Day: November 28, 2020

ಅಂಕಣ ಬರಹ-01 ಆತ್ಮಕತೆಯ ಮೊದಲ ಕಂತು.. ಅಸ್ತಿತ್ವವಿಲ್ಲದ ಅವ್ವನ ಹೆಜ್ಜೆಗಳು ಅಕ್ಟೋಬರ್, ೧, ೨೦೦೮ ಕಾರವಾರದ ದಿವೇಕರ ವಾಣಿಜ್ಯ ಮಹಾವಿದ್ಯಾಲಯದ ಪ್ರಾಂಶುಪಾಲನಾಗಿ ಕರ್ತವ್ಯಕ್ಕೆ ಹಾಜರಾದೆ. ಕಳೆದ ಮೂವತ್ಮೂರು ವರ್ಷಗಳ ಸುದೀರ್ಘ ಅವಧಿಯಲ್ಲಿ ಅಂಕೋಲೆಯ ಗೋಖಲೆ ಸೆಂಟನರಿ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕನಾಗಿ ಸೇವೆ ಸಲ್ಲಿಸುತ್ತಿರುವಾಗಿನ ಸಿಹಿ ಕಹಿ ನೆನಪುಗಳ ಚಿಪ್ಪಿನಿಂದ ಪೂರ್ತಿಯಾಗಿ ಹೊರಬರುವುದು ಇನ್ನೂ ಸಾಧ್ಯವಾಗಿರಲಿಲ್ಲ. ಮುಂದಿನ ವೃತ್ತಿನಿರತ ಬದುಕಿನ ನಾಲ್ಕು ವರ್ಷಗಳನ್ನು ಕಾರವಾರದ ಹೊಸ ಪರಿಸರದಲ್ಲಿ ಹೇಗೆ ಹೊಂದಿಸಿಕೊಳ್ಳಬೇಕೆಂಬ ಆಲೋಚನೆ ಒಂದುಕಡೆ ಮನಸ್ಸನ್ನು ಕೊರೆಯುತ್ತಿತ್ತು.             ಕಾಲೇಜ್ […]

ಗಜಲ್‌

ಗಜಲ್‌ ರತ್ನರಾಯ ಮಲ್ಲ ನಿನ್ನ ಬೆಳದಿಂಗಳಿನಂಥ ಕಂಗಳ ನೋಟದಲ್ಲಿ ಕಳೆದು ಹೋಗುತ್ತಿರುವೆನಿನ್ನ ಕಣ್ರೆಪ್ಪೆಯ ಪ್ರೇಮದ ಜೋಕಾಲಿಯಲ್ಲಿ ಸಂಭ್ರಮ ಪಡುತ್ತಿರುವೆ ಚಂದ್ರಬಿಂಬದಂಥ ನಿನ್ನ ಮುಖ ಕಂಡು ನೇಸರನು ಗೂಡು ಸೇರಿಹನುನಿನ್ನ ವದನವನ್ನು ಹತ್ತಿರದಿಂದ ಕಾಣುತ್ತ ಪ್ರೀತಿಯಲ್ಲಿ ಮುಳುಗುತ್ತಿರುವೆ ಕಾಮನಬಿಲ್ಲಿನಂತ ಆಭರಣಗಳ ಕಾಂತಿ ನಿನ್ನ ಅಂದವನ್ನು ಹೆಚ್ಚಿಸುತ್ತಿವೆನಿನ್ನ ಸಾನಿಧ್ಯದಿ ಒಲವಿನ ಪುತ್ಥಳಿಯನ್ನು ಚುಂಬಿಸುತ್ತ ನಲಿಯುತ್ತಿರುವೆ ರಸದೌತಣಕೆ ಆಮಂತ್ರಿಸುತಿವೆ ನಿನ್ನ ವೈಯ್ಯಾರದ ಮೈ ಮಾಟಗಳುಕಲ್ಪವೃಕ್ಷದ ಕೊಂಬೆಗಳಂಥ ಆ ನಿನ್ನ ತೋಳುಗಳನ್ನು ಬಯಸುತ್ತಿರುವೆ ಸುಗಂಧದಂತ ನಿನ್ನ ಉಸಿರಿನಲ್ಲಿ ‘ಮಲ್ಲಿ’ ಬೆರೆತು ಹೋಗುತಿರುವನುಮೆದುವಾದ ನಿನ್ನ […]

‌ಬಾಲಂಗೋಚಿ

ಪುಸ್ತಕ ಸಂಗಾತಿ ‌ಬಾಲಂಗೋಚಿ ಮಕ್ಕಳ ಕವನ ಸಂಕಲನ ‘ಬಾಲಂಗೋಚಿ’ ಮಕ್ಕಳ ಕವನ ಸಂಕಲನ.ಪ್ರಕಟಣೆ: 2019ಪುಟಗಳು: 96ಬೆಲೆ: 90ರೂ.ಪ್ರಕಾಶಕರು: ಗೋಮಿನಿ ಪ್ರಕಾಶನಶಾಂತಿ ನಗರ, ತುಮಕೂರು-2 ದೂರವಾಣಿ: 9986692342 ಮಕ್ಕಳ ಮನವನ್ನು ಅರಳಿಸುವ ಪದ್ಯಗಳು ಅರಳ ಬೇಕು ಚಿಣ್ಣರ ಮನಸು ಮೊಲ್ಲೆ ಹೂವಿನಂತಯೇ ಸಲ್ಲಬೇಕು ಮನುಜ ಕುಲಕೆ ಅದರ ಸೇವೆಯಂತೆಯೇ ಬಾಲ್ಯದ ನೆನಪುಗಳೇ ಎಲ್ಲರಿಗೂ ಒಂದು ರೀತಿಯ ಪ್ರೀತಿ ಹಾಗೂ ಚೈತನ್ಯ ಬಾಲ್ಯ ನೆನಪಾಗುತ್ತಲೇ ನಮ್ಮ ಬದುಕಿನ ಬಹುದೂರದ ಪಯಣವೆಲ್ಲ ಮರೆತಂತಾಗಿ ನಾವೂ ಒಂದು ರೀತಿಯ ಬಾಲ್ಯದ ಖುಷಿಯಲ್ಲಿ ತೇಲತೊಡಗುತ್ತೇವೆ. […]

ಯುವ ಗಜಲ್‌ ಕವಿ ರೇಖಾ ಭಟ್ ಹೆಸರು: ರೇಖಾ ಭಟ್ ಹೊನ್ನಗದ್ದೆಪ್ರಕಟಿತ ಕೃತಿ : ‘ಮಡಿಲ ನಕ್ಷತ್ರ’ ಗಜಲ್ ಸಂಕಲನವೃತ್ತಿ : ಪ್ರಾಥಮಿಕ ಶಾಲಾ ಶಿಕ್ಷಕಿಊರು: ಬಾಳೆಗದ್ದೆ‌. ಶಿರಸಿ ಆಯ್ಕೆಗಳ ಅರಿವಿದ್ದರೆ ಕಸಗಳು ಬೊಗಸೆ ಸೇರುವುದಿಲ್ಲಇಷ್ಟಗಳು ನಿರ್ದಿಷ್ಟವಿದ್ದರೆ ಕಷ್ಟಗಳು ಮೀಸೆ ತಿರುವುದಿಲ್ಲ ಎಲ್ಲ ಕಡೆ ಸುಳಿವ ಗಾಳಿ ಗಂಧ ದುರ್ಗಂಧಗಳ ಉಡಲೇಬೇಕುಬದುಕು ಹಗುರಾಗಿ ತೇಲಿದರೆ ಯಾವುದೂ ಅಂಟಿಕೊಳ್ಳುವುದಿಲ್ಲ ಕುಂದುಕೊರತೆಗಳು ದಾರಿಯ ನಡುವಿನ ಕೊರಕಲಿನಂತಲ್ಲವೇಗಮ್ಯದತ್ತಣ ಸಲೀಸು ನಡಿಗೆ ಎಂದಿಗೂ ಖುಷಿ ನೀಡುವುದಿಲ್ಲ ಎಲ್ಲೋ ಬೇರೂರಿದ ಬಳ್ಳಿ ಹಬ್ಬಿ ಹರಡಿ […]

ಕನಸಿನ ಕೊನೆ

ಕವಿತೆ ಕನಸಿನ ಕೊನೆ ನೀ.ಶ್ರೀಶೈಲ ಹುಲ್ಲೂರು ಬೇಗುದಿಯ ಬೆಂಗೊಡದಕರಿಕಾಯದೀ ಕಥೆಗೆನೂರೆಂಟು ಕನಸು…ಅವಳ ಮುಡಿಗೆ ಚಿನ್ನದ ಹೂಕೊರಳಿಗೆ ಮುತ್ತಿನ ಹಾರಮೈಗೆ ಅಂದದ ರೇಷ್ಮೆ ಸೀರೆಬತ್ತಿದೆದೆಗೊಂದು ಚೆಂದದ ರವಿಕೆ! ಮಕ್ಕಳಾಟಕೆ ಬುಗುರಿ ಪೀಪಿತೂಗುಕುದುರೆ ಓಡಲೊಂದುಕಬ್ಬಿಣದ ಗಾಲಿಪಡೆವಾತುರಕೋ ಒಡಲ ತುಂಬಆಸೆಗಳ ನೂರು ಕಟ್ಟು!ಅಂದವಾದ ಈ ಮೈಕಟ್ಟಿನೊಡೆಯನ ತುಡಿತಕೆಯಾವಾಗಲೂ ಚಿಗುರು! ಧಣಿಯ ದಪ್ಪ ಚರ್ಮದಮೇಲೂ ಅದೆಂಥದೋ ಮಮತೆಬಿಡಿಗಾಸು ನೀಡದವನಅಡಿದಾಸನಾಗಿ ಹರೆಯಸವೆಸುವ ಅಪೂರ್ವ ಸಂತಸಅವಳಿತ್ತ ಬೇಡಿಕೆಯಅಕ್ಷಯಾಂಬರಕೆ ಬೆನ್ನು ತಿರುಗಿಸಿದುಡಿಯುವ ನಗ್ನ ಸತ್ಯ! ಸಂಜೆ ಮನೆಯ ದಾರಿಯಲಿಕಸುವು ಕಳೆದುಕೊಂಡ ದೇಹದಜೊತೆಗೆ ಅದೇ ಖಾಲಿ ಕೈಜೋಮುಗೊಂಡ ಕಾಲಿಗೆ […]

ಮುಗಿಲ ಮಲ್ಲಿಗೆ

ಕಥೆ ಮುಗಿಲ ಮಲ್ಲಿಗೆ ರೂಪಕಲಾ ಕೆ.ಎಂ. ಕತ್ತಲೆಯ ಸೆರಗನ್ನು ಹೊದ್ದು ಮಲಗಿದ್ದ ರಸ್ತೆಯಲ್ಲಿ, ವೇಗವಾಗಿ ಚಲಿಸುತ್ತಿದ್ದ ಬಸ್ಸು.. ಅದಕ್ಕಿಂತಲೂ ವೇಗದಲ್ಲಿ ಓಡುತ್ತಿತ್ತು ಹರೀಶನ ಮನಸ್ಸು. ಆಗಾಗ ಎದುರಾಗುವ ವಾಹನಗಳ ಬೆಳಕು ಬಂದು ಕಣ್ಣಿಗೆ ಹೊಡೆದರೂ, ಮನಸ್ಸು ಮಾತ್ರ ಕತ್ತಲೆಯ ಗೂಡಾಗಿತ್ತು.. ಪಕ್ಕದ ಸೀಟಿನಲ್ಲಿ ರಾಧಿಕ ಗಾಢವಾದ ನಿದ್ರೆಯಲ್ಲಿದ್ದಳು.. ಬಸ್ಸಿನ ಪ್ರಯಾಣದಲ್ಲಿಯೂ ಗೊರಕೆ ಹೊಡೆಯುತ್ತ ಮಲಗಿದ್ದ ಸಹ ಪ್ರಯಾಣಕರನ್ನು ನೋಡಿ, ‘ಚಿಂತೆಯಿಲ್ಲದವರೆಗೆ ಸಂತೆಯಲ್ಲೂ ನಿದ್ರೆಯಂತೆ’ ಅನ್ನೊ ಮಾತು ಅವನಿಗೆ ನೆನಪಾಯಿತು.. ಅವನ ಮನ ಪದೇ ಪದೆ ಪ್ರದೀಪನನ್ನೇ ಮೆಲಕು […]

ಕಾಗೆ…

ಲೇಖನ ಕಾಗೆ… ಡಾ. ಅರಕಲಗೂಡು ನೀಲಕಂಠ ಮೂರ್ತಿ ನಾನೊಂದು ಕಾಗೆ, ನಿಜ. ಅಪ್ಪಟ ಕಪ್ಪು, ನಿಜ. ನನ್ನ ‘ಮಧುರ’ ಧ್ವನಿ ನಿಮಗೆ ಕರ್ಕಷ! ಬಹುಶಃ ಅದೂ ಕೂಡ ನಿಜ! (ನಿಮ್ಮದೇ ಕಣ್ಣು ಕಾಣುವ ಕೋನದಿಂದ ಮಾತ್ರ). ನಿಮ್ಮ ಹಾಗೆ ನಮ್ಮ ಪಕ್ಷಿ ಲೋಕದ ಲ್ಲಿ, ಕಪ್ಪು ಅಂದಾಕ್ಷಣ ಅಸಹ್ಯವಿಲ್ಲ. ನಿಮ್ಮಲ್ಲೋ ಎಂಥೆಂತಹ ಅಸಹ್ಯ ಭಾವನೆಗಳಿಲ್ಲ ಹೇಳಿ – ಒಬ್ಬನನ್ನೊಬ್ಬ  ಕಂಡಾಗ ನಿಮ್ಮ ನಿಮ್ಮ ನಡುವೆ!  ನಾವು ವೈವಿಧ್ಯಮಯ ಜಗತ್ತನ್ನು ನಮ್ಮ ಉಗಮದಿಂದಲೇ ಗೌರವದಿಂದ ಭಾವಿಸಿಕೊಂಡು ಬಂದವರು; ಇಂದಿಗೂ […]

ಅಂಕಣ ಬರಹ-01 ನಾಂದಿ ಪದ್ಯ ತೆಂಗಿನ ಮಡಲಿನಿಂದ ನೇಯ್ದ ತಟ್ಟಿ ಆ ಮನೆಯ ಹೊರ ಆವರಣದ ತಡೆ ಗೋಡೆ. ಮಣ್ಣಿನ ನೆಲಕ್ಕೆ ಮಣ್ಣಿನದ್ದೇ ಪರಿಮಳ. ಮಳೆಗಾಲದಲ್ಲಿ ಆ ಮನೆಯ ನೆಲವು ನೀರ ಒಸರಿಗೆ ಹಸಿ ಹಸಿಯಾಗುತ್ತದೆ. ಹೊರಗೆ ಧೋ ಎನ್ನುವ, ಹನಿಹನಿ ಟಪಟಪ ಹನಿಸಿ ಮರ್ಮರಿಸುವ, ಗುನುಗುವ, ಆರ್ಭಟಿಸುವ ಹಠಮಾರಿ ಮಳೆ.  ಚಾಪೆಯಂತೆ ಹೆಣೆದ ಆ ತಟ್ಟಿಯನ್ನು ನನ್ನ ಪುಟ್ಟ ಬೆರಳಿನಲ್ಲಿ ಅಗಲಿಸಿ ಒಂದು ಕಣ್ಣನ್ನು ಆ ಖಾಲಿಗೆ ಹೊಂದಿಸಿ..ಇನ್ನೊಂದು ಕಣ್ಣ ಮುಚ್ಚಿ ಹೊರಗೆ  ಸುಯ್ಯುತ್ತಿದ್ದ ಮಳೆಯೊಂದಿಗೆ […]

Back To Top