Day: October 24, 2020

ಕಾಗೆ ಮುಟ್ಟಿದ ನೀರು

ಪುಸ್ತಕ ಪರಿಚಯ ಕಾಗೆ ಮುಟ್ಟಿದ ನೀರು ಪುಸ್ತಕ:- ಕಾಗೆ ಮುಟ್ಟಿದ ನೀರುಲೇಖಕರು:-ಡಾ.ಪುರುಷೋತ್ತಮ ಬಿಳಿಮಲೆಪ್ರಕಾಶನ:-ಅಹರ್ನಿಶಿ ಪ್ರಕಾಶನ,ಶಿವಮೊಗ್ಗ ಕಾಗೆ ಮುಟ್ಟಿದ ನೀರು ಪುಸ್ತಕ ಅನೇಕ ಓದುಗ ಪ್ರಭುಗಳ ಉತ್ತಮ ಅನಿಸಿಕೆಗಳ ಓದಿ ತೀರಾ ಮನಸ್ಸಾಗಿ ಓದಲು ಹಂಬಲ ಹೆಚ್ಚಾಗಿ,ತೀರಾ ಕಡಿಮೆ ರಿಯಾಯತಿಯಲ್ಲಿ ಪುಸ್ತಕ ಕೊಡುವುದಾದರೆ ಕಳಿಸಿ ಎಂದು ಪ್ರಕಾಶಕರಿಗೆ ಸಂದೇಶವನ್ನು ಕಳಿಸಿದ ಕೂಡಲೇ, ಆಯ್ತು ವಿಳಾಸ ಬರಲಿ ಎಂದು ಅತ್ತಕಡೆಯಿಂದ ಕಳುಹಿಸಿ ಕೊಟ್ಟರು.ಆತ್ಮಕತೆ ನನ್ನಿಷ್ಟದ ಒಂದು ಓದುವಿನ‌ ವಿಭಾಗ. ಪುಸ್ತಕವೂ ಕೈಸೇರಿತು, ಸಿಕ್ಕಗಳಿಗೆ ಮೊದಲು ಬೆನ್ನುಡಿ-ಮುನ್ನುಡಿ ಓದುವ ಹವ್ಯಾಸ ನನ್ನದಾಗಿದೆ. […]

ಮಳೆಗಾಲದ ಬಿಸಿಲುಕವಿತೆ

ಕವಿತೆ ಮಳೆಗಾಲದ ಬಿಸಿಲು ಅಬ್ಳಿ,ಹೆಗಡೆ ಹಗಲ ಶಿಶು ಶಶಿಯೊಡನೆಆಟದಲಿ ಸೋತು.ಮುಗಿಲುಗಳ ಮರೆಯಲ್ಲಿಅಳುತಿಹನು ಕೂತು.ಮಗುವ ಕಾಣದ ತಾಯಿರಮಿಸಿ ತಾ ಕರೆಯೆ-ಕಣ್ಣೊರೆಸಿ ಹೊರ ಬಂದಮಗು-ನಗುವ ‘ಹೊಳೆಯೆ’. ******************************

ಬದುಕು- ಬವಣೆ

ಕವಿತೆ ಬದುಕು- ಬವಣೆ ಸಹನಾ ಪ್ರಸಾದ್ ಗಂಡ ಹೆಂಡಿರ ಸಂಬಂಧಸಂಸಾರಕ್ಕೆ ಇದೇ ಮೆರಗುಉಫ಼್ಫ಼್ ಹೇಳಲಾಗದು ಅನುಬಂಧಜತೆಗಿರುವರು ಸಾಯುವವರೆಗೂ ಆದರೆ ಇರಲೇಬೇಕಿಲ್ಲ ಪ್ರೀತಿವ್ಯಾವಹಾರಿಕವಾದರೂ ನಡೆದೀತುಇದ್ದರೆ ಸಮಾಜದ ಭೀತಿಪ್ರೀತಿಯೂ ಗಿಲೀಟು ಬತ್ತಿ ಹೋದ ಮೇಲೆ ಪ್ರೀತಿಯ ಚಿಲುಮೆಜತೆಗಿರುವುದೂ ಅನಿವಾರ್ಯವಾದಾಗಮುದುಡಿದ ಮನಸ್ಸುಗಳಿಗೆ ಎಲ್ಲಿದೆ ಒಲುಮೆಕಿತ್ತೇ ಹೋಯಿತೇನೋ ಅನಿಸುತ್ತೆ ಹೃದಯದ ಭಾಗ ನಮ್ಮ ಸಮಾಜದಲ್ಲಿ ಇಲ್ಲ ವಿಚ್ಚೇದನಒಮ್ಮೆ ಜತೆಗೂಡಿದರೆ ಮುಗಿಯಿತು ಬದುಕುಒಳ್ಳೆ ಜನ ಸಿಗದಿದ್ದರೆ ಬದುಕೇ ವೇದನಸಹಿಸಿಕೊಳ್ಳಬೇಕು ಖಾಲಿಯಾಗುವವರೆಗೂ ಸರಕು! *************************

ಬದಲಾದ ಕಾಲಕ್ಕೆ ಹಳ್ಳಿಯ ಬದುಕು

ಲೇಖನ ಬದಲಾದ ಕಾಲಕ್ಕೆ ಹಳ್ಳಿಯ ಬದುಕು ಸರಿತಾ ಮಧು ಹಳ್ಳಿಗಳ ದೇಶವೇ ನಮ್ಮದು. ಮೊದಲಾದರೆ ಸುಂದರ ಸ್ವರ್ಗದಂತೆ ಇದ್ದವು. ಕೂಡು ಕುಟುಂಬ, ಅದಕ್ಕೆ ಹೊಂದಿಕೊಂಡಂತೆ ಗದ್ದೆ- ತೋಟಗಳು, ರಕ್ತ ಸಂಬಂಧಗಳು ಹಾಗೂ ಮಾನವೀಯ ನೆಲೆಯಲ್ಲಿ ಒಟ್ಟಿಗೆ ಸೇರಿ ನಲಿಯುತ್ತಿದ್ದ ಸಂದರ್ಭಗಳು. ಮೂರು – ನಾಲ್ಕು ತಲೆಮಾರಿನ ಅನುಭವಗಳ ಬೆರೆತ ಸಂಸಾರ. ಮನೆಗಳಲ್ಲಿ ಆಡಂಬರವಿರಲಿಲ್ಲ ಮನಸಿನಲ್ಲಿ ಆತ್ಮೀಯತೆ ಇತ್ತು. ಅವಿಭಕ್ತ ಭಾವ ರಕ್ತಗತವಾಗಿ ಮುಂದುವರೆಯುತ್ತಿತ್ತು. ಹಣಕಾಸಿಗೆ ಅಡಚಣೆಯಿತ್ತು ಅದರ ಹೊರತು ಪರಿಶುದ್ಧವಾದ  ಬದುಕಿಗಲ್ಲ. ನಗರ ಜೀವನಕ್ಕೆ ಮನಸೋತ ಕೆಲವು […]

ರಚ್ಚೆ ಹಿಡಿದ ಮನ

ಕವಿತೆ ರಚ್ಚೆ ಹಿಡಿದ ಮನ ಸ್ವಭಾವ ಕೋಳಗುಂದ ಮಳೆ ನಿಂತ ನೆಲದಲ್ಲಿನಡೆಯುತ್ತಲೇ ಇದ್ದಳುಗುರುತು ಮಾಡಿ ಗುರಿಯೆಡೆಗೆ ಹಸಿಟ್ಟಿಗೆ ಬಿಸಿ ನೀರು ಸುರುವಿತಟ್ಟಿ ಬೆಳರ ಚಿತ್ರದ ಹಚ್ಚೆಬೆಂದ ರೊಟ್ಟಿ ಹಸಿದ ಹೊಟ್ಟಗೆ ಹರಗಿದ ಹೊಲಕ್ಕೆ ಬೀಜ ಬಿತ್ತಿನೀರು ಹಾಯಿಸಿ ಕಳೆ ಕಿತ್ತುಕೊಯ್ಲಿಗೆ ಕಾದು ರಾಶಿ ಪೈರಾಗಿಸಿದ್ದ ರಚ್ಚೆ ಹಿಡಿದ ಕೂಸುನೆಟಿಗೆ ತೆಗೆದು ನೀವಾಳಿಸಿರಂಚು ಬೂದಿಯ ತಿಲಕದ ಕೈಚಳಕ ಗುಡಿಯ ಗಂಟೆಯ ನಾದಕ್ಕೆತಲೆದೂಗಿದ ಎಳೆ ಜೋಳದ ತೆನೆನೊರೆ ಉಕ್ಕಿ ಕೆಚ್ಚಲ ತಂಬಿಗೆ ಸೋರಿತ್ತು ಕೊಟ್ಟಗೆಯ ಕರು ಚಂಗನೆ ಎಗರಿಅಂಗಳದ ರಂಗೋಲಿ […]

ಗಝಲ್

ಗಝಲ್ ಸ್ಮಿತಾ ಭಟ್ ಒಲವಿನ ನಿರೀಕ್ಷೆಯ ಬದುಕ ಮುಗಿಸಿದ್ದೇನೆನಲಿವಿನ ದೀಪದೆದುರು ಕಣ್ಮುಚ್ಚಿ ಕುಳಿತಿದ್ದೇನೆ/ ಯಾರಿಗೆ ಯಾರೂ ಆಸರೆಯಲ್ಲ ಇಲ್ಲಿಸೆರೆಯಾದ ಉಸಿರಿನ ಕೀಲಿ ತೆಗೆದಿದ್ದೇನೆ / ಕ್ಷಮಿಸು ಕಣ್ಣತೇವಕ್ಕೆ ನನ್ನ ಹೊಣೆ ಮಾಡದಿರುಕರವಸ್ತ್ರ ಇರಿಸಿಕೊಳ್ಳುವ ರೂಢಿ ಮರೆತಿದ್ದೇನೆ/ ಮೊಗಕೆ ಒಳಗುದಿಯ ತೋರುವ ಇರಾದೆ ಇಲ್ಲಬರಿದೇ ತರತರದ ಮಾತಾಗಿ ನಗುತ್ತಿದ್ದೇನೆ/ ಬಲಹೀನ ಮನಸು ಏನೂ ಸಾಧಿಸದು ಮಾಧವಾಭವಿತವ್ಯದ ಬಾಗಿಲಿಗೆ ತೋರಣವ ಕಟ್ಟಿದ್ದೇನೆ/ *********************************

Back To Top