ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ಗಜಲ್

ಗಜಲ್ ಶಿವರಾಜ್.ಡಿ ಪ್ರೇಮ ಮದಿರೆಯ ನಶೆಗೆ ಸಿಹಿಮುತ್ತುಗಳೇ ಸಾಕ್ಷಿ ಸಾಕಿಮುತ್ತಿನ ಮತ್ತಿಗೆ ಜೋಲಾಡುತ್ತಿರುವ ಅಕ್ಷಿಗಳೇ ಸಾಕ್ಷಿ ಸಾಕಿ ಪ್ರೀತಿ ಪ್ರೇಮಕೂ ಕಾಮದ ರೂಪ ಉಂಟೂ ಲೋಕದಲಿನಮ್ಮಿಬ್ಬರ ಪರಿಶುದ್ಧ ಪ್ರೇಮಕೆ ಈ ರಾತ್ರಿಗಳೇ ಸಾಕ್ಷಿ ಸಾಕಿ ಸೌಂದರ್ಯವ ಆಸ್ವಾದಿಸದೇ ಅನುಭೋಗಿಸುವುದು ಸಲ್ಲದುಹೃದಯಾಂತರಾಳದಲಿ ಮಿಳಿತಗೊಂಡ ಆತ್ಮಗಳೇ ಸಾಕ್ಷಿ ಸಾಕಿ ನಿನ್ನೊಲವ ಸವಿರುಚಿಯ ಉಣಬಡಿಸು ನನ್ನೆದೆಗೆನೀನಿರದ ಅನುಕ್ಷಣಗಳಿಗೆ ವಿರಹಗಳೇ ಸಾಕ್ಷಿ ಸಾಕಿ ಪ್ರೀತಿ ಎಂದರೆ ಬರೀ ದೇಹಾಕರ್ಷಣೆ ಅಲ್ಲ ‘ ಬಾಬಾ ‘ಮನಸ್ಸು ಮನಸ್ಸುಗಳ ಸಮ್ಮೀಲನಗಳೇ ಸಾಕ್ಷಿ ಸಾಕಿ *******************************************

ಗಜಲ್ Read Post »

ಕಾವ್ಯಯಾನ

ನನ್ನವನು

ಕವಿತೆ ನನ್ನವನು ಅನಿಲ ಕಾಮತ ಮದಿರೆಯ ಅಮಲಿನಲ್ಲಿದ್ದಾಗಕೈಹಿಡಿದು ಕುಳುಣಿಸಿದ್ದೇನೆಹಸಿವಿನಿಂದ ಒಡಲುಉರಿ ಎದ್ದರುಒಡಲು ತುಂಬಿದವರಂತೆನಟಿಸಿರುವೆ ಮಾನನಿಯರ ಸಂಘದಲ್ಲಿಮುಳುಗಿದರುಮೌನ ಮುರಿಯದಿರುವೆಮೈಯ ಮೇಲಿನಬರೆ ಸರಿಕರಿಗೆಸಣ್ಣ ಗುಮಾನಿಯೂಬರೆದ ಹಾಗೆಸೀರೆಯಿಂದಸುತ್ತಿಕೊಂಡಿರುವೆರಂಡೆ ಮುಂಡೆಯಬೈಗಳಿಗೆ ದಿನಂಪ್ರತಿಆಹಾರವಾಗಿರುವೆನಿನ್ನ ಸಿಟ್ಟಿಗೆ ಅದೆಷ್ಟು ಸಲನಾನು ಆಹುತಿಯಾಗಿರುವೆಏಕೆಂದರೆ ನೀನುನನ್ನವನು…………. ******************************************************

ನನ್ನವನು Read Post »

ಪುಸ್ತಕ ಸಂಗಾತಿ

ನಿರುತ್ತರ

ಪುಸ್ತಕ ಸಂಗಾತಿ ನಿರುತ್ತರ ನಿರುತ್ತರ-ಕವನ ಸಂಕಲನಪ್ರಕಾಶಕರು-ದೀಪ್ತಿ ಬುಕ್ ಹೌಸ್ ಮೈಸೂರುಪುಟಗಳು-೧೧೨ಬೆಲೆ-೧೦೦ರೂ ಅದೇ ಹಳೆಯ ಒಲೆಗೆ ಹೊಸ ಉರಿಯ ಹಾಕಿ ಪ್ರತಿದಿನ ನಾವೀನ್ಯದ ಬೆಳಕು ತೆರೆದಿದೆ ಬೆಳಕಿನ ಬದುಕು. … ಕವಿತೆ ಹುಟ್ಟುವುದೇ ಒತ್ತಡದಿಂದ ಎನ್ನುವುದು ನನ್ನ ನಂಬಿಕೆ. ಎಲ್ಲಾ ಸಾಂಗವಾಗಿ ಸಾಗುತ್ತಿದ್ದಾಗ ಸಾಲೊಂದೂ ಹೊಳೆಯದೆ ಕವಿತೆಯೆಂಬ ಈ ಚಂಚಲೆಯನ್ಮು ಹುಡುಕಿ ಗಾಬರಿಯಾಗುವುದು ನನಗೆ ಆಗಾಗ ಘಟಿಸುವ ಸಂಗತಿ. ಈ ಒತ್ತಡದಿಂದ ಹುಟ್ಟಿದ್ದನ್ನು ಪ್ರಮಾಣಬದ್ದವಾಗಿ ಬೆಳೆಸಿ ಅಕ್ಷರಗಳಲ್ಲಿ ಬೆಳೆಯಗೊಟ್ಟರೆ ಕವಿಯಾಗಿ ಗೆದ್ದಂತೆ. ಒಲಿದಂತೆ ಹಾಡುವೆ ಎನ್ನುವ ನನ್ನ ಮೊಂಡುವಾದಕ್ಕೆ ಹಿರಿಯರೊಬ್ಬರು ಏನನ್ನೇ ಮಾಡಿದರೂ ವೃತ್ತಿಪರಳಂತೆ ಮಾಡು.ಪ್ರೋಫೆಶನಲಿಸಮ್ ರೂಢಿಸಿಕೊ ಎನ್ನುವಾಗೆಲ್ಲ ಕವಿತೆಯಂತಹ ಮೆದು ಮೃದುಭಾವಕ್ಕೆ ವೃತ್ತಿಯೆಂಬ ಒರಟುತನವನ್ನು ಎಂದಾದರೂ ಹೊಂದಿಸಬಹುದೇ ಎನಿಸಿ ಅವರೆದುರುಗೆ ಹುಹು ಅಂತಂದು ಮತ್ತದೆ ಒಲಿಯುವ ಹಾಡುವ ಅಕ್ಷರ ಗಳಿಗಾಗಿ ಕಾಯುತ್ತಿದ್ದೆ. … ಈಗ ಐದು ವರ್ಷಗಳ ಹಿಂದೆ ದಸರಾ ಕವಿಗೋಷ್ಠಿಯಲ್ಲಿ ಪರಿಚಿತರಾದ ಪುಟ್ಟ ಸುಂದರಿ ಸಂಗೀತಾ ರವಿರಾಜ್ ತನ್ನ  ಕವನ ಸಂಕಲನ ನಿರುತ್ತರವನ್ನು ನನಗೆ ಕಳಿಸಿದ್ದಾರೆ. ಇಲ್ಲಿನ ಕವಿತೆಗಳ ಕುರಿತು ಬರೆಯಬೇಕೆಂದರೆ ನನಗೆ ಆ ವೃತ್ತಿಪರತೆಯ ನೆನಪಾಯಿತು. ಇಲ್ಲಿನ ಎಲ್ಲ ಕವಿತೆಗಳೂ ಸಾಧು,ಮೃದು. ಎಲ್ಲೂ ಘೋಷವಿಲ್ಲ.ರೋಷವಿಲ್ಲ ಕ್ರಾಂತಿಯಿಲ್ಲ,ಭೀತಿಯೂ ಈ ಕವಿತೆಗಳಿಗಿಲ್ಲ. ಇದೇನಿದ್ದರೂ ಪ್ರಳಯ ಸ್ವರೂಪಿ‌ಮಳೆ ಬಂದ ಮೇಲೆ  ಮೆಟ್ಟಿಲೇರುವ ಪುಟ್ಟ ಗುಬ್ಬಿಯಂತವು. ಇಲ್ಲಿನ ಮೊದಲ ಪದ್ಯ ನೇಪಥ್ಯ ಬಹುಶಃ ತರಂಗದಲ್ಲಿ ಓದಿದ್ದೆ ಅನಿಸಿತು. ಕತ್ತರಿಸಿ ಉತ್ತರಿಸಿ ಅರೆದು ತುರಿದು ಬಾಡಿಸಿ ಬೇಯಿಸಿ ಕುದಿಸಿ ಉಣ್ಣುವ ಅಡುಗೆ ಬರೀ ಅಷ್ಟರಿಂದಲೇ ರುಚಿಯಾಗ್ತದೆಯಾ. ಇಲ್ಲ. ಅದಕ್ಕೆ ಚಿಟಿಕೆ ಇಂಗು ಸಾಸಿವೆ ಕರಿಬೇವಿನ‌ ಒಗ್ಗರಣೆ ಬೇಕು.ಹೀಗೆ ಥರೆವಾರಿ ವಿಧಾನಗಳಲ್ಲಿ ತಯಾರಾದ ಅಡುಗೆ ಮುಗಿಯುವುದು ಕೊನೆಯ ಒಗ್ಗರಣೆಯಿಂದ. ಆದರೆ  ಒಗ್ಗರಣೆಯ ಆ ಕರಿಬೇವು ಮೆಣಸು ಸಾಸಿವೆ ಗಳು ಊಟದಲ್ಲಿ ಮೈಲಿಗೆ. ಅವನ್ನು ಎತ್ತಿಟ್ಟೇ ಉಣ್ಣುವುದು. ‘ತುರ್ತಿನ ದಾರಿಯಲ್ಲಿ ಹೊರಟವರಿಗೆ ಗಮ್ಯ ತಿಳಿಯಲೇ ಇಲ್ಲ. ‘ ಈ ಸಾಲುಗಳು ಅದನ್ನು ಧ್ವನಿಸುತ್ತವೆ. ಆದರೆ ಅದಕ್ಕೆ ಒಗ್ಗರಣೆ ಬೇಸರಿಸಿಕೊಂಡಿದೆಯೇ. ಇಲ್ಲ. ‘ತನ್ನ ಬೆಲೆ ನೆಲೆಯ ತಾನೇ ಭದ್ರಪಡಿಸಿಕೊಂಡಿದೆ ನಮ್ಮ ಕುಬ್ಜರಾಗಿಸಿದೆ.’ ನನ್ನ ದೇವರ ಮನೆಯಲ್ಲೊಂದು ಡುಮ್ಮಣ್ಣ ಜೇಡ ಪ್ರತಿ ದಿನವೂ ಫೋಟೋ ಹಿಂದೆ ಅವುಚಿರುತ್ತದೆ. ಅದೆಷ್ಟೋ ದೊಡ್ಡದಾದ ಬಾಗಿಲು ಹಿಡಿಕೆ ಫೋಟೋ ಎಲ್ಲವನ್ನೂ ತನ್ನ ಎಳೆಯಿಂದ ಬಂಧಿಸಿ ಎಲ್ಲವನ್ನೂ ಒಂದಾಗಿಸಿ ತನ್ನ ಹಸಿವಿಗೆ ಸಿಗಬಹುದಾದನ್ನು ಕಾಯುತ್ತದೆ.ಆದರೆ ನಾನು ಪ್ರತಿದಿನವೂ ಮೆಲ್ಲಗೆ ಅದನ್ನು ಪೊರಕೆಯೊಳಗೆ ಸೇರಿಸಿ ಆಚೆಕಡೆ ಬಿಟ್ಟು ಬರ್ತಿನಿ.ಮಾರನೆ ಬೆಳಗು ಅದಲ್ಲೇ ಪ್ರತ್ಯಕ್ಷ. ಸಂಗೀತ ಜೇಡನ ಸ್ವಗತ ಆಲಿಸಿದ್ದಾರೆ. ‘ನಿಮ್ಮ ಗೋಡೆಯ ತುಂಬಾ ನನ್ನ ಬಲೆಯ ಹಾಕಿ ಗಲೀಜು‌ಮಾಡುವ  ಉಮೇದಿಲ್ಲ ನನಗೆ’ ಅನ್ನುತ್ತಿದೆ ಅವರ ಜೇಡ. ‘ಮೂಲೆಮೂಲೆಯಲ್ಲೂ ನನ್ನ ಕರಾಮತ್ತು ಬೇಕಿದೆ ನನಗೆ ಈ ದಿನದ ತುತ್ತು’ ಆದರೆ ನಾವು ಹಾಗೇ ಬಿಡ್ತೀವಾ.ಗುಡಿಸಿ ಸೆಲಿಬೆ ತೆಗೆದು ಅದರ ಅರಮನೆಯನ್ನು  ನಿಮಿಷ ಮಾತ್ರದಲ್ಲಿ ಇಲ್ಲವಾಗಿಸುತ್ತೇವೆ.ಅದು ನಮ್ಮ ಅರ್ಜು. ಅವರ ಜೇಡ ಕೊನೆಯಲ್ಲಿ ಹೇಳುತ್ತಿದೆ. “ಬದುಕು ಸುಮ್ಮನೆ ಅಲ್ಲ ನೇಯಬೇಕು ತದನಂತರ ನೋಯಬೇಕು” ಇದು ಬಹುಶಃ ಆ ಜೇಡದ ಮನೆಯನ್ನು ಗುಡಿಸಿ ತೆಗೆದ ಹೆಣ್ಣಿನ ಮಾತೂ ಅಲ್ಲವೇ.? ಇದು ಬೆಸ್ಟು ಪದ್ಯ ಈ ಸಂಕಲನದಲ್ಲಿ. ನಾನು ಬದುಕಿಸುತ್ತೇನೆ  ಎನ್ನುತ್ತಾ ದಿನವೂ ಆಚೆ ಬಿಡುವ ಆ ಜೇಡಕ್ಕೆ ನಾನು ಉಪಕರಿಸುತ್ತಿದ್ದೇನೆಯೇ.? ಯಾಕೋ ನನ್ನ ಬಗ್ಗೆ ನನಗೇ ಅಸಮಧಾನ ಎನಿಸುತ್ತಿದೆ. ‘ಬಡವಿಯ ಸ್ವಗತ’ದ ಆರಂಭ ಬಹಳ ಸಾಧಾರಣ ಅನಿಸಿ ಇದು ಕವಿತೆಯಾಗಬಾರದಿತ್ತು ಎಂದುಕೊಳ್ಳುವಾಗಲೇ ಕೊನೆಯಲ್ಲಿ ಛಕ್ಕನೆ ಕಣ್ಣು ತುಂಬುವಂತಹ ಸಾಲುಗಳನ್ನಿಟ್ಟು ಗೆಲ್ಲುತ್ತಾರೆ ಕವಯಿತ್ರಿ. ಮಗು ಬಹಳ ಹೊತ್ತಿಂದ ಮಲಗಿದೆ.ಕೂಲಿಯಿಂದ ಓಡೋಡಿ ಬಂದ ಅಮ್ಮ ಅಯ್ಯೋ ಹಸಿವಾಯ್ತೇನೋ ಅಂತ ಎಬ್ಬಿಸ ಹೊರಟವಳು ಕ್ಷಣ ಕಾಲ ತಡೆಯುತ್ತಾಳೆ. “ಹಾಲಿಲ್ಲದ ಮನೆಯಲ್ಲಿ ನಿನ್ನನೇಳಿಸಿ ಏನು ಮಾಡಲಿ ಕಂದಾ ಮತ್ತೆ ಮಲಗು ಮಗುವೇ ಜೋ ಜೋಜೋ ಜೋ’ ಸಂಗೀತ ನಿತ್ಯವನ್ನೂ, ದಿನಚರಿಯನ್ನು ಕವಿತೆಯಾಗಿಸಿದ್ದಾರೆ.ಇಲ್ಲಿನ ಹೆಚ್ಚು ಕವಿತೆಗಳು ಮಳೆಯನ್ನೇ ಹಾಡಿವೆ.ಮಗುವನ್ನು ತೂಗಿವೆ. ಮನೆ ಮಲಗಿದ್ದಾಗ ತಾನೆದ್ದು ಒಲೆಗೆ ಬೆಂಕಿ ಮಾಡುತ್ತಾ ಮೆಲ್ಲಗೆ ಹೊಗೆಯಾಡಿ ಉರಿದಿವೆ. ಮುಟ್ಟಿದರೆ ಮುನಿ ಯನ್ನು ಮುಟ್ಟಿ ತಾನೂ ಹೀಗೇ ಅಲ್ಲವೇ ಅಂದುಕೊಂಡು ಸುಮ್ಮನೆ ಒಂದು ಘಳಿಗೆ ಮೌನವಾಗಿವೆ. ಯಾರ ಉಸಾಬರಿ ಇಲ್ಲದೆ ನೆಲದಲ್ಲಿ ಮಲಗಿರುವ ಈ ಮುದ್ದು ಮುಳ್ಳುಗಿಡ ಇವರಕ್ಕರೆಗೆ ಬಿದ್ದು ‘ಒಂದು ಕ್ಷಣ ಹಿಂತಿರುಗಿ ನೋಡುವ ಚಿತ್ತ ಮುಟ್ಟದೆ ಮುಂದೆ ಹೋಗಲು ಬಿಡದ ಸಂತ’ ಆಗಿದೆ. ಪತ್ತೆ ಇಲ್ಲದೇ ಇವರೊಟ್ಟಿಗೆ ಠು ಬಿಟ್ಟ ಕವಿತೆ ಮತ್ತೆ ವೈಯಾರವಾಡಿಕೊಂಡು ಇವರ ಬಳಿ ಬಂದಿದೆಯಂತೆ. ‘ಅಗಣಿತ ಪ್ರೀತಿ ತಾರೆ ಈ ಕವಿತೆ’ ಎನ್ನುವ ಸಂಗೀತ ಕೊರೊನಾ ಕಾಲದ ದುರ್ಭರ ಗಳನ್ನು ಕವಿತೆಯಾಗಿಸಿ ನೊಂದಿದ್ದಾರೆ. ಸಮಕಾಲೀನ ಕವಯಿತ್ರಿ ಸ್ಮಿತಾ ಅಮೃತರಾಜ್ ಅವರ ಮುನ್ನುಡಿಯಿರುವ ಈ ಸಂಕಲವನ್ನು ದೀಪ್ತಿ ಬುಕ್ ಹೌಸ್ ಮೈಸೂರು ಹೊರತಂದಿದೆ. ಒಟ್ಟು ಐವತ್ತು ಕವಿತೆಗಳು, ನೂರಹನ್ನೆರಡು ಪುಟಗಳಿರುವ ಈ ಸಂಕಲನದ ಮುಖಬೆಲೆ ನೂರು ರೂಪಾಯಿ. ತನ್ನ ವ್ಯಾಪ್ತಿಯಲ್ಲಿ ದಕ್ಕಿದ್ದನ್ನೂ ಸಿಕ್ಕಿದಷ್ಟನ್ನು ಅಕ್ಷರವಾಗಿಸಿ ಅಭಿವ್ಯಕ್ತಿಸಿ ನಿರಾಳವಾಗಿದ್ದಾರೆ ಸಂಗೀತ. ಮುಗ್ಧ ಭಾವದ ಈ ಪದ್ಯಗಳು ಓದುಗರ ಮನಸ್ಸನ್ನೂ ಮೃದುವಾಗಿಸುವುದರಲ್ಲಿ ಸಂದೇಹವಿಲ್ಲ. ***************************************** ನಂದಿನಿ ಹೆದ್ದುರ್ಗ

ನಿರುತ್ತರ Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ಎ. ಹೇಮಗಂಗಾ ವಿರಹ ಹೃದಯಕೆ ಹೊರೆಯಾಗುತಿದೆ ತೊರೆದು ಹೋಗದಿರು ನನ್ನಸನಿಹ ನೀನಿರದ ಕೊರಗು ಕೊರೆಯುತಿದೆ ತೊರೆದು ಹೋಗದಿರು ನನ್ನ ಹೊಂಬೆಳಕ ಸೂರ್ಯನೂ ಕೆಂಡದಂತೆ ಸುಡುವನು ನಿಷ್ಕರುಣಿಯಾಗಿಕುದಿಎಸರಿನಂತೆ ಮನಸು ಕುದಿಯುತಿದೆ ತೊರೆದು ಹೋಗದಿರು ನನ್ನ ಭಾವ ಸಂವಹನಕೆ ಬರಿಯ ಕಂಗಳೇ ಸಾಕು ಮಾತಿನ ಹಂಗಿಲ್ಲ ನನಗೆಎದೆಗೂಡಲಿ ಪ್ರೀತಿದೀಪವಿನ್ನೂ ಬೆಳಗುತಿದೆ ತೊರೆದು ಹೋಗದಿರು ನನ್ನ ಸುಖವೆಲ್ಲಿದೆ ಒಂಟಿ ಬಾಳಲ್ಲಿ ನಿನ್ನ ಕೂಡಿ ಒಡನಾಡದ ಹೊರತು ?ಮಧುಪಾನಕೆ ಅಧರ ಹಂಬಲಿಸುತಿದೆ ತೊರೆದು ಹೋಗದಿರು ನನ್ನ ತನುವಿಂದು ಕೊರಡಾಗಿ ಬಾಡಿದೆ ಹಿತ ಸಂವೇದನೆಯ ಸ್ಪರ್ಶವಿರದೇಅಪ್ಪುಗೆಯ ಬಿಸುಪು ನೆನಪಾಗಿ ಕಾಡುತಿದೆ ತೊರೆದು ಹೋಗದಿರು ನನ್ನ ನನ್ನ ಮರೆತು ಬದುಕುವುದು ಬದುಕೇ ಅಲ್ಲವೆಂದು ಹಳಹಳಿಸಿದ್ದೆಜೀವ ಸಹಿಸಲಾಗದ ನೋವ ಸಹಿಸುತಿದೆ ತೊರೆದು ಹೋಗದಿರು ನನ್ನ ಬುವಿಯೊಂದು ಗೋಲ ಮರಳಲೇಬೇಕು ‘ಹೇಮ’ ಳೆಡೆಗೆ ಕೊನೆಗೊಮ್ಮೆಹೊಸಬದುಕು ನಮಗಾಗಿ ಕಾಯುತಿದೆ ತೊರೆದು ಹೋಗದಿರು ನನ್ನ ******************************

ಗಜಲ್ Read Post »

ಅಂಕಣ ಸಂಗಾತಿ, ಮುಖಾಮುಖಿ

ಅಂಕಣ ಬರಹ ನಿರ್ಮಲಾ‌ ಶೆಟ್ಟರ್ ಕಥೆಯ ಕೇಂದ್ರ ಒಳಮನದಲ್ಲಿ ಬೇರುಬಿಟ್ಟರೂ ಅದರ ವ್ಯಾಪ್ತಿ ಜಗದಗಲ ಪರಿಚಯ: ನಿರ್ಮಲಾ ಶೆಟ್ಟರ ಮೂಲತಃ ಗದಗ ಜಿಲ್ಲೆಯ ಲಕ್ಷ್ಮೇಶ್ವರದವರು. ಧಾರವಾಡ ಜಿಲ್ಲೆಯಲ್ಲಿ ಹೈಸ್ಕೂಲ್ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ಅತ್ಯುತ್ತಮ ಬೋಧನೆಯಿಂದ ತಾಲೂಕಾಮಟ್ಟದ ಹಾಗೂ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದಿದ್ದಾರೆ. ಈ ವರೆಗೂ ‘ಬೆಳಕಿನೊಡನೆ ಪಯಣ’ ಮತ್ತು ‘ನಿನ್ನ ಧ್ಯಾನಿಸಿದ ಮೇಲೂ’ ಎನ್ನುವ ಎರಡು ಪುಸ್ತಕಗಳು ಪ್ರಕಟಗೊಂಡಿರುತ್ತವೆ. ಅದರಲ್ಲಿ ಒಂದು ಕಾವ್ಯಸಂಕಲನವಾದರೆ, ಇನ್ನೊಂದು ಗಜಲ್ ಸಂಕಲನವಾಗಿದೆ. ಸಧ್ಯ, ‘ಸರಹದ್ದುಗಳಿಲ್ಲದ ಭೂಮಿಯ ಕನಸು’ ಕಾವ್ಯಸಂಕಲನ ಬಿಡುಗಡೆಗೊಳ್ಳಲಿದೆ. ೨೦೧೭ರಲ್ಲಿ ಅನುಪಮಾ ನಿರಂಜನ ಕಥಾಬಹುಮಾನ, ೨೦೧೯ರ ಪ್ರಜಾವಾಣಿ ಸಂಕ್ರಾಂತಿ ಲಲಿತಪ್ರಬಂಧ ಬಹುಮಾನ ಪಡೆದಿರುತ್ತಾರೆ. ಕಥೆ ಮತ್ತು ಕವಿತೆಗಳನ್ನು ಯಾಕೆ ಬರೆಯುತ್ತೀರಿ? ಉತ್ತರ ತುಸು ಕಷ್ಟ ಆದರೂ ಹೇಳಬೇಕೆಂದರೆ, ಹೇಳಲಾಗದ ನೋವುಗಳನ್ನು, ಬಿಚ್ಚಿಡಲಾಗದ ಗುಟ್ಟುಗಳನ್ನು ಹೇಳಲು ಕವಿತೆ ಮತ್ತು ಕಥೆ ಒಳ್ಳೆಯ ಮಾಧ್ಯಮ. ಎಲ್ಲ ನೋವುಗಳಿಗೆ ಧ್ವನಿಯಾಗಿ ಕಥೆಗಳನ್ನು ಮತ್ತು ಕವಿತೆಗಳನ್ನು ಬರೆಯುತ್ತೇನೆ. ಕಥೆ,ಕವಿತೆ ಹುಟ್ಟುವ ಕ್ಷಣ ಯಾವುದು? ಇಂಥದೇ ಘಳಿಗೆ ಅಥವಾ ಸಮಯ ಅದಕ್ಕಾಗಿ ನಿಗದಿಯಾಗಿರುವುದಿಲ್ಲ. ಒಮ್ಮೊಮ್ಮೆ ಕಾಡಿದ ಮತ್ತು ಕಾಡಿಸಿಕೊಂಡ ವಿಷಯ, ಘಟನೆಗಳು, ಚಿತ್ರಗಳು ಸರೋರಾತ್ರಿಯಲ್ಲಿ ಬರೆಯಲು ಹಚ್ಚುತ್ತವೆ. ನಿಮ್ಮ ಕಥೆ/ಕವಿತೆಯ ವಸ್ತು, ವ್ಯಾಪ್ತಿ ಹೆಚ್ಚಾಗಿ ಯಾವುದು? ಪದೆ-ಪದೆ ಕಾಡುವ ವಿಷಯ ಯಾವುದು? ಕವಿತೆ, ಕಥೆಗೆ ಇಂಥವೇ ವಸ್ತುವಾಗಬೇಕೆಂದು ನನಗನಿಸುವುದಿಲ್ಲ. ಯಾಕೆಂದರೆ, ಇಲ್ಲಿ ಎಲ್ಲವೂ ಮುಖ್ಯ ಆದರೆ, ಎದುರಿರುವ ವಸ್ತು,ವ್ಯಕ್ತಿ ನನ್ನೊಳಗೆ ಇಳಿದು ಬರೆಯಲು ಪ್ರೇರೇಪಿಸಿ ವಿಸ್ತಾರಗೊಳ್ಳುತ್ತಾ ಹೋದಂತೆ ಕಥೆ/ಕವಿತೆಯಾಗುತ್ತದೆ. ಕಥೆಯ ಕೇಂದ್ರ ಒಳಮನದಲ್ಲಿ ಬೇರುಬಿಟ್ಟರೂ ಅದರ ವ್ಯಾಪ್ತಿ ಜಗದಗಲ. ಪದೇ ಪದೇ ಕಾಡುವ ವಿಷಯ ಯಾವುದೇ ಆಗಿರಲಿ, ಅದು ಕೊನೆಗೆ ಕನೆಕ್ಟ್ ಆಗುವುದು ಮಾತ್ರ ಸಾಮಾಜಿಕ ಆಗುಹೋಗುಗಳೊಂದಿಗೆ ಎನ್ನುವುದಂತೂ ಸತ್ಯ.ಕಥೆ/ಕವಿತೆಯಲ್ಲಿ ಬಾಲ್ಯ, ಹರೆಯ ಇಣುಕಿದೆಯೆ?ಅರೆ, ಅವುಗಳಿಲ್ಲದ ಕಥೆ/ಕವಿತೆ ಬಾಲಂಗೋಚಿ ಇಲ್ಲದ ಪಟಗಳಂತೆ. ಆ ದಟ್ಟ ಅನುಭವ ಬೇರೆ-ಬೇರೆ ರೂಪಗಳಲ್ಲಿ ಬರವಣಿಗೆಯನ್ನು ಸಮೃದ್ಧಗೊಳಿಸುತ್ತವೆ. ಪ್ರಸ್ತುತ ರಾಜಕೀಯ ಸನ್ನಿವೇಶದ ಬಗ್ಗೆ ನಿಮ್ಮ ಪ್ರತಿಕ್ರಿಯೆ ಏನು? ರಾಜಕೀಯ ತನ್ನ ಮೂಲ ಆಶೋತ್ತರಗಳನ್ನು ಗಾಳಿಗೆ ತೂರಿದೆ. ಹಾಗಾಗಿ ನಮ್ಮಂಥವರು ಕುರುಡುಗಣ್ಣಲ್ಲಿ ಮೆಳ್ಳೆಗಣ್ಣು ಲೇಸು ಎಂಬಲ್ಲಿಗೆ ಬಂದು ತಲುಪಿದ್ದೇವೆ. ಇತ್ತೀಚೆಗಂತೂ ರಾಜಕೀಯ ಸನ್ನಿವೇಶ ಅಸಹ್ಯಕರ ಎನ್ನಿಸುವಷ್ಟು ಬೇಸರ ಹುಟ್ಟಿಸಿದೆ. ಧರ್ಮ ದೇವರ ವಿಷಯದಲ್ಲಿ ನಿಮ್ಮ ನಿಲುವೇನು? ಮಾನವತೆಯೆ ಧರ್ಮ. ಅದನ್ನು ಪ್ರತಿಯೊಬ್ಬರಲ್ಲಿ ಮೂಡಿಸಿ ಸಾಮಾಜಿಕ ಸ್ವಾಸ್ಥö್ಯವನ್ನು ಮತ್ತು ಸಾಮರಸ್ಯವನ್ನು ಉಂಟುಮಾಡುವ ಅರಿವೆ ದೇವರು.ಪ್ರಸ್ತುತ ಸಂಸ್ಕೃತಿಕ ವಾತಾವರಣದ ಬಗ್ಗೆ ನಿಮಗೆ ಏನನ್ನಿಸುತ್ತದೆ?ಮನುಷ್ಯನಲ್ಲಿರುವ ಸೃಜನಶೀಲತೆಯ ಸಂಕೇತವೆ ಆತನೊಳಗಿನ ಸಾಂಸ್ಕೃತಿಕ ಪ್ರಜ್ಞೆ. ಅದು ಅವನನ್ನು ಹೊಸ-ಹೊಸ ಅನ್ವೇಷಣೆಯತ್ತ ಚಲಿಸುವಂತೆ ಮಾಡುತ್ತದೆ. ಆ ಮುಖಾಂತರ ಸಾಮಾಜಿಕ ಶ್ರೀಮಂತಿಕೆಯನ್ನು ಕಂಡುಕೊಳ್ಳಲು ಸಾಧ್ಯ. ಆದರೆ, ಅಲ್ಲಿ ಜಾತಿ ಮತಗಳು ರಾಜ್ಯಬಾರ ನಡೆಸಿ ಎಲ್ಲವನ್ನು ಕುಂಠಿತಗೊಳಿಸುತ್ತಿದೆ. ಸಾಹಿತ್ಯವಲಯದ ರಾಜಕಾರಣದ ಬಗ್ಗೆ ನೀವು ಹೇಗೆ ಪ್ರತಿಕ್ರಿಯಿಸುವುರು? ಸಾಹಿತ್ಯ ಮತ್ತು ರಾಜಕಾರಣ ವಿಭಿನ್ನ ವಿಚಾರಗಳಿಂದ ಕೂಡಿವೆ. ಅಲ್ಲದೆ ಎರಡೂ ಬೇರೆ ಬೇರೆ ಕ್ಷೇತ್ರಗಳು. ಅವೆರಡು ಪೂರಕವಾಗಿರಬೇಕು. ಹಾಗಾದಾಗ ಮಾತ್ರ ಸಮಾಜದ ಬೇಡಿಕೆ ಹಾಗೂ ಸ್ವಸ್ಥತೆಯನ್ನು ಪೂರ್ಣಗೊಳಿಸಲು ಸಾಧ್ಯ. ಆದರೆ, ಇಂದಿನ ರಾಜಕಾರಣ ತನ್ನ ಹಸ್ತಕ್ಷೇಪವನ್ನು ಸಾಹಿತ್ಯವಲಯದಲ್ಲಿ ಯಾವ ಮಟ್ಟದಲ್ಲಿ ಮಾಡುತ್ತಿದೆ ಎಂದರೆ, ಸರಿಯಾದ ನ್ಯಾಯವನ್ನು ಸಾಹಿತ್ಯಕ್ಷೇತ್ರದಿಂದ ಸಮಾಜಕ್ಕೆ ಒದಗಿಸಲಾಗುತ್ತಿಲ್ಲ. ಇದರಿಂದ ಓದುಗರ ವಲಯವು ದಾರಿ ತಪ್ಪುತ್ತಿದೆ ಎಂದೆನಿಸುತ್ತಿದೆ. ಈ ದೇಶದ ಚಲನೆಯ ಬಗ್ಗೆ ನಿಮ್ಮ ಮನಸ್ಸು ಏನು ಹೇಳುತ್ತದೆ? ದೇಶದ ಚಲನೆ ಎನ್ನುವುದು, ವಿಸ್ತಾರವಾದ ವಿಷಯ. ಕೇವಲ ಯಾವುದೋ ಒಂದು ಕ್ಷೇತ್ರವನ್ನು ಗಮನದಲ್ಲಿಟ್ಟುಕೊಂಡು ಅದನ್ನು ನಿರ್ಧರಿಸಲಾಗದು. ಆದಾಗ್ಯೂ ನಾವು ಯಾವುದರಲ್ಲೂ ಹಿಂದೆ ಬಿದ್ದಿಲ್ಲ. ವಿಭಿನ್ನತೆಯಲ್ಲಿ ಏಕತೆಯನ್ನು ಕಂಡುಕೊಳ್ಳುವ ನಮ್ಮ ನಾಡು-ನುಡಿಯ ಹರವು ದೊಡ್ಡದು. ಅದು ದೇಶದಲ್ಲಿಯೇ ತನ್ನನ್ನು ಗುರುತಿಸಿಕೊಂಡಿದೆ. ಅಲ್ಲದೇ ಸಾಹಿತ್ಯ, ಸಂಗೀತ, ಕಲೆ, ವಾಸ್ತುಶಿಲ್ಪ, ಹೀಗೆ ಇನ್ನೂ ಅನೇಕ ವಿಚಾರಗಳಲ್ಲಿ ನೀಡಿದ ಕೊಡುಗೆ ಅಪಾರ. ಅದರಿಂದ ದೇಶವು ತನ್ನನ್ನು ರಾಷ್ಟ್ರ ಹಾಗೂ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವುದರೊಂದಿಗೆ, ದೇಶವನ್ನು ಸಮೃದ್ಧವಾಗಿ ಮುನ್ನೆಡೆಸುತ್ತಿದೆ. ಸಾಹಿತ್ಯದ ಬಗ್ಗೆ ನಿಮ್ಮ ಕನಸುಗಳೇನು? ಸಾಹಿತ್ಯದ ಯಾವುದೇ ಪ್ರಕಾರದ ರಚನೆಗೆ ಸಂಬಂಧಿಸಿದ ವಿಷಯ ಬಂದಿತೆಂದರೆ, ಅಲ್ಲಿ ಪ್ರಥಮ ಆದ್ಯತೆ ರಚನಾಕಾರನ ಓದಾಗಿರಬೇಕು.ಇದರಿಂದ ಸತ್ವಯುತ ಬರವಣಿಗೆ ಸಾಧ್ಯ. ಮತ್ತೆ ಅಂತಹ ಬರವಣಿಗೆ ಬರಹಗಾರ ಹಾಗೂ ಓದುಗನ ನಡುವೆ ಸಂವಾದಿಯಾಗಿ ಕಾರ್ಯ ನಿರ್ವಹಿಸುತ್ತದೆ. ಅಲ್ಲಿ ಒಂದು ಓದುಗವಲಯವೇ ನಿರ್ಮಾಣ ಆಗುತ್ತದೆ. ಅಂತಹ ವಾತಾವರಣವು ರಾಜಕೀಯ, ದಾರ್ಮಿಕ, ಸಂಕುಚಿತತೆಯನ್ನು ದೂರಮಾಡಿ ಸಾಹಿತ್ಯವನ್ನು ವಿಶ್ವವ್ಯಾಪಿಯನ್ನಾಗಿಸುತ್ತದೆ. ಕನ್ನಡ ಹಾಗೂ ಆಂಗ್ಲಭಾಷಾಸಾಹಿತ್ಯದಲ್ಲಿ ನಿಮ್ಮ ಇಷ್ಟದ ಮತ್ತು ನಿಮ್ಮನ್ನು ಕಾಡಿದ ಸಾಹಿತಿ ಯಾರು? ಕನ್ನಡದಲ್ಲಿ ಇಷ್ಟವಾದ ಕವಿಗಳೆಂದರೆ, ಪ್ರತಿಭಾ ನಂದಕುಮಾರ ಹಾಗೂ ವಾಸುದೇವ ನಾಡಿಗ. ನನ್ನದು ಹಿಂದಿ ಸಾಹಿತ್ಯದ ಓದಾಗಿರುವುದರಿಂದ, ನಿರಾಲಾ ಮತ್ತು ಮಹಾದೇವಿ ವರ್ಮಾ ನನ್ನ ನೆಚ್ಚಿನ ಕವಿಗಳು. ಕತೆಯ ವಿಚಾರಕ್ಕೆ ಬಂದರೆ, ಲಂಕೇಶ, ಕೇಶವರೆಡ್ಡಿ ಹಂದ್ರಾಳ, ಸುನಂದಾ ಕಡಮೆ ಅನೇಕ ಹಿರಿಯರ ಕತೆಗಳು ನನಗಿಷ್ಟ. ಇತ್ತೀಚೆಗೆ ಓದಿದ ಕೃತಿಗಳಾವುವು? ಶಶಿಕಲಾ ವಸ್ತ್ರದ ರವರ ಆತ್ಮಕತೆಯಾದ, ‘ಇದ್ದೆನಯ್ಯಾ ಇಲ್ಲದಂತೆ’ ಮತ್ತುಲಕ್ಷ್ಮಣ ಕೊಡಸೆ ಅವರು ಬರೆದ ‘ನಾರಾಯಣ ಗುರುಗಳ ಆಪ್ತ ಪದ್ಮನಾಭನ್ ಪಲ್ಪು’ ಇತ್ತೀಚೆಗೆ ಓದಿದ ಪುಸ್ತಕಗಳು. ನಿಮಗೆ ಇಷ್ಟವಾದ ಕೆಲಸಗಳಾವುವು? ಓದುವುದು, ಬರೆಯುವುದು. ನಿಮಗೆ ಇಷ್ಟವಾದ ಸ್ಥಳ ಯಾವುದು? ಪ್ರಕ್ರತಿಯ ಯಾವುದಾದರೂ ಸ್ಥಳವಿರಲಿ, ಇಷ್ಟವಾಗುತ್ತದೆ. ವಿಶೇಷವಾಗಿ ಲಕ್ಷ್ಮೀಶ್ವರದ ಸೋಮನಾಥ ದೇವಸ್ಥಾನದ ಪ್ರಾಂಗಣ. ನಿಮ್ಮ ಪ್ರೀತಿಯ, ತುಂಬಾ ಇಷ್ಟಪಡುವ ಸಿನಿಮಾ ಯಾವುದು? ಗುರು-ಶಿಷ್ಯರು ನೀವು ಮರೆಯಲಾರದ ಘಟನೆ ಯಾವುದು? ಸಹೋದರನ ಅಕಾಲಿಕ ಸಾವು ಮರೆಯಲಾರದ ಘಟನೆ. ಬಹುಷಃ ಬದುಕಿನ ಕೊನೆಯವರೆಗೂ ಅವನನ್ನು ಯಾರಾರಲ್ಲೋ ಹುಡುಕುತ್ತಿರುತ್ತೇನೆ.ಇನ್ನು ಕೆಲ ಹೇಳಲೇಬೇಕಾದ ಸಂಗತಿಗಳಿದ್ದರೆ, ಹೇಳಿ…ಯಾರೋ ಗೊತ್ತಿರದ, ಪರಿಚಯವಿರದ ವ್ಯಕ್ತಿಗೆ ನೋವಾಗುವುದನ್ನು ಕಂಡರೆ, ಸಹಿಸಲಾಗುವುದಿಲ್ಲ. ಬಹುಷಃ ಅದೇ ನನ್ನೊಳಗಿನ ಮಾನವತೆ ಅನಿಸುತ್ತದೆ. ಹಾಗಾಗಿ ಪ್ರೀತಿಯಿಂದ ಜಗತ್ತನ್ನೇ ಗೆಲ್ಲಬಹುದು, ಸುಂದರವಾಗಿಸಬಹುದು ಎಂದು ನಂಬಿರುವವಳು ನಾನು. ಆದರೆ, ಮಾನವನಿಂದ ಮಾನವಪ್ರೀತಿ ಸಾಧ್ಯವಾಗದಷ್ಟು ನಾಗರೀಕತೆಯ ಹಮ್ಮಿನಲ್ಲಿರುವ ನಾವು ತುಸುವಾದರೂ ಮಾನವರಾಗಬೇಕಾದ ತುರ್ತಿನಲ್ಲಿದ್ದೇವೆ. ನಡೆಯಂತೆ ನುಡಿಯಿರದ, ನುಡಿದಂತೆ ನಡೆಯದ ವಾತಾವರಣವು ಕೊನೆಯಾಗುವುದನ್ನು ಯಾವಾಗಲೂ ಹಂಬಲಿಸುತ್ತೇನೆ. ******************************************************************* ಹರಪನಹಳ್ಳಿ ಹುಟ್ಟೂರು. ಹರಪನಹಳ್ಳಿ ತಾಲೂಕಿನ ಮೈದೂರು-ಚಿಗಟೇರಿ ಬೆಳೆದ ಊರು. ಪಿಯು ಓದಿದ್ದು ಕೊಟ್ಟೂರಿನಲ್ಲಿ. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಬಿ.ಎ., ಕವಿವಿಯಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ. ದಾವಣಗೆರೆ, ಸದಾಶಿವಗಡ ಮತ್ತು ಭಟ್ಕಳದಲ್ಲಿ ಕನ್ನಡ ಉಪನ್ಯಾಸಕರಾಗಿ ಕೆಲಸ ನಿರ್ವಹಿಸಿ, 1997 ರಿಂದ ಕಾರವಾರದಲ್ಲಿ ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದಾರೆ. ಜನವಾಹಿನಿ, ಜನಾಂತರಂಗ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ ಇವರು, ಈ ಟಿವಿ ಕನ್ನಡ ನ್ಯೂಸ್ ಚಾನೆಲ್ಲಿಗೆ ವರದಿಗಾರಿಕೆ ಬಳಿಕ ಈಗ ಉದಯವಾಣಿ , ಬೆಳಗಾವಿಯ ಲೋಕದರ್ಶನ ಪತ್ರಿಕೆಗೆ ವರದಿಗಾರರಾಗಿದ್ದಾರೆ. 2009ರಲ್ಲಿ ‘ಕಡಲದಂಡೆಗೆ ಬಂದ ಬಯಲು’ ಎಂಬ ಕಥಾ ಸಂಕಲನ, 2013ರಲ್ಲಿ ‘ಬಿಸಿಲ ಬಯಲ ಕಡಲು’ ಎಂಬ ಕವಿತಾ ಸಂಕಲನ ಪ್ರಕಟಣೆ.2019 ರಲ್ಲಿ ‘ವಿರಹಿದಂಡೆ’ ಕವಿತಾ ಸಂಕಲನ ಪ್ರಕಟಿಸಿದ್ದಾರೆ. ಕಾರವಾರ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Read Post »

You cannot copy content of this page

Scroll to Top