Day: October 3, 2020

ಗಝಲ್

ಗಝಲ್ ಪ್ರಭಾವತಿ ಎಸ್ ದೇಸಾಯಿ ಅರಳಿದ ಸುಮ ದೇವರಿಗೆ ಅಪಿ೯ತವಾಗಲಿ ಬಾಡುವ ಮುನ್ನವೀಣೆ ತಂತಿ ಮೀಟಿ ಶ್ರುತಿ ಸರಾಗವಾಗಲಿ ಹಾಡುವ ಮುನ್ನ ಜಗದ ನಿಂದೆ ಅಪಹಾಸ್ಯ ಗಳಿಗೆ ನೊಂದು ಅನುಮಾನಿಸದಿರುಜೀವಿಗಳ ಪ್ರೀತಿ ಬೆಸುಗೆ ಗಟ್ಟಿಯಾಗಲಿ ಕೂಡುವ ಮುನ್ನ ನೆರಳಿರದ ಹಾದಿಯಲಿ ಬದುಕಿನ ಬಂಡಿ ಸಾಗಿದೆ ಅನವರತಬಾಳಿನ ಕಹಿ ನೆನಪ ದಿನಗಳು ಮರೆಯಾಗಲಿ ಕಾಡುವ ಮುನ್ನ ವಿರಹ ದಳ್ಳುರಿಯಲಿ ನಿತ್ಯ ದಹಿಸುತಿವೆ ಪ್ರೇಮಿಗಳ ಉಸಿರುಅನುರಾಗ ಚುಂಬನಕೆ ಹೃದಯ ಹಗುರಾಗಲಿ ಬೇಡುವ ಮುನ್ನ ಕೋಶ ಕೀಟಕೆ ರೆಕ್ಕೆಗಳ ಹಚ್ಚಿ ಕೊಂಡು […]

ನನ್ನಮ್ಮ

ಕವಿತೆ ನನ್ನಮ್ಮ ಶೃತಿ ಎಸ್.ಗೌಡ ನನ್ನಮ್ಮ ಸೀತೆಯಲ್ಲ ಸಾವಿತ್ರಿಯಲ್ಲಕೈ ಹಿಡಿದ ಪತಿಯೊಡನೆವನವಾಸಕ್ಕೂ ಹೋಗಲಿಲ್ಲಅವನಿಗಾಗಿ ಯಮನನ್ನು ಅಡ್ಡಗಟ್ಟಲಿಲ್ಲ ಇದ್ದಲ್ಲಿಯೇ ವನವಾಸ ಮಾಡಿದವಳು ಕುಡಿದ ಮತ್ತಿನಲ್ಲಿ ನಡೆಯಲಾರದೆ ಎಡವಿ ಬಿದ್ದ ಅಪ್ಪನಿಗೆ ತನ್ನ ಹೆಗಲನ್ನು ಆಸರೆಯಾಗಿ ನೀಡಿದವಳು ನನ್ನಮ್ಮ ಆಸರೆ ಬಯಸಲಿಲ್ಲಸಂಸಾರದ ನೊಗ ಹೊತ್ತುನಮಗಾಸರೆಯಾದವಳುತಾನು ನಿಂತು ನಮ್ಮ ನಡೆಸಿತಾನು ಹಸಿದು ನಮಗುಣಿಸಿತನ್ನ ಕಣ್ಣುಗಳಲ್ಲಿಅವಳ ಕನಸುಗಳ ಕಂಡವಳುಸಂಸಾರದ ಹಾದಿಯಲ್ಲಿ ನಿಲ್ಲದೆ ನಡೆದವಳು ನನ್ನಮ್ಮ ಹೆಚ್ಚು ಕಲಿಯಲಿಲ್ಲಗುಡಿಗಳ ಗುಂಡಾರವ ಸುತ್ತಲಿಲ್ಲಸ್ವರ್ಗ ನರಕಗಳ ಕಲ್ಪನೆಯೂ ಅವಳಿಗಿಲ್ಲ ಇರುವಷ್ಟು ದಿನಬಾಳ ಕುಲುಮೆಯಲಿ ಬೆಂದವಳು ಕುಡಿತಕ್ಕೆ ಶರಣಾಗಿ […]

ಅನುವಾದ ಬರಹ ರಘುಪತಿ ಸಹಾಯ್ ಫಿರಾಖ್ ಗೋರಖ್ ಪುರಿ ಕವಿತೆ ರಘುಪತಿಸಹಾಯ್ ಫಿರಾಖ್ ಗೋರಖ್ಪುರಿ ಇವರು ಪ್ರಮುಖ ಉರ್ದುಕವಿಗಳು. ಸಾಹಿರ್ಲೂದಿಯಾನ್ವಿ,ಮಹಮ್ಮದ್ಇಕ್ಬಾಲ್‍‍ರಂತಹ ಅನೇಕ ಹೆಸರಾಂತ ಉರ್ದುಕವಿಗಳಿದ್ದ ಕಾಲದಲ್ಲಿಇವರುಉತ್ತಮಉರ್ದುಕವಿಗಳಾಗಿಪ್ರಸಿದ್ಧಿಪಡೆದರು. ಇವರ ಬೃಹತ್ಕವನಸಂಕಲನ ಗುಲ್-ಏ-ನಗ್ಮಾಕ್ಕೆ ಜ್ಞಾನಪೀಠಪ್ರಶಸ್ತಿಯುದೊರೆಯಿತು. ಇಲ್ಲಿಅನುವಾದಗೊಂಡ ಕವಿತೆಗಳು ಗಜಲುಗಳಂತೆ ಕಂಡರೂ ಗಜಲುಗಳಲ್ಲ. ಇವುಕಾವ್ಯಕಾರಣದಲ್ಲಿಬಂದವು ಕನ್ನಡಕ್ಕೆ ಅನುವಾದಿಸಿದವರು: ಆರ್.ವಿಜಯರಾಘವನ್ ಇಂದು ಸಹ ಪ್ರೀತಿಯ ಕಾರವಾನ್ ಇಂದೂ ಈಪ್ರೀತಿಯ ಕಾರವಾನ್ ಹಾದುಹೋಗುತ್ತಿದೆಈ ಮೈಲು ಮತ್ತು ಈ ಮೈಲಿಗಲ್ಲನ್ನು ಯಾವತ್ತಿನಂತೆ ನಿಮ್ಮ ದುಃಖ ಈ ಜಗತ್ತಿನಲ್ಲಿದ್ದ ಎಂದಿನ ದುಷ್ಟ ವಿಷಯವಾಗಿದೆನಮ್ಮ ಕಥೆಯನ್ನು ಇತರರು ಹೇಳುತ್ತಿದ್ದಾರೆಅದೇ […]

ಅಂಕಣ ಬರಹ ಬಸ್ ಸ್ಟ್ಯಾಂಡೆನ್ನುವ ಮಾಯಾಲೋಕ ಚಲನೆ ಎನ್ನುವ ಪದದ ನಿಜವಾದ ಅರ್ಥವೇನೆಂದು ತಿಳಿಯಬೇಕಾದರೆ ಈ ಬಸ್ ಸ್ಟ್ಯಾಂಡಿನಲ್ಲಿ ಅರ್ಧ ಗಂಟೆ ಸುಮ್ಮನೆ ನಿಂತುಬಿಡಬೇಕು; ಅವಸರದಲ್ಲಿ ಅತ್ತಿತ್ತ ಓಡಾಡುತ್ತ ಬೋರ್ಡು ಹುಡುಕುವವರನ್ನು, ಕಂಟ್ರೋಲ್ ರೂಮಿನಿಂದ ಅಶರೀರವಾಣಿಯಂತೆ ಮೊಳಗುವ ಅನೌನ್ಸ್‌ಮೆಂಟಿಗೆ ಬ್ಯಾಗನ್ನೆತ್ತಿಕೊಂಡು ಬಸ್ಸಿನೆಡೆಗೆ ಓಡುವವರನ್ನು, ಒಂದು ನಿಮಿಷವೂ ಆಚೀಚೆಯಾಗದಂತೆ ಅದೆಲ್ಲಿಂದಲೋ ಓಡಿಬಂದು ಹೊರಡುತ್ತಿರುವ ಬಸ್ಸನ್ನು ಹತ್ತಿಕೊಳ್ಳುವವರನ್ನು ಸಹನೆಯಿಂದ ಗಮನಿಸಬೇಕು! ಬಸ್ಸಿನ ಹಾಗೂ ಅದರ ಚಲನೆಯ ಹೊರತಾಗಿ ಬೇರಾವ ವಿಷಯಗಳೂ ಆ ಕ್ಷಣದ ಅಲ್ಲಿನ ಬದುಕುಗಳ ಎಣಿಕೆಗೆ ಸಿಕ್ಕುವುದಿಲ್ಲ. ಭೂಮಿ […]

ಅಂಕಣ ಬರಹ ಹಲವು ಬಣ್ಣಗಳನ್ನು ಹೊತ್ತ ಭಾವನೆಗಳ ಕೋಲಾಜ್ ಆಕಾಶಕ್ಕೆ ಹಲವು ಬಣ್ಣಗಳು (ಗಜಲ್ ಸಂಕಲನ)ಕವಿ- ಸಿದ್ಧರಾಮ ಹೊನ್ಕಲ್ಬೆಲೆ-೧೩೦/-ಪ್ರಕಾಶನ- ಸಿದ್ಧಾರ್ಥ ಎಂಟರ್‍ಪ್ರೈಸಸ್              ಇಲ್ಲಿ ಕತ್ತಲೆ ಕಳೆದು ಬೆಳಕು ಮೂಡಿಸಿದವರೆ ಸಂತ ಸೂಫಿಗಳು ಬಸವಾದಿ ಶರಣರು ಸಾಕಿ ಎನ್ನುತ್ತ ತಮ್ಮ ನೆಲದ ಗಟ್ಟಿ ದನಿಗಳನ್ನು ಉಲ್ಲೇಖಿಸಿ ಗಜಲ್‌ಲೋಕಕ್ಕೆ ಬಂದಿರುವ ಕವಿ ಸಿದ್ಧರಾಮ ಹೊನ್ಕಲ್ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಾ ಹಳಬರು. ಕಥೆ, ಕವನ, ಪ್ರವಾಸ ಕಥನ, ಪ್ರಬಂಧಗಳು ಹೀಗೆ ಹತ್ತಾರು […]

Back To Top