ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಸುರಿಯುತಿಹ ಮೋಡಗಳು

ಡಾ. ಪ್ರತಿಭಾ ಸುರಿಯುತಿರೆಜಿಟಿ,ಜಿಟಿ ಮಳೆಹನಿಗಳುನೋಡಿರಿ ಹರಡಿದೆ ಘಮಸುತ್ತಮೂತ್ತಲೂ. ಅವಳು ಅದೇ ಭೂತಾಯಿನಿಂತಿಹಳು,ಹಸಿರು ಸೀರೆರವಿಕೆಯ ತೊಟ್ಟು. ಸುರಿಸುತಿಹೆ ಮೋಡಗಳುಮಳೆ ಹನಿಗಳು ಶುರುವಾಗಿದೆನೋಡಿ ಕಣ್ಣುಮುಚ್ಚಾಲೆ ಆಟ. ಸ್ವಲ್ಪವೇ, ಸ್ವಲ್ಪವೇಹಿಡಿದು ಬಿಟ್ಟು, ಹಿಡಿದು ಬಿಟ್ಟು ಎನ್ನವಂತೆ ಸುರಿಸುತಿಹೆ ಮೋಡಗಳುಮಳೆಹನಿಗಳ.ದಾರಿಯುಂಟಕೂ ತೊಡಕುಗಳು ಸುರಿಯುವಮಳೆ ಹನಿಗಳಿಗೆಗಾಳಿಯದು ನೋಡಿಬಂದಿತು ರಭಸವಾಗಿಕೊಂಡೊಯ್ಯಲು ಮೋಡಗಳ ಬೇರೆ ಜಾಗಕ್ಕೆ. *************************

ಸುರಿಯುತಿಹ ಮೋಡಗಳು Read Post »

ಕಾವ್ಯಯಾನ

ಮಳೆಹಾಡು-3

ಸಂಜೆಯ ಮುಹೂರ್ತ ಆಶಾ ಜಗದೀಶ್ ಅದೆಷ್ಟೋ ವರ್ಷಗಳ ಪೂರ್ವ ನಿಯೋಜಿತಘಟನೆಯಿದು ಎನಿಸುವಂತೆಸುರಿಯುತ್ತಿರುವ ಈ ಮಳೆಗೆಸಂಜೆಯ ಮುಹೂರ್ತ ರಾಗ, ರಂಗು ಮತ್ತು ದೀರ್ಘ ಕ್ಷಣಗಳಕಟು ಮೌನಕಣ್ಣೀರು ಸ್ಫುರಿಸುವಂತೆ ತಾಕುವತಣ್ಣ ಸಣ್ಣ ಸಣ್ಣ ಸಿಡಿ ಹನಿಗಳುಯಾವುದಕ್ಕೂ ಪ್ರತಿರೋಧ ಒಡ್ಡದರಸ್ತೆಗೆ ಇದೊಂದು ಜನ್ಮದ ಸುವಾಸನೆಯನ್ನುಬಿಗಿ ಹಿಡಿದು ಉಚ್ವಾಸಕ್ಕೆ ಎಳೆಸುವ ಆಸೆಮತ್ತಷ್ಟು ಕಠೋರವಾಗಿ ಎದೆ ಸೆಟೆಸಿಮಲಗುತ್ತದೆ… ಒಂಚೂರೂ ನಡುಗದ ಮಲ್ಲಿಗೆ ಬಳ್ಳಿಮಳೆಯ ಹೊಡೆತಕ್ಕೆ ನಲುಗಿದೆಮತ್ತೆ ಮತ್ತೆ ಸರಿ ಮಾಡಿ ಹಿಡಿದೆತ್ತಿತಂತಿಯಿಂದ ಬಂಧಿಸಿ ತರಸಿಗೇರುವಂತೆಮಾಡುವ ಒಡತಿ ನಡುಗುತ್ತಾ ಒಳಗಿದ್ದಾಳೆತಾನು ಕಟ್ಟಿದ ತಂತಿ ತುಂಡಾಗಿಬೀಳುತ್ತಿರುವ ಬಳ್ಳಿಯ ಕಂಡುಹೆಚ್ಚೇ ಎರೆಡು ಹನಿ ಉದುರಿಸುತ್ತಾ ತಾರಸಿಯ ಕೆಳಗೆ ಮಳೆ ಸೋಕದಂತೆಇರಿಸಲಾಗಿರುವ ಬಣ್ಣದ ಗಿಡಗಳಮುಖ ಬಾಡಿ ಬತ್ತಿದೆಮಳೆಯೆನ್ನುವ ಇವನ ಸ್ಫರ್ಷಕ್ಕೆಂದುಕಾದ ಒಂದಿಡೀ ವರ್ಷಹೀಗೆ ವಿರಹದ ಮಡುವಿಗೆ ಹರಿದು ಹೋಗಿಸೇರುತ್ತಿದೆ ಎಂದು ಆದರೆಯಾವುದನ್ನೂ ಎಣಿಸದ ಒಡತಿಜಗ್ಗಿನಿಂದ ಎರೆಡು ಲೋಟದಷ್ಟು ನೀರನ್ನುಬುಡಕ್ಕೆ ಸುರಿದು ಹೋಗುತ್ತಾಳೆಮಳೆಯ ಹೊಡೆತ ತಿಂದು ನೆನೆಯಬೇಕಿತ್ತೆಂದುಹಪಹಪಿಸುತ್ತಿರುವ ಕುಂಡದ ಗಿಡಗಳಪ್ರಶ್ನಾರ್ಥಕ ನೋಟಗಳಕನಿಷ್ಠ ಗಮನಿಸದೆಯೇ ಮಳೆಕೊಯ್ಲು ಎನ್ನುವ ಹೆಸರಿನಇಡೀ ವ್ಯವಸ್ಥೆಯ ಪೈಪುಗಳಲ್ಲಿ ರಕ್ತಸಂಚಾರವರ್ಷವಿಡೀ ಕೆಲಸಕ್ಕೆ ಬಾರದಂತೆ ನಗಣ್ಯಕ್ಕೆಗುರಿಯಾದ ಇವುಗಳಿಗೆ ಈಗ ಎಂಥದೋ ಹೆಮ್ಮೆಒಂದಷ್ಟು ಕಚ್ಚು ಕೆಸರನ್ನು ಕಕ್ಕಿ ಗಂಟಲುಸರಿ ಮಾಡಿಕೊಂಡು ತಿಳಿ ನೀರ ಹರಿಸಿಎಂಥದೋ ನೆಮ್ಮದಿ ಅವುಗಳ ಒಣ ಜೀವಕ್ಕೆಅಲ್ಲಾ ಮಳೆಯನ್ನು ಹೇಗೆ ಕೊಯ್ಯುವುದೆಂದೇಅರ್ಥವಾಗುವುದಿಲ್ಲ ನನಗೆ ಆದರೆ ಮಳೆ ಎನ್ನುವ ಈ ಮಳೆಭಾವಕೋಶದ ತಂತಿಯನ್ನುಬಿಗಿ ಮಾಡಿ ಟಣ್ ಎಂದುಮೀಟಿಬಿಡುತ್ತದೆ ಹೇಗೋಸೋಲಿಸುವ ಹಾಗೆ…. ********

ಮಳೆಹಾಡು-3 Read Post »

ಕಾವ್ಯಯಾನ

ಆರು ಮೂರು

ಡಾ.ಅಜಿತ್ ಹರೀಶಿ ಮೂಲ ಆಲಯದಿಂದ ಕೈಲಾಸ ಪಟದಾಟಲೆತ್ತ ಬೀರಿ ಅದರತ್ತ ನೋಟಬುಡದಲ್ಲಿ ಬಿಸಿಯಿಲ್ಲಮೇಲೇರಿದಂತೆ ಕಾವೇರಿ ಪರದಾಟ ಹಿಂದೆ ಮುಂದೆ, ನೂಕುನುಗ್ಗಲುಆರು ಬಿದ್ದರೆ ಇನ್ನೊಂದು ಬಾರಿಸಿಗುವುದು ಆಡಲುಮೊದಮೊದಲು ಸಣ್ಣ ಏಣಿಹಾವು, ಆತಂಕವಿಲ್ಲ ಕಳೆ ಕಟ್ಟಿದೆ ಕೊನೆಯಲ್ಲಿನುಣುಪಾದ ದಂತದ ದಾಳದಲ್ಲಿಮೂರು ಬಿದ್ದರೆ ಹಾವು ಕಚ್ಚಿನಿಶ್ಚಲವಾಗುವುದು ನಿಶ್ಚಿತ ನೆಲಕಚ್ಚಿಕೈಲಾಸ ಕಾಣಬಹುದು ಬಿದ್ದರೆ ಆರುಶಿವ ಪಾರ್ವತಿ ಕಾಣುತಿಹರು ಒಂದು ಐದು ಬೀಳುತಿಹುದು ನೆತ್ತದಲಿಅತ್ತ ಇತ್ತ ಎತ್ತ ಎಂತ ಮಾಡಿದರೂ ಕೈಲಾಸ ಪ್ರಾಪ್ತಿಯಿಲ್ಲಆಟ ಬಿಟ್ಟು ಏಳುವಂತಿಲ್ಲಆರಕ್ಕೇರದ ಮೂರಕ್ಕಿಳಿಯಿದ ಬದುಕಿನಂತೆ ಲತ್ತದಲಿ ಮೂಡಿತು ಮೂರರ ಮುಖವಂತೂಮತ್ತೆ ಅಲ್ಲಿಂದ ಶುರು ಹಾವು ಏಣಿ ಆಟ ಆರು ಬಿದ್ದ ಕ್ಷಣ ಅರಿವಾಯಿತುಇನ್ನು ಪಟವ ಪಟಪಟನೆ ಸುತ್ತಿಹೊರಡಬೇಕು. *****

ಆರು ಮೂರು Read Post »

ಕಾವ್ಯಯಾನ

ಆಕೆ ಉಲ್ಲಾಸದಿ‌ ನಕ್ಕಳು

ನಾಗರಾಜ್ ಹರಪನಹಳ್ಳಿ -೧-ವಾರಬಿಟ್ಟು ಸುರಿದ ಮಳೆಗೆಉಲ್ಲಾಸದಿಂದ ನಕ್ಕಳು ಭೂತಾಯಿ ಕಂಪೌಂಡ್ ಕಟ್ಟೆ ಮೇಲೆ ಕುಳಿತಗುಬ್ಬಚ್ಚಿ ಹಿಂಡಿನ ಹರಟೆಜಗುಲಿ ಒಳಗಿನ ಹೆಂಗಸರ ನಾಚಿಸಿತು -೨-ಮಳೆ ಸುರಿದಾಯ್ತುಹನಿಯುಂಡ ಭೂಮಿನಿದ್ದೆ ಹೋಗಿದೆಮೈಮುರಿಯುತ್ತಿದೆ ನೆಲಪುಟಿದೇಳುತ್ತಿದೆ ಚಿಗುರುಪ್ರತಿ ಚಿಗುರಿನಲಿತೇಲಿ ಬಂದಿದೆನಿನ್ನದೇ ಬಿಂಬ -೩-ಹಗಲು ರಾತ್ರಿಯನ್ನದೇಮಳೆ ಸುರಿಯಿತುನಾನು ನೀನು ಮಾತಾಡಿಕೊಂಡಂತೆ ಅತ್ಯಂತ ಉಲ್ಲಾಸಿತಳಾಗಿ ನಕ್ಕಿದ್ದು ಭೂಮಿಮಾತಾಡುತ್ತಲೇ ನಾವುನಕ್ಕು ಅತ್ತಂತೆ ನಡುನಡುವೆ ಮತ್ತೆ ನಕ್ಕು ಉಲ್ಲಾಸಿತ ಗೊಂಡಂತೆ ಮಡಿಲಲ್ಲಿ ನೂರು ನೋವು ತುಂಬಿಕೊಂಡು ನಗುವ ಆಕೆನೂರು ಸಂಕಟ ನುಂಗಿಯೂ ನಕ್ಕಂತೆ ನಾನು -೪-ಮಾತಿಗೆ ಮಾತು ಬೆಸೆಯಿತು ,ಹೆಜ್ಜೆ ಹೆಜ್ಜೆಗೂ ಪ್ರೀತಿಯ ಹೂ ಅರಳಿದವುಶತಮಾನಗಳ ನೋವು ಹಾಡಾದವುಪಕ್ಕದಲ್ಲಿದ್ದ ಗಿಡಮರ ತಲೆದೂಗಿದವು ಹಕ್ಕಿಗಳ ಕಣ್ನಲ್ಲಿ ದೀಪಬೆಳಗಿದವುಕುದಿಯುತ್ತಿದ್ದ ಹಗಲು ;ಸೆರಗು ಹಾಕಲುಇರುಳಲ್ಲಿ ದೀಪಗಳು ಬೆಳಕು ಚೆಲ್ಲಿದವು *****

ಆಕೆ ಉಲ್ಲಾಸದಿ‌ ನಕ್ಕಳು Read Post »

ಇತರೆ

ಖಾಸಗಿರಣಮತ್ತು ಅಭಿವೃದ್ದಿ

ಗಣೇಶ್ ಭಟ್ ಶಿರಸಿ ಖಾಸಗೀಕರಣವೇ ಅಭಿವೃದ್ಧಿಯ ದಾರಿಯೆಂದು ತಪ್ಪಾಗಿ ನಂಬಿರುವ ಕೇಂದ್ರ ಸರ್ಕಾರವು, ಹಲವಾರು ರೇಲ್ವೇ ಮಾರ್ಗಗಳಲ್ಲಿ ಖಾಸಗಿಯವರಿಗೆ ಅವಕಾಶ ನೀಡಲು ಮುಂದಾಗಿದೆ.ಈ ನೀತಿಯ ಪ್ರಕಾರ ಖಾಸಗಿ ನಿರ್ವಹಣಾಕಾರರು ತಮ್ಮದೇ ಬಂಡವಾಳ ತೊಡಗಿಸಿ ಹೊಸ ಎಂಜಿನ್ ಮತ್ತು ಭೋಗಿಗಳನ್ನು ಖರೀಧಿಸಿ ನಿಗದಿತ ಮಾರ್ಗಗಳಲ್ಲಿ ರೈಲು ಓಡಿಸಬೇಕು. ಪ್ರಯಾಣ ದರವನ್ನು ನಿಗದಿ ಪಡಿಸುವ ಅಧಿಕಾರವನ್ನು ನಿರ್ವಹಣಕಾರರಿಗೇ ಬಿಡಲಾಗಿದೆ. ಅವರ ಒಟ್ಟೂ ಗಳಿಕೆಯಲ್ಲಿ ಶೇಖಡವಾರು ಪಾಲನ್ನು ರೇಲ್ವೆ ಇಲಾಖೆಗೆ ನೀಡಬೇಕಿದೆ.ಈ ವಿಧದ ಖಾಸಗೀಕರಣದಿಂದ ರೇಲ್ವೇ ಪ್ರಯಾಣ ದರದಲ್ಲಿ ಹೆಚ್ಚಳವಾಗುವದೆಂಬ ಜನಸಾಮಾನ್ಯರ ಆತಂಕಕ್ಕೆ , ಆ ರೀತಿಯಾಗುವುದಿಲ್ಲವೆಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಖಾಸಗಿಯವರಿಗೆ ಈಗ ಕೊಡಮಾಡಿರುವ ೧೫೦ ರೇಲ್ವೇ ಮಾರ್ಗಗಳು ಪ್ರಯಾಣಿಕರ ದಟ್ಟಣೆಯಿಂದ ರೈಲ್ವೇ ಇಲಾಖೆಗೆ ಲಾಭ ತಂದುಕೊಡುತ್ತಿರುವವು. ಆದರೂ ಖಾಸಗಿರಂಗದ ಲಾಭದ ದಾಹಕ್ಕೆ ಮಣಿದು, ನಷ್ಟಕಾರಕ ಮಾರ್ಗಗಳನ್ನು ಸರ್ಕಾರವಿಟ್ಟುಕೊಂಡು, ಲಾಭದಾಯಕ ಮಾರ್ಗಗಳನ್ನು ಖಾಸಗಿಯವರಿಗೆ ನೀಡಲು ಮುಂದಾಗಿದೆ. ಈ ಕ್ರಮದಿಂದಾಗಿ ಖಾಸಗಿ ರಂಗದವರಿಂದ ಸುಮಾರು 30 ಸಾವಿರ ಕೋಟಿ ರೂಗಳ ಹೂಡಿಕೆಯಾಗಲಿದೆಯೆಂದು ರೈಲ್ವೇ ಮಂತ್ರಿ ಹೇಳಿಕೊಂಡಿದ್ದಾರೆ. ರೇಲ್ವೇ ಇಲಾಖೆಗೆ ಈ ಮೊತ್ತದ ಹೂಡಿಕೆ ಜುಜುಬಿ ಎಂಬುದು ವಾಸ್ತವ. ಖಾಸಗಿಕರಣವನ್ನೇ ಪ್ರತಿಪಾದಿಸುವ ಕೇಂದ್ರಸರ್ಕಾರದ ಜನವಿರೋಧಿ ನಿಲುವಿಗೆ ಇದು ಇನ್ನೊಂದು ಉದಾಹರಣೆ.ಸಾರ್ವಜನಿಕ ಸಂಪರ್ಕ ವ್ಯವಸ್ಥೆಯ ನಿರ್ವಹಣೆಯ ಹೊಣೆಗಾರಿಕೆ ತಾತ್ವಿಕವಾಗಿ ಕೇಂದ್ರಸರ್ಕಾರದ್ದು. ಈ ಜವಾಬ್ದಾರಿಯನ್ನು ಕೇಂದ್ರಸರ್ಕಾರಕ್ಕೆ ನಿರ್ವಹಿಸುವ ಸಾಮರ್ಥ್ಯವಿಲ್ಲದಿದ್ದರೆ ಆಸಕ್ತ ರಾಜ್ಯಗಳಿಗೆ ಅವಕಾಶ ನೀಡಬೇಕಾದುದು ಸರಿಯಾದ ದಾರಿ. ಈ ಕ್ರಮ ರೇಲ್ವೇ ಖಾಸಗಿಕರಣವಲ್ಲ, ಕೆಲವು ಮಾರ್ಗಗಳನ್ನು ಮಾತ್ರ ಖಾಸಗಿಯವರಿಗೆ ಕೊಡುತ್ತಿದ್ದೇವೆ ಎನ್ನುವ ಕೇಂದ್ರದ ಸಮಜಾಯಿಷಿ ‘ಲಾಭದ ಖಾಸಗೀಕರಣ, ನಷ್ಟದ ಸಾಮಾಜಿಕರಣ’ ನೀತಿಗೆ ತಾಜಾ ಉದಾಹರಣೆ.*************8

ಖಾಸಗಿರಣಮತ್ತು ಅಭಿವೃದ್ದಿ Read Post »

ವಾರದ ಕವಿತೆ

ವಾರದ ಕವಿತೆ

ಮುಕ್ತತೆಯ ಹಂಬಲ ಪೂರ್ಣಿಮಾ ಸುರೇಶ್ ಹೊರಟಿದ್ದೇನೆ ಎಂದಿನಂತೆಬರಿಗಾಲಿನಲ್ಲಿನಿನ್ನ ಪದತಳದ ಧೂಳು ತಾಕಿದವರಹುಡುಕಲಿಕ್ಕೆ ಕಣ್ಣಲ್ಲಿ ಮುಸುಕು ಹಾಕಿ ಕೂತಿರುವಮೃದು ಹೂವಿನಂತಹಮುದ್ದು ಮೊಲದಂತಹ ಸುಕೋಮಲಪ್ರೀತಿ ಗಂಧ ಹಿಡಿದು ತುಸುತುಸು ತೆರೆದ ಕದಗುಸುಗುಸು ಮಾತಿನಲಿಆಟವಾಡುತ್ತಿದೆಹದಬೆಂಕಿ ಹೊಗೆಯಧೂಪ ಪರಿಮಳಕೆ ಎಲ್ಲವೂ ಕಾದಷ್ಟುಬೇಯುವಷ್ಟುಘಮಘಮಿಸಿಸುಡುವಷ್ಟು ಬತ್ತಿ ಮಹಾಪೂಜೆ ಕಟ್ಟುಗಳ ಬಿಚ್ಚಿ ಕಡಮೆ ದಾಟಿಜಗಳವಾಡಬೇಕು ಅನಿಸುತ್ತದೆ ದೇವರಾದರೆ ಏನಂತೆ.. ಶಿಲೆಯೊಡಲಲ್ಲೇ ಬೆಂಕಿದೇವರಾಗಿಸಿದ ಮೊಗಗಳಲಿಮೌನ ಹೀರಿ ನಗು.. ಗರ್ಭಗುಡಿಯ ಹೊರಗೆಆವರಣದಲಿಭಕ್ತರ ಪ್ರಾರ್ಥನೆಯ ಕಂಬನಿಹೆಪ್ಪುಗಟ್ಟಿದೆ ಇದು ಶಬರಿತನ ಪಾದಗಳು ನಿಶ್ಯಕ್ತವಾಗಿದೆಮಹಾಶೂನ್ಯತೆ ಆವರಿಸಿದೆನನ್ನನು ಮಂಜಿನಂತಹ ಮರೆವಿಗೆಸರಿಸಿಬಿಡು ಬೆಂಕಿಯನ್ನು ಒಡಲುಗೊಂಡವನೇಮುಕ್ತಳಾಗಬೇಕು ನಿನ್ನಿಂದ.

ವಾರದ ಕವಿತೆ Read Post »

You cannot copy content of this page

Scroll to Top