Day: January 5, 2021

ಹಿಮಾಲಯ ಪರ್ವತ ಶ್ರೇಣಿಗಳು”

ಲೇಖನ ಹಿಮಾಲಯ ಪರ್ವತ ಶ್ರೇಣಿಗಳು” ಆಶಾ ಸಿದ್ದಲಿಂಗಯ್ಯ ಸಿಂಧೂ ನದಿಯ ಬಯಲಿನಲ್ಲಿ ಸಂಸ್ಕೃತಿ ರೂಪುಗೊಳ್ಳುವ ಮೊದಲೇ ಗೊಂಡಿ ಭಾಷೆಯಿತ್ತು ಎನ್ನುವ ಮಾತು ಹೆಚ್ಚು ಮುಖ್ಯವಾಗುತ್ತದೆ. ಹಲವು ಲಕ್ಷ ವರ್ಷಗಳ ಹಿಂದೆ ಈಗಿನ ದಕ್ಷಿಣ ಅಮೆರಿಕ, ದಕ್ಷಿಣ ಆಫ್ರಿಕಾ, ಏಷ್ಯಾ ಖಂಡದ ದಕ್ಷಿಣ ಭಾಗ, ಆಸ್ಟ್ರೇಲಿಯಾ ಮತ್ತು ದಕ್ಷಿಣ ಅಂಟಾರ್ಟಿಕಾಗಳು ಕೂಡಿದ್ದ ಭೂಭಾಗವಿತ್ತು. ಅದನ್ನು ಗೊಂಡ್ವಾನ ಎಂದು ಕರೆಯುತ್ತಿದ್ದರು. ಭಾರತದ ವಿಂಧ್ಯ ಪರ್ವತ ಶ್ರೇಣಿಯ ದಕ್ಷಿಣ ಭಾಗ ಅಂದರೆ ದಕ್ಷಿಣ ಭಾರತದ ಪ್ರಸ್ಥಭೂಮಿ ಗೊಂಡ್ವಾನ ಪ್ರದೇಶದ ಭಾಗವಾಗಿತ್ತು. ಅಲ್ಲಿ […]

ಗಜಲ್

ಗಜಲ್ ರತ್ನರಾಯಮಲ್ಲ ಚಳಿಯ ನಿನ್ನಯ ಆಲಿಂಗವನ್ನು ಬಯಸುತಿದೆಒಂಟಿತನ ನಿನ್ನಯ ಜೊತೆಯನ್ನು ಬಯಸುತಿದೆ ಬದುಕಿನಲ್ಲಿ ಬಹು ದೂರ ಸಾಗಬೇಕಾಗಿದೆ ನಾನುಜೀವನವು ನಿನ್ನಯ ಸನಿಹವನ್ನು ಬಯಸುತಿದೆ ನನ್ನೆದೆಯ ಗೂಡು ಹಾಳುಬಿದ್ದ ಕೊಂಪೆಯಾಗಿದೆನನ್ನ ಹೃದಯವು ನಿನ್ನ ಬಡಿತವನ್ನು ಬಯಸುತಿದೆ ತಿಂದ ಅನ್ನ ರುಚಿಯೆನಿಸುತಿಲ್ಲ ಮುದ್ದು ಬಂಗಾರಿಜೀವವು ನಿನ್ನ ಪ್ರೀತಿಯ ಕೈತುತ್ತನ್ನು ಬಯಸುತಿದೆ ‘ಮಲ್ಲಿ’ಯ ಮೈ-ಮನವು ಮರೆತಿದೆ ಬದುಕುವುದನ್ನುಬರಡಾದ ಬಾಳು ನಿನ್ನ ಸಾಂಗತ್ಯವನ್ನು ಬಯಸುತಿದೆ

ನಾಲ್ಕು ದಿನದ ಪಯಣ

ಕಾವ್ಯಯಾನ ನಾಲ್ಕು ದಿನದ ಪಯಣ ತೇಜಾವತಿ ಹೆಚ್.ಡಿ. ಪ್ರವಾಹವೋ ಬಿರುಗಾಳಿಯೋಚಂಡಮಾರುತವೋ ಜ್ವಾಲಾಮುಖಿಯೋ ಸುನಾಮಿಯೋ… ಯಾವುದೋ ಒಂದು ವಿಕೋಪಬಂದೆರಗಲೇಬೇಕುನವನೆಲೆ ರೂಪಾಂತರವಾಗಲುಹೊಸ ಅಲೆ ಪ್ರಸಾರವಾಗಲು… ಬೇಕಾದದ್ದು ಬೇಡವಾಗಿಬೇಡವಾದದ್ದು ಬೇಕಾಗಿಕಸ ರಸವಾಗಿ, ರಸ ಕಸವಾಗಿಎಲ್ಲವೂ ತಲೆಕೆಳಾಗಾಗುವವಿಚಿತ್ರ ಸತ್ಯ-ಮಿಥ್ಯ ಪ್ರತಿಬಿಂಬಗಳ ದರ್ಶನವಾಗಲು…ಓ ಕಾಲನೇ… ವಜ್ರಕ್ಕಿಂತಲೂ ನೀನೆಷ್ಟು ಕಠೋರ.. ನಿನ್ನನುಗ್ರಹವಿದ್ದರೆಹೂವಿನ ಮೇಲಿನ ನಡಿಗೆಇಲ್ಲದಿದ್ದರೆ..ಕತ್ತಿಯ ಮೇಲಿನ ನಡಿಗೆಮುಟ್ಟಿದ್ದೆಲ್ಲಾ ಮಲ್ಲಿಗೆಯಾಗಿಸುವ ನಿನಗೆತಾಕಿದ್ದೆಲ್ಲ ನಂಜಾಗಿಸುವ ಕಲೆಯೂ ಕರಗತವಾಗಿದೆ ಬಿಡು.. ಎಂದಾದರೂ ನಿನ್ನಂತರಗವ ಅಳೆಯಲಾದೀತೇ…?ಈ ಕ್ಷಣಿಕದ ಗೊಂಬೆಗಳು..! ದಾನ ಮಾಡಿದ ಕರಗಳು ಬೇಡುವುದೆಂದರೇನು..ತನ್ನಸ್ತಿತ್ವವ ಪರರ ವಶದಲ್ಲಿಟ್ಟುನಶ್ವರದ ಬಾಳು ಬದುಕುವುದೆಂದರೇನು.. ನೂರೊಂದು […]

ಸಾವಿತ್ರಿ

ಕವಿತೆ ಸಾವಿತ್ರಿ ಡಾ.ಸುರೇಖಾ ರಾಠೋಡ ವೀರ ಮಹಿಳೆ ಸಾವಿತ್ರಿಅಕ್ಷರದ ಅವ್ವ ಸಾವಿತ್ರಿ ಅಕ್ಷರ ಕಲಿಯಲು ಹೊರಾಡಿದಅಕ್ಷರ ಕಲಿಸಲು ಶ್ರಮಿಸಿದವೀರ ಮಹಿಳೆ ಸಾವಿತ್ರಿ ದಿನ ದಲಿತರ ಶಿಕ್ಷಣಕ್ಕಾಗಿನಿಂದನೆ, ಅಪಮಾನ, ಅವಮಾನಗಳನ್ನುಸಹಿಸಿದ ವೀರ ಮಾತೆ ಸಾವಿತ್ರಿ ಬಡವಬಲ್ಲಿದವರೆನ್ನೆದೆ ಎಲ್ಲರಸೇವೆ ಮಾಡಿದದೇಶದ ಮೊದಲ ಶಿಕ್ಷಕಿಮೊದಲ ಮುಖ್ಯೋಪಾಧ್ಯಾಯಿನಿಸಾವಿತ್ರಿ ಮಹಿಳಾ ಶಿಕ್ಷಣಕ್ಕಾಗಿ ಜೀವನವನ್ನೇಮುಡುಪಾಗಿಟ್ಟವೀರ ಮಾತೆ ಸಾವಿತ್ರಿ ಜ್ಯೋತಿ ಬಾ ಪುಲೆಯವರೊಂದಿಗೆಶಾಲೆಗಳನ್ನು ತೆರೆದ ಶಿಕ್ಷಣದಾತೆಸಾವಿತ್ರಿ ಜನರ ಕೆಂಗಣ್ಣಿಗೆ ಗುರಿಯಾಗಿಸಂಪ್ರದಾಯಸ್ಥರನ್ನು ಎದುರು ಹಾಕಿಕೊಂಡುದಿಟ್ಟತನದಿಂದ ಮುಂದೆ ನಡೆದದಿಟ್ಟ ಮಹಿಳೆ ಸಾವಿತ್ರಿ ಶಾಲಾ ಮಕ್ಕಳ ಬೇಕು ಬೇಡಗಳನ್ನುಕುಂದುಕೊರತೆಗಳನ್ನು ನಿಗಿಸಿದಸಹನಾಮಯಿ ಸಾವಿತ್ರಿ […]

ಮಾತು ಮನವನ್ನು ಅರಳಿಸಬೇಕು

ಲೇಖನ ಮಾತು ಮನವನ್ನು ಅರಳಿಸಬೇಕು ಮಾಲಾ ಕಮಲಾಪುರ್ ಭಾಷೆ ಮನುಷ್ಯನಿಗೆ  ಲಭಿಸಿದ ದೈವ ದತ್ತ ವರ ವಾದರೆ ಮಾತು ನಮ್ಮ ಭಾವನೆಗಳನ್ನು ಅಭಿವ್ಯಕ್ತಗೊಳಿಸುವ ಮೂಲಕ ಅಮೂಲ್ಯ ಸಾಧನ ಆಗಿದೆ. ಮಾತು ನಮ್ಮ ಬದುಕನ್ನು ಕಟ್ಟುತ್ತದೆ. ಇದು ವ್ಯಕ್ತಿಯ  ಬಿಚ್ಚಿಡುವ ಪಾರಿಜಾತದ ಪರಿಮಳದಂತೆ. ನಾವಾಡುವ ಮಾತು ಪುಷ್ಪದ ದಳದಂತೆ. ಮಾತಿನ ಬಳಕೆ  ಬಲ್ಲವರು ಮಾಣಿಕ್ಕ್ಯ ತರುತ್ತಾರೆ. ಬಳಿಕೆ ಅರಿಯದವರು ಜಗಳ ತರುತ್ತಾರೆ.ಮನುಷ್ಯನು  ಯಾವುದೇ ಲೌಕಿಕ ವಾದ ವಸ್ತು ಗಳಿಂದ ಅಲಂಕಾರ ಮಾಡಿಕೊಂಡರು ಶೋಭಿಸುವುದಿಲ್ಲ. ಆದರೆ ಒಳ್ಳೆಯ ಮಾತು ಮತ್ತು […]

Back To Top