ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಪತ್ರ ಬರೆಯಬೇಕಿದೆ ಮಳೆಗೆ

ಪ್ರಜ್ಞಾ ಮತ್ತಿಹಳ್ಳಿ ಯಾರಿಗೂ ಹೇಳದೇ ಊರು ಬಿಟ್ಟಿದೆ ಮಳೆಹುಡುಕಿ ಕಂಗೆಟ್ಟ ಆಷಾಢ ಭುಸುಗುಡುತಿದೆಗಾಳಿಯ ಗಂಟಲಲಿ ವಿರಹದ ಶಹನಾಯಿಹಲಿವುಳಿದ ಮೋಡಕ್ಕೆ ಬಿಕ್ಕಲಾರದ ಬಾಯಿ ಎಲ್ಲಿ ಅಡಗಿದೆಯೊ ಮಳೆರಾಯಾಮುಖಗವಸಿನ ಜಗಕೆ ಹೆದರಿದೆಯಾಕಾಡು-ಕಣಿವೆ ಹೊಲ-ತೋಟಕ್ಕೆಹಸಿರುಗವಸು ತೊಡಿಸಲಾರೆಯಾಮುಟ್ಟುವುದನ್ನೇ ಬಿಟ್ಟು ಒಳಗೋಡಿಮುಚ್ಚಿದ ಕದದ ಹಿಂದೆ ಗುಟ್ಟಾಗಿದ್ದೇವೆ ಬಾಲ್ಯದಂಗಳದ ಸಿಹಿ ಒಗರಿನ ಗೇರು ಬೇಣಗೆಲ್ಲು ಗೆಲ್ಲಿಗೂ ತೂಗುವ ಹಣ್ಣು ಹಳದಿ ಕೆಂಪುಹೋದಷ್ಟೂ ಮುಗಿಯದ ತಂಪು ಕಾಲ್ದಾರಿಮುಗಿದದ್ದು ತಿಳಿವ ಮೊದಲೇ ಕವಲೊಡೆದ ಉರಿ ಶಂಕೆಯ ರಾವಣ ಕಾವಲಿದ್ದಾನೆಅಳುವೇ ನಿಲ್ಲುವುದಿಲ್ಲ ಸೀತೆಗೆ ಕದವಿಕ್ಕಿದ ರಾಮನರಮನೆಗೆ ವೈರಾಣು ಭೀತಿಮನದ ಗೆಲ್ಲು ಗೆಲ್ಲುಗಳಲೂಕುಣಿದು ಕುಪ್ಪಳಿಸುವ ಕಪಿಸೈನ್ಯತಾವೇ ಹಚ್ಚಿಕೊಂಡ ಉರಿಯ ಹಬ್ಬದಂತೆ ಹಬ್ಬಿಸುತ್ತಿದ್ದಾವೆ ಊರಿಗೆಲ್ಲ ಎಷ್ಟು ಬೈದರೂ ಸಿಟ್ಟಿಗೇಳುವುದಿಲ್ಲಪಟದೊಳಗಿನ ದೊಡ್ಡಪ್ಪಕನಸಿನ ಕಲ್ಯಾಣಿಯೊಳಗೆ ತಣ್ಣಗಿದ್ದಾನೆಸಣ್ಣ ತುಣುಕಿನ ಚಂದ್ರಾಮಕನಸು ನೇಯಬೇಕು ಹೊರ ಬರಲಿಕ್ಕೆಪತ್ರ ಬರೆಯ ಬೇಕು ಮಳೆಗೆ ಬೀಳಲಿಕ್ಕೆ *************

ಪತ್ರ ಬರೆಯಬೇಕಿದೆ ಮಳೆಗೆ Read Post »

ನಿಮ್ಮೊಂದಿಗೆ

ಪ್ರೇಮವೇ ಒಂದು ಧರ್ಮ.

ಪ್ರೇಮ ಅನ್ನುವುದು ಧರ್ಮವನ್ನು ನೋಡಿ ಹುಟ್ಟುವುದಿಲ್ಲ, ಹಾಗೆಯೇ ಪ್ರೇಮ ಸ್ಬತ: ಒಂದು ಧರ್ಮವಾಗಿದೆ. ಜನ ಇದನ್ನು ಅರ್ಥಮಾಡಿಕೊಳ್ಳಬೇಕು–

ಪ್ರೇಮವೇ ಒಂದು ಧರ್ಮ. Read Post »

ಇತರೆ

ಮರಳಿಗೂಡಿಗೆ

ಲಹರಿ ಅನುಪಮಾ ರಾಘವೇಂದ್ರ                              “ಎಲ್ಲಿ ಹೋದರೂ ಹಿಂತಿರುಗಿ ಮನೆಗೆ ತಲುಪುವವರೆಗೆ ಮನಸ್ಸಿಗೆ ಸಮಾಧಾನವೇ ಇಲ್ಲ”  ಎಂಬ  ಭಾವ ಮೂಡಿದಾಗಲೇ  ‘ಜನನೀ ಜನ್ಮ ಭೂಮಿಶ್ಚ ಸ್ವರ್ಗಾದಪಿ ಗರೀಯಸಿ’ ಎಂಬ ಮಾತು ಎಷ್ಟು ಅರ್ಥಪೂರ್ಣ ಅನಿಸಿದ್ದು.       ತಿಂಗಳ ಹಿಂದೆ ಹಕ್ಕಿಯೊಂದು ನಮ್ಮ aಮೊಟ್ಟೆಗಳನ್ನಿಟ್ಟು,ಕಾವು ನೀಡಿ , ಮರಿ ಮಾಡಿತ್ತು. ಅಷ್ಟು ದಿನಗಳಲ್ಲಿಯೇ ಆ ಹಕ್ಕಿ ಸಂಸಾರ ಹಾಗೂ ನನ್ನ ಮಧ್ಯೆ ಅನಿರ್ವಚನೀಯ ಬಂಧವೊಂದು ಬೆಳೆದುಬಿಟ್ಟಿತ್ತು. ಆ ಮರಿಗಳ ರೆಕ್ಕೆ ಬಲಿಯುವವರೆಗೂ ತಾಯಿ ತಂದೆ ತಾವೇ ಆಹಾರ ತಂದು ಬಾಯಿಗೆ ಕೊಟ್ಟು ಸಾಕುತ್ತಿದ್ದವು. ಆ ಮರಿಗಳ ರೆಕ್ಕೆ ಬಲಿತಾಗ ಎಲ್ಲ ಹಕ್ಕಿಗಳೂ ಗೂಡು ಬಿಟ್ಟು ಹೋಗಿದ್ದವು. ನನಗೊಂದು ಸಂಶಯ……. ‘ಹಾರಿ ಹೋದ ಮೇಲೆ ಮರಿಗಳಿಗೂ ,ಅದರ ಹೆತ್ತವರಿಗೂ ಯಾವ ರೀತಿಯ ಸಂಬಂಧವಿರಬಹುದು…?’ ಆ ಮರಿಗಳು ತಮ್ಮ ಹೆತ್ತವರ ಬಗ್ಗೆ ಚಿಂತೆ ಮಾಡುತ್ತವೆಯೋ………ಇಲ್ಲವೋ…….. ಆ ದೇವರೇ ಬಲ್ಲ. ಈಗಿನ ಕಾಲದಲ್ಲಿ ತಿಳುವಳಿಕೆಯುಳ್ಳ ಮನುಷ್ಯರೇ ತಮ್ಮ ಹೆತ್ತವರ ಜವಾಬ್ದಾರಿ ವಹಿಸದೆ ನುಣುಚಿಕೊಳ್ಳುವುದು ಸರ್ವೇ ಸಾಮಾನ್ಯ. ಹೀಗಿರುವಾಗ ಪ್ರಾಣಿ ಪಕ್ಷಿಗಳಲ್ಲಿ ಯಾವ ಬಂಧ….? ಆ ಹಕ್ಕಿಗಳು ಹಾರಿ ಹೋದ ಮೇಲೆ ಏನೋ ಕಳಕೊಂಡ ಅನುಭವ ನನಗೆ. ಹೆರಿಗೆಗೆ ತವರಿಗೆ ಬಂದ ಮಗಳನ್ನು ಬಾಣಂತನ ಮಾಡಿ ಕಳುಹಿಸಿ ಕೊಟ್ಟ ಭಾವ….. ಮಗಳ ಹೆಜ್ಜೆಯ ಸಪ್ಪಳದ ತಾಳವಿಲ್ಲ…. ಮಗುವಿನ ಅಳುವಿನ ಇಂಪಾದ ರಾಗವಿಲ್ಲ. ಈಗ ಎಲ್ಲೆಲ್ಲೂ ಕರ್ಣ ಕಠೋರ ಮೌನರಾಗ ಮಾತ್ರ !       ಹಾಗೂ ಹೀಗೂ ಒಂದು ತಿಂಗಳು ಕಳೆದಿತ್ತು. ಅದೊಂದು ದಿನ ಹಟ್ಟಿಯ ಬಳಿ ಏನೋ ಕೆಲಸದಲ್ಲಿದ್ದೆ. ಹಕ್ಕಿಯೊಂದು ಏನನ್ನೋ ಕಚ್ಚಿಕೊಂಡು ಹಾರಿ ಹಟ್ಟಿಯೊಳಗೆ ಬರುವುದು ಕಂಡಿತು. ಹತ್ತಿರ ಹೋದರೆ ಅದು ಓಡಿ ಹೋಗಬಹುದೆಂದು ಅಂಜಿ ದೂರದಿಂದಲೇ ಗಮನಿಸಿದೆ. ಹೋ….. ಅದೇ ಹಕ್ಕಿ….. ಅಂದು ಇಲ್ಲೇ ವಾಸವಾಗಿತ್ತಲ್ಲಾ….. ನನ್ನ ಮನಸ್ಸೂ ರೆಕ್ಕೆ ಬಿಚ್ಚಿ ಹಾರತೊಡಗಿತು. ಗೂಡಿನ ಕಡೆಗೆ ಹೋದ ಹಕ್ಕಿ ಒಂದೆರಡು ಕ್ಷಣದಲ್ಲೇ ವಾಪಾಸು ಬಂದು ಕಿಚ ಪಿಚ ಹಾಡುತ್ತಾ ನನ್ನ ಸುತ್ತ ಮುತ್ತ ತಿರುಗಿ ಹೊರಗೆ ಹಾರಿತು. ಮರಳಿ ಗೂಡಿಗೆ ಬಂದೆ ಎಂಬ ಸೂಚನೆ ನೀಡಿತ್ತೋ…… ಅದರ ಗೂಡನ್ನು ಹಾಳುಗೆಡಹದೆ ಹಾಗೇ ಇಟ್ಟದ್ದಕ್ಕೆ ಧನ್ಯವಾದ ಹೇಳಿತ್ತೋ ……… ಹಕ್ಕಿಗಳ ಭಾಷೆಯನ್ನು ಅರ್ಥ ಮಾಡಿಕೊಳ್ಳುವಂತಿದ್ದರೆ ಎಷ್ಟು ಚೆನ್ನ ಅನಿಸಿತ್ತು.    ನಮ್ಮ ಮನೆಯ ಸುತ್ತ ಮುತ್ತ ಗಿಡ ಮರಗಳಲ್ಲಿ ಹತ್ತು ಹಲವು ಹಕ್ಕಿಗಳು ಬಂದು ಗೂಡು ಕಟ್ಟಿ, ಮೊಟ್ಟೆ ಇಟ್ಟು , ಮರಿ ಮಾಡಿ ಹಾರಿ ಹೋಗಿವೆ. ಯಾವ ಹಕ್ಕಿಗಳನ್ನೂ ನಾನು ಇಷ್ಟೊಂದು ಹಚ್ಚಿಕೊಂಡಿಲ್ಲ. ಆ ಹಕ್ಕಿಗಳು ಹಾರಿ ಹೋದ ಮೇಲೆ ಆ ಗೂಡು ಅಲ್ಲೇ ಅನಾಥವಾಗಿ ಬಿದ್ದಿರುವುದು ಸಾಮಾನ್ಯ. ಕೆಲವು ದಿನಗಳು  ಕಳೆದ ಮೇಲೆ ಆಕರ್ಷಕವಾಗಿರುವ ಆ ಗೂಡುಗಳನ್ನು  ನನ್ನ ಸಂಗ್ರಹಾಲಯದೊಳಗೆ ಸೇರಿಸಿಕೊಳ್ಳುವುದು ನನ್ನ ಅಭ್ಯಾಸ. ಆದರೆ ಯಾಕೋ ಏನೋ… ಹಟ್ಟಿಯಲ್ಲಿದ್ದ ಗೂಡು ಒಂದು ತಿಂಗಳಿನಿಂದ ಅನಾಥವಾಗಿದ್ದರೂ ನನ್ನ ಸಂಗ್ರಹಾಲಯಕ್ಕೆ ಸೇರಿಸಿಕೊಳ್ಳುವ ಯೋಚನೆ ಬರಲೇ ಇಲ್ಲ. ಹಟ್ಟಿಯ ಬಳಿಗೆ ಹೋದಾಗಲೆಲ್ಲ  ನನ್ನ ಕಣ್ಣು ಓಡುತ್ತಿದ್ದದ್ದು ಆ ಗೂಡಿನ ಕಡೆಗೆ.          ಮರುದಿನ ಮಾಮೂಲಿನಂತೆ ಹಟ್ಟಿಯ ಬಳಿಗೆ ಹೋದಾಗ ಹಕ್ಕಿ ಪುರ್ರನೆ ಹಾರಿ ಹೋಯಿತು. ಮೆಲ್ಲನೆ ಇಣುಕಿ ನೋಡಿದೆ. ಮೂರು ಮೊಟ್ಟೆ. ಹೋ…… ಇನ್ನೊಂದು ಬಾಣಂತನದ ತಯಾರಿ…… ಹಕ್ಕಿಗೆ ತಿನ್ನಲು ಕಾಳು ಹಾಕಬೇಕು, ನಾಯಿ , ಬೆಕ್ಕುಗಳ ಕಣ್ಣು ಬೀಳದಂತೆ ಜಾಗ್ರತೆ ವಹಿಸಬೇಕು, ಮೊಟ್ಟೆಯೊಡೆದು ಮರಿ ಹೊರ ಬರಲು  ಕಾಯಬೇಕು , ಅದು ಹಾರಲು ಕಲಿಯುವುದನ್ನು ಕದ್ದು ನೋಡಬೇಕು , ನನ್ನ ಮೊಬೈಲಲ್ಲಿ ಸೆರೆ ಹಿಡಿಯಬೇಕು. ಅಬ್ಬಾ…..ಎಷ್ಟೆಲ್ಲಾ ಕೆಲಸ . ಸಂಭ್ರಮವೋ ಸಂಭ್ರಮ. ************

ಮರಳಿಗೂಡಿಗೆ Read Post »

ಕಾವ್ಯಯಾನ

ಎದುರೇ ಪ್ರೀತಿ ಇರುವಾಗ

ನಾಗರಾಜ್ ಹರಪನಹಳ್ಳಿ -೧-ಎದುರೆ ಪ್ರೀತಿ ಇರುವಾಗಎಲ್ಲಿ ಹೊರಡಲಿಅಲೆಯಲು -೨-ಇಳೆಗೆ ಮಳೆಯ ಧ್ಯಾನನನಗೆ ಅವಳ ಹೆರಳಪರಿಮಳದ ಧ್ಯಾನ. -೩-ಅವಳ ತುಟಿಗಳು ಮಾತಾಡಿದವುಕವಿತೆ ಹುಟ್ಟಿತು -೪- ತುಟಿಗೆ ತುಟಿ ಇಟ್ಟೆಜನ್ಮ ಜನ್ಮದಬಂಧನ ನೆನಪಾಯಿತು -೫-ಅವಳು ಅಂಗೈಗೆಮುತ್ತಿಟ್ಟಳುಪ್ರೇಮದ ಉದಯವಾಯಿತು -೬-ಅವಳ ಅಂಗೈಗೆಅದ್ಭುತ ಶಕ್ತಿಅದಕೆಬೆಸುಗೆಗೆ ಬಿಸಿ -೭-ನನ್ನ ಬಲ ಅಂಗೈ ನೋಡಿಕೊಂಡಾಗಲೆಲ್ಲಾಅವಳ ಮುಖದ್ದೇ ನೆನಪುಕಾರಣಮೊದಲು‌ ಅವಳ ತುಟಿ ತಾಗಿದ್ದುಅಂಗೈಗೆ* -೮-ಆಕೆ‌ ಹೇಳುವುದುಒಂದೇಉಸಿರಾಟದ ಏರಿಳಿತಎದೆ‌ ಬಡಿತ ನೀನು‌ -೯-ಎದೆಯ ಮೇಲೆ‌ ಕೈಯಿಟ್ಟರೆಅವಳ ಹೆಸರುಕಿವಿಗೆ ಅಪ್ಪಳಿಸಿತ -೧೦-ಕುಡಿಯುತ್ತಿದ್ದೆ ಅಲೆಯುತ್ತಿದ್ದೆಅವಳ ದರ್ಶನವಾಯಿತುಎದೆಗೆ ಪ್ರೀತಿಯ ಬೀಜಹಾಕಿದಳುಅದೀಗ ಹೆಮ್ಮರವಾಗಿದೆ**********

ಎದುರೇ ಪ್ರೀತಿ ಇರುವಾಗ Read Post »

ಕಾವ್ಯಯಾನ

ಸಂಮಿಶ್ರಣ

ಡಾ.ಪ್ರತಿಭಾ ಅಬ್ಬರಿಸುವ ಕಡಲಿಗೆಯಾವತ್ತೂ ಶಾಂತವಾಗಿಹರಿಯುವ ನದಿಗಳು ಸಾಕ್ಷಿ ಖಾಲಿಯಾಯಿತೆ ಸಿಹಿನೀರಿನ ಒರತೆಹಾಕಿಕೊಂಡು ತನಗೆತಾನೇ ಪ್ರಶ್ನೆಗಳ ಸ್ವಂತಿಕೆಯ ಕಳೆದುಕೊಳ್ಳುವಅಪಾಯ ಇದ್ದರೂಒಂದು ನೆಮ್ಮದಿ ಯ ಭಾವ. ಅಬ್ಬರದ ಅಲೆಗಳುಸದ್ದು ಮಾಡಿ ಸುಮ್ಮನಾಗಲುಮೂಡಿತು ನೆಮ್ಮದಿಯಭಾವ ಶಾಶ್ವತವೇನಲ್ಕ ಈ ಬದುಕುನೋವು, ನಲಿವುಸುಖ,ದುಃಖಗಳ ಸಂಮ್ಮಿಶ್ರಣ ********

ಸಂಮಿಶ್ರಣ Read Post »

ಕಥಾಗುಚ್ಛ

ಕಡಲಲೆಗಳ ಲೆಕ್ಕ

ಕಥೆ ಸುಧಾ ಹೆಚ್.ಎನ್ ರುಕ್ಮಿಣಮ್ಮ  ಕಡಲಿನ ಮಗಳು.  ಹುಟ್ಟಿದ್ದು, ಬೆಳೆದದ್ದು, ಪ್ರತಿ ಬೆಳಗು, ಪ್ರತಿರಾತ್ರಿ  ಕಳೆದದ್ದು  ಸಮುದ್ರದ ಜೊತೆಗೇ. ಮೀನುಗಳ ವ್ಯಾಪಾರ ಮಾಡುತ್ತಿದ್ದ ತಂದೆಯ, ಜೀವನದ ಜೊತೆಗಾರನಾದ  ಪಾಂಡುರಂಗನ ಮನೆಯಿದ್ದದ್ದು ಕಡಲತೀರದಲ್ಲೇ.  ತಮ್ಮ ಸುಮಾರು ಎಂಬತ್ತು ವರ್ಷದ ಜೀವಮಾನವನ್ನು     ಕಣ್ಣಳತೆಯಲ್ಲಿದ್ದ  ಅಗಾಧ ಸಮುದ್ರ,  ಅವಿರತವಾಗಿ  ಕೇಳಿಬರುತ್ತಿದ್ದ ಅಲೆಗಳ ಮೊರೆತ,  ಮೀನು….ಇತರೆ    ವಾಸನೆಯ ಜೊತೆಗೆ ಜೀವನ  ಸವೆಸಿದ್ದರು  ರುಕ್ಮಿಣಮ್ಮ.   ರುಕ್ಮಿಣಮ್ಮ ಮತ್ತು ಪಾಂಡುರಂಗಪ್ಪ   ಐವರು ಮಕ್ಕಳಿಗೆ ತಮ್ಮ ಕೈಲಾದ ಮಟ್ಟಿಗೆ ವಿದ್ಯಾಭ್ಯಾಸ ಕೊಡಿಸಿ, ಮದುವೆ ಮಾಡಿದ್ದರು. ಎಲ್ಲಾ ಮಕ್ಕಳು ದೂರ ದೂರದ ಊರುಗಳಲ್ಲಿ   ತಮ್ಮ,  ತಮ್ಮ ನೆಲೆ  ಕಂಡುಕೊಂಡಿದ್ದರು.      ಎಂಟು ವರ್ಷಗಳ ಹಿಂದೆ ಪಾರ್ಶ್ವವಾಯು ಪೀಡಿತರಾಗಿ,  ದೇಹದ ಒಂದು ಭಾಗದ  ಸ್ವಾಧೀನ ಕಳೆದುಕೊಂಡಿದ್ದರು  ಪಾಂಡುರಂಗಪ್ಪ.   ಗಂಡನ ಅನಾರೋಗ್ಯದ  ಸಮಯದಲ್ಲಿ  ಅನಾವರಣಗೊಂಡ ಮಕ್ಕಳ   ನಡವಳಿಕೆ,  ಅಸಹಕಾರ, ಅಸಹನೆ,  ಲೆಕ್ಕಾಚಾರಗಳಿಂದ  ಬಹಳವಾಗಿ  ನೊಂದಿದ್ದರು ರುಕ್ಮಿಣಮ್ಮ.  ತಂದೆ-ತಾಯಿಯರ  ಕಷ್ಟಕಾಲದಲ್ಲಿ  ಹಡೆದ ಮಕ್ಕಳು ತಮ್ಮ  ಕರ್ತವ್ಯ ನಿರ್ವಹಿಸುವಾಗ ತಮ್ಮತಮ್ಮಲ್ಲೆ   ಸ್ಪರ್ಧೆ, ಜಿದ್ದಿಗೆ ಬಿದ್ದು ತೋರಿಸಿದ ಅನಾದರ, ಮಾಡಿದ ಅವಮಾನ   ರುಕ್ಮಿಣಮ್ಮನವರಿಗೆ ಜೀವನ ಕಲಿಸಿದ ಹೊಸ ಪಾಠವಾಗಿತ್ತು.       ಹಾಗೂ,  ಹೀಗೂ  ಪರಿಪಾಟಲು ಪಟ್ಟು ಆಸ್ಪತ್ರೆಯಿಂದ ಗಂಡನನ್ನು  ಮನೆಗೆ ಕರೆತಂದಿದ್ದರು  ರುಕ್ಮಿಣಮ್ಮ. ನಂತರ ವೈದ್ಯರ ಸಲಹೆಯಂತೆ ಪ್ರತಿ ದಿನ  ಮುಂಜಾನೆ , ಸಂಜೆ ಗಂಡನ  ಕೈ ಹಿಡಿದು  , ಸಮುದ್ರದ  ದಂಡೆಗೆ  ಕರೆದೊಯ್ದು ಬೆಚ್ಚಗಿನ ಮರಳಿನಲ್ಲಿ  ಮಲಗಿಸಿ, ಹಿತವಾಗಿ ಕೈ ಕಾಲು  ತಿಕ್ಕಿ , ಕಡಲ ಅಲೆಗಳಿಂದ ಸ್ನಾನ ಮಾಡಿಸುತ್ತಿದ್ದರು.   ಗಂಡನ ಬಗಲಲ್ಲಿ ಕುಳಿತು  ಸಮುದ್ರದಲೆಗಳ  ಲೆಕ್ಕ ಹಾಕುತ್ತಿದ್ದಾಗ,  ಪಾಂಡುರಂಗಪ್ಪ  ನಗುತ್ತಾ ” ಹುಚ್ಚು ರುಕ್ಮಿ”   ಎಂದು   ಪ್ರೀತಿಯಿಂದ ತಲೆಗೆ  ಮೊಟಕುತ್ತಿದ್ದರು.     ಮಕ್ಕಳೆಲ್ಲಾ   ಕಳುಹಿಸುತ್ತಿದ್ದ  ಅಷ್ಟಿಷ್ಟು ಹಣದಿಂದ  ಎಂಟು ವರ್ಷಗಳು ಜೀವನ ದೂಡಿದ್ದ  ಪಾಂಡುರಂಗಪ್ಪನವರು ತೀರಿಕೊಂಡಿದ್ದರು.       ಪಾಂಡುರಂಗಪ್ಪ ಸತ್ತು ಹನ್ನೊಂದು  ದಿನಗಳು  ಕಳೆದಿದ್ದವು.  ಐವರು ಮಕ್ಕಳು, ಹನ್ನೆರಡು  ಮೊಮ್ಮಕ್ಕಳು ಒಟ್ಟಿಗೆ ಕುಳಿತು ಎಂಟು  ವರ್ಷಗಳಿಂದ , ತಂದೆಯ  ಆಸ್ಪತ್ರೆ ಖರ್ಚು ,  ಇದುವರೆಗೆ  ತಾಯಿಗೆ ನೀಡಿದ ಹಣ,    ತಂದೆಯ ಮಣ್ಣು ,  ಶ್ರಾದ್ಧ,  ಮಾಡುವವರೆಗೆ ಆದ ಖರ್ಚುವೆಚ್ಚಗಳನ್ನು ಲೆಕ್ಕ ಹಾಕುತ್ತಾ ಕುಳಿತಿದ್ದರು.   ಪ್ರತಿಯೊಬ್ಬರು ತಾವು  ಮಾಡಿದ ವೆಚ್ಚಕ್ಕೆ ಸಾಕ್ಷಿಗಳನ್ನು  ನೀಡುತ್ತಿದ್ದರು.  ತಾಯಿಯಾದ ರುಕ್ಮಿಣಮ್ಮ   ಮಕ್ಕಳಿಗೆ   ತಾನೇನು ನೀಡಿದ್ದೇನೆ  ಎಂಬುದಕ್ಕೆ ಯಾವ ಲೆಕ್ಕ , ಸಾಕ್ಷಿ ನೀಡಲಾಗದೆ ಕುಳಿತಿದ್ದರು.      ಗಂಡನನ್ನು ಕಳೆದುಕೊಂಡು ಒಂಟಿಯಾಗಿದ್ದ ರುಕ್ಮಿಣಮ್ಮನನ್ನು ಯಾರ್ಯಾರು ಎಷ್ಟೆಷ್ಟು ದಿವಸ ಯಾರ್ಯಾರ ಮನೆಗಳಲ್ಲಿ ಇಟ್ಟುಕೊಳ್ಳಬೇಕು ಎಂಬುದರ  ಕುರಿತು   ಚರ್ಚೆಯಾಗತೊಡಗಿತ್ತು.  ಅವರುಗಳೆಲ್ಲಾ ವೇಳಾಪಟ್ಟಿಯನ್ನು ತಯಾರಿಸುತ್ತಾ ಪರಸ್ಪರರ ಅನುಕೂಲ, ಅನಾನುಕೂಲಗಳನ್ನು    ಹೇಳಿ ಕೊಳ್ಳತೊಡಗಿದ್ದರು.  ರುಕ್ಮಿಣಮ್ಮ ಬದುಕಿರುವ  ಜೀವಿ ಎಂದು ಅವರ್ಯಾರೂ ಭಾವಿಸಿದಂತೆ ಕಾಣಲಿಲ್ಲ.       ರುಕ್ಮಿಣಮ್ಮನವರಿಗೆ ಆ ಕ್ಷಣದಲ್ಲಿ ಅಗಾಧವಾದ , ಆಳವಾದ ,  ಲೆಕ್ಕ ಮಾಡಲಾಗದ   ಅಲೆಗಳ  ಕಡಲು ನೆನಪಾಯಿತು.   ಕುಳಿತಲ್ಲಿಂದ ಮೆಲ್ಲನೆ ಎದ್ದು  ಮನೆಯಿಂದ  ಹೊರಬಂದು ಕಡಲ ಕಡೆ ಹೆಜ್ಜೆ ಹಾಕಿದರು. ಕಡಲ ಮರಳು ತನ್ನ  ಆತ್ಮೀಯತೆಯ  ಸ್ಪರ್ಶದಿಂದ   ನೊಂದ ಮನಸ್ಸನ್ನು  ಸಂತೈಸಿತು. ರುಕ್ಮಿಣಮ್ಮ  ಕಡಲ ಅಲೆಗಳ ಲೆಕ್ಕ ಹಾಕುತ್ತಾ…… ಹಾಕುತ್ತಾ ………ಕಡಲೆಡೆಗೆ ಹೆಜ್ಜೆ ಹಾಕತೊಡಗಿದ್ದರು. *********   

ಕಡಲಲೆಗಳ ಲೆಕ್ಕ Read Post »

ಕಾವ್ಯಯಾನ, ಗಝಲ್

ಗಝಲ್

ಎ ಎಸ್. ಮಕಾನದಾರ ನೀನು ಹೋದ ಅರೆಗಳಿಗೆಗೆ ಬಾಗಿಲ ಕಿಟಕಿಗಳು ಬೋರಾಡಿ ಅಳುತಿವೆಇಂದಲ್ಲ ನಾಳೆ ಬರುತ್ತೀಯೆಂದು ಹೊಸ್ತಿಲ ಭರವಸೆಯಿಂದ ಕಾಯುತಿವೆ ಅಂಗಾಲಿಗೆ ಮುತ್ತಿಕ್ಕಿದ ಮಣ್ಣು ಹಿಮ್ಮಡಿಯಲಿ ಹಿಮ್ಮೇಳಹಾಕಿವೆ ಸಾಕಿದಣಿದ ದೇಹಕೆ ಖಬರಸ್ತಾನಿನ ಹೂಗಳು ಸದಾ ಸಾಂತ್ವನ ಹೇಳುತಿವೆ ಬೀದಿ ದೀಪಗಳು ಕಣ್ಣುಗಳನ್ನು ಪಿಳುಕಿಸಿ ಮಿಂಚುಹುಳು ವಾಗಿಸುತ್ತಿವೆನೆನಪುಗಳು ಮಗ್ಗುಲು ಬದಲಿಸಿ ನೇಸರನಿಗೆ ಕರೆದು ಸಾವು ತರಿಸುತಿವೆ ಹರಿದ ಅಂಗಿಗೆ ಬೆವರ ಉಣಿಸಿ ಬೆಂದ ಹಾಲಿಗೆ ನೆಮ್ಮದಿ ಬೇಡುತ್ತಿವೆತುಕ್ಕು ಹಿಡಿದ ತೊಟ್ಟಿಲಲಿ ಜೋಗುಳ ತೂಗಿ ಹರತಾಳವನು ಹೂಡುತಿವೆ ಸಾಹೇಬನ ಹಸಿವು ಕಂಡು ಹರಿದು ತಿನ್ನುವ ಹದ್ದು ಮೌನವಾಗಿಸುತ್ತಿವೆರಟ್ಟೆ ತಟ್ಟಿದ ತವೆಯಲಿ ಕರಕಲು ರೊಟ್ಟಿಗಳು ಹೊಟ್ಟಿಗೆ ಪ್ರಶ್ನಿಸುತಿವೆ *********

ಗಝಲ್ Read Post »

ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಆಲದ ನೆರಳು ಈ ಕಥಾ ಸಂಕಲನದಲ್ಲಿ ಒಟ್ಟು ಹನ್ನೆರಡು ಕಥೆಗಳಿವೆ. ಕತೆಗೆ ಬೇಕಾದ ವಸ್ತು, ಅದರಲ್ಲಿ ತುಂಬಿಕೊಳ್ಳುವ ಪಾತ್ರಗಳು, ಪ್ರಾದೇಶಿಕ ಭಾಷೆಯ ಸೊಗಡು,ಅದರ ನಿರ್ವಹಣೆ, ಅನಿರೀಕ್ಷಿತ ತಿರುವುಗಳು, ಕಾಡುವ ಪಾತ್ರಗಳ ಹೆಣಿಗೆ, ಕೃತಕತೆಯಲ್ಲೂ ಮೈಮರೆಯದ ವಾಸ್ತವೀಕತೆ… ಇವುಗಳಿಂದ ಮಧುರಾ ಅವರು ಕತೆಗಳ ಮೂಲಕ ನಮ್ಮನ್ನು ಬಂಧಿಸಿಡುವಲ್ಲಿ ಯಶಸ್ವಿ ಆಗಿದ್ದಾರೆ. ಆಲದ ನೆರಳು – ಪುರುಷ ಪ್ರಧಾನ ಸಮಾಜದಲ್ಲಿ ಎರಡು ಹೆಣ್ಣು ಜೀವಗಳು ಸಾಂಸ್ಕೃತಿಕವಾಗಿ ನಲುಗಿ,ಕೊರಗಿ ಹೋಗುವ ಕಥಾ ಹಂದರ ಹೊಂದಿದೆ. ‘ ಬರೀ ನೆರಳಿದ್ರೆ ಉಳಕಿ ಗಿಡಗೋಳು ಬೆಳ್ಯೋದೆ ಇಲ್ಲ. ಸ್ವಲ್ಪ ಬೆಳಕು, ಬಿಸಿಲು ಬರ್ಲಿ. ಅಂದ್ರ ಬ್ಯಾರೇ ಗಿಡಗೋಳು ಬೆಳಿತಾವ’.ಇದು ಇಡೀ ಕಥೆಯ ಧ್ವನಿ ಹಾಗೂ ಸತ್ವಯುತವಾದ ಭಾಗ. ಅನಾವರಣ – ಕೇದಾರನಾಥ ಯಾತ್ರೆಗೆ ಹೋದ ದಂಪತಿಗಳು ಪ್ರಕೃತಿ ಅವಘಡಕ್ಕೆ ಸಿಲುಕುವುದು. ಆಗ ಅವರ ಢೋಲಿ ಹೊತ್ತವನು, ಅವನ ಪುಟ್ಟ ಡೇರೆ ಮನೆಯಲ್ಲಿ ಉಳಿಸಿಕೊಂಡು ಉಪಚರಿಸುವುದು. ಬಡತನದ ಆ ಕುಟುಂಬ ಇವರನ್ನು ಆದರಿಸುವ ರೀತಿ. ಗಂಡ, ತಾವು ಉಳಿಯುವುದು ಕಷ್ಟ ಎಂದಾಗ ಮಾಡುವ ವರ್ತನೆ. ಬದುಕಿ ಮರಳಿ ಹೊರಟಾಗ ಬದಲಾಗುವ ಅವನ ಚರ್ಯೆ. ಎಲ್ಲಕ್ಕಿಂತ ಮುಖ್ಯವಾಗಿ ಕೊನೆಯಲ್ಲಿ ಲೇಖಕಿ ಕಥೆಯನ್ನು ನಿಭಾಯಿಸಿದ ರೀತಿ ಗಮನ ಸೆಳೆಯುತ್ತದೆ. ಅಕ್ಕಮ್ಮ – ಕತೆಯೊಳಗೊಂದು ಕತೆ, ಅದರಲ್ಲಿ ಉಪಕಥೆ ಅನ್ನುವಂತೆ ತಿರುವು ಪಡೆಯುವ ಕತೆಯಿದು. ಕತೆ ಹೇಳುವವನೇ ಇಲ್ಲಿ ದುರಂತ ನಾಯಕ. ಅವನೇ ಅವನಜ್ಜ ಅಮ್ಮನ ಮೇಲೆ ಬಲಾತ್ಕಾರ ಮಾಡಿ ಹುಟ್ಟಿದ ಮಗ. ನೈತಿಕತೆ ಮಾಯವಾಗಿ, ನಂಬಲಸಾಧ್ಯ ಅನ್ನಿಸುವ ಕಥೆಗೆ ಓದುಗರೂ ಸಾಕ್ಷಿಯಾಗುವುದರ ಜೊತೆಗೆ ಕಸಿವಿಸಿಗೂ ಒಳಗಾಗುವುದು ಖಚಿತ. ನೆಲದ ಅಂಚು – ಗ್ರಾಮ ಮತ್ತು ನಗರದ ಬದುಕನ್ನು ಒಟ್ಟುಗೂಡಿಸುತ್ತಲೇ ಮಧ್ಯಮ ವರ್ಗದ ಆಸೆ, ದುರಾಸೆ, ಕನಸನ್ನು ಹೊರಹಾಕುವ ಈ ಕಥೆ ಹಾಸಿಗೆ ಇದ್ದಷ್ಟು ಕಾಲು ಚಾಚು ಎಂಬ ಸಂದೇಶವನ್ನು ನೀಡುತ್ತದೆ. ಪಲಾಯನ- ಬದಲಾದ ಕಾಲಘಟ್ಟದಲ್ಲಿ ಮತ್ತು ನಗರೀಕರಣದ ಪರಿಣಾಮವಾಗಿ ಎಲ್ಲವೂ ಕೃತಕ.ಹಳ್ಳಿಯ ಸೊಗಡಿನ ವಸ್ತು, ರೈತರ ಕಷ್ಟ, ಆರ್ಥಿಕ ಸ್ಥಿತಿಯನ್ನು, ಮಾನಸಿಕ ತೊಳಲಾಟವನ್ನು ಗ್ರಾಮೀಣ ಹಿನ್ನೆಲೆಯಲ್ಲಿ ಸಹಜವಾಗಿ ಮಧುರಾ ಅವರು ಕಟ್ಟಿಕೊಟ್ಟಿದ್ದಾರೆ. ಇವುಗಳ ಜೊತೆಗೆ ಇತರ ಕಥೆಗಳೂ ಸಹ ಮಹತ್ವದ ಕಥೆಗಳು. ಆದರೆ ಇಲ್ಲಿನ ಮಿತಿಯಲ್ಲಿ ಇಷ್ಟನ್ನು ಹೇಳಿದ್ದೇನೆ.ಆಲದ ನೆರಳು ಕೃತಿಯನ್ನು ಒಮ್ಮೆ ಓದಿ.**** ಡಾ. ಅಜಿತ್ ಹರೀಶಿ

ಪುಸ್ತಕ ಸಂಗಾತಿ Read Post »

ಅಂಕಣ ಸಂಗಾತಿ, ಸ್ವಾತ್ಮಗತ

ಸ್ವಾತ್ಮಗತ

ಮರಗಳ ಮಹಾತಾಯಿ ನಾನು ಎಕೋ ಇಷ್ಟು ಬರಹವನ್ನು ಬರೆದರೂ ಅದ್ಯಾಕೋ ಈ ‘ಸಾಲು ಮರಗಳ ತಿಮ್ಮಕ್ಕ’ನ ಬಗೆಗೆ ಬರೆಯಲಾಗಿರಲಿಲ್ಲ. ಈ ತಿಮ್ಮಕ್ಕನ ಬಗೆಗೆ ಟಿಪ್ಪಣಿ ಬರೆದಿಟ್ಟುಕೊಂಡು ಬಹಳ ದಿನಗಳಾದವು. ಈಗ ಸಾಲು ಮರದ ಈ ತಿಮ್ಮನ ಬಗೆಗೆ ಬರೆಯಬೇಕು ಎಂಬ ತವಕ ಅದ್ಯಾಕೋ ಹೇಚ್ಚಾಯಿತು. ಅದಕ್ಕಾಗಿ ಇಂದು ಈ ಬರಹ ಬರೆದನು.ಅದೋ ಈ ಲೇಖನ ‘ಮರಗಳ ತಾಯಿ ತಿಮ್ಮಕ್ಕ’..! ಮರ ಎಂದಾಕ್ಷಣ ನಮ್ಮ ಮನದಲ್ಲಿ ಮೂಡಿ ಬರುವವರೇ ತಿಮ್ಮಕ್ಕನರವರು. ಬರೀ ತಿಮ್ಮಕ್ಕನೆಂದರೆ ಬಹುಶಃ ಯಾರಿಗೂ ಗೊತ್ತಾಗಲಾರದು. ಸಾಲು ಮರದ ತಿಮ್ಮಕ್ಕನೆಂದೇ ಕರೆಯಬೇಕು.ಇವರ ಬಗ್ಗೆ ತಿಳಿದೇ ಇಲ್ಲ ಅನ್ನೋ ಜನ ಬಹಳ ಕಡಿಮೆ. ನಮಗೆ ತಿಳಿದ ಪ್ರಕಾರ, ಸಾಲು ಮರದ ತಿಮ್ಮಕ್ಕ ಎಂದರೆ ನಾಲ್ಕು ಕಿಲೋಮೀಟರ್ ಉದ್ದಕ್ಕೂ ಮರ ನೆಟ್ಡಿದ್ದಾರೆ. ಪೃಕೃತಿ ಮಾತೆಯನ್ನೇ ಬೆಳೆಸಿ ಪೋಷಿಸುವ ಮಹತ್ಕಾರ್ಯ ಮಾಡಿರುವ ಸಾಲು ಮರದ ತಿಮಕ್ಕ. ಅವರು ನಮ್ಮೆಲ್ಲರ ಹೆಮ್ಮೆ ಹಾಗೂ ಆದರ್ಶವಾದ ಪರಿಸರವಾದಿ. ತಿಮ್ಮಕ್ಕ ಮೂಲತಃ ಬೆಂಗಳೂರು ಹತ್ತಿರದ, ಮಾಗಡಿ ತಾಲ್ಲೂಕಿನ ಹುಳಿಕಲ್ ಗ್ರಾಮದವರು. ತಿಮಕ್ಕನರವರು ಹೆಚ್ಚು ಓದಿಲ್ಲದ ಕಾರಣ ದಿನಗೂಲಿ ಕೆಲಸಕ್ಕೆ ಹೋಗುತ್ತಿದ್ದರು. ಚಿಕ್ಕಯ್ಯ ಎಂಬ ಒಬ್ಬ ದನಕಾಯುವವರನ್ನು ಮದುವೆಯಾಗಿದ್ದರು. ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ಮಕ್ಕಳಾಗದಿದ್ದರೆ ಎಂತವರಿಗೂ ಬೇಸರವಾಗುತ್ತದೆ. ಹಾಗೆಯೇ ತಿಮ್ಮಕ್ಕನವರಿಗೂ ಈ ಕೊರತೆ ಕಾಡುತ್ತಲೇ ಇತ್ತು. ಆದರೆ ತಿಮ್ಮಕ್ಕ ಕುಗ್ಗಲಿಲ್ಲ. ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ಆಲದ ಮರಗಳನ್ನು ನೆಡಲಾರಂಭಿಸಿದರು. ಮರಗಳನ್ನೇ ಮಕ್ಕಳಂತೆ ಪ್ರೀತಿಯಿಂದ ಬೆಳೆಸಿದರು ಅವರ ಈ ಮಹಾನ್ ಕೆಲಸಕ್ಕೆ, ಪತಿ ಚಿಕ್ಕಯ್ಯ ಅವರೂ ಸಹ ಕೈ ಜೋಡಿಸಿದರು. ತಿಮ್ಮಕ್ಕ ಹುಟ್ಟುತ್ತಲೇ ಬಡತನವನ್ನು ಹಾಸಿ ಹೊದ್ದು ಬಂದವರು. ಬಡತನದ ಬೇಗೆಯ ನಡುವೆಯೂ ಆದರ್ಶಮಯ ಜೀವನ ನಡೆಸುತ್ತಿರುವ ಸಾರ್ಥಕ ಜೀವ ಅವರದು. ಮೊದಲ ವರ್ಷದಲ್ಲಿ ಹತ್ತು ಸಸಿಗಳನ್ನು ನೆರೆಯ ಕುದೂರು ಹಳ್ಳಿಯ ಬಳಿ 4 ಕಿ.ಮೀ. ಉದ್ದಳತೆಯ ದೂರ ನೆಡಲಾಯಿತು. ಹೀಗೆಯೇ ಎರಡನೇ ವರ್ಷ ಹದಿನೈದು ಮತ್ತು ಮೂರನೇ ವರ್ಷ 20 ಸಸಿಗಳನ್ನು ನೆಡಲಾಯಿತು. ಇವರು ಈ ಸಸಿಗಳನ್ನು ನೆಡಲು ತಮ್ಮ ಅತ್ಯಲ್ಪ ಆದಾಯವನ್ನೇ ಬಳಸಿದರು. ಸಸಿಗಳಿಗೆ ನೀರುಣಿಸಲು ಬಿಂದಿಗೆ ಕೊಳಗಗಳಲ್ಲಿ ನೀರನ್ನು ನಾಲ್ಕು ಕಿ.ಮೀ. ದೂರ ಸಾಗಿಸುತ್ತಿದ್ದರು. ಹಾಗೂ ಸಸಿಗಳನ್ನು ಮೇವಿನ ಜಾನುವಾರುಗಳ ಕಾಟದಿಂದ ತಪ್ಪಿಸಲು ಅವುಗಳ ಸುತ್ತ ಮುಳ್ಳು ಪೊದೆಗಳನ್ನು ಹೊದಿಸಿ ಕಾಪಾಡಿದರು. ಮಕ್ಕಳಿಲ್ಲದ ಕೊರಗು, ಬಡತನದಿಂದ ಬೆಂಡಾದ ಬಾಳ್ವೆಯ ನಡುವೆಯೂ ‘ನೆರಳು ನೀಡುವ ಮರಗಳೆ ನನ್ನ ಮಕ್ಕಳು, ಅವುಗಳನ್ನು ಬೆಳೆಸಿ ಪೋಷಿಸುವುದೇ ನನ್ನ ಜೀವನದ ಗುರಿ’ ಎಂದು ನಂಬಿ ನಡೆದ ಈ ವೃಕ್ಷ ಮಹಿಳೆ ತಿಮ್ಮಕ್ಕರವರಿಗೆ 100 ವರ್ಷ ತುಂಬಿದೆ. ತಮ್ಮ ಸಾಧನೆಗಾಗಿ ತಿಮ್ಮಕ್ಕ ಅವರಿಗೆ ಹಲವು ಸನ್ಮಾನಗಳು ಮತ್ತು ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದೆ. ಇವರಿಗೆ, ರಾಷ್ಟ್ರೀಯ ಪೌರ ಪ್ರಶಸ್ತಿ, ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ, ವೀರಚಕ್ರ ಪ್ರಶಸ್ತಿ, ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆರವರಿಂದ ಮಾನ್ಯತೆಯ ಪ್ರಮಾಣ ಪತ್ರ, ಭಾರತೀಯ ವೃಕ್ಷ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ ಕಡೆಯಿಂದ ಶ್ಲಾಘನೆಯ ಪ್ರಮಾಣ ಪತ್ರ, ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ, ಗಾಡ್‌ಫ್ರಿ ಫಿಲಿಪ್ಸ್ ಧೀರತೆ ಪ್ರಶಸ್ತಿ, ಪಂಪಾಪತಿ ಪರಿಸರ ಪ್ರಶಸ್ತಿ, ಬಾಬಾಸಾಹೇಬ್ ಅಂಬೇಡ್ಕರ್ ಪ್ರಶಸ್ತಿ, ವನಮಾತೆ ಪ್ರಶಸ್ತಿ, ಮಾಗಡಿ ವ್ಯಕ್ತಿ ಪ್ರಶಸ್ತಿ, ಶ್ರೀಮಾತಾ ಪ್ರಶಸ್ತಿ, ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ, ಕರ್ನಾಟಕ ಪರಿಸರ ಪ್ರಶಸ್ತಿ, ಮಹಿಳಾರತ್ನ ಪ್ರಶಸ್ತಿ, ನ್ಯಾಷನಲ್ ಸಿಟಿಜನ್ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಆರ್ಟ ಆಫ ಲೀವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ, 2010 ರ ಸಾಲಿನ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿಗಳು ಲಭಿಸಿವೆ. ಸಾಲು ಮರದ ತಿಮ್ಮಕ್ಕ ಅವರ ಸಾಧನೆಯಿಂದ ಸ್ಪೂರ್ತಿ ಪಡೆದಾದರೂ ನಾವು ಪರಿಸರವನ್ನು ಉಳಿಸುವಲ್ಲಿ ನಮ್ಮ ಕಾರ್ಯ ನಿರ್ವಹಿಸಬೇಕು. ಗಿಡ ಮರಗಳನ್ನು ನಮ್ಮ ಮನೆ ಸುತ್ತ ಬೆಳೆಸೋಣ. ಕಸ-ಕಡ್ಡಿ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಹಾಕೋದನ್ನು ನಿಲ್ಲಿಸೋಣ. ಶಬ್ದ ಮಾಲಿನ್ಯ ಕಡಿಮೆ ಮಾಡೋಣ. ಜಲಮಾಲಿನ್ಯ ಆದಷ್ಟು ತಡೆಯೋಣ. ನದಿ, ಭಾವಿ, ಕೆರೆ, ಕೊಳ್ಳಗಳನ್ನು ಉಳಿಸಿ ಮಾಲಿನ್ಯದಿಂದ ತಡೆಗಟ್ಟೋಣ. ನಮ್ಮ ಪರಿಸರವನ್ನು ಶುದ್ಧಿಯಾಗಿ ಉಳಿಸಲು ಇನ್ನು ಏನೇನು ಸಾಧ್ಯವೋ ಅದನ್ನು ಮಾಡೋಣ. ಇದೇ ನಾವು ಈ ಅಜ್ಜಿಗೆ ಸಲ್ಲಿಸುವ ಸನ್ಮಾನ- ಗೌರವ. ಸಾಲುಮರದ ತಿಮ್ಮಕ್ಕ ನಮಗೆಲ್ಲ ಮಾದರಿಯಾಗಲಿ. ********* ಕೆ.ಶಿವು.ಲಕ್ಕಣ್ಣವರ

ಸ್ವಾತ್ಮಗತ Read Post »

ಕಾವ್ಯಯಾನ

ಕುಟುಕು

ಲಕ್ಷ್ಮೀ ಪಾಟೀಲ್ ನರ‍್ವಾತ ವಲಯದಿಂದಪೋನಾಯಿಸಿದಾತನೊಬ್ಬ”ಹಲೋ ನಿಮ್ಮಮನೆಯಲ್ಲಿ ದೀಪಾ ಇದ್ದಾರೆಯೇ? “ಎಂದುಮಾತಿಗೆ ಪೀಠಿಕೆಯಾದಕೆಂಪಾದ ನಾನು “ಈ ಮನೆಯಲ್ಲಿದೀಪವಾಗಿ ಉರಿಯುವವಳು ನಾನೇ”ಎಂದು ಕುಕ್ಕಿದೆ ಪಾಪ ಆತನ ಬದುಕುಕತ್ತಲಲ್ಲಿ ಕೂತಿರುವುದಕ್ಕೆ ಕೊರಗಿದೆನನ್ನ ಕಣ್ಣ ಕೆಳಗಿನ ಕಪ್ಪಿಗೂ ಬೆದರಿದೆ ಆಗಂತುಕನೊಬ್ಬ ಫೋನಾಯಿಸಿಏರು ದನಿಯಲ್ಲಿ ಭಾವ ಬಣ್ಣ ಬದಲಿಸಿ” ನಾಗಮ್ಮನವರು ಇದ್ದಾರಾ? “ಎಂದಅವನ ಕುಟುಕುವ ದನಿಗೆ ಕಟಕಿ ಬೆರಸಿ“ಮೊಬೈಲ್ ನಾಗಪ್ಪಗಳೆಲ್ಲಭೂಮಿಯ ತುಂಬಾ ಹರಡಿವಿಷ ಬಿಡುತ್ತಿರುವಾಗ ಮನೆಯನಾಗಮ್ಮನವರೆಲ್ಲ ರಸಾತಳ ಸೇರಿನಾಗನೃತ್ಯಕ್ಕೆ ಅಣಿಯಾಗಿದ್ದಾರೆ” ಎಂದೆಹಿಡಿದ ಫೊನೀಗ ನೆಗೆದು ಬಿದ್ದುಸೂತಕ ಹರಡಿದೆ ಈ ಮೊಬೈಲ್ ವಿಚಿತ್ರ ರೀತಿಯಚಕ್ರವ್ಯೂಹಗಳನ್ನು ಕಟ್ಟುತ್ತದೆಒಂದನ್ನು ಭೇದಿಸಿದರೆಮತ್ತೊಂದು ತೆರೆಯುತ್ತದೆಎದುರಿಸಿ ಕಲಿಯಾಗದೇಎಗರಿಸಿ ಕವಿಯಾದೆಕಲಿಯಾಗಿದ್ದರೆ ಯುಗದ ಭಾರ ಹರ‍್ತಿದ್ದೆಕವಿಯಾಗಿ ಹೊತ್ತ ಭಾರಯುಗಕ್ಕೆ ರ‍್ಗಾಯಿಸಿದೆಮೊಬೈಲ್ ಯುಗಭಾರ ಹೊತ್ಕೊಂಡು ನೇತಾಡುತ್ತಿದೆ

ಕುಟುಕು Read Post »

You cannot copy content of this page

Scroll to Top