ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ವಾರದ ಕವಿತೆ

ಅಡುಗೆಮನೆ ಜಗತ್ತು

ವಾರದ ಕವಿತೆ ಅಡುಗೆಮನೆ ಜಗತ್ತು ಉಮಾ ಮುಕುಂದ್ ಕಬ್ಬಿಣದ ತವದ ಮೇಲೆರೆದದೋಸೆಯ ರುಚಿ ಮತ್ತು ಗರಿನಾನ್ ಸ್ಟಿಕ್ ತವದ ದೋಸೆಗೆ ಬಂದೀತು ಹೇಗೆ?ಅಂಟಿಸಿಕೊಳ್ಳದ್ದು ಆಪ್ತವಾದೀತು ಹೇಗೆ? ಉಪ್ಪಿನಕಾಯಿ ಜಾಡಿಗೆ ತುಂಬಿಸಿಮುಚ್ವಿಟ್ಟರೆ ಮುಗಿಯಲಿಲ್ಲಆಗಾಗ್ಗೆ ಕೈಯಾಡಿಸಬೇಕು ತೆಗೆದುಕೆಡದಂತಿರಿಸಿಕೊಳ್ಳಲು. ಅಡುಗೆಮನೆ ಕೈಒರೆಸುಅನಿವಾರ್ಯವಾದರೂಮನೆಯವರಿಗೆ ಸಸಾರಕೆಲಕೆಲವು ಜನರ ಹಾಗೆ. ಬೇಕಾದ್ದು, ಬೇಡದ್ದು ತುಂಬಿಮುಚ್ಚಿಬಿಡುವ ಕಪಾಟಿನಡುಗೆಮನೆಗಿಂತಾಇಟ್ಟಿದ್ದು, ಕೆಟ್ಟದ್ದು ಕಾಣುವ ಅಡುಗೆಮನೆಯಾದರೆಆಗಾಗ ಶುಚಿಗೊಳಿಸಿಕೊಂಡೇವು. ತರಕಾರಿ ಸಹಜ ಬಣ್ಣ ಉಳಿಸಿಕೊಳ್ಳಲುಬೇಯುವಾಗಿಷ್ಟು ಉಪ್ಪು ಉದುರಿಸಿದರಾಯ್ತುಮನುಷ್ಯರ ನಿಜಬಣ್ಣ ತಿಳಿಯಲುಉಪಾಯವೇನಾದರೂ ಇದ್ದಿದ್ದರೆ… ಮೊಂಡಾದ ಚಾಕು, ಈಳಿಗೆಗೆಸಾಣೆ ಹಿಡಿಯಬೇಕು ಆಗಾಗ್ಗೆಮೊನಚು ಕಳಕೊಂಡ ಸಂಬಂಧಗಳಿಗೂ ಹಾಗೇ… ಕೊನೆ ಗುಟುಕಿನವರೆಗೂ ಬಿಸಿಆರದಹಾಗೆ ಕಾಫಿ ಬೆರೆಸುವುದೂಕೊನೆವರೆಗೂ ಬಿಸುಪು ಕಾಯ್ದುಕೊಂಡುಬದುಕುವುದೂ ಎಲ್ಲರಿಗೂ ಸಿದ್ಧಿಸುವುದಲ್ಲ. ಸಿಟ್ಟು, ಅಸಹನೆ, ಅತೃಪ್ತಿ ಎಲ್ಲವನ್ನೂಹಿಟ್ಟಿನೊಂದಿಗೆ ಮಿದ್ದು ಮಿದ್ದುಲಟ್ಟಿಸಿ ಬೇಯಿಸಿದ ಚಪಾತಿತಿನ್ನಲು ಬಲು ಮೃದು, ಮಧುರ. ಜ಼ೊರೋ ಎಂದು ನಲ್ಲಿ ತಿರುಗಿಸಿಇನ್ನೆರಡು ತೊಳೆದರೆ ಮುಗಿಯಿತುಎನ್ನುವಷ್ಟರಲ್ಲೇ ನಿಂತ ನೀರು!ಇದ್ದಾಗ ತಿಳಿಯದ ಬೆಲೆ, ಹೋದಾಗ ಹಳಹಳಿಕೆ. ************************************* ಪ್ರೇರಣೆ: ಬಿ.ವಿ.ಭಾರತಿಯವರ ಕವಿತೆಯಿಂದ

ಅಡುಗೆಮನೆ ಜಗತ್ತು Read Post »

ಇತರೆ, ವರ್ತಮಾನ

ಡಾ.ಬಿ.ಆರ್.ಅಂಬೇಡ್ಕರ್ ರ ಕೊನೆಯ ಸಂದೇಶ..!

ಡಾ.ಬಿ.ಆರ್.ಅಂಬೇಡ್ಕರ್ ರ ಕೊನೆಯ ಸಂದೇಶ..! ಕೆ.ಶಿವು.ಲಕ್ಕಣ್ಣವರ ‘ಮಹಾನಾಯಕ’ ಡಾ.ಬಿ.ಆರ್.ಅಂಬೇಡ್ಕರ್ ರ ಕೊನೆಯ ಸಂದೇಶ..! ಡಿ. 6 ದೇಶದ ಮಹಾನಾಯಕ ಅಂಬೇಡ್ಕರ್ ಅವರನ್ನು ಕಳೆದುಕೊಂಡ ದಿನ. ಅವರ ಕೊನೆಯ ಸಂದೇಶವನ್ನು ಪ್ರತಿಯೊಬ್ಬರು ತಿಳಿಯಬೇಕು ಅಂದು ಡಿಸೆಂಬರ್  6, 1956. ಇಡೀ ಭಾರತದಲ್ಲಿ ಕಣ್ಣೀರ ಕೋಡಿ ಹರಿದ ದಿನ. ಕತ್ತಲಲ್ಲಿದ್ದ ಭಾರತಕ್ಕೆ ಬೆಳಕಿನ ಕಿರಣ ನೀಡಿ, ವಿಶ್ವವೇ ಬೆರಗಾಗುವಂತೆ ಮಾಡಿದ್ದ, ಆಧುನಿಕ ಭಾರತದ ನಿರ್ಮಾತೃ, ಸಂವಿಧಾನ ಶಿಲ್ಪಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಿಬ್ಬಾಣ ಹೊಂದಿದ ದಿನ. ಭಾರತದ ಕಣ್ತೆರೆಸಿ, ಸಮಾನತೆಯ ಬೀಜ ಬಿತ್ತಿ ಹೋದ ಆ ಮಹಾನಾಯಕನ ಹೋರಾಟದ ಫಲವನ್ನು ಇಡೀ ಭಾರತವೇ ಇಂದು ಉಣ್ಣುತ್ತಿದೆ. ಡಾ.ಬಿ.ಆರ್.ಅಂಬೇಡ್ಕರ್ ರವರು 14ನೇ ಏಪ್ರಿಲ್, 1891 ಮಧ್ಯಪ್ರದೇಶದ ಮಾಹೋ ಎಂಬ ಮಿಲಿಟರಿ ಕ್ಯಾಂಪ್ ನಲ್ಲಿ ಹುಟ್ಟಿದರು. ಈ ದೇಶವನ್ನು ಉತ್ತಮ ದಾರಿಗೆ ಕೊಂಡೊಯ್ಯಲೆಂದೇ ಅವರು ಈ ಭಾರತದಲ್ಲಿ ಜನಿಸಿದರು ಎಂದೇ ಹೇಳಬಹುದು. ಅಂಬೇಡ್ಕರ್ ಅವರು  ಭಾರತದಲ್ಲಿ ಜನಿಸದೇ ಇರುತ್ತಿದ್ದರೆ, ಇಂದು ಭಾರತದ ಪರಿಸ್ಥಿತಿ ಏನಾಗಿರುತ್ತಿತ್ತು ಎನ್ನುವುದನ್ನು ಯೋಚಿಸಲೂ ಸಾಧ್ಯವಾಗುತ್ತಿರಲಿಲ್ಲ. ಭಾರತದ ಬೀದಿಗಳಲ್ಲಿ ಚಿನ್ನ, ರತ್ನ, ವಜ್ರ ವೈಢೂರ್ಯಗಳನ್ನು ಮಾರಾಟ ಮಾಡಲಾಗುತ್ತಿತ್ತು ಎನ್ನುವ ಇತಿಹಾತಿಹಾಸವನ್ನು ನಾವು ಓದಿದ್ದೇವೆ. ಆದರೆ, ಅದೇ ಭಾರತದಲ್ಲಿ ಮನುಷ್ಯನನ್ನು ಮನುಷ್ಯನಂತೆ ಕಾಣಲಾಗುತ್ತಿರಲಿಲ್ಲ ಎನ್ನುವ ಸತ್ಯವನ್ನೂ ನಾವು ಒಪ್ಪಿಕೊಂಡಿದ್ದೇವೆ. ಇಂದು ಭಾರತದಲ್ಲಿ ಇಷ್ಟರ ಮಟ್ಟಿಗೆ ಸಮಾನತೆ, ನೆಮ್ಮದಿ ಇದೆ ಎಂದರೆ, ಅಂಬೇಡ್ಕರ್ ಅವರು ನೀಡಿದ ಪವಿತ್ರ ಸಂವಿಧಾನದಿಂದ ಮಾತ್ರವೇ ಅದು ಸಾಧ್ಯವಾಗಿದೆ. ಎಲ್ಲ ನಾಯಕರು ಬ್ರಿಟಿಷರಿಂದ ದೇಶಕ್ಕೆ ಸ್ವಾತಂತ್ರ ಸಿಗಬೇಕೆಂದು ಹೋರಾಟ ಮಾಡಿದರೆ, ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶದೊಳಗೆ ಜನರು ಸ್ವತಂತ್ರವಾಗಿ ಬದುಕಬೇಕು ಎಂದು ಕನಸು ಕಂಡರು ಅದಕ್ಕಾಗಿ ಹೋರಾಟ ಮಾಡಿದರು. ಜಾತಿವಾದಿಗಳು, ಮನುವಾದಿಗಳ ನೂರಾರು ಸಂಚನ್ನು ಮುರಿದು, ಪವಿತ್ರವಾದ ಸಂವಿಧಾನವನ್ನು ಈ ದೇಶಕ್ಕೆ ಅರ್ಪಿಸಿದರು. ಭಾರತವು ಎರಡು ಹೋಳಾಗಿ ಭಾರತ-ಪಾಕಿಸ್ತಾನವಾದಾಗ ಅಂಬೇಡ್ಕರ್ ಅವರು ಕೂಡ, ನಮಗೂ ಪ್ರತ್ಯೇಕ ರಾಷ್ಟ್ರ ಬೇಕು ಎಂದು ಹೋರಾಡಬಹುದಿತ್ತು. ಆದರೆ ಅವರು ಹಾಗೆ ಮಾಡಲಿಲ್ಲ. ಯಾಕೆಂದರೆ, ಅಂಬೇಡ್ಕರ್ ಅವರಂತಹ ರಾಷ್ಟ್ರವಾದಿ ಇಂದಿಗೂ ಯಾರೂ ಇಲ್ಲ. ಮುಂದೆಯೂ ಬರಲು ಸಾಧ್ಯವಿಲ್ಲ ಅಂಬೇಡ್ಕರ್ ಅವರು ಅಪ್ಪಟ ದೇಶಪ್ರೇಮಿಯಾಗಿದ್ದರು. ಅವರು ರಾಷ್ಟ್ರದ ಬಗ್ಗೆ ಏನು ಹೇಳುತ್ತಿದ್ದರೆಂದರೆ, “ನಾನು ಮೊದಲನೆಯದಾಗಿ ಮತ್ತು ಕೊನೆಯದಾಗಿಯೂ ಇಂಡಿಯನ್”(ಭಾರತೀಯ). ಡಿಸೆಂಬರ್ 6 ಭಾರತ ದೇಶಕ್ಕೆ ದುಃಖದ ದಿನ. ಇಡೀ ಜಗ್ಗತ್ತು ಕಂಡಿರದ ಮಹಾಮಾನವತಾವಾದಿ, ಹೋರಾಟಗಾರ ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನವಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಕೊನೆಯ ದಿನಗಳ ಬಗ್ಗೆ Last few years of Dr. Ambedkar  ಎಂಬ ಕೃತಿಯಲ್ಲಿ ಅವರ ಆಪ್ತ ಕಾರ್ಯದರ್ಶಿ ನಾನಕ್ ಚಂದ್ ರತ್ತು ಅವರು ಬರೆದಿದ್ದಾರೆ. ನಾನಕ್ ಚಂದ್ ರತ್ತು ಅವರಿಗೆ ಆ ದಿನ ಎಂದೂ ಮರೆಯದ ದಿನವಾಗಿತ್ತು. ಅಂದು 1956ರ ಜುಲೈ 31ರ ಮಂಗಳವಾರ. ಸಮಯ 5:30ರ ವೇಳೆಗೆ ನಾನಕ್ ಚಂದ್ ಕೆಲವು ಪತ್ರಗಳನ್ನು ಹೊಂದಿಸಿಡುತ್ತಿದ್ದರು.  ಆ ಸಮಯದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅಸ್ವಸ್ಥರಾದರು. ಅದನ್ನು ಗಮನಿಸಿದ ರತ್ತು, ಅಂಬೇಡ್ಕರ್ ಅವರನ್ನು ವಿಚಾರಿಸಿದ ಬಳಿಕ, ಹೀಗೆ ಕೇಳಿದರು. “ ಸರ್…  ನೀವು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಖಿನ್ನತೆಗೆ ಒಳಗಾಗುತ್ತಿದ್ದೀರಿ, ಅದು ಯಾಕೆ ಎಂದು ನನಗೆ ತಿಳಿಯಬೇಕು ಎಂದು ಕೇಳುತ್ತಾರೆ.  ಅಂದು ಬಾಬಾ ಸಾಹೇಬರು ನೀಡಿರುವ ಉತ್ತರವನ್ನು ಇಂದು ಅವರ ಸಮುದಾಯ ಗಂಭೀರವಾಗಿ ತೆಗೆದುಕೊಂಡಿದ್ದರೆ, ಬಹುಶಃ ಇಂದಿಗೂ ದಲಿತ ಸಮುದಾಯ ಹಿಂದಿನ ಅದೇ ಸ್ಥಿತಿಯಲ್ಲಿ ಇರುತ್ತಿರಲಿಲ್ಲವೋ ಏನೋ… ನಾನಕ್ ಚಂದ್ ರತ್ತು ಅವರ ಪ್ರಶ್ನೆಗೆ ಉತ್ತರಿಸಲು ಆರಂಭಿಸಿದ ಅಂಬೇಡ್ಕರರು, ನಾನು ಬದುಕಿರುವಾಗಲೇ ನನ್ನ ಜೀವನದ ಗುರಿಯನ್ನು ಮುಟ್ಟಲು ಸಾಧ್ಯವಾಗಲಿಲ್ಲ. ನನ್ನ ಜನರು ದೇಶದ ಆಳುವ ವರ್ಗವಾಗಬೇಕು ಎಂದು ನಾನು ಬಯಸಿದ್ದೆ. ರಾಜಕೀಯ ಅಧಿಕಾರವನ್ನು ಸಮಾನತೆಯ ಆಧಾರದಲ್ಲಿ ಹಂಚಿಕೊಳ್ಳಬೇಕು ಎಂದು ನಾನು ಬಯಸಿದ್ದೆ. ಆದರೆ ಅದರ ಸಾಧ್ಯತೆಗಳು ನನಗೆ ಗೋಚರಿಸುತ್ತಿಲ್ಲ. ನಾನೇ ಏನಾದರೂ ಮಾಡುತ್ತೇನೆ ಎಂದು ಮುಂದುವರಿಯ ಬೇಕೆಂದುಕೊಂಡರೆ, ನನ್ನನ್ನು ಅನಾರೋಗ್ಯ ಬಾಧಿಸುತ್ತಿದೆ. ಈ ಅನಾರೋಗ್ಯದ ಕಾರಣದಿಂದಾಗಿ ನಾನು ನಿಶ್ಯಕ್ತನಾಗಿದ್ದೇನೆ.  ನಾನು ಈವರೆಗೆ ಏನೆಲ್ಲ ಸಾಧಿಸಿದ್ದೇನೋ ಅದರ ಫಲವನ್ನು ಪಡೆದ ನನ್ನವರು ಕೆಲವೇ ಮಂದಿ ಅನುಭವಿಸುತ್ತಿದ್ದಾರೆ. ಶಿಕ್ಷಣ ಪಡೆದವರು  ವಂಚನೆ ಮಾಡಿಕೊಂಡು ಅಯೋಗ್ಯರಾಗಿದ್ದಾರೆ. ತಮ್ಮ ವೈಯಕ್ತಿಕ ಹಿತಾಸಕ್ತಿಗಳನ್ನೇ ಸಾಧಿಸಿಕೊಂಡ ಇವರು ನನ್ನ ನಿರೀಕ್ಷೆಗಳನ್ನು ಸುಳ್ಳು ಮಾಡಿದ್ದಾರೆ. ಮೀಸಲಾತಿ ಪಡೆದುಕೊಂಡು ಸರ್ಕಾರಿ ಕೆಲಸ ಪಡೆದವರು ತಮ್ಮ ಸ್ವಾರ್ಥ ಸಾಧನೆಯನ್ನೇ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಸಮುದಾಯದ ಸೇವೆ ಮಾಡಲು ಯಾರೂ ಮುಂದೆ ಬರುತ್ತಿಲ್ಲ.  ಹಳ್ಳಿಗಳಲ್ಲಿ ಇನ್ನೂ ಜನರು ಶೋಷಣೆಯನ್ನು ಅನುಭವಿಸುತ್ತಿದ್ದಾರೆ.  ಆರ್ಥಿಕವಾಗಿ ದುಸ್ಥಿತಿಯಲ್ಲಿದ್ದಾರೆ.  ಈ ರೀತಿಯಾಗಿರುವ ಅನಕ್ಷರಸ್ಥ ವಿಶಾಲ ಜನಸಮುದಾಯದತ್ತ ಗಮನಹರಿಸಬೇಕು ಎಂದು ನಾನು ಯೋಚಿಸುತ್ತಿದೆ. ಆದರೆ, ನನಗೆ ಇರುವುದು ಇನ್ನು ಕೆಲವೇ ದಿನಗಳು ಎಂದು ಬಾಬಾ ಸಾಹೇಬರು ನೋವು ಪಟ್ಟರು. ಅಂಬೇಡ್ಕರ್ ಅವರ ನೋವು ಇಂದಿಗೂ ನಿಜವೇ ಆಗಿದೆ ಅಲ್ಲವೇ? ಬಹಳಷ್ಟು ದಲಿತರು ಇಂದಿಗೂ ಉತ್ತಮ ಸ್ಥಿತಿವಂತರಾಗಿ ತಾವು, ತಮ್ಮ ಸಂಬಂಧಿಕರು ಎಂದೇ ನೋಡುತ್ತಿದ್ದಾರೆ. ತಮ್ಮ ಸಮುದಾಯದ ಒಂದಿಷ್ಟು ಮಕ್ಕಳನ್ನು ದತ್ತುಪಡೆದು ಅವರ ಶಿಕ್ಷಣಕ್ಕೆ ನೆರವು ನೀಡುವ ನೌಕರರು ಎಂದು ಎಷ್ಟು ಜನ ಇದ್ದಾರೆ ಎಂದು ಕೇಳಿದರೆ, ಕೇವಲ ಬೆರಳೆಣಿಕೆಯ ನೌಕರರು ಮಾತ್ರವೇ ಸಿಗುತ್ತಾರೆ. ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡಲು ಸಹಾಯ ಮಾಡುವ ನೌಕರರು ಎಷ್ಟು ಜನರಿದ್ದಾರೆ ಎಂದು ಯೋಚಿಸಿದರೆ, ಅಲ್ಲಿಯೂ ಕೇವಲ ಬೆರಳೆಣಿಕೆಯ ಜನರು ಸಿಗುತ್ತಾರೆ. ಸಮರ್ಥರು ಕೈಕಟ್ಟಿ ಕುಳಿತಿದ್ದರೆ, ಸಾಧಾರಣ ಸ್ಥಿತಿವಂತರು ಇಂದು ಸಮಾಜ ಸುಧಾರಣೆ ಮಾಡಬೇಕು ಎಂದು ಹೊರಟಿದ್ದಾರೆ.  ಆದರೆ ಅವರಲ್ಲಿ ಶಕ್ತಿ ಇಲ್ಲ. ಇಂತಹ ಸ್ಥಿತಿಯಲ್ಲಿ ಇಂದು ಸಮುದಾಯ ಅಧೋಗತಿಯತ್ತ ಪ್ರಯಾಣಿಸುತ್ತಿದೆ. ಅಂಬೇಡ್ಕರ್ ಅವರು ಇಂತಹ ದುಸ್ಥಿತಿಯನ್ನು ನೆನೆದು ಅಂದು ಕಣ್ಣೀರು ಹಾಕಿದ್ದರು. ತನ್ನ ಸಮುದಾಯ ಆಳುವ ವರ್ಗವಾಗಬೇಕು. ಎಷ್ಟೋ ವರ್ಷಗಳಿಂದ ಭಾರತದಲ್ಲಿ ಪ್ರಾಣಿಗಳಿಗಿಂತಲೂ ಕೀಳಾಗಿ ನಡೆಸಲಾಗಿದ್ದ ಅಸ್ಪೃಶ್ಯ ಸಮುದಾಯವನ್ನು  ಮೇಲೆತ್ತಬೇಕು, ಅವರು ಸ್ವಾಭಿಮಾನದಿಂದ ಬದುಕುವಂತಾಗಬೇಕು. ಅವರು ಸ್ವಾಭಿಮಾನದಿಂದ ಬದುಕುವಂತಾಗಬೇಕಾದರೆ ಅವರು ಆಳುವ ವರ್ಗವಾಗಬೇಕು ಎಂದು ಅವರು ನಿರೀಕ್ಷಿಸಿದ್ದರು. ಆದರೆ, ಸಮುದಾಯದಲ್ಲಿ ಅಭಿವೃದ್ಧಿ ಹೊಂದಿದವರು ಅವರ ಸ್ವಾರ್ಥವನ್ನು ಇಂದಿಗೂ ನೋಡುತ್ತಿದ್ದಾರೆಯೇ ಹೊರತು, ಸಮುದಾಯದ ಅಭಿವೃದ್ಧಿಗೆ ಅವರಿಂದ ಯಾವುದೇ ಸಹಾಯವೂ ಸಿಗುತ್ತಿಲ್ಲ. ಹೀಗಾಗಿಯೇ ಇಂದಿಗೂ  ಈ ಸಮುದಾಯದ ಬಡವರು  ಶೈಕ್ಷಣಿಕ ರಾಜಕೀಯವಾಗಿ ಮೇಲೆ ಬರಲಾಗದೇ ತನ್ನ ಸಮುದಾಯದ ಒಳಗೆಯೇ ನಿರ್ಲಕ್ಷ್ಯಕ್ಕೊಳಗಾಗಿದ್ದಾರೆ. ಅಂಬೇಡ್ಕರ್ ಅವರು ತಮ್ಮ ಮನಸ್ಸಿನಲ್ಲಿದ್ದ ನೋವನ್ನು ರತ್ತು ಬಳಿಯಲ್ಲಿ ಹೇಳುತ್ತಾ,  “ಬುದ್ಧ ಮತ್ತು ಕಾರ್ಲ್ ಮಾರ್ಕ್ಸ್”, “ಪ್ರಾಚೀನ ಭಾರತದಲ್ಲಿ ಕ್ರಾಂತಿ ಮತ್ತು ಪ್ರತಿಕ್ರಾಂತಿ”, ಹಿಂದೂ ಧರ್ಮದ ಒಗಟುಗಳು ಎನ್ನುವ ನನ್ನ ಎಲ್ಲಾ ಕೃತಿಗಳನ್ನು ಜೀವಿತಾವಧಿಯಲ್ಲಿಯೇ ಪ್ರಕಟಿಸಬೇಕು ಎಂದು ನಾನು ಬಯಸಿದ್ದೆ. ಆದರೆ ಅವುಗಳನ್ನು ಹೊರತರಲೂ ನನ್ನಿಂದ ಸಾಧ್ಯವಾಗುತ್ತಿಲ್ಲವಲ್ಲ, ಅದು ಮುಂದೆಂದಾದರೂ ಪ್ರಕಟವಾಗಬಹುದು ಎಂದು ನಾನು ಅಂದುಕೊಂಡರೂ ಆ ಸಾಧ್ಯತೆಗಳು ನನಗೆ ಕಾಣುತ್ತಿಲ್ಲ.  ನನ್ನ ಚಳುವಳಿಯನ್ನು ಶೋಷಿತ ಸಮುದಾಯದಿಂದ ಬಂದು ಯಾರಾದರೂ ಮುನ್ನಡೆಸುತ್ತಾರೆ ಎಂದು ನಾನು ನಿರೀಕ್ಷಿಸಿದ್ದೆ. ಆದರೆ ಅಂತಹವರು ಯಾರೂ ನನಗೆ ಈ ಸಂದರ್ಭದಲ್ಲಿ ಕಾಣುತ್ತಿಲ್ಲ. ನಾನು ಯಾರ ಮೇಲೆ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದೆನೋ, ಅವರು ಈ ಜವಾಬ್ದಾರಿಯ ಬಗ್ಗೆ ಗಮನ ಹರಿಸುತ್ತಿಲ್ಲ.  ಅವರು ನಾಯಕತ್ವಕ್ಕಾಗಿ, ಅಧಿಕಾರಕ್ಕಾಗಿ ತಮ್ಮಲೇ ಹೋರಾಡುತ್ತಿದ್ದಾರೆ. ನನ್ನ ದೇಶದ ಜನತೆಗೆ ಸೇವೆ ಸಲ್ಲಿಸುವ ಆಸೆ ನನಗೆ ಇನ್ನೂ ಇದೆ. ಪೂರ್ವಾಗ್ರಹ ಪೀಡಿತ ಜಾತಿ ಎಂಬ ರೋಗವನ್ನು ಅಂಟಿಸಿಕೊಂಡಿರುವ ಜನರೇ ಇಲ್ಲಿ ತುಂಬಿದ್ದಾರೆ. ಈ ದೇಶದಲ್ಲಿ ನನ್ನಂತಹವರು ಜನಿಸುವುದು ಮಹಾಪಾಪ. ಹಾಗೆಯೇ ಈಗಿರುವ ವ್ಯವಸ್ಥೆಯಲ್ಲಿ ದೇಶಕ್ಕೆ ಸಂಬಂಧಪಟ್ಟಂತೆ ಯಾರಾದರೊಬ್ಬರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ಮಂಡಿಸುವುದು ತುಂಬಾ ಕಷ್ಟ. ಏಕೆಂದರೆ ಇಲ್ಲಿಯ ಜನರು ಈ ದೇಶದ ಪ್ರಧಾನಿ(ನೆಹರು)ಗೆ ಒಗ್ಗದಂತಹ ಯಾವುದೇ ವಿಚಾರಗಳನ್ನು ಕೇಳುವ ತಾಳ್ಮೆಯನ್ನು ಹೊಂದಿಲ್ಲ. ಈ ದೇಶ ಇನ್ನೆಲ್ಲಿಗೆ ಹೋಗಿ ಮುಳುಗುತ್ತದೆಯೋ ಎಂದು ಅವರು ಸಂಕಟ ಅನುಭವಿಸುತ್ತಾರೆ. ಅಂಬೇಡ್ಕರ್ ಅವರ ಧ್ವನಿಯಲ್ಲಿ ಕಂಪನ ಆರಂಭವಾಗುತ್ತದೆ  “ಧೈರ್ಯ ತಂದುಕೋ ರತ್ತು, ನೀನು ಎದೆಗುಂದ ಬೇಡ, ಜೀವನ ಯಾವಗಲಾದರೂ ಕೊನೆಗೊಳ್ಳಲೇ ಬೇಕು.  ನನ್ನ ಜನರಿಗೆ ಹೇಳು ನಾನು ಇಲ್ಲಿಯವರೆಗೆ ಏನನ್ನು ಸಾಧಿಸಿದ್ದೇನೋ, ಅದನ್ನು ನನ್ನ ಶತ್ರುಗಳ ವಿರುದ್ಧ ಹೋರಾಡುತ್ತಾ, ಹಲವಾರು ಸಮಸ್ಯೆಗಳನ್ನು ಎದುರಿಸುತ್ತಾ, ನಿರಂತರವಾಗಿ ನೋವುಗಳ ಸರಮಾಲೆಯನ್ನೇ ಅನುಭವಿಸುತ್ತಾ ಸಾಧಿಸಿದ್ದೇನೆ. ಈ ವಿಮೋಚನ ರಥವನ್ನು ಈಗ ಅದು ಎಲ್ಲಿದೆಯೋ ಅಲ್ಲಿಯವರೆಗೆ ತಂದಿದ್ದೇನೆ. ಏನೇ  ಆದರೂ  ಈ ರಥ ಮುನ್ನಡೆಯಲೇ ಬೇಕು. ರಥವನ್ನು ಮುನ್ನಡೆಸಲು ಸಾಧ್ಯವಾಗದಿದ್ದರೆ. ಅದು ಎಲ್ಲಿದೆಯೋ ಅಲ್ಲಿಯೇ ಇರಲು ಬಿಡಿ. ಯಾವುದೇ ಕಾರಣಕ್ಕೂ ಅದನ್ನು ಹಿಂದಕ್ಕೆ ಸರಿಯಲು ಬಿಡಬೇಡಿ ಇದು ನನ್ನ ಕೊನೆಯ ಸಂದೇಶ, ಇದನ್ನು ನನ್ನ ಜನರಿಗೆ ತಲುಪಿಸು ಎಂದು ಹೇಳುತ್ತಾರೆ.  ಇದು ಅಂಬೇಡ್ಕರರ ಕೊನೆಯ ಮಾತುಗಳು. ಅಂದು ರತ್ತು ಜೊತೆಗೆ ಇಷ್ಟೆಲ್ಲ ಮಾತುಗಳನ್ನಾಡಿದ್ದ, ಡಾ.ಬಿ.ಆರ್.ಅಂಬೇಡ್ಕರ್ ಅವರು ನಿದ್ದೆಗೆ ಜಾರಿದ್ದರು. ಮರುದಿನ ಅಂಬೇಡ್ಕರ್ ಅವರು ಎದ್ದೇಳಲೇ ಇಲ್ಲ. ಅಂಬೇಡ್ಕರ್ ಅವರು ನಿಧನರಾಗಿದ್ದರು. ಇಡೀ ದೇಶವೇ ಸ್ತಬ್ಧವಾಗಿತ್ತು. ಅಂಬೇಡ್ಕರ್ ಅವರ ಕಾಲಿಗೆ ಅಡ್ಡವಾಗುತ್ತ, ಪ್ರತಿನಿತ್ಯ ತೊಂದರೆ ಕೊಡುತ್ತಿದ್ದ ದೊಡ್ಡ ದೊಡ್ಡ ನಾಯಕರು ಎನಿಸಿಕೊಂಡಿದ್ದವರೆಲ್ಲರೂ ಆ ದಿನ ಕಣ್ಣೀರು ಹಾಕಿದರು. ಅಂಬೇಡ್ಕರ್ ಎಂದರೆ ಅವರೊಂದು ವ್ಯಕ್ತಿಯಾಗಿರಲಿಲ್ಲ, ಅವರು ಈ ದೇಶದ  ಶಕ್ತಿಯಾಗಿದ್ದರು. ಅದು ಅಂದಿಗೂ ಇಂದಿಗೂ ಎಂದೆಂದಿಗೂ…. # ಈ ಕೃತಿಯನ್ನು ನಾನಕ್ ಚಂದ್ ರತ್ತು ಅವರು ಬರೆದಿದ್ದಾರೆ… *********************************************************

ಡಾ.ಬಿ.ಆರ್.ಅಂಬೇಡ್ಕರ್ ರ ಕೊನೆಯ ಸಂದೇಶ..! Read Post »

ಕಾವ್ಯಯಾನ

ಹಾಯ್ಕುಗಳು

ಹಾಯ್ಕುಗಳು ಕೆ.ಸುನಂದಾ ಗೆಳತಿ ನಿನ್ನಸೌಂದರ್ಯ ಯಾವ ಶಿಲ್ಪಿಕೈ ಚಳಕವೊ ?** ವಿದ್ಯೆ ದುಡಿಮೆತಾಳ್ಮೆ ; ಇದ್ರೆ ಎಲ್ಲವೂಜಯಶೀಲವು** ಮನತಟ್ಟದೆಹುಟ್ಟೀತೇನು ; ಸ್ವಂತಿಕೆಮರೆತ ಕಾವ್ಯ** ಕಾವ್ಯ ಲಹರಿಬಸಿರಲ್ಲಿ ಪಳಗಿಜನ್ಮಿಸಬೇಕು** ಪಕ್ಟವಾಗದೇಕಿತ್ತರೆ ರುಚಿಸದುಸಾಹಿತ್ಯ ರಸ ** ತಾಳದು ಮನಬರೆದೆ ಕಾವ್ಯ ; ಉಕ್ಕಿಹೊರಹೊಮ್ಮಿತು** ಭವ್ಯತೆಯಲಿಹುಟ್ಟಿದ್ದು ಶಾಸ್ವತದಮಧುರ ಗೀತೆ** ಪಲ್ಲವಿಸಿತುಆತ್ಮದಿಂದ ; ಕಾವ್ಯದಸತ್ವ ಶಕ್ತಿಯು** ಭಾವ ಗರ್ಭದಿಕಾವ್ಯ ಕಟ್ಟಿ ; ಹುಟ್ಟಿದ್ದುರಸ ಭರಿತ**************************************

ಹಾಯ್ಕುಗಳು Read Post »

ಅಂಕಣ ಸಂಗಾತಿ, ರಹಮತ್ ತರೀಕೆರೆ ಬರೆಯುತ್ತಾರೆ

ಅಂಕಣ ಬರಹ ಅಂಕಣ ಬರಹ ಒಂದು ಸಲ, ರೈತರ ಕಮ್ಮಟದಲ್ಲಿ ಮಾತಾಡುವ ಅವಕಾಶ ಒದಗಿತು. ನನ್ನ ಮಾತಿನ ಸಾರವನ್ನು ಹೀಗೆ ಹಿಡಿದಿಡಬಹುದು: “ಯಾವುದೇ ಚಳುವಳಿಗೆ ರಾಜಕೀಯ, ಆರ್ಥಿಕ ಸಾಂಸ್ಕೃತಿಕ ಆಯಾಮಗಳಿರುತ್ತವೆ. ಸದ್ಯದ ಮಾರುಕಟ್ಟೆ ಆರ್ಥಿಕತೆಯ ಸನ್ನಿವೇಶವು ರೈತರನ್ನು ದಲಿತರ ಹಾಗೂ ಮಹಿಳೆಯರ ಹಾಗೆ ದಮನಿತ ವರ್ಗಕ್ಕೆ ಇಳಿಸಿದೆ. ಇದಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಸಂಭವಿಸಿರುವ ಅವರ ಸಾವುಗಳೇ ಸಾಕ್ಷಿ. ರೈತರ ಮುಖ್ಯ ಬೇಡಿಕೆಗಳೆಂದರೆ, ಜಮೀನನ್ನು ತಮ್ಮಿಚ್ಛೆಗೆ ವಿರುದ್ಧವಾಗಿ ಕಿತ್ತು ಉದ್ಯಮಿಗಳಿಗೆ ಕೊಡುವುದರಿಂದ ರಕ್ಷಿಸಿಕೊಳ್ಳುವುದು; ಬೀಜ ಗೊಬ್ಬರ ಕೊಳ್ಳಲು ಕಡಿಮೆ ಬಡ್ಡಿಯಲ್ಲಿ ಸಾಲ ಪಡೆಯುವುದು, ಬೆಳೆದ ಫಸಲಿಗೆ ಸೂಕ್ತಬೆಲೆ ಪಡೆಯುವುದು. ಆದರೆ ಮಾರುಕಟ್ಟೆ ಮತ್ತು ಹಣಕಾಸು ಅವರ ನಿಯಂತ್ರಣದಲ್ಲಿಲ್ಲ. ಆ ಸಮಸ್ಯೆಗೆ ಕಾರಣವಾಗಿರುವುದು ಪ್ರಭುತ್ವಗಳು ಅನುಸರಿಸುತ್ತಿರುವ ಮಾರುಕಟ್ಟೆಪರ ನೀತಿ. ಜನರಿಂದ ಆಯ್ಕೆಯಾದ ಪ್ರಭುತ್ವಗಳನ್ನು ನಿಯಂತ್ರಿಸುತ್ತಿರುವುದು ಮಾರುಕಟ್ಟೆ ಶಕ್ತಿಗಳು ಅರ್ಥಾತ್ ಉದ್ಯಮಪತಿಗಳು. ಆದ್ದರಿಂದ ಪ್ರಭುತ್ವದ ನೀತಿಗಳನ್ನು ಟೀಕಿಸುವ, ತಿದ್ದುವ, ಚುನಾವಣೆಗಳಲ್ಲಿ ಬದಲಿಸುವ ಕೆಲಸವನ್ನೂ ರೈತಚಳುವಳಿ ಮಾಡಬೇಕಿದೆ. ಸಾಧ್ಯವಾದರೆ ತಾನೇ ಅಧಿಕಾರ ಹಿಡಿಯುವತ್ತ ಚಲಿಸಬೇಕಿದೆ. ಚಳುವಳಿಯ ಈ ರಾಜಕೀಯ-ಆರ್ಥಿಕ ಆಯಾಮದ ಬಗ್ಗೆ ಚಿಂತಕರು ಈಗಾಗಲೇ ಸಾಕಷ್ಟು ಚರ್ಚಿಸಿದ್ದಾರೆ. ಲೇಖಕನಾಗಿ ನಾನು ಅದರ ಬಗ್ಗೆ ಹೇಳಲಾರೆ. ಯಾವುದೇ ಆರ್ಥಿಕ ರಾಜಕೀಯ ಚಳುವಳಿಗಳಿಗೆ ಇರಬೇಕಾದ ಸಾಂಸ್ಕೃತಿಕ ಆಯಾಮದ ಬಗ್ಗೆ ನನ್ನ ಆಲೋಚನೆ ಹಂಚಿಕೊಳ್ಳುತ್ತೇನೆ. ಸಾಂಸ್ಕೃತಿಕ ಆಯಾಮವು ನಮ್ಮ ಆಲೋಚನ ಕ್ರಮಕ್ಕೆ ಸಂಬಂಧಿಸಿದ್ದು; ಸಮಾಜದ ಮೌಲ್ಯಾದರ್ಶಗಳಿಗೆ, ನಾವು ನಿತ್ಯ ಬಳಸುವ ಭಾಷೆಗೆ ಸಂಬಂಧಿಸಿದ್ದು. ವ್ಯವಸ್ಥೆಯನ್ನು ಆರೋಗ್ಯಕರ ದಿಸೆಯಲ್ಲಿ ಬದಲಿಸಲು ತೊಡಗಿರುವ ಚಳುವಳಿಗಾರರು, ವೈಯಕ್ತಿಕ ಜೀವನದಲ್ಲಿ ಹೇಗೆ ಚಿಂತಿಸುತ್ತಾರೆ ಮತ್ತು ಬದುಕುತ್ತಾರೆ ಎನ್ನುವುದಕ್ಕೂ ಸಂಬಂಧಿಸಿದ್ದು. ಅನೇಕ ಚಳುವಳಿಗಾರರು, ಪುರುಷವಾದ, ಕೋಮುವಾದ, ಜಾತಿವಾದ, ನೈತಿಕ ಭ್ರಷ್ಟತೆಗೆ ಒಳಗಾಗಿರುವುದುಂಟು. ಮನೆಯಲ್ಲಿ, ಅಥವಾ ಸಾರ್ವಜನಿಕ ಪರಿಸರದಲ್ಲಿ, ಅಪ್ರಜಾಪ್ರಭುತ್ವವಾದಿ ಆಗಿರಬಹುದು. ಆದ್ದರಿಂದ ಚಳುವಳಿಗೆ ದೃಷ್ಟಿಕೋನವನ್ನು ಪ್ರಭಾವಿಸುವ ಸಾಂಸ್ಕøತಿಕ ನೀತಿಯೂ ಮುಖ್ಯವಾದುದು. ಈ ಹೊತ್ತಲ್ಲಿ ನೆನಪಾಗುವುದು ಪ್ರೊ. ನಂಜುಂಡಸ್ವಾಮಿ ಹಾಗು ಕಡಿದಾಳು ಶಾಮಣ್ಣ. ಇಬ್ಬರೂ ಕೇವಲ ರೈತರ ಆರ್ಥಿಕ ಬೇಡಿಕೆಗಾಗಿ ಚಳುವಳಿ ಕಟ್ಟಿದವರಲ್ಲ. ಸಮಾಜದ ಮೌಲ್ಯಗಳ ಬದಲಾವಣೆಗೂ ಯತ್ನಿಸಿದವರು. ಇಬ್ಬರೂ ಮಾರ್ಕ್ಸ್ ಕುವೆಂಪು ಲೋಹಿಯಾ ಓದಿಕೊಂಡಿದ್ದವರು. ಶಾಮಣ್ಣನವರು ಸರೋದ್ವಾದನ, ಫೋಟೊಗ್ರಫಿ, ರೈತಚಳುವಳಿ, ಕನ್ನಡ ಚಳುವಳಿ ನಡುವೆ ವ್ಯತ್ಯಾಸವನ್ನೇ ಮಾಡಿದವರಲ್ಲ. ಲೋಹಿಯಾ ಸಮಾಜವಾದಿ ಹಿನ್ನೆಲೆಯಿಂದ ಬಂದ ರೈತಸಂಘಟನೆಯ ಮೊದಲ ತಲೆಮಾರಿನ ನಾಯಕರ ರಾಜಕೀಯ ಕ್ರಿಯೆಗೆ ಆಳವಾದ ಸಾಂಸ್ಕೃತಿಕ ಬೇರುಗಳಿದ್ದವು. ಅವರು ಕನ್ನಡದ ವಿಚಾರ ಸಾಹಿತ್ಯದಿಂದ ಪ್ರೇರಣೆ ಪಡೆಯುತ್ತಿದ್ದವರು. ಕುವೆಂಪು ಅವರ `ಸಾಲದಮಗು’ `ಧನ್ವಂತರಿಯ ಚಿಕಿತ್ಸೆ’ `ನೇಗಿಲಯೋಗಿ’ ಮುಂತಾದ ಕೃತಿಗಳು ರೈತಚಳುವಳಿಗೆ ಇಂಬಾಗಿದ್ದುದನ್ನು ಬಲ್ಲವರು. ಆದರೆ ಹೊಸತಲೆಮಾರಿನ ಎಷ್ಟು ರೈತ ಕಾರ್ಯಕರ್ತರು ಕುವೆಂಪು ಸಾಹಿತ್ಯವನ್ನು ಎಷ್ಟು ಓದಿದ್ದಾರೆಯೊ ತಿಳಿಯದು. ಕುವೆಂಪು ಮಾತ್ರವಲ್ಲ, ತೇಜಸ್ವಿ ಲಂಕೇಶ್ ಅನಂತಮೂರ್ತಿ ಬೆಸಗರಹಳ್ಳಿ ದೇವನೂರು ಅವರ ಕತೆ ಕಾದಂಬರಿ ಲೇಖನಗಳೂ ರೈತ ಕಾರ್ಯಕರ್ತರ ಪಠ್ಯಗಳೇ. ಯಾಕೆಂದರೆ, ಇವರ ಸಾಹಿತ್ಯದಲ್ಲಿ ರೈತಾಪಿ ಹಳ್ಳಿಗಳ ಸಂಭ್ರಮ ಮತ್ತು ಕ್ರೌರ್ಯಗಳ ಚಿತ್ರಣವಿದೆ; ಗೋವಿನ ರಾಜಕಾರಣ ಮತ್ತು ಹಸುವಿನ ವಾಸ್ತವತೆಯ ಬಗ್ಗೆ ಚಿಂತನೆಯಿದೆ. ಕೋಮುವಾದ ಕೇವಲ ಮುಸ್ಲಿಮರ ಹಗೆಯಲ್ಲ, ರೈತರ ವಿರೋಧಿ ಕೂಡ ಎಂಬ ತಿಳುವಳಿಕೆಯಿದೆ. ಪ್ರತಿ ಜನಪರ ಚಳುವಳಿಗಳಿಗೂ ಅದರದ್ದೇ ಆದ ಅಜೆಂಡಾ ಇರುತ್ತದೆ, ಇರಬೇಕು ಕೂಡ. ಇದರ ಜತೆಗೆ ಅದು ನಾಡಿನ ಉಳಿದ ಸಮಸ್ಯೆಗಳ ಬಗ್ಗೆ ಯಾವ ದೃಷ್ಟಿಕೋನ ಇರಿಸಿಕೊಂಡಿದೆ ಎಂಬ ಅಂಶವೂ ಮುಖ್ಯ. ಇದಕ್ಕಾಗಿ ಪ್ರತಿ ಚಳುವಳಿಗೂ ಇನ್ನೊಂದು ಜನಪರ ಚಳುವಳಿಯ ಜತೆ ಬೆರೆಯುವ ಕೊಂಡಿ ಇರಬೇಕು. ನಂಜುಂಡಸ್ವಾಮಿ, ಶಾಮಣ್ಣ ಅವರಿಗೆ ನಾಡಿನ ಪ್ರಜಾಪ್ರಭುತ್ವವಾದಿ ವಿಚಾರವಾದಿ ದಲಿತ ಮತ್ತು ಭಾಷಾ ಚಳುವಳಿಗಳ ಜತೆ ನಂಟಿತ್ತು. ಮಹಿಳಾ ಚಳುವಳಿಗಳ ಜತೆ ಅಷ್ಟು ಸಕೀಲ ಸಂಬಂಧವಿರಲಿಲ್ಲ. ಹೊಸತಲೆಮಾರಿನ ರೈತಚಳುವಳಿಗಾರರಿಗೆ ಕರ್ನಾಟಕವನ್ನು ಆರೋಗ್ಯಕರವಾಗಿ ಕಟ್ಟಬೇಕೆಂದು ಯತ್ನಿಸುತ್ತಿರುವ ಎಲ್ಲ ಜನಪರ ಚಳುವಳಿಗಳ ಸಹವಾಸ ಬೇಕಾಗಿದೆ. ಚಳುವಳಿಯ ಸಭೆಗಳಲ್ಲಿ ರೈತನೊಬ್ಬ ಗಂಡಸು ಎಂಬ ಗ್ರಹಿಕೆಯಲ್ಲೇ ಚರ್ಚೆ ನಡೆಯುತ್ತಿರುತ್ತದೆ. `ರೈತ’ ಶಬ್ದದಲ್ಲಿ ರೈತಮಹಿಳೆಯೇ ಇದ್ದಂತಿಲ್ಲ. ಇದು ಕೇವಲ ಪದರಚನೆಗೆ ಸಂಬಂಧಿಸಿದ ಮಾತಲ್ಲ. ಆಲೋಚನೆಗೂ ಕ್ರಿಯೆಗೂ ಸಂಬಂಧಿಸಿದ್ದು. ರೈತಸಂಘಟನೆಯಲ್ಲಿ ರೈತಾಪಿ ಚಟುವಟಿಕೆಯ ಬೆನ್ನುಲುಬಾದ ಮಹಿಳೆಯರ ಸಂಖ್ಯೆ ಯಾಕಿಷ್ಟು ಕಡಿಮೆ? ರೈತ ಸಂಘಟನೆಗಳಲ್ಲಿ ದಲಿತರು ಯಾಕೆ ಕಡಿಮೆ? ಇದಕ್ಕೆ ನಮ್ಮ ಸಮಾಜದಲ್ಲೇ ಸಾಮಾಜಿಕ ಆರ್ಥಿಕ ಕಾರಣಗಳಿರಬಹುದು. ಮಹಿಳೆಯರನ್ನು ದಲಿತರನ್ನು ರೈತಕೂಲಿಗಳನ್ನು ಒಳಗೊಳ್ಳದ ತನಕ ರೈತ ಚಳುವಳಿ ಪೂರ್ಣಗೊಳ್ಳುವುದು ಸಾಧ್ಯವೇ? ದಲಿತರ ಸಮಸ್ಯೆಗೆ ರೈತರು ತುಡಿಯದೆ ಹೋದರೆ, ರೈತರ ಸಮಸ್ಯೆಗೆ ದಲಿತರು ಮಿಡಿಯದೆ ಹೋದರೆ, ಹೊಸ ಸಂಚಲನ ಸಾಧ್ಯವಿಲ್ಲ. ಮಹಿಳೆಯರ ಮತ್ತು ದಲಿತರ ಭಾಗವಹಿಸುವಿಕೆ, ರೈತ ಚಳುವಳಿಗೆ ಬೇರೊಂದೇ ಸಂವೇದನೆಯನ್ನು ಹಾಯಿಸಬಲ್ಲದು. ಚಳುವಳಿಗಳಿಗೆ ಲೇಖಕರ ಬುದ್ಧಿಜೀವಿಗಳ ಜತೆ ಒಡನಾಟವಿದ್ದರೆ ಹೊಸ ವಿಚಾರಗಳು ಹಾಯುತ್ತವೆ. ಬುದ್ಧಿಜೀವಿಗಳಿಗೆ ಜನಪರ ಚಳುವಳಿಗಳ ಲಗತ್ತಿಲ್ಲದೆ ಹೋದರೆ, ಚಿಂತನೆಗೆ ಸಿಗಬೇಕಾದ ತೀಕ್ಷ್ಣತೆ ಮತ್ತು ನೈತಿಕತೆ ಸಿಗದೆ ಹೋಗುತ್ತದೆ. ರಾಜಕೀಯ-ಆರ್ಥಿಕ ಚಳುವಳಿಗಳಿಗೆ ಸಾಂಸ್ಕೃತಿಕ ವಿವೇಕ ಒದಗಿಸುವ ಕೆಲಸವನ್ನು ಉದ್ದಕ್ಕೂ ಕಲೆ ಮತ್ತು ಸಾಹಿತ್ಯಲೋಕಗಳು ಮಾಡಿಕೊಂಡು ಬಂದಿವೆ.ಕನ್ನಡ ಲೇಖಕರಿಂದ ಆಧುನಿಕ ಕಾಲದ ಚಳುವಳಿಗಳು ಶಕ್ತಿ ಪಡೆದಿವೆ. ಕನ್ನಡದಲ್ಲಿ ದಲಿತರನ್ನು ಮಾಂಸಾಹಾರಿಗಳನ್ನು ಮಹಿಳೆಯರನ್ನು ಹೀಯಾಳಿಸುವ ನುಡಿಗಟ್ಟು ಗಾದೆಗಳಿವೆ. ಈ ವಿಷಯದಲ್ಲಿ ರೈತ ಚಳುವಳಿ ಎಷ್ಟು ಸೂಕ್ಷ್ಮವಾಗಿದೆಯೊ ಕಾಣೆ. ಕರ್ನಾಟದಲ್ಲಿ ಮಾಂಸಾಹಾರದ ಮೇಲೆ ನಿರಂತರ ಹಲ್ಲೆಗಳಾದವು. ಉಚ್ಚಜಾತಿಗಳ ಆಹಾರಕ್ರಮವನ್ನು ಎಲ್ಲರ ಮೇಲೆ ಹೇರಲು ಯತ್ನಿಸಲಾಯಿತು. ಮಧ್ಯಾಹ್ನ ಶಾಲಾಮಕ್ಕಳಿಗೆ ಮೊಟ್ಟೆಕೊಡುವ ಯೋಜನೆಗೆ ಕೆಲವರು ವಿರೋಧಿಸಿದರು. ಇದೆಲ್ಲ ರೈತ ಚಳುವಳಿಯ ವಿಷಯಗಳಲ್ಲವೆ? ವಾಸ್ತವವಾಗಿ ಕೋಳಿ ಆಹಾರದಲ್ಲಿ ಬಳಕೆಯಾಗುವ ಮೆಕ್ಕೆಜೋಳವು ಕೋಳಿಸಾಕಣೆಯ ಹಿಂದಿದೆ. ಮೊಟ್ಟೆ ಮಾಂಸ ಮೀನು ಹಾಲು ಒಳಗೊಂಡಂತೆ ಎಲ್ಲ ಆಹಾರದ ಹಿಂದೆ ರೈತಾಪಿತನವಿದೆ. ಆಹಾರ ಸಂಸ್ಕøತಿ ಮೇಲಿನ ಹಲ್ಲೆಗಳು ರೈತಚಳುವಳಿಯ ಭಾಗವಾಗದೆ ಹೋದರೆ, ಅದಕ್ಕೆ ಹೊಸವಿಸ್ತರಣೆ ಹೇಗೆ ಸಿಗುತ್ತದೆ? ಅಧಿಕಾರಿಗಳು ರಾಜಕಾರಣಿಗಳು ಬುದ್ಧಿಜೀವಿಗಳು ಪೋಲೀಸರು ಜನಸಾಮಾನ್ಯರ ಆಶೋತ್ತರಕ್ಕೆ ಮಿಡಿಯುವಂತೆ ಸಂವೇದನಶೀಲರಾಗಬೇಕು ಎಂದು ಚಳುವಳಿಗಳು ಅಪೇಕ್ಷಿಸುತ್ತವೆ. ಆದರೆ ಹೀಗೆ ಅಪೇಕ್ಷಿಸುವ ಚಳುವಳಿಗಳಿಗೂ ಇತರರ ನೋವಿಗೆ ಮಿಡಿಯುವ ಸಂವೇದನಶೀಲತೆಯ ಅಗತ್ಯವಿದೆಯಲ್ಲವೇ? ಸಾಂಸ್ಕøತಿಕ ಎಚ್ಚರ ಮತ್ತು ವಿವೇಕಗಳು ವ್ಯಕ್ತಿಗೆ, ಸಮಾಜಕ್ಕೆ ಮಾತ್ರವಲ್ಲ, ಸಮಾಜ ಬದಲಿಸಬೇಕೆನ್ನುವ ಚಳುವಳಿಗಳಿಗೂ ತೀಕ್ಷ್ಣತೆಯನ್ನು ಒದಗಿಸುತ್ತವೆ. ಪ್ರಜಾಪ್ರಭುತ್ವೀಯ ವಿಸ್ತರಣೆ ನೀಡುತ್ತವೆ. ಒಮ್ಮೆ ಕೇರಳ ಪ್ರವಾಸದಲ್ಲಿದ್ದಾಗ ಕಲ್ಲಿಕೋಟೆಯ ಹತ್ತಿರ, ಎಳೆಯ ತೆಂಗಿನಗರಿಗಳಿಂದ ಮಾಡಿದ ದೊಡ್ಡದೊಡ್ಡ ಕೋಳಿಯ ಪ್ರತಿಕೃತಿಗಳನ್ನು ಹೊತ್ತುಕೊಂಡು ಕುಣಿವ ಕೋಳಿಯಾಟ್ಟಂ ಮೆರವಣಿಗೆಯನ್ನು ನೋಡುವ ಅವಕಾಶವೊದಗಿತು. ಕೇರಳದ ಜನಪರ ಚಳುವಳಿಗಾರರು ಈ ಆಚರಣೆಗಳಲ್ಲಿ ತಮ್ಮದೇ `ಕೋಳಿ’ಗಳ ಜತೆ ಭಾಗವಹಿಸಿದ್ದರು. ಅವರ ಕೋಳಿಪ್ರತಿಮೆಗಳ ಮೇಲೆ ಎಲ್ಲ ಧರ್ಮಗಳ ಚಿಹ್ನೆಗಳೂ ಇದ್ದವು. ಇದು ಚಳುವಳಿಗಳು ಜನರ ಭಾವನಾತ್ಮಕ ಲೋಕದೊಳಗೆ ವೈಚಾರಿಕತೆ ಬಿಟ್ಟುಕೊಡದೆಯೂ ಸಂಬಂಧ ಇರಿಸಿಕೊಳ್ಳುವ ಸೂಕ್ಷ್ಮವಾದ ಪರಿ. ಈ ಹಿನ್ನೆಲೆಯಲ್ಲಿ ಕರ್ನಾಟಕದ ರೈತಚಳುವಳಿಯ ಸಾಂಸ್ಕøತಿಕ ಸಂಬಂಧಗಳು ಕ್ಷೀಣವೆನಿಸುತ್ತವೆ. ಕುಟ್ಟುವ ಬೀಸುವ ಹಂತಿಯ ರಾಶಿಪೂಜೆಯ ಹಾಡುಗಳ ಹಿಂದೆ ರೈತಾಪಿಗಳಿದ್ದಾರೆ. ರೈತರೇ ರಿವಾಯತ್ ಹಾಡುಗಳನ್ನು ಹಾಡುವುದು; ಸಂತರ ಉರುಸು ಇಲ್ಲವೇ ಆರೂಢರ ಜಾತ್ರೆ ಮಾಡುವುದು. ರೈತ ಚಳುವಳಿಗೆ ಈ ಸಾಂಸ್ಕøತಿಕ ಲೋಕದ ಜತೆಗೆ ಯಾವ ಬಗೆಯ ನಂಟಿದೆಯೊ ನಾನರಿಯೆ. ಚಳುವಳಿಗಳ ಕಾರ್ಯಕರ್ತರು ಕರೆ ಬಂದಾಗ ಮುಷ್ಕರ ಮಾಡುವ ಸೈನಿಕರಾಗಿ ಮಾತ್ರ ಇರುವುದು ಯಾಂತ್ರಿಕ ಸಂವೇದನೆ ಅನಿಸುತ್ತದೆ. ಸಿದ್ಧಾಂತಗಳ ಪಕ್ಷಗಳ ಸಂಘಟನೆಗಳ ಜತೆ ಯಾಂತ್ರಿಕ ಮತ್ತು ಗುಲಾಮೀ ಸಂಬಂಧ ಇರಿಸಿಕೊಂಡ ಎಲ್ಲರೂ ಕುಬ್ಜರಾಗುವುದು ಮಾತ್ರವಲ್ಲ, ತಮ್ಮ ಸಿದ್ಧಾಂತ ಸಂಘಟನೆಗಳನ್ನೂ ಕುಬ್ಚಗೊಳಿಸುವರು. ಸಂಸ್ಕøತಿ ಧರ್ಮಗಳ ರಕ್ಷಣೆ ಮಾಡುವುದಕ್ಕೆಂದೇ ತಯಾರಿಸಲಾಗಿರುವ ಮತಾಭಿಮಾನಿಗಳನ್ನು ಗಮನಿಸಿ. ಅವರ ವ್ಯಕ್ತಿತ್ವವನ್ನು ಒಳ್ಳೆಯ ಸಂಗೀತ ಆಸ್ವಾದಿಸುವ, ಅತ್ಯುತ್ತಮ ಸಾಹಿತ್ಯ ಓದುವ, ಸಿನಿಮಾ ನೋಡುವ-ಒಟ್ಟಿನಲ್ಲಿ ವ್ಯಕ್ತಿತ್ವ ವಿಸ್ತರಣೆ ಮಾಡಬಲ್ಲ ಯಾವ ಹವ್ಯಾಸಗಳೂ ಇರದಂತೆ ಬಿರುಸಾಗಿ ರೂಪಿಸಲಾಗಿರುತ್ತದೆ. ನಾಯಕರು ಹೇಳಿದ್ದನ್ನು ಪಾಲಿಸುವಂತೆ ಗುಲಾಮೀಕರಣ ಅಲ್ಲಿರುತ್ತದೆ. ಅವರಲ್ಲಿ ಕೆಲವು ಓದುಗ ಹವ್ಯಾಸವುಳ್ಳವರು ಇರಬಹುದು. ಆದರೆ ಅವರನ್ನು ಪಕ್ಷದ ಸಿದ್ಧಾಂತಕ್ಕೆ ಪೂರಕವಾಗಿರುವ ಲೇಖಕರನ್ನು ಬಿಟ್ಟು ಬೇರೆಯವರು ಬರೆದದ್ದರ ಕಡೆ ಕಣ್ಣುಹಾಯಿಸದಂತೆ ಮಾಡಲಾಗಿರುತ್ತದೆ. ಸಂವೇದನೆಯನ್ನು ಹೀಗೆ ಒಣಗಿಸಿದ ನೆಲದ ಮೇಲೆ ಕ್ರೌರ್ಯ ಅಸಹನೆ ಅಸೂಕ್ಷ್ಮತೆಗಳು ಸುಲಭವಾಗಿ ಹುಟ್ಟುತ್ತವೆ. ಚಳುವಳಿಗಳು ತಮ್ಮನ್ನು ಸಾಂಸ್ಕೃತಿಕ ಅಭಿರುಚಿಗಳಿಂದ ಸಮೃದ್ಧಗೊಳಿಸಿಕೊಳ್ಳದೆ ಹೋದರೆ, ಅವುಗಳ ಆರ್ಥಿಕ ಸಾಮಾಜಿಕ ರಾಜಕೀಯ ಚಿಂತನೆ ಮತ್ತು ಕ್ರಿಯೆಗಳು ಮುಕ್ಕಾಗಬಹುದು; ಏಕಮುಖಿಯಾಗಿ ಬೇಗನೆ ದಣಿಯಬಹುದು. ಅವಕ್ಕೆ ರಾಜಕೀಯ ಸ್ಪಷ್ಟತೆಯಷ್ಟೆ ಮುಖ್ಯವಾಗಿ ಮನಸ್ಸನ್ನು ಆರ್ದ್ರವಾಗಿಡುವ ಸಾಂಸ್ಕೃತಿಕ ಅಭಿರುಚಿಗಳೂ ಇರಬೇಕು. ರೈತರು ಕಾರ್ಮಿಕ ದಲಿತರು ಆಸ್ಥೆ ತೋರುವುದರಿಂದ ಮಧ್ಯಮವರ್ಗದ ಚಟುವಟಿಕೆಗಳಾಗಿ ಮಾರ್ಪಟ್ಟಿರುವ ಸಾಂಸ್ಕೃತಿಕ ಲೋಕಗಳಿಗೂ ಮರುಜೀವ ಬರುತ್ತದೆ. ಇದು ಜೀವಂತಿಕೆಯನ್ನು ಕೊಟ್ಟು ಪಡೆಯುವ ಪ್ರಕ್ರಿಯೆ. ಈ ಪ್ರಕ್ರಿಯೆಯಲ್ಲಿ ರಾಜಕೀಯ ಸಾಮಾಜಿಕ ಧಾರ್ಮಿಕ ಸಾಂಸ್ಕೃತಿಕ ಎಂಬ ಭೇದಗಳು ಅಂತಿಮವಾಗಿ ಇಲ್ಲವಾಗುತ್ತವೆ; ಶಿಷ್ಟ-ಜಾನಪದಗಳು ಏಕೀಭವಿಸುತ್ತವೆ. ಅಂತಹ ಚಳುವಳಿಯ ಸಂಗ ಮಾಡಿದ ಲೇಖಕರು-ಕಲಾವಿದರು ತಮ್ಮ ಮಂಕುತನ ಕಳೆದುಕೊಂಡು ಹೊಸಹುಟ್ಟನ್ನು ಪಡೆಯಬಲ್ಲರು. ಇದು ಚಿಂತಕರು ಹಾಗೂ ಚಳುವಳಿಗಳು ಪರಸ್ಪರರನ್ನು ಕೊಂದುಕೊಂಡು ಬದುಕಿಕೊಳ್ಳುವ ಸೃಜನಶೀಲ ಉಪಾಯ.’’ ***************************************** ರಹಮತ್ ತರಿಕೆರೆಯವರು- ಕನ್ನಡದ ಗಮನಾರ್ಹ ಲೇಖಕ. ಹಂಪಿ ವಿಶ್ವವಿದ್ಯಾಲಯದ ಪ್ರೋಫೆಸರ್. ನಾಡಿನ ಸಂಸ್ಕೃತಿ, ಸೌಹಾರ್ದತೆಯ ಬೇರುಗಳ ಜಾಡು ಹಿಡಿದು, ಆಯಾ ಊರುಗಳಿಗೆ ಹೋಗಿ, ಮಾಹಿತಿ ಹಾಕಿ, ಅಲ್ಲಿನ ಜನರ ಜೊತೆ ಬೆರೆತು, ಸಂಶೋಧನಾ ಲೇಖನಗಳನ್ನು ಬರೆದವರು.‌ಕರ್ನಾಟಕದ ಸಂಗೀತಗಾರರು ಹಾಗೂ ಅವರು ದೇಶದ ಇತರೆ ಭಾಗಗಳಲ್ಲಿ ನೆಲೆಸಿದವರ ಬಗ್ಗೆ ಹುಡುಕಾಡಿ ಬರೆದವರು. ಅವರ ನಿರೂಪಣಾ ಶೈಲಿ ಅತ್ಯಂತ ಆಕರ್ಷಕ. ಮನಮುಟ್ಟುವಂತೆ ಬರೆಯುವ ರಹಮತ್ ತರೀಕೆರೆ ಕನ್ನಡದ ,ಬಹುತ್ವದ ,ಸೌಹಾರ್ದತೆಯ ಪ್ರತೀಕವೂ ಆಗಿದ್ದಾರೆ

Read Post »

ಕಾವ್ಯಯಾನ

ಅನ್ನ ಕೊಟ್ಟವರು ನಾವು.

ಕವಿತೆ ಅನ್ನ ಕೊಟ್ಟವರು ನಾವು. ಅಲ್ಲಾಗಿರಿರಾಜ್ ಕನಕಗಿರಿ ನೆನಪಿರಲಿ ನಿಮಗೆ.ನೀವು ದೆಲ್ಲಿಯ ರಸ್ತೆ ಮುಚ್ಚಿಕೊಂಡರೆ,ನಾಳೆ ನಾವು ಹಳ್ಳಿ ಹಳ್ಳಿಯರಸ್ತೆ ಮುಚ್ಚುತ್ತೇವೆ. ಆಗ ಶುರುವಾಗುತ್ತದೆ ನೋಡಿ ಅಸಲಿ ಯುದ್ಧ. ಸರ್ಕಾರ ಎಂದರೆ ಸೇವಕ ಎನ್ನುವುದು ಮರೆತ್ತಿದ್ದಿರಿ ನೀವು.ಸಾಕುಮಾಡಿ ನೇತಾರರ ಹೆಸರಲ್ಲಿ ಬೂಟಾಟಿಕೆಯ ಕೆಲಸ. ಇಂದಲ್ಲ ನಾಳೆ ಪಾರ್ಲಿಮೆಂಟ್ ನಲ್ಲಿ,ಮನುಷ್ಯ ಪ್ರೀತಿಯ ಬೀಜ ಬಿತ್ತುತ್ತೇವೆ ನಾವು.ಮೊದಲು ಧರ್ಮದ ಅಮಲಿನಿಂದ ಹೊರ ಬನ್ನಿ ನೀವು. ಹೋರಾಟದ ನದಿ ಕೆಂಪಾಗುವ ಕಾಲ ಬಂತು.ನಿಮ್ಮ ಮುಖವಾಡ ಕಳಚಿ ಬಿಡಿನೇಗಿಲ ಯೋಗಿ ಮುಂದೆ…….. ನೆನಪಿರಲಿ ಅನ್ನ ಕೊಟ್ಟವರು ನಾವು.ವಿಷ ಬೀಜ ಬಿತ್ತಬೇಡಿ ನೀವು. ******************************************

ಅನ್ನ ಕೊಟ್ಟವರು ನಾವು. Read Post »

ಕಥಾಗುಚ್ಛ

ನಂಬಿಕೆ : ಮರು ಪ್ರಶ್ನೆ

ಸಣ್ಣ ಕಥೆ  ನಂಬಿಕೆ : ಮರು ಪ್ರಶ್ನೆ ರೇಷ್ಮಾ ನಾಯ್ಕ, ಶಿರಸಿ ಯಾರು ಒಳ್ಳೆ ಕೆಲ್ಸ ಮಾಡ್ತಾರೋ ಅವ್ರ ಪರ ದೇವ್ರು ನಿಂತಿರ್ತಾನೆ ಯಾವುದೇ ರೀತಿಲಿ ಸಮಸ್ಯೆಗಳಿಗೆ ಪರಿಹಾರಾನೂ ಸೂಚಿಸುತ್ತಾನೆ ಎಂದ ಮಾತಿಗೆ;  ಮಗಳು , ” ಹಾಗಾದ್ರೆ ಜಗತ್ತಿಗೆ ಕರೋನ ಬಂದಿದೆ ಇಷ್ಟೆಲ್ಲ ಕಷ್ಟ ಪಡ್ತಿದೀವಿ ಶಾಲೆಗೂ ಹೋಗೋಕಾಗ್ತಿಲ್ಲ  ಯಾಕಮ್ಮ ದೇವ್ರು ಪರಿಹಾರಾನೇ ಸೂಚಿಸ್ತಿಲ್ಲ?”  ಎಂದಳು. ಕಂದಾ, ” ದೇವ್ರು ಅನ್ನೋದು ಒಂದು ನಂಬಿಕೆ , ಧೈರ್ಯ. “ ನಿಂಗೆ ಜ್ವರ ಬಂದಾಗ ಹೆದ್ರಬೇಡ ನಾವ್ ನಿಂಜೊತೆಗೆ ಇರ್ತೀವಿ. ಹಾಸ್ಪಿಟಲ್ ಗೂ ಹೋಗ್ಬಂದಿವಿ. ನಿಂಗೇನು ಆಗಲ್ಲ ಅಂದಾಗ ;  ನಿಂಗೆ ಬಂದಿರೋ ಜ್ವರ ಸ್ವಲ್ಪ ಕಡಿಮೆ ಆದ ಹಾಗೆ ಅನ್ನಿಸುತ್ತಲ್ಲ….  ಹಾಗೆ, ಮತ್ತೂ ಇಲ್ಲಿ ”  ಜ್ವರ ಕಡಿಮೆ ಯಾಗದಿದ್ರೂ ನಾವ್ ಕೊಡೊ ಭದ್ರತೆ ಕೆಲ್ಸ ಮಾಡುತ್ತೆ ” ಎಂದೆ ಹಾಗಾದ್ರೆ , ಒಂದ್ ಕೆಲ್ಸ ಮಾಡ್ತಿನಮ್ಮ ;  ” ದೇವಸ್ಥಾನಕ್ಕೆ ನಾವಿಬ್ಬರೂ ಹೋದ ಹಾಗೆ.. ಚಿತ್ರ ಬಿಡಿಸ್ತಿನಮ್ಮ … ಆಗ ನಾವು ಅಲ್ಲಿಗೆ ಹೋದ ಹಾಗೆ …. ಯಾಕಂದ್ರೆ ದೇವ್ರು ಮನಸಿನ ನಂಬಿಕೆ ಅಲ್ವಾ ”  ಅಂದಳು ಈಗ ಉತ್ತರಿಸಲಾಗದೆ ತಡವರಿಸುವ ಸರದಿ ನನ್ನದಾಯ್ತು.. *******************************************

ನಂಬಿಕೆ : ಮರು ಪ್ರಶ್ನೆ Read Post »

ಕಾವ್ಯಯಾನ

ಮಾಗಿ ಕಾಲ

ಕವಿತೆ ಮಾಗಿ ಕಾಲ ಡಾಲಿ ವಿಜಯ ಕುಮಾರ್. ಕೆ.ವಿ ಆವರಿಸಿದ ಚಳಿನನ್ನ ಮೈತಾಕದಂತೆಎದೆಯ ಚಿಪ್ಪಿನೊಳಗೆ ಕಾದನಿನ್ನ ಬಿಸಿ ಅಪ್ಪುಗೆಯ ಹಿತಕ್ಕೆಬರುವ ಮಾಸಗಳೆಲ್ಲಮಾಘಮಾಸವನ್ನೇಹೊತ್ತಿರಬಾರದೆ ಅನ್ನಿಸುತ್ತೆ… ಒಲಿದ‌ ಮನಸುಗಳಮಾಗಿಸಿ.ಬಿಗಿಯಾಗಿ ಬೆಸೆದುಬಲಿತ ಕನಸುಗಳಮಿಲನವಾಗಿಸುವಶಿಶಿರ ಋತುಪರಿಪೂರ್ಣತೆಯ ಭಾವಗಳಪೂರ್ಣವಿರಾಮದಂತೆ.ನನಗೆ… ಮನದ ಮಾತುಗಾರನಮಂತ್ರಿಸಿ ವಶೀಕರಿಸುವಮಾಘಮಾಸಮಡದಿ ಮನದರಸರಮನಸುಗಳ ಹೊಸೆದುಪ್ರತಿ ಹೊತ್ತಿನ ಪಾಲುದಾರಿಕೆಯಪರಮ ಸುಖಕೆಮುತ್ತುಗಳ ಮಳೆಗರೆಸುವಪ್ರತಿ ಮಾಗಿಯೂಇಲ್ಲಿ ಹೊಸ ವಸಂತಗಳೇ…… ಕಿಟಕಿಯಿಂದತೂರಿ ಬರುವಹೊಂಗಿರಣಗಳ ಅಲ್ಲೇತಡೆದು ನಿಲ್ಲಿಸುವೆ.ಇನಿಯನಮುದ ನೀಡುವಮುದ್ದು ಪ್ರೀತಿಯಕದ್ದು ನೋಡದಿರಲೆಂದು…. ಅಂತದ್ದೊಂದುಸವಿ ಸಾಕಾಗುವಷ್ಟುಸವಿದೇಬಿಡುವೆ.ಸುಮ್ಮನಿರಿಚಿಲಿಪಿಲಿ ರಾಗಗಳೇ.ಬೆಳಗಿನ ಕಾತರಿಕೆ ನನಗಿಲ್ಲ. ಇಂದಿನಕನಸುಗಳ ಕೈಚೆಲ್ಲಿದರೆಮನಮುಂದಿನ ಮಾಗಿಕಾಲಕ್ಕಾಗಿಕಾದು ಕೂರಬೇಕು….ಹೆಪ್ಪುಗಟ್ಟಿದ ಹಲವು ನೆನಪುಗಳಜೊತೆಗೆ…… ಮಾಗಿ-ಶಿಶಿರ-ಚಳಿಗಾಲ *******************************

ಮಾಗಿ ಕಾಲ Read Post »

ಅಂಕಣ ಸಂಗಾತಿ, ಕಬ್ಬಿಗರ ಅಬ್ಬಿ

ಅಂಕಣ ಬರಹ ಕಬ್ಬಿಗರ ಅಬ್ಬಿ  ಕ್ಯಾನುವಾಸು ಮತ್ತು ಕಾವ್ಯ ರಾತ್ರೆ ಆಗಷ್ಟೇ ಲಂಗದಾವಣಿ ತೊಟ್ಟು ಕುಳಿತಿತ್ತು. ಆ ಹೊತ್ತಿಗೆ ಆ ಪುಟ್ಟ ಮನೆಯೊಳಗೆ ಬಡಕಲು ಕ್ಯಾಂಡಲ್ ಮಾತ್ರ ಉರಿಯುತ್ತಿದೆ. ನಸುಗೆನ್ನೆಯ ಹೊಳೆವ ಕಣ್ಣುಗಳ ಬಾಲಕ ಮತ್ತು ಆತನ ಉಬ್ಬುಗೆನ್ನೆಯ ಕನಸುನೇತ್ರದ ತಂಗಿಗೆ ತಿನ್ನಲು ಬರೇ ಎರಡು ಸ್ಲೈಸ್ ಬ್ರೆಡ್ ಮಾತ್ರ ಉಳಿದಿದೆ. ಆ ಮಕ್ಕಳ ಅಮ್ಮ ಬ್ರೆಡ್ ಬಿಸಿ ಮಾಡಿಕೊಡಲು ವಿದ್ಯುತ್ ಪೂರೈಕೆ ಇಲ್ಲದೇ, ಆ ಛಳಿಯಲ್ಲೂ ತಣ್ಣಗಿನ ಬ್ರೆಡ್ ಮಕ್ಕಳಿಗೆ ತಿನ್ನಲು ಕೊಡುತ್ತಾಳೆ. ಎರಡನೇ ಮಹಾಯುದ್ಧದ ಸಮಯದಲ್ಲಿ ಜರ್ಮನಿಯ ಆಗಸದಲ್ಲಿ ರಾತ್ರೆ ಬ್ರಿಟನ್,ಅಮೆರಿಕಾ ಇತ್ಯಾದಿ ರಾಷ್ಟ್ರ ಗಳ  ಯುದ್ಧವಿಮಾನಗಳು ಬಾಂಬು ಸುರಿಯುತ್ತಿದ್ದವು. ಸಾಧಾರಣವಾಗಿ ಯುದ್ಧಕಾಲದಲ್ಲಿ ರಾತ್ರಿಯಿಡೀ ಪೇಟೆ ಪಟ್ಟಣಗಳನ್ನು ಬ್ಲಾಕ್ ಔಟ್ ಮಾಡುತ್ತಾರೆ. ಜರ್ಮನಿಯ ವೈರಿಪಡೆಗಳೂ ಅಮವಾಸ್ಯೆಯಂತಹ ಕಗ್ಗತ್ತಲ ರಾತ್ರೆಯನ್ನೇ ವೈಮಾನಿಕ ದಾಳಿಗೆ ಉಪಯೋಗಿಸುತ್ತಾರೆ. ಹಾರಿ ಬರುವ ಯುದ್ಧವಿಮಾನಗಳನ್ನು ಹೊಡೆದುರುಳಿಸಲು ನೆಲಸೇನೆಯ ಗನ್ ಗಳು ಆಗಸಕ್ಕೆ ಮುಖಮಾಡಿ ಬೆಂಕಿಯುಗುಳಲು ಕಾಯುತ್ತವೆ. ಅದೋ ಸ್ಪೋಟದ ಸದ್ದುಗಳು ಕೇಳುತ್ತಿದೆ. ಮಕ್ಕಳು ಹೆದರಿ ಅಮ್ಮನ ಕೋಟಿನ ಬೆಚ್ಚಗಿನ ಅಪ್ಪುಗೆಯಲ್ಲಿ ಥರಗುಟ್ಟುತ್ತಿವೆ. ಜಗ್ಗನೆ ಬೆಳಕು, ಅಮೇಲೆ ಬಾಂಬಿನ ಸ್ಪೋಟದ ಸದ್ದು. ಅವರ ಮನೆಯಿಂದ ತುಸು ದೂರದಲ್ಲಿ ಇರುವ ಮನೆಗಳ ಸಮುಚ್ಛಯದ ಮೇಲೆ ಬಾಂಬು ಬಿದ್ದು ಉರಿಯುವುದು ಕಿಟಿಕಿಯ ಮೂಲಕ ಕಾಣಿಸುತ್ತಿದೆ. ಆ ಸಮುಚ್ಛಯದಲ್ಲಿಯೇ, ಈ ಮಕ್ಕಳ ಗೆಳೆಯ ಗೆಳತಿಯರ ವಾಸ. ಮರಣಾಕ್ರಂದನ ಒಡೆದ ಗಾಜುಗಳ ಕಿಟಿಕಿಯನ್ನ ದಾಟಿ ಈ ಮಕ್ಕಳಿಗೂ ಕೇಳಿಸುತ್ತೆ. ಅವರು ಅಮ್ಮನನ್ನು ಬಿಗಿ ಹಿಡಿದು ಸಣ್ಣಗೆ ಅಳುತ್ತವೆ. ಇಂತಹ ನಾಲ್ಕಾರು ವರ್ಷ, ಜರ್ಮನಿ,ಬ್ರಿಟನ್, ಫ್ರಾನ್ಸ್, ಇಟಲಿ ಇತ್ಯಾದಿ ದೇಶಗಳಲ್ಲಿ ಪರಸ್ಪರ ದಾಳಿ ನಡೆದು, ಅಲ್ಲಿ ಬದುಕುಳಿದ ಮಕ್ಕಳ ಮನೋ ಸ್ಥಿತಿ ಹೇಗಿದ್ದಿರಬಹುದು?. ಎರಡನೇ ಮಹಾಯುದ್ಧದ ನಂತರ ಸುಮಾರು ಮೂರು ದಶಕಗಳಷ್ಟು ಕಾಲ, ಈ ದೇಶಗಳಲ್ಲಿ ರಚಿತವಾದ ಕವಿತೆ, ಕತೆ ಕಾದಂಬರಿಗಳಲ್ಲಿ, ಈ ನೋವು, ಅನೂಹ್ಯ ಭಯ, ಅಸ್ಥಿರತೆ, ಬಡತನ ಎಲ್ಲದರ ಚಿತ್ರಣ ಒಂದಲ್ಲ ಒಂದು ರೀತಿಯಲ್ಲಿ ಧ್ವನಿಯಾಗಿ ಹರಿದಿತ್ತು. ಹಾಗಿದ್ದರೆ ಕಾವ್ಯದ ಮೂಲ ಸೆಲೆ ಸೃಜಿಸುವುದು ಎಲ್ಲಿಂದ?. ಕಾವ್ಯಬ್ರಹ್ಮ ಕುಳಿತ ತಾವರೆಯ ದಂಟಿನ ಬುಡ ಯಾವ ಕೆರೆಯ ಕೆಸರಲ್ಲಿ ಹುದುಗಿದೆ?. ಒಂದು ಬಿಳಿ ಬಣ್ಣದ ಬಟ್ಟೆಯ ಕ್ಯಾನುವಾಸು ಮೇಲೆ ಬಣ್ಣದ ದ್ರಾವಣ ಎರೆಯೋಣ. ಬಟ್ಟೆಯ ಮಧ್ಯದಲ್ಲಿ ಬಿದ್ದ ಬಣ್ಣದ ಬಿಂದು ನಿಧಾನವಾಗಿ ನೂಲೆಳೆಯ ಎಳೆಹಿಡಿದು ವರ್ತುಲ ವರ್ತುಲವಾಗಿ ಹರಡುತ್ತೆ. ಹಾಗೆ ಹರಡಿದ ಬಣ್ಣಹೀರಿದ ಬಟ್ಟೆಯ ಮೇಲೆ ಮತ್ತೊಂದು ಬಣ್ಣದ ನೀರನ್ನು ಎರೆಯೋಣ. ಈಗ ಮೊದಲು ಹರಡಿದ ಬಣ್ಣ ಮತ್ತು ಈ ಬಣ್ಣ ಒಂದಕ್ಕೊಂದು ಕಲೆತು ಹರಡಿ ಚಿತ್ತಾರವಾಗುತ್ತವೆ. ಮತ್ತೆ ಇವುಗಳ ಮೇಲೆ ಇನ್ನೊಂದು ಬಣ್ಣ,  ಅದು ಹರಡಿ ಮಿಳಿತವಾದಂತೆ ಮಗುದೊಂದು ಬಣ್ಣದ ದ್ರಾವಣಗಳನ್ನು ಎರೆಯುತ್ತಾ ಹೋದರೆ, ಕ್ಯಾನುವಾಸು ಮೇಲೆ ಸುಂದರವಾದ ವರ್ಣ ಚಿತ್ತಾರ ಮೂಡುತ್ತೆ. ಆ ಬಣ್ಣಗಳು ಒಂದರೊಡನೊಂದು ಕಲೆಯುವ ರೀತಿ, ಕಲೆಯುವ ಅನುಪಾತ, ಇವುಗಳು ಚಿತ್ರಕ್ಕೆ ಹಲವು ಶೇಡ್ ಗಳನ್ನು ಕೊಡುತ್ತವೆ. ಆ ಚಿತ್ರದ ಅಂಚುಗಳು ಬಣ್ಣಗಳೇ ಸ್ವತಂತ್ರವಾಗಿ ವಿಕಸನಕೊಂಡ ವಿಸ್ತಾರದ ಕೊನೆ ಗೆರೆಗಳು. ಈ ವರ್ಣ ವಿಕಸನಕ್ಕೆ ಒಂದು ಕೇಂದ್ರಬಿಂದು ಇರುತ್ತೆ. ಆ ಕೇಂದ್ರದ ಸುತ್ತ ನಿರ್ದಿಷ್ಟ ರೀತಿಯ ಸಿಮ್ಮೆಟ್ರಿ,  ಆ ಪ್ಯಾಟರ್ನ್ ಗೆ ಇರುತ್ತೆ.  ಬಣ್ಣಗಳ ಕಾಂಟ್ರಾಸ್ಟ್ಗಳನ್ನು, ಮಬ್ಬು ಛಾಯೆಗಳನ್ನು ಚಿತ್ರದ ಪೂರ್ಣತ್ವದಿಂದ ಭಿನ್ನವಾಗಿಸಿ ತುಂಡಾಗಿಸಿ ನೋಡಲಾಗದು. ಒಮ್ಮೆ ಹರಡಿ, ಬೆರೆತ ಬಣ್ಣಗಳನ್ನು ಮೊದಲಿನಂತೆಯೇ ಪುನಃ ಬಿಡಿಸಿ ಹಿಂಪಡೆಯಲೂ ಆಗಲ್ಲ. ಕಲೆಸಿದ ಬಣ್ಣ ಕಲೆತೇ ಇರುತ್ತೆ. ಬಾಲ್ಯದಿಂದಲೂ ಕಾಣುವ ದೃಶ್ಯಗಳು ನಮ್ಮ ಮನಸ್ಸಿನ ಹಾಳೆಯ ಮೇಲೆ ಹೀಗೆಯೇ ಬಣ್ಣದ ದ್ರಾವಣವಾಗಿ ಎರೆಯಲ್ಪಡುತ್ತವೆ. ದಿನ ದಿನವೂ ಹೊಸ ದೃಶ್ಯ, ಹೊಸ ಬಣ್ಣ. ಮನಸ್ಸಿನಲ್ಲಿ ಅದು ಹರಡುತ್ತದೆ, ಪದರ ಪದರವಾಗಿ ಒಂದು ಕೇಂದ್ರದ ಸುತ್ತ. ನಾವು ಕರೆದುಕೊಳ್ಳುವ, ಅನುಭವ, ನೆನಪು ಇವುಗಳೆಲ್ಲ ನಮ್ಮ ಮನಸ್ಸಿನ ಕ್ಯಾನುವಾಸಿನ ಮೇಲೆ ಮೂಡಿದ ವರ್ಣಚಿತ್ರಗಳು. ಪ್ರತೀ ಮನಸ್ಸನ್ನೂ ನೋವು, ಆಘಾತಗಳು, ಕಾಡಿದಷ್ಟು ಬೇರೆ ಭಾವಗಳು ಕಾಡಲ್ಲ. ಮನಸ್ಸಿನ ಚಿತ್ರಪಟಲದಲ್ಲಿ ಅಂತಹ ಘಟನೆಗಳು ತುಂಬಾ ಆಳವಾದ ಅಚ್ಚೊತ್ತು ಆಗುತ್ತೆ.‌ ಅಮೂರ್ತ ವರ್ಣಚಿತ್ರಕಾರ ಹೆಚ್ಚೆಂದರೆ ಒಂದು ವರ್ಣ ಚಿತ್ರ ಬರೆಯಲು ಕೆಲವು ತಿಂಗಳ ಸಮಯ ತಗೋಬಹುದು. ಹಾಗೆ ಆತ, ತನ್ನ ಜೀವನದಲ್ಲಿ ಹತ್ತಾರು ವರ್ಣಚಿತ್ರಗಳನ್ನು ಬರೆಯುತ್ತಾನೆ. ಆದರೆ ಈ ಮನಸ್ಸಿನಲ್ಲಿ ಮೂಡುವ ವರ್ಣ ಚಿತ್ರ ಒಂದೇ. ಅದು ಶುರುವಾಗುವುದು, ಹೆರಿಗೆ ಕೋಣೆಯಲ್ಲಿ, ಅದರ ಚಿತ್ರಣ ಮುಗಿಯುವುದು ಸ್ಮಶಾನದಲ್ಲಿ. ಚೆಲ್ಲಿದ ಬಣ್ಣ ಅಳಿಸಲಾಗದೇ ಚಿತ್ರದ ಹಂದರವೇ ಆಗುತ್ತಾ ಚಿತ್ರ ವಿಕಸಿತವಾಗುತ್ತೆ. ದಿನ ದಿನವೂ  ವಿಕಸಿತವಾಗುವ ಈ ಚಿತ್ರದಲ್ಲಿ ಎಷ್ಟೊಂದು ಪದರಗಳು, ಗೆರೆಗಳು,ಅಂಚುಗಳು, ಮೂಲೆಗಳು,ಛಾಯೆಗಳು ವರ್ತುಲಗಳು, ಶೃಂಗಗಳು, ಶೃಂಗಾರಗಳು. ಒಂದು ವಿಸ್ತಾರವಾದ ಖಾಲಿ ಗುಡ್ಡವಿದೆ, ಅಂದುಕೊಳ್ಳೋಣ. ತುಂಬಾ ಮಳೆಸುರಿದು ಗಿಡಗಳು ಮೊಳಕೆಯೊಡೆಯುತ್ತವೆ. ಕೆಲವು ವರ್ಷಗಳ ನಂತರ ಗಿಡಗಳು ಮರಗಳಾಗುತ್ತವೆ. ಮರಗಳ ಸುತ್ತ ಬಳ್ಳಿಗಳು, ಕೆಲವು ಮುಳ್ಳಿನ ಗಿಡ ಪೊದೆಗಳು, ಒಂದಕ್ಕೊಂದು ಅವಲಂಬಿತವಾಗಿ ಒಟ್ಟಾಗಿ, ಅದನ್ನು ನಾವು ಕಾಡು ಎಂದು ಕರೆಯ ತೊಡಗುತ್ತೇವೆ. ಕಾಡೊಳಗೆ ಕ್ರಿಮಿ ಕೀಟಗಳು, ಪ್ರಾಣಿ ಪಕ್ಷಿಗಳು ರಂಗೋಲಿಯ ಚುಕ್ಕಿಗಳಾಗುತ್ತವೆ. ಜೇಡ ಬಲೆ ಹೆಣೆಯುತ್ತೆ. ಹಲವು ವರ್ಷಗಳ ನಂತರ, ಹಳೆಯ ಮರಗಳು ಬೀಳುತ್ತವೆ,ಹೊಸ ಮರ ಬೆಳೆಯುತ್ತದೆ. ಭೂಕಂಪವಾದಾಗ, ಗುಡ್ಡದ ಅಂಚಿನಲ್ಲಿ ಮಣ್ಣು ಜರಿದು ಇಳಿಜಾರಿನ ಹೊಸ ಚಿತ್ರ ಬರೆಯುತ್ತೆ. ಮನಸ್ಸಿನೊಳಗೂ ಹಾಗೆ!. ಚಿತ್ರ ನಿಧಾನವಾಗಿ ವಿಕಸಿತವಾಗುತ್ತೆ. ಅದಕ್ಕೊಂದು ಮೂರು ಆಯಾಮ ಕೊಡುತ್ತೆ. ನಾವು ಯಾವುದೇ ವಸ್ತುವಿನ ಸ್ವರೂಪವನ್ನು ನೋಡುವಾಗ, ಆ ವಸ್ತುವಿನ ಹಿಂದೆ ಯಾವ ಹಿನ್ನೆಲೆಯಿದೆಯೋ ಅದಕ್ಕೆ ಸಾಪೇಕ್ಷವಾಗಿ ಆ ಸ್ವರೂಪ ಕಾಣುತ್ತೆ.  ಮನಶ್ಶಾಸ್ತ್ರದಲ್ಲಿ, ಇದಕ್ಕೆ ಫಿಗರ್- ಗ್ರೌಂಡ್ ರಿಲೇಶನ್ ಶಿಪ್ ಎಂದು ಕರೆಯಲಾಗುತ್ತದೆ. ಉದಾಹರಣೆಗೆ ಒಂದು ಕೆಂಪು ಬಣ್ಣದ ಚೆಂಡನ್ನು, ಕೆಂಪು ಬಣ್ಣದ ಪರದೆಯ ಮುಂದಿಟ್ಟರೆ ಗುರುತಿಸಲು ಕಷ್ಟ. ಅದೇ ಚೆಂಡನ್ನು, ಕಪ್ಪು ಬಣ್ಣದ ಅಥವಾ ಬಿಳಿ ಇನ್ನಿತರ ಬಣ್ಣದ ಪರದೆಯ ಮುಂದೆ ಇಟ್ಟರೆ ಸುಲಭವಾಗಿ ಕಾಣಿಸುತ್ತದೆ. ನಿಜ ಜೀವನದಲ್ಲಿ ನಾವು ಯಾವುದೇ ಘಟನೆಯನ್ನು ನೋಡುವಾಗ, ನಮ್ಮ ಅದುವರೆಗಿನ ಬದುಕಿನ ಅನುಭವದ ವರ್ಣ ಚಿತ್ರದ ಹಿನ್ನೆಲೆಯಲ್ಲಿ ಆ ಘಟನೆ ಬಿಂಬ ಪಡೆದು, ಹಿನ್ನೆಲೆಗೆ ಸಾಪೇಕ್ಷವಾಗಿ ನಮಗೆ ಕಾಣಿಸುತ್ತೆ. ಈ ಹೊಸ ಅನುಭೂತಿಯೂ ನಮ್ಮ ಮನಸ್ಸಿನ ಕ್ಯಾನುವಾಸಿನ ಚಿತ್ರದಲ್ಲಿ ಹೊಸ ಚುಕ್ಕಿಯಾಗಿ ಛಾಪೊತ್ತುತ್ತೆ. ಹೀಗೆ ನಮ್ಮ ವರ್ತಮಾನದ ಘಟನೆಗಳ ಗ್ರಹಿಕೆ ನಮ್ಮ ಭೂತಕಾಲದ ಅಷ್ಟೂ ಅನುಭವದ ಮನಃಚಿತ್ರದ ಮೇಲೆ ಅವಲಂಬಿಸಿರುತ್ತದೆ. ಇದರ ಜತೆಗೆ, ನಾವು ನೋಡುವ ಚಿತ್ರದ ಅನುಭೂತಿ, ನೋಟದ ಕೋನದ  ಮೇಲೂ ಅವಲಂಬಿತ ತಾನೇ. ಅದನ್ನೇ ನಾವು ದೃಷ್ಟಿಕೋನ ಎನ್ನುತ್ತೇವೆ. ವಿಮಾನದಿಂದ ಕೆಳಗೆ ನೋಡುವಾಗ ನಿಮಗೆ ಕಾಣುವ ಪಟ್ಟಣದ ಚಿತ್ರ, ನೆಲದಲ್ಲಿ ಚಲಿಸುತ್ತಾ ನೋಡುವಾಗಿನ ಚಿತ್ರದಿಂದ ಎಷ್ಟೊಂದು ಭಿನ್ನ ಅಲ್ಲವೇ. ಇಂತಹಾ ಜಿಗಿಹಲಗೆಯ ಮೇಲೆ ನಿಂತು ಮೇಲಕ್ಕೆ ಜಿಗಿದರೆ!. ಹೌದು, ಅದೇ ಕಲ್ಪನೆ, ಕನಸು, ಭಾವೋತ್ಕರ್ಷ,ಚಿಂತನೆ ಮಂಥನೆಗಳು. ಕವಿ ತಾನು ನೋಡಿದ್ದನ್ನು, ಅನುಭವಿಸಿದ್ದನ್ನು ಬಣ್ಣದ ಕಾಗದದಲ್ಲಿ ಚಿತ್ರಿಸಿ, ಗಾಳಿ ಪಟ ಮಾಡಿ ಹಾರಿ ಬಿಡುತ್ತಾನಲ್ಲ!.  ಕಾಫಿ ಕಾಯಿಯನ್ನು ಹಾಗೆಯೇ ತಿಂದರೆ ರುಚಿ ಸಿಗುತ್ತದೆಯೇ?. ಅದನ್ನು ಒಣಗಿಸಿ, ಹದವಾಗಿ ಹುರಿದು ಸರಿಮಾತ್ರೆಯಲ್ಲಿ ಚಿಕೋರಿ ಸೇರಿಸಿ, ಸರಿಗಾತ್ರದ ಹುಡಿ ಮಾಡಿ, ಡಿಕಾಕ್ಷನ್ ಪಾತ್ರೆಯ ಉಗಿಯಲ್ಲಿ ಬೇಯಿಸಿ, ತಯಾರಾದ ಸಾಂದ್ರದ್ರವವನ್ನು ಬಿಂದು ಬಿಂದಾಗಿ ತೊಟ್ಟಿಕ್ಕಿಸಿ, ರಾತ್ರಿಯಿಡೀ ಸಂಗ್ರಹಿಸಿ, ಮೊದಲ ಸೂರ್ಯನ ಕಿರಣದ ಬೆಚ್ಚಗಿನ ಸಾನ್ನಿಧ್ಯದಲ್ಲಿ ಕುದಿಸಿದ ಹಾಲು ಸಕ್ಕರೆಗೆ ಬೆರೆಸಿ ಹಬೆಯಾಡುತ್ತಾ ಇರುವ ಕಾಫಿಯನ್ನು ಹೀರಿದರೆ ರುಚಿ!. ಸೃಜನಶೀಲತೆ ತಂದು ಕೊಡುವ ಅನನ್ಯ ಅವಕಾಶವೇ ಹಾಗೆ!. ಹೀಗೆ ಕವಿಕಂಡ ವಸ್ತು, ಕವಿತೆಯಾಗಿ ಬಿಂದುವಿನಿಂದ ಮೂರು ಆಯಾಮದ ಸುಂದರ ಬಿಂಬವಾಗಿ ಹೊರ ಬರಲು, ಕವಿಯ ಅನುಭವ ಮತ್ತು ಸೃಜನಶೀಲತೆ ಎರಡೂ ಶಿಲ್ಪಿಯ ಉಳಿಯಂತೆ ಕೆಲಸ ಮಾಡುತ್ತೆ. ಗೋಪಾಲಕೃಷ್ಣ ಅಡಿಗರ ಈ ಸಾಲುಗಳನ್ನು ನೋಡಿ. ” ಹೊಸನೆತ್ತರುಕ್ಕುಕ್ಕಿ ಆರಿಹೋಗುವ ಮುನ್ನ  ಹರೆಯದೀ ಮಾಂತ್ರಿಕನ ಮಾಟ ಮುಸುಳುವ ಮುನ್ನ  ಉತ್ಸಾಹಸಾಹಸದ ಉತ್ತುಂಗ ವೀಚಿಗಳ  ಈ ಕ್ಷುಬ್ಧ ಸಾಗರವು ಬತ್ತಿ ಹೋಗುವ ಮುನ್ನ  ಕಟ್ಟುವೆವು ನಾವು ಹೊಸ ನಾಡೊಂದನು” ಮಾಂತ್ರಿಕನ ಮಾಟದ ಚಿತ್ರಣ, ಉಕ್ಕುವ ಕಡಲಿನ ಚಿತ್ರಣ ಬಾಲ್ಯದ ಮನಸ್ಸಲ್ಲಿ ವರ್ಣ ಚಿತ್ರವಾಗಿ, ಈ ಕವಿತೆಯಲ್ಲಿ ಪ್ರತಿಮೆಗಳಾಗಿ ಹೊರಬಂದಿವೆ. ಕಡಲನ್ನು  ನೋಡದೇ ಬೆಳೆದ ಮನಸ್ಸಿಗೆ, ಈ ಕ್ಷುಬ್ಧ ಸಾಗರ ಅಂತ ಬರೆಯಲು ಬರಬಹುದೇ?. ” ಇರುಳಿರಳಳಿದು ದಿನದಿನ ಬೆಳಗೆ ಸುತ್ತಮುತ್ತಲೂ ಮೇಲಕೆ ಕೆಳಗೆ ಗಾವುದ ಗಾವುದ ಗಾವುದ ಮುಂದಕೆ ಎವೆ ತೆರೆದಿಕ್ಕುವ ಹೊತ್ತಿನ ಒಳಗೆ ಹಕ್ಕಿ ಹಾರುತಿದೆ ನೋಡಿದಿರಾ? ಕರಿನೆರೆ ಬಣ್ಣದ ಪುಚ್ಚಗಳುಂಟು ಬಿಳಿ-ಹೊಳೆ ಬಣ್ಣದ ಗರಿ-ಗರಿಯುಂಟು ಕೆನ್ನನ ಹೊನ್ನನ ಬಣ್ಣಬಣ್ಣಗಳ ರೆಕ್ಕೆಗಳೆರಡೂ ಪಕ್ಕದಲುಂಟು ಹಕ್ಕಿ ಹಾರುತಿದೆ ನೋಡಿದಿರಾ? ನೀಲಮೇಘಮಂಡಲ-ಸಮ ಬಣ್ಣ ! ಮುಗಿಲಿಗೆ ರೆಕ್ಕೆಗಳೊಡೆದವೊ ಅಣ್ಣಾ ! ಚಿಕ್ಕೆಯ ಮಾಲೆಯ ಸೆಕ್ಕಿಸಿಕೊಂಡು ಸೂರ್ಯ-ಚಂದ್ರರನು ಮಾಡಿದೆ ಕಣ್ಣಾ ಹಕ್ಕಿ ಹಾರುತಿದೆ ನೋಡಿದಿರಾ? “ ಹಾರುವ ಹಕ್ಕಿಯನ್ನು ತನ್ಮಯತೆಯಿಂದ ನೋಡುತ್ತಾ, ದಿನಗಳು,ರಾತ್ರಿಗಳು, ಕಳೆದಾಗ ಬೇಂದ್ರೆ ಅಜ್ಜನ‌ ಕಲ್ಪನಾ ವಿಲಾಸ ಹಕ್ಕಿ ಹಾರುತಿದೆ ನೋಡಿದಿರಾ ಕವನವಾಗುತ್ತೆ. ಹಕ್ಕಿ ಅಮೂರ್ತ ವರ್ಣಚಿತ್ರ ಬರೆಯುವ ಕುಂಚವಾಗುತ್ತೆ. ಹಕ್ಕಿಗಳನ್ನು ಕಾಣಸಿಗದ ಮರುಭೂಮಿ ಪ್ರದೇಶದಲ್ಲಿ ಬೇಂದ್ರೆ ಜೀವಿಸಿದ್ದರೆ,ಈ ಕವಿತೆ ಬರಲು ಅಸಾಧ್ಯ. ಆ ಸನ್ನಿವೇಶದಲ್ಲಿ ಅವರ ಸೃಜನಶೀಲ ಮನಸ್ಸು, ಮರುಭೂಮಿಯ ಬೇರೇನೋ ಅನುಭವದ ಕವಿತೆ ಚಿಲುಮಿಸುತ್ತಿತ್ತು. ” ನನ್ನವ್ವ ಫಲವತ್ತಾದ ಕಪ್ಪು ನೆಲ ಅಲ್ಲಿ ಹಸಿರು ಪತ್ರದ ಹರವು, ಬಿಳಿಯ ಹೂ ಹಬ್ಬ; ಸುಟ್ಟಷ್ಟು ಕಸುವು, ನೊಂದಷ್ಟು ಹೂ ಹಣ್ಣು ಮಕ್ಕಳೊದ್ದರೆ ಅವಳ ಅಂಗಾಂಗ ಪುಲಕ; ಹೊತ್ತ ಬುಟ್ಟಿಯ ಇಟ್ಟು ನರಳಿ ಎವೆ ಮುಚ್ಚಿದಳು ತೆರೆಯದಂತೆ” ಬಾಲ್ಯದಲ್ಲಿ ಅಮ್ಮನನ್ನು ಅತ್ಯಂತ ಸಮೀಪದಿಂದ ಕಂಡು ಪ್ರೀತಿಸಿದ ಬಾಲಕನಿಗೆ, ಸೃಷ್ಟಿಯ ಅಷ್ಟಲ್ಲೂ ಅಮ್ಮನನ್ನೇ ಕಾಣುವ ದೃಷ್ಟಿ ಪ್ರಾಪ್ತವಾಗುವ ವರ್ಣ ಚಿತ್ರದ ಮನಸ್ಸು ಲಂಕೇಶ್ ಅವರದ್ದು. ಅಲ್ಲವಾದರೆ ಇಂತಹ ಕವನ ಸಾಧ್ಯವೇ?. ********************************************* ಹುಟ್ಟಿದ್ದು, ಗಡಿನಾಡ ಜಿಲ್ಲೆ,ಕೇರಳದ ಕಾಸರಗೋಡು ಜಿಲ್ಲೆಯಲ್ಲಿ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ, “ಮೆಟೀರಿಯಲ್ಸ್ ಸೈನ್ಸ್” ನಲ್ಲಿ ಸ್ನಾತಕೋತ್ತರ ಪದವಿ, ಐ.ಐ.ಟಿ. ಮದರಾಸು, ವಿನಿಂದ ಭೌತಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದು, ಕಳೆದ ಎರಡು ದಶಕದಲ್ಲಿ, ಡಿ.ಆರ್.ಡಿ.ಒ. ಹೈದರಾಬಾದ್ ನಲ್ಲಿ, ವಿಜ್ಞಾನಿಯಾಗಿ ವೃತ್ತಿ. ಸಾಹಿತ್ಯ, ಓದು ಬರಹ, ಹಾಗೂ ಸಂಗೀತ ಹೃದಯಕ್ಕೆ,ಹತ್ತಿರ

Read Post »

ಕಾವ್ಯಯಾನ

ಶಬ್ದಗಳ ಸಂತೆಯಲ್ಲಿ.

ಕವಿತೆ ಶಬ್ದಗಳ ಸಂತೆಯಲ್ಲಿ. ವೀಣಾ ನಿರಂಜನ್ ಇಂದುಶಬ್ದಗಳು ಅರ್ಥದ ಒಜ್ಜೆ ತಾಳಲಾರದೆನನ್ನ ಮನೆಯ ಬಾಗಿಲಿಗೆ ಬಂದು ನಿಂತಿವೆನಾನೀಗಅವುಗಳಿಗೆ ಸರಳವಾದ ಉಡುಪು ತೊಡಿಸಿಮತ್ತೆ ಮರಳಿ ಕಳುಹಿಸಬೇಕಾಗಿ ಬಂದಿದೆ. ** ಸುಳ್ಳು ಸಂಚರಿಸುವಾಗಶಬ್ದಗಳ ಜಾತ್ರೆಯೇ ನೆರೆದಿರುತ್ತದೆಸತ್ಯ ಹೊರಗಡಿಯಿಡುವಾಗಮೌನದ ಮೆರವಣಿಗೆ ನಡೆಯುತ್ತದೆ ** ಶಬ್ದಗಳು ನಾಚಿದಾಗಮೌನ ಮಾತಾಡುತ್ತದೆಶಬ್ದಗಳು ಬಿಂಕ ತೋರಿದಾಗಮೌನ ನಾಚುತ್ತದೆ ** ಅಕ್ಷರಗಳ ಹೆತ್ತದಕ್ಕೆಪದಗಳಿಗೆ ಬೆರಗಾಗಿತ್ತುಪದಗಳ ಬವಣೆಗೆಅಕ್ಷರಗಳೇ ಸಾಕ್ಷಿಯಾಗಿದ್ದವು. **********************************

ಶಬ್ದಗಳ ಸಂತೆಯಲ್ಲಿ. Read Post »

You cannot copy content of this page

Scroll to Top