ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

ಕಸಾಪಗೆ ಮಹಿಳಾ ಅಧ್ಯಕ್ಷರು

ಕನ್ನಡ ಸಾರಸ್ವತ ಲೋಕಕ್ಕೆ ವಿದ್ಯಾ ದೇವಿ ಸರಸ್ವತಿಯ ಪಾತ್ರ ಬಹುಮುಖ್ಯವಾದುದು.ಧನ ಕನಕಗಳಿಗೆ ಲಕ್ಷ್ಮಿ ಅಧಿದೇವತೆಯಾದಂತೆ ಎಲ್ಲ ದೇವತಾ ಕಾರ್ಯಗಳು ಸಮಾನತೆಯಲಿ ಬೇಧ ಭಾವವಿಲ್ಲದೆ ನಡೆಯುವುದು. ಪೂಜೆಗಷ್ಟೇ ಸಿಮೀತ. ಅದು ದೇವರ ರೂಪದಲ್ಲಿರುವ ಸ್ತ್ರೀ ಮೂರ್ತಿಗಳಿಗೆ ಮಾತ್ರ.ಆದರೆ ವಾಸ್ತವದಲ್ಲಿ ಅವೆಲ್ಲ ಸ್ಥಾನ ಗಳು ನಿಲುಕಲು ಸಾಧ್ಯವೇ. ಅವು ಶೋಕಿಸಿನಲ್ಲಿ‌ಡುವ ಮೂರ್ತಿಗಳು.ಇವೇ ನಮಗೆ ಉತ್ತರ ನೀಡಬಲ್ಲ ಮಾನ ದಂಡಗಳು. ಮಹಿಳಾ ಸಂಘಟನೆಗಳಿಗೇನು ಬರವಿಲ್ಲ.ಆದರೆ ಮುಂದೆ ನಿಂತು ನಿಭಾಯಿಸುವ ಜವಾಬ್ದಾರಿ ಬೇಕಲ್ಲ.ಪುರುಷರಂತೆ ಮೂರು ಹೊತ್ತು ಆ ಕೆಲಸ ಮಾಡಲು ಆತ್ಮ ನಿರ್ಭರತೆಯಿ ರುವ ಮಹಿಳೆಯರಿಗೇನು ಕೊರತೆಯಿಲ್ಲ. ಆದರೆ ಆ ಮಹಿ ಳೆಯ ಮನೋಬಲ ಕುಗ್ಗಿಸುವ ಪಿತೂರಿಗಳಿಗೇನು ಬರವೇ ನಾವು ನಿಮ್ಮ ಜೊತೆ ಎಂದು ಧೈರ್ಯ ತುಂಬಿ ಬೆಳೆಸುವವ ರು ಬೆರಳೆಣಿಕೆಯಷ್ಟು. ಸಮಾನತೆ ಡಂಗುರ ಸಾರಿ ಕೂಗಿದ್ದೆ ಬಂತು.ಸಮಾನತೆ ಮಾತ್ರ ಮಂಗ ತಕ್ಕಡಿಯಿಂದ ಬೆಣ್ಣೆ ಹಂಚಿದಂತೆ.ತೊಟ್ಟಿಲ ತೂಗುವ ಕೈ ಜಗತ್ತನ್ನೇ ತೂಗಬಲ್ಲ ದು ಆತ್ಮವಿಶ್ವಾಸಕ್ಕೆ ಹೆಸರೆ ಸ್ತ್ರೀ.. ಅಬಲೆಯೆಂಬ ಪಟ್ಟ ಇಂದು ನಿನ್ನೆಯದಲ್ಲ,ಅದು ಶತಮಾನಗಳಿಂದ‌ ಬಂದರೂ ಆ ಪಟ್ಟವನ್ನು ಅಲ್ಲಗಳೆದು, ಎಲ್ಲ ಕ್ಷೇತ್ರಗಳಲ್ಲೂ ಧೈರ್ಯ ಗುಂದದೇ ದಿಟ್ಟ ನಡಿಗೆಯ ಛಾಪು ಮೂಡಿಸಿದರೂ,ನಂಬಿ ಕೆ ಮೇಲ್ನೊಟಕೆ ಸಬಲೆ‌ಯಪಟ್ಟ. ಪಟ್ಟು ಹಿಡಿದು ಪಡೆಯ ಲು ಧೈರ್ಯ ಸಾತಿಲ್ಲ. ಇದೊಂದು ಅವಕಾಶ.ಪ್ರಯತ್ನದ ಹಾದಿಯ ಮುನ್ನುಡಿ ಬರೆಯಲು ಅವಕಾಶ.ಕನ್ನಡವೇ ಸತ್ಯ ಕನ್ನಡವೇ ನಿತ್ಯ… ಕನ್ನಡ ಸಾಹಿತ್ಯ ಪರಿಷತ್ತಿಗೆ ನೂರರ ಸಂಭ್ರಮ.ಹೇಳಿಕೊಳ್ಳ ಲು‌ ಹೆಮ್ಮೆಪಡುವಂತ ವಿಚಾರ.ಆದರೆ ಆ ಸಂಭ್ರಮ ವನ್ನು ಪ್ರಶ್ನಿಸುವವರು ಯ್ಯಾರು? ಬೆಕ್ಕಿಗೆ ಗಂಟೆ ಕಟ್ಟಿದಂತೆ.ತುಂ ಬಾ ಮಹಿಳೆಯರು ಆಕಾಂಕ್ಷಿಗಳಾದರೂ ಅವರ ಬೆಂಬಲಕ್ಕೆ ನಿಲ್ಲುವವರಾರು? ಸಣ್ಣ ಪುಟ್ಟ ಹುದ್ದೆ ನೀಡಿ ಸಮಾಧಾನ ಪಡಿಸಲು ಮೊದಲೇ ಸಿದ್ದತೆ ನಡೆದಿರುವುದು ಗೊತ್ತಿಲ್ಲದ ವಿಚಾರವೇನಲ್ಲ.ತಾಲೂಕಿನ ಕ‌.ಸಾ.ಪ ಅಧ್ಯಕ್ಷರ ನೇಮಕಕ್ಕೆ ಆಕಾಂಕ್ಷಿಗಳಾರು ಎಂದು ಕೇಳುವ ಸಭೆ.ನಾನು ಕ.ಸಾ.ಪ. ಸದಸ್ಯೆಯಾಗಿದ್ದಕ್ಕೆ ಆ ಸಭೆಗೆ ನಾನು ಭಾಗವಹಿಸಿ ದ್ದೆ.ಎಲ್ಲ ಪುರುಷರು ತಾವುಗಳು ಆಕಾಂಕ್ಷಿಗಳೆಂದು ಹೇಳುವಾಗ, ಅಲ್ಲಿ ಯಾವ ಒಬ್ಬ ಮಹಿಳೆಯು ಉಪಸ್ಥಿತರಿರಲಿಲ್ಲ, ಇದ್ದವಳು ನಾನೊಬ್ಬಳೇ..ಅವರೆಲ್ಲ ಕೇಳುವಾಗ ನಾನು ಯ್ಯಾಕೆ ಕೇಳಬಾರದೆಂದು ಧೈರ್ಯ ಮಾಡಿ ನಿಂತು ನಾನು ಆಕಾಂಕ್ಷಿಯೆಂದು ಹೇಳಿದ್ದೆ ತಡ ಎಲ್ಲರ ಕಣ್ಣುಗಳು ನನ್ನೆ ನೋಡುತ್ತಿದ್ದವು ಅಷ್ಟೇ.ನಾನು ತಪ್ಪು ಕೇಳಿದೆನಾ ಎಂಬ ಭಾವ.ಅಂದರೆ ನಾವುಗಳು ಬಯಸಬಾರದು.ಆ ಹುದ್ದೆಗ ಳು ಅವರಿಗೆ ಮಾತ್ರ ಮೀಸಲು.ಅದು ಸಿಗದಂತೆ ಮಾಡುವ ರಾಜಕೀಯ ಕನ್ನಡ ಸಾಹಿತ್ಯ ಪರಿಷತ್ತಿನಲ್ಲೂ ನಡಿಯತ್ತೆ ಅ ನ್ನುವ ವಾಸ್ತವ ಅರಿವಾಗಲು ಬಹಳ ಸಮಯ ಬೇಕಾಗಲಿ ಲ್ಲ. ಮಹಿಳಾ ಸಂಘಟನೆಗಳು ಮನೋಬಲದಿಂದ ಒಗ್ಗೂಡ ಬೇಕು ಅದು ಅನಿವಾರ್ಯ.ಅಲ್ಲದೇ ಕನ್ನಡ ಸಾಹಿತ್ಯ ಪರಂ ಪರೆಗೆ ದಕ್ಕೆಯಾಗದಂತೆ ನಡೆಸಿಕೊಂಡು ಹೋಗುವ,ರಾಜ ಕೀಯ ತಂತ್ರದಿಂದ ಹೊರಬಂದು ಮನೆಬಾಗಿಲಿಗೆ ಕನ್ನಡದ ಕಂಪನ್ನು ಪಸರಿಸುವ ಮನಸ್ಸು ಮಹಿಳೆಯರಿಗೆ ಇದೆ. ಸಂ ಸಾರವನ್ನು ಅಚ್ಚುಕಟ್ಟಾಗಿ ನಡೆಸುವ,ಮಕ್ಕಳಿಗೆ ಸಂಸ್ಕಾರ ಬಿತ್ತುವ ಸಂಸ್ಕೃತಿ ನೆಲೆಯಾಗಿರಿವುದು‌ ಮಹಿಳೆಯರಲ್ಲಿ ಎಂಬುದನ್ನು ಅಲ್ಲಗಳೆಯುವಂತಿಲ್ಲ.ಎಲ್ಲೋ ಅಪವಾದ ವೆಂಬಂತೆ ಕಳಂಕಿತರು ಪುರುಷರಲ್ಲಿಯು,ಮಹಿಳೆಯರಲ್ಲಿ ಯು ಇಲ್ಲವೆಂದು ಹೇಳಲು ಸಾಧ್ಯವೇ? ಹಾಗಂತ ದೊರಕುವವರಿಗೂ ದೊರಕದೇ ವಂಚಿತರಾಗಿರುವುದು ನ್ಯಾಯವೇ? ಪ್ರಕೃತಿ ಸಮಾನತೆಯನ್ನು ಕಾಯ್ದು ಕೊಳ್ಳುವಂತೆ,ನಾವು ಕಾಯ್ದು ಕೊಳ್ಳುವುದು ಮುಖ್ಯ. ಇಲ್ಲವಾದರೆ ಸುನಾಮಿ, ಭೂಕಂಪ ಆಗುವುದೆಂಬ ನಿರೀಕ್ಷೆ.ಇದು ಕೇವಲ ಪರಿಸರ ಕ್ಕೊಂದೇ ಇರುವ ಮಾನದಂಡ.ನಾವುಗಳು ಮುಂದಾಗುವ ಅನಾಹುತ ಮನೆಯಿಂದಲೇ ಎಂದು ನೆನೆದು.ಮೌನವಾಗು ತ್ತೆವೆ.ಅದರ ಸರಿಯಾದ ಉಪಯೋಗ ಹಾಗೂ ಉತ್ತರ ನಮ್ಮ ಮುಂದಿದೆ.ನೂರು ವರುಷ ಅದರೂ ಅಧ್ಯಕ್ಷ ಸ್ಥಾನ ಕ್ಕೆ ಯಾವ ಮಹಿಳೆಗೂ ಅವಕಾಶ ದೊರಕದಿರುವುದು. ಇನ್ನಾದರೂ ಎಚ್ಚರಗೊಂಡು ಆಂತರಂಗಿಕವಾಗಿ ಚಳುವಳಿ ನಡೆಸುವುದು ಅವಶ್ಯಕತೆಯಿದೆ. ಹೆಸರಿಗೆ ಮಹಿಳಾ ಸಂಘಟನೆಗಳು‌ ಎಂಬ ಹಣೆಪಟ್ಟಿ ಕಿತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಗದ್ದುಗೆಯ ಏರುವ ಮನಸ್ಸು ಮಾಡಬೇಕು.ಇಷ್ಟು ವರುಷ ಬೆಂಬಲ ನೀಡುತ್ತ ಕೆಲಸ ಮಾಡಿದ್ದೆವೆ.ಮುಂದೆಯು ಮಾಡುವ ತಾಕತ್ತು ಇದೆ. ನಾವು ಕೊಟ್ಟ ಬೆಂಬಲಕ್ಕೆ ಪ್ರತಿಯಾಗಿ ಮಹಿಳೆಯರಿಗೆ ಅಧ್ಯಕ್ಷ ಸ್ತಾನ ಸಿಗುವಲ್ಲಿ ಧ್ಬನಿಯತ್ತಬೇಕು…ಕಾಗದ ಪತ್ರಗಳಲ್ಲಿಇದ್ದುದು ವಾಸ್ತವವಾಗಿ ಕೈಗೆಟುಕುವಂತೆ ಮಾಡಬೇಕು.ಧ್ವನಿ ಎತ್ತುವವರ ಧ್ವನಿ ನಿಲ್ಲುವಂತಾಗದಿದ್ದರೆ ಸಾಕು. ಆಪಾದನೆ,ನಿಂದನೆ,ಚಾರಿತ್ರ್ಯಿಕ ಹಾನಿಯ ಹುನ್ನಾರಗಳು ಮಹಿಳೆಯ ಆತ್ಮಾಭಿಮಾನ ಕುಗ್ಗಿದರೆ ಅವಳೆಂದೆಂದಿಗೂ ನಾಲ್ಕು ಗೋಡೆಯ ಬಿಟ್ಟು ಬರಲಾರಳು. ಕನ್ನಡ ಸಾಹಿತ್ಯ ಪರಿಷತ್ತು ಎಲ್ಲರ ಸೊತ್ತು.ಕನ್ನಡ ಸಾಹಿತ್ಯ ಅನೇಕ ಅನರ್ಘ್ಯ ರತ್ನಗಳು ನೀಡಿದ ಆಸ್ತಿ.ಅದನ್ನು‌ ಉಳಿಸಿ,ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ. ಅದರ ಸೇವೆ ಮಾಡುವ ಭಾಗ್ಯ ಎಲ್ಲರಿಗೂ ದೊರೆಯಬೇಕು. ಮಹಿಳೆಯರಿಗೆ ಮೊದಲು.ಈ ಸಲವಾದರೂ ಶುಕ್ರದೆಸೆ ಪ್ರಾರಂಭವಾಗಲಿ ಎಂಬ ಆಶಯ.ಬದಲಾವಣೆಯತ್ತ ಹೆಜ್ಜೆ ಹಾಕೋಣ…..ಸಿರಿಗನ್ನಡಂ‌ ಗೆಲ್ಗೆ ಸಿರಿಗನ್ನಡಂ ಬಾಳ್ಗೆ. **************************************************** ಶಿವಲೀಲಾ ಹುಣಸಗಿ

ಕಸಾಪಗೆ ಮಹಿಳಾ ಅಧ್ಯಕ್ಷರು Read Post »

ಇತರೆ

ಕಸಾಪಗೆ ಮಹಿಳಾ ಅಧ್ಯಕ್ಷರು

ಕರ್ನಾಟಕ ಸಾಹಿತ್ಯ ಪರಿಷತ್ ಎಂಬ ಹೆಸರಿನೊಂದಿಗೆ 1915 ರಲ್ಲೇ ಕನ್ನಡ ನಾಡು ನುಡಿಯ ರಕ್ಷಣೆ ಹಾಗೂ ಕನ್ನಡ ಲೇಖಕ ಲೇಖಕಿಯರನ್ನು ಪ್ರೋತ್ಸಾಹಿಸಲೆಂದೇ ಹುಟ್ಟಿಕೊಂಡ ಸಂಸ್ಥೆ, ನಂತರದಲ್ಲಿ 1935ರಲ್ಲಿ ಅರ್ಥಪೂರ್ಣವಾಗಿ ಕನ್ನಡ ಸಾಹಿತ್ಯ ಪರಿಷತ್ ಎಂದು ಮರು ನಾಮಕರಣಗೊಂಡಿದ್ದು ಕನ್ನಡ ಭಾಷೆಯ ಗರಿಮೆಗೆ ಸಾಕ್ಷಿ. ಇಲ್ಲಿಯವರೆಗೂ ಅನೇಕ ಕನ್ನಡ ಸಾಹಿತ್ಯ ಸಮ್ಮೇಳನಗಳು , ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳು ಜರುಗುವುದರೊಂದಿಗೆ ಎಲ್ಲೆಡೆ ಕನ್ನಡ ಸಾಹಿತ್ಯದ ಘಮ ಪಸರಿಸಿದ ಹಿರಿಮೆ ಕನ್ನಡ ಸಾಹಿತ್ಯ ಪರಿಷತ್ ಗೆ ಸೇರಿದೆ ಎಂದರೆ ತಪ್ಪಾಗಲಾರದು. ಸುಮಾರು ನೂರು ವರ್ಷಗಳ ಕನ್ನಡ ಸಾಹಿತ್ಯ ಪರಿಷತ್ ನ ಯಾನದಲ್ಲಿ ಹೆಚ್.ವಿ.ನಂಜುಂಡಯ್ಯನವರಿಂದ ಮುಂದುವರಿದು ಮನು ಬಳಿಗಾರ್ ರವರೆಗೆ ಸರಿ ಸುಮಾರು ಇಪ್ಪತ್ತೈದು ಅಧ್ಯಕ್ಷರುಗಳನ್ನು ಕನ್ನಡ ಸಾಹಿತ್ಯ ಪರಿಷತ್ ಕಂಡಿದೆ. ಮುಖ್ಯವಾಗಿ ಕನ್ನಡದ ಮಹಿಳಾ ಸಾಹಿತಿಗಳಿಗೆ ಪ್ರೋತ್ಸಾಹ ನೀಡಿ ಮಹಿಳಾ ದನಿಗಳನ್ನು ಎತ್ತರಿಸುವ ಉದ್ದೇಶ ಹೊಂದಿದ ಪರಿಷತ್ ನಲ್ಲಿ ಈವರೆಗೂ ಒಬ್ಬ ಮಹಿಳಾ ಸಾಹಿತಿ ಅಧ್ಯಕ್ಷರ ಗಾದಿ ಏರದಿರುವುದು ಕನ್ನಡ ಸಾಹಿತ್ಯ ಪರಿಷತ್ ನ ಕಪ್ಪು ಚುಕ್ಕೆ ಎಂದರೆ ತಪ್ಪಾಗಲಾರದು. ಇಷ್ಟಕ್ಕೂ ನಮ್ಮ ಕನ್ನಡ ನಾಡಿನ ಸಾಹಿತ್ಯ ಕ್ಷೇತ್ರದಲ್ಲಿ ಮಹಿಳಾ ದನಿಗಳ ಕೊರತೆಯುಂಟೇ ಎನ್ನುವುದನ್ನೊಮ್ಮೆ ಒರೆ ಹಚ್ಚಿ ನೋಡಬೇಕಾಗಿದೆ. ಕನ್ನಡ ಸಾಹಿತ್ಯ ಲೋಕದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಇತ್ತೀಚಿನದ್ದೇನಲ್ಲ ಸರಿಸುಮಾರು 1500 ವರ್ಷಗಳ ಹಿಂದಿನಿಂದಲೇ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದ ಮಹಿಳೆಯ ಗುರುತುಗಳಿವೆ. ಹನ್ನೆರಡನೆಯ ಶತಮಾನದ ವಚನಕಾಲದಲ್ಲಿ ಮೊದಲ ಬಂಡಾಯ ಲೇಖಕಿಯಾಗಿ ಅಕ್ಕಮಹಾದೇವಿ ಕಂಡುಬಂದರೂ ಸಹ ಅವರೊಟ್ಟಿಗೆ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡ ಸುಮಾರು ಮೂವತ್ತಾರು ವಚನಕಾರ್ತಿಯರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಮೆರಗು ತುಂಬಿದವರೇ, ವಿಶೇಷವೆಂದರೆ ಈ ಕಾಲಘಟ್ಟದಲ್ಲಿ ದಲಿತ ಸ್ತ್ರೀಯರಾದ ಸಂಕವ್ವೆ ಗುಡ್ಡವ್ವೆ ಕೇತಲದೇವಿಯಂತವರೂ ವಚನ ಸಾಹಿತ್ಯಕ್ಕೆ ತಮ್ಮದೇ ಕೊಡುಗೆ ನೀಡುವುದರೊಂದಿಗೆ ದಲಿತಸಾಹಿತ್ಯದ ದನಿಯಾಗಿದ್ದಾರೆ. ಪುರುಷ ಪ್ರಧಾನ ಸಮಾಜದಲ್ಲಿ ಸಾರ್ವಜನಿಕ ಜೀವನಕ್ಕೆ ತೆರೆದುಕೊಳ್ಳಲಾರದ ಮಹಿಳೆಯರು ಮುಖ್ಯವಾಹಿನಿಗೆ ಬರುವುದು ತಡವಾಯಿತಾದರೂ ಸಾಹಿತ್ಯ ಕ್ಷೇತ್ರದಲ್ಲಿ ಮಹಿಳೆಯರು ತಮ್ಮದೇ ಛಾಪು ಮೂಡಿಸಿದ್ದಾರೆ. ಪುರುಷ ಪ್ರಧಾನ ಸಮಾಜವನ್ನು ಪ್ರಶ್ನಿಸುವುದರೊಂದಿಗೆ ಸಾಹಿತ್ಯ ಸೃಷ್ಟಿ ಸಾಂಸ್ಕೃತಿಕ ಬದಲಾವಣೆಗೆ ಲೇಖಕಿಯರು ಕಾರಣರಾಗಿದ್ದಾರೆ. ದಾಸ ಸಾಹಿತ್ಯದಲ್ಲೂ ಮಹಿಳೆಯರು ರಚಿಸಿದ ಕೀರ್ತನೆಗಳ ಕುರುಹಿದೆ. ಜನಪದ ಗೀತೆಗಳ ರಚನೆಯಲ್ಲಿ ಮಹಿಳೆಯರ ಪಾತ್ರ ಮಹತ್ತರವಾದುದು ಎಂದರೆ ತಪ್ಪಾಗಲಾರದು. ಕಾಲದಿಂದಲೂ ಪುರುಷ ಪ್ರಧಾನ ವ್ಯವಸ್ಥೆಯಡಿ ಮರೆಯಾಗಿದ್ದಂತಹ ಬಹಳಷ್ಟು ಲೇಖಕಿಯರ ನಡುವೆ ಇಪ್ಪತ್ತನೆಯ ಶತಮಾನದಲ್ಲಿ ಮುಕ್ತವಾಗಿ ಸಾಹಿತ್ಯ ಕ್ಷೇತ್ರದಲ್ಲಿ ಮಹಿಳೆಯರು ತೊಡಗಿಸಿಕೊಂಡಿದ್ದಾರೆ. ಪುರುಷ ಪ್ರಾಬಲ್ಯವುಳ್ಳ ಕನ್ನಡ ಸಾಹಿತ್ಯ ಲೋಕದಲ್ಲಿ ತ್ರಿವೇಣಿ ಇಂದಿರಾ ರಂತಹ ಕಾದಂಬರಿಗಾರ್ತಿಯರು ಮಿನುಗು ಚುಕ್ಕೆಯಂತೆ ಮಿನುಗಿದ್ದಾರೆ. 1970ರ ನಂತರ ದಲಿತ ಸಾಹಿತ್ಯದ ರಚನೆಯಲ್ಲಿ ತೊಡಗಿಸಿಕೊಂಡಿರುವ ಲೇಖಕಿಯರಾದ ಗೀತಾ ನಾಗಭೂಷಣ, ಅನುಪಮಾ ನಿರಂಜನ್ ಮುಂತಾದವರನ್ನು ಕಾಣಬಹುದು, ಸ್ತ್ರೀ ಸಮಾನತೆ ಎತ್ತಿ ಹಿಡಿದು, ಸ್ತ್ರೀ ಶೋಷಣೆಗಳ ವಿರುದ್ಧ ಲೇಖನಿಯಾಗಿರುವ ಅನೇಕ ಮಹಿಳಾ ಲೇಖಕಿಯರು ಕವಯಿತ್ರಿಯರು ನಮ್ಮ ನಡುವೆ ಇದ್ದಾರೆ. ಕನ್ನಡ ಸಾಹಿತ್ಯಕ್ಕೆ ಇಷ್ಟೆಲ್ಲಾ ಕೊಡುಗೆ ನೀಡಿರುವ ಮಹಿಳೆಯರು ಇದ್ದಾಗಿಯೂ ಸಹ ಕನ್ನಡ ಸಾಹಿತ್ಯ ಪರಿಷತ್ ಮಹಿಳೆಯರಿಗೆ ಸ್ಥಾನಮಾನ ದೊರಕಿಕೊಡದಿರುವುದು ವಿಷಾದನೀಯ. 1985ರಲ್ಲೇ ಸರೋಜಿನಿ ಮಹಿಷಿಯವರು ಮಹಿಳೆಯರಿಗಾಗಿಯೇ ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಸಿ ಮಹಿಳಾ ಸಾಹಿತಿಗಳಿಗೆ ಪ್ರೋತ್ಸಾಹಿಸುವ ಕೆಲಸ ಮಾಡಿರುವುದು ಪ್ರಶಂಸಾರ್ಹ. ಇದೆಲ್ಲದರ ನಡುವೆಯೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಗಾದಿಗೆ ಮಹಿಳೆಯರನ್ನು ಕಡೆಗಣಿಸಿರುವುದು ಕನ್ನಡ ಸಾಹಿತ್ಯದಲ್ಲಿ ಪುರುಷರ ಪ್ರಾಬಲ್ಯವನ್ನು ಎತ್ತಿ ತೋರಿಸಿದೆ. ನೂರು ವರ್ಷಗಳನ್ನು ಪೂರೈಸಿರುವ ನಮ್ಮ ಕನ್ನಡ ಸಾಹಿತ್ಯ ಪರಿಷತ್ ಇನ್ನಾದರೂ ಕನ್ನಡ ಸಾಹಿತ್ಯ ಲೋಕದಲ್ಲಿ ಮಹಿಳೆಯರಿಗೆ ದೊರೆಯಬೇಕಾದ ಸ್ಥಾನಮಾನ ಹಾಗೂ ಪ್ರಾತಿನಿಧ್ಯ ನೀಡುವುದರೊಂದಿಗೆ ಸಮಾನತೆ ಎತ್ತಿ ಹಿಡಿಯಲಿ, ಮಹಿಳಾ ಲೇಖಕಿಯರಿಗೆ ಪ್ರೋತ್ಸಾಹ ನೀಡುವುದರೊಂದಿಗೆ ಕನ್ನಡದ ತೇರು ಒಟ್ಟಾಗಿ ಎಳೆಯುವಂತಾಗಲಿ. *********************************************************** ಅರ್ಪಣಾ ಮೂರ್ತಿ

ಕಸಾಪಗೆ ಮಹಿಳಾ ಅಧ್ಯಕ್ಷರು Read Post »

ಇತರೆ

ಕಸಾಪಗೆ ಮಹಿಳಾ ಅಧ್ಯಕ್ಷರು ಬೇಕು

‘ತೊಟ್ಟಿಲನ್ನು ತೂಗುವ ಕೈ ಜಗತ್ತನ್ನೇ ತೂಗಬಲ್ಲದು’ ಇದು ಸಾಬೀತಾಗಿ ಶತಮಾನಗಳೇ ಕಳೆದರೂ ನಮ್ಮ ಕಸಾಪ ಗೆ ಒಮ್ಮೆಯೂ ಮಹಿಳಾ ಅಧ್ಯಕ್ಷರ ಆಯ್ಕೆ ಆಗಿಲ್ಲ, ಯಾರೂ ಸಹ ಸ್ಪರ್ಧಿಸಲಾಗಿಲ್ಲ. ಭಾರತವೆಂಬ ದೊಡ್ಡ ಪ್ರಜಾಪ್ರಭುತ್ವದ ರಾಷ್ಟ್ರವನ್ನ ಇಂದಿರಾ ಗಾಂಧಿಯವರು ಆಳಿದರು. ಅಂತೆಯೇ ನಮ್ಮ ಕಸಾಪ ಗೂ ಮಹಿಳಾ ಅಧ್ಯಕ್ಷೆಯ ಆಯ್ಕೆ ಆಗಬೇಕು. ಮನೆಯಲ್ಲಿ ಅಡುಗೆ ಮಾಡುವುದರಿಂದ ಹಿಡಿದು ಆಕಾಶದಲ್ಲಿ ವಿಮಾನ ಚಾಲನೆ, ಅಷ್ಟೇ ಏಕೆ ಅಂತರಿಕ್ಷದವರೆಗೂ ಮಹಿಳೆ ತಲುಪಿಯಾಗಿದೆ. ಪ್ರತಿ ಕ್ಷೇತ್ರದಲ್ಲೂ ಮಹಿಳೆ ತನ್ನ ಪ್ರತಿಭೆ ಮೆರೆದಾಗಿದೆ. ಇಲ್ಲಿ ಮಹಿಳೆ ಪುರುಷನಿಗೆ ಸಮ ಎಂದು ಹೇಳುವದಕ್ಕಿಂತ ಮಹಿಳೆಗೆ ಒಂದು ಕೈ ಹೆಚ್ಚೇ ಸಾಮರ್ಥ್ಯವಿದೆ ಎಂದರೆ ಖಂಡಿತ ಉತ್ಪ್ರೇಕ್ಷೆ ಅಲ್ಲ! ಮನೆ, ಮಕ್ಕಳು, ಸಂಸಾರ, ಉದ್ಯೋಗ, ಕೆರಿಯರ್, ಆಸಕ್ತಿಗಳು ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸುತ್ತಿರುವಂತಹ ಮಹಿಳೆ ಕಸಾಪ ಅಧ್ಯಕ್ಷೆ ಆಗಿಯೂ ಬಹಳಷ್ಟು ಕೆಲಸಗಳನ್ನ ಪರಿಷತ್ತಿನ ಔನ್ಯತ್ಯಕ್ಕಾಗಿ ಮಾಡಬಲ್ಲಳು. ಶರಣರ ಕಾಲದಿಂದಲೂ ಕವಯಿತ್ರಿಯರು ಕನ್ನಡ ಸಾಹಿತ್ಯಕ್ಕೆ ಉತ್ಕೃಷ್ಟ ಕೊಡುಗೆ ಮಹಿಳೆಯರು ನೀಡುತ್ತಲೇ ಬಂದಿದ್ದಾರೆ. ಪ್ರಸ್ತುತ ನಮ್ಮಲ್ಲಿ ಬಹಳಷ್ಟು ಹಿರಿಯ ಮಹಿಳಾ ಸಾಹಿತಿಗಳಿದ್ದಾರೆ, ಅವರಲ್ಲಿ ಯಾರಾದರೂ ಸ್ಪರ್ಧಿಸಿ ಅಧ್ಯಕ್ಷರ ಸ್ಥಾನ ತುಂಬಿದರೆ ಇಲ್ಲಿಯವರೆಗೂ ಮಹಿಳಾ ಅಧ್ಯಕ್ಷೆ ಇಲ್ಲ ಎನ್ನುವ ಕೊರಗೂ ನೀಗುತ್ತೆ. ಮತ್ತಷ್ಟು ಹೊಸ ಕನ್ನಡ ಪರ ಕೆಲಸಗಳನ್ನ, ಹೊಸ ಸಾಹಿತ್ಯಿಕ ಚಟುವಟಿಕೆಗಳನ್ನ ಮಾಡಿ ಪರಿಷತ್ತಿನ ಜೀರ್ಣೋದ್ಧಾರ ಮಾಡಲಿ ಅನ್ನೋದು ನನ್ನ ಆಶಯ. **************************************************************** ಚೈತ್ರಾ ಶಿವಯೋಗಿಮಠ

ಕಸಾಪಗೆ ಮಹಿಳಾ ಅಧ್ಯಕ್ಷರು ಬೇಕು Read Post »

ಇತರೆ

ಕಸಾಪಗೆ ಮಹಿಳಾ ಅಧ್ಯಕ್ಷರು ಯಾಕಿಲ್ಲ?

ಚರ್ಚೆ . ಕನ್ನಡ ಸಾಹಿತ್ಯ ಪರಿಷತ್ತು ನೂರು ವರ್ಷದ ಹಾದಿ ಸವೆಸಿ ಮೇಲೆ ನಾಲ್ಕು ವರ್ಷಗಳಾಗಿವೆ.‌ ಮತ್ತೊಂದು  ಚುನಾವಣೆ ಎದುರಿಸಿ, ಕಸಾಪ ಅಧ್ಯಕ್ಷ ಗದ್ದುಗೆ ಏರಲು ಹಲವಾರು ಕಸರತ್ತುಗಳು ನಡೆದಿವೆ. ಕಸಾಪ ಅಧ್ಯಕ್ಷರ  ಅವಧಿ ಐದು ವರ್ಷ ಎಂದೂ ಬೈ ಲಾದಲ್ಲಿ (ಠರಾವು)ತಿದ್ದುಪಡಿಯಾಗಿ, ಅದಕ್ಕೆ ಕಸಾಪ ಸರ್ವ ಸದಸ್ಯರ ವಾರ್ಷಿಕ ಸಭೆಯಲ್ಲಿ ಮುದ್ರೆ ಸಹ ಬಿದ್ದಿದೆ. ಚಾಮರಾಜನಗರದಲ್ಲಿ  ೨೦೧೯ ರಲ್ಲಿ ನಡೆದ ರಾಜ್ಯ ಕಸಾಪ ಸರ್ವಸದಸ್ಯರ ಸಭೆಯಲ್ಲಿ ಅಧ್ಯಕ್ಷರ ಅವಧಿ ಐದು ವರ್ಷ ಎಂದು ಅನುಮೋದನೆ ಸಹ ಸಿಕ್ಕಿದೆ. ಅದರ ಫಲ ಮುಂದೆ ಕಸಾಪ ಅಧ್ಯಕ್ಷರಾಗಿ ಗೆದ್ದು ಬರುವವರು ಉಣ್ಣಲಿದ್ದಾರೆ‌ .ಈಗ  ಕಸಾಪ ಅಧ್ಯಕ್ಷರಾಗಿ ಸಾಹಿತ್ಯದ ರಥ ಎಳೆಯಲು ಕೆಲವರು  ಬಹಿರಂಗ ವಾಗಿ, ಕೆಲವರು ಅಪ್ತರಲ್ಲಿ  ಚುನಾವಣೆಗೆ ಸ್ಪರ್ಧಿಸುವ ಬಯಕೆ ವ್ಯಕ್ತಪಡಿಸುತ್ತಿದ್ದಾರೆ‌ . ಇದು ಸಹಜ. ಪ್ರಜಾಪ್ರಭುತ್ವದ ದಾರಿಯಲ್ಲಿ ಎಲ್ಲವೂ ಸಾಗಿದೆ. ಪ್ರಶ್ನೆ ಏನಪ ಅಂದರ ಕಸಾಪ ೧೦೪ ವರ್ಷದ ತನ್ನ ಅವಧಿಯಲ್ಲಿ ಒಮ್ಮೆಯೂ ಮಹಿಳಾ ಅಧ್ಯಕ್ಷೆಯನ್ನು ಕಂಡಿಲ್ಲ.‌ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಅರ್ಹರಾದ ಮಹಿಳೆಯರು , ಮಹಿಳಾ ಸಾಹಿತಿಗಳ ದೊಡ್ಡ ಪಡೆ ನಮ್ಮಲ್ಲಿದೆ. ಕರ್ನಾಟಕ ಲೇಖಕಿಯರ ಸಂಘವೂ ಇದೆ. ಆದರೆ ಅವರು ಚುನಾವಣೆಗೆ ಸ್ಪರ್ಧಿಸಲು ಮನಸು ಮಾಡಿದಂತಿಲ್ಲ.‌ ಯಾಕೆ ಮನಸು ಮಾಡಲಿಲ್ಲ ಎಂಬ ಪ್ರಶ್ನೆ ಗಿಂತ , ಮುಂದೆ ಅವರು ಸ್ಪರ್ಧಿಸಲಿ ಎಂಬುವ ಪುರುಷ ಮನಸುಗಳು  ಸಹ ಇವೆ.‌ಹಣ ,ಜಾತಿ ರಾಜಕೀಯ, ರಾಜಕೀಯದ ಪರೋಕ್ಷ ಬೆಂಬಲ ಇವೆಲ್ಲವನ್ನೂ ಪಕ್ಕಕ್ಕೆ ಇಟ್ಟು , ಸ್ಪರ್ಧಿಸಲು ಅವಕಾಶವಿದೆ. ಅತ್ಯಂತ ಪ್ರಖರ ವೈಚಾರಿಕತೆ ಇರುವ ಮಹಿಳಾ ಬರಹಗಾರರು ಇದ್ದಾರೆ.‌ಹಾಗಾಗಿ ಮಹಿಳೆಯೊಬ್ಬರು ಮುಂಬರುವ ಕಸಾಪ ಅಧ್ಯಕ್ಷ ಗಾದಿಗೆ ಸ್ಪರ್ಧಿಸಬೇಕಿದೆ.‌ಇದು ಸಾಹಿತ್ಯ ಸಂಗಾತಿ ಕನ್ನಡ ವೆಬ್ನ ಆಶಯ. ಯಾಕೆ ಮಹಿಳೆ ಬೇಕು? ಕಸಾಪ ಅಧ್ಯಕ್ಷ ಹುದ್ದೆಗೆ ಮಹಿಳೆ;  ಪುರುಷರಷ್ಟೇ ಅರ್ಹಳು. ಇದು ಕರ್ನಾಟಕ.‌ ಮಹಿಳಾ ಸಮಾನತೆಯನ್ನು ೧೨ ನೇ ಶತಮಾನದಲ್ಲಿ ಸಾಧಿಸಿದ ನೆಲ. ಪುರುಷರಷ್ಟೇ , ಸಮರ್ಥ ಆಡಳಿತ ನೀಡುವ ಹಾಗೂ ಪಾರದರ್ಶಕ ಆಡಳಿತ ನೀಡಲು ಮಹಿಳೆಯರಿಗೂ ಸಾಧ್ಯವಿದೆ.‌ ಆಡಳಿತ ಮಾಡುವ ಛಾತಿ ಇದೆ.‌ಸಮ್ಮೇಳನ ನಡೆಸುವ ಚಾಕಚಕ್ಯತೆ ಇದೆ.‌ಒಮ್ಮೆ ಕಣಕ್ಕೆ ಇಳಿದರೆ, ಚುನಾವಣಾ ವಾತಾವರಣ ಬದಲಾಗಿ ಮಹಿಳೆಯನ್ನೇ  ಅವಿರೋಧವಾಗಿ ಆಯ್ಕೆ ಮಾಡುವ ಸನ್ನಿವೇಶ ಸೃಷ್ಟಿಯಾಗಬಹುದು.ಸಾಹಿತ್ಯ ಸಮ್ಮೇಳನದಲ್ಲಿ ಪುರುಷ ಪ್ರಾಬಲ್ಯವನ್ನು ತಪ್ಪಿಸಬಹುದು. ಅಲ್ಲದೆ ಇಚ್ಛಾ ಶಕ್ತಿಯಿಂದ ಸಮ್ಮೇಳನದ ನಿರ್ಣಯಗಳನ್ನು ಜಾರಿ ಮಾಡಿಸಬಹುದು . ಮುಖ್ಯಮಂತ್ರಿಗಳ ಕಿವಿಹಿಂಡಿ ಕನ್ನಡದಲ್ಲಿ ಆಡಳಿತವನ್ನು ಇನ್ನೂ ಪರಿಣಾಮಕಾರಿ ಮಾಡಬಹದು.ಕಾರಣ ಮಹಿಳೆಗೆ ತಾಯ್ತನದ ಗುಣವಿರುತ್ತದೆ‌ .ಹಾಗಾಗಿ ಈ ಸಲ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಮಹಿಳಾ ಸಾಹಿತಿ ಸ್ಪರ್ಧಿಸುವುದು ಔಚಿತ್ಯಪೂರ್ಣ. ಅಲ್ಲದೇ ಇದು ಲಿಂಗ ಸಮಾನತೆಯ ಪ್ರಶ್ನೆಯೂ ಆಗಿದೆ.ಕಸಾಪವನ್ನು ಇನ್ನೂ ಎಷ್ಟು ದಿನ ಪುರುಷಪ್ರಧಾನ ವ್ಯವಸ್ಥೆಯಲ್ಲಿ ನಡೆಸುವುದು?. ಈ ಸಲ ಮಹಿಳಾ ಸಾಹಿತಿಗಳು ಸಭೆ ಸೇರಿ ಒಂದು ನಿರ್ಧಾರಕ್ಕೆ ಬರಲಿ. ‌ನಮ್ಮಲ್ಲಿ ಹಿರಿಯರಾದ ವೀಣಾ ಶಾಂತೇಶ್ವರ, ಸುಕನ್ಯಾ ಮಾರುತಿ, ಬಿ.ಟಿ.ಜಾನ್ಹವಿ, ಬಿ.ಟಿ.ಲಲಿತಾ ನಾಯಕ, ವಸುಂದರಾ ಭೂಪತಿ, ಸುನಂದಾ‌ಕಡಮೆ, ಸಾರಾ ಅಬೂಬಕರ್,‌ಮಹಿಳಾ  ವಿ.ವಿ.ಕುಲಪತಿಯಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಸಬಿಹಾ ಭೂಮಿಗೌಡ, ಕನ್ನಡ ಹಂಪಿ ವಿವಿ ನಿಕಟಪೂರ್ವ ಕುಲಪತಿ‌ ಮಲ್ಲಿಕಾ‌ ಘಂಟಿ, ಭಾನು‌ ಮುಷ್ತಾಕ, ಡಾ.ಎಚ್.ಎಸ್.ಅನುಪಮಾ, ವೈದೇಹಿ, ಡಾ.ಮೀನಾಕ್ಷಿ  ಬಾಳಿ, ಗುಲ್ಬರ್ಗಾದ ಹೋರಾಟಗಾರ್ತಿ ನೀಲಾ,  ದು.ಸರಸ್ವತಿ , ಪ್ರತಿಭಾ ನಂದಕುಮಾರ್…ಹೀಗೆ  ದೊಡ್ಡ ಮಹಿಳಾ ಪಡೆಯೇ ಕರ್ನಾಟಕದಲ್ಲಿ ಇದೆ. ಇವರಲ್ಲಿ ಯಾರಾದರೂ ಒಬ್ಬರೂ ಕಸಾಪ ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸಬೇಕು. ಕನ್ನಡಿಗರಾದ ನಾವು ಅವರ ಚುನಾವಣಾ ವೆಚ್ಚ ಭರಿಸೋಣ.  ಪಾರದರ್ಶಕವಾಗಿ ಕಸಾಪ ಸದಸ್ಯರ ಮತ ಕೇಳೋಣ.‌ ಇದು‌ ಮಹಿಳಾ ಸಮಾನತೆಯ ಹಕ್ಕಿನ ಪ್ರಶ್ನೆ .‌ಬಾಯ್ಮತಲ್ಲಿ  ಮಹಿಳಾ ಪ್ರಾತಿನಿಧ್ಯ ಎಂಬುದಕ್ಕಿಂತ ಅದು ಕಸಾಪ ಅಧ್ಯಕ್ಷ ಸ್ಥಾನದಿಂದ ಅನುಷ್ಠಾನವಾಗಲಿ. ಕನ್ನಡಿಗರ ಪ್ರಾತಿನಿಧಿಕ ಕನ್ನಡ ಸಾಹಿತ್ಯ ಪರಿಷತ್ತಗೆ  ಮಹಿಳೆ ಅಧ್ಯಕ್ಷೆಯಾಗಿ ೫ ವರ್ಷ ಕನ್ನಡಿಗರ ಕಷ್ಟ ಸುಖಗಳಿಗೆ ಸ್ಪಂದಿಸಲಿ.‌ ಸರ್ಕಾರಕ್ಕೆ  ಕನ್ನಡ ಭಾಷೆ, ಆಡಳಿತ, ಶಿಕ್ಷಣದ ವಿಷಯದಲ್ಲಿ ಮಹತ್ವದ ಮಾರ್ಗದರ್ಶನ ಮಾಡುವಂತಾಗಲಿ.‌ ಈ ಎಲ್ಲಾ ದೃಷ್ಟಿಯಿಂದ  ರಾಜ್ಯ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಮಹಿಳೆ, ಮಹಿಳಾ ಸಾಹಿತಿ ಸ್ಪರ್ಧಿಸಬೇಕೆಂದು ನನ್ನ  ಹಾಗೂ ಸಾಹಿತ್ಯ ಸಂಗಾತಿಯ ಆಶಯವಾಗಿದೆ. ಈ ಸಂಬಂಧ ಮುಕ್ತ ಚರ್ಚೆಗೆ ಸಾಹಿತ್ಯ ಸಂಗಾತಿ ವೇದಿಕೆ ಒದಗಿಸುತ್ತದೆ. …. ************************* ನಾಗರಾಜ ಹರಪನಹಳ್ಳಿ ಈ ಅಭಿಯಾನದಲ್ಲಿ ತಾವೂ ಪಾಲ್ಗೊಳ್ಳಬಹುದು. ನಿಮ್ಮಅಭಿಪ್ರಾಯಗಳನ್ನುನಮಗೆಬರೆಯಿರಿ

ಕಸಾಪಗೆ ಮಹಿಳಾ ಅಧ್ಯಕ್ಷರು ಯಾಕಿಲ್ಲ? Read Post »

ಕಾವ್ಯಯಾನ

ಬೆಳೆಯೋಣ ಬನ್ನಿ..

ಕವಿತೆ ಸುಜಾತ ಲಕ್ಷ್ಮೀಪುರ. ಮನುಜ ಮನುಜನೆದೆಯಲಿಪ್ರೀತಿ ನೀತಿಯ ಸಸಿ ನೆಟ್ಟುಸಹಕಾರ ಸಮಾನತೆ ನೀರೆರೆದುಮನುಷ್ಯತ್ವದ ಹೂ ಹಣ್ಣು ಕಾಯಿ ಬೆಳೆದುಬಯಲ ಮಕ್ಕಳೆಲ್ಲಾ ಸೇರಿ ಸವಿಯೋಣ ಬನ್ನಿ. ನಿತ್ಯ ನಡೆ ನುಡಿ ಆಚಾರದಲಿಸದ್ಭಾವನೆಯ ಸಿಂಪಡಿಸಿಸರ್ವೋದಯದ ಸಕಾರವನೆ ಉಸಿರಾಡುತ್ತಾಸಕಲ ಜೀವರಾಶಿಯ ಲೇಸು ಬಯಸೋಣ ಬನ್ನಿ ಕಟ್ಟೋಣ ನಾವುಎಲ್ಲರ ಹೃದಯಗಳಿಗೂಅಂತಃಕರಣದ ಸ್ನೇಹ ಸೇತುವೆನಾನು ನೀನಳಿದು ನಾವು ಆದಸಮಷ್ಟಿಯ ಸರ್ವಹಿತದಲಿ. ಸದಾ ಜೀಕೋಣ ಬನ್ನಿಒಬ್ಬರಿಗೊಬ್ಬರು ಕೈ ಕೈಯಿಡಿದು.ನಾವೆಲ್ಲಾ ಒಂದೇ ನಾವು ಜೀವ ಚೈತನ್ಯರು.ಸಾರಿ ಸಾರಿ ಘೋಷಿಸುತ್ತಾಸುತ್ತೋಣ ಬನ್ನಿಮಾನವಪ್ರೇಮದ ನಂದನವನ. *****************************

ಬೆಳೆಯೋಣ ಬನ್ನಿ.. Read Post »

ಕಾವ್ಯಯಾನ

ನಮಗೊಂದು ಪ್ರಕೃತಿಯು..!

ಕವಿತೆ –ರಮಣ ಶೆಟ್ಟಿ ರೆಂಜಾಳ. ನಮಗೊಂದು ದೇಹವಕೊಟ್ಟನು ಆ ದೇವ,ಕೊಟ್ಟದರಲ್ಲಿಟ್ಟನು ಪರಿ ಪರಿಯ ನೋವ !ನಮಗೊಂದು ಮನವಕೊಟ್ಟನು ಆ ದೇವ,ಕೊಟ್ಟದರಲ್ಲಿಟ್ಟನು ನಾನಾ ಪರಿ ಚಿಂತೆಯ !ನಮಗೊಂದು ಜಿಹ್ವೆಯಕೊಟ್ಟನು ಆ ದೇವ,ಕೊಟ್ಟದರಲ್ಲಿಟ್ಟನು ವಿಧ ವಿಧ ರುಚಿಯ !ನಮಗೊಂದು ನಾಸಿಕವಕೊಟ್ಟನು ಆ ದೇವ,ಆಘ್ರಾಣಿಸಬಿಟ್ಟನು ಇಹಪರದ ವಾಸನೆಯ !ನಮಗೆರಡು ಕಂಗಳಕೊಟ್ಟನು ಆ ದೇವ,ಕೊಟ್ಟದರಲ್ಲಿಟ್ಟನು ಚಂಚಲ ನೋಟವ !ನಮಗೆರಡು ಕಿವಿಗಳಕೊಟ್ಟನು ಆ ದೇವ,ಕೇಳಲೆಂದನವ ತರಹಾವರಿ ಶಬ್ಧವ !ನಮಗೆರಡು ಕೈ ಕಾಲುಗಳಕೊಟ್ಟನು ಆ ದೇವ,ಗಂಟುಗಳಲಿಟ್ಟು ವೃದ್ಧಾಪ್ಯಕೆನೋವ ನಿರಖು ಠೇವಣಿಯ !ನಮಗೊಂದು ಜೀವನವಕೊಟ್ಟನು ಆ ದೇವ,ಅನುಭವಿಸಲೆಂದು ಈ ಪರಿಯೊಳುಸಕಲ ಸುಖದುಃಖವ !ಆದರೇನು?ನಮಗೊಂದು ಪ್ರಕೃತಿಯಕೊಟ್ಟನು ಆ ದೇವ ,ಹಾಳುಗೈಯದೆ ಅದನುಹಾಳಾಗಗೊಡದಿರಿಯೆಂದ ನಿಮ್ಮ ತನುಮನವ!

ನಮಗೊಂದು ಪ್ರಕೃತಿಯು..! Read Post »

ಕಾವ್ಯಯಾನ

ಮನೋ ಇಂಧನ

ಕವಿತೆ ವಿದ್ಯಾ ಶ್ರೀ ಎಸ್ ಅಡೂರ್ ಸೀಟಿ ಹೊಡೆಯುತ್ತದೆ ಕುಕ್ಕರ್…ತಾಳದೇತನ್ನ ಅಡಿಯಲ್ಲಿ ಉರಿಯುತ್ತಿಯುವ ಬೆಂಕಿ.ನಾನೂಹೊರಹಾಕುತ್ತೇನೆ ನೋವು ನಲಿವುಗಳಪೆನ್ನು ಕಾಗದ ಹಿಡಿದು ,ಮನವನ್ನು ಕೆದಕಿ ಕೆದಕಿ . ಹಣೆಮೇಲಿನ ನೆರಿಗೆ, ಕಣ್ಣಂಚಿನ ಹನಿತುಟಿಯ ಮೇಲ್ಮುಖ ….ಕೆಳಮುಖ ಬಾಗುವಿಕೆಯಾವುದೂ ಅರ್ಥವಿಲ್ಲದ್ದಲ್ಲ….ಆಕಸ್ಮಿಕವಲ್ಲಪ್ರತಿಯೊಂದಕ್ಕೂ ಇದೆ ಬೇರೆ ಬೇರೆಯೇ ಪೀಠಿಕೆ. ಮನದ ಮ್ಲಾನತೆಯೋ, ಆಹ್ಲಾದಕತೆಯೋಮುಖದ ಮೇಲೆ ಕಾಣಬೇಕಾದರೆ…ಬೇಕುಏನಾದರೂ ಒಂದು ಇಂಧನ….ಅದಕ್ಕೇ..ಕುಕ್ಕರ್ ನ ಉದಾಹರಣೆ ಒಂದೇ..ಸಾಕು. ಮನವೆಂಬುದು ಒಂದು ಕುಲುಮೆಯೇ ಸರಿ..ಬೇಯುತ್ತಿರುತ್ತದೆ ಅಲ್ಲಿ ಬೇರೆ ಬೇರೆ ವಿಷಯಯಾವುದು ಮೊದಲು, ಯಾವುದು ಮತ್ತು, ಹೇಳುವಹಾಗಿಲ್ಲ,ಹೊರಹಾಕುತ್ತದೆ ನೋಡಿಕೊಂಡು ಸಮಯ…. ಅಲ್ಲಿ ಬೇಯುತ್ತಿರುವುದು ಖುಷಿಯೋ…ತ್ರಾಸವೋಯಾವುದೇ ಆದರೂ ಆ ಕ್ಷಣಕ್ಕೆ ಅದು ಮನಸಿಗೆ ಇಂಧನವಿಷಯವಿಲ್ಲದ ಮನಸು ದೆವ್ವದ ಮನೆಯಂತೆಅದಕ್ಕೇ…ಗಿಜಿಗುಡುತ್ತಲೇ ಇರಬೇಕು ಮನಸು, ಪ್ರತೀಕ್ಷಣ. *********************

ಮನೋ ಇಂಧನ Read Post »

ಕಾವ್ಯಯಾನ

ಮೌಢ್ಯ

ಕವಿತೆ ವೀಣಾ ರಮೇಶ್ ಮಾನದಂಡವಿಲ್ಲದ ಮೂಢ ಸಂತೆಯೊಳಗೆಬದುಕು ವ್ಯಾಪಾರ ವಾಗುತ್ತಿದೆ .ನಂಬಿಕೆಯ ನಡುವೆ ಮೂಢತ್ವ ಬಿತ್ತಿಮೊಳಕೆಯೊಡೆದುಬೇರು ಚಾಚಿಮೌಢ್ಯ ಹೆಮ್ಮರವಾಗಿದೆ ಬೆತ್ತಲಾಗಬೇಡ ಬತ್ತಿದಕನಸುಗಳಿಗೆಪೊಳ್ಳು ಕಟ್ಟು ಪಾಡುಗಳಹೆಗಲೇರಿ ಶವವಾಗಬೇಡ. ನಿನ್ನ ಕನಸುಗಳ ಚಲುವಿಗೆಸುಜ್ಞಾನ ತೊಡಿಸಿಜ್ಞಾನ ದಾರದಿಂದ ಬಿಗಿದುಅಭಿಜ್ಞಾನದೆಡೆಗೆ ಹರಿಸಿ ಅಹಂಕಾರದ ಕತ್ತಲೆಯಮರೆಸಿ ಆತ್ಮದ ಹಣತೆಯಲಿಅಂತರಾತ್ಮದ ನವಿರು ಸ್ಪರ್ಶ ಬೆಳಕು ನೀಡಲಿ **********************************

ಮೌಢ್ಯ Read Post »

ಕಾವ್ಯಯಾನ

ಕಣ್ಣುಗಳು ನನ್ನದಲ್ಲ

ಕವಿತೆ ಜಹಾನ್ ಆರಾ ಎಚ್. ಕೋಳೂರು ನಾನು ನಿನ್ನನ್ನು ನೋಡಿದ್ದೇನೆಆದ್ರೆ ಕಣ್ಣುಗಳು ನನ್ನದಲ್ಲ ದಶರಥನ ಮಹೋನ್ನತ ಯೋಚನೆಯಲ್ಲಿಮಂಥರೆಯ ಮೋಸದಲಿಊರ್ಮಿಳೆಯ ಉದಾಸೀನತೆ ಯಲ್ಲಿಲಕ್ಷ್ಮಣನ ನೆರಳಿನಲ್ಲಿಹನುಮಾನನ ಸೇವೆಯಲಿರಾವಣನ ಶೌರ್ಯದಲ್ಲಿಹೌದು ಅದೇ ಸೀತೆಯ ಕಂಬನಿಯಲ್ಲಿ ನಿನ್ನನ್ನು ಮತ್ತೆ ನೋಡುತಿದ್ದೇನೆಮತ್ತೆ ಮತ್ತೆ ಕಣ್ಣುಗಳು ನನ್ನದಲ್ಲ ಧರ್ಮದ ಚದರಿನಲ್ಲಿಜನ್ಮ ಭೂಮಿಯ ಹಂಗಿನಲಿರಾಜಕೀಯದ ದಾಳದಲಿಕೋರ್ಟುಗಳ ವಿವಾದಗಳಲಿದಾನಿಗಳ ದಾನದಲಿಮೌಢ್ಯದ ಹಾದಿಯಲ್ಲಿಮಾಧ್ಯಮದ ಗದ್ದಲದಲ್ಲಿ ನಿನ್ನ ಸೃಷ್ಟಿದ ವಾಲ್ಮೀಕಿಕಡತಗಳ ಹಿಡಿದುಇನ್ನೂ ಹೊರಗೆ ನಿಂತಿದ್ದಾನೆಅವನ್ನು ವಿಚಾರಿಸುನೀ ಮತ್ತೆ ಬರುವ ಅಗತ್ಯ ಇತ್ತೆ ಎಂದು? ಸಾವು ನೋವುಗಳ ಮೇಲೆ ಹಿಡಿತತಪ್ಪಿರುವಾಗ ದೇವರಾಗುವಬದಲು ವೈದ್ಯನಾಗುಮಂದಿರ ಮಂದಿರವಾಗಿಯೋ ಉಳಿಯುತ್ತದೆ ಆಗ ಮಾತ್ರ ನೀನು ನನ್ನಅವನ ಇವನ ಮತ್ತೊಬ್ಬನಕಣ್ಣಿಗೆ ಕಾಣುವೆಕ್ಷಮಿಸುನಿನಗೆ ಸಾದ್ಯವಾದರೆರಾಮರಾಜ್ಯ ಬೇಕಿದೆ ನಮಗೆಕೊಟ್ಟು ಬಿಡು ***********************

ಕಣ್ಣುಗಳು ನನ್ನದಲ್ಲ Read Post »

ಇತರೆ

ಕಾಡುವ ನೆನಪು

ನೆನಪು ವೀಣಾ ನಿರಂಜನ್ ಭೂತದ ಹುತ್ತದಲ್ಲಿ ಅಡಗಿ ಕುಳಿತಿರುವ ನೆನಪುಗಳನ್ನು ಮೆಲುಕು ಹಾಕುತ್ತಾ ಮೊದಲ ಕವಿತೆಯ ರೋಮಾಂಚನವನ್ನು ಅನುಭವಿಸುತ್ತಿದ್ದೇನೆ. ನಾನು ಯಾವ ಗಳಿಗೆಯಲ್ಲಿ, ಯಾಕೆ ಕವಿತೆಯನ್ನು ಹಚ್ಚಿಕೊಂಡೆ ಎನ್ನುವುದೇ ಮೊದಲ ಕವಿತೆಯ ಹುಟ್ಟಿಗೂ ಕಾರಣವಾಯಿತೇನೊ. ನನ್ನಪ್ಪ ನನಗೊಂದು ಅಚ್ಚರಿಯಾಗಿದ್ದ. ಮೇಷ್ಟ್ರಾಗಿದ್ದ ಅಪ್ಪ ಯಾವುದೇ ವಿಷಯದ ಕುರಿತು ತುಂಬ ಸೊಗಸಾಗಿ, ವಿಸ್ತಾರವಾಗಿ, ಪ್ರಭುತ್ವದಿಂದ ಪಾಠ ಮಾಡುತ್ತಿದ್ದ. ಭಾಷಣ ಮಾಡುತ್ತಿದ್ದ. ಮನೆ ತುಂಬ ಪುಸ್ತಕಗಳು. ಅಪ್ಪನ ಭೇಟಿಗೆಂದು ಮನೆಗೆ ಬರುತ್ತಿದ್ದವರು ಕೂಡ ಅಂಥವರೇ. ಸದಾ ಸಾಹಿತ್ಯ, ಕಲೆಯ ಕುರಿತು ಚರ್ಚೆ, ಮಾತುಗಳು. ಚಿಕ್ಕವಳಾಗಿದ್ದ ನಾನು ಇದೆಲ್ಲವನ್ನೂ ವಿಸ್ಮಯದಿಂದ ನೋಡುತ್ತಿದ್ದೆ. ಆದರೆ ದುರದೃಷ್ಟವಶಾತ್ ಅಪ್ಪ ನಾನಿನ್ನೂ ಬದುಕನ್ನು ಬೆರಗಿನಿಂದ ನೋಡುತ್ತಿರುವಾಗಲೇ ಮರಳಿ ಬಾರದ ಲೋಕಕ್ಕೆ ತೆರಳಿ ಬಿಟ್ಟ. ಕಾಯಿಲೆಯಿಂದ ನರಳುತ್ತಿದ್ದ ಅಪ್ಪನ ಸಂಕಟ ಮತ್ತು ಸಾವು ಆಗಲೇ ನನ್ನನ್ನು ಅಕಾಲ ಮುಪ್ಪಿಗೆ ತಳ್ಳಿದಂತೆ ಯೋಚಿಸತೊಡಗಿದ್ದೆ. ಅಪ್ಪ ಇಲ್ಲದೆ ಸೃಷ್ಟಿಯಾದ  ನಿರ್ವಾತದಿಂದ, ಅನಾಥ ಪ್ರಜ್ಞೆಯಿಂದ ಬಿಡುಗಡೆ ಪಡೆಯುವುದಕ್ಕಾಗಿಯೇ ಎಂಬಂತೆ ಓದನ್ನು, ಬರವಣಿಗೆಯನ್ನು ವಿಪರೀತ ಹಚ್ಚಿಕೊಂಡು ಬಿಟ್ಟೆ.     ಅಪ್ಪ…     ಇಂದು ನೀವಿದ್ದಿದ್ದರೆ     ಖಂಡಿತ ಹೀಗಾಗುತ್ತಿರಲಿಲ್ಲ     ನಾವು ಭೂತದ ಕಡೆಗೆ     ತಲೆ ತೂರಿಸುತ್ತಿರಲಿಲ್ಲ     ಭವಿಷ್ಯಕ್ಕೆ ಹೆದರುತ್ತಿರಲಿಲ್ಲ     ಪದೇ ಪದೇ ಮುಗ್ಗರಿಸಿ     ಪಶ್ಚಾತ್ತಾಪ ಪಡುತ್ತಿರಲಿಲ್ಲ.     ಅಂತ ಏನೇನೋ ಹಳಹಳಿಕೆಗಳೇ ಕವಿತೆಯಾಗಿ ಮೂಡಿ ಬರತೊಡಗಿದ್ದವು ಆಗ.     ಕುವೆಂಪು ಅವರು ನಮ್ಮನ್ನಗಲಿದ ದಿನ ಹೀಗೇ ತೋಚಿದ್ದು ಗೀಚಿದ್ದೆ.      ಮರೆಯಾಯಿತು      ಮರೆಯಾಗಿ ಮಲೆನಾಡ ಕಾಡಿನ      ಭವ್ಯ ರಮಣೀಯತೆಯಲ್ಲಿ      ರುದ್ರ ಭಯಂಕರ ಮನೋಹರ      ಶೂನ್ಯದಲ್ಲಿ ಸೇರಿಕೊಂಡಿತು      ಮರೆಯಾಯಿತು ಕರುನಾಡ ಜ್ಯೋತಿ      ಅಪ್ಪ ಲಂಕೇಶ್ ಪತ್ರಿಕೆಯ ಕಟ್ಟಾ ಅಭಿಮಾನಿ. ಮನೆಗೆ ತಪ್ಪದೆ ಪತ್ರಿಕೆ ಬರುತ್ತಿತ್ತು. ಅಪ್ಪನ ನಂತರವೂ ಪತ್ರಿಕೆ ಬರುವುದು ನಿಲ್ಲಲಿಲ್ಲ. ಆಗ ಪತ್ರಿಕೆಯಲ್ಲಿ ಪುಂಡಲೀಕ ಶೇಟ್ ಅವರ ಕಾಲಂ ಬರುತ್ತಿತ್ತು. ಅವರು ಉತ್ತರ ಕರ್ನಾಟಕದ ಅಪ್ಪಟ ಜವಾರಿ ಕನ್ನಡದಲ್ಲಿ ಅದನ್ನು ಬರೆಯುತ್ತಿದ್ದುದು ಎಲ್ಲರಿಗೂ ಗೊತ್ತಿದ್ದದ್ದೆ. ನಾನು ಡಿಗ್ರಿ ಓದುತ್ತಿದ್ದಾಗ ಅಕಸ್ಮಾತ್ ಒಂದು ಪುಂಡಲೀಕ ಶೇಟ್ ಅವರು ಅಪಘಾತದಲ್ಲಿ ಹೋಗಿ ಬಿಟ್ಟರು ಎನ್ನುವ ಸುದ್ದಿ ಬಂತು. ಅವರ ಅಭಿಮಾನಿಯಾಗಿದ್ದ ನಾನು ಮತ್ತೊಮ್ಮೆ ಸಾವಿನ ಕುರಿತು ಯೋಚಿಸಿದ್ದೆ. ಅವರ ಅಕಾಲಿಕ ಅಗಲಿಕೆಯ ಕುರಿತು ನಮ್ಮ ಉತ್ತರ ಕರ್ನಾಟಕದ ಜವಾರಿ ಭಾಷೆಯಲ್ಲಿಯೇ ಒಂದು ಕವಿತೆ ಬರೆದೆ ‘ಹ್ಯಾಂಗ ಮರಿಯೂದು’ ಅಂತ. ಆ ಕವಿತೆಯನ್ನು ಒಂದು ಕವಿಗೋಷ್ಠಿಯಲ್ಲಿ ಓದುವ ಅವಕಾಶ ಸಿಕ್ಕಿತು. ಅಳುಕುತ್ತ, ಹಿಂಜರಿಯುತ್ತ ಓದಿ ಬಂದಿದ್ದೆ. ಮೊದಲೇ ಸಂಕೋಚದ ಮುದ್ದೆ ನಾನು. ಓದಿ ಬಂದು ಮೂಲೆಯಲ್ಲಿ ಮುದ್ದೆಯಾಗಿ ಕುಳಿತೆ. ನಂತರ ಅಂದಿನ ಕವಿಗೋಷ್ಠಿಯ ಅಧ್ಯಕ್ಷರು ನನ್ನ ಕವಿತೆಯನ್ನೇ ಪ್ರಧಾನವಾಗಿ ಎತ್ತಿಕೊಂಡು ಭಾಷಣ ಪ್ರಾರಂಭಿಸಿದಾಗ ಪುಳಕದಿಂದ, ಹೆಮ್ಮೆಯಿಂದ ಬೀಗಿದ್ದೆ. ಮುಂದೆ ಆ ಕವಿತೆ ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದಾಗ ಎಲ್ಲ ಕಡೆಯಿಂದಲೂ ಒಳ್ಳೆಯ ಪ್ರತಿಕ್ರಿಯೆ ಬಂದು ನಾನು ನನಗೆ ತಿಳಿಯದೇ ಕವಿಯತ್ರಿಯ ಪಟ್ಟ ಧರಿಸಿ ಬಿಟ್ಟಿದ್ದೆ. ಆದರೆ ಆ ಕವಿತೆ ಈಗ ನನ್ನ ಬಳಿ ಇಲ್ಲ ಹಾಗೂ ಅದರ ಸಾಲುಗಳು ನೆನಪಿನಲ್ಲಿಲ್ಲ. ನನ್ನ ಬದುಕಿನ ಅಸ್ತವ್ಯಸ್ತ ಅಧ್ಯಾಯದಲ್ಲಿ ಎಲ್ಲೋ ಕಳೆದು ಹೋಗಿದೆ.        ಹೀಗೆ ಏಕಾಏಕಿ ದೊರಕಿದ ಕವಿಯತ್ರಿ ಎಂಬ ಬಿರುದು ನನ್ನನ್ನು ಮತ್ತೆ ಮತ್ತೆ ಬರೆಯುವಂತೆ ಪ್ರೇರೇಪಿಸಿತು. ಆಕಾಶವಾಣಿ ಧಾರವಾಡ ಕೇಂದ್ರವು ಏರ್ಪಡಿಸಿದ್ದ ಕವನ ಸ್ಪರ್ಧೆಯಲ್ಲಿ ನನ್ನ ಮತ್ತೊಂದು ಕವಿತೆ ಪ್ರಥಮ ಸ್ಥಾನ ಪಡೆದಿತ್ತು. ಸ್ಪರ್ಧೆಯ ತೀರ್ಪುಗಾರರಾಗಿ ಬಂದಿದ್ದ ಹಿರಿಯ ಕವಿ ಚೆನ್ನವೀರ ಕಣವಿಯವರು ಕವಿತೆಯ ಕುರಿತು ಆಡಿದ ಮಾತುಗಳು ನನ್ನನ್ನು ಭಾವುಕಳನ್ನಾಗಿಸಿ ಬಿಟ್ಟಿದ್ದವು. ಆ ಕವಿತೆ      ಇದೆಂಥ ಊರು!      ಎಲ್ಲಿಯೋ ಉದಿಸಿ ಎಲ್ಲಿಯೋ ಬೆಳಗಿ      ಮತ್ತೆಲ್ಲಿಯೋ ಮುಳುಗುವ      ಸೂರ್ಯ ಕೂಡ      ಇಲ್ಲಿಯವನೇ ಆಗಿ ಬಿಡುತ್ತಾನಲ್ಲ ! ಅಂತ ಶುರುವಾಗಿ       ನನ್ನೂರು, ನನ್ನ ಮನೆ, ನನ್ನ ನಾಡು       ಎಂದೆಲ್ಲ ಹತ್ತಿರವಾದಂತೆ       ಹರವು ಪಡೆಯುತ್ತ ಬಿಚ್ಚಿ ಕೊಳ್ಳುತ್ತ       ನಮ್ಮೂರು, ನಮ್ಮ ಮನೆ, ನಮ್ಮ ನಾಡು         ಎಂದೆಲ್ಲ ವಿಶಾಲವಾಗಿ ಬಿಡುತ್ತದಲ್ಲ!       ಒಳಹೊಕ್ಕು ತಡಕಾಡಿದಾಗ       ತನ್ನೆಲ್ಲವನ್ನೂ ತೆರೆಕೊಂಡು        ಈಟೀಟು ಇಡಿ ಇಡಿಯಾಗಿ       ಬೆರೆತು ಕೊಂಡು ಮತ್ತೆ       ಆಪ್ತವಾಗಿ ಬಿಡುತ್ತದಲ್ಲ !!                                             ಹೀಗೆ ಕವಿತೆ ನಿಧಾನವಾಗಿ ನನ್ನನ್ನು ನನ್ನ ನೋವುಗಳಿಂದ, ಹಳಹಳಿಕೆಗಳಿಂದ ದೂರ ಮಾಡುತ್ತಾ, ಸಾಂತ್ವನ ಹೇಳುತ್ತ ನನ್ನ ಸುತ್ತ ಹೊಸದೊಂದು ಲೋಕವನ್ನು ನಿರ್ಮಾಣ ಮಾಡತೊಡಗಿತು. ಮುಂದೆ ಕವಿವಿ ಕನ್ನಡ ಅಧ್ಯಯನ ಪೀಠ, ಕ್ರೈಸ್ಟ್ ಕಾಲೇಜು ಸಂಘ, ಜೆ ಎಸ್ ಎಸ್ ಧಾರವಾಡ ಮುಂತಾದವರು ಏರ್ಪಡಿಸಿದ ಕವನ ಸ್ಪರ್ಧೆಗಳಲ್ಲಿ ಸತತವಾಗಿ ಬಹುಮಾನ ಪಡೆದೆ. ಆದರೆ ನಂತರದ ದಿನಗಳಲ್ಲಿ ವೈಯಕ್ತಿಕ ಬದುಕಿನಲ್ಲಿ ಘಟಿಸಿದ ಅನಿರೀಕ್ಷಿತ ಆಘಾತಗಳು, ಅದರಿಂದಾದ ಆರೋಗ್ಯದಲ್ಲಿನ ಏರುಪೇರುಗಳು, ಸಂಸಾರದ ಜವಾಬ್ದಾರಿ ಎಲ್ಲವೂ ಸೇರಿ ಒಂದು ಸುದೀರ್ಘ ಮೌನ… ಕಾವ್ಯ ಸಖಿಯಿಂದ ವಿಮುಖಳಾಗಿ ಬಿಟ್ಟೆ. ಇತ್ತೀಚೆಗೆ ಮತ್ತೆ ಕಾವ್ಯ ನನ್ನನ್ನು ತನ್ನೆಡೆಗೆ ಸೆಳೆಯುತ್ತಿದೆ.  ಈ ಸೆಳೆತವೇ ಒಂದೂ ಸಂಕಲನವಿಲ್ಲದ ನನ್ನನ್ನು ಕೂಡ ಮೊದಲ ಕವಿತೆಯ ಕುರಿತು ಬರೆಯುತವಂತೆ ಪ್ರೇರೆಪಿಸಿದ್ದು. ಎಲ್ಲ ಹಳವಂಡಗಳಿಂದ ನನ್ನ ಮುಕ್ತ ಗೊಳಿಸಿ ಕಾವ್ಯದ ಮೇಲಿನ ಮೋಹ ಮತ್ತೊಮ್ಮೆ ಬದುಕನ್ನು ಪ್ರೀತಿಸುವಂತೆ ಮಾಡಿದೆ. **********************************

ಕಾಡುವ ನೆನಪು Read Post »

You cannot copy content of this page

Scroll to Top