಲ್ಲ, ಬದುಕು ಬಿಟ್ಟು ಜಾನಪದವಿಲ್ಲ ಎಂಬುದು ಕಟು ವಾಸ್ತವ. ಈ ಸಾರವನ್ನೇ ಹೇಳುತ್ತದೆ ಬೈಲೂರ ಬಸವಲಿಂಗಯ್ಯನವರ ‘ನೂರು ಜನಪದ ಹಾಡುಗಳು’ ಕೃತಿಯು… ಇಡೀ ವಿಶ್ವವೇ ನಮ್ಮ ದೇಶದತ್ತ ಬೆರೆಗುಗಣ್ಣಿನಿಂದ ನೋಡುವಂತೆ ನಮ್ಮ ದೇಶದಲ್ಲಿ ಜಾನಪದ ಕಲೆಗಳು ಸಮೃದ್ಧವಾಗಿದೆ. ಈಗಾಗಲೇ ಗುರುತಿಸಲ್ಪಟ್ಟ ಜಾನಪದ ಕಲೆ ನೂರಾರು ಮತ್ತು ಸಮೃದ್ಧವಾಗಿವೆ. ಇನ್ನೂ ಗುರುತಿಸಲ್ಪಡಬೇಕಾದ ಕಲೆಗಳು ಸಾವಿರಾರು. ಹೀಗಿರುವುದರಿಂದಲೇ ನಮ್ಮ ಯುವ ಜನರು ಈ ಬಗೆಗೆ ಚಿಂತಿಸಬೇಕಾಗಿದೆ. ಎಲ್ಲ ಜಾನಪದ ಕಲೆಗಳನ್ನು ದಾಖಲಿಸಬೇಕಾಗಿದೆ. ಪ್ರದರ್ಶನ ಕಲೆಗಳನ್ನು ಬದಿಗಿಟ್ಟರೂ ಹಾಡುವ ಸಾಹಿತ್ಯವೇ ಅಪಾರ ಪ್ರಮಾಣದಲ್ಲಿದೆ… ಇಂತಹ ಹಾಡುವ ಸಾಹಿತ್ಯದ ಒಂದಿಷ್ಟನ್ನಾದರೂ ಸಹೃದಯರ ಮನೆ-ಮನಸ್ಸನ್ನು ಮುಟ್ಟಿಸಬೇಕೆಂಬ ಆಸೆಯಿಂದ ಬೈಲೂರ ಬಸವಲಿಂಗಯ್ಯನವರು ತಮ್ಮ ಸಾವಿರಾರು ಜಾನಪದ ಹಾಡುಗಳಲ್ಲಿ ಆಯ್ದ ಪುಸ್ತುಕೆಯೇ ‘ನೂರು ಜನಪದ ಹಾಡುಗಳು’..! ಈ ‘ನೂರು ಜನಪದ ಹಾಡುಗಳು’ ಎಂಬ ಕೃತಿಯನ್ನು ಜಾನಪದ ಸಂಶೋಧನ ಕೇಂದ್ರ ಭೂಷಣ ಪ್ರಕಾಶನ, ಸಪ್ತಾಪುರ, ಧಾರವಾಡ-೧ ಎಂಬ ಪ್ರಕಾಶನ ಹೊರತಂದಿದೆ… ಈ ಪ್ರಕಾಶನದ ನಿರ್ದೇಶಕಿಯಾದ ವಿಶ್ವೇಶ್ವರಿ ಬಸವಲಿಂಗಯ್ಯ ಹಿರೇಮಠರು ಈ ಪುಸ್ತಕೆಯನ್ನು ಹೊರತಂದಿದ್ದಾರೆ… ಸರ್ಕಾರದ ಉದಾಸೀನತೆ, ವಿದ್ವಾಂಸರ ಅದೂರದೃಷ್ಟಿ, ಕಲಾವಿದರ ಅಜ್ಞಾನ ಮತ್ತು ಜನತೆಯ ಅನಾದಾರದ ಕಾರಣವಾಗಿಯೇ ಉತ್ತರ ಕರ್ನಾಟಕದ ಸಮೃದ್ಧ ಜಾನಪದ ಅವಸಾನದಂಚಿನಲ್ಲಿದೆ. ಈ ಅನಾದಾರ ದೂರವಾಗಬೇಕಿದೆ ಎಂದು ಹೇಳಿ ಈ ಬೈಲೂರ ಬಸವಲಿಂಗಯ್ಯ ಹಿರೇಮಠರವರ ‘ನೂರು ಜನಪದ ಹಾಡುಗಳು’ ಬಗೆಗಿನ ನನ್ನ ಮಾತು ಮುಗಿಸುತ್ತೇನೆ..! **********

ಪುಸ್ತಕ ಪರಿಚಯ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಡಾ.ಗೋವಿಂದಹೆಗಡೆ ಪ್ರಾಜ್ಞ ಎಂದುಕೊಂಡವರ ಸೋಗಲಾಡಿತನಕ್ಕೆ ನಗು ಬರುತ್ತದೆ ಬೇಲಿಯ ಮೇಲೆ ಕೂತವರ ದಿವಾಳಿತನಕ್ಕೆ ನಗು ಬರುತ್ತದೆ ಸೂರ್ಯ ಬೆಳಗುವನೆಂದರೆ ಸಾಕ್ಷಿ ಕೇಳುವರು ಇವರು ನೋಡು ತನಗೇ ತಾನು ಹುಸಿಯಾದ ಈ ಅಧಃಪತನಕ್ಕೆ ನಗು ಬರುತ್ತದೆ ರತ್ನದ ಕಾಂತಿಗೆ ಯಾರ ಶಿಫಾರಸಿನ ಹಂಗೇನಿದೆ ಹೇಳು ತಿಳಿದೂ ಬೊಗಳುವವರ ಧಾಡಸೀತನಕ್ಕೆ ನಗು ಬರುತ್ತದೆ ಕಪ್ಪುಕನ್ನಡಕ ಧರಿಸಿದರೆ ಕಣ್ಣನಷ್ಟೇ ಮರೆಸಬಹುದು ಜಗವನ್ನೇ ಯಾಮಾರಿಸುವ ಮಂಕುತನಕ್ಕೆ ನಗು ಬರುತ್ತದೆ “ನಾ ಕಂಡ ಮೊಲಕ್ಕೆ ಮೂರೇ ಕೊಂಬು” ಎಂಥ ವಾದ ‘ಜಂಗಮ’ ಅಡಿಪಾಯವಿಲ್ಲದೇ ಮಹಲೆಬ್ಬಿಸುವ ಜಾಣತನಕ್ಕೆ ನಗು ಬರುತ್ತದೆ *****

ಕಾವ್ಯಯಾನ Read Post »

You cannot copy content of this page

Scroll to Top