Day: December 9, 2020

ವಿಚಿತ್ರ ಆಸೆಗಳು…ಹೀಗೊಂದಷ್ಟು,

ಲಲಿತ ಪ್ರಬಂಧ ವಿಚಿತ್ರ  ಆಸೆಗಳು…ಹೀಗೊಂದಷ್ಟು, ಸಮತಾ ಆರ್. “ಕಕ್ ಕಕ್ ಕಕ್ ಕೊಕ್ಕೋಕ್ಕೊ” ಅಂತ ಒಂದು ಬಿಳಿ,ಬೂದು,ಕೆಂಪು ಬಣ್ಣದ ರೆಕ್ಕೆ ಪುಕ್ಕಗಳ,ಅಂಗೈ ಅಗಲದ ಜುಟ್ಟಿದ್ದ,ಕಮ್ಮಿ ಅಂದರೂ ನಾಲ್ಕೈದು ಕೆಜಿ ತೂಗುತ್ತಿದ್ದ ಗಿರಿರಾಜ ಹುಂಜ ವೊಂದು ಹೆಜ್ಜೆಯ ಮೇಲೆ ಹೆಜ್ಜೆ ಇಡುತ್ತಾ ಗತ್ತಿನಿಂದ ,ಅತ್ತಿಂದಿತ್ತ ಇತ್ತಿಂದತ್ತ ಓಡಾಡುತ್ತಿದ್ದಾಗ,ಸುತ್ತ ನಾಲ್ಕೈದು ಮಕ್ಕಳನ್ನು ಸಾಮಾಜಿಕ ಅಂತರದಲ್ಲಿ ಕೂರಿಸಿಕೊಂಡು ವಿದ್ಯಾಗಮ ಕಾರ್ಯಕ್ರಮದ ಅಡಿಯಲ್ಲಿ ಕಲಿಸುತ್ತಿದ್ದ ನನಗೆ ಎಷ್ಟು ಪ್ರಯತ್ನ ಪಟ್ಟರೂ ಆ ಹುಂಜನಿಂದ ಕಣ್ಣು ಕೀಳ ಲಾಗಲಿಲ್ಲ. ನನ್ನಿಂದ ಅನತಿ ದೂರದಲ್ಲಿ ಕುಳಿತಿದ್ದ […]

“ಅಂತರ್ಬಹಿರಂಗ”

ಕವಿತೆ “ಅಂತರ್ಬಹಿರಂಗ“ ಉದಯ ಧರ್ಮಸ್ಥಳ ನಿದ್ದೆಯ ಮುಂಜಾವಿನಲ್ಲಿಮುಂಜಾವಿನ ನಿದ್ದೆಯಲ್ಲಿಮಂಪರು ಭಾವಗಳೊಂದಷ್ಟುಮತಿಯ ತೋಪಿನಲ್ಲಿಗತಿ ಲಯದ ಸಾಲು ತುರುಕಿದ ಕಾಡತೂಸುಗಳಂತೆಶಬ್ದಗಳಲ್ಲದೆಮೌನ ಅಕ್ಷರದುಂಡೆಗಳು ! ಎತ್ತೆತ್ತಲೋ ಎಸೆದೆರಗುವಂತಾಗಿಧಮಿಲ್ ಧಮಿಲ್ ಧಮಿಲ್ಹೊರಗುಗುಳುವಾಗಹಿಡಿದುದಾಖಲಾಗಿಸುವಾಗಅರೆಬಿರಿದ ಕಣ್ಣೆಡೆಯಿಂದದೃಷ್ಟಿ ಕಾಣುವ ಪಂಕ್ತಿ ಪದಅದೇನೋ ಅಪರೂಪದಆಗೀಗ ಬರುವ ಅತಿಥಿಯಂತೆನಕ್ಕಣರಳಿಸಿ ಬೀಸಿದ ಓರೆನೋಟ ! ಧಿಂಗಣ‌ ಕುಣಿದ ರಂಗದಂಗಳದವೇಶಗಳಾಗಿ ಬಣ್ಣಬಣ್ಣ ಕಟ್ಟಿದೊಗಲೆ ದೊಗಲೆಯೊಳಗೆಅಂಡು ಬಿಗಿದ ಹಳೆಬಟ್ಟೆಯ ಹಿಂಡುಮೇಲೆ ಮಿರಮಿರನೆ ಝಗಮಗಿಸುವರಾಜನುಡುವ ರಂಗುರಂಗಿನ ಪೋಷಾಕಿನೊಳಗಿಂದಜೀವ ಲಕಲಕ ಲಕಾ ಭಾಷೆಯುಚ್ಛಾರ ! ಅದೇನೋ ಮೊರದಗಲತಡ್ಪೆ ಕಿರೀಟದ ಬಣ್ಣದ ವೇಶಅರಚಿ ಅರಚಿ ಬೆದರಿಸಿಅರ್ಥವಾಗದಿದ್ದರೂಅರ್ಥ ಮಾತಾಡುವಂತೆ ಕಂಡರೆಅದು […]

ದಿಕ್ಕಿಲ್ಲದ ಹಕ್ಕಿಯ ಮುಂದೆ ಹಿಂದೆ

ಕವಿತೆ ದಿಕ್ಕಿಲ್ಲದ ಹಕ್ಕಿಯ ಮುಂದೆ ಹಿಂದೆ ಪ್ರೇಮಶೇಖರ ಹೀಗೇಎತ್ತಲಿಂದಲೋ ಹಾರುತ್ತಾಇತ್ತ ಬಂದ ಗುರುತಿಲ್ಲದ ಹಕ್ಕಿ,ಇಲ್ಲೇ ಕೂತಿದೆ ಬೆಳಗಿನಿಂದಲೂ. ಲಲಿತೆ ಕಾಳು ಹಾಕಿದ್ದಾಳೆ,ಪುಟ್ಟಿ ನೀರಿಟ್ಟಿದ್ದಾಳೆ,ನಾನು ಕೋಲು ಹಿಡಿದುಪುಸ್ಸಿಯನ್ನು ಕಾಯುತ್ತಿದ್ದೇನೆ. ಪುಟ್ಟ ಹಕ್ಕಿಕಾಳು ತಿನ್ನುತ್ತಿಲ್ಲ,ನೀರು ಕುಡಿಯುತ್ತಿಲ್ಲ,ಬಾಯಿ ತೆರೆದು ಕೂಗುತ್ತಲೂ ಇಲ್ಲ. ಅಕ್ಕಪಕ್ಕದ ಮನೆಯವರು ಬಂದರು,ತಲೆಗೊಂದು ಮಾತು ಅಂದರು-ಅದು ಹಾರಿಬಂದ ದಿಕ್ಕುನೋಡಿದಿರಾ? ಮನೆಯೊಳಗೆ ನುಗ್ಗಿದಗಳಿಗೆ ಗಮನಿಸಿದಿರಾ? ಲಲಿತೆ ಅವರಿಗೆಲ್ಲ ಚಹ ಮಾಡುತ್ತಿದ್ದಾಳೆ,ಪುಟ್ಟಿ ವಾಷ್‍ಬೇಸಿನ್ ತೋರಿಸುತ್ತಿದ್ದಾಳೆ,ಪುಟ್ಟಹಕ್ಕಿ ಸುಮ್ಮನೆ ನೋಡುತ್ತಿದೆ,ನನ್ನ ಕೈಯಲ್ಲಿನ್ನೂ ಕೋಲು ಆಡುತ್ತಿದೆ.ಅವರು ಚಹಾ ಜತೆ ಹಕ್ಕಿಯನ್ನು ನೆಂಜಿಕೊಳ್ಳುತ್ತಿದ್ದಾರೆ. ಕಿವಿಚಿದರೆ ಕೂಸಿಗಾದರೂಒಂದೊತ್ತಿನ ಪಲ್ಯವೂ […]

ವಿರಾಗಿ ತ್ಯಾಗಿ

ಕವಿತೆ ವಿರಾಗಿ ತ್ಯಾಗಿ ಡಾಲಿ ಕೊಡನವಳ್ಳಿ ಚಕ್ರವರ್ತಿ ಭರತ…ನಿನಗಿಂತವಿರಾಗಿ ತ್ಯಾಗಿ ಬಾಹುಬಲಿಗೆಈ ಕನ್ನಡ ನೆಲ ತಲೆಬಾಗಿತಲೆ ಎತ್ತಿ ನೋಡಿದರೂ ನಿಲುಕದ ಪ್ರತಿಮೆಯನ್ನೇಕಡೆದು ನಿಲ್ಲಿಸಿದ್ದು ಯುದ್ದ ಗೆದ್ದು ಸೋತವನಏನಿಲ್ಲವೆಂದು ಹೊರಟವನಕೈಬೀಸಿ ಕರೆದುಗಿರಿನೆತ್ತಿಯ ಮೇಲಿರಿಸಿಮಸ್ತಕಕೆ ಬೆಳ್ಮುಗಿಲ ಮುಕುಟವಿರಿಸಿತಾರೆಗಳ ನೇವಣಿಯನೇರಿಸಿಅಂಬರಕೆ ಚುಂಬಿಸಿದವನನ್ನೇಕರುನಾಡುದೊರೆಯಾಗಿ ಸ್ವೀಕರಿಸಿತು ಮುರಿದು ಬೀಳುವ ಮಹಲಿನಹಂಗು ತೊರೆದವಗೆಗಿರಿಶಿಖರಗಳೇ ಕಂಬವಾಗಿಮೋಡಗಳೇ ಮೇಲ್ಛಾವಣಿಯಾಗಿನಾಡ ಗರ್ಭಗುಡಿಯಲ್ಲಿಸದ್ಗತಿ ಸಂದವನಪ್ರಾಪಂಚಿಕ ಸುಖ ಗೆದ್ದವನಪ್ರಕೃತಿಯ ಕಣಕಣವೂಪಾಲಿಸಿತಿಲ್ಲಿ ಬೆಳಗುಳ ನಂದನಪ್ರತಿದಿನ ನಿನ್ನದೇಪ್ರತೀಕ್ಷೆ ಪೃಥ್ವಿಗೆ.ಎಳೆಸಂತೆ ಕಂಗೊಳಿಸುವ ನಿನ್ನೀನವಿರು ಭಾವ ಹೊತ್ತ ಕುಸುಮ.ಗಂಧವತಿ ವಸುಧೆಯ ಗಂಧ ಘಮಹೊನ್ನ ಹಣತೆಯಲಿಜ್ಯೊತಿ ಬೆಳಗುವ ಶಶಿ ಸೂರ್ಯಆದಿ […]

ಸ್ವಾತಿಮುತ್ತು

ಕವಿತೆ ಸ್ವಾತಿಮುತ್ತು ಅಕ್ಷತಾ ಜಗದೀಶ. ಎನಿತು ಸುಂದರ ನೋಡುತಿಳಿನೀಲ ಮುಗಿಲು….ಮುತ್ತು ನೀಡುವಂತಿದೆಬಾನಂಚಿನ ಕಡಲು.. ಕಡಲಿಗು‌ ಮುಗಿಲಿಗುಇದೆಂತಹ ಬಂಧ..ಅರಿಯಲಾರದಂತಹಅಂತರಂಗದ ಅನುಬಂಧ.. ಕಾಲಗಳು ಉರುಳಿದರುಯುಗಗಳೇ ಕಳೆದರುಕಾಣುವುದು ತಿಳಿನೀಲಿ ಬಿಂಬಮಾಸಿಹೋಗದ ಆ ಪ್ರತಿಬಿಂಬ.. ಭಾವದೊಳಗೆ ಸನಿಹ ಕಡಲುವಾಸ್ತವದೊಳು ದೂರ ‌ಮುಗಿಲುಸತ್ಯದ ಒಳಗಿನ ಮಿಥ್ಯ..ನೆನಪಿಸುತಿದೆ‌ ಅಲೆಗಳು‌ ನಿತ್ಯ.. ಬಾನಿಂದ ಜಾರಿದೆ ಮಳೆ ಹನಿಕೇಳುತಿದೆ ಮರಳಿ ಕಡಲ ದನಿಮತ್ತೆ ಪ್ರೀತಿ ಮೂಡುವ ಹೊತ್ತುಕಡಲಾಳದಲಿ ಎಲ್ಲೆಲ್ಲೂ ‌ಸ್ವಾತಿಮುತ್ತು…. ****************************

ಗಜಲ್ ಸಾಹಿತ್ಯ ಮತ್ತು ಸವಾಲುಗಳು

ಲೇಖನ ಗಜಲ್ ಸಾಹಿತ್ಯ ಮತ್ತು ಸವಾಲುಗಳು ಡಾ. ಮಲ್ಲಿನಾಥ ಎಸ್.ತಳವಾರ ಪ್ರಕೃತಿಯನ್ನೊಮ್ಮೆ ಅವಲೋಕಿಸಿದಾಗ ‘ಮನುಷ್ಯ’ ನ ವಿಕಾಸ ದಿಗ್ಭ್ರಮೆಯನ್ನು ಮೂಡಿಸುತ್ತದೆ. ಅದೊಂದು ರೀತಿಯಲ್ಲಿ ಪವಾಡವೇ ಸರಿ ! ಎಲ್ಲ ಪ್ರಾಣಿ ಸಂಕುಲಗಳಿಂದ ಆತನು ವಿಭಿನ್ನವೆನಿಸಿದ್ದು ಮಾತ್ರ ಭಾಷೆಯ ಬಳಕೆಯಿಂದ. ತನ್ನ ಭಾವನೆಗಳನ್ನು ಸಶಕ್ತವಾಗಿ ಅಭಿವ್ಯಕ್ತಿಪಡಿಸಲು ‘ಭಾಷೆ’ ಯನ್ನು ಸಾಧನವನ್ನಾಗಿ ಮಾರ್ಪಡಿಸಿಕೊಂಡನು. ಈ ಭಾಷೆಯ ಉದಯದೊಂದಿಗೆ ಸಾಹಿತ್ಯವೂ ಉದಯವಾಯಿತು ಎನ್ನಬಹುದು. “ಭಾಷೆಯ ಉದಯವೆಂದರೆ ಸಾಹಿತ್ಯದ ಉದಯವೆ ಸರಿ” ( ಕನ್ನಡ ಸಾಹಿತ್ಯ ಚರಿತ್ರೆ, ಪು- ೦೧) ಎಂಬ ರಂ. […]

ಹರಿದ ಬಟ್ಟೆ….

ಹರಿದ ಬಟ್ಟೆ…. ಸುಜಾತ ಕಂದ್ರವಳ್ಳಿ ನನ್ನದು ಅರ್ಧಂಬರ್ಧ ಹರಿದ ಬಟ್ಟೆಆಧುನಿಕತೆಯನ್ನು ವೈಭವೀಕರಿಸಲೆಂದೇಹರಿದುಕೊಂಡ ಬಟ್ಟೆ….!ಹರಕಲು ಬಟ್ಟೆ ಎನ್ನಲಾರೆ….!ಆದರೂ ಹರಿದ ಬಟ್ಟೆ….! ಆಧುನಿಕತೆಯನ್ನು ತೋರಿಸುವ ಭರದಲ್ಲಿ, ಸಾಂಪ್ರಾದಾಯಿಕತೆಯನ್ನು ಮುಚ್ಚಿಡಲೆಂದೇ ಹರಿದುಕೊಂಡ ಬಟ್ಟೆ……!ಅರ್ಧ ಹೊಟ್ಟೆಗೆ ತಾಗುವಂತ ಹಸಿದ ಬಟ್ಟೆ…ಅಂಬಲಿ ಊಟ ನನ್ನದಲ್ಲವೇ ಅಲ್ಲ…!ಮಾಲ್ಟ್ ಎಂದು ಹೆಸರು ಬದಲಿಸಿಕೊಂಡು ಮೆರೆವ ಹರಿದ ಬಟ್ಟೆ.ನನ್ನದು ಅರ್ಧಂಬರ್ಧ ಹರಿದ ಬಟ್ಟೆ. ಅಮ್ಮನ ಹಳೆ ಸೀರೆಗೆ ಹೊಸ ಮೆರುಗು ಕೊಟ್ಟ ಬಟ್ಟೆ,ಅಪ್ಪನ ಲುಂಗಿಗೆ ಅಲಂಕಾರ ಕೊಟ್ಟ ಬಟ್ಟೆ…,ಲುಂಗಿಯನ್ನೆ ಅಂಗಿಯಾಗಿಸಿದ ಬಟ್ಟೆ…ಸೀರೆಯನ್ನೆ ಹೊದಿಕೆಯಾಗಿ ಸಿಂಗರಿಸಿಕೊಂಡ ಬಟ್ಟೆ,ಆದರೇನಂತೆ ನಾ ಹರಕಲು […]

ಕಾವ್ಯಯಾನ

ಬತ್ತಿದೆದೆ ರೇಷ್ಮಾ ಕಂದಕೂರ ಬತ್ತಿದೆದೆಯಲಿ ಬಿತ್ತದಿರು ಕನಸುಸುತ್ತಲೆಲ್ಲ ಕವಿದ ಕತ್ತಲೆಮುತ್ತಿದೆ ಭರವಸೆಯ ಬೆಳಕನುಕುತ್ತಾಗಿದೆ ಕಿತ್ತು ತಿನ್ನುವ ಹುಳುವಿನಂತೆ ಸತ್ಯದ ಹೊನಲಿಗೂ ಸಂಚಕಾರಮಿತ್ಯದ ಝೇಂಕಾರದ ಸಲಿಗೆಅಪತ್ಯದ ನಡೆ ನುಡಿಯುವವರೆ ಹೆಚ್ಚುನಿತ್ಯ ನೇಮವು ದೂರ ತೀರದಲಿ ತೇಲಿ ಕೋಪ ತಾಪದ ಆರ್ಭಟಕೂಪದಲಿ ಸೇರಿದೆ ಮಾನವೀಯತೆಊಹಾಪೋಹದ ಸುಳಿಗೆವಾಸ್ತವವ ಮರೆ ಮಾಚಿದೆ.

ನಿರುತ್ತರ

ಕವಿತೆ ನಿರುತ್ತರ ಮಧುಸೂದನ ಮದ್ದೂರು ನಿನ್ನ ತುದಿ ಬೆರಳುಎದೆ ತಾಕಲುನೂರು ನವಿರು ಪುಳಕ ನಿನ್ನ ಮುಂಗುರುಳುಗಾಳಿ ಗಂಧ ತೀಡಲುಸಾವಿರದ ಸಂಭ್ರಮದ ಘಮಲು ನಿನ್ನ ಕೆಂದುಟಿಅರಳಿ ನಾಚಲುಲಕ್ಷದ ಲಕ್ಷ್ಯವುಅಲಕ್ಷ್ಯವು ನಿನ್ನ ಕಟಿಕುಲುಕಿ ಬಳಕಲುಕೋಟ್ಯನುಕೋಟಿಅಪ್ಸರೆಯರಿಗೂ ಮತ್ಸರ ನಾ…..ನಿರುತ್ತರನಿರಂತರ****************************************

ದಂಡೆಯಲ್ಲಿ ಒಮ್ಮೆ ನಡೆದು..

ಕವಿತೆ ದಂಡೆಯಲ್ಲಿ ಒಮ್ಮೆ ನಡೆದು.. ಫಾಲ್ಗುಣ ಗೌಡ ಅಚವೆ ಕಾರವಾರದ ದಂಡೆಯೆಂದರೆ ನನಗೆಅದೆಂಥದೋ ಪ್ರೀತಿಸಂಜೆ ಮುಂಜಾವೆನ್ನದೇಸದಾ ಗಿಜುಗುಡುವ ಜನರುಈ ದಂಡೆಯಲ್ಲಿ ನಡೆದುಅದರ ಜೊತೆ ಒಬ್ಬೊಬ್ಬರೇಸಂಭಾಷಿಸಿಸುತ್ತಾರೆ ಮತ್ತುಹಗುರಾಗುತ್ತಾರೆ. ದಿಗಂತದಿಂದೋಡಿ ಬರುವ ಅಲೆಗಳುನಡೆವ ಪಾದಗಳ ತಂಪುಗೊಳಿಸಿಎಂತೆಂಥದೋ ಒತ್ತಡಗಳಿಂದ ವ್ಯಗ್ರವಾದವರಿಗೆಸಾಂತ್ವನ ನೀಡುತ್ತವೆ. ದಂಡೆಯಲ್ಲಿ ಸಿಗುವ ಪರಿಚಿತ ಕೊಂಕಣಿಗರು‘ ನಂಗೆ ಅಷ್ಟಾಗಿ ಕನ್ನಡ್ ಬರುದಿಲ್ಲ ಹಾಂ’ಎಂದು ಕನ್ನಡದಲ್ಲಿಯೇ ಮಾತಿಗಿಳಿಯುತ್ತಾರೆಕನ್ನಡ ದ್ವೇಶಿಸದ ಆ ಕೊಂಕಣಿಗರ ಕಂಡರೆ ನನಗೆ ಎಲ್ಲಿಲ್ಲದ ಪ್ರೀತಿ.ಯಾಕೆಂದರೆ, ಯಾರ ಸುದ್ದಿಗೂ ಹೋಗದ ಅವರು‘ತಾವಾಯಿತು ತಮ್ಮ ಕೆಲಸಾಯಿತು’ ಅಷ್ಟೇ! ನೀವು ಎಲ್ಲಿಂದಲೇ ಬಂದು […]

Back To Top