ಕಥೆ ಬದುಕು ಬಂದಂತೆ ಅನಸೂಯ ಎಂ.ಆರ್. ಲತ ಮನೆಗೆ ಬಂದಾಗ ಎಂದಿನಂತೆ ಸುಶೀಲಮ್ಮನು ಬಾಗಿಲು ತೆರೆಯದೆ ಮನು ಬಂದಾಗ “ಅಜ್ಜಿ ಎಲ್ಲೊ” ಎಂದಳು. ” ಅಜ್ಜಿ ಮಲಗಿದಾರಮ್ಮ” ಎಂದ ಕೂಡಲೇ ವ್ಯಾನಿಟಿ ಬ್ಯಾಗ್ ಮತ್ತು ಲಂಚ್ ಬಾಕ್ಸ್ ನ್ನು ಟೇಬಲ್ ಮೇಲಿಟ್ಟು “ಅತ್ತೆ” ಎನ್ನುತ್ತಾ ರೂಂ ನೊಳಗೆ ಹೋದಳು ಮುಸುಕು ಹಾಕಿ ಮಲಗಿದ್ದ ಸುಶೀಲಮ್ಮ ಮುಸುಕನ್ನು ತೆಗೆಯುತ್ತಾ “ಯಾಕೋ, ಜ್ವರ ಬಂದಂತಾಗಿದೆ ಕಣಮ್ಮ” ಎಂದರು. ಅವರ ಹಣೆಯ ಮೇಲೆ ಕೈಯಿಟ್ಟು ನೋಡಿದ ಲತಾ ” ಬಹಳ ಜ್ವರ ಇದೆ. ನಡೀರಿ ಡಾಕ್ಟರ್ ಹತ್ರ ಹೋಗಿ ಬರೋಣ ಮೊದ್ಲು ಬಿಸಿ ಬಿಸಿ ಕಾಫಿ ಕುಡೀರಿ ಮಾಡ್ಕಂಡು ಬರ್ತಿನಿ ” ಎನ್ನತ್ತಾ ಅಡುಗೆ ಮನೆಗೆ ಹೋದಳು. ಮಗನಿಗೆ ಹಾರ್ಲಿಕ್ಸ್ ಕೊಟ್ಟು ತಮಗಿಬ್ಬರಿಗೂ ಕಾಫಿ ಮಾಡಿಕೊಂಡು ಬಂದು ಅತ್ತೆಗೂ ಕೊಟ್ಟು ತಾನು ಅಲ್ಲೆ ಕುಳಿತು ಕುಡಿದಳು ನಂತರ ಮುಖ ತೊಳೆದು ಫ್ರೆಶ್ ಆದ ನಂತರ ಮಗನಿಗೆ ಮನೆಯಲ್ಲಿರಲು ಹೇಳಿ ಆಟೋದಲ್ಲಿ ಅತ್ತೆಯನ್ನು ಕರೆದು ಕೊಂಡು ಕ್ಲಿನಿಕ್ ಗೆ ಹೊರಟಳು.ಪರಿಚಯದ ಡಾಕ್ಟರ್ ಗೆ ತೋರಿಸಿ ಮಾತ್ರೆ, ಹಣ್ಣುಗಳನ್ನು ತೆಗೆದುಕೊಂಡು ಮನೆಗೆ ಬಂದಳು.ಅವರನ್ನು ಮಲಗಿಕೊಳ್ಳಲು ಹೇಳಿ ಅಡುಗೆಯ ಕೆಲ್ಸವನ್ನು ಮುಗಿಸಿ ಅತ್ತೆಗೆ ರವೆಗಂಜಿ ಮಾಡಿ ಕುಡಿಯಲು ಕೊಟ್ಟು ಮಾತ್ರೆಗಳನ್ನು ನುಂಗಿಸಿ ಆರಾಮಾಗಿ ಮಲಗಲು ಹೇಳಿ ಮಗನ ಓದಿಸಿ ನಂತರ ಇಬ್ಬರೂ ಊಟ ಮುಗಿಸಿ ಮಲಗಿದರು.ಬೆಳಿಗ್ಗೆ ಅತ್ತೆಯ ಜ್ವರ ಕಡಿಮೆಯಾಗಿದ್ದರೂ ಸಹ ಶಾಲೆಗೆ ರಜೆ ಹಾಕಿದಳು.ಮನುವನ್ನು ಶಾಲೆಗೆ ಕಳಿಸಿ ಅತ್ತೆ ತಿಂಡಿ ತಿಂದ ನಂತರ ಮಾತ್ರೆ ಕೊಟ್ಟು ಮಲಗಿಸಿದಳು ಕೆಲಸವೆಲ್ಲ ಮುಗಿದ ಮೇಲೆ ಬೆಂಗಳೂರಿನಲ್ಲಿದ್ದ ವಿನುತಳ ಜೊತೆ ಮಾತಾಡಿ ಅತ್ತೆಗೆ ಜ್ವರ ಬಂದಿರುವ ವಿಷಯವನ್ನು ತಿಳಿಸಿದಳು ಅತ್ತೆ ಇನ್ನೂ ನಿದ್ರೆ ಮಾಡುವುದನ್ನು ನೋಡಿ ಪಡಸಾಲೆಗೆ ಬಂದು ಕುಳಿತಳು. ಸುಶೀಲಮ್ಮ ಲತಾಳಿಗೆ ತನ್ನ ಗಂಡನ ತಾಯಿ ಮಾತ್ರವಲ್ಲ ಸೋದರತ್ತೆಯೂ ಸಹ ಆಗಿದ್ದರು.ಲತಾಳ ತಂದೆ ವೆಂಕಟೇಶ್ ಮೂರ್ತಿಯವರ ಅಕ್ಕನೇ ಸುಶೀಲಮ್ಮ.ಸುಶೀಲಮ್ಮತಮ್ಮ ಮೊದಲನೆಯ ಮಗ ರಾಜೇಶನಿಗೆ ತಮ್ಮನ ಮಗಳಾದ ಲತಳನ್ನು ತಂದು ಕೊಂಡಿದ್ದರು ಸುಶೀಲಮ್ಮಲತಳಿಗೆ ತಾಯಿಯೇ ಆಗಿದ್ದರು ಲತ B.SC.ಪದವೀಧರೆಯಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕನಾಗಿದ್ದ ರಾಜೇಶನಿಗೆ ಲತಾ ತಕ್ಕ ಜೋಡಿಯಾಗಿದ್ದಳು. ರಾಜೇಶನ ತಮ್ಮ ಸುರೇಶ ಖಾಸಗಿ ಕಂಪೆನಿಯೊಂದರಲ್ಲಿ ಸಾಫ್ಟ್ ವೇರ್ ಇಂಜಿನೀಯರ್ ಆಗಿ ಬೆಂಗಳೂರಿನಲ್ಲಿದ್ದನು. ಸುರೇಶ ತನ್ನ ಸಹೋದ್ಯೋಗಿಯೆ ಆದ ವಿನುತಳನ್ನು ಪ್ರೀತಿಸಿ ಮದುವೆಯಾಗಿದ್ದ. ಪತಿಯ ನಿಧನದ ನಂತರ ಪ್ರೀತಿಯಿಂದ ನೋಡಿಕೊಳ್ಳುವ ಇಬ್ಬರು ಮಕ್ಕಳ ಮನೆಯಲ್ಲಿ ಮೊಮ್ಮಕ್ಕಳೊಡನೆ ಕಾಲ ಕಳೆಯತ್ತ ನೆಮ್ಮದಿಯಿಂದಿದ್ದರು.ಎಲ್ಲವು ಸರಿಯಾಗಿದ್ದ ಕಾಲದಲ್ಲೇ ಹಿರಿ ಮಗ ರಾಜೇಶನ ಸಾವು ಬರಸಿಡಿಲಿನಂತೆ ಎರಗಿತ್ತು. ಕಾಲೇಜ್ ಮುಗಿಸಿಕೊಂಡು ಬೈಕ್ ನಲ್ಲಿ ಬರುತ್ತಿರುವಾಗ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮರಣವನ್ನಪ್ಪಿದ್ದನು.ಆಗ ಮನು ನಾಲ್ಕನೆ ತರಗತಿಯಲ್ಲಿ ಓದುತ್ತಿದ್ದ. ಕಂಗಾಲಾಗಿದ್ದ ಲತ ಮಾನಸಿಕವಾಗಿ ಧೈರ್ಯವನ್ನು ಕಳೆದುಕೊಂಡಿದ್ದಳು. ಇಂಥ ಸಮಯದಲ್ಲಿ ಅವಳಿಗೆ ಒತ್ತಾಸೆಯಾಗಿ ನಿಂತವರು ಅವಳ ತಮ್ಮ ವಿಜಯ್ ಹಾಗು ಮೈದುನ ಸುರೇಶ.ಲತಳ ತಂದೆ ತಾಯಿಯರಂತೂ ಮಗಳ ಪರಿಸ್ಥಿತಿಯನ್ನು ಕಂಡು ಜರ್ಜರಿತವಾಗಿ ಬಿಟ್ಟಿದ್ದರು. ವರ್ಷ ಕಳೆಯುವಷ್ಟರಲ್ಲಿಯೆ ಅವಳಿಗೆ ಅನುಕಂಪ ಆಧಾರದ ಮೇಲೆ ಅದೇ ಊರಿನ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢ ಶಾಲಾ ವಿಭಾಗಕ್ಕೆ ಪ್ರಥಮ ದರ್ಜೆ ಸಹಾಯಕಿಯ ಕೆಲಸ ಸಿಕ್ಕಿತು.ಹೊಸ ಪರಿಸರಕ್ಕೆ ಹೊಂದಿಕೊಂಡು ಗಮನವನ್ನು ಕೊಡುವ ಅನಿವಾರ್ಯತೆಯಲ್ಲೇ ರಾಜೇಶನ ಮರಣದ ದು:ಖವನ್ನು ಮರೆಯಲೆತ್ನಿಸಿದಳು. ಸುಶೀಲಮ್ಮ ಎಲ್ಲೂ ಹೋಗದೆ ಸೊಸೆ ಹಾಗೂ ಮೊಮ್ಮಗನ ಜೊತೆಯಲ್ಲಿರಲು ನಿರ್ಧಾರ ಮಾಡಿ ಅವರಿಗೆ ಆಸರೆಯಾಗಿದ್ದರು. ಎರಡನೆ ಮಗ ಸೊಸೆ ಅವರೇ ಇಲ್ಲಿಗೆ ಬಂದು ಹೋಗುವ ರೂಢಿ ಮಾಡಿಕೊಂಡರು. ಮಾರನೆ ದಿನ ಶಾಲೆಗೆ ಹೊರಡುವ ತಯಾರಿಯಲ್ಲಿದ್ದಾಗ ಅವಳ ಮೊಬೈಲ್ ಗೆ ರಂಜಿತಾಳ ಕರೆ.”ಇವತ್ತು ಬರ್ತಿರಾ ಸ್ಕೂಲ್ ಗೆ” “ಬರ್ತೀನಿ ರಂಜಿತ, ಅತ್ತೆ ಹುಷಾರಾಗಿದಾರೆ” ಎಂದು ಹೇಳಿ ಫೋನಿಟ್ಟಳು. ಶಾಲೆಗೆ ಹೊರಟು ನಿಂತು “ಅತ್ತೆ,ಬರಲಾ”. ಬಾಗಿಲು ಹಾಕಿಕೊಳ್ಳಲು ಬಂದ ಅತ್ತೆಗೆ “ಚೆನ್ನಾಗಿ ರೆಸ್ಟ್ ಮಾಡಿ”ಎಂದು ಹೊರಟಳು. ದಾರಿಯಲ್ಲಿ ಸಿಕ್ಕ ರಂಜಿತಳೊಡನೆ ಮಾತನಾಡುತ್ತ ಶಾಲೆ ತಲುಪಿದರು ಗಣಿತ ಶಿಕ್ಷಕಿ ರಂಜಿತಾಳ ಮನೆ ತಾನು ಶಾಲೆಗೆ ಹೋಗುವ ದಾರಿಯಲ್ಲೆ ಇದ್ದ ಕಾರಣ ಇಬ್ಬರಲ್ಲೂ ಆತ್ಮೀಯತೆಯಿತ್ತು ರಂಜಿತಾಳಿಗೆ ಇನ್ನು ಮದುವೆಯಾಗಿರಲಿಲ್ಲ. ಸಾದಾಸೀದ ಹುಡುಗಿಯಾಗಿದ್ದ ರಂಜಿತಾ ಲತಾಳೊಂದಿಗೆ ಮುಕ್ತವಾಗಿ ಎಲ್ಲವನ್ನು ಹೇಳಿಕೊಳ್ಳುತ್ತಿದ್ದಳು. ಅವಳಿಗೆ ಒಬ್ಬ ತಂಗಿ ಹಾಗೂ ಒಬ್ಬ ತಮ್ಮ ಇದ್ದಾರೆ. ಅವರ ತಂದೆಯು ಶಿಕ್ಷಣ ಇಲಾಖೆಯಲ್ಲೆ ಕೆಲಸ ಮಾಡುತ್ತಿದ್ದರು. ಬೇಜವಾಬ್ಧಾರಿ ಮನುಷ್ಯನೆಂದು ಇಸ್ಪೀಟಾಡುವ ಚಟವಿದ್ದು ಬಹುಪಾಲು ಹಣವನ್ನೆಲ್ಲಾ ಕಳೆಯುತ್ತಾರೆಂದು ಅವಳಿಗೆ ಅವರಪ್ಪನ ಮೇಲೆ ಬೇಸರವಿತ್ತು.” ಸಾಯಂಕಾಲ ನೀವು ನಮ್ಮನೆಗೆ ಬರಬೇಕು. ನಮ್ಮಮ್ಮನಿಗೆ ಹೇಳಿ ಬಂದಿದ್ದೇನೆ. ನಿಮ್ಮನ್ನು ಕರ್ಕೊಂಡು ಬರ್ತೀನಿ ಅಂತ”ಎಂದುರಂಜಿತಾ ಹೇಳಿದಳು “ಏನಿವತ್ತುಮನೆಯಲ್ಲಿ ಸ್ಪೆಷಲ್ ರಂಜಿತ” “ಇವತ್ತು ನನ್ನ ತಮ್ಮನ ಹುಟ್ಟಿದ ಹಬ್ಬ.ಅಮ್ಮ ಸ್ಟೀಟ್ ಮಾಡಿರ್ತಾಳೆ. ನೀವು ಬರ್ತಿದೀರಾ ಅಷ್ಟೆ” PUC ಓದುತ್ತಿದ್ದ ತಮ್ಮನನ್ನು ಕಂಡರೆ ಅವಳಿಗೆ ಬಲು ಪ್ರೀತಿ.ಇಲ್ಲವೆನ್ನಲು ಮನಸ್ಸಾಗದೆ ಸರಿ ಎಂದಳು. ಮಧ್ಯಾಹ್ನ ಲಂಚ್ ಬ್ರೇಕ್ ನಲ್ಲಿ ಶಾಲೆಯ ಬಳಿಯಲ್ಲಿದ್ದ ಬುಕ್ ಸ್ಟಾಲ್ಗೆ ಹೋಗಿ ಇಂಗ್ಲೀಷ್ ಡಿಕ್ಸ್ ಷ್ಣರಿ ಕೊಂಡು ಕೊಂಡಳು. ಅವರ ಮನೆಗೆ ಹೋಗುತ್ತಿರುವುದು ಎರಡನೆ ಬಾರಿ. ಸಂಜೆ ರಂಜಿತಾಳೊಡನೆ ಅವರ ಮನೆಗೆ ಹೋದಾಗ ಅವರ ತಾಯಿ ಊಟ ಮಾಡಲು ಬಲವಂತ ಮಾಡಿದರು.ಊಟ ಬೇಡವೆಂದಾಗ ಆಗ ತಾನೆ ಮಾಡಿದ ಬಿಸಿ ಬಿಸಿ ಹೋಳಿಗೆ,ವಾಂಗೀಬಾತ್ ಮತ್ತು ಕೋಸಂಬರಿ ತಟ್ಟೆಯಲ್ಲಿ ಹಾಕಿಕೊಂಡು ಲತ ಹಾಗೂ ರಂಜಿತ ಇಬ್ಬರಿಗು ಕೊಟ್ಟರು. ಮಾತಾಡುತ್ತಾ ತಿಂದಾದ ಮೇಲೆ ರಂಜಿತ ತಟ್ಟೆ ಒಳಗಿಡಲು ಹೋದಳು.ಡಿಕ್ಸ್ ಷ್ಣರಿ ಬುಕ್ ನ್ನು ತೆಗೆಯಲು ಎಡಭಾಗದಲ್ಲಿದ್ದ ಬ್ಯಾಗ್ ಕಡೆ ತಿರುಗಲು ರಂಜಿತಳ ತಂದೆ ಎಡಭಾಗದ ರೂಂ ನಲ್ಲಿ ನಿಂತುಕೊಂಡು ತನ್ನತ್ತಲೇ ವಿಕೃತ ದೃಷ್ಟಿಯಿಂದ ನೋಡುತ್ತಿರುವುದನ್ನು ಕಂಡು ಬೆಚ್ಚಿಬಿದ್ದಳು ಮೈಯೆಲ್ಲ ಭಯದಿಂದ ನಡುಗಿತು.ತಕ್ಷಣ ಎದ್ದು ರಂಜಿತಾ ಎಂದು ಕೂಗುತ್ತ ಅಡುಗೆ ಮನೆ ಕಡೆ ನೆಡೆದಳು ಹೊರಗಡೆ ಬಂದ ರಂಜಿತಾಳ ಕೈಗೆ ಬುಕ್ ಕೊಡುತ್ತ “ನಿನ್ನ ತಮ್ಮನಿಗೆ ಕೊಡು ಲೇಟಾಗುತ್ತೆ ಹೋಗ್ತೀನಿ”ಎನ್ನುತ್ತ ಹೊರಟು ರೂಂ ಕಡೆ ನೋಡಿದರೆ ಇನ್ನೂ ಅಲ್ಲೇ ನಿಂತಿದ್ದಾನೆ.”ಯಾಕಿಷ್ಟೂ ಬೇಗ ಹೊರಟ್ರಿ” ರಂಜಿತಾಳ ತಾಯಿ ಹೇಳಿದಾಗ”ನಮ್ಮತ್ತೆ ಯವರಿಗೆ ಜ್ವರ ಬಂದಿತ್ತಲ್ವ ಬೇಗ ಹೋಗ್ಬೇಕು” ಎನ್ನುತ್ತಲೆ ಮನೆಯಿಂದ ಹೊರ ಬಂದು ಅಲ್ಲೇ ಹೋಗುತ್ತಿದ್ದ ಆಟೋ ನಿಲ್ಲಿಸಿ ಕುಳಿತು ಬೆವರಿದ ಮುಖವನ್ನು ಒರೆಸಿಕೊಂಡಳು. ಬಾಗಿಲು ತೆಗೆದ ಅತ್ತೆ ಇವಳ ಮುಖವನ್ನು ನೋಡುತ್ತಾ “ಯಾಕಮ್ಮ ಒಂಥರಾ ಇದೀಯಾ”ಎಂದರು.”ತುಂಬಾನೆ ತಲೆ ನೋಯ್ತಿದೆ ಅತ್ತೆ” ಮುಖ ತೊಳೆದು ಬರಲು “ನಿಂಗು ಜ್ವರ ಬಂತ ಕಾಫಿ ಕುಡಿದು ಮಲಗಿಬಿಡು ನನಗೂ ಎರಡು ದಿನದಿಂದ ಒಂದೆ ಸಮನಾಗಿ ಮಲಗಿ ಸಾಕಾಗಿದೆ ನಾನೇ ಅಡುಗೆ ಮಾಡ್ತೀನಿ”ಎಂದರು.ಆಗ ಲತ ತಾನು ರಂಜಿತಳ ಮನೆಯಲ್ಲಿ ತಿಂದಿದ್ದನ್ನು ಹೇಳಿ ತನಗೆ ರಾತ್ರಿಯ ಊಟ ಬೇಡ ಎಂದು ರೂಂ ಗೆ ಹೋಗಿ ಮಲಗಿ ಬಿಟ್ಟಳು. ಆಟ ಆಡಿಕೊಂಡು ಬಂದ ಮಗನಿಗೆ “ತಲೆ ನೋಯ್ತಿದೆ ಕಣೋ ಇವತ್ತು ನೀನೇ ಓದ್ಕೊ”ಎಂದು ಮುಸುಕು ಹಾಕಿ ಮಲಗಿ ಬಿಟ್ಟಳು. ಆ ವಿಕೃತ ನೋಟ ಕಣ್ಣೆದುರು ಬಂದು ನಿಂತಾಗ ಮುಳ್ಳಿಂದ ಚುಚ್ಚಿದ ಅನುಭವ ಅವನೇಕೆ ನನ್ನನ್ನು ಹಾಗೇ ನೋಡಿದ ? ಎಷ್ಟು ಹೊತ್ನಿಂದ ನೋಡುತ್ತಿದ್ದನೊ? ನಾನು ರಂಜಿತ ಇಬ್ಬರು ಹೋಳಿಗೆ ತಿನ್ನುತ್ತಿರುವಾಗ ಎಡಭಾಗದ ರೂಂ ರಂಜಿತಳ ಬೆನ್ನಿನ ಕಡೆಯಿತ್ತೆಂಬುದು ನೆನಪಾಯ್ತು. ಹಾಗಾದ್ರೆ ಅಲ್ಲೆ ನಿಂತು ತುಂಬ ಹೊತ್ನಿಂದ ನೋಡುತ್ತಿದ್ದನೆ ನನಗೇಕೆ ಅದರ ಅರಿವಾಗಲಿಲ್ಲ? ಅಥವಾ ಬಾಗಿಲ ಹಿಂದೆ ನಿಂತು ನೋಡುತ್ತಿದ್ದು ರಂಜಿತ ತಟ್ಟೆ ಒಳಗಿಡಲು ಹೋದ ಕ್ಷಣದಲ್ಲಿ ನನಗೆ ಕಾಣುವಂತೆ ನಿಂತು ಕೊಂಡನೆ? ಆ ರೀತಿ ಕೆಟ್ಟದಾಗಿ ನೋಡಲು ಕಾರಣವೇನು?ವಿಧವೆಯಾದವಳು ಗಂಡನಿಲ್ಲದ ಬದುಕೆಂದೇ?ಅಷ್ಟೊಂದು ತಾತ್ಸಾರವಾಯ್ತೆ ನನ್ನ ಬಾಳು? ಎಂಬ ಭಾವನೆಯಿಂದ ದು:ಖ ಒತ್ತರಿಸಿತು ರಾಜೇಶನ ನೆನಪಿನಿಂದ ಅಳುವೇ ಬಂದಂತಾಗಿ ಪಕ್ಕದಲ್ಲೆ ಓದಿಕೊಳ್ಳುತ್ತಿದ್ದ ಮಗನಿಗೆ ತಾನು ಅಳುತ್ತಿರುವುದು ಕೇಳ ಬಾರದೆಂದು ಮೌನವಾಗಿ ತುಟಿ ಕಚ್ಚಿಕೊಂಡೆ ಸಹಿಸಿದಳು ಬಿಗಿಮಾಡಿಕೊಂಡ ಮುಸುಕಿನೊಳಗಿನ ಕತ್ತಲಲ್ಲಿ ಅವಳ ಕಣ್ಣೀರು ಕರಗುತ್ತಿತ್ತು. ಬೆಳಕು ಬೇಡವೆನಿಸಿ”ಮನು,ಲೈಟ್ ಆರಿಸಿ ಅಜ್ಜಿ ರೂಂಗೆ ಹೋಗಿ ಓದಿಕೋ”ಎಂದಳು.ಕತ್ತಲು ಆಪ್ತವೆನಿಸಿತು.ತನ್ನನ್ನು ಬೆಚ್ಚಿ ಬೀಳಿಸಿದ ಅವನ ನೋಟ ಇರಿದಂತಾಗುತ್ತಿತ್ತು.ಯಾವತ್ತೂ ಯಾರೂ ಅಂತಹ ಕೆಟ್ಟ ಭಾವನೆಯಿಂದ ತನ್ನನ್ನು ನೋಡಿಲ್ಲ.ಇಂದೇಕೆ ಹೀಗಾಯ್ತು ನನ್ನ ನಡೆನುಡಿಗಳಲ್ಲೆ ಏನಾದರು ದೋಷವಿದೆಯೆ ಎಂಬ ಭಾವನೆ ಬಂದರೂ ಅದಕ್ಕೆಡೆ ಮಾಡಿಕೊಡದಂತೆ ಅವಳು ತಾನಾಯ್ತು ತನ್ನ ಕೆಲಸವಾಯ್ತು ಎಂಬಂತಿರುವಾಗ ಅದು ಸಾಧ್ಯವೇ ಇಲ್ಲ ಎಂದವಳ ಮನಸ್ಸಿಗನಿಸಿದಾಗ ಕೊಂಚವೆ ನಿರಾಳವಾಯಿತು. ಈ ಯೋಚನೆಯಲ್ಲೆ ಯಾವಾಗ ನಿದ್ರೆ ಬಂತೆಂಬುದೆ ಗೊತ್ತಾಗಿಲ್ಲ.ಬೆಳಿಗ್ಗೆ ಎಚ್ಚರವಾಗಿ ನೋಡಲು ಮನು ಆಗಲೇ ಶಾಲೆಗೆ ಹೊರಡುತ್ತಿದ್ದ. ಅವನು ಶಾಲೆಗೆ ಹೋದ ಮೇಲೆ ಪ್ರಭಾರೆ ಮುಖ್ಯೋಪಧ್ಯಾಯಿನಿಯಾದ ಸುನಂದ ಮೇಡಂವರಿಗೆ ತಾನು ಈ ದಿನ ರಜೆ ಹಾಕುತ್ತೇನೆ ಎಂದು ತಿಳಿಸಿ, ಸ್ನಾನವಾದ ಮೇಲೆ ದೇವರ ಪೂಜೆಯನ್ನು ಮಾಡಿ ಅತ್ತೆಯ ಜೊತೆ ತಿಂಡಿಯನ್ನು ತಿಂದಳು. ಅತ್ತೆಯು ಟಿ.ವಿ ನೋಡುತ್ತಾ ಕೂತಾಗ ತಾನೆ ಆಡುಗೆ ಮಾಡಿದಳು. ಆಡುಗೆ ಮಾಡುತ್ತ ನೆನ್ನೆ ನಡೆದುದೆಲ್ಲವನ್ನೂ ಅತ್ತೆಗೆ ಹೇಳಿ ನಿರಾಳವಾಗುವ ಯೋಚನೆ ಬಂದ ಬೆನ್ನಲ್ಲೇ ಅತ್ತೆ ತಪ್ಪಾಗಿ ತಿಳಿದರೆ ಎಂಬ ಭಾವನೆಯೂ ಬಂದರೂ ಅತ್ತೆ ಹಾಗೆಲ್ಲಾ ತಿಳಿಯಲಾರರೆಂಬ ನಂಬಿಕೆ ಮಾತ್ರ ಬಲವಾಗಿತ್ತು ಕೆಲಸ ಮುಗಿಸಿ ಬಂದು ಅತ್ತೆ ಪಕ್ಕದಲ್ಲಿ ಕುಳಿತಳು.ಲತ ಅತ್ತೆಯ ತೊಡೆ ಮೇಲೆ ತಲೆಯಿಟ್ಟು ಅಳ ತೊಡಗಿದಳು “ಏನಾಯ್ತೆ ಲತಾ”ಅವಳ ತಲೆ ಸವರುತ್ತ ಕಣ್ಣೀರು ಹಾಕಿದರು.ಗಂಡನ ನೆನಸಿಕೊಂಡು ದು:ಖ ಪಡುತ್ತಿರಬಹುದೆಂದು ಭಾವಿಸುತ್ತ “ಲತ ಸಮಾಧಾನ ಮಾಡ್ಕೊಳೆ ನಮ್ಮ ಪಾಲಿಗೆ ಬಂದಿದ್ದು ಅನುಭವಿಸ್ಲೆ ಬೇಕು. ಮಗನ ಮುಖ ನೋಡ್ಕಂಡು ನಮ್ಮ ಕಷ್ಟಗಳನ್ನು ಮರೀಬೇಕು.”ಎನ್ನುತ್ತಲೆ ಅವಳ ತೋಳನ್ನೆತ್ತಿ ಸೋಫಾದ ಮೇಲೆ ಪಕ್ಕಕ್ಕೆ ಕೂಡ್ರಿಸಿಕೊಂಡರು. ಪಕ್ಕದಲ್ಲಿ ಕೂತ ಲತ ಕಣ್ಣೊರೆಸಿಕೊಂಡು”ಅತ್ತೆ”ಎನ್ನುತ್ತ ಅವರ ಕೈ ಹಿಡಿದಳು.”ಯಾಕೆ, ಏನಾಯ್ತು ಹೇಳಮ್ಮ ಲತ” ಎಂದರು ಆಗ ಲತ ಹಿಂದಿನ ದಿನದ ಘಟನೆಯನ್ನು ಹೇಳಿಕೊಂಡು ನಿರಾಳವಾದಳು. “ಮದ್ವೆ ವಯಸ್ಸಿನ ಮಗಳಿದಾಳೆ ಅಂತ ಹೇಳ್ತಿಯ ಅವನಿಗೇನು ಬಂತೇ ಕೇಡುಗಾಲ. ಅದಕ್ಯಾಕೆ ಕೊರಗ್ತೀಯಾ ಇದ್ರಲ್ಲಿ ನಿನ್ನ ತಪ್ಪೇನೂ ಇಲ್ವಲ್ಲ ಇನ್ಮೇಲೆ ಅವರ ಮನೆಗೆ ಹೋಗಲೇ ಬೇಡ ಇದನ್ನೆಲ್ಲ ಯಾರತ್ರನೂ ಹೇಳ್ಬೇಡ .ಇಂಥದಕ್ಕೆಲ್ಲ ಹೆದರಿಕೊಂಡ್ರೆ ಮುಗಿತು ನಮ್ಮ ಕಥೆ. ನಮ್ಮಹುಷಾರಿನಲ್ಲಿ ನಾವಿದ್ರೆ ಆಯ್ತು ಏಳು ಊಟ ಮಾಡಿ ಆರಾಮಾಗಿ ನಿದ್ದೆ ಮಾಡು. ಮನು ಬರೋ ಟೈಂಗೆ ಏನಾದ್ರು ತಿಂಡಿ ಮಾಡು” ಎಂದಾಗ ಲತಾ ಗೆಲುವಾದಳು ಮಾರನೆ ದಿನ ಶಾಲೆಗೆ ಬಂದಾಗ ರಂಜಿತಳೊಡನೆ ಏನನ್ನು ತೋರಿಸಿಕೊಳ್ಳದೆ ಮಾಮೂಲಿನಂತಿದ್ದಳು. ರಂಜಿತಳದು ಇದ್ರಲ್ಲಿ ಏನೂ ತಪ್ಪಿಲ್ಲ ಎನಿಸಿತು.ಆ ಮಧ್ಯಾಹ್ನದ ವೇಳೆಗೆ ವೇಳೆಗೆ ಅನಿರೀಕ್ಷಿತವಾಗಿ ಯಾರೂ ನಿರೀಕ್ಷಿಸದೇ ಇದ್ದಂತೆ ಹೊಸ ಮುಖ್ಯೋಪಧ್ಯಾಯರ ಆಗಮನವಾದಾಗ ಸ್ವಲ್ಪ ಗಲಿಬಿಲಿ ಸೃಷ್ಟಿಯಾಯಿತು. ಕರ್ತವ್ಯಕ್ಕೆ ಹಾಜರಾದ ಬಗ್ಗೆ ಪ್ರಕ್ರಿಯೆಗಳು ಮುಗಿದ ನಂತರ ಸುನಂದ ಮೇಡಂರವರು ಶಾಲಾ ಸಿಬ್ಬಂದಿ ವರ್ಗದವರನ್ನೆಲ್ಲಾ ಕರೆಸಿ ಹೊಸ ಉಪ ಪ್ರಾಂಶುಪಾಲರಾದ ರವಿಯವರನ್ನು ಪರಿಚಯಿಸಿದರು ಅಷ್ಟರಲ್ಲಿ ಶಾಲೆಯ ಅವಧಿ ಮುಗಿಯುತ್ತ ಬಂದಿದ್ದರಿಂದ ಎಲ್ಲರು ಮನೆಗೆ ಹೊರಟರು ಹೊಸ ಉಪ ಪ್ರಾಂಶುಪಾಲ ರವಿ KES ಶ್ರೇಣಿಯ ಆಫೀಸರ್ ಎಂದು ತಿಳಿದು ಕಾರಣ ದಾರಿಯಲ್ಲಿ ರಂಜಿತ “ಇವರು ತುಂಬ ಸ್ತ್ರಿಕ್ಟ್ ಆಗಿರುತ್ತಾರೆ ಅನ್ಸುತ್ತೆ”ಎಂದು ಅಂದಾಜು ಮಾಡಿದ ಹಿಂದೆಯೆ “ನಮ್ಮ