ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾದಿದೆ ಮುಂಬೆಳಗು

ಕವಿತೆ ಕಾದಿದೆ ಮುಂಬೆಳಗು ಯಮುನಾ.ಕಂಬಾರ ಕಾದಿದೆ ಮುಂಬೆಳಗುಹೊಸ ವರುಷದ ಹೊಸ್ತಿಲಲಿಹುಡುಕುತ್ತಿದೆ – ತೆರೆದ ಬಾಗಿಲುಗಳಿಗೆ !! ತಡಕಾಡುತ್ತಿದೆ – ಕತ್ತಲಲಿಬಚ್ಚಿಟ್ಟ ಪ್ರೀತಿ ಸಹಕಾರಗಳಿಗಾಗಿದೂರಕೆ ಹರಿದ ಬೇರುಗಳು ಸಿಗದೇ – ನರಳುತಿದೆ !! ತನ್ನ ಕೈ ಕೊಸರುತಿದೆ – ಜಾತಿಯ ಜಾಲಗಳಲ್ಲಿ ಸಿಕ್ಕುವಾಗ್ವಾದ ನಡೆಸುತಿದೆ – ಮನುಷ್ಯನ ಬರುವು ನಿರ್ಗಮನ – ಕೇವಲ ಬರಿ ಮೈ ಎಂದು‌!! ತನ್ನ ಅಸ್ಮಿತೆ ಹಾಳಾಗದಿರಲೆಂದುರಾತ್ರಿ ಕಣ್ಣಾಗಿ ತೆರೆದುಕೊಂಡೇ ನಿಂತಿದೆ.ಶ್ರಮವು ವ್ಯರ್ಥವಾಗದಿರಲೆಂದುಮುಗಿಲಿಗೆ ಮುಖಮಾಡಿ ಗೋಳಿ ಡುತಿದೆ – ಈ ಬದುಕು ಶುಭವಾಗಲೆಂದು !! ತನ್ನ ಶಕ್ತಿ ಸಾಮರ್ಥ್ಯಗಳು ನಾಡ ಹಬ್ಬಕೆ ಎಂದುಮೂಡಲಿ ಕ್ಢಿತಿಯಲಿ ಹೊಸ ದಿಗಂತ ತೆರೆದುಒಂದಾದರೂ ಹೆಜ್ಜೆ ಗುರುತು ಉಳಿಯಲಿ ಎಂದು !!. ಬಹು ಆಸೆ ಹೊತ್ತು ಬಂದಹೊಂಗನಸುಹೂವಾಗಿ ಅರಳಲಿ ಎಂದು ಹಲಬುತಿದೆಹಣ ಅಧಿಕಾರಗಳ ಬಂಡೆ ಗಲ್ಲಿಗೆ ಸಿಕ್ಕಿಕೊಂಡು !! *********************************************

ಕಾದಿದೆ ಮುಂಬೆಳಗು Read Post »

ಕಾವ್ಯಯಾನ

ಹೊಸತು ಉದಯಿಸಲಿ

ಕವಿತೆ ಹೊಸತು ಉದಯಿಸಲಿ ಪ್ರತಿಮಾ ಕೋಮಾರ ನೋವ ಕರಿ ಛಾಯೆಹಿಡಿದೇ ಹೊಸ್ತಿಲೊಳಗೆ ಬಂದೆಅನುಕಂಪದ ಲವ ಲೇಷವೂಇಲ್ಲದೇ ಇಡೀ ವರುಷ ನಿಂದೆ ನಲಿವಿನ ಬಯಲಲ್ಲಿ ನೋವಿನಬೀಜವನು ಬಿತ್ತಿ ನೀರೆರೆದುಬಲವಾಗಿ ಬೆಳೆದೆಬೀಗಬೇಡ ಬಾಗು ಎಂಬಪಾಠ ಪ್ರತಿ ಎದೆಯೊಳಗೆ ಬರೆದೆ ಇಪ್ಪತ್ತರ ವರುಷಮಾಯವಾಗಿಸಿದೆ ಹರುಷಬದುಕು ಬೆಳಗಿಲ್ಲನಡೆಸಿದೆ ಕತ್ತಲೊಳಗೆಉಸಿರ ಬಿಗಿ ಹಿಡಿದು ಈಗ ಹೊರಟಿದ್ದೀಯಾದೊಡ್ಡ ಪಾಠವನು ಕಲಿಸಿಎಂದೂ ಎಚ್ಚರ ತಪ್ಪದ ಹಾಗೇಹಳೆಯಂಗಿ ಕಳಚಿಹೊಸದಾಗಿ ಕಾಲಿಟ್ಟ ಇಪ್ಪತ್ತೊಂದುತೊಳೆದುಬಿಡು ಹಳೆ ಕೊಳೆಯ ನೀರೆರೆ ತುಸು ಬತ್ತಿದ ಕನಸುಗಳಿಗೆಉದಯಿಸಲಿ ಹೊಸತು ಕಾಂತಿಎಲ್ಲರ ಕಂಗಳಲಿಗತವು ಮತ್ತೇ ಮರುಕಳಿಸದ ಹಾಗೇಹೊಸ ಹರುಷಕೆ ಮುನ್ನುಡಿ ಗೀಚಿಬಿಡು *******************************

ಹೊಸತು ಉದಯಿಸಲಿ Read Post »

ಪುಸ್ತಕ ಸಂಗಾತಿ

ಬೇಲಿಯೊಳಗಿನ ಬೆಳೆ –

ಪುಸ್ತಕ ಸಂಗಾತಿ ಬೇಲಿಯೊಳಗಿನ ಬೆಳೆ ಒಂದು ಅವಲೋಕನ ಬೇಲಿಯೊಳಗಿನ ಬೆಳೆ – ಪ್ರಬಂಧ ಸಂಕಲನ – ಡಾ. ಕೆ.ಚಿನ್ನಪ್ಪ ಗೌಡ – ಮದಿಪು ಪ್ರಕಾಶನ, ಮಂಗಳೂರು: ೨೦೨೦ ಪುಟ ೧೦೪, ಬೆಲೆ  ೯೦ ರೂ.  ಇದೊಂದು ‘ವಿಶಿಷ್ಟ’ ಸಪ್ತ ಪ್ರಬಂಧಗಳ ಸರಮಾಲೆ. ಯಾಕೆ ‘ವಿಶಿಷ್ಟ’ ಎಂದರೆ ಇಲ್ಲಿಯ ಏಳೂ ಲೇಖನಗಳು ‘ಪ್ರಬಂಧ’ ಎಂಬ ಒಂದೇ ಪ್ರಭೇದ ಸೂತ್ರಕ್ಕೆ ಒಳಪಡುವುದಿಲ್ಲ! ಇದನ್ನು ‘ಹರಟೆ’ ಎಂದು ಲೇಖಕರು ಕರೆದರೂ ಅದು ಹಳ್ಳಿ ಪಂಚಾಯ್ತಿಕಟ್ಟೆಯ ಸಮಯ ಕೊಲ್ಲುವ ಜಡಭರತರ ಹಾಳು ಹರಟೆಯಾಗದೆ ಓದುಗರ ಮನತಟ್ಟುವ, ಮುಟ್ಟುವ ಕಥನಗಳಾಗಿ ವಿಕಾಸಗೊಂಡಿದೆ. ಲೇಖಕರೇ ಹೇಳಿಕೊಳ್ಳುವಂತೆ “ಕೂಡೂರಿನ ನನ್ನ ಮನೆ ಮತ್ತು ವಿಟ್ಲದ ಆಸುಪಾಸಿನ ಜನರ ಬದುಕಿನ ಕೆಲವು ಸಾಂಸ್ಕೃತಿಕ ವಿವರಗಳನ್ನು ಈ ಬರಹಗಳಲ್ಲಿ ಸೃಜನಶೀಲವಾಗಿ ಸಂಘಟಿಸಿದ್ದೇನೆ…ನನ್ನ ಮನಸ್ಸಿನಲ್ಲಿ ಲುಪ್ತವಾಗದೆ ಸುಪ್ತವಾಗಿ ಅವಿತಿದ್ದ, ಆಗೊಮ್ಮೆ ಈಗೊಮ್ಮೆ ಜಿಗಿಯುತ್ತಿದ್ದ ನೆನಪುಗಳನ್ನು ಬಳಸಿ ಈ ಪ್ರಬಂಧಗಳನ್ನು ಕಟ್ಟಿದ್ದೇನೆ. ಈ ನೆನಪುಗಳು ನನಗೆ ಅಮೂಲ್ಯ…ನನ್ನ ಅನುಭವಗಳ ಮೇಲೆ ನನಗೆ ಪ್ರೀತಿ ಇದೆ, ವ್ಯಾಮೋಹವಿಲ್ಲ. ಹಿಂದಿನ ದಿನಗಳನ್ನು ವೈಭವೀಕರಿಸುವ ಉದ್ದೇಶ ನನಗಿಲ್ಲ.” ಲೇಖಕರಿಗಿರುವ ಈ ಎಚ್ಚರ ಇಲ್ಲಿನ ಪ್ರಬಂಧಗಳನ್ನು ನಾಸ್ಟಾಲ್ಜಿಕ್ ಆಗದಂತೆ, ಅಂದರೆ ವೃಥಾ ಗತಕಾಲಕ್ಕೆ ಹಂಬಲಿಸುವ ಗೀಳು ಆಗದಂತೆ ಕಾಪಾಡಿದೆ. ನಾನೂ ಇದೇ ಪರಿಸರದಲ್ಲಿ ಹುಟ್ಟಿ ಬೆಳೆದವನಾದುದರಿಂದ, ಲೇಖಕರ ಕೂಡೂರು ನನಗೂ ಆಪ್ತವಾದುದರಿಂದ, ಇದೆಲ್ಲದರ ಒಡನಾಟವೂ ನನಗಿದ್ದುದರಿಂದ ಈ ಮಾತನ್ನು ಗಟ್ಟಿಯಾಗಿ ಹೇಳಬಲ್ಲೆ ಯಾಕೆಂದರೆ ಈ ಅನುಭವಗಳಲ್ಲಿ ಹಲವನ್ನು ನಾನೂ ಕಂಡವನೇ!        ಶೀರ್ಷಿಕೆಯ ‘ಬೇಲಿ’ ಗತಕಾಲದ ನೆನಪುಗಳ ಬೆಳೆಯನ್ನು ಭದ್ರವಾಗಿ ಸಂರಕ್ಷಿಸಿಕೊಂಡು ಬಂದು ಕಟಾವಿಗೆ ಸಿದ್ಧವಾದ ಪಕ್ವತೆ ಸಾಧಿಸಿ ಪಾಕರಸಾಯನವಾಗಿ ನಮ್ಮ ಮುಂದೆ ತನ್ನನ್ನು ತಾನೇ ಅನಾವರಣಗೊಳಿಸಿಕೊಂಡಿದೆ. ಇಲ್ಲಿ ಗತಕಾಲವೆಂದರೆ ಬಾದರಾಯಣರಷ್ಟು ಹಿಂದೋಡದೆ ಕೇವಲ ‘ಸಂದ ಕಾಲ’ವಾಗಿ ಇಂದು-ನಿನ್ನೆಗಳನ್ನೂ ಒಳಗೊಂಡಿದೆ. ನಂಬಿದ ದೈವವೇ ‘ಬೇಲಿ’ಯಾಗಿ ನಂಬಿದವರನ್ನು ‘ಬೇಲಿಯೊಳಗಿನ ಬೆಳೆ’ಯಂತೆ ಪರಿಗಣಿಸಿ ದೈವ ಅಭಯ ನೀಡುವುದನ್ನು ಲೇಖಕರು ಹೀಗೆ ದಾಖಲಿಸುತ್ತಾರೆ: “ಬೇಲಿ ನಾನು. ಬೇಲಿಯೊಳಗಿನ ಬೆಳೆ ನೀವು. ಬಿತ್ತಿದ ಬೀಜ ನುಚ್ಚಾಗದಂತೆ ನೆಟ್ಟ ಸಸಿ ನಲುಗದಂತೆ ಕಂಬಳದ ಪೂಕರೆ ಮಾಲದಂತೆ ಬೋದಿಗೆ ಕಂಬ ಮುರಿಯದಂತೆ ನಂದಾದೀಪ ನಂದದಂತೆ ತೊಟ್ಟಿಲಿನ ಸರಪಳಿ ತುಂಡಾಗದಂತೆ ನಾನು ಸಾವಿರದ ಕಾಲದ ವರೆಗೆ ಕಾಯುತ್ತೇನೆ.” ಇದು ನಂಬಿದವರ ಪಾಲಿಗೆ ಒಂದು ಆಧಾರವಾಗಿ ಅವರ ಬಾಳನ್ನು ರೂಪಿಸಿದೆ ಎಂಬುದು ಸತ್ಯ.     ಕೊನೆಯ ಪ್ರಬಂಧ “ನೀವೇ ಯೋಚಿಸಿ ನೋಡಿ,’ ಪ್ರಚಲಿತ ಕೊರೊನಾ ಸಂಕಷ್ಟದ ಲಾಭ-ನಷ್ಟಗಳ ಲೆಕ್ಕಾಚಾರವನ್ನು ಕರಾರುವಾಕ್ಕಾಗಿ ನಡೆಸಿ ಭಗವದ್ಗೀತೆಯಲ್ಲಿ ಶ್ರೀ ಕೃಷ್ಣ ಅರ್ಜುನನಿಗೆ ಗೀತೆಯನ್ನು ಬೋಧಿಸಿದ ಮೇಲೆ ಹೇಳುವ ಮಾತುಗಳ ಮಾರ್ಮಿಕತೆ –- ‘ವಿಮೃಶ್ಯೈತದಶೇಷೇಣ ಯಥೇಚ್ಛಸಿ ತಥಾ ಕುರು’ (೧೮:೬೩) – ‘ನಾನು ಹೇಳಿದ್ದನ್ನೆಲ್ಲಾ ಚೆನ್ನಾಗಿ ಪರಾಂಬರಿಸಿ ಮತ್ತೆ ನಿನಗೆ ತೋಚಿದಂತೆ ಮಾಡು’ — ಎಂಬುದನ್ನು ಇಲ್ಲಿ ಓದುಗರಿಗೆ ಆರೋಪಿಸಿ ಅವರ ಜವಾಬ್ದಾರಿಯನ್ನು ಮತ್ತೆ ನೆನಪಿಸಿಕೊಳ್ಳುವಂತೆ ಮಾಡಿದೆ. ಕನ್ನಡದಲ್ಲಿ ಪ್ರಬಂಧ ಸಾಹಿತ್ಯದ ಹುಟ್ಟು, ಬೆಳವಣಿಗೆ, ಉತ್ಕೃಷ್ಟ ಮಾದರಿಗಳು ಇತ್ಯಾದಿಗಳ ಬಗ್ಗೆ ಇಲ್ಲಿ ಉಲ್ಲೇಖಿಸದೆ ನೇರವಾಗಿ ಪ್ರಬಂಧಗಳೊಂದಿಗೆ ಮುಖಾಮುಖಿಯಾಗುವ ಪ್ರಯತ್ನವಷ್ಟೇ ನನ್ನದು. ಈ ಪ್ರಬಂಧಗಳ ಬಗ್ಗೆ ಲೇಖಕರೇ ಒಂದಿಷ್ಟು ವಿವರಗಳನ್ನು ಹಂಚಿಕೊಂಡಿದ್ದಾರೆ. “ಬಹುಶಃ ನಾನು ನನ್ನದೇ ಪ್ರಬಂಧಗಳ ಬಗ್ಗೆ ಬರೆದದ್ದು ಹೆಚ್ಚಾಯಿತೋ ಏನೋ” ಎಂಬ ದಾಕ್ಷಿಣ್ಯವೂ ಅವರನ್ನು ಕಾಡಿದೆ! ‘ತರಂಗ’ ಯುಗಾದಿ ವಿಶೇಷ ಸಂಚಿಕೆಯಲ್ಲಿ ಪ್ರಕಟವಾದ ಈ ಸಂಕಲನದ ಮೊದಲ ಪ್ರಬಂಧ ‘ಕಾಗೆ ಕಾಲಿನ ಗೆಜ್ಜೆ’ಯ ಬಗ್ಗೆ ನಾನು ವೈಯಕ್ತಿಕವಾಗಿ ನೇರ ಚಿನ್ನಪ್ಪ ಗೌಡರಿಗೆ ಬರೆದ ಮಾತುಗಳನ್ನು, ಅಂತೆಯೇ ಇತರ ಓದುಗರ ಅಭಿಪ್ರಾಯಗಳನ್ನೂ ಲೇಖಕರು ಈ ಸಂಕಲನದಲ್ಲಿ ಉಲ್ಲೇಖಿಸುತ್ತಾರೆ. ಭೂತಕೋಲದ ಸಂದರ್ಭದಲ್ಲಿ ಭೂತ ಕಟ್ಟುವ ದೈವದ ಪಾತ್ರಿ ನೀಡುವ ಅಭಯ ಜನರು ನಂಬುವ ಭೂತದ್ದೋ, ಪಾತ್ರಿಯದ್ದೋ ಎಂಬ ಸಂದಿಗ್ಧ ಕೆಲವರನ್ನು ಕಾಡಿದೆ ಮತ್ತು ಈ ಕುರಿತು ಅವರು ಲೇಖಕರನ್ನು ಪ್ರಶ್ನಿಸಿಯೂ ಇದ್ದಾರೆ. ಇದಕ್ಕೆ ಭೂತಾರಾಧನೆಯ ಬಗ್ಗೆಯೇ ಕ್ಷೇತ್ರ ಕಾರ್ಯ ನಡೆಸಿ ಡಾಕ್ಟರೇಟ್ ಪದವಿ ಪಡೆದ ಜಾನಪದ ವಿದ್ವಾಂಸರೂ ಆಗಿರುವ ಚಿನ್ನಪ್ಪ ಗೌಡರು ಉತ್ತರಿಸುವುದು ಹೀಗೆ: “ಭೂತ ಇದೆ. ನಾನು ಎಷ್ಟೋ ಭೂತಗಳನ್ನು ನೋಡಿದ್ದೇನೆ. ಅವುಗಳನ್ನು ಕೆಲವರು ದೈವಗಳೆಂದೂ, ಈ ನೆಲದ ಸತ್ಯಗಳೆಂದೂ ಕರೆಯುತ್ತಾರೆ. ಅವುಗಳಿಗೆ ನಿತ್ಯ ಕೈಮುಗಿಯುತ್ತಾರೆ… ಇಷ್ಟೊಂದು ವಿಶ್ವಾಸವಿಟ್ಟು ಕಣ್ಣೆದುರಿನ ಭೂತಕ್ಕೆ ಕೈಮುಗಿಯುವಾಗ ಅದು ಇಲ್ಲ ಎಂದರೆ ಹೇಗೆ? … ಭೂತವನ್ನು ಪ್ರತಿನಿಧಿಸಿ, ಭೂತವೇ ಆಗಿಬಿಡುವ ಒಬ್ಬ ವ್ಯಕ್ತಿಯೇ ಇದ್ದಾನಲ್ಲ…ನೋಡಲು, ಮುಟ್ಟಲು, ಮಾತನಾಡಿಸಲು ಸಾಧ್ಯವಾಗುವ ‘ವ್ಯಕ್ತಿತ್ವ’ವನ್ನು ಅದಿಲ್ಲ, ಅದಲ್ಲ ಎಂದರೆ ಹೇಗೆ? ಹಾಗಾಗಿ ನನ್ನ ಮಟ್ಟಿಗೆ ಭೂತ ಇದೆ. ನಾನು ಆ ಸತ್ಯಗಳನ್ನು ಕಂಡಿದ್ದೇನೆ.” ನನ್ನ ವೈಯಕ್ತಿಕ ನಿಲುವೂ ಇದೇನೇ. ಈ ಕುರಿತು ನಾನು ಹೇಳಿದ್ದು: “ಅಗೋಚರ ಸತ್ಯದ ಸಾಕ್ಷಾತ್ಕಾರ ಭೂತದ ನಡೆಯಲ್ಲಿ, ನೇಮದ ಗುಂಗಿನಲ್ಲಿ ಕ್ಷಣಕಾಲ ವಿಜೃಂಬಿಸುವುದು ಸುಳ್ಳಲ್ಲ. ಸತ್ಯದರ್ಶನದ ವಿಧಿಯೇ ಹಾಗೆ… ಭಾವಕ್ಕೆ ತಿಳಿದರೂ, ಬುದ್ಧಿಗೆ ತರ್ಕಕ್ಕೆ ನಿಲುಕದ ಕಾರಣಿಕ ಅದು. ಒಂದು ಸಮುದಾಯಕ್ಕೆ, ಅದರ ಬದುಕಿಗೆ ಆಧಾರವಾಗಿ ನಿಂತು ಮುನ್ನೆಡೆಸುವ ಶಕ್ತಿ ಅದು. ಇದನ್ನು ಬೆರಗುಗಣ್ಣಿಂದ ನೋಡಿದರೇನೇ ಚೆಂದ… ದೈನಿಕದ ಬದುಕು ನಿಂತಿರುವುದು ನಂಬಿಕೆ, ವಿಶ್ವಾಸ, ಪ್ರೀತಿ, ಭಕ್ತಿ ಇತ್ಯಾದಿ ಸಂವೇದನೆಗಳ ಮೇಲೆ…” ಇಲ್ಲಿ ನಿಜವಾಗಿ ಕೆಲಸಮಾಡುವುದು ಕವಿ ಕೊಲೆರಿಜ್ ಹೇಳುವಂತೆ – willing suspension of disbelief – ಅಪನಂಬಿಕೆಯನ್ನು ಉದ್ದೇಶಪೂರ್ವಕವಾಗಿ ತಡೆಹಿಡಿದರೆ ಮಾತ್ರ ಸತ್ಯ, ಸೌಂದರ್ಯ ದೃಗ್ಗೋಚರವಾಗುತ್ತದೆ. ಅದು ಅರಿವಾಗುವುದು ಅಂತರಂಗದ ಆರ್ದ್ರತೆಯಲ್ಲಿ, ತಲ್ಲೀನತೆಯಲ್ಲಿ ಹಾಗೂ ಭಾವಪರವಶತೆಯಲ್ಲಿ. ತರ್ಕದಿಂದ ಬದುಕನ್ನು ಅಳೆಯಲಾಗದು, ಅಳೆಯಬಾರದು. ಸ್ತ್ರೀರೂಪವನ್ನು ಮಜ್ಜೆ, ಮಾಂಸ, ರಕ್ತಗಳೆಂದು ವಿಚಿಕಿತ್ಸಕ ದೃಷ್ಟಿಯಿಂದ ನೋಡಿದರೆ ಎಷ್ಟು ಆಭಾಸವಾದೀತು! ನಾಗಚಂದ್ರ ಕವಿ ವರ್ಣಿಸಿದ್ದನ್ನು ಬುದ್ಧಿಯಿಂದಲ್ಲ, ಭಾವದಿಂದ, ರಸೈಕ ದೃಷ್ಟಿಯಿಂದ ಗ್ರಹಿಸಬೇಕು, ಅಲ್ಲವೇ?   ಸ್ತ್ರೀ ರೂಪಮೆ ರೂಪಂ ಶೃಂ ಗಾರಮೆ ರಸಮತುಳ ಸುರತ ಗಂಧಮೇ ಗಂಧಂ l ಸಾರಸ್ಪರ್ಶಂ ಗುರುಕುಚ ಭಾರಸ್ಪರ್ಶಂಗಳಪ್ರಶಬ್ದಮೇ ಶಬ್ದಂ ll “ಕಟ್ಟುವುದಾದರೆ ಕಾಗೆ ಕಾಲಿಗೆ ಗೆಜ್ಜೆ ಕಟ್ಟಬೇಕು. ಕೋಳಿಯ ಕಾಲಿಗೆ ಗೆಜ್ಜೆ ಕಟ್ಟಿದರೆ ಮನೆಹಿತ್ತಿಲು ಸುತ್ತು ಬಂದೀತು. ನಿನ್ನ ಕಾಲಿಗೆ ಗೆಜ್ಜೆ ಕಟ್ಟಿದ್ದೇನೆ. ನಾಲ್ಕು ಊರು ಹಾರಾಡು” ಎಂದು ತಾಯಿ ಉಳ್ಳಾಲ್ತಿ ದೈವ ಲೇಖಕರಿಗೆ ಬೂಳ್ಯ (ಪ್ರಸಾದ) ಕೊಟ್ಟು ಹರಸುವುದು ಒಂದು ರೋಚಕ ಘಟನೆ. ಇದು ವಾಸ್ತವ ಹಾಗೂ ದೈವದ ಮಾಯಕದ ಲೋಕದ ನಡುವಿನ ಸೇತುವಾಗಿ ಚಿನ್ನಪ್ಪ ಗೌಡರ ನಿಜಜೀವನದಲ್ಲೂ ನಡೆದದ್ದು ಕೇವಲ ಕಾಕತಾಳೀಯವಲ್ಲ ಎಂಬುದು ನನ್ನ ದೃಢ ನಂಬಿಕೆ. ಇದರ ವಿವರಗಳಿಗೆ ನೀವು ಪ್ರಬಂಧವನ್ನೇ ಓದಬೇಕು. ‘ಪಾಚಕ್ಕನ ಗಂಡಾಂತರ’ದಲ್ಲಿ ಲೇಖಕರು ‘ಕೆಟ್ಟ ದೃಷ್ಟಿ’ಯ ಬಗ್ಗೆ ಬರೆಯುತ್ತಾರೆ. ಇಲ್ಲಿಯೂ ನಂಬಿಕೆ-ಅಪನಂಬಿಕೆಗಳ ಮಧ್ಯೆ ಒಂದು ತೆಳು ರೇಖೆ ಮಾತ್ರ ಇದೆ. ಮಗುವಿಗೆ ದೃಷ್ಟಿಯಾಗುವುದು, ದೃಷ್ಟಿ ತೆಗೆಯುವುದು ಇತ್ಯಾದಿ ನಮ್ಮ ಸಾಮಾಜಿಕ ಜೀವನದಲ್ಲಿ ಜಾತಿ, ಮತಗಳ ಭೇದವಿಲ್ಲದೆ ಅನೂಚಾನವಾಗಿ ಲಾಗಾಯ್ತಿಂದ ನಡೆದು ಬಂದಿರುವುದು ಸತ್ಯ ತಾನೇ? ಇಲ್ಲಿ ಪಾಚಕ್ಕನ ಕೆಟ್ಟ ದೃಷ್ಟಿಯನ್ನು ಅವಳು ಅನುಭವಿಸಿರಬಹುದಾದ ಸಂಕಟಗಳ ಮನೋವೈಜ್ಞಾನಿಕ ಹಿನ್ನೆಲೆಯಲ್ಲಿ ಚಿನ್ನಪ್ಪ ಗೌಡರು ಗ್ರಹಿಸಿರುವುದು ಅವರ ಸೂಕ್ಷ್ಮ ಸಂವೇದನೆಗೆ ಸಾಕ್ಷಿ ಎಂದು ನಾನು ತಿಳಿಯುತ್ತೇನೆ. ಈ ಸಂವೇದನೆಯೇ ಲೇಖಕರ ಬಾಯಿಯಿಂದ ಈ ಮಾತುಗಳನ್ನು ಹೇಳಿಸಿದೆ: “ಪಾಚಕ್ಕನ ಮಾತುಗಳನ್ನು ಕೇಳಿದ ಮೇಲೆ ನನಗೆ ಅವಳು ಕೆಟ್ಟವಳು ಅಂತ ಅನಿಸಲಿಲ್ಲ. ಅವಳ ಮನಸ್ಸನ್ನು ಕೆಡಿಸಿ ಅವಳನ್ನು ಕೆಟ್ಟವಳನ್ನಾಗಿ ಮಾಡಿದ್ದು ಯಾರು ಎಂಬ ಪ್ರಶ್ನೆ ನನ್ನನ್ನು ಕಾಡತೊಡಗಿದೆ. ಅವಳ ಒಳದನಿಗೆ ಸಮಾಜ ಕಿವಿಗೊಡಲಿಲ್ಲ. ಲಿಂಗ ತಾರತಮ್ಯ ಅವಳ ಸಂವೇದನೆಯನ್ನು ಕೊಂದಿದೆ. ಜಾತಿ, ಹೆಣ್ಣು, ಬಡತನ ಮೊದಲಾದ ನೆಲೆಗಳ ಸಾಮಾಜಿಕ ಅಸಮಾನತೆಗಳು ಪಾಚಕ್ಕನನ್ನು ತೀವ್ರವಾಗಿ ಕಾಡಿವೆ. ಅವಳದಲ್ಲದ ತಪ್ಪಿಗೆ ಅವಳನ್ನು ಹೊಣೆಗಾರಳನ್ನಾಗಿ ಸಮಾಜ ಮಾಡಿದೆ. ಅವಳ ಸ್ವಾತಂತ್ರ್ಯವನ್ನು ಸಮಾಜ ಕಸಿದಿದೆ. ಅವಳ ಮನಸ್ಸನ್ನು ಕೆಡಿಸಿದ ಕೆಟ್ಟ ಸಮಾಜವನ್ನು ದುರಸ್ತಿಗೊಳಿಸುವ ಕೆಲಸ ತುರ್ತಾಗಿ ಆಗಬೇಕಾಗಿದೆ ಅಂತ ನನಗನ್ನಿಸಿದೆ ಪಾಚಕ್ಕನ ಮಾತುಗಳನ್ನು ಕೇಳಿ.” ಇಂತಹ ಒಂದು ಸಮಾಜಶಾಸ್ತ್ರೀಯ ದೃಷ್ಟಿ ಇನ್ನೂ ಅನೇಕ ಪ್ರಚಲಿತವಿರುವ ಸಾಮಾಜಿಕ ಅನಿಷ್ಟಗಳ ನಿವಾರಣೋಪಾಯವಾಗಿ ಇಂದಿನ ತುರ್ತು ಹಾಗೂ ಇಂದಿಗೂ ಪ್ರಸ್ತುತ ಕೂಡಾ ಎಂದು ನನಗೆ ಅನಿಸುತ್ತದೆ. ಇದಕ್ಕೆ ಪೂರಕವಾಗಿ ಒಂದು ಮಾತು. ನಾನು ಬಾಲ್ಯಕಾಲದಲ್ಲಿ ಕೇಳಿದಂತೆ ವಿಟ್ಲ ಪೇಟೆಯಿಂದ ಅನತಿದೂರದಲ್ಲಿ ‘ಅಪ್ಪೇರಿಪಾದೆ’ ಎಂಬ ಬೃಹತ್ ಶಿಲಾಹಾಸುಬಂಡೆ ಇತ್ತಂತೆ. ಅದಕ್ಕೆ ವಿಶಾಲವಾದ ಬಿಳಿ ಬಟ್ಟೆಯನ್ನು ಮುಚ್ಚಿ, ಪಾಚಕ್ಕನಂತೆ ಬಿರುದೃಷ್ಟಿಗೆ ಹೆಸರುವಾಸಿಯಾದ ಮಹಿಳೆಯೊಬ್ಬರಿಗೆ ತೋರಿಸಿದಾಗ ‘ಬೆಳಗಾಗಿ ಇಷ್ಟು ಹೊತ್ತಾದರೂ ಇವನಿನ್ನೂ ಎದ್ದಿಲ್ಲವೇ?’ ಎಂದು ಕುಚೋದ್ಯದ ಮಾತನಾಡಿದಾಗ ಅವಳ ಬಿರುನುಡಿಗೆ ಇಡೀ ಹಾಸುಬಂಡೆಯೇ ಚಿಟಿ ಚಿಟಿಲೆಂದು ಸಾವಿರ ಹೋಳಾಗಿ ಹೋಯಿತಂತೆ ಎಂಬುದನ್ನು ನಾನು ಕೇಳಿ ಬಲ್ಲೆ! ಇದು ಸತ್ಯವೋ ಸುಳ್ಳೋ ಎನ್ನುವುದಕ್ಕಿಂತಲೂ ಅಂತಹ ಒಂದು ಸಾಧ್ಯತೆಯನ್ನು ಗುರುತಿಸಿದ ಜನಮಾನಸಕ್ಕೆ ‘ಕಲ್ಪನಾ ದಾರಿದ್ರ್ಯ’ ಎಂದೂ ಬಾರದು ಎಂಬುದಷ್ಟೇ ಮುಖ್ಯ ಎಂದು ನನಗನಿಸುತ್ತದೆ. ಸೃಜನಶೀಲ ಮನಸ್ಸು ಕಲ್ಪನೆ-ವಾಸ್ತವಗಳ ನಡುವಿನ ವ್ಯಾವಹಾರಿಕ ರೇಖೆಯನ್ನು ನಿರಾಕರಿಸುತ್ತದೆ, ಅಥವಾ ನಿವಾರಿಸುತ್ತದೆ ಎಂದರೆ ಹೆಚ್ಚು ಸಮಂಜಸವಾಗಬಹುದೇನೋ! ‘ಪಾಚಕ್ಕನ ಗಂಡಾಂತರ’ ಈ ಮಾತಿಗೆ ಪುರಾವೆ ಇದ್ದಂತಿದೆ. ‘ಕಳೆಂಜಿಮಲೆ’ ವಿಟ್ಲದ ಸರಹದ್ದಿನ ಕಾಡು. ಇದು ವಿಟ್ಲವಾಸಿಗಳ ಭಾವಕೋಶದ ಒಂದು ಅವಿಭಾಜ್ಯ ಅಂಗ ಎಂದರೆ ತಪ್ಪಾಗಲಾರದು. ನಾನೂ ಚಿಕ್ಕವನಾಗಿದ್ದಾಗ ಗೆಳೆಯರೊಂದಿಗೆ ಕಳೆಂಜಿಮಲೆಗೆ ಲಗ್ಗೆ ಇಟ್ಟವನೇ! ಅಲ್ಲಿಯ ಕಾಟು ಮಾವಿನ ಮರದ ಹಣ್ಣುಗಳನ್ನು, ಬೆಟ್ಟದ ನೆಲ್ಲಿಕಾಯಿ, ಪುನರ್ಪುಳಿ, ನೇರಳೆ, ಕುಂಟಲ ಹಣ್ಣುಗಳನ್ನು ಧಾರಾಳವಾಗಿ ತಿಂದವನೇ!! ಅಲ್ಲಿಯ ಬಕಾಸುರನ ಗುಹೆ, ನೆತ್ತರಕೆರೆ, ವಿಟ್ಲವೇ ಮಹಾಭಾರತದ ‘ಏಕಚಕ್ರ ನಗರ’ ಎಂಬ ನಂಬಿಕೆ ಇತ್ಯಾದಿಗಳಲ್ಲಿ “ಪುರಾಣ ಕಾವ್ಯಗಳು ಸ್ಥಳೀಯವಾಗುವ – ಥಿಯರಿ ಆಫ್ ಲೋಕಲೈಸೇಷನ್”ನ ಅದ್ಭುತವನ್ನು ಕಂಡವನೇ. ಚಿನ್ನಪ್ಪ ಗೌಡರು ಇವೆಲ್ಲವನ್ನೂ ಮನಮುಟ್ಟುವಂತೆ, ಅತಿರಂಜಕತೆಯ, ಅತಿಭಾವುಕತೆಯ ಅಪಾಯದ ಸೆಳೆತವನ್ನು ಮೀರಿ ವರ್ಣಿಸಿರುವುದು ನಿಜಕ್ಕೂ ಶ್ಲಾಘನೀಯ. ಕಾಡು ಮತ್ತು ಮನುಷ್ಯ ಸಮಾಜದ ನಡುವಿನ ಅವಿನಾಭಾವದ ನೆಂಟಿನ ಗಂಟನ್ನು ಸುಕ್ಕುಗಟ್ಟದಂತೆ ಬಿಡಿಸಲು ಚಿನ್ನಪ್ಪ ಗೌಡರು ಶಕ್ತರಾಗಿದ್ದಾರೆ. ಕಳೆಂಜಿಮಲೆ ಒಂದು ರಕ್ಷಿತಾರಣ್ಯ. ಇಲ್ಲಿ ಹೆಚ್ಚಾಗಿ ಹೆಂಗಸರು ಒಣಸೌದೆ ಆರಿಸಿ ಗಂಟು ಕಟ್ಟಿ ತಲೆಯ ಮೇಲೆ ಹೊತ್ತು ತಂದು ಮಾರಾಟ ಮಾಡುವುದೋ, ಸ್ವಂತಕ್ಕೆ ಬಳಸುವುದೋ ಸದಾ ನಡೆದೇ ಇತ್ತು. ಅಂತೆಯೇ ಕರ್ನಾಟಕದಿಂದ ಸಮೀಪದ ಕೇರಳಕ್ಕೆ ಅಕ್ಕಿ ಸಾಗಾಟ ನಿರ್ಬಂಧ ಇದ್ದ ಕಾಲದಲ್ಲಿ ಹಲವು ಸಾಹಸಿಗರು ರಾತ್ರಿ ಕಳೆಂಜಿಮಲೆ ದಾರಿಯಾಗಿ ಕೇರಳಕ್ಕೆ ಅಕ್ಕಿ ಸಾಗಾಟ ಮಾಡಿ ದುಡ್ಡು ಮಾಡಿದ್ದೂ, ಕಾನೂನುಪಾಲಕರೊಂದಿಗೆ ಎಗರಾಡಿದ್ದೂ  ಗೊತ್ತು. ಇದೆಲ್ಲಾ ನನ್ನ ಬಾಲ್ಯಕಾಲದ ನೆನಪುಗಳಲ್ಲಿ ಹುದುಗಿವೆ. ಕಳೆಂಜಿಮಲೆ ಒಂದು ರೀತಿಯಲ್ಲಿ ನಿಗೂಢವೂ ಆಗಿ ಜನಜೀವನಕ್ಕೆ ಸಹಾಯಕವಾಗಿಯೂ ಒದಗಿದ ಕಾಲವೊಂದಿತ್ತು. “ಈ ಕಳೆಂಜಿಮಲೆಯ ಒಡಲಲ್ಲಿ ಏನಿದೆ, ಏನಿಲ್ಲ ಎಂಬುದು ಸರಿಯಾಗಿ  ಯಾರಿಗೂ ಗೊತ್ತಿಲ್ಲ. ನಮ್ಮ ಊರಿನ ಸಂಸ್ಕೃತಿ ಮತ್ತು ಈ ಕಾಡಿನ ಪ್ರಕೃತಿಯ ನಡುವೆ ಸಂಘರ್ಷ ಮತ್ತು ಸಮನ್ವಯ ನಡೆಯುತ್ತಾ ಬಂದಿರುವುದಂತೂ ನಿಜ” ಎಂದು ಚಿನ್ನಪ್ಪ ಗೌಡರು ಗುರುತಿಸುತ್ತಾರೆ. ಇಂತಹ ಕಳೆಂಜಿಮಲೆಗೆ ಈಗ ಬಂದಿರುವ ದುಸ್ಥಿತಿಯನ್ನು ಲೇಖಕರು ಎಳೆ ಎಳೆಯಾಗಿ ಬಿಡಿಸಿ ವಿವರಿಸುವಾಗ ಅವರೊಂದಿಗೆ ಓದುಗರೂ ವಿಷಾದಯೋಗಕ್ಕೆ ಜಾರುತ್ತಾರೆ: “ರಕ್ಷಿತಾರಣ್ಯವಾಗಿದ್ದ ಈ ಕಳೆಂಜಿಮಲೆ ಈಗ ರಕ್ಷಣೆಯಿಲ್ಲದೆ ಬಳಲುತ್ತಿದೆ. ಪಶ್ಚಿಮ ಘಟ್ಟವೇ ಸೂರೆಹೋಗಿರುವಾಗ ಈ ಪುಟ್ಟ ಕಳೆಂಜಿಮಲೆ ಏನು ತಾನೇ ಮಾಡಲು ಸಾಧ್ಯ. ಬಕಾಸುರನ ಗುಹೆಯ ಬದಿಯಿಂದಲೇ

ಬೇಲಿಯೊಳಗಿನ ಬೆಳೆ – Read Post »

ಕಾವ್ಯಯಾನ

ಶ್ರಮಿಕ

ಕವಿತೆ ಶ್ರಮಿಕ ಡಾ.ಜಿ.ಪಿ.ಕುಸುಮ, ಮುಂಬಯಿನನ್ ತಾಯಿ….ನೀ ಗೆಲ್ಲಬೇಕೆಂದುನಾ ನಿಂತೆ ಒಳಗೆ.ದೂರ ದೂರದವರೆಗೆಯಾರೂ ಇಲ್ಲ ಹೊರಗೆ.ಗಲ್ಲಿಗಲ್ಲಿಗಳಲ್ಲಿ ಮೌನ ಮಲಗಿದೆಮಣ್ಣು ಒಣಗಿದೆ.ನನ್ನೆದೆ ಗೂಡು ಒದ್ದೆಯಾಗ್ತಿದೆನಿನ್ನ ಬಿಟ್ಟು ಹೋಗೊಕಾಗಲ್ಲಹೋದ್ರೆ ಹೋದಲ್ಲಿಬದುಕೋಕಾಗಲ್ಲ.ನನ್ನ ದಿನ, ನನ್ನ ರಾತ್ರಿನನ್ನ ಸೋಲು, ನನ್ನ ಗೆಲುವುಎಲ್ಲವೂ ನೀನೆ..ನೀ ಯಾವತ್ತೂ ಹೀಗೆಮನೆಬಾಗಿಲು ಮುಚ್ಕೊಂಡುಮೂಕಿಯಾಗಿದ್ದಿಲ್ಲ.ಅಂಗಾಂಗ ಸುಟ್ಟುಕೊಂಡಾಗ್ಲೂಮಳೆನೀರು ಮುಳಗಿಸಿದಾಗ್ಲೂಭಯ ಗೆದ್ದಿಲ್ಲ…ಇದೀಗ ಏನಾಯ್ತೋ ತಾಯಿಕಾಣದ ವೈರಿಗೆಎಷ್ಟೊಂದು ಸೊರಗಿದೆ.ಹಳಿತಪ್ಪಿದೆ ನೋಡು ಬದುಕಬಂಡಿಸ್ವಪ್ನನಗರಿಯಲ್ಲೀಗಬದುಕು ಘಮಘಮಿಸುವುದಮರೆತಿದೆ.ಬರಿಗಾಲಲಿ ಬರಿಕಿಸೆಯಲಿಬರಿಹೊಟ್ಟೆಗೆ ಕೈಯನಿಟ್ಟುನೆತ್ತಿಮೇಲೆರಡು ಪ್ಯಾಂಟು ಶರ್ಟುರಾಶಿ ಬಿಸಿಲ ಸೀಳಿಕಾಲನ್ನೆತ್ತಿ ಹಾಕುತಸಾಗ್ತೇನೆ ನಾನುಹೊಸ ಕನಸುಗಳ ನೇಯಲುತೀರ ಬಿಟ್ಟುಸಾಗರವ ದಾಟಲು. ***************************

ಶ್ರಮಿಕ Read Post »

ಕಾವ್ಯಯಾನ

ಹುನ್ನಾರ

ಕವಿತೆ ಹುನ್ನಾರ ಡಾ.ಸುರೇಖಾ ರಾಠೋಡ ಕಾಲಲಿ ಗೆಜ್ಜೆ ಹಾಕಿನನ್ನ ಚಲನವಲನನಿಯಂತ್ರಿಸುವಹುನ್ನಾರ ನಿನ್ನದು ಕೊರಳಲಿ ತಾಳಿ ಕಟ್ಟಿನನ್ನ ತಾಳ್ಮೆಪರೀಕ್ಷಿಸುವಹುನ್ನಾರ ನಿನ್ನದು ಕೈಯಲ್ಲಿ ಕೈ‌ಬಳೆ ತೊಡಿಸಿಏನು ಮಾಡದಂತೆಕೈಕಟ್ಟಿ ಹಾಕುವಹುನ್ನಾರ ನಿನ್ನದು ಹಣೆಗೆ ನಿನ್ನ ಹೆಸರಿನಕುಂಕುಮವ ಹಚ್ಚಿಸಿಹಣೆಯ ಬರಹವೆನಿನ್ನದಾಗಿಸಿಕೊಳ್ಳುವಹುನ್ನಾರ ನಿನ್ನದು ಕಾಲಿನ ಬೆರಳುಗಳಿಗೆಕಾಲುಂಗುರವ ತೊಡೆಸಿನಡೆಯನ್ನೆ ಕಟ್ಟಿ ಹಾಕುವಹುನ್ನಾರ ನಿನ್ನದು ಎಲ್ಲವ ತೊಡಿಸಿಕಟ್ಟಿ ಹಾಕಿರುವೇ ಎಂದುನೀ ಬಿಗುತ್ತಿರುವಾಗ …ನನ್ನ ಮನಸ್ಸನ್ನುಕಟ್ಟು ಹಾಕಲುಸಾಧ್ಯವೇ?… *********************************************************

ಹುನ್ನಾರ Read Post »

ಇತರೆ, ನಿಮ್ಮೊಂದಿಗೆ

ಅಕ್ಷರದ ಅವ್ವ ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ

ಲೇಖನ ಅಕ್ಷರದ ಅವ್ವ ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಡಾ.ಸುಜಾತಾ.ಸಿ.                                     “ನೀನು ನಂಗೊAದು ರೊಟ್ಟಿ ಕೊಟ್ರೆ                                     ಒಂದು ದಿವ್ಸ ಹಸಿವನ್ನ ತೀರಿಸ್ದಂಗೆ                                     ರೊಟ್ಟಿಗಳಿಸೋದು ಹೆಂಗೇAತ ಕಲಿಸಿದ್ರೆ                                     ಗಳಿಸೋ ಅವಕಾಶ ಕಿತ್ಕಳೋ ತಂಕ                                     ನನ್ನ ಹಸಿವನ್ನ ತೀರ್ಸಿದಂಗೆ                                     ಅದೇ ನಿನೇನಾದ್ರೂ ವಿದ್ಯೆ ಕಲ್ಸಿ                                     ಒಗ್ಗಟ್ಟಾಗಿ ಹೋರಾಡೋದು ಕಲ್ಸಿದ್ಯಾ?                                     ಏನ್ಬೇಕಾದ್ರೂ ಆಗ್ಲಿ, ಯಾವ ಕಷ್ಟನಾದ್ರೂ ಬರಲಿ                                     ಎಲ್ಲ ಒಟ್ ಸೇರಿ                                     ನಮ್ ದಾರಿ ನಾವು ಹುಡುಕೋದ ಹೇಳಿಕೊಟ್ಟಂಗೆ” ಭಾರತದ ಮೊದಲ ಮಹಿಳಾ ಶಿಕ್ಷಕಿ ಹಾಗೂ ಅಪ್ಪಟ ಸ್ತ್ರೀವಾವಾದ ಚಿಂತಕಿ ಮಾತೆ ಸಾವಿತ್ರಿ ಭಾ ಫುಲೆ ಅವರಿಗೆ ಮಹಿಳೆಯರ ಬಗ್ಗೆ ಇದ್ದ ಕಾಳಜಿ ಮತ್ತು ಪ್ರೇಮ ಅವರ ಬದುಕು ಮತ್ತು ಬರಹದಲ್ಲಿ ಕಾಣಸಿಗುತ್ತದೆ. ಮೇಲಿನ ಕವಿತೆಯನ್ನು ನೋಡಿದರೆ ಮಹಿಳೆಯರಿಗೆ ಬಹಳ ಮುಖ್ಯವಾದುದು ಶಿಕ್ಷಣವೆಂಬುದನ್ನು ಸಾರಿ ಹೇಳುತ್ತದೆ. ಇಂತಹ ತಾಯಿಯನ್ನು ನಾವು ಪದೇ ಪದೇ ನೆನೆಯಬೇಕು ಹಾಗೇ ಅವಳ ಹೆಜ್ಜೆಯಲ್ಲಿಯೇ ನಮ್ಮ ಹೆಜ್ಜೆಗಳನ್ನು ಇಡುವದರಿಂದ ಮಾತ್ರ ಅವಳ ಹೋರಾಟಕ್ಕೆ ಸಾರ್ಥಕತೆ ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಭಾರತೀಯರಿಗೆ ಅದರಲ್ಲೂ ಶೂದ್ರಾತಿಶೂದ್ರ ಬಹುಸಂಖ್ಯಾತರಿಗೆ ಹಾಗೂ ಭಾರತದ ಹೆಣ್ಣು ಮಕ್ಕಳಿಗೆ ವಿದ್ಯೆ ಕಲಿಸಲು ತನ್ನ ಇಡೀ ಜೀವನವನ್ನೇ ಮುಡುಪಾಗಿಟ್ಟು ಅಕ್ಷರ ಬೀಜವನ್ನು ಬಿತ್ತಿ ಕ್ರಾಂತಿಯನ್ನೇ ಹುಟ್ಟು ಹಾಕಿದ ದಿಟ್ಟ ಮಹಿಳೆ ಅವ್ವ ಸಾವಿತ್ರಿ ಬಾಯಿ ಫುಲೆ. ಸಾವಿತ್ರಿ ಬಾಯಿ ಅವರು ಬಡ ರೈತ ಕುಟುಂಬದಲ್ಲಿ ಶಿರವಳ ಹತ್ತಿರವಿರುವ ನಾಯಗಾವ ಎಂಬ ಹಳ್ಳಿಯಲ್ಲಿ ಝಗಡ ಪಾಟೀಲರ ಮಗಳಾಗಿ ೩ ನೇ ಜನೇವರಿ ೧೮೩೧ ರಲ್ಲಿ ಜನಿಸಿದರು. ಸಾವಿತ್ರಿಬಾಯಿ ಅವರಿಗೆ ಎಂಟು ವರುಷವಿರುವಾಗ ಗೋವಿಂದರಾವ್ ಅವರ ಮಗ ಜ್ಯೋತಿ ಬಾ ಫುಲೆ ಅವರಿಗೆ ಹದಿಮೂರು ವರ್ಷ ಇರುವಾಗ ವಿವಾಹ ಮಾಡುತ್ತಾರೆ. ಸಾವಿತ್ರಿಬಾಯಿ ಹುಟ್ಟಿದ ಊರಲ್ಲಿ ಶಿಕ್ಷಣದ ಪರಂಪರೆ ಇರಲಿಲ್ಲ. ಅನಕ್ಷರಸ್ಥಳಾದ ಸಾವಿತ್ರಿಯನ್ನು ಮದುವೆಯಾವ ಜ್ಯೋತಿಭಾ ಅಕ್ಷರ ಕಲಿಸಲು ಒರ್ವ ಶಿಕ್ಷಕನನ್ನು ನೇಮಿಸುತ್ತಾರೆ. ಆ ಶಿಕ್ಷಕರು ಕೇಶವ ಶಿವರಾಮ ಭಾವಳ್ಕರ ಎಂಬುವವರು. ಸಾವಿತ್ರಿಬಾಯಿಯವರಿಗೆ ಕಲಿಸಲು ಒಪ್ಪಿಕೊಂಡು ಅಕ್ಷರದ ಅಭ್ಯಾಸವನ್ನು ಮಾಡಿಸುತ್ತಾರೆ. ಹಾಗೆ ಸಮಯ ಸಿಕ್ಕಾಗ ಜ್ಯೋತಿಬಾಫುಲೆ ಅವರು  ಕೂಡಾ ಪಾಠ ಮಾಡಲು ಅಣಿಯಾಗುತ್ತಿದ್ದರು. ಇದರಿಂದ ಸಾವಿತ್ರಿಬಾಯಿ ಫುಲೆ ಅವರು ಸಂಗಾತಿ ಜ್ಯೋತಿಬಾಫುಲೆ ಅವರ ಹೆಗಲಿಗೆ ಹೆಗಲು ಕೊಟ್ಟು ಕ್ರಾಂತಿಯ ಜ್ಯೋತಿಯನ್ನು ಹಚ್ಚಲು ಕಾರಣವಾಯಿತು. ಸಮಾಜದ ಅನೇಕ ಮೌಢ್ಯಗಳನ್ನು ಶಿಕ್ಷಣದ ಅರಿವಿನ ಮೂಖಾಂತರ ಹೊರದೂಡುವ ಕೆಲಸವನ್ನು ದಂಪತಿಗಳು ಮಾಡಿದರು. ಅಕ್ಷರ ಕಲಿತ ಸಾವಿತ್ರಿಯವರು ಸುಮ್ಮನೆ ಕೂಡುವ ಜಾಯಮಾನದವಳಾಗಿರದೇ ತಮ್ಮ ಮನೆಯನ್ನೇ ಮೊಟ್ಟ ಮೊದಲಿಗೆ ಶಾಲೆಯನ್ನಾಗಿ ಮಾಡಿ ಗಂಡ ಹೆಂಡತಿ ಇಬ್ಬರು ಸೇರಿ ಹೆಣ್ಣು ಮಕ್ಕಳಿಗೆ ಅಕ್ಷರ ಕಲಿಸುತ್ತಾರೆ. ಜ್ಯೋತಿಬಾ ಅವರಿಗೆ ಹಿಂದೂ ಸ್ತ್ರೀಯರಿಗೆ ವಿಮೋಚನೆ ಮಾಡುವದು ಪ್ರಥಮ ಆದ್ಯ ಕರ್ತವ್ಯವೆಂದು ತಿಳಿದು ಎಲ್ಲ ಹೆಣ್ಣು ಮಕ್ಕಳ ಹಾಗೂ ಶೂದ್ರರಿಗೆ ಶಿಕ್ಷಣವನ್ನು ಕೊಡಲು ನಿರ್ಧರಿಸುತ್ತಾರೆ. ಒಂದು ದಿನ ಜ್ಯೋತಿಬಾ ಫುಲೆ ಅವರು ಮಿಸ್ ಫೆರಾರ್ ಅವರು ನಗರದಲ್ಲಿ ಅಮೇರಿಕನ್ ಮಿಷನ್ ನಡೆಸುತ್ತಿದ್ದ ಹೆಣ್ಣು ಮಕ್ಕಳ ಶಾಲೆಗೆ ಭೇಟಿ ನೀಡುತ್ತಾರೆ. ಅಲ್ಲಿ ಹೆಣ್ಣು ಮಕ್ಕಳ ಶಿಕ್ಷಣದ ವ್ಯವಸ್ಥೆಯನ್ನು ನೋಡಿ ತಾವು ಕೂಡ ಹಾಗೆ ಶಿಕ್ಷಣವನ್ನು ಕೊಡಿಸಬೇಕು ಎಂದು ಅವರನ್ನು ನೋಡಿ ಬಹಳವಾಗಿ ಪ್ರಭಾವಿತರಾಗುತ್ತಾರೆ. ೧೮೪೮ ರಲ್ಲಿ ಕೆಳಜಾತಿಯ ಹೆಣ್ಣು ಮಕ್ಕಳ ಶಾಲೆಯನ್ನು ಪ್ರಾರಂಭಿಸುತ್ತಾರೆ. ಸಂಪ್ರದಾಯವಾದಿಗಳಿಂದ ಈ ಶಾಲೆ ಬಹುಬೇಗ ಮುಚ್ಚಿ ಹೋಗುತ್ತದೆ. ಮರಳಿ ಪ್ರಯತ್ನ ಮಾಡು ಎಂಬಂತೆ ಪುಣಿಯ ಬುಧವಾರ ಪೇಟೆಯಲ್ಲಿರುವ ಬಿಢೆ ಎಂಬುವರ ಮನೆಯಲ್ಲಿ ಶಾಲೆಯನ್ನು ತೆರೆಯುತ್ತಾರೆ. ಅಹಮ್ಮದ ನಗರದ ಮಿಸ್ ಫರಾರ್ ಫಾರ್ಮಲ್ ಸ್ಕೂಲಿಗೆ ಶಿಕ್ಷಕ ತರಬೇತಿ ಪಡೆದುಕೊಳ್ಳಲು ಕಳಿಸುತ್ತಾರೆ. ಅದೇ ಶಾಲೆಯಲ್ಲಿ ಫಾತಿಮಾ ಶೇಕ್ ಎಂಬಾಕೆಯೂ ಕೂಡಾ ಕಲಿಯುತ್ತಿರುತ್ತಾರೆ. ಸಾವಿತ್ರಿಬಾಯಿ ಫುಲೆ ಅವರ ಕನಸಿಗೆ ನೀರೆಯುವಂತೆ ಫಾತಿಮಾಳು ಕೂಡಾ ಶಿಕ್ಷಕ ವೃತ್ತಿಯನ್ನು ಸಾವಿತ್ರಿಬಾಯಿ ಅವರ ಜೊತೆಗೂಡಿ ಕೆಲಸದಲ್ಲಿ ತೊಡಗಿಸಿಕೊಂಡರು. ಸಾವಿತ್ರಿ ಬಾಯಿ ಫುಲೆ ಅವರ ಶಿಕ್ಷಕ ವೃತ್ತಿ ಇಲ್ಲಿಂದಲೇ ಪ್ರಾರಂಭವಾಗುತ್ತದೆ. ಶಾಲೆ ಪ್ರಾರಂಭಿಸಿದ ಮೊದಲಲ್ಲಿ ಎಂಟು ಜನ ಹೆಣ್ಣು ಮಕ್ಕಳು ಮಾತ್ರ ಪ್ರವೇಶವನ್ನು ಪಡೆದುಕೊಂಡಿದ್ದರು. ನಂತರದ ದಿನದಲ್ಲಿ ನಲವತ್ತೇಂಟು ಜನರಿಂದ ಶಾಲೆ ಕಂಗೊಳಿಸಹತ್ತಿತ್ತು. ಅದೇ ಶಾಲೆಗೆ ಸಾವಿತ್ರಿಬಾಯಿ ಫುಲೆಯವರನ್ನು ಮುಖ್ಯ ಶಿಕ್ಷಕಿಯನ್ನಾಗಿ ನೇಮಿಸಿಕೊಳ್ಳಲಾಯಿತು. ನಿರಂತರವಾಗಿ ಶಾಲೆಯ ಅಭಿವೃದ್ಧಿಗಾಗಿ ಹಗಲಿರುಳು ದುಡಿದು ಶೈಕಣಿಕವಾಣಿ ಉತ್ತಮ ಪ್ರಗತಿಯನ್ನು ಸಾಧಿಸಲು ಸಫಲತೆಯನ್ನು ಪಡೆಯಿತು. ಆ ಶಾಲೆಗೆ ಬರುವವರೆಲ್ಲರೂ ಕಡು ಬಡತನದಲ್ಲಿ ಇದ್ದ ಹೆಣ್ಣು ಮಕ್ಕಳು.ಶೂದ್ರರು ದಮನಿತರು. ಇತಂಹ ಪರಿಸ್ಥಿತಿಯಲ್ಲಿ ಶಾಲೆಗೆ ದುಡ್ಡು ಖರ್ಚು ಮಾಡುವದು ಹರಸಾಹಸವೇ ಆಗಿತ್ತು. ಅದನ್ನು ಅರಿತ ಫುಲೆ ದಂಪತಿಗಳು ಹೆಣ್ಣು ಮಕ್ಕಳಿಗೆ ಊಟ,ಸಮವಸ್ತç, ಆಟಕ್ಕೆ ಬೇಕಾದ ಸಾಮಿಗ್ರಿಗಳ ವ್ಯವಸ್ಥೆಯನ್ನು ಮಾಡಿದರು. ಅಲ್ಲದೆ ಮಕ್ಕಳನ್ನು ಮನೆಯಿಂದ ಶಾಲೆಗೆ ಕರೆದುಕೊಂಡುಬರಲು ಮತ್ತು ಮತ್ತೇ ಮರಳಿ ಮನೆಗೆ ಕಳಿಸಲು ಸರಿಯಾದ ವ್ಯವಸ್ಥೆಯನ್ನು ಮಾಡಿದರು. ಇದರಿಂದ ಅದೆಷ್ಟೋ ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ಕಲಿಯಲು ಸಹಾಯವಾಯಿತು.  ಶೂದ್ರರು ಶಾಲೆಗೆ ಹೋಗಿ ಅಕ್ಷರ ಜ್ಞಾನ ಪಡೆದು ಕೊಳ್ಳುವುದನ್ನು ಸಹಿಸದ ಕೆಲ ಜಾತಿವಾದಿ ಪುಣಿಯ ಬ್ರಾಹ್ಮಣರು ವಿರೋಧಿಸಿದರು. ಜ್ಯೋತಿಬಾ ಫುಲೆ ಅವರಿಗೆ ಬೇದರಿಕೆಗಳನ್ನು ಹಾಕಿದರು ಆದರೆ ಇಂತಹ ಗೊಡ್ಡು ಬೇದರಿಕೆಗೆ ಹೆದರದೆ ತಮ್ಮ ಗುರಿ ಮತ್ತು ಉದ್ದೇಶವನ್ನು ಫುಲೆಯವರು ಬಿಡಲಿಲ್ಲ. ಒಂದು ಕ್ಷಣ ಇಂದಿನ ಪರಿಸ್ಥಿತಿಯಲ್ಲಿ ನಾವು ನೋಡಿದರೆ ಅಂದು ಫುಲೆ ಅವರು ತಾವು ಮಾಡುವ ಕೆಲಸದಿಂದ ಒಂದು ಹೆಜ್ಜೆ ಹಿಂದೆ ಸರಿದಿದ್ದರೆ ಎಲ್ಲ ಹೆಣ್ಣು ಮಕ್ಕಳ ಪರಿಸ್ಥಿತಿ ಏನಾಗುತ್ತಿತ್ತು ಎಂದು ವಿಚಾರಿಸಿದರೆ ಮೈಯೆಲ್ಲ ನಡುಕ ಹುಟ್ಟುತ್ತದೆ. ಪರಿಸ್ಥಿತಿ ತುಂಬಾ ಹದಗೆಟ್ಟು ಕಲಿಸಲು ಬಂದ ಶಿಕ್ಷಕರನ್ನು ಕೂಡಾ ಬೆದರಿಸಿ ಹೆದರಿಸಿ ಅವರನ್ನು ಶಾಲೆಗೆ ಬರದಂತೆ ಮಾಡುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಸಾವಿತ್ರಿಬಾಯಿಯವರನ್ನೇ ಮನೆಯಲ್ಲಿಯೇ ಪಾಠ ಮಾಡಲು ನೇಮಿಸಿಕೊಳ್ಳುತ್ತಾರೆ. ಇದನ್ನು ಅರಿತ ಇಡೀ ಪುಣಿ ತಲ್ಲಣಕ್ಕೆ ಇಡಾಗುತ್ತದೆ. ಮಹಿಳೆಯಾದವಳು ಮನೆಯಿಂದ ಹೊರಹೋಗಿ ಶಿಕ್ಷಕಿಯಾಗಿ ಕೆಲಸ ಮಾಡುವುದು ಮಹಾ ಅಪರಾಧವೆಂಬAತೆ ಸಂಪ್ರದಾಯಸ್ಥರೆಲ್ಲರೂ ವಿರೋದ ವ್ಯಕ್ತಪಡಿಸುತ್ತಾರೆ. ಇದು ರಾಷ್ಟಿçÃಯ ಗೌರವಕ್ಕೆ ಮಾಡಿದ ಅಪಮಾನವೆಂದು, ಇಂತಹ ಕೆಲಸ ಅಪವಿತ್ರವೆಂದು ಬ್ರಾಹ್ಮಣರು ಸಾವಿತ್ರಿಬಾಯಿಯವರು ಶಾಲೆಗೆ ಹೋಗುವಾಗ ಅವರ ಮೇಲೆ ಮಣ್ಣು, ಸೆಗಣಿಯನ್ನು ಎಸೆಯುತ್ತಾರೆ ದೃತಿಗೆಡದ ಸಾವಿತ್ರಿಬಾಯಿ ಅವರು “ದೇವರು ನಿಮಗೆ ಒಳ್ಳೆಯದು ಮಾಡಲಿ, ಅವನು ನಿಮ್ಮನ್ನು ಕ್ಷಮಿಸಲಿ, ನನ್ನ ಕರ್ತವ್ಯವನ್ನು ನಾನು ನಿರ್ವಹಿಸುತ್ತಿದ್ದೇನೆ” ಎಂದು ಸಾವಿತ್ರಿಬಾಯಿಯವರು ತಮ್ಮ ಮೇಲೆ ಸೆಗಣಿ ಎಸೆದವರಿಗೆ ಒಳ್ಳೆಯದಾಗಲಿ ಎಂದು ದೇವರನ್ನು ಪ್ರಾರ್ಥಿಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಸಾವಿತ್ರಿಬಾಯಿ ಅವರು ಶಾಲೆಗೆ ಹೋಗುವಾಗ ತಮ್ಮ ಕೈಯಲ್ಲಿ ಒಂದು ಸೀರೆಯನ್ನು ಹಿಡಿದುಕೊಂಡು ಹೋಗುತ್ತಿದ್ದರು ಶಾಲೆ ಪ್ರವೇಶಿಸಿದ ನಂತರ ಸೆಗÀಣಿಯ ಸೀರೆಯನ್ನು ಕಳಚಿ ಕೈಯಲ್ಲಿ ತಂದ ಮತ್ತೋಂದು ಸೀರೆಯನ್ನು ಊಡುತ್ತಿದ್ದರು. ಯಾವದಕ್ಕೂ ತಲೆ ಕೆಡಿಸಿಕೊಳ್ಳದೆ ತಮ್ಮ ಪತಿಯ ಸಹಾಯದಿಂದ ಕೆಲಸದಲ್ಲಿ ನಿರತರಾಗುತ್ತಾರೆ. ಸಾವಿತ್ರಿಬಾಯಿಯವರು ಸ್ತ್ರೀಯರ ಸುಧಾರಣಿಗಾಗಿ ಜ್ಯೋತಿರಾವರ ಮಾರ್ಗದರ್ಶನದಲ್ಲಿ “ಮಹಿಳಾ ಸೇವಾ ಮಂಡಳ”ವನ್ನು ಸ್ಥಾಪನೆ ಮಾಡುತ್ತಾರೆ. ಪುಣಿಯ ಕಲೆಕ್ಟರ್ ಅವರ ಪತ್ನಿ ಇ.ಸಿ.ಜೋನ್ಸ ಎಂಬುವರು ಮಹಿಳಾ ಸೇವಾ ಮಂಡಳ ಸಂಸ್ಥೆಯ ಅಧ್ಯಕ್ಷರಾಗುತ್ತಾರೆ. ಮಹಿಳೆಯರನ್ನೆಲ್ಲಾ ಒಟ್ಟು ಗೂಡಿಸಲು ೧೮೫೨ ರಲ್ಲಿ ದೊಡ್ಡ ಪ್ರಮಾಣದ ಎಳ್ಳುಬೆಲ್ಲ ಹಂಚುವ ಕಾರ್ಯಕ್ರಮ ಹಮ್ಮಿಕೊಂಡು ಎಲ್ಲ ಹೆಣ್ಣು ಮಕ್ಕಳಿಗೆ ಕುಂಕುಮವನ್ನು ವಿತರಿಸಿ ಅವರಿಗೆಲ್ಲ ಊಡಿಯನ್ನು ತುಂಬುತ್ತಾರೆ. ೧೮೭೧ ರಲ್ಲಿ ಸ್ತ್ರೀ ವಿಚಾರವತಿ’ ಸಭಾ ಸ್ಥಾಪನೆ ಮಾಡುತ್ತಾರೆ. ಆ ಕಾಲದಲ್ಲಿ ಬ್ರಾಹ್ಮಣ ಸ್ತ್ರೀಯರಿಗೆ ಹೆಚ್ಚಿನ ತೊಂದರೆ ಇತ್ತು. ಅದರಲ್ಲಿ ವಿಧವೆಯರಾದರೆ ಅನೇಕ ಬ್ರಾಹ್ಮಣ ಮನೆತನದ ಮಾವ, ಮೈದುನ ಮುಂತಾದವರು ಅವರ ಮೇಲೆ ಬಲಾತ್ಕಾರ ಮಾಡುತ್ತಿದ್ದರು. ಲೈಂಗಿಕ ಶೋಷಣೆ ಮಾಡುತ್ತಿದ್ದರು. ಇದರ ಪರಿಣಾಮವಾಗಿ ಅವರಿಗೆ ಮಕ್ಕಳಾದರೆ ‘ಬಾಲ ಹತ್ಯೆ’ ಮಾಡುತ್ತಿದ್ದರು. ಇಲ್ಲವೇ ಗರ್ಭವತಿಯಾದರೆ ಸ್ವತಃ ಅವರೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು. ಇವೆಲ್ಲವನ್ನೂ ತಡೆಗಟ್ಟುವ ಉದ್ದೇಶದಿಂದ ಜ್ಯೋತಿಭಾರವರು ‘ಬಾಲಹತ್ಯಾ ಪ್ರತಿಬಂಧಕ ಗೃಹ’ ಸ್ಥಾಪಿಸಿದರು. ತರುಣ ಬ್ರಾಹ್ಮಣ ವಿಧವೆಯರಿಗೆ ಈ ಗೃಹ ದೊಡ್ಡ ಆಧಾರವಾಗಿತ್ತು. ೧೮೬೩ರಲ್ಲಿ ಸ್ವಂತ ಮನೆಯಲ್ಲಿ ಸ್ಥಾಪಿಸಿದ ಅನಾಥ ಬಾಲಶ್ರಮವನ್ನು ಸಾವಿತ್ರಿಯವರು ೩೫ ಜನರಿಗೆ ಬಾಣಂತನವನ್ನು ಮಾಡಿದರು. ಸವರ್ಣೀಯ ವಿಧವೆಯರು ಅವರ ಸೇವೆ ಮಾಡುವಾಗ ಸಾವಿತ್ರಿಭಾಯಿಯವರಿಗೆ ಅದು ಎಂದು ಕೀಳಾಗಿ ತೋರಲಿಲ್ಲ. ೧೮೭೩ರಲ್ಲಿ ಕಾಶೀಬಾಯಿ ಎಂಬ ಬ್ರಾಹ್ಮಣ ವಿಧವೆಯ ಇಂತಹದೇ ಸಂಬಂಧದಿಂದ ಹುಟ್ಟಿದ ಮಗನನ್ನು ಜ್ಯೋತಿಬಾಪುಲೆ ಮತ್ತು ಸಾವಿತ್ರಿಬಾಯಿಪುಲೆ ದತ್ತು ತೆಗೆದುಕೊಳ್ಳುತ್ತಾರೆ. ಆ ಮಗುವಿಗೆ ಯಶವಂತ ಅಂತಾ ನಾಮಕರಣ ಮಾಡುತ್ತಾರೆ. ಅನನ್ನು ಎಂ.ಬಿ.ಬಿ.ಎಸ್ ಓದಿಸಿ ಡಾಕ್ಟರರನ್ನಾಗಿ ಮಾಡುತ್ತಾರೆ.ಹೀಗೆ ಮಹಿಳೆಯರಿಗಾಗಿ ವಿಧವೆಯರ ಪುನರ್ವಸತಿ, ವಿಧವಾ ಅನಾಥಾಶ್ರಮವನ್ನು ಕೂಡಾ ಸ್ಥಾಪಿಸುತ್ತಾರೆ. ಪುಲೆಯವರು ಸ್ಥಾಪಿಸಿದ್ದ ವಿಧವಾ ಅನಾಥಾಲಯವು ದೇಶದಲ್ಲಿಯೇ ಸ್ಥಾಪಿಸಿದ ಪ್ರಥಮ ಸಾಮಾಜಿಕ ಸಂಸ್ಥೆಯಾಗಿದ್ದಿತು. ೧೮೬೮ರಲ್ಲಿ ತಮ್ಮ ‘ನೀರಿನಬಾವಿ’ಯನ್ನು ಕೆಳಜಾತಿಗಳಿಗೆ ಮುಕ್ತಗೊಳಿಸಿ ಬಿಡುತ್ತಾರೆ. ಇದರಿಂದ ಎಷ್ಟೋ ಕೆಳವರ್ಗದವರಿಗೆ ನೀರು ಸಿಕ್ಕಂತಾಗುತ್ತದೆ. ಶಿಕ್ಷಣ ನೀಡುವ ದಾಹವು ಪುಲೆಯವರು ವಯಸ್ಕ ರೈತರು  ಮತ್ತು ದುಡಿಯುವವರಿಗಾಗಿ ರಾತ್ರಿ ಶಾಲೆಯನ್ನು ಪ್ರಾರಂಭಿಸುವAತೆ ಮಾಡಿತು. ತಮ್ಮ ಮನೆಯಲ್ಲಿ ರಾತ್ರಿ ಶಾಲೆಯನ್ನು ಪ್ರಾರಂಭಿಸಿ ಪ್ರತಿದಿವಸ ೨ ಗಂಟೆಗಳ ಕಾಲ ತಾವು ಮತ್ತು ತಮ್ಮ ಪತ್ನಿ ಸಾವಿತ್ರಿಬಾಯಿ ಪುಲೆಯವರು ‘ಅಶಿಕ್ಷಿತ ವಯಸ್ಕ, ರೈತರರಿಗೆ ಶಿಕ್ಷಣವನ್ನು ನೀಡುತ್ತಿದ್ದರು. ನಿರಂತರ ಹೋರಾಟದಿಂದ ೭೩ ವರ್ಷದ ಮಹಾತ್ಮ ಜ್ಯೋತಿಬಾಪುಲೆಯವರು ಧೀರ್ಘ ಅನಾರೋಗ್ಯದಿಂದ ೧೮೯೦ರಲ್ಲಿ ನವೆಂಬರ್ ೨೮ರಂದು ನಿಧನರಾದರು. ಮಕ್ಕಳಾಗದ ದಂಪತಿಗಳಾಗಿದ್ದರಿAದ ದತ್ತು ಪುತ್ರ ಯಶವಂತನಿಗೆ ಸಂಸ್ಕಾರ ಮಾಡಲು ಕುಟುಂಬದವರು ಒಪ್ಪದೇ ಇದ್ದಾಗ ಸ್ವತಃ ಕೈಯಲ್ಲಿ ದಿವಟಿಯನ್ನು ಹಿಡಿದು ಜ್ಯೋತಿಯವರ ಅಂತ್ಯ ಸಂಸ್ಕಾರ ಮಾಡಿದ ದಿಟ್ಟ ಮಹಿಳೆ ಸಾವಿತ್ರಿಬಾಯಿ ಪುಲೆ. ಹಾಗೇ ಅವರು ತಮ್ಮ ಇಡೀ ಜೀವನದ ಉದ್ದಕ್ಕೂ ಹೆಣ್ಣುಮಕ್ಕಳಿಗಾಗಿ ಮತ್ತು ಅಶ್ಪೃಶ್ಯರಿಗಾಗಿ ಶಾಲೆ ಪ್ರಾರಂಭಿಸಿದರು. ಬಾಲಹತ್ಯಾ ಪ್ರತಿಬಂಧಕ ವಿಧವಾ ಅನಾಥಾಶ್ರಮ, ಕೂಲಿಕಾರ ರೈತರಿಗಾಗಿ ರಾತ್ರಿಶಾಲೆ, ಬಡವರಿಗಾಗಿ ಅನ್ನಛತ್ರಗಳನ್ನು ತೆರೆದರು. ಬ್ರಾಹ್ಮಣ ವಿಧವೆಯರ ತಲೆಬೋಳಿಸುವುದನ್ನು ವಿರೋಧಿಸಿದರು. ದೇವದಾಸಿ ಪದ್ಧತಿ ನಿರ್ಮೂಲನೆ ಮಾಡುವ ಪ್ರಯತ್ನದಲ್ಲಿ ತೋಡಗಿದರು. ಹೀಗೆ ಎಲ್ಲ ರೀತಿಯ ಸಾಮಾಜಿಕ ಕ್ರಾಂತಿಯನ್ನೇ ಮಾಡಿದ ಮೊದಲ ಮಹಿಳೆ ಸಾವಿತ್ರಿಬಾಫುಲೆ ಎಂದರೆ ತಪ್ಪಾಗಲಾರದು. ಒಟ್ಟಾರೆಯಾಗಿ ಸಮಾಜದ ಎಲ್ಲ ಅನಿಷ್ಟಗಳಿಗೂ ಕಾರಣವಾದ ಜಾತಿಪದ್ಧತಿ ಅಳಿಯಬೇಕೆಂದು ಜಾಲ್ತಿಯಲ್ಲಿದ್ದ ಬಹುಪಾಲು ವ್ಯವಸ್ಥೆ ಆಚರಣೆ ನಂಬಿಕೆಗಳಿಗೆ ಸವಾಲೆಸೆದರು. ಶಿಕ್ಷಣ ಎಲ್ಲರ ಹಕ್ಕು ಎಂದು ಸಾರಿ ಶಾಲೆಯನ್ನು ತೆರೆದರು ಪುರೋಹಿತರಿಲ್ಲದೆ ಮದುವೆ ಮಾಡಿಸಿದರು. ಬಹುಪತ್ನಿತ್ವವನ್ನು ವಿರೋಧಿಸಿದರು. ವಿಧವೆಯರ ಮಾನವ ಹಕ್ಕುಗಳ ಎತ್ತಿ ಹಿಡಿದು ಮರು ವಿವಾಹವನ್ನು ಪ್ರತಿಪಾದಿಸಿದರು. ಸತ್ಯಶೋಧಕ ಸಮಾಜ ಕಟ್ಟಿದರು. ತಮಗೆ ತಿಳಿದಂತೆ ಕವಿತೆಗಳನ್ನು ಬರೆದರು. ಎಲ್ಲ ಧರ್ಮಗಳ ಶಾಸ್ತç-ಪುರಾಣ-ಗ್ರಂಥಗಳ ನಿರಾಕರಿಸಿ ಸಾರ್ವಜನಿಕ ಸತ್ಯ ಧರ್ಮ ಪ್ರತಿಪಾದಿಸಿ ಹೊಸ ಹೊಸ ಗ್ರಂಥಗಳನ್ನು ರಚಿಸಿ ಓದುಗರ ಮನಸ್ಸನ್ನು ಸೋರೆಗೊಂಡ ಮಹಾನ್ ಕ್ರಾಂತಿಕಾರಿ ತಾಯಿಯಾಗಿ ನಮಗೆಲ್ಲ ಮಾರ್ಗದಾತೆಯಾದವರು. ಇಂತಹ ಮಾತೆ ಸಾವಿತ್ರಿಬಾಯಿಯವರ ಕಲಿಸಿದ ಪಾಠದ ಪರಿಣಾಮವಾಗಿ ಹದಿನಾಲ್ಕು ವರ್ಷದ ‘ಮುಕ್ತಾ’ ಎಂಬ ಹುಡಗಿ ೧೫ನೇ ಫೆಬ್ರುವರಿ ೧೮೫೫ ರಿಂದ ೯ ಮಾರ್ಚ ೧೮೫೫ ರ ಜ್ಞಾನೋದಯ ಎಂಬ ಪತ್ರಿಕೆಯ ಅಂಕಣದಲ್ಲಿ ‘ಹೊಲೆಯ ಮಾದಿಗರ ದುಖಃಗಳು’ ಎಂಬ ಪ್ರಬಂಧ ಪ್ರಕಟವಾಗುತ್ತದೆ. ಇದೆಲ್ಲದರ ಪರಿಣಾಮವಾಗಿ  ಅವರು ಕಟ್ಟಿದ ಕನಸು ನನಸಾಗಲು ಬಹಳ ಸಮಯ ಹಿಡಿಯುವದಿಲ್ಲ. ೧೮೪೮ ರಿಂದ ೧೮೫೨ರ ಅವಧಿಗೆ ೧೮ ಶಾಲೆಗಳನ್ನು ತೆರೆಯುತ್ತಾರೆ. ಇದರಿಂದ ನಮಗೆಲ್ಲಾ ತಿಳಿದು ಬರುವ

ಅಕ್ಷರದ ಅವ್ವ ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ Read Post »

You cannot copy content of this page

Scroll to Top