ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಶಾಲ್ಮಲೆ ಉಮೇಶ ಮುನವಳ್ಳಿ ನನ್ನ ಹಿತ್ತಲದಲ್ಲಿ ಹುಟ್ಟಿದ ಶಾಲ್ಮಲೆಕೋಟೆ ಕೊತ್ತಲಗಳ ದಾಟಿಕಾಡು ಮೇಡುಗಳ ಮೀಟಿಮಲೆನಾಡಿನಲ್ಲಿ ಮೈದಳೆದಿಲ್ಲವೇ? ಎತ್ತಣ ಬಯಲುಸೀಮೆ,ಎತ್ತಣ ಮಲೆನಾಡು?ಎಲ್ಲೆ ಮೇರೆಗಳ ಮೀರಿ? ಗುಪ್ತಗಾಮಿನಿ, ಗತಿ ಹಿಡಿದು ಸಾಗಿಮತಿಯನು ಪ್ರಜ್ಞೆಯಲಿ ನೀಗಿಮಂಜುಳ ಗಾನದಲಿ ತೇಲಿಸಾಗರ ಸೆರುವ ಕಾತರದಲಿ? ಸೊಕ್ಕಿದ ಸರ್ಪದ ಭರಾಟೆಯ ಹರಿವುಉಕ್ಕಿದ ಕಡಲು, ಮಿಕ್ಕಿದ ಉನ್ಮಾದಮಿಲನದ ಸಾವಧಾನದ ಸುಮೇರು? **************

ಕಾವ್ಯಯಾನ Read Post »

ಕಾವ್ಯಯಾನ

ಗಝಲ್

ಗಝಲ್ ಮರುಳಸಿದ್ದಪ್ಪ ದೊಡ್ಡಮನಿ ಯಾವ ಮಾತಿನ ನೆನಪು ಮರೆತಿಲ್ಲ ಸಾಕಿಎದೆಯಲಿ ತುಂಬಿದ ನೋವು ಕಳೆದಿಲ್ಲ ಸಾಕಿ ಮೌನ ಅನುಭವಿಸಿದ ಯಾತನೆ ಸಾಕಾಗಿದೆಕಾಲನ ಲೀಲೆ ಹೇಳಲು ಏನು ಉಳಿದಿಲ್ಲ ಸಾಕಿ ಕೀವು ತುಂಬಿಕೊಂಡಿದೆ ಹೃದಯದೊಳುಅದನು ಅನುಭವಿಸಲು ಜೀವ ಬೇಕಲ್ಲ ಸಾಕಿ ಹೇಗಾದರೂ ಆಗಲಿ ಸೈರೈಸಿಕೊಂಡು ನಡೆವೆಕೊನೆಗಾಲದ ದಿನಗಳಿಗೆ ಕಾದಿರುವೆನಲ್ಲ ಸಾಕಿ ಚುಚ್ಚು ಮಾತಿಗೆ ಬೆಚ್ಚಿಬೀಳದೆ ಉಳಿದಿರುವೆಮರುಳ ಬದುಕಿರುವ ತನಕ ಮಿಡಿಯಬಲ್ಲ ಸಾಕಿ *********

ಗಝಲ್ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಡಾ.ಗೋವಿಂದ ಹೆಗಡೆ ಮಾಸಿಹೋದ ನಗುವಿಗೇಕೆ ಬಣ್ಣ ಮೆತ್ತುವೆಕರಗಿಹೋದ ನಲಿವಿಗೇಕೆ ಬಣ್ಣ ಮೆತ್ತುವೆ ದಾರಿ ನಡೆ ನಡೆಯುತ್ತ ಸರಿಯಿತು ಕಾಲಕಂದಿಹೋದ ಕೆನ್ನೆಗೇಕೆ ಬಣ್ಣ ಮೆತ್ತುವೆ ಏರುವ ಖುಷಿ ಮುಗಿದು ಇಳಿಜಾರು ಈಗಕಾಂತಿ ಕಳೆದ ಕಣ್ಣಿಗೇಕೆ ಬಣ್ಣ ಮೆತ್ತುವೆ ಯಾವಾಗ ಅದು ಎದೆಯಲ್ಲಿ ಬೆಳಕಾಡಿದ್ದುಅರ್ಥ ಕಳೆದ ಮಾತಿಗೇಕೆ ಬಣ್ಣ ಮೆತ್ತುವೆ ಮಾತು ಮನಸು ಕೃತಿಗಳಲ್ಲಿ ಮೇಳವೆಲ್ಲಿದೆಋಜುತೆ ಮರೆತ ನಡತೆಗೇಕೆ ಬಣ್ಣ ಮೆತ್ತುವೆ ಹೆಳವ ಹೆಜ್ಜೆಗಳಲಿ ಈಗ ಸಾಗಿದೆ ಪಯಣರೆಕ್ಕೆ ಸವೆದ ಹಕ್ಕಿಗೇಕೆ ಬಣ್ಣ ಮೆತ್ತುವೆ ಯಾವ ರಂಗು ಬಳಿದರೇನು ‘ಜಂಗಮ’ನಿಗೆಕನಸು ಹರಿದ ಬದುಕಿಗೇಕೆ ಬಣ್ಣ ಮೆತ್ತುವೆ ******

ಗಝಲ್ Read Post »

ಕಾವ್ಯಯಾನ

ಕಾವ್ಯಯಾನ

ಮಳೆ ಒಲವು ವಸುಂಧರಾ ಕದಲೂರು ಸಂಜೆ ಮಳೆ, ಹನಿಗಳ ಜೊತೆನೆನಪುಗಳನು ಇಳಿಸಿತುತೋಯ್ದ ಮನದಲಿ ಬಚ್ಚಿಟ್ಟನೆನಪುಗಳ ಮೊಗ್ಗು ಅಂತೆಮಣ್ಣ ಘಮಲಿನಂತೆ ಹರಡಿತು ಇರುಳ ರಾಗ ಕದಪ ಮೇಲೆನವ ಯೌವನದ ಅಲೆಗಳಲಿರಂಜಿಸಿತು ಮನವು ಮಧುರರಾಗ ಗುನುಗುವಂತೆ ಅಂತೆಹೊಸೆದು ಹೊಸತು ಹಾಡಿತು ಮನವು ತೋಯ್ದ ಪರಿಗೆತನುವು ತಾನು ನಡುಗಿತುಬಳ್ಳಿ ಚಿಗುರು ಮರವನಪ್ಪಿಬೆಚ್ಚಗಾಗುವಂತೆ ಅಂತೆನೆಚ್ಚು ಹೆಚ್ಚಿ ಬಲವಾಯಿತು ಅಧರ ಬಿರಿದು ಮಧುರನುಡಿದು ಪಿಸು ಮಾತಿನಬಿಸಿ ಎದೆಗೆ ಇಳಿದಂತೆಅಂತೆ ಒಲವು ಆವರಿಸಿತು ಮಳೆಯೆಂದರೆ ಒಲವುಒಲವೆಂದರೆ ನೆನೆದ ನೆಲದಒದ್ದೆಯಂತೆ ಅಂತೆ ಎಂದುಮತ್ತೆ ಸಾರಿತು ಮನವುಮಧುರವಾಗಿ ನಡುಗಿತು ********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗೋಡೆಯ ಮೇಲಾಡುವ ಚಿತ್ರ ಬಿದಲೋಟಿ ರಂಗನಾಥ್ ಒಳಬರಲಾದ ಬಾಗಿಲಲ್ಲಿಕಾದು ಕುಳಿತು ನಿನ್ನ ಪ್ರೀತಿಗೊಸ್ಕರ ಹಸಿದೆಚಂದಿರನ ಅಷ್ಟೂ ಬೆಳಕು ನಿನ್ನ ಕಣ್ಣಲ್ಲಿತ್ತುನೀನು ಪಾದಗಳು ನೆಲ ಸೋಕುವುದು ಬೇಡವೆಂದುರಂಗೋಲಿ ಬರೆದು ಕೂತೆ ಮುಗುಳು ನಗೆ ಮೆತ್ತಿರಂಗೋಲಿಗೂ ಕಣ್ಣು ಕಿವಿ ಎಲ್ಲಾ ಮೂಡಿದವು ನೀನು ಮಾತ್ರ ಬರಲಿಲ್ಲ ಗೋಡೆ ನೋಡುತ್ತಾ ಕೂತವನಿಗೆಅದರ ಮೇಲಾಡುವ ಚಿತ್ರ ಕರೆದಂತಾಯಿತುಅರೆ ! ಅವಳೇ ಅಲ್ಲವೆ ?ನನ್ನ ಚಿತ್ತಾರದ ಗೊಂಬೆಇಲ್ಲಿಗೂ ಬಂದಳೇ ?ಇಲ್ಲ ನಾನೇ ಅಲ್ಲಿಗೆ ಹೋದೆನೆ ?ಕಣ್ಣುಜ್ಜಿಕೊಂಡು ಮತ್ತೆ ಮತ್ತೆ ನೋಡಿದೆನವಿಲು ರೆಕ್ಕೆಬಿಚ್ಚಿ ನರ್ತಿಸುವಂತೆಗೋಡೆಯ ಮೇಲಿನ ಚಿತ್ರ ! ತುಟಿಯ ಮೇಲಿನ ಮೃದು ಮಾತುಸಣ್ಣಗೆ ಕೇಳಿಸುತ್ತಿದೆಆ ಚೆಲುವಿನ ನಗ್ನತೆಯಲಿ ದೇವರಿದ್ದಾನೆಬಾಹುಗಳು ಮುಂದೆ ಚಾಚುತ್ತಿವೆಮುಟ್ಟಲು ಹೋದರೆಬೆರಳಿಗಂಟಿದ ಸುಣ್ಣದ ಗುರುತು ! ಎಷ್ಟು ಚೆಂದ !ಕಡಲಿಗೆ ಕಣ್ಣಾಗಿ ಬೆಳಕಾದವಳ ಬಣ್ಣಮೌನದ ತುಟಿಗಳ ನಡುವೆಅಡಗಿದ ಜಗದ ರಹಸ್ಯನನ್ನೆಲ್ಲಾ ವಾಂಛೆಗಳನ್ನು ಹೀರಿಕನ್ನಡಿಗೆ ಮೆತ್ತಿದಳು ಕರುಳು ಕಲೆತ ಆ ಊರಲ್ಲಿಅವಳ ಗೆಜ್ಜೆ ಸದ್ದು ಕೇಳುತ್ತಿದೆನೀಳ ಕೇಶರಾಶಿಯ ತೂಕ ನನ್ನ ಬೆನ್ನ ಸವರುತ್ತಿದೆಕಣ್ಣಲ್ಲೇ ಬರೆದ ಪ್ರೇಮ ಪತ್ರಹೃದಯವ ತಬ್ಬಿದೆ ಮೂಗಿನ ತುದಿಯ ಪ್ರೀತಿಗೆಅವಳ ಮೂಗು ನತ್ತು ಮಿಂಚುತ್ತಿದೆಗೋಡೆಯೇ ಅವಳಾಗಿದ್ದಾಳೆಇಡೀ ಸೀರೆಯೊಳಗೆ ನನ್ನದೇ ಭಾವ ಚಿತ್ರ ! ******

ಕಾವ್ಯಯಾನ Read Post »

ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ವಿಮುಕ್ತೆ ಪುಸ್ತಕ: ವಿಮುಕ್ತೆ ಲೇಖಕರು: ಓಲ್ಗಾ ಅನುವಾದಕರು: ಅಜಯ್ ವರ್ಮ ಅಲ್ಲೂರಿ      ‘ವಿಮುಕ್ತ’ ತೆಲುಗಿನ ಖ್ಯಾತ ಸ್ತ್ರೀವಾದಿ ಲೇಖಕಿ ಓಲ್ಗಾ ಅವರ ಬಹುಚರ್ಚಿತ ಕೃತಿಗಳಲ್ಲಿ ಒಂದು. ಓಲ್ಗಾ ಎಂಬ ಹೆಸರಿನಿಂದಲೇ ದೇಶದಾದ್ಯಂತ ಗುರುತಿಸಿಕೊಂಡಿರುವ ಪೋಪೂರಿ ಲಲಿತ ಕುಮಾರಿಯವರು ಮೂಲತಃ ಆಂಧ್ರಪ್ರದೇಶದ ಗುಂಟೂರಿನವರು. ತೆಲುಗಿನ ಖ್ಯಾತ ಸ್ತ್ರೀವಾದಿ ಲೇಖಕಿ, ಚಿಂತಕಿ, ಅನುವಾದಕಿ, ಹಾಗೂ ಮಹಿಳಾ ಹಕ್ಕುಗಳ ಹೋರಾಟಗರ್ತಿಯಾಗಿರುವ ಇವರು ಪ್ರಸ್ತುತ ತೆಲುಂಗಾಣದ ಸಿಕಂದ್ರಾಬಾದಿನಲ್ಲಿ ನೆಲೆಸಿದ್ದಾರೆ. ಸ್ವೇಚ್ಛ, ನೀಲಿ ಮೇಘಾಲು, ರಾಜಕೀಯ ಕಥಲು, ಮಾಕು ಗೋಡಲು ಲೇವು, ಪ್ರಯೋಗಂ, ವಿಮುಕ್ತ ಇವು ಇವರ ಬಹುಚರ್ಚಿತ ಕೃತಿಗಳು. ಈ ವಿಮುಕ್ತ ಕೃತಿ ಹಲವು ಭಾಷೆಗಳಲ್ಲಿ ಅನುವಾದಗೊಂಡಿವೆ.  ಡಾ. ಸುಪ್ರಿಯ ಎಂ. ಅವರು ಇದನ್ನು ಮಲಯಾಳಕ್ಕೆ ಅನುವಾದ ಮಾಡಿದ್ದಾರೆ.         ಅಜಯ್ ವರ್ಮಾ ಅಲ್ಲೂರಿ ಅವರು ಈ ಕಥಾ ಸಂಕಲನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ವಿಜ್ಞಾನದ ವಿದ್ಯಾರ್ಥಿಯಾದ ಅಜಯ್ ಮೂಲತಃ ರಾಯಚೂರು ಜಿಲ್ಲೆಯ ಸಿಂಧನೂರಿನವರು. ಕ್ರೈಸ್ಟ್ ಕಾಲೇಜಿನ ಬೇಂದ್ರೆ ಕಾವ್ಯ ಸ್ಪರ್ಧೆ, ಅ ನ ಕೃ ಕಥಾ ಸ್ಪರ್ಧೆಗಳಲ್ಲಿ ಬಹುಮಾನಿತರು. ಗಗನ ಸಿಂಧು (ಕವಿತೆಗಳು), ಡಯಾನ ಮರ (ಅಲೆಹಾಂದ್ರಾ ಪಿಜಾರ್ನಿಕ್ ಸ್ಪಾನಿಶ್ ಕವಿತೆಗಳ ಕನ್ನಡಾನುವಾದ), ಕಲಲ ಇನ್ನೀಟ ಪಾಟ ( ವಿಭಾ ಅವರ ಕವಿತೆಗಳ ತೆಲುಗು ಅನುವಾದ) ಅವರ ಪ್ರಕಟಿತ ಕೃತಿಗಳು. ಕಳೆದ ಎರಡು ಮೂರು ವರ್ಷಗಳಿಂದೀಚೆ ಅನುವಾದ ಕ್ಷೇತ್ರದಲ್ಲಿ ಗಂಭೀರವಾಗಿ ತೊಡಗಿಸಿಕೊಂಡಿದ್ದಾರೆ. ಸದ್ಯ ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ  ಎಂ.ಎಸ್ಸಿ (ಭೌತಶಾಸ್ತ್ರ) ಓದುತ್ತಿದ್ದಾರೆ.            ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಈ ಕೃತಿಯಲ್ಲಿ ಒಟ್ಟು ೬ ಕಥೆಗಳಿವೆ. ವಾಲ್ಮೀಕಿ ರಾಮಾಯಣದಲ್ಲಿ ಬರುವ ಶೂರ್ಪನಖಿ, ಅಹಲ್ಯೆ, ರೇಣುಕ, ಮಂಡೋದರಿ ಊರ್ಮಿಳೆಯ ಪಾತ್ರಗಳು ಒಮ್ಮೆ ಮಿಂಚಿ ಮರೆಯಾಗುವುದಾದರೂ ಹಲವು ಕಾರಣಗಳಿಂದ ಓದುಗರ ಮನದಾಳದಲ್ಲಿ ಬೇರೂರಿ ನಿಂತಿವೆ. ರಾಮಾಯಣದಲ್ಲಿ ಅಮುಖ್ಯವಾಗಿ ಪರಿಗಣಿಸಲಾದ ಈ ಪಾತ್ರಗಳನ್ನು  ಓಲ್ಗಾ ಅವರು ತಮ್ಮ ಕಥೆಗಳಲ್ಲಿ ಕೇಂದ್ರ ಪಾತ್ರಗಳಾಗಿ ಆಯ್ದುಕೊಂಡು ಅವುಗಳಿಗೊಂದು ಅಸ್ಥಿತ್ವವನ್ನು ನೀಡುವ ಪ್ರಯತ್ನ ಮಾಡುತ್ತಾರೆ. ಈ ಪಾತ್ರಗಳೆಲ್ಲವೂ ಕಥಾ ನಾಯಕಿ ಸೀತೆಯೊಡನೆ ಬೇರೆ ಬೇರೆ ಕಾಲಘಟ್ಟಗಳಲ್ಲಿ ಸಂವಾದಿಸುತ್ತವೆ.  ಹಾಗೆ ಸೀತೆಯೊಂದಿಗಿನ ಭೇಟಿಯಲ್ಲಿ ಆ ಪಾತ್ರಗಳು ತಮ್ಮ ಅಂತರಂಗವನ್ನು ತೆರೆದು ತೋರಿಸುತ್ತವೆ.  ಅವುಗಳಿಂದ ಸೀತೆ ಹಲವು ಹೊಸ ವಿಚಾರಗಳನ್ನು ತಿಳಿದುಕೊಳ್ಳುತ್ತಾಳೆ. ಆ ಹೊಸ ಅರಿವಿನ ಬೆಳಕು ಕೊನೆಗಾಲದಲ್ಲಿ ಆಕೆಯನ್ನು ಮುನ್ನಡೆಸುತ್ತದೆ. ರಾಮನಿಂದ ಪರಿತ್ಯಕ್ತಳಾದ ಸೀತೆ ವಾಲ್ಮೀಕಿ ಆಶ್ರಮದಲ್ಲಿ ಮಕ್ಕಳ ಬೆಳವಣಿಗೆಯನ್ನು ಕಾಣುತ್ತಾ ಅವರ ಸಂಭ್ರಮದಲ್ಲಿ ತನ್ನ ಖುಷಿಯನ್ನು ಅರಸುತ್ತಿರುತ್ತಾಳೆ. ಅದೇ ಸಂದರ್ಭದಲ್ಲಿ ಈ ಪಾತ್ರಗಳನ್ನು ಭೇಟಿಯಾಗುವ ಅವಕಾಶ ಸಿಗುತ್ತದೆ. ಈ ಕಥೆಗಳ ಶೀರ್ಷಿಕೆಗಳೂ ಅರ್ಥಪೂರ್ಣವಾಗಿದ್ದು ಆಕರ್ಷಣೀಯವಾಗಿದೆ.          ಮೊದಲ ‘ಸಮಾಗಮ’ ಕಥೆಯಲ್ಲಿ, ಲವಕುಶರ ನಿಮಿತ್ತ ಸೀತೆ ಮತ್ತು ಶೂರ್ಪನಖಿಯರ ಅನಿರೀಕ್ಷಿತ ಭೇಟಿ ನಡೆಯುತ್ತದೆ. ತನ್ನ ಸೌಂದರ್ಯವನ್ನು ಕಳಕೊಂಡು ಇತರರ ಅವಮಾನ, ಪರಿಹಾಸ್ಯ, ನಿಂದನೆಗೆ ಗುರಿಯಾದ ಶೂರ್ಪನಖಿ ನೋವುಗಳನ್ನು ಮರೆಯಲು ಪ್ರಕೃತಿಯನ್ನು ಪ್ರೀತಿಸತೊಡಗುತ್ತಾ ತನ್ನೊಳಗಲ್ಲೂ ಸೌಂದರ್ಯ ಪ್ರಜ್ಞೆಯನ್ನು ಬೆಳೆಸಿಕೊಳ್ಳುತ್ತಾಳೆ. ನಿಸರ್ಗದ ಸೌಂದರ್ದಲ್ಲಿ ಖುಷಿಯನ್ನು ಅರಸುತ್ತಾ, ಹೂದೋಟವನ್ನು ಬೆಳೆಸುವ ಮೂಲಕ ಹೊಸ ಬದುಕನ್ನು ಕಟ್ಟಿಕೊಳ್ಳುತ್ತಾಳೆ. ಇಲ್ಲಿ ಬಾಹ್ಯ ಸೌಂದರ್ಯಕ್ಕಿಂತಲೂ ಅಂತರಂಗದ ಸೌಂದರ್ಯವೇ ಮಿಗಿಲೆಂದು ಲೇಖಕಿ ಪ್ರತಿಪಾದಿಸುತ್ತಾರೆ.   ‘ಮೃಣ್ಮಯನಾದ’ ಕಥೆಯಲ್ಲಿ ತನ್ನದಲ್ಲದ ತಪ್ಪಿಗೆ ಗಂಡನಿಂದಲೇ ಶಾಪಕ್ಕೊಳಗಾಗಿ ಕಲ್ಲಾಗಿ ಯುಗಗಳ ಕಾಲ ರಾಮನ ಪಾದ ಸ್ಪರ್ಶಕ್ಕಾಗಿ ಕಾದು ಶಾಪ ವಿಮೋಚನೆ ಪಡೆದ ಅಹಲ್ಯೆಯನ್ನು ಕಾಣಬಹುದು. ವನವಾಸದ ಕಾಲದಲ್ಲಿ ಸೀತೆಯು ಅಹಲ್ಯೆಯನ್ನು ಭೇಟಿಯಾಗುತ್ತಾಳೆ.  ತನ್ನ ಜೀವನಾನುಭವದಿಂದ ತಿಳಿದುಕೊಂಡ ವಿಚರಾಗಳನ್ನು ಅಹಲ್ಯೆ ಹಂಚಿಕೊಳ್ಳುವಾಗ “ವಿಚಾರಣೆ ಮಾಡುವುದೆಂದರೇನು ಸೀತಾ?  ಅಪನಂಬಿಕೆ ತಾನೆ! ಅದಕಿಂತಲೂ ಯಾವುದೋ ಒಂದು ನಂಬಿಕೆಯೇ ಲೇಸಲ್ಲವೇ? ಎಂಬ ಮಾತು ಆ ಕ್ಷಣಕ್ಕೆ ಅರ್ಥವಾಗದಿದ್ದರೂ ಮುಂದೊಂದು ದಿನ ಸೀತೆಗೆ ಅಗ್ನಿಪರೀಕ್ಷೆ ಸಂದರ್ಭದಲ್ಲಿ ಮನವರಿಕೆಯಾಗುತ್ತದೆ. ಮುಂದೆ ಬಸುರಿಯಾಗಿದ್ದಾಗ ಮತ್ತೊಮ್ಮೆ ಅಹಲ್ಯೆಯೊಡನೆ ಮಾತನಾಡುತ್ತಾಳೆ. ಆಗ ಸೀತೆ ಆಕೆಯ ಮಾತುಗಳಿಂದ ತನ್ನನ್ನು ತಾನು ಅರಿತುಕೊಳ್ಳುತ್ತಾಳೆ. ಅದನ್ನೇ ಮುಂದೊಂದು ದಿನ ರಾಮನಿಗೂ ಹೇಳುತ್ತಾಳೆ. “ನಾನು ಭೂಪುತ್ರಿ ರಾಮಾ, ನಾನು ಯಾರೆಂದು ಈಗ ಅರಿತುಕೊಂಡಿದ್ದೇನೆ. ಈ ಇಡೀ ಲೋಕವೆಲ್ಲ ನನ್ನದೇ. ಯಾವ ಕೊರತೆಯೂ ಇಲ್ಲ ನನಗೆ, ನಾನು ಭೂಪುತ್ರಿ” ಎಂದು ಹೇಳುತ್ತಾ ಮಕ್ಕಳನ್ನು ರಾಮನಿಗೊಪ್ಪಿಸಿ ಎಲ್ಲಾ ಬಂಧನಗಳಿಂದಲೂ ಮುಕ್ತಳಾಗಲು ಬಯಸುತ್ತಾಳೆ. ‘ಮರಳ ಮಡಕೆ’  ಕಥೆಯಲ್ಲಿ, ಒಬ್ಬ ಗಂಡಸನ್ನು ನೋಡಿ ಚಂಚಲಗೊಂಡದ್ದಕ್ಕೆ ಗಂಡನಾದೇಶದಂತೆ ಮಗನಿಂದ ಶಿಕ್ಷೆಗೊಳಗಾದ ರೇಣುಕೆಯದ್ದೇ ಪ್ರಧಾನ ಪಾತ್ರ. ಗಂಡ ಮಕ್ಕಳಿಂದ ದೂರವಾಗಿ ಏಕಾಗ್ರತೆಯಿಂದ ಶಿಲ್ಪಗಳನ್ನು ತಯಾರಿಸುತ್ತಾ ಆ ಕಲೆಯನ್ನು ಮತ್ತೊಬ್ಬರಿಗೆ ಕಲಿಸುತ್ತ ಹೊಸ ಬದುಕು ಕಟ್ಟಿಕೊಂಡ ರೇಣುಕೆ “ಗಂಡಂದಿರ ಕುರಿತು, ಮಕ್ಕಳ ಕುರಿತು ನನಗೆ ಗೊತ್ತಿದ್ದಷ್ಟು ಮತ್ತಾರಿಗೂ ಗೊತ್ತಿಲ್ಲ” ಎಂಬ ಅನುಭವಜನ್ಯವಾದ ಮಾತು ಸೀತೆಗೆ ಮೊದಲು ಅರ್ಥವಾಗದಿದ್ದರೂ ಮುಂದೆ ಪರಿಸ್ಥಿತಿಯೆ ಆಕೆಗದನ್ನು ಅರ್ಥಮಾಡಿಸುವುದು ವಿಪರ್ಯಾಸ. ‘ವಿಮುಕ್ತೆ’ ಕಥೆಯಲ್ಲಿ, “ಎಲ್ಲ ದುಃಖಗಳಿಗೂ ಮೂಲ ಕಾರಣ ಅಧಿಕಾರವೇ ಅಕ್ಕಾ” ಎಂದು ಹೇಳುವ ಊರ್ಮಿಳೆ ಯಾರ ಅಧಿಕಾರಕ್ಕೂ ಅಧೀನಳಾಗದೆ, ಅಧಿಕಾರದಿಂದ ಯಾರನ್ನೂ ಬಂಧಿಸಲು ಪ್ರಯತ್ನಿಸದೆ ಮುಕ್ತಳಾಗಲು ಬಯಸುತ್ತಾಳೆ. ಏಕಾಂತ ಮತ್ತು ಧ್ಯಾನದಲ್ಲೇ ತನ್ನ ನೆಮ್ಮದಿ, ಪ್ರೀತಿಯನ್ನು ಅರಸುತ್ತಾಳೆ. ಈ ಸಂದರ್ಭದಲ್ಲಿ ಊರ್ಮಿಳೆಯ ಬಗ್ಗೆ ಶೀಲಾ ಭಂಡಾರ್ಕರ್ ಅವರು ಬರೆದ  ‘ತಪ್ತ ಮೈಥಿಲಿ’ ಎಂಬ ಬರಹ ನೆನಪಾಗುತ್ತದೆ. ಅದರಲ್ಲೂ ಊರ್ಮಿಳೆಯ ಅಂತರಂಗದ ಶೋಧನೆಯಿದೆ. ‘ಅಶೋಕ’  ಕಥೆಯಲ್ಲಿ ಪತಿವ್ರತೆಯರ ಸಾಲಿನಲ್ಲಿ ಗುರುತಿಸಲ್ಪಟ್ಟ ಮಂಡೋದರಿಯ ವ್ಯಕ್ತಿತ್ವದ ಪರಿಚಯವಿದೆ. ಅಶೋಕವನವು ರಾವಣ ಮಂಡೋದರಿಗೆ ನೀಡಿದ ಒಲವಿನ ಉಡುಗೊರೆ. ಅಲ್ಲಿ ಮಂಡೋದರಿ ತನ್ನ ಅಸ್ತಿತ್ವವನ್ನು ಕಂಡುಕೊಳ್ಳುತ್ತಾಳೆ. ಅದು ಆಕೆಯ ಧ್ಯಾನ ಮಂದಿರವೂ ಆಗಿರುತ್ತದೆ. ಅಲಂಕಾರಗಳನ್ನು ಮಾಡುವುದರಲ್ಲೇ ಜೀವನೋತ್ಸಾಹವನ್ನು ಕಾಣುವ ಮಂಡೋದರಿ ತನ್ನ ಆಚಾರ ವಿಚಾರ ಸಂಸ್ಕೃತಿಗಳನ್ನು ಚಾಚೂ ತಪ್ಪದೆ ಪಾಲಿಸಿಕೊಂಡು ಬರುವುದನ್ನು ಕಾಣಬಹುದು. ಹಾಗೇ ರಾವಣ ತಪ್ಪು ಹಜ್ಜೆಗಳನ್ನಿಡುವಾಗಲೆಲ್ಲ ಆತನನ್ನು ಸದಾ ಎಚ್ಚರಿಸುವ  ಮಂಡೋದರಿ, ರಾವಣ ಸತ್ತಾಗ,  ಆರ್ಯ ಧರ್ಮದ ವಿಧವೆಯರಂತೆ ಬದುಕಲು ಒಪ್ಪದೆ ಸದಾ ಸರ್ವಾಲಂಕಾರಭೂಷಿತಳಾಗಿರಲು ಬಯಸುತ್ತಾಳೆ. “ಈ ಮಂಡೋದರಿ ಆರ್ಯ ಧರ್ಮಗಳನ್ನು ಅನುಸರಿಸಿ ನಿರಲಂಕಾರಿಯಾಗುವವಳಲ್ಲ. ವೈಧವ್ಯವನ್ನು ಹೊಂದುವವಳಲ್ಲ” ಎಂದು ಪ್ರತಿಭಟಿಸುತ್ತಾಳೆ. ಕುಮಾರಸ್ವಾಮಿ ತೆಕ್ಕುಂಜ ಅವರು ‘ಮಂಡೋದರಿಯ ಪಾತ್ರವನ್ನಿಟ್ಟುಕೊಂಡು ಕಾದಂಬರಿ ಬರೆದಿದ್ದಾರೆ. ಹಾಗೆಯೇ ಭಾಗ್ಯರೇಖಾ ದೇಶಪಾಂಡೆ ಅವರೂ ಮಂಡೋದರಿ ಪಾತ್ರವನ್ನು ಆಳವಾಗಿ ಅಭ್ಯಸಿಸಿ ಒಂದು ಕಾದಂಬರಿಯನ್ನು ನೀಡಿರುವುದು ಗಮನಾರ್ಹ. ‘ಬಂಧಿತ’ ಕಥೆಯಲ್ಲಿ, ರಾಜನಾಗಿ,  ಪ್ರಜಾಪಾಲಕನಾಗಿ ಅಧಿಕಾರ ಕರ್ತವ್ಯಗಳ ಮಧ್ಯೆ ಸಿಲುಕಿ ನಲುಗಿ ಹಲುವು ವಿಚಾರಗಳಲ್ಲಿ ಬಂಧಿತನಾಗಿ, ಕುಟುಂಬ, ಸಂಬಂಧ ಪ್ರೀತಿ ಎಲ್ಲದರಿಂದಲೂ ದೂರ ನಿಂತು ತನ್ನನ್ನು ತಾನೇ ಬಂಧನಕ್ಕೊಳಪಡಿಸಿಕೊಂಡು ಪ್ರಜೆಗಳಿಗಾಗಿ, ಆರ್ಯ ಧರ್ಮದ ಉಳಿವಿಗಾಗಿ ಬದುಕಿದ ರಾಮನಿದ್ದಾನೆ.           ಓಲ್ಗಾ ಅವರು ‘ಸೋದರಿತ್ವವೇ ಮಹಿಳೆಯರ ವಿಮೋಚನೆಯ ಪರಿಣಾಮಕಾರಿ ವಿಧಾನ ಎಂದು ದೃಢವಾಗಿ ನಂಬಿದವರು” ಆದ್ದರಿಂದಲೇ ಈ ಸೋದರಿತ್ವದ ಭಾವನೆ ಇಲ್ಲಿನ ಕಥಾ ಪಾತ್ರಗಳಲ್ಲಿ ಗಮನಿಸಬಹುದು. ಸೀತೆ ಭೇಟಿಯಾಗುವ ಎಲ್ಲಾ ಸ್ತ್ರೀ ಪಾತ್ರಗಳು ಈ ಭಾವನೆಯನ್ನು ಬೆಳೆಸಿಕೊಂಡಿದೆ. ಇವರ ಜೀವನ ಅನುಭವಗಳ ಮಾತಿನಿಂದ ಸೀತೆಯೂ ಸತ್ಯಾಸತ್ಯಗಳ ನಡುವಿನ ವಿಚಾರಗಳನ್ನು ತಿಳಿದುಕೊಂಡು ಎಲ್ಲ ಬಂಧನಗಳಿಂದಲೂ ಹೊರಗೆ ಬಂದು ಸ್ವತಂತ್ರಳಾಗಿಬಿಡುತ್ತಾಳೆ. ಸಮಾಜದಲ್ಲಿ ಪುರುಷನಿಂದ ಗುರುತಿಸಿಕೊಳ್ಳುವ ಆಕೆ ನಿಜದ ಅರಿವಾದಾಗ ತಾನು ಕೇವಲ ಭೂಪುತ್ರಿಯಾಗಿ ಉಳಿಯುವ ದಿಟ್ಟ ತೀರ್ಮಾನ ಕೈಗೊಳ್ಳುವುದು ಶ್ಲಾಘನೀಯ.  ಹೀಗೆ ಓಲ್ಗಾ ಅವರು ಈ ಪಾತ್ರಗಳ ಮೂಲಕ ಹೊಸತೊಂದು ಲೋಕವನ್ನು ನಮ್ಮ ಮುಂದೆ ತೆರೆದಿಡುತ್ತಾರೆ. ಆ ಲೋಕವನ್ನು ಪ್ರವೇಶಿಸಿದ ಓದುಗಾರಿಗೆ ಅಲ್ಲಿ ಹಲವು ಅಚ್ಚರಿಗಳೂ ಕಾದಿರುತ್ತದೆ.  ಅಜಯ್ ಅವರ ಅಲಂಕಾರಗಳಿಲ್ಲದ ನೇರ ಮತ್ತು ಸರಳವಾದ ಭಾಷೆ, ಕಥಾ ನಿರೂಪಣೆ, ಎಲ್ಲವೂ ಓದುತ್ತಾ ಹೋದಂತೆ ಆಪ್ತವಾಗಿಬಿಡುತ್ತದೆ. ಈ ಕಥೆಗಳೆಲ್ಲವೂ ಬಹಳ ಕುತೂಹಲದಿಂದ ಓದಿಸಿಕೊಂಡು ಹೋಗುತ್ತದೆ.           ಪಲ್ಲವ ಪ್ರಕಾಶನದಿಂದ ಪ್ರಕಟಗೊಂಡ ಈ ಸಂಕಲನಕ್ಕೆ ಬಿ. ಎನ್ ಸುಮಿತ್ರಾಬಾಯಿ ಅವರು ಮುನ್ನುಡಿ ಬರೆದಿದ್ದಾರೆ. ಇದರಲ್ಲಿ ಓ ಎಲ್ ನಾಗಭೂಷಣಸ್ವಾಮಿ ಅವರ ಅಭಿಪ್ರಾಯವೂ ಇದೆ.  “ಇದು ಪೌರಾಣಿಕ ನಾಯಕಿಯರ ಅಂತರಂಗದ ಅಷ್ಟೇ ಅಲ್ಲ ರಾಮನಂಥವರ ಒಳತೋಟಿಗಳನ್ನೂ ಆಳಕ್ಕಿಳಿದು ಗ್ರಹಿಸಿದೆ” ಎನ್ನುವ ವೈದೇಹಿಯವರು ಇದಕ್ಕೆ ಬೆನ್ನುಡಿ ಬರೆದಿದ್ದಾರೆ.  ಅಜಯ್ ಅವರು ಓಲ್ಗಾ ಅವರೊಂದಿಗೆ ನಡೆಸಿದ ಸಂದರ್ಶನವನ್ನು ಕೊನೆಯ ಭಾಗದಲ್ಲಿ ಹಂಚಿಕೊಂಡಿರುವುದರಿಂದ ಅವರ ಬಗ್ಗೆ ತಿಳಿದುಕೊಳ್ಳಲು ಓದುಗರಿಗೆ ಸಹಕಾರಿಯಾಗಿದೆ.  ಇದು ಒಂದು ಅನುವಾದಿತ ಕೃತಿಯಾಗಿದ್ದರೂ ಆ ಭಾವನೆ ಬರಂದಂತೆ ತುಂಬ ಮುತುವರ್ಜಿಯಿಂದ ಸ್ವಂತಿಕೆಯನ್ನುಳಿಸಿಕೊಂಡು ಅಜಯ್ ಅನುವಾದಿಸಿರುವುದು ನಿಜಕ್ಕೂ ಶ್ಲಾಘನೀಯ. ಇಂತಹ ಉತ್ತಮ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿ ಓಲ್ಗಾ ಅವರನ್ನು ಕನ್ನಡಿಗರಿಗೂ ಪರಿಚಯಿಸಿದ್ದಕ್ಕೆ ಕೃತಜ್ಞತೆಗಳು. ಇಂತಹ ಉತ್ತಮ ಕೃತಿಗಳನ್ನು ಅನುವಾದ ಮಾಡುತ್ತಿರಿ ಕನ್ನಡಿಪರಿಚಯಿಸುತ್ತಿರಿ. ನಿಮ್ಮ ಬರವಣಿಗೆಯೂ ನಿರಂತರವಾಗಿರಲಿ. ******** ಚೇತನಾ ಕುಂಬ್ಳೆ

ಪುಸ್ತಕ ಸಂಗಾತಿ Read Post »

ಕಾವ್ಯಯಾನ

ಕಾವ್ಯಯಾನ

ಮಾತಿನಲಿ ಮೌನೋತ್ಸವ ಡಾ. ಅಜಿತ್ ಹರೀಶಿ ಮಾತುಗಳ ಸಮ್ಮಿಲನಜನ್ಮಾಂತರದ‌ ಗೆಳೆತನಸಮ್ಮತಿಸಿ ಧ್ಯಾನಿಸಿದ ಮೌನಸರಸದ ನಿನ್ನ ಮಾತಿನಲಿ ಜತನ ಮಾತಿನ ಮುಗ್ಧತೆ ನೀರಸಮನದ ಜ್ಞಾನ ಪಾದರಸನೀ ಮಾತೊಳು ತರುವಕಲೆಯ, ಮೌನದಿ ಪಡೆದವ ನಾ ಹತ್ತಿಕ್ಕಿ ಬಚ್ಚಿಟ್ಟ ಮಾತುಮೌನದ ಮಣಿ ಪೋಣಿಸದುಉಕ್ಕುಕ್ಕಿ ಹರಿವ ನನ್ನ ಮಾತುಚಂದದ‌ ಹಾರವಾಗಿಸದು ನನ್ನ ಗತ್ತಿನ ಭಾವ ತಂದಿತ್ತುನನಗೆ ಗೊತ್ತು ಎಂಬ ಗಮ್ಮತ್ತುತಿಳಿಯದೆ ನಾ ಆಡಿದರೂಮೌನದಲೇ ದಂಡಿಸದಿರು ಧರಿಸಿ ಧರಿತ್ರಿಯಾದೆ ನೀನುಪಾದಕ್ಕೆರಗಿ ಸೇವೆಗೈವೆ ನಾನುಕ್ಷಮಿಸು ಭರಿಸು ನನ್ನ ಮಾತನುಶೇಖರಿಸಿ ನಿನ್ನ ಮೌನವನು ***********

ಕಾವ್ಯಯಾನ Read Post »

ಅಂಕಣ ಸಂಗಾತಿ

ಸ್ವಾತ್ಮಗತ

ದೇವನೂರು ಮಹಾದೇವರೂ..! ಮತ್ತವರು ಹುಡುಕಿದ ಹೊಸ ಅಭಿವ್ಯಕ್ತಿ ಕ್ರಮಗಳ ಪ್ರಸ್ತುತತೆಯೂ.!! ದೇವನೂರ ಮಹಾದೇವ ದೇವನೂರ ಮಹಾದೇವ ಅವರು ಹುಟ್ಟಿದ್ದು ಜೂನ್ 10, 1948ರಂದು. ಹಾಗೆಂದು ಅವರ ಬಳಿ ಹೋಗಿ ‘ಹ್ಯಾಪಿ ಬರ್ತ್ ಡೇ ಸಾರ್’ ಅಂತ ಹೇಳಿದರೆ, ‘ಇವನ್ಯಾವನಯ್ಯಾ ಮಿಕ’ ಎಂದು ಗಂಭೀರರಾಗಿಬಿಡುತ್ತಾರೇನೋ ಅನಿಸುತ್ತದೆ. ಅವರು ಮನುಷ್ಯನ ಮೂಲ ಆಳವನ್ನು ತಲುಪದ ಯಾವ ಆಚರಣೆಗಳನ್ನೂ ಒಪ್ಪುವವರಲ್ಲವೇನೋ ಎಂದೆನಿಸುತ್ತಿದೆ. ದೂರದರ್ಶನ ಬಂದ ಪ್ರಾರಂಭದ ದಿನಗಳಲ್ಲಿ ಇರಾನ್, ಇರಾಕ್ ದೇಶಗಳ ಯುದ್ಧಗಳು ಕ್ರಿಕೆಟ್ ಆಟ ನೇರ ಪ್ರಸಾರವಾಗುವಂತೆ ವಾರ್ತೆಗಳಲ್ಲಿ ಪ್ರಸಾರವಾಗುತ್ತಿದ್ದವು. ಯುದ್ಧದಲ್ಲಿನ ಕ್ಷಿಪಣಿ ಪ್ರಯೋಗಗಳು, ಬಾಂಬ್ ಹೇಗೆ ಬೀಳುತ್ತಿವೆ ಎಂದು ಕುತೂಹಲದಿಂದ ಅಲ್ಲಿನ ರಸ್ತೆಗಳಲ್ಲಿ ನೋಡುತ್ತಿದ್ದ ಮಕ್ಕಳು, ಇಂಧನ ಸೋರಿಕೆಯಿಂದ ಕಪ್ಪುಗಟ್ಟಿದ ಸಮುದ್ರ, ಆ ಸಮುದ್ರದ ದಡದಲ್ಲಿ ಬದುಕಲೂ ಆಗದೆ, ಸಾಯಲು ಆಗದೆ ನಲುಗುತ್ತಿದ್ದ ಒಂದು ಪಕ್ಷಿ ಇವೆಲ್ಲಾ ನಮ್ಮ ಮನಸ್ಸಿನಲ್ಲಿ ಮರೆಯಾಗದೆ ನಿಂತಿವೆ. ಅದೇ ದಿನಗಳಲ್ಲಿ ನಮ್ಮ ದೇವನೂರು ಮಹಾದೇವರ ಒಂದು ಸಂದರ್ಶನ ಕೂಡಾ ದೂರದರ್ಶನದಲ್ಲಿ ಪ್ರಸಾರವಾಗಿತ್ತು. ಅವರನ್ನು ಕೇಳಿದ ಪ್ರಶ್ನೆ, “ಇಂದಿನ ಬದುಕಿನಲ್ಲಿ ತಮ್ಮನ್ನು ಕಾಡುತ್ತಿರುವ ಪ್ರಶ್ನೆ ಯಾವುದು?”. ದೇವನೂರು ಮಹಾದೇವ ಅವರು ಹೇಳಿದ್ದು, “ಗಲ್ಫ್ ಯುದ್ಧದಲ್ಲಿ ತನ್ನ ಬದುಕನ್ನು ಕಳೆದು ಕೊಂಡು ಒದ್ದಾಡುತ್ತಿದೆಯಲ್ಲಾ ಆ ಪಕ್ಷಿ…. ಅದು ನನ್ನನ್ನು ತುಂಬಾ ಕಾಡುತ್ತಿದೆ!” ದೇವನೂರ ಮಹಾದೇವ ಎಂದರೆ ತಕ್ಷಣ ನೆನಪಿಗೆ ಬರುವುದು ಅವರ ಒಡಲಾಳ, ಕುಸುಮಬಾಲೆ, ಅಮಾಸ, ಗ್ರಸ್ತ, ಡಾಂಬರು ಬಂದುದು, ಮೂಡಲ ಸೀಮೆಯ ಕೊಲೆಗಿಲೆ, ಮಾರಿಕೊಂಡವರು ಹೀಗೆ ಹಲವು ಕಥೆಗಳು. ನಮ್ಮ ದೇಶದಲ್ಲಿ ನಾವು ಜನರನ್ನು ಪ್ರಾಂತ್ಯ, ಭಾಷೆ, ಜಾತಿ, ಉಪಜಾತಿ, ಮರಿ ಜಾತಿ ಹೀಗೆ ಯಾವ ರೀತಿಯಲ್ಲಿ ಛಿದ್ರ ಛಿದ್ರವಾಗಿ ಒಡೆದುಹಾಕಿದ್ದೇವೆಯೋ ನಮ್ಮ ಬುದ್ಧಿವಂತ ಜನಾಂಗ ಸಾಹಿತ್ಯವನ್ನೂ ಕೂಡ ನವ್ಯ, ದಲಿತ, ಬಂಡಾಯ, ಮರಿ ಬಂಡಾಯ ಹೀಗೆ ಒಡೆದು ಹಾಕಿಬಿಟ್ಟಿದೆಯೇನೋ ಅಂತನಿಸುತ್ತದೆ. ನಾನು ಸಾಹಿತ್ಯದ ಬಗ್ಗೆ ಅಷ್ಟೊಂದು ಬಲ್ಲವನಲ್ಲವಾದದ್ದರಿಂದ ಆ ಬಗ್ಗೆ ಹೇಳಿದರೆ ಇವನೊಬ್ಬ ಶುದ್ಧ ಶುಂಠ, ಅವೈಜ್ಞಾನಿಕ ಎಂದು ಹಲವು ಮಹನೀಯರು ಪ್ರತಿಭಾನ್ವಿತ ವಿಶ್ಲೇಷಣೆಗೆ ಬರುವ ಸರ್ವ ಸಾಧ್ಯತೆಗಳಿವೆ! ಅದು ಏನೇ ಇರಲಿ, ಇಂತಹ ವಾದ ವಿವಾದಗಳು ನಮ್ಮನ್ನು ಮಾನವನ ಆಳದಲ್ಲಿ ಇಳಿಯುವ ಶ್ರೇಷ್ಠ ಅನುಭಾವದಿಂದ ದೂರ ಮಾಡುತ್ತಿವೆಯೇನೋ ಎಂಬುದು ನನ್ನಲ್ಲಿರುವ ವ್ಯಥೆ. ದೇವನೂರ ಮಹಾದೇವ ಅಂತಹ ಅಂತರಾಳಕ್ಕಿಳಿಯುವ ಸಮರ್ಥ ಬರಹಗಾರನನ್ನು ಯಾವುದೋ ದಲಿತ – ಬಂಡಾಯ ಎಂದು ಪ್ರತ್ಯೇಕಿಸ ಹೊರಟಾಗ ಇಡೀ ಮಾನವ ಸಂಕುಲಕ್ಕೆ ಅಗತ್ಯವಾಗಿರುವ ಅವರ ಬರಹಗಳಲ್ಲಿನ ತೀವ್ರವಾದ ಸ್ಪಂದನೆಗಳ ಲಾಭ ಸರಿಯಾಗಿ ಆಗುವುದಿಲ್ಲ. ಅವರ ಬರಹಗಳ ಆಳವನ್ನು ವರ್ಗರಹಿತವಾಗಿ ಪ್ರತಿಯೊಬ್ಬರೂ ತಲುಪಿ ಮಾನವನ ಮೂಲಸ್ಪಂದನೆಗಳನ್ನು ಅರ್ಥೈಸಿ ಅದರಲ್ಲೊಂದಾಗುವ ಅವಶ್ಯಕತೆ ತುಂಬಾ ಇದೆ. ಒಮ್ಮೆ ಅವರು ಮಾನಸ ಗಂಗೋತ್ರಿಯಲ್ಲಿ ಮಾಡಿದ ಭಾಷಣದ ತುಣುಕುಗಳು ಹೀಗಿವೆ ‘ನಾನು ಬರೆಯುತ್ತಾ ಬರೆಯುತ್ತಾ ಬರೆಯುವ ಪ್ರಕ್ರಿಯೆಯಲ್ಲಿ ನನ್ನನ್ನು ನಾನು ಕಳೆದುಕೊಂಡು ಬೇರೆಯವನಾಗಬೇಕು. ಹಾಗೆ ಬೇರೆಯಾದವನು ಯಾರೂ ಆಗಬಹುದು ಆ ಮೂಲಕ ಎಲ್ಲರಂತೂ ಆಗಬಹುದು. ಹೀಗಾದಾಗ ನನ್ನನ್ನು ನಾನು ಕಳೆದುಕೊಳ್ಳಲು ಸಾಧ್ಯ. ನಾನು ಮಹಾದೇವ ಎನ್ನುವುದನ್ನೂ ಬಿಟ್ಟು ಬಿಡಬೇಕು. ನನ್ನ ಜಾತಿಯನ್ನು ಮರೆಯಬೇಕು. ನನ್ನ ಭಾಷೆಯನ್ನು ಮರೆಯಬೇಕು. ಆ ಬರೆಯುವ ಕ್ರಿಯೆಯಲ್ಲಿ ಈ ಎಲ್ಲವುಗಳನ್ನೂ ಮೀರಬೇಕು. ಸಭೆಯ ಮಧ್ಯದ ಸಭಿಕನಾಗಿದ್ದರೆ ಹೇಗೆ ಮಾತನಾಡಲು ಸಾಧ್ಯವಿಲ್ಲವೋ ಹಾಗೆ ಬರೆಯುವ ಕ್ರಿಯೆ ಕೂಡ. ಅಂದರೆ ಬಿಕಮಿಂಗ್ ಅದರ್ ಬೀಯಿಂಗ್ ಎಂದಾಯಿತು. ಬರೆಯುವ ಕ್ರಿಯೆಯಲ್ಲಿ ಕೆಲವು ಬಾರಿ ‘ಆತ್ಮ’ವಾಗಿ ಬರಬಹುದು. ಕೆಲವು ಬಾರಿ ‘ದೇಹ’ವಾಗಿ ಬರಬಹುದು. ಒಟ್ಟಿನಲ್ಲಿ ನೋಡಿದರೆ ನೋವು, ಕಷ್ಟ, ಸಂಕಟ, ದುಃಖ, ಖುಷಿ ಎಲ್ಲವೂ ಒಂದೇ. ಅದು ಒಂದು ಜೀವದಿಂದ ಮತ್ತೊಂದು ಜೀವಕ್ಕೆ ಹೋಗುವಂತೆ ಅಥವಾ ತನ್ನೊಳಗೆ ಜಗತ್ತನ್ನು ಭಾವಿಸುವ, ಜಗತ್ತಿನೊಳಗೆ ತನ್ನನ್ನು ಭಾವಿಸಿಕೊಳ್ಳುವಂತಹ ಪ್ರಕ್ರಿಯೆ. ಹಿಂದೆ ಹೇಳಿದೆನಲ್ಲಾ ರೂಢಿ ಎಂದು ಹಾಗೆ. ಅಂದರೆ ನಾನು ಮುಸ್ಲಿಂ, ದಲಿತ, ಬ್ರಾಹ್ಮಣ, ಮಹಾದೇವ ಎಂಬಲ್ಲಿಗೇ ನಿಂತರೇ ಸಾಯುವವರೆಗೂ ಆ ಸ್ಥಿತಿಯಲ್ಲೇ ನಿಂತು ಬಿಡುತ್ತೇನೆ (ಅರವತ್ತು ವರ್ಷದವನಾದರೂ ಪ್ರೈಮರಿ ಶಾಲೆಯೇ ಫೇಲಾಗಿರುವ ಹುಡುಗನ ಮನಸ್ಥಿತಿಯಲ್ಲಿಯೇ ಉಳಿದಂತೆ ಕಾಣುತ್ತಾನೆ). ಗಿರೀಶ ಕಾರ್ನಾಡ್ ಒಮ್ಮೆ ಹೇಳುತ್ತಿದ್ದರು – ಪಂಜಾಬ್‌ನಲ್ಲಿ ಗಲಭೆ ಆಗಿ ಆಗಿ ಹೆಣ ರಸ್ತೇಲಿ ಬಿದ್ದಿದ್ದರೂ ಮಕ್ಕಳು ಅದನ್ನೂ ನೋಡಿ ಸುಮ್ಮನೆ ಹೋಗುತ್ತಿರುತ್ತಾರೆ – ಅಂದರೆ ಅವರು ಅದಕ್ಕೆಲ್ಲ ಅಡ್ಜೆಸ್ ಆಗಿ ಹೋಗಿರುತ್ತಾರೆ. ಸಾವಿನ ಬಗೆಗಿನ ಸೂಕ್ಷ್ಮತೆ ಕೂಡ ಕಳೆದುಕೊಂಡು ಬಿಟ್ಟಿದ್ದಾರೆ. ಹೀಗೆ ಸೂಕ್ಷ್ಮತೆಯನ್ನು ಕಳೆದುಕೊಂಡರೆ ಅದು ಸೃಜನಶೀಲವಾಗುವುದಿಲ್ಲ”. ದೇವನೂರು ಮಹಾದೇವ ಅವರು ಸೂಕ್ಷ್ಮಜ್ಞತೆಯಲ್ಲಿ ನಮ್ಮನ್ನು ಇಳಿಸುವ ಅವರ ಹಲವು ಲೇಖನಗಳಾದ ಅಂಬೇಡ್ಕರ್, ಗಾಂಧೀ ಮತ್ತು ಹಲವು ವರ್ಗಸಂಹಿತೆಗಳ ವಿರೋಧಗಳು ಇವೆಲ್ಲಾ ವೈಯಕ್ತಿಕತೆಗೆ ಮೀರಿದ ಆಳದಲ್ಲಿ ಮನಸ್ಸು ಈಜುತ್ತಿರುವ, ಏನನ್ನೋ ಗಾಢವಾದದ್ದನ್ನು ಅರಸುತ್ತಿರುವ ಅನುಭಾವವನ್ನು ಕೊಡುತ್ತವೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ದೇವನೂರು ಗ್ರಾಮದಲ್ಲಿ ಜನಿಸಿದ ಮಹಾದೇವರು ತಮ್ಮ ಶಿಕ್ಷಣ-ವಿದ್ಯಾಭ್ಯಾಸವನ್ನು ದೇವನೂರು, ನಂಜನಗೂಡು, ಮೈಸೂರುಗಳಲ್ಲಿ ಪಡೆದು ಮೈಸೂರು ವಿಶ್ವವಿದ್ಯಾಲಯದ ಕನ್ನಡ ಎಂ.ಎ ಪದವಿ ಪಡೆದರು. 1975-1989ರ ಅವಧಿಯಲ್ಲಿ ಮೈಸೂರಿನ ಸೆಂಟ್ರಲ್ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಲ್ಯಾಂಗ್ವೇಜಸ್ ನಲ್ಲಿ ಉದ್ಯೋಗನಿರತರಾಗಿದ್ದ ಇವರು ನಂತರದ ವರ್ಷಗಳಲ್ಲಿ ಪೂರ್ಣಾವಧಿಯ ಕೃಷಿಕರಾಗಿದ್ದಾರೆ. ದ್ಯಾವನೂರು ಸಂಕಲನದ ಕತೆಗಳನ್ನು ಗಮನಿಸಿದರೆ ನವ್ಯ ಸಾಹಿತ್ಯ ಚಳುವಳಿಯ ಪರಿಚಯ ಪ್ರೇರಣೆ ಒಂದು ಹಂತದಲ್ಲಿ ಇವರಿಗೆ ಗಾಢವಾಗಿತ್ತೆಂದು ತಿಳಿದು ಬರುತ್ತದೆ. ಇದರ ಜೊತೆಗೆ ಅರವತ್ತು – ಎಪ್ಪತ್ತರ ದಶಕಗಳಲ್ಲಿ ಕ್ರಿಯಾಶೀಲವಾಗಿದ್ದ ಲೋಹಿಯಾವಾದಿ ಸಮಾಜವಾದಿ ಯುವಜನ ಸಭಾದ ಚಿಂತನ ಚಟುವಟಿಕೆಗಳು, ಮೈಸೂರಿನಲ್ಲಿ ವಾಸವಾಗಿದ್ದ ಯು. ಆರ್. ಅನಂತಮೂರ್ತಿ, ಶ್ರೀ ಕೃಷ್ಣ ಆಲನಹಳ್ಳಿ ಇಂತಹ ಲೇಖಕರೊಡನೆ ಇದ್ದ ಒಡನಾಟ, ಇವೆಲ್ಲವೂ ಮಹಾದೇವರಿಗೆ ಲೇಖಕ ವ್ಯಕ್ತಿತ್ವವನ್ನು ಹುಡುಕಿಕೊಳ್ಳಲು ನೆರವಾಗಿರಬಹುದು. ವಿದ್ಯಾರ್ಥಿ ದೆಸೆಯಲ್ಲಿಯೇ ಇವರು ‘ನರ’ ಎಂಬ ಪ್ರತಿಭಟನಾ ಪತ್ರಿಕೆಯ ಸಂಪಾದಕ-ಪ್ರಕಾಶಕರಾಗಿದ್ದರು. 1975ರಲ್ಲಿ ಲೋಕನಾಯಕ ಜಯಪ್ರಕಾಶ ನಾರಾಯಣರು ಮೈಸೂರಿಗೆ ಬಂದಿದ್ದಾಗ, ಸಾರ್ವಜನಿಕ ಸಭೆಯೊಂದರ ಅಧ್ಯಕ್ಷರಾಗಿದ್ದುದು ಆ ಕಾಲದ ಇವರ ಆಸಕ್ತಿಯ ಹರವುಗಳನ್ನು ಸೂಚಿಸುತ್ತದೆ. ದೇವನೂರ ಮಹಾದೇವ ಅವರ ಸಾಧನೆಗಳನ್ನು ಕನ್ನಡ ಸಾಂಸ್ಕೃತಿಕ ಲೋಕ ಮನಸಾರೆ ಒಪ್ಪಿ ಗೌರವಿಸಿದೆ. 1984ರಲ್ಲಿ ಕಲ್ಕತ್ತಾದ ಭಾರತೀಯ ಪರಿಷತ್ ಇವರ ‘ಒಡಲಾಳ’ ವನ್ನು ಉತ್ತಮ ಸೃಜನಶೀಲ ಕೃತಿಯೆಂದು ಗೌರವಿಸಿದೆ. ಅದೇ ವರ್ಷ ಇವರಿಗೆ ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ ದೊರೆಯಿತು. 1989ರಲ್ಲಿ ಅಮೆರಿಕಾದಲ್ಲಿ ನಡೆದ “ಇಂಟರ್ನ್ಯಾಷನಲ್ ರೈಟಿಂಗ್ ಪ್ರೋಗ್ರಾಂ”ನಲ್ಲಿ ಮಹಾದೇವ ಭಾಗವಹಿಸಿದರು. 1991ರಲ್ಲಿ ಕುಸುಮ ಬಾಲೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿತು. ನಲವತ್ತೊಂದರ ಕಿರಿವಯಸ್ಸಿನಲ್ಲೇ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕಾರ ಪಡೆದ ಭಾರತೀಯ ಲೇಖಕರಲ್ಲಿ ಮಹಾದೇವ ಅವರೇ ಮೊದಲನೆಯವರಿರಬೇಕು. ಅವರಿಗೆ ಭಾರತ ಸರ್ಕಾರದ ‘ಪದ್ಮಶ್ರೀ’ ಗೌರವ ಕೂಡಾ ಸಂದಾಯವಾಯಿತು. ಪ್ರಶಸ್ತಿ ಸ್ವೀಕರಿಸಲು ಕೂಡಾ ಅವರು ಹೋಗಿರಲಿಲ್ಲ. ಅವರ ಮನೆ ಬಾಗಿಲಿಗೇ ಅದು ಅರಸಿಕೊಂಡು ಬಂತು. ದೇಶದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿದೆ ಎಂದು ಕೇಂದ್ರಸರ್ಕಾರದ ವಿರುದ್ಧವಾಗಿ ಹಲವಾರು ಸಾಹಿತಿಗಳು ಪ್ರಶಸ್ತಿ ವಾಪಸ್ ಮಾಡುತ್ತಿದ್ದ ಅಭಿಯಾನದಲ್ಲಿ ಮಹಾದೇವರೂ ತಮಗೆ ಸಂದಿದ್ದ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ ಮತ್ತ ಪದ್ಮಶ್ರೀ ಗೌರವಗಳನ್ನು ಸರ್ಕಾರಕ್ಕೆ ಹಿಂದಿರುಗಿಸಿದರು. ಈ ರೀತಿಯ ಸಾಂಸ್ಥಿಕ ಪ್ರಶಸ್ತಿಗಳೇ ಅಲ್ಲದೆ ದೇವನೂರ ಮಹಾದೇವ ಅವರು ಪಡೆದಿರುವ ವಿಮರ್ಶಾ-ಪ್ರೀತಿ ಗೌರವ ಕೂಡಾ ತುಂಬಾ ಅಪೂರ್ವವಾದದ್ದು. ಪುತಿನ, ಜಿ.ಎಚ್.ನಾಯಕ, ಯು.ಆರ್.ಅನಂತಮೂರ್ತಿ, ಯಶವಂತ ಚಿತ್ತಾಲ, ಪಿ. ಲಂಕೇಶ್ ಅಂತಹ ಹಿರಿಯರು ಕೂಡಾ ಈ ವಿಮರ್ಶಾ ಚರ್ಚೆಯಲ್ಲಿ ಭಾಗವಹಿಸಿದ್ದಾರೆಂಬುದು ಮುಖ್ಯ. ಒಡಲಾಳ, ಕುಸುಮಬಾಲೆ, ಅಮಾಸ – ಈ ಕೃತಿಗಳೆಲ್ಲಾ ನಾಟಕಗಳಾಗಿ ರೂಪಾಂತರಗೊಂಡು ರಂಗಭೂಮಿಯಲ್ಲಿ ಯಶಸ್ವಿಯಾಗಿವೆ. ಹಿಂಸೆ, ದಬ್ಬಾಳಿಕೆ ಕ್ರೌರ್ಯ – ಇವೆಲ್ಲವೂ ನಮ್ಮ ಸಮಾಜದಲ್ಲಿ ಎಷ್ಟರ ಮಟ್ಟಿಗೆ ಹಾಸು ಹೊಕ್ಕಾಗಿವೆಯೆಂದರೆ,ಈ ವಿದ್ಯಮಾನಗಳೆಲ್ಲಾ ನಮಗೆ ಸಹಜವಾಗಿ, ಸರಿಯಾಗಿಯೇ ಕಾಣುತ್ತವೆ. ಇಂತಹ ಸಮಾಜದಲ್ಲಿ ಲೇಖಕನಾಗುವವನಿಗೆ ಪ್ರತಿಭಟನೆಯ ಬಂಡಾಯದ ಅನಿವಾರ್ಯತೆ ಮತ್ತು ಸಂದಿಗ್ಧತೆ ತಿಳಿದಿರಬೇಕು. ಇಲ್ಲಿ ಮನುಷ್ಯನಲ್ಲಿ ಪ್ರೀತಿಸುವ ಮತ್ತು ತಿಳಿಯುವ ಶಕ್ತಿಯು ಎಷ್ಟೊಂದು ಮುಕ್ಕಾಗಿ ಹೋಗಿದೆ ಎಂಬುದನ್ನು ಹೇಳುತ್ತಲೇ, ಈ ಜನವೇ ಪೂರ್ಣವಾಗಿ ಮನುಷ್ಯರಾಗಿ ಅನಾವರಣಗೊಂಡಾಗ, ಎಷ್ಟೊಂದು ಪ್ರೀತಿಸಬಲ್ಲರು, ಎಷ್ಟೊಂದು ಗಾಢವಾಗಿ ತಿಳುವಳಿಕೆ ಪಡೆಯಬಲ್ಲರು ಎಂಬುದನ್ನು ಸೂಚಿಸುವ, ಕನವರಿಸುವ ಶಕ್ತಿಯೂ ಇರಬೇಕು. ಮಹಾದೇವರ ಬರವಣಿಗೆ ಪ್ರಾರಂಭಿಕ ಹಂತದಿಂದಲೂ ಈ ಎಲ್ಲ ಗುಣ ಸ್ವಭಾವಗಳನ್ನು ಬೇರೆ ಬೇರೆ ಸ್ತರದಲ್ಲಿ ಪ್ರಕಟಿಸುತ್ತಾ, ವಿಕಾಸಗೊಂಡಿದೆ ಎಂಬುದೇ ಅವರ ಸಾಹಿತ್ಯದ ವೈಶಿಷ್ಟ್ಯ ಮತ್ತು ಮಹತ್ವ. ಈ ಕಾರಣಕ್ಕಾಗಿಯೇ ಮಹಾದೇವ ದಲಿತರ ಬದುಕಿನ ಬಗ್ಗೆ ಬರೆಯುತ್ತಲೇ ಒಟ್ಟು ಸಮಾಜವನ್ನು, ಒಟ್ಟು ಚರಿತ್ರೆಯನ್ನು ಗ್ರಹಿಸಲು ಅಭಿವ್ಯಕ್ತಿಸಲು ಪ್ರಯತ್ನಿಸುತ್ತಾರೆ. ದಲಿತರು ನಮ್ಮಗಳ ಮನಸ್ಸನ್ನು ಪರಿಭಾವಿಸುವಷ್ಟು ಪ್ರತ್ಯೇಕರಲ್ಲ ಎಂದು ಸೂಚಿಸುವ ಕ್ರಮ ಕೂಡಾ ಇದಾಗಿರಬಹುದು. ಈ ರೀತಿಯ ಗ್ರಹಿಕೆಯ ಸೂಚನೆಗಳೆಲ್ಲಾ ಅವರ ಮೊದಲ ಕಥಾ ಸಂಕಲನದಲ್ಲೇ ಇದೆ. ಗ್ರಸ್ತ, ಮಾರಿಕೊಂಡವರು ಇಂಥ ಪುಟ್ಟ ಕತೆಗಳಲ್ಲಿನ ಕಥಾ ವಿನ್ಯಾಸವೇ ದೊಡ್ದದಾಗಿದೆ. ಅವುಗಳು ಒಳಗೊಳ್ಳುವ ಪ್ರಪಂಚದ ವಿಸ್ತಾರ ಮತ್ತು ಸಂಕೀರ್ಣತೆ ಸಾಂಪ್ರದಾಯಕ ಸಣ್ಣಕತೆಯ ಅಳವಿಗೆ ಮೀರಿದ್ದು. ಗ್ರಸ್ತ ಕತೆಯಲ್ಲಿ ನಿರೂಪಕ, ಆತನ ತಾಯಿ, ಆತನನ್ನು ಓದಿಸಿ ಬೆಳೆಸಿದ ಊರ ಗೌಡ-ಎಲ್ಲರೂ ಬರವಣಿಗೆಯಲ್ಲಿ ಸಿಕ್ಕಿಹಾಕಿಕೊಂಡವರೆ, ಅಪೂರ್ಣರೇ, ಅವರೊಳಗೆ ಪ್ರೀತಿಸುವ ಮತ್ತು ಅಷ್ಟೇ ಮುಖ್ಯವಾಗಿ ಸತ್ಯ ಹೇಳುವ ಶಕ್ತಿಯೂ ಇದೆ. ಹೀಗಾಗಿ ದಲಿತನೊಬ್ಬನು ತನ್ನ ಸದ್ಯದ ಅವಸ್ಥೆಯನ್ನು ಮೀರಲು ಪ್ರಯತ್ನಿಸುತ್ತಲೇ, ತನ್ನ ಪ್ರತಿಭಟನೆ ಮತ್ತು ಪ್ರೀತಿಯಲ್ಲಿ ಎಲ್ಲರನ್ನೂ ಒಳಗೊಳ್ಳುವ ಪ್ರಯತ್ನದ ಕತೆಯೂ ಆಗಿದೆ. ಡಾಂಬರು ಬಂದುದು, ಮೂಡಲ ಸೀಮೆಯ ಕೊಲೆಗಿಲೆ ಮುಂತಾಗಿ ಮಾರಿಕೊಂಡವರು ಕತೆಗಳ ಪಾತ್ರ ಮತ್ತು ಕಥಾವಿನ್ಯಾಸವೂ ಇದೆ ರೀತಿಯದು. ‘ಒಡಲಾಳ’ ಕಥಾನಕವನ್ನು ಕನ್ನಡ ಸಾಹಿತ್ಯ ಲೋಕ ಕ್ಲಾಸಿಕ್ ಎಂದು ಗುರುತಿಸಿಬಿಟ್ಟಿದೆ. ಸಾಕವ್ವನ ಪರಿವಾರದ ಸದಸ್ಯರೆಲ್ಲಾ ಒಟ್ಟಿಗೆ ಕುಳಿತು ಕಡಲೇಕಾಯಿ ತಿನ್ನುವುದು, ಪುಟ್ಟಗೌರಿ ನವಿಲು ಬಿಡಿಸುವುದು, ಇಂತಹ ಪ್ರಕರಣಗಳು ಕನ್ನಡ ಓದುಗರ ಸಂವೇದನೆಯಲ್ಲಿ ಶಾಶ್ವತ ಸ್ಥಾನ ಪಡೆದಿವೆ. ನೂರಾರು ಪ್ರತಿಭಟನಾ ಬಂಡಾಯದ ಕತೆಗಳನ್ನು ಬರೆದರೂ, ಒಡಲಾಳದಂತಹ ಶುದ್ಧಮಾನವ ಪ್ರೀತಿಯ ಕತೆಯ ಪ್ರಭಾವ ಮುಕ್ಕಾಗಲಾರದು. ಒಡಲಾಳವು ದಲಿತರ, ಬಂಡಾಯದ, ಪ್ರತಿಭಟನೆಯ ಒಡಲಾಳದ ಕತೆಯೆಂದು ತಿಳಿಯುವ ಮುನ್ನವೇ ಓದುಗ ಸಂವೇದನೆಯ ಸ್ತರದಲ್ಲೇ ದಲಿತರ ಸ್ಥಿತಿಯ ಬಗ್ಗೆ, ಅವರ ಆಸೆ-ಆಕಾಂಕ್ಷೆಗಳ ಬಗ್ಗೆ ಇತ್ಯಾತ್ಮಕ ಧೋರಣೆಯ ಮನುಷ್ಯನಾಗಿ ಪರಿವರ್ತನೆ ಹೊಂದಿರುತ್ತಾನೆ ಎಂಬುದೇ ಈ ಕೃತಿಯ ಸಾಧನೆ. ಇಲ್ಲಿಯ ನಿರೂಪಣೆ ಕನ್ನಡ ಕಥನ ಸಾಹಿತ್ಯದ ಇಬ್ಬರು ಶ್ರೇಷ್ಠಬರಹಗಾರರಾದ ಮಾಸ್ತಿ ಮತ್ತು ಕುವೆಂಪು ಅವರನ್ನು ಮತ್ತೆ ಮತ್ತೆ ನೆನೆಪಿಗೆ ತರುತ್ತದೆ. ಮಹಾದೇವರ ಈ ಕೃತಿಯಲ್ಲಿ ಹಾಸ್ಯ, ತಮಾಷೆಗಳ ಮೆಲುದನಿಯಿದ್ದರೂ ಅದು ಕಥಾವಸ್ತುವಿನಲ್ಲಿ ಅಡಕವಾಗಿರುವ ವಿಷಾದ ಭಾವಕ್ಕೆ ಅಡ್ಡಿ ಬರುವುದಿಲ್ಲ. ಈ ಕೃತಿಯಲ್ಲಿ ಮಹಾದೇವ ಪ್ರತಿಭಟನೆ-ಬಂಡಾಯವೆನ್ನುವುದು ಎಷ್ಟೊಂದು ಪ್ರೀತಿಯ, ಎಷ್ಟೊಂದು ಅಂತಃಕಾರಣದ ಕ್ರಿಯೆಯೆಂಬುದನ್ನು ಓದುಗರಿಗೆ ಮನದಟ್ಟು ಮಾಡಿಕೊಟ್ಟಿದ್ದಾರೆ. ‘ಕುಸುಮ ಬಾಲೆ’ ಒಂದು ದೃಷ್ಟಿಯಿಂದ ಕತೆಯ ಹಂಗನ್ನು ತೊರೆದ ಕಾದಂಬರಿ ಎಂದು ಹೇಳಬಹುದು. ಹಾಗೆಂದರೆ ಕತೆ ಇಲ್ಲವೆಂದಲ್ಲ. ಘಟನೆ ಇಲ್ಲವೆಂದಲ್ಲ. ಲೇಖಕನೇ ಕತೆಯ ಸ್ವಾರಸ್ಯವನ್ನೆಲ್ಲಾ ಕೇವಲ ಏಳೆಂಟು ವಾಕ್ಯಗಳಲ್ಲಿ ನಾಂದಿ ರೂಪದಲ್ಲಿ ಹೇಳಿ, ಕತೆಯನ್ನು ಮೀರಿದ್ದಕ್ಕೆ ಓದುಗನನ್ನು ಸಿದ್ಧಗೊಳಿಸುವಂತಿದೆ. ಅಕ್ಕಮಹಾದೇವಿ, ಆಕೆಗೆ ಜೀತದಾಳಿನಿಂದ ಹುಟ್ಟಿದ ಮಗ ಯಾಡ, ನಂತರ ಅವನು ಬೆಳೆದು ಯಾಡೇಗೌಡನಾಗುವುದು, ಅವನ ಮಗ ಸೋಮಪ್ಪ ಊರಿಗೆ ದೊಡ್ಡವನು, ಅವನ ಮಗಳು ಕುಸುಮ, ಅವಳಿಗೆ ಚನ್ನನ ಮೂಲಕ ಮಗು, ಚೆನ್ನನ

ಸ್ವಾತ್ಮಗತ Read Post »

ಅಂಕಣ ಸಂಗಾತಿ, ಜೀವನ

ದಿಕ್ಸೂಚಿ

ಆಲಸ್ಯತನ ಓಡಿಸಿ ಅಚ್ಚರಿಗಳ ಸಾಧಿಸಿ. ಜಯಶ್ರೀ ಜೆ.ಅಬ್ಬಿಗೇರಿ ಕಳ್ಳತನ ಮಾಡಿ ಸಿಕ್ಕಿ ಬಿದ್ದ ವ್ಯಕ್ತಿಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರು ‘ನಿನ್ನ ಪರವಾಗಿ ಹೇಳುವುದೇನಾದರೂ ಇದ್ದರೆ ಹೇಳಬಹುದು ಎಂದು ಹೇಳಿದಾಗ ಅದಕ್ಕೆ ಆತ “ನ್ಯಾಯಾಧೀಶರೇ, ನನ್ನ ಜೊತೆಗೆ ನನ್ನ ತಂದೆ ತಾಯಿಗೂ ಶಿಕ್ಷೆ ವಿಧಿಸಿ. ಅವರನ್ನೂ ಜೈಲಿಗೆ ಕಳಿಸಿ” ಎಂದ. ನ್ಯಾಯಾಧೀಶರು ಕಾರಣ ಕೇಳಿದಾಗ ಕಳ್ಳ ಹೇಳಿದ “ನಾನು ಚಿಕ್ಕವನಿದ್ದಾಗ ಶಾಲೆಯಲ್ಲಿ ಒಂದು ಪೆನ್ಸಿಲ್ ಕದ್ದೆ. ನಮ್ಮ ತಂದೆ ತಾಯಿಗೆ ಗೊತ್ತಾದರೂ ಅವರು ಏನನ್ನೂ ಹೇಳಲಿಲ್ಲ. ನಂತರ ಬೇರೆ ಬೇರೆ ವಸ್ತುಗಳನ್ನು ಕದ್ದು ತರತೊಡಗಿದೆ. ಕಳ್ಳತನದ ವಿಷಯ ಗೊತ್ತಿದ್ದರೂ ಉದ್ದೇಶಪೂರ್ವಕವಾಗಿ ಏನೂ ಹೇಳುತ್ತಿರಲಿಲ್ಲ. ನನ್ನ ಕುಕೃತ್ಯವನ್ನು ಅವರು ನಿರ್ಲಕ್ಷಿಸಿದರು. ಬರಬರುತ್ತ ನನಗೆ ಕಳ್ಳತನ ಚಟವಾಯಿತು. ಇಂದು ನಾನು ದೊಡ್ಡ ಪ್ರಮಾಣದ ಕಳ್ಳನಾಗಲು ಅವರೇ ಕಾರಣ. ಹೀಗಾಗಿ ನನ್ನೊಂದಿಗೆ ಅವರನ್ನೂ ಶಿಕ್ಷಿಸಿ.” ಎಂದುತ್ತರಿಸಿದ. ಕಳ್ಳ ಹೇಳಿದ್ದು ಸರಿಯಾಗಿದೆ. ಪಾಲಕರು ತಮ್ಮ ಜವಾಬ್ದಾರಿಯನ್ನು ನಿರ್ವಹಿಸದೇ ಇದ್ದುದರಿಂದ ಅಪರಾಧದಲ್ಲಿ ಪಾಲುದಾರರಾದರು. ಈ ದೃಷ್ಟಾಂತವು ಯಾವುದೇ ಕೆಟ್ಟದ್ದನ್ನು ಸಸಿಯಾಗಿದ್ದಾಗ ಚಿವುಟದಿದ್ದರೆ ಹೆಮ್ಮರವಾಗಿ ಬೆಳೆದು ಬಾಳು ಹಾಳು ಮಾಡುತ್ತದೆ ಎಂಬುದಕ್ಕೆ ನಿದರ್ಶನ.. ಸೋಮಾರಿತನವನ್ನು ಸ್ವಲ್ಪದರಲ್ಲಿದ್ದಾಗಲೇ ಚಿವುಟಬೇಕು ಇಲ್ಲದಿದ್ದರೆ ಜೀವನವನ್ನೇ ನಾಶಮಾಡುತ್ತದೆ. ಆಲಸ್ಯತನಕ್ಕೆ ಮೈಗಳ್ಳತನವೆಂಬ ಶಬ್ದವೂ ಚಾಲ್ತಿಯಲ್ಲಿದೆ. ಆಲಸ್ಯತನವೂ ಒಂದು ರೀತಿಯ ಕಳ್ಳತನವೇ. ಮೈಗಳ್ಳತನ ಮಾಡಿದರೆ ಭವಿಷ್ಯ ಮಣ್ಣು ಪಾಲಾದಂತೆಯೇ ಸರಿ. ‘ನಾನು ಆಲಸಿ’ ಎಂದುಕೊಳ್ಳದೇ ಚಟುವಟಿಕೆಯಿಂದಿರುವುದು ನಮ್ಮ ಕೈಯಲ್ಲೇ ಇದೆ. ಆಲಸ್ಯತನವೆಂದರೆ? ಆಲಸ್ಯತನವೆಂಬುದು ಏನೂ ಮಾಡದೇ ಇರುವ ಮನಸ್ಥಿತಿ. ನಮ್ಮನ್ನು ಕೆಳಗೆ ನೂಕುವ ವೈರಿ. ‘ಹತ್ತಕ್ಕೆ ಒಂಭತ್ತು ಪಾಲಿನ ದೂಃಖಕ್ಕೆ ಕಾರಣ ಸೋಮಾರಿತನ.’ ಎಂಬುದು ಕರ‍್ಲೈಲ್ ಅಭಿಮತ. ‘ಹೂವನ್ನು ಒಡನೆಯೇ ಕಿತ್ತು ಸ್ವೀಕರಿಸು.. ಇಲ್ಲದಿದ್ದರೆ ಅದು ಬಾಡಿ ಹೋಗುವುದು.’ ಇದು ಕವಿ ಟ್ಯಾಗೋರ ಮಾತು.. ಎಲ್ಲದಕ್ಕೂ ನಿರಾಸಕ್ತಿಯನ್ನು ತೋರುವ ಸ್ಥಿತಿ. ಸವಾಲೆನಿಸುವ ಕಾರ‍್ಯ ಮಾಡಬೇಕಾದಾಗ ಇಲ್ಲವೇ ಬೋರೆನಿಸಿದಾಗ, ಕೆಲಸದ ಹೊರೆ ಹೆಚ್ಚಾದಾಗಲೂ ಈ ಸ್ಥಿತಿ ಉಂಟಾಗಬಹುದು. ಆಲಸ್ಯತನವೊಂದು ಲಕ್ಷಣವೇ ಹೊರತು ಸಮಸ್ಯೆ ಅಲ್ಲ ಎಂಬುದನ್ನು ಸರಿಯಾಗಿ ನೆನಪಿನಲ್ಲಿಡಿ. ಪ್ರೇರಣೆಯ ಕೊರತೆ, ಭಯ, ದಣಿವು ಕಂಫರ್ಟ್ ಸ್ಥಿತಿಯಲ್ಲಿ ಇರಲು ಇಚ್ಛಿಸುವುದು. ಸಹ ಆಲಸ್ಯತನಕ್ಕೆ ಕಾರಣವಾಗುತ್ತವೆ. ಇದೊಂದು ಜೀವ ಕಳೆಯನ್ನು ಕಳೆದುಕೊಂಡಿರುವ ಸ್ಥಿತಿ. ದೈನಂದಿನ ಚಟುವಟಿಕೆಗಳಲ್ಲೂ ಉಲ್ಲಾಸ ಕಳೆದುಕೊಳ್ಳಬಹುದು.. ಮನಸ್ಸಿನ ಮೇಲೆ ಹಿಡಿತ ಸಾಧಿಸಿದರೆ ಇದರಿಂದ ಹೊರ ಬರುವುದು ಸುಲಭ. ಆಪಾದಿಸಿದ ಸಂಗತಿ ನಿಜ ಮಾಡಬೇಡಿ ‘‘ಮೂರು ವರ್ಷದ ಬುದ್ಧಿ ನೂರು ವರ್ಷದವರೆಗೆ’ ಎಂಬ ಗಾದೆ ಮಾತಿದೆ. ಹೀಗಾಗಿ ನಾವು ಚಟುವಟಿಕೆಯುಳ್ಳವರಾಗಿ ಸದಾ ಕ್ರಿಯಾಶೀಲರಾಗಿ ಸೃಜನಶೀಲರಾಗಿ ಇರಬೇಕೆಂದರೆ ಚಿಕ್ಕವರಿದ್ದಾಗಿನಿಂದಲೇ ಚುರುಕುತನದಿಂದ ಪಾದರಸದಂತೆ ಕೆಲಸ ಕಾರ‍್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ನಮ್ಮ ಬಗ್ಗೆ ನಮಗಿರುವ ದುರಭಿಪ್ರಾಯಗಳಲ್ಲಿ ಹೆಚ್ಚು ನಮ್ಮ ಮೇಲೆ ಇತರರು ಅಪಾದಿಸಿದ ಸಂಗತಿಗಳೇ ಇರುತ್ತವೆ. ಅವುಗಳನ್ನು ಒಪ್ಪಿಕೊಂಡು ನಿಜ ಮಾಡಬೇಡಿ.”ನೀನು ತುಂಬಾ ಆಲಸಿ. ನಿನ್ನಿಂದ ಕೆಲಸ ಸಾಧ್ಯವಿಲ್ಲ” ಎಂದು ಅವರೆಂದರೆ “ಇಲ್ಲ, ಅದು ನಿಜವಲ್ಲ. ನನಗೆ ಬೇಕೆನಿಸಿದ್ದನ್ನು ಚೆನ್ನಾಗಿ ಉತ್ಸಾಹದಿಂದ ಮಾಡಬಲ್ಲೆ.’ ಎಂದು ಮಾಡಿ ತೋರಿಸಿ. ‘ಮನುಷ್ಯ ತನ್ನ ಕುರಿತು ತಾನೇನು ಅಂದುಕೊಳ್ಳುತ್ತಾನೋ ಅದೇ ಆತನ ಅದೃಷ್ಟವನ್ನು ನಿರ್ಣ ಯಿಸುತ್ತದೆ..’ ಎಂದಿದ್ದಾನೆ ಎಚ್ ಡಿ ಥೋರೇ. ‘ಯಾವಾಗಲೂ ಬಾತುಕೋಳಿಯಂತೆ ನಡೆದುಕೊಳ್ಳಿ–ಮೇಲ್ಮಟ್ಟದಲ್ಲಿ ಶಾಂತವಾಗಿರಿ ಮತ್ತು ತಳ ಮಟ್ಟದಲ್ಲಿ ಜೋರಾಗಿ ಹುಟ್ಟು ಹಾಕಿ..’. ಕಾರಣದ ಮೇಲೆ ಬೆಳಕು ಚೆಲ್ಲಿ ಆಲಸ್ಯತನದ ಮೂಲ ಕಾರಣವೇನೆಂದು ಯೋಚಿಸಿ ಅದರ ಮೇಲೆ ಬೆಳಕು ಚೆಲ್ಲಿ. ದಣಿವಾಗಿದ್ದರೆ ಕೆಲ ಹೊತ್ತು ವಿಶ್ರಮಿಸಿಕೊಳ್ಳಿ. ವಿಶ್ರಾಂತಿಯಿಂದ ದಣಿವಾಗುವಷ್ಟು ವಿಶ್ರಾಂತಿ ತೆಗೆದುಕೊಳ್ಳದಿರಿ. ಕಾರ್ಯದ ಹೊರೆ ಹೆಚ್ಚಾಗಿದ್ದರಿಂದ ಮೈಗಳ್ಳತನ ಉಂಟಾಗಿದ್ದರೆ ಭಾರವೆನಿಸುವ ಕೆಲಸವನ್ನು ಸರಳೀಕರಿಸಿ, ತುಂಡು ತುಂಡಾದ ಭಾಗಗಳಲ್ಲಿ ಹೇಗೆ ಮಾಡುವುದು ಯೋಜಿಸಿ ಕಾರ‍್ಯಕ್ಕಿಳಿಯಿರಿ. ಮಾಡುತ್ತಿರುವ ಕೆಲಸದ ಬಗ್ಗೆ ಭಯವೇ? ‘ಮಾಡುವ ಕೆಲಸದ ಮೇಲೆ ಗಾಢಾಸಕ್ತಿ ಇರುವ ವ್ಯಕ್ತಿಗೆ ಜೀವನದಲ್ಲಿ ಭಯವಾಗಿಸುವ ಅಂಶ ಯಾವುದೂ ಇಲ್ಲ.’ ಎಂದಿದ್ದಾನೆ ಸ್ಯಾಮ್ಯುವೆಲ್ ಗೋಲ್ಡ್ವಿನ್. ನಿಮ್ಮ ಪ್ರತಿಭೆ ಸಾಮರ್ಥ್ಯದ ಬಗ್ಗೆ ನಂಬಿಕೆ ಬೆಳೆಸಿಕೊಂಡರೆ ಭಯ ಮಂಗಮಾಯ. ಸಾಮಾಜಿಕ ಜಾಲತಾಣದಲ್ಲಿ ಅನಗತ್ಯ ಕಾಲ ಹರಣ ಮಾಡುತ್ತಿದ್ದರೆ ಮೊಬೈಲಿನಿಂದ ದೂರವಿರಿ.ದಿನಚರಿ ಬದಲಿಸಿ.ಸಂಗೀತ ಆಹಾರ ಹಾಸ್ಯ ಪ್ರಜ್ಞೆಯಿಂದ ದಿನಚರಿಯನ್ನು ಬದಲಿಸಿ. ಕೆಲವು ವಿಷಯಗಳು ಆಗಬೇಕೆಂದು ನೀವು ನಿರೀಕ್ಷಿಸಿದಾಗ ವಿಚಿತ್ರವಾಗಿ ಹಾಗೇ ಆಗುತ್ತವೆ.’ ಒಂದು ದೊಡ್ಡ ವಿಚಾರವು ನಮ್ಮ ಬದುಕನ್ನು ಮತ್ತು ಸುತ್ತಲಿನ ವಿಶ್ವವನ್ನೇ ಬದಲಿಸಬಹುದು. ಒಂದೇ ಒಂದು ಮೇಧಾವಿ ವಿಚಾರ ಇಡೀ ಪರಿಸ್ಥಿತಿಯನ್ನೇ ಬದಲಿಸಬಲ್ಲದು. ಚೆನ್ನಾಗಿ ಹೇಳುವುದಕ್ಕಿಂತ ಚೆನ್ನಾಗಿ ಮಾಡುವುದು ಉತ್ತಮ.. ಉತ್ಸಾಹ ಕೂಡಗೊಡುವುದಿಲ್ಲ ಆಲಸ್ಯತನ ಎಬ್ಬಿಸಿಗೊಡುವುದಿಲ್ಲ. ಹೀಗಾಗಿ ನಾವು ಪ್ರಯತ್ನ ಪಟ್ಟಾಗ ಮಾತ್ರ ಗೆಲ್ಲುತ್ತೇವೆ. ಹಾಗಂತ ಒಮ್ಮೆಲೇ ಎಲ್ಲ ಕೆಲಸಗಳನ್ನು ಮಾಡಲು ಹೋಗದಿರಿ. ‘ಅನೇಕ ಕೆಲಸಗಳನ್ನು ಮಾಡಲು ಅತಿ ಚಿಕ್ಕ ದಾರಿಯೆಂದರೆ ಒಂದು ಸಲಕ್ಕೆ ಒಂದು ಕೆಲಸ ಮಾತ್ರ ಮಾಡುವುದು.’ಭವಿಷ್ಯದ ಬಗ್ಗೆ ಆಲೋಚಿಸಿಇವತ್ತು ನಾನು ಆರಾಮವಾಗಿದ್ದೇನೆ ಎಂದು ಕಾಲಿನ ಮೇಲೆ ಕಾಲು ಹಾಕಿ ಸೋಮಾರಿತನ ತೋರಿದರೆ ಭವಿಷ್ಯತ್ತಿನಲ್ಲಿ ತೊಂದರೆ ಕಟ್ಟಿಟ್ಟ ಬುತ್ತಿ. ‘ಭವಿಷ್ಯತ್ ಬಗ್ಗೆ ಆಲೋಚಿಸುವವನೇ ಸರಿಯಾದ ದೃಷ್ಟಿಕೋನವಿರುವ ವ್ಯಕ್ತಿ.’ಎಂದು ಇನ್ಯೆನ್ ಹೇಳಿದ್ದಾನೆ. .’ಇಬ್ಬರು ವ್ಯಕ್ತಿಗಳು ಕಿಟಕಿಯ ಮೂಲಕ ನೋಡುತ್ತಾರೆ. ಒಬ್ಬನು ಮಣ್ಣನ್ನು ನೋಡುತ್ತಾನೆ. ಇನ್ನೊಬ್ಬನು ನಕ್ಷತ್ರಗಳನ್ನು ನೋಡುತ್ತಾನೆ.’ ನಾವು ನಮ್ಮ ಮನಸ್ಸಿನಲ್ಲಿ ಚಿತ್ರಿಸಿಕೊಂಡಿರುವುದರ ಕಡೆಗೆ ಚಲಿಸುತ್ತೇವೆ. ಇಂದು ನಿಮ್ಮಲ್ಲಿರುವ ಶಕ್ತಿ ಪ್ರತಿಭೆಗಳನ್ನು ಗುರಿಯೆಡೆಗೆ ಸರಿಯಾಗಿ ಅಳವಡಿಸಿ.ಇದು ಆಲಸ್ಯತನದಿಂದ ಮುಂದೂಡುವ ಕೆಟ್ಟ ಚಟವನ್ನು ಅದರಿಂದುಂಟಾಗುವ ಕೆಡುಕನ್ನು ನಿವಾರಿಸುತ್ತದೆ ಆಲಸಿಗಳು ಅವಕಾಶದ ಬದಲು ರಕ್ಷಣೆಯ ಕುರಿತಾಗಿ ಚಿಂತಿಸುತ್ತಾರೆ. ಸೋಮಾರಿಗಳಿಗೆ ಸಾವಿಗಿಂತ ಹೆಚ್ಚಾಗಿ ಜೀವನವೆಂದರೆ ಭಯ ಎನಿಸುತ್ತದೆ. ಮನಸ್ಸಿನ ಅಂಗವಿಕಲತೆಗೆ ಸೊಪ್ಪು ಹಾಕದಿರಿ ‘ಒಂದು ಹಾವನ್ನೋ ದುರ್ಜನರನ್ನೋ ಆರಿಸಿಕೊಳ್ಳಬೇಕಾದಾಗ ಹಾವನ್ನೇ ಆರಿಸಿಕೋ. ಹಾವು ಆತ್ಮ ರಕ್ಷಣೆಗಾಗಿ ಮಾತ್ರ ಕಚ್ಚುತ್ತದೆ. ದುರ್ಜನರು ನಿಷ್ಕಾರಣವಾಗಿ ಹೆಜ್ಜೆ ಹೆಜ್ಜೆಗೂ ಕಚ್ಚುತ್ತಾರೆ.’ ಎಂದಿದ್ದಾನೆ ಚಾಣಕ್ಯ. ಇದೇ ರೀತಿಯಲ್ಲಿ ಇತ್ತೀಚಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಅಸಮರ್ಥನನ್ನೋ ಆಲಸಿಯನ್ನೋ ಆರಿಸಿಕೊಳ್ಳಬೇಕಾದಾಗ ಅಸಮರ್ಥನನ್ನು ಆರಿಸಿಕೋ ಎನ್ನುತ್ತಾರೆ. ಏಕೆಂದರೆ ಅಸಮರ್ಥನಿಗೆ ತಿಳಿ ಹೇಳಿ ತರಬೇತಿ ನೀಡಿ ಕೆಲಸ ತೆಗೆಯಬಹದು. ಆದರೆ ಆಲಸಿ ತನ್ನೊಂದಿಗೆ. ಸಮರ್ಥರನ್ನೂ ಹಾಳು ಮಾಡುತ್ತಾನೆ ‘. ಶರೀರಕ್ಕೆ ಅಂಗವಿಕಲತೆ ಇದ್ದರೂ ಗೆದ್ದು ತೋರಿದ ಮಹನೀಯರು ಹಲವರು. ಅದರಲ್ಲಿ ಕುಂಟನಾದರೂ ಅಮೇರಿಕದಂಥ ದೇಶವನ್ನು ಅತ್ಯದ್ಭುತವಾಗಿ ಮುನ್ನಡೆಸಿದ ರೂಸ್ ವೆಲ್ಟ್ .ವಿವಿಧ ಅಂಗಗಳ ವಿಕಲತೆಯಿಂದ ಕಂಗೆಡದೇ ಗೆದ್ದು ತೋರಿದ ಹೆಲೆನ್ ಕೆಲ್ಲರ್. ಜಗತ್ತು ಕಂಡು ಬೆರಗಾದ ಸ್ಟೀಫನ್ ಹಾಕಿಂಗ್ ಹೀಗೆ ಪಟ್ಟಿ ಬೆಳೆಯುತ್ತದೆ. ಆಲಸ್ಯತನವೊಂದು ಮನಸ್ಸಿನ ಅಂಗವಿಕಲತೆ. ಇದರ ಬಲಿಗೆ ಬಿದ್ದರೆ ಮುಗಿದು ಹೋಯಿತು. ಎಂಥ ಮೇದಾವಿ, ಅಪ್ರತಿಮ ಪ್ರತಿಭಾವಂತನೂ ಹೇಳ ಹೆಸರಿಲ್ಲದಂತಾಗುವುದನ್ನು ಕಣ್ಣಾರೆ ಕಾಣುತ್ತೇವೆ. ನೀವು ನಿಮ್ಮ ಮನಸ್ಸಿನಿಂದ ಆಳಲಾಗುತ್ತಿದ್ದರೆ ಒಬ್ಬ ಅರಸ, ದೇಹದಿಂದಾದರೆ ಗುಲಾಮ. ತನ್ನನ್ನು ತಾನು ಗೆಲ್ಲುವ ಶಕ್ತಿ ಹೊಂದಿರುವವನನ್ನು ತಡೆಯುವಂಥದ್ದು ಯಾವುದೂ ಇಲ್ಲ. ಆಲಸ್ಯತನ ಓಡಿಸಿ ಅಚ್ಚರಿಗಳ ಸಾಧಿಸಿ.

ದಿಕ್ಸೂಚಿ Read Post »

You cannot copy content of this page

Scroll to Top