Day: October 21, 2020

ಪ್ರಕೃತಿಯ ವಿಕೋಪಗಳು ಮತ್ತು ಪರಿಸರ ಸಂರಕ್ಷಣೆ

ಲೇಖನ ಪ್ರಕೃತಿಯ ವಿಕೋಪಗಳು ಮತ್ತು  ಪರಿಸರ ಸಂರಕ್ಷಣೆ ಶ್ರೀನಿವಾಸ. ಎನ್.ದೇಸಾಯಿ ಪ್ರಕೃತಿಯ ವಿಕೋಪಗಳು ಮತ್ತು  ಪರಿಸರ ಸಂರಕ್ಷಣೆಯ ಮುನ್ನೆಚ್ಚರಿಕೆಯ ಕ್ರಮಗಳು.. ನಾವು ನಮ್ಮನ್ನು ಹೇಗೆ ರಕ್ಷಣೆ ಮಾಡಿಕೊಳ್ಳುತ್ತೇವೆಯೋ ಹಾಗೇಯೇ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಕೂಡಾ ಕ್ರಮಬದ್ಧವಾಗಿ, ಕಾಳಜಿಯಿಂದ, ಜವಾಬ್ದಾರಿಯುತವಾಗಿ ರಕ್ಷಣೆ ಮಾಡಬೇಕಾದದ್ದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಯಾಕೆಂದರೆ ಇತ್ತೀಚೆಗೆ ಆಗುತ್ತಿರುವ ಪ್ರಕೃತಿಯ ವಿಕೋಪಗಳಿಂದ ನಾವು ಅಕ್ಷರಶಃ ತತ್ತರಸಿ ಹೋಗಲು ಮುಖ್ಯ ಕಾರಣ ನಾವು ಮಾಡಿರುವ ಮತ್ತು ಮಾಡುತ್ತಿರುವ ಪರಿಸರ ನಾಶಕ್ಕೆ ಇಡೀ ಭೂಮಂಡಲದ ಚಿತ್ರಣವೇ ಬದಲಾಗುತ್ತಿದೆ. ನಾವಿಲ್ಲಿ […]

ದುಃಖ

ಕವಿತೆ ದುಃಖ ಚಂದ್ರಿಕಾ ನಾಗರಾಜ್ ಹಿರಿಯಡಕ ಅಯ್ಯೋಒಡೆದು ಬಿಡುಹೆಪ್ಪು ಗಟ್ಟಿರುವ ದುಃಖವ ಎಷ್ಟುಹೊತ್ತು ಹೊರಲಿಉಬ್ಬಿರುವ ಗಂಟಲ ಎಷ್ಟೆಂದು ಸಮಾಧಾನಿಸಲಿಅಡರಿರುವ ಕತ್ತಲಬೆಳಕೆಂದು ಕಂಗಳಿಗೆಷ್ಟು ನಂಬಿಸಲಿಹರಿದು, ಒಡೆದುಕಡಲಾಗಿಸುಹರಿಯಲಿಕಪ್ಪು ನೆತ್ತರುಹಾಳು ನೆತ್ತರುಬಸಿದಿಟ್ಟ ಒಲವಸುಡು ಸುಡುವಆಟದಲಿಕೈ ಸುಟ್ಟಿದ್ದಲ್ಲಕರಟಿ ಹೋಗಿದೆಬದುಕುಒಂದಷ್ಟು ಬವಣೆಗಳ ರಾಶಿಇನ್ನೊಂದಷ್ಟು ಖುಷಿಸತ್ತು ಸತ್ತು ನರಳುತಿದೆಎದೆ ಎತ್ತರಕ್ಕೆ ಬೆಳೆದು ನಿಂತಿದೆಇಲ್ಲ ಭಾವಗಳೆತ್ತರವ ಮೀರುತಿದೆಅಪನಂಬಿಕೆಯೆಂಬೋ ಅರ್ಥಹೀನತೆಗೆ‘ನೀನು’ ಎಂಬನಾಮಕರಣ ಮಾಡಿಸಿಹಿ ಹಂಚುವುದಿಲ್ಲಅಯ್ಯೋಒಡೆದು ಬಿಡುಹಂಚಿ ಹೋಗಲಿಕಹಿಯ ಒಗರೆಲ್ಲಾಆತ್ಮೋದ್ಧಾರದ ಸಣ್ಣ ಬೆಳಕೊಂದುಹಾಯಲಿಕದವಿಕ್ಕದಎದೆಯಂಗಳದ ತುಂಬೆಲ್ಲಾ ************************

ಸಂದಣಿ

ವಿಶೇಷ ಕಥೆ ಸಂದಣಿ ಅಶ್ವಥ್ ಬೆಳಗಿನ ಆಮೆವೇಗದ ಟ್ರಾಫಿಕ್ಕಿನಲ್ಲಿ ಸಿಕ್ಕಿಕೊಂಡು ಕಾಯುತ್ತಾ ಸಂಯಮ ಸಮಾಧಾನಗಳನ್ನೊಂದಿಷ್ಟು ಅಭ್ಯಾಸ ಮಾಡಿ ಆಫೀಸು ತಲುಪುವುದು ಸತೀಶನಿಗೆ ನಿತ್ಯಕರ್ಮವಾಗಿತ್ತು. ಅಕಸ್ಮಾತಾಗಿ ಬೆಳಗಿನ ಜಾವ ಮೂರು ನಾಲ್ಕುಗಂಟೆಯಲ್ಲೋ ಅಥವಾ ಅರ್ಧದಿನ ರಜಾಹಾಕಿ ಮನೆಗೆ ಮರಳುವಾಗಲೋ ಟ್ರಾಫಿಕ್ನಲ್ಲಿ ಸಿಕ್ಕಿಕೊಳ್ಳದೇ ಮನೆ ತಲುಪಿದ ದಿನ ತನ್ನ ಬೈಕಿಗೆ ರೆಕ್ಕೆ ಬಂದಿವೆಯೇನೋ ಅನಿಸುವಷ್ಟರ ಮಟ್ಟಿಗೆ ಹದಿನೈದು ನಿಮಿಷದ ಕಿರು ಪ್ರಯಾಣವಾಗಿರುತ್ತಿತ್ತು. ಬೆಂಗಳೂರಿನಲ್ಲಿರುವ ಹತ್ತು ವರ್ಷಗಳಲ್ಲಿ ‍ಮೂರು ಕಂಪನಿಗಳನ್ನು ಬದಲಾಯಿಸಿದರೂ ಎಲ್ಲೂ ಈಗಿನಷ್ಟು ಹತ್ತಿರವಾಗಿರಲಿಲ್ಲ. ಮೊದಲೆಲ್ಲಾ ೩ ಪ ಗಂಟೆಗಳವರೆಗಿನ […]

ಅಂಕಣ ಬರಹ ಪದೇ ಪದೇ ಕಾಡೋದು ಮನುಷ್ಯನ ವೈರುಧ್ಯಗಳು, ಸಂಬಂಧಗಳು. ಸಾಮಾಜಿಕ ತಲ್ಲಣ ತವಕಗಳು” ಮಮತಾ ಅರಸೀಕೆರೆ ಪರಿಚಯ :ಮಮತಾ ಅರಸಿಕೆರೆ ಕವಯಿತ್ರಿ. ವೃತ್ತಿಯಿಂದ ಶಿಕ್ಷಕಿ. ಚಿಕ್ಕಮಗಳೂರಿನ ಬೆಳವಾಡಿ ಅಪ್ಪನ ಊರು. ತುಮಕೂರು ಅವರ ತಾಯಿಯ ತವರು. ಶಿಕ್ಷಣ ಪಡೆದದ್ದೆಲ್ಲವೂ ಜಾವಗಲ್ ನಲ್ಲಿ. ಶಿಕ್ಷಕ ವೃತ್ತಿಯಲ್ಲಿದ್ದು, ಎಂ.ಎ.ಬಿಎಡ್ ಪಡೆದವರು. ವೃತ್ತಿಯಿಂದ ಶಿಕ್ಷಣ ಇಲಾಖೆಯಲ್ಲಿ ಈಗ ಸಿಆರ್‌ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೂರು ಕೃತಿಗಳು ಪ್ರಕಟವಾಗಿವೆ. ಕಾವ್ಯ, ಅನುವಾದ ಹಾಗೂ ಮಕ್ಕಳ ೩ ನಾಟಕಗಳು ಎಂಬ ಕೃತಿಗಳನ್ನು ಹೊರ ತಂದಿರುವ ಇವರ […]

ಅಂಕಣ ಬರಹ  ದುಗುಡದ ನೆನಪು (ಕಲಬುರ್ಗಿಯವರು ಕೊಲೆಯಾದಾಗ ಬರೆದ ಬರೆಹ) ಕರ್ನಾಟಕ ವಿಶ್ವವಿದ್ಯಾಲಯದ ಶ್ರೇಷ್ಠ ಅಧ್ಯಾಪಕರಲ್ಲಿ ಎಂ.ಎಂ.ಕಲಬುರ್ಗಿಯವರೂ ಒಬ್ಬರೆಂದು ಅವರ ಶಿಷ್ಯರ ಮೂಲಕ ಕೇಳುತ್ತಿದ್ದೆವು. ಅವರ ಸಂಶೋಧನ ಬರೆಹಗಳಲ್ಲಿ ವ್ಯಾಪಕ ಅಧ್ಯಯನ ಮತ್ತು ಆಳವಾದ ವಿದ್ವತ್ತಿರುವುದೂ ತಿಳಿದಿತ್ತು. ಆದರೆ ಅವರ ವೈಯಕ್ತಿಕ ಒಡನಾಟವಿರಲಿಲ್ಲ. ನನಗೆ ಈ ಒಡನಾಟವು ಮೊದಲ ಸಲ ಒದಗಿದ್ದು ನನ್ನ ಪಿಎಚ್.ಡಿ., ಪ್ರಬಂಧದ ಮೌಲ್ಯಮಾಪಕರಾಗಿ ಅವರು ಮೌಖಿಕ ಪರೀಕ್ಷೆಗೆ ಬಂದಾಗ. 1987ರಲ್ಲಿ. ಪ್ರಬಂಧದಲ್ಲಿ ವಚನಸಾಹಿತ್ಯದ ಮೇಲೆ ನಾನು ಮಾಡಿದ್ದ `ಸೋಲು’ ಎಂಬ ಟೀಕೆಯ ವಿಷಯದಲ್ಲಿ […]

Back To Top