ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಪುಸ್ತಕ ಸಂಗಾತಿ

ಬಿಳಿ ಸಾಹೇಬನ ಭಾರತ

ಪುಸ್ತಕ ಸಂಗಾತಿ ಬಿಳಿ ಸಾಹೇಬನ ಭಾರತ ಪುಸ್ತಕ: ಬಿಳಿ ಸಾಹೇಬನ ಭಾರತಲೇಖಕರು: ಜಗದೀಶ್ ಕೊಪ್ಪಪ್ರಕಾಶನ: ಮನೋಹರ ಗ್ರಂಥಮಾಲೆ ‌ಬೆಲೆ: 90 ರೂಲಭ್ಯತೆ : ಸಂಗಾತ ಪುಸ್ತಕ, ಧಾರವಾಡ ಜಿಮ್ ಕಾರ್ಬೆಟ್ ಅವರ ಪುಸ್ತಕಗಳು ಎಷ್ಟು ಓದಿದರು ಮುಗಿಯದ ಕುತೂಹಲ ಭರಿತ ಪುಸ್ತಕಗಳು .ಈ ಪುಸ್ತಕ ಕಾರ್ಬೆಟ್ ಅವರ ಜೀವನದ ಮತ್ತಷ್ಟು ವಿಶೇಷ ಸಂಗತಿಗಳನ್ನು ಓದುಗರಿಗೆ ಪರಿಚಯಿಸುತ್ತವೆ . ಇದು ಶಿಕಾರಿ ,ಕಾಡಿನ ಅನುಭವದ ಹೊತ್ತಿಗೆ ಅಲ್ಲ ಪುಸ್ತಕ ಅವರ ವೈಯಕ್ತಿಕ ಬದುಕಿನ ಅನುರೂಪ ಮಾಹಿತಿ ನೀಡುತ್ತದೆ . ಇಲ್ಲಿ ಆತ್ಮೀಯತೆ ,ಮಾನವೀಯತೆ, ದಕ್ಷತೆ, ಪ್ರಮಾಣಿಕತೆ ಬಹು ಪ್ರಧಾನವಾಗಿ ಕಾಣುವ ಅಂಶಗಳು . ಪ್ರಾಮಾಣಿಕತೆ ,ದಕ್ಷತೆ ಸರಳತೆ ,ಮಾನವೀಯತೆ ಎಲ್ಲರಗೂ ಬೇಕು ಆದರೆ ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಲು ಯಾರೂ ಸಿದ್ದರಿಲ್ಲ..!!!?? .ಬರಿಯ ಪುಸ್ತಕದ ಮಾತಾಗಿ ಇವು ಉಳಿಯುವಂತಾಗಿದೆ .ಹೀಗಿರುವಾಗ ಭಾರತವನ್ನು ಭಾರತೀಯರಿಗಿಂತ ಹೆಚ್ಚಿನದಾಗಿ ಪ್ರೀತಿಸಿ ,ಅವರಿಗೆ ಗೆಳಯನಾಗಿ ,ಕಾವಲಿಗಾರನಾಗಿ ,ಅವರೊಂದಿಗೆ ಕಾರ್ಮಿಕನಾಗಿ ,ವೈದ್ಯನಾಗಿ ,ಬಾಳಿ ಸಾರ್ಥಕ ಸಮರ್ಥ ಜೀವನ್ನು ಉಳಿಸಿಹೋದ ಜಿಮ್ ಕಾರ್ಬೆಟ್ ಅಸಮಾನ್ಯ ರಾಗಿ ಉಳಿಯುತ್ತಾರೆ ಸ್ಮೃತಿ ಪಟಲದಲ್ಲಿ . ಸರಳತೆಯನ್ನು ಅನಾಯಾಸವಾಗಿ ಪಾಲಿಸಿ ,ಮುಗ್ದ ಜನರ ಬದುಕಿಗಾಗಿ ಸದಾ ಚಿಂತಿಸಿ, ಅವರಿಗಾಗಿ ಬಂಡಯವನ್ನು ಹಾರಿಸಿದ ಜಿಮ್ ಕಾರ್ಬೆಟ್. ನೂರಾರು ಮರಗಳು ಒಂದೇ ದಿನದಲ್ಲಿ ರೈಲಿಗಾಗಿ ಧರೆಗುರುಳಿದಾಗ ಅತೀವ ನೋವನ್ನು ಅನುಭವಿಸುತ್ತಾರೆ .ಪಕ್ಷಿಗಳ ನೋವು ,ಬದುಕಿನ ಕುರಿತು ಬಾಲ್ಯದ ಆಸಕ್ತಿ ಮುಂದೆ ಅವರುಪರಿಸರದ ಕಾಳಜಿಯನ್ನು ಮಾಡಿ ಜನರಲ್ಲಿ ಜಾಗೃತಿ ಮೂಡಿಸುವ ಲ್ಲಿ ಯಶಸ್ವಿಯಾಗುವಂತೆ ಮಾಡಿತ್ತದೆ …! ದಮನಕಾರಿ ಬ್ರಿಟಿಷ್ ರ ಬಗ್ಗೆ ನಾವು ಇತಿಹಾಸದಲ್ಲಿ‌ಓದಿರುತ್ತೇವೆ .ಆದರೆ ಇಲ್ಲಿ ಹಲವು ಮಾನವೀಯ ಬ್ರಿಟಿಷ್ ಅಧಿಕಾರಗಳು ಭಾರತೀಯರಿಗಾಗಿ ಶ್ರಮಿಸುವದನ್ನು ಕಾಣುತ್ತೇವೆ . ತನ್ನ ಮನೆಯನ್ನು ಮಿನಿ ಭಾತವನ್ನಾಗಿಸಿ ,ಸರ್ವಜನಿಕ ಆರೋಗ್ಯ ಕೆಂದ್ರವಾಗಿಸಿ ದಜಿಮ್ ಕಾರ್ಬೆಟ್ ಅವರ ಹೃದಯ ವೈಶಾಲ್ಯತೆಗೆ ಭಾರತ ಸೋತಿದೆ . ಭಾರತೀಯ ರ ನಂಬಿಕೆಗಳನ್ನು ಅಲ್ಲಗೆಳಯದೆ ,ಗೌರವಿಸಿ ಅವರನ್ನು ಪ್ರೀತಿಸಿದ ಬಿಳಿ ಸಾಹೇಬ ಅನನ್ಯ .ನಾವು ಭಾರತೀಯರು ಎನನ್ನು ಕಲಿಯುತ್ತೇವಯೊ ಗೊತ್ತಿಲ್ಲ ಆದರೆ ಏತೇಚ್ಛವಾದ ಮೂಢನಂಬಿಕಗೆಳು ಬಲವಾಗಿ ನಮ್ಮಲ್ಲಿ ನಮಗರಿಯದೆ ಬೇರೊರಿರುತ್ತವೆ .ಆದರೆ ಕಾರ್ಬೆಟ್ ಅವರ ಪುಸ್ತಕಗಳು ಸಾರಾಸಗಟಾಗಿ ಈ ನಂಬಿಕೆಗಳನ್ನು ತಳ್ಳಿಹಾಹುತ್ತವೆ . ತಾರ್ಕಿಕ ಆಲೋಚನೆಗೆ ಓದುಗನನ್ನು‌ ಇಳಿಸುತ್ತವೆ ಕಾಲ ,ಜಾಗ ,ಸಮಯ ಇವುಗಳು ಬಹಳ ಸರಳವಾಗಿ ಅವರು ನಡುದುಬರುತ್ತಾರೆ .”ಏಕಾಂತವಾಗಿ ಭಾರತದ ಕಾಡುಗಳಲ್ಲಿ ಸಂಚರಿಸಿ ಬೆಳದಿಂಗಳ “ಸುಬಗು, “ಕಾಶ್ಮಿರದಸೂರ್ಯೋದಯದ ” ಬೆಡಗನ್ನು ತಮ್ಮ ಹಲವು ಪುಸ್ತಕಗಳಲ್ಲಿ ಅವರು ವರ್ಣಿಸಿದ್ದಾರೆ . ತನಾಗಾಗಿ ಎನನ್ನು ಪಡೆಯದೆ ಬಡ ಭಾರತೀಯರಿಗಾಗಿ ಬದುಕಿ . ಇಳಿಯ ವಯಸ್ಸಿನಲ್ಲಿ ಅನಿವಾರ್ಯ ವಗಿ ಭಾತವನ್ನು ತೊರೆದು ಕೀನ್ಯಾದಲ್ಲಿ ಇಹಲೋಕ ತ್ಯಜಿಸಿದರು. ಇಂದಿಗೂ ಇವರು ನಿರ್ಮಿಸಿದ ಶಾಲೆ , ಮನೆಗಳು ಬಹು ಪ್ರೀತಿಸಿದ ಕಾಡು ಮನೆಯ ಮುಂದಿನ ಮಾವಿನ ಮರ ಎಲ್ಲವು ಅವರ ಇರುವಿಕೆಯನ್ನು ಸಾರುತ್ತವೆ ಎಂದು ಲೇಖಕರು ಹೇಳುತ್ತಾರೆ . ಲೇಖಕರು ಅಲ್ಲಿನ ಪರಿಸರದಲ್ಲಿ ಸಂಚರಿಸಿ ಸಲೂನ್ , ಟೀ ಅಂಗಡಿ ಎಲ್ಲದಕ್ಕೊ‌ ಕಾರ್ಬೆಟ್ ಅವರ ಹೆಸರು ಇರುವದು ತಿಳಿದಿದ್ದಾರೆ .ಇನ್ನೊ ಅಲ್ಲಿ ಜನಮಾನಸ ಅವರಿಗಾಗಿ ಕಾಯುತ್ತಿದೆ .” ಭಾರತವೇ ನನ್ನ ಪತ್ನಿ ಭಾರತೀಯರೇ ನನ್ನ ಮಕ್ಕಳು ” ಎಂದ ಬಿಳಿ ಸಾಹೇಬರನ್ನು ಹೇಗೆ ಮರೆಯಲು ಸಾದ್ಯ ಭಾರತೀಯರಿಗೆ . ಶಿಕಾರಿಗಾಗಿ ಕೋವಿ ಹೀಡಿದು ನರಭಕ್ಷಕ ರನ್ನು ಹೊಡೆದುರುಳಿಸಿ ತದನಂತರ ಕ್ಯಾಮರಾ ಹೀಡಿದು ವನ್ಯಸಂಕುಲವ ಜಗತ್ತಿಗೆ ಪರಿಚಯಿಸಿ , ನಂತರ ಲೇಖಕನಾಗಿ ಪರಿವರ್ತನೆ ಹೂಂದಿ ಯಶಸ್ಸುಕಂಡುತನ್ನ ನಿಸರ್ಗ ಪ್ರೇಮವನ್ನು ಜಗತ್ತಿಗೆ ಅನಾವರಣಗೂಳಿಸಿದ ಸರಳ ಜೀವಿ ಕಾರ್ಬೆಟ್ ಅವರ ಜೀವನದ ಹಲವು ಮಜಲುಗಳ ವಿವರಣೆ ಜೊತೆಗೆ ಅವರ ತಾಯಿಯ ಛಲ ,ಸಹೋದರಿ ಮ್ಯಾಗಿ ಯ ಮಮತೆ ಎಲ್ಲವು ಈ ಹೊತ್ತಿಗೆಯಲ್ಲಿ‌ ಕಾಣಸಿಗುತ್ತವೆ . ಕಾಲದೊಂಗಿ ಮತ್ತು ಚೋಟಿ ಹವಾಲ್ದನಿಯಲ್ಲಿ ಕಾಣುವ ಕರ್ಬೆಟ್ ನೆನಪುಗಳು ನೈನಿತಾಲ್ ನಿಂದ ಮರೆಯಾದದು ಏಕೆ ಎಂದು ಲೇಖಕರು ಬಹು ವಿಷಾದಿಸುತ್ತಾರೆ . ಇದು ಓದುಗರಿಗು ಕಾಡುವ ಪ್ರಶ್ನೆ . ********************* ರೇಶ್ಮಾಗುಳೇದಗುಡ್ಡಾಕರ್

ಬಿಳಿ ಸಾಹೇಬನ ಭಾರತ Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ಸರೋಜಾ ಶ್ರೀಕಾಂತ್ ಸುರಿದ ಬೆಳದಿಂಗಳಿಗೆ ಇರುಳೆಲ್ಲ ಮಾಯವಾಗಿದೆ ಕೇಳು ಸಖಬಳಿಗೆ ಕರೆವ ಸನಿಹಕ್ಕೂ ತುಸು ನಾಚಿಕೆ ಕೇಳು ಸಖ ರಂಗೇರಿದ ಕೆನ್ನೆಗೆ ಕಾರಣವೇ ನಿನ್ನಾಗಮನಒಲವರಿತ ಮುಂಗುರುಳಿಗೆ ಸ್ಪರ್ಶದ ಸಡಗರ ಕೇಳು ಸಖ ಸದ್ದಿಲ್ಲದ ಮೌನದೊಳಗೂ ನೂರೊಂದು ಮಾತುಗಳಿವೆಕಿವಿಗಪ್ಪಳಿಸುತ್ತ ಚಿತ್ತವನ್ನೆಲ್ಲ ಅಪಹರಿಸುತ್ತಿವೆ ಕೇಳು ಸಖ ಸೋತೆನೆನ್ನುವ ಭಾವಕ್ಕೂ ನವಿರಾದ ಮಂದಹಾಸಗೆಲುವಿನ ನಗೆ ನೀ ಬೀರುವಾಗ ಸೊಗಸಿದೆ ಕೇಳು ಸಖ ನೇಸರ ಬರುವ ಮುನ್ನವೇ ಸಂಭ್ರಮಿಸಲಿ ಮತ್ತೊಂದು ಸಲ‘ಸರೋಜ’ಳ ಅಂತರಂಗ ಪ್ರತಿಧ್ವನಿಸುತ್ತಿದೆ ಕೇಳು ಸಖ ***********************************

ಗಜಲ್ Read Post »

ಕಾವ್ಯಯಾನ

ಮಾಯಾವಿ 2020

ಕವಿತೆ ಮಾಯಾವಿ 2020 ರಜಿಯಾ ಕೆ ಭಾವಿಕಟ್ಟಿ ಅಳಿದು ಉಳಿದದ್ದು ಎಲ್ಲವೂನಿಗೂಢತೆಯ ಸಾರವನ್ನು ಹೊತ್ತು ತಂದು ತೇಲುವ ದೋಣಿಯಲ್ಲಿ ಜಲದ ಸುಳಿಯೇ ಇಲ್ಲದೆ ಮುಳುಗಿ ಸತ್ತಂತೆ ಭಾಸವಾಗಿತ್ತು ಅಂಧನಿಗೂ ಕುರಡನೆಂಬ ಹಣೆಪಟ್ಟಿ ಮೊದಲೇ ಇದ್ದರು ಹೊಸತರಹದ ಮುಖವಾಡದನೇತ್ರಗಳಿಗೆ ಬಣ್ಣಗಳ ಲೇಪಿಸಲಾಗಿತ್ತು ಕಾಣದಾ ಜೀವಯು ಎಂಬ ಸುಳ್ಳುಗಳ ಸೋಗಿಗೆ ಕಾಲವೇನಿಂತು ಮುನ್ನುಡಿ ಬರೆದಿತ್ತುಅದಕೆ ಸತ್ಯವೆಂಬಂತೆ ಸಮಯಸಾತು ನೀಡಿ ಗರ್ವಪಟ್ಟಿತ್ತು. ಬಿತ್ತಿದವನು ಬರೀಗೈಲಿ ಬೆತ್ತಲಾಗಿ ನಿಂತು ಪರರ ಪಾಲಿಗೆಹುಚ್ಚನಂತೆ ಕಂಡು ಬದುಕುವ ಪಾಡು ಬಂದು ನಿಂತಿತ್ತು. ಗುಡಿ ಗುಂಡಾರ ಮಸೀದಿಗಳನದೇವರಿಗೂ ಗರ ಬಡಿದು ದೈವತ್ವದ ಬೆಳಕಿಗೂ ಅಂಧಕಾರದ ಕಿಡಿ ಸೊಕಿ ಬೆಂಕಿ ಅಲ್ಲೆ ನಂದಿ ತಣ್ಣಗಾಗಿತ್ತು. ಊರುರು ಅಲೆದು ದುಡಿದು ದಣಿದವನ ಹೊಟ್ಟೆಯ ಹಸಿವುಇಮ್ಮಡಿಗೊಂಡು ಮರಳಿ ಮಣ್ಣಿಗೆ ತಲುಪದೇ ಮಧ್ಯದಲ್ಲೆ ಮಸಣಕೂ ಆಗದೇ ಬೀದಿಯ ನಾಯಿಗಳಿಗೂ ಆಹಾರವಾಗದೆ ಆತ್ಮ ನಗ್ನವಾಗಿಯೇ ಉಳಿದಿತ್ತು ಸಂಬಂಧಗಳು ಮೊದಲಿಗಿಂತಲೂ ಬಹು ದೂರವೇ ಉಳಿದು ಮೋಸದ ಚಹರೆಗಳ ಒಟ್ಟಿಗೆ ಚಾಪುಗಳು ಹೊಂದಿ ಕುಹುಕ ತಾಂಡವದ ನಾಟಕಕೆ ನಡು ಸಂಚು ನಡೆಸಿದ್ದವು . ಶಿವಶರಣರ ನುಡಿಗಳು ನಿಜವಾದವು ಎಂಬಂತೆ ವರುಷದುದ್ದಕೂ ನಿಜ ಘಟನೆಗಳೇ ಕಣ್ಣಿಗೆ ದೊರಕುವಂತಿದ್ದವು ಹಣ ಹೆಣಗಳ ಲೆಕ್ಕವು ಸಿಗದೇಒಂದರ ಮೆಲೋಂದು ಘೋರಿಗಳು ಕಟ್ಟಲುರುದ್ರ ಭೂಮಿಯು ನಾಚಿ ತಲೆತಗ್ಗಿಸುವಂತಾಗಿತ್ತು ಸತ್ಯ ನ್ಯಾಯ ನೀತಿ ಧರ್ಮಗಳುಸತ್ತು ಅಗೋಚರಗಾಗಿ ದೂರ ನಿಂತದ್ದು ಮತ್ತೊಮ್ಮೆ ಭಾಸವಾಗಿತ್ತು . ಅಳಿದು ಉಳಿದದ್ದು ಏನಿದೆ ಎಲ್ಲವೂ ಬರೀ ನೋವಿನ ಸರಮಾಲೆಗಳೇ ಹೊರತು ಸಂತಸ ಕಂಡ ದಿನಗಳೇ ಕಡಿಮೆ ಮೊದಲು ಕಳೆದು ಬಿಡಲಿ ಈ ಕರಾಳ ಸಮಯ ಎಂದು ಎಲ್ಲರ ಮನಸಿನಲೂ ನಿಟ್ಟುಸಿರು ಒಂದೇ ಆಗಿತ್ತು. ********************************

ಮಾಯಾವಿ 2020 Read Post »

ಅಂಕಣ ಸಂಗಾತಿ, ರಂಗ ರಂಗೋಲಿ

ಅಂಕಣ ಬರಹ ಶಾಲಾರಂಗದೊಳಗೊಂದು ಕೋಲಾಟ ಠಣ್…ಠಣ್… ಠಣ್.. ಗಂಟೆಯ ಸದ್ದು ಒಂಭತ್ತು ಸಾರಿ  ಕೇಳಿಸಿತಾ! ಹಾಂ!! ಅದು ನಮ್ಮ ಶಾಲೆಯ ಬೆಳಗಿನ ಗಂಟೆ.   ನನ್ನಜ್ಜಿಯ ಹಣೆಯ ನಡುವಿನ ಕುಂಕುಮದ ಬೊಟ್ಟಿನಂತೆ ನಮ್ಮ ಊರಿನ ಕೇಂದ್ರ ಭಾಗದಲ್ಲಿ ಆಧಾರ ಸ್ತಂಭದಂತೆ ಕೂತಿತ್ತು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ. ಹೌದು ಅದು ನಮ್ಮ ಶಾಲೆ.  ನಮ್ಮ ಹಳ್ಳಿಯ ಶಾಲೆ.  ಬಲಗಾಲಿಟ್ಟು ಒಳಗೆ ಬರಬೇಕು. ಮೊದಲು ಕಾಣಿಸುವುದೇ ಬಿಳೀ ಕಂಬದ ಧ್ವಜಸ್ತಂಭ. ಅದರ ಬುಡದಲ್ಲಿ ಕಟ್ಟೆ . ಅದರ ಹಿಂದೆ, ತೆರೆದ ಎದೆ ಮತ್ತು ಅಕ್ಕ ಪಕ್ಕದ ಭುಜಗಳಂತೆ,  ಮುರ ಕಲ್ಲಿನ ಗೋಡೆಯ, ಹೆಂಚಿನ ಮಾಡಿನ ಶಾಲೆಯ ಕಟ್ಟಡ ನೆಲೆ ಕಂಡಿದೆ  ಈ ಧ್ವಜಸ್ವಂಭದ ಎದುರು ವಾರಕ್ಕೆ ಎರಡು ಸಲ ಡ್ರಿಲ್ ಮಾಡುವುದು, ಸೋಮವಾರ ಹಾಗೂ ಶುಕ್ರವಾರ. ಆಗ ಪ್ರತಿಯೊಬ್ಬರಿಗೂ ಸಮವಸ್ತ್ರ ಕಡ್ಡಾಯ. ಒಂದು ಗಂಟೆ ಬಾರಿಸಿದ ಕೂಡಲೇ ಶಾಲೆಯ ಮಡಿಲಿಂದ ಹೊರಕ್ಕೆ ಜಂಪ್ ಮಾಡಿ ಮಕ್ಕಳು  ಓಡುವುದು. ಸಾಲಾಗಿ ತರಗತಿ, ವಿಭಾಗದ ಪ್ರಕಾರ ಸಾಲು ಜೋಡಿಸಲ್ಪಡುತ್ತದೆ.   ಹುಡುಗಿಯರಿಗೆ ನೀಲಿ ಸ್ಕರ್ಟ್ ಬಿಳಿ ಅಂಗಿ. ಹುಡುಗರಿಗೆ ನೀಲಿ ಚಡ್ಡಿ ಬಿಳಿ ಅಂಗಿ. ತಪ್ಪಿದರೆ  ಬಿಸಿಲಲ್ಲಿ ನಿಲ್ಲುವ ಶಿಕ್ಷೆ ಮಾತ್ರವಲ್ಲ ಜೊತೆಗೆ  ಕೈಗೆ ಬಿಸಿ ಬಿಸಿ ಪೆಟ್ಟು ಹಾಗೂ ಬಸ್ಕಿ ಇಪ್ಪತ್ತೈದು. ಅದೆಷ್ಟೋ ಸಲ ಯುನಿಫಾರ್ಮ್ ಮರೆತು ಬಣ್ಣದ ಫ್ರಾಕ್,ಉದ್ದಲಂಗ ಹಾಕಿ ಬಂದು ಶಂಕಿಬಾಯಿ ಟೀಚರ್ ಹತ್ತಿರ ಪೆಟ್ಟು ತಿಂದದ್ದು, ಚುರ್ ಚುರ್ ಎನ್ನುವ ಚೂಪು ನೆನಪು. ಆ ಧ್ವಜಸ್ತಂಭ ನೋಡಿದಾಗೆಲ್ಲ ಚಿತ್ತದಲ್ಲಿ ಅದರ ಎದುರು ಸಾಲಾಗಿ ಒಂದೇ ಬಗೆಯ ದಿರಿಸು ತೊಟ್ಟ ವಿಧ್ಯಾರ್ಥಿಗಳ ಚಿತ್ರವೇ ತುಂಬಿಕೊಳ್ಳುವುದು. ಅದೆಷ್ಟು ಅಂದ- ಚೆಂದ. ಒಬ್ಬರು ಬಟ್ಟೆಯ ಬಣ್ಣ ಬೇರೆಯಾದರೂ ಬಿಳಿ ಅಂಗಿಗೆ ಶಾಹಿ ಕಲೆಯಾದಂತೆ, ನೂರು ಸರಿಗಳ ನಡುವೆ ತಪ್ಪೊಂದು ಎದ್ದು ನಿಂತಂತೆ  ಕಾಣಿತ್ತಿತ್ತು. ನಮ್ಮ ಶಂಕಿ ಟೀಚರ್, ಶೇಖರ ಮಾಸ್ಟ್ರು ಧ್ವಜಸ್ತಂಭದ ಬಳಿಯಿಂದಲೇ ಅಂತಹ ಅಂಗಿಗಳ ಲೆಕ್ಕ ಹಾಕಿ ಬಿಡುತ್ತಿದ್ದರು‌.  ನಮ್ಮ ಅ ಡ್ರಿಲ್ ಗೆ ಅನುಪಮ ಸೌಂದರ್ಯವಿತ್ತು. ಬೆಳಗ್ಗಿನ ಬಿಸಿಲೂ ಹೆಗಲು,ಕೆನ್ನೆ,ತಲೆ ಸವರಿ ಸಣ್ಣಗೆ ಬೆವರುತ್ತಿದ್ದೆವು. ಜೊತೆಜೊತೆಗೆ ನಡೆಸುತ್ತಿದ್ದ ಕವಾಯತ್. ಇರಲಿ. ಇಲ್ಲಿಂದ ಮುಂದೆ ಬಂದರೆ ನಮಗೆ ಕಾಣಿಸುವುದು ಬೆಳಗ್ಗೆ ಯಾವಾಗಲೂ ನಮಗಿಂತಲೂ ಬೇಗ ಬರುತ್ತಿದ್ದ ಗೌರಿ ಟೀಚರ್ . ಇವರು ಬೆಳ್ಳನೆ ಉದ್ದಕ್ಕಿದ್ದು  ಸೀರೆ  ಸ್ವಲ್ಪ ಮೇಲೆ ಉಡುತ್ತಿದ್ದರು. ಉರೂಟು ಕಣ್ಣು, ಬೈತಲೆ ತೆಗೆದು ಎಣ್ಣೆ ಹಾಕಿ ಬಾಚಿದ  ದಪ್ಪ ಮೋಟು ಜಡೆ,.ಕೈಯಲ್ಲಿ ಎರಡು ಪುಸ್ತಕದ ಜೊತೆ ಒಂದು ಸಪೂರ ಕೋಲು. ಆದರೆ ಅವರ ಕೋಲಿಂದ  ಪೆಟ್ಟು ತಿಂದವರು ಬಹಳ ಕಡಿಮೆ. ಇವರು ನಮ್ಮ ಇಷ್ಟದ ಟೀಚರ್. ಅವರದ್ದು ಮೂಲೆಯ ಕ್ಲಾಸ್. ಅಲ್ಲಿ ಕೊಂಚ ಸಪೂರ ಜಗಲಿ. ಶಾಲೆಯ ವರಾಂಡಾದ ಎದುರು ಹೂವಿನ ಹಾಗೂ ಬಣ್ಣದೆಲೆಗಳ ಕ್ರೋಟಾನ್ ಗಿಡಗಳು.  ವಾರಕ್ಕೆ ಒಂದು  ದಿನ  ಗಿಡಗಳ ಬಳಿ  ಬೆಳೆದ ಕಳೆ ಕೀಳುವ, ಕಸ ಹೆಕ್ಕುವ ಕೆಲಸ ಮಕ್ಕಳಿಗೆ ಅಂದರೆ ನಮಗೆ. ನಾವು ಕುಕ್ಕರುಗಾಲಲ್ಲಿ,ಮೊಣಕಾಲೂರಿ, ಬಗ್ಗಿ  ಬೇಡದ ಹುಲ್ಲು ಕೀಳುತ್ತಿದ್ದೆವು. ಕೆಲಸಕ್ಕಿಂತ ಮಾತೇ ಹೆಚ್ಚು.  ಟೀಚರ್ ಬಂದು ” ಎಂತ ಪಂಚಾತಿಗೆ ಕೂತು ಕೊಂಡದ್ದಾ. ಬೇಗಬೇಗ” ಎಂದು ಗದರಿಸಿದಾಗ    ಕಪ್ಪೆ ಹಾರಿದಂತೆ ಹಾರಿ ಹಾರಿ ದೂರವಾಗುತ್ತಿದ್ದೆವು. ಟೀಚರ್ ಬೆನ್ನು ಹಾಕಿದೊಡನೆ ಮತ್ತೆ ನಮ್ಮ ಮಾತು. ಗಂಡು ಹೆಣ್ಣು ಭೇದವಿಲ್ಲ. ಅದೂ ನಮ್ಮಲ್ಲಿ ಕ್ಲಾಸ್ ಲೀಡರ್ ಹುಡುಗಿಯರಾದರೆ ನಮಗೆ ಹುಡುಗರತ್ರ  ಕೆಲಸ ಮಾಡಿಸುವುದೇ ಬಹಳ ಖುಷಿ!. ಜಗಳವಾದರೆ ಮರು ಕ್ಷಣದಲ್ಲಿ ಕೈ ಕೈ ಹಿಡಿದು ಜಿಗಿದೋಡುವ ಕಲೆ ಕಲಿತದ್ದೇ ಹೀಗೆ. ಪಠ್ಯೇತರ ಚಟುವಟಿಕೆಗಳು ಬದುಕನ್ನು ರೂಪಿಸುವ, ಟೀಂವರ್ಕ್ ನಲ್ಲಿ ಹೊಂದಿ ನಡೆಯುವ, ಎಲ್ಲಾ ಕೆಲಸಗಳನ್ನು ಗೌರವಿಸುವ,  ರೀತಿ ಕಲಿಸಿತು. ನಾಟಕದಲ್ಲೂ ಅಷ್ಟೇ, ಪಾತ್ರಗಳು ಹೊಂದಿ ನಡೆದರೇ ಛಂದವೂ ಚಂದವೂ. ರಂಗಸ್ಥಳದಲ್ಲಿ ಪಾತ್ರಪೋಷಣೆ ಎಷ್ಟು ಮುಖ್ಯವೋ ಅದಕ್ಕಿಂತಲೂ ಹೆಚ್ಚು ಮುಖ್ಯ ಚೌಕಿಯಲ್ಲಿ ಬೆರೆಸುವ ಬಣ್ಣಗಳು, ನಟ ನಟಿಯರ ನಡುವಿನ ಕೆಮಿಸ್ಟ್ರಿ. ಆಗೆಲ್ಲ ಇಡೀ ಊರಿನ ಮಕ್ಕಳೆಲ್ಲ ಈ ಶಾಲೆಯಲ್ಲೇ ಓದುವುದು. ಒಂದು ಮನೆಯ ಹುಡುಗಿ ಮಾತ್ರ ಆಂಗ್ಲ ಮಾಧ್ಯಮ ಶಾಲೆಗೆ ಊರಿನಿಂದ ಹೊರ ಹೋಗುತ್ತಿದ್ದ ನೆನಪು. ನಮಗೆ ಅವಳು ಅಸ್ಪೃಶ್ಯ ಳು. ಆದರೆ ನಮ್ಮ ಮಾತುಕತೆಯ ಕೇಂದ್ರ ಆಕೆಯಾಗಿರುತ್ತಿದ್ದಳು. ಇಂಗ್ಲೀಷಿನಲ್ಲೇ ಎಲ್ಲ ಪಾಠವಂತೆ!. ಅದು ನಮಗೆ ವಿಸ್ಮಯ, ಅದ್ಭುತ. “ಒಂದನೇ ಕ್ಲಾಸಿನಲ್ಲಿ ABC’D ಕಲಿಸ್ತಾರಂತೆ, ಇಂಗ್ಲೀಷ್ ಮಾತನಾಡುದಂತೆ, ವಿಜ್ಞಾನ, ಗಣಿತ,ಸಮಾಜ ಎಲ್ಲವೂ ಇಂಗ್ಲೀಷ್.  ಅಲ್ಲಿ ಹೋದವರು ಮಾತನಾಡುವುದು ಹೇಗೆ ಗೊತ್ತುಂಟಾ..ಟುಸ್ ಟುಸ್ ವಾಸ್ ಶ್ ಸು !!” ಎಂದು ಚಿತ್ರ ವಿಚಿತ್ರವಾಗಿ ಬಾಯಿಯ ಚಲನೆ ಹೊಂದಿಸಿ ಮಾತಾಡಿ ಅಣಕಿಸಿ ಹೊಟ್ಟೆ ಬಿರಿಯೆ ನಗುತ್ತಿದ್ದೆವು. ನಮ್ಮ‌ಸಂಜೆಯ ಮನೆಯಾಟದಲ್ಲಿ ಒಂದು ಪಾತ್ರ ಅದೇ ಆಗಿರುತ್ತಿತ್ತು.  ಆಗಿನ ಊರ ಶ್ರೀಮಂತರ ಮನೆಯ ಮಕ್ಕಳೂ  ಸರಕಾರಿ ಶಾಲೆಯಲ್ಲೇ ಓದುವುದು. ಈ ಕಳೆ ಕೀಳುವ ಕೆಲಸಕ್ಕೆ ಒಂದಷ್ಟು ಬಡ್ತಿ ದೊರಕಿದ ನಂತರ ನಾವು ಆ ಮಕ್ಕಳ ಬಳಿ ಹೋಗಿ ” ಹೇ ಸಂದೀಪ ಸರಿ ಕಿತ್ತು ತೆಗೆ ಹುಲ್ಲು. ರಾಜೇಶ ಕಡ್ಡಿ, ಪೇಪರ್ ಹೆಕ್ಕು” ಎಂದು ಅವರಿಂದ ಚೂರು ಹೆಚ್ಚು ಕೆಲಸ ಮಾಡಿಸುವ ಖುಷಿ ಹೆಕ್ಕಿದ್ದೂ ಇದೆ. ಮುಗ್ದ ಮನಸ್ಸಿನ ದ್ವೇಷರಹಿತ ಕಾರ್ಯವದು. ಇಲ್ಲಿ ನೋಡಿ!  ಓಡಿಕೊಂಡು ಬಂದಂತೆ ಬರುತ್ತಿದ್ದಾರಲ್ವಾ!, ಅವರೇ ಸುಮನ ಟೀಚರ್. ತುಸು ಸಿಟ್ಟಿನ ಮುಖ.  ಇವರು ಐದನೆಯ ಕ್ಲಾಸಿಗೆ ಇಂಗ್ಲೀಷ್ ಪಾಠ ಮಾಡುವುದು. ನಮಗೆ ಇವರೆಂದರೆ ಬಹಳ ಭಯ. ಅವರ ಬಳಿ ಒಂದು ಹಳದಿ ಬಣ್ಣದ ಸೀರೆಯಿದೆ. ಅದನ್ನು ಉಟ್ಟು ಬಂದ ದಿನ ಅವರಿಗೆ ಹೆಚ್ಚು ಕೋಪ ಬರುತ್ತದೆ ಎಂಬುದು ನಮ್ಮಗಟ್ಟಿ ನಂಬಿಕೆ. ನಾವು ಬೆಳಗ್ಗೆ ಅವರು ಬರುವುದನ್ನೇ ಒಂದಷ್ಟು ಭಯದಿಂದ ಕಾಯುತ್ತಿದ್ದೆವು. ಒಬ್ಬರಿಗೆ ಅದೇ ಕೆಲಸ ವಹಿಸಿಕೊಟ್ಟಿದ್ದೆವು. ದೂರದಿಂದ ಅವರು ಓಡಿ ಬರುವಾಗ ಹಳದಿ ಬಣ್ಣ ಕಂಡರೆ ನಮ್ಮ ಭಯ ವಿಪರೀತ ಹೆಚ್ಚಿ ಕೂಡಲೇ ಗುಪ್ತ ಸಮಾಲೋಚನೆ ಆರಂಭಿಸುತ್ತಿದ್ದೆವು. ಯಾವ ಪಾಠದ ಪ್ರಶ್ನೆ ಕೇಳಬಹುದು. ಎಣ್ಣೆ ತಾಕಿದರೆ ಪೆಟ್ಟು ಹೆಚ್ಚು ನೋವಾಗುವುದಿಲ್ಲವಂತೆ.  ಅಂಗೈಗಳನ್ನು ಎಣ್ಣೆ ಹಾಕಿದ ತಲೆಗೆ ತಿಕ್ಕಿ ತಿಕ್ಕಿ ಪರೀಕ್ಷಿಸುವುದು.  ಕೆಲವು ಹುಡುಗಿಯರ ತಲೆತುಂಬ ಎಣ್ಣೆ. ನಮ್ಮ ಕ್ಲಾಸಿನಲ್ಲಿ ಮಮತಾ ಎಂಬ ಹುಡುಗಿಯ ತಲೆ ಕೂದಲಲ್ಲಿ ಬಹಳ ಎಣ್ಣೆ. ನಾವೆಲ್ಲ ಅವಳ ತಲೆಗೆ ನಮ್ಮ ಅಂಗೈ ತಿಕ್ಕಿ ಪೆಟ್ಟು ತಿನ್ನಲು ಮಾನಸಿಕವಾಗಿ ಸಿದ್ದಗೊಳ್ಳುತ್ತಿದ್ದೆವು. ಜೊತೆಗೆ ಪುಸ್ತಕ ತೆಗೆದು ವೇಗವಾಗಿ ಓದುವ ತಾಲೀಮು.  ಹೀಗೆ ಬನ್ನಿ! ಇಲ್ಲಿದ್ದಾರೆ ನಮ್ಮ ಶಂಕಿ ಟೀಚರ್. ಅವರಲ್ಲಿ ಪೆಟ್ಟಿನ ಖಾರವೂ ಇದೆ, ಜೊತೆಗೆ ಪ್ರೀತಿಯ ಸಿಹಿಯೂ ಉಂಟು. ಅಗಲಹಣೆಯ ಮುಖ, ವಾತ್ಸಲ್ಯ ಅವರ ಕಣ್ಣಿನಲ್ಲಿ ಒಸರುತ್ತದೆ. ಸ್ವಲ್ಪ ವಯಸ್ಸಾಗಿದೆ. ದೊಡ್ಡ ಸೂಡಿ ಕಟ್ಟಿ ಹೂ ಮುಡಿದು ಬರುತ್ತಿದ್ದರು. ನಾವು ಅವರಿಗಾಗಿ ಹೂವಿನ ಮಾಲೆ ತರುವಲ್ಲಿ ಪೈಪೋಟಿ ನಡೆಸುತ್ತಿದ್ದೆವು. ನನ್ನ ಪಕ್ಕ ಕೂತುಕೊಳ್ಳುವ ಶಾಲಿನಿ ಮನೆಯಲ್ಲಿ ರಾಶಿ ಅಬ್ಬಲಿಗೆ. ಹಾಗೆ ಅವಳಿಗೆ ನಾನೆಂದರೆ ಮೆಚ್ಚು. ಆಗಾಗ ಮನೆಯಿಂದ ಚಿಕ್ಕ ಮಾಲೆ ಪಾಟೀ ಚೀಲದೊಳಗೆ ಹಾಕಿ ನನಗೆ ತಂದು ಕೊಡುತ್ತಿದ್ದಳು. ಕೆಲವಷ್ಟು ಸಲ ನನ್ನಜ್ಜಿ ಜಾಜಿ ಮಲ್ಲಿಗೆ ದಂಡೆಯನ್ನು ಕೊಡುತ್ತಿದ್ದಳು.  ಶಾಲಿನಿ “ನೀನು ಮುಡಿ” ಎನ್ನುತ್ತಿದ್ದಳು. ಅವಳಿಗೆ ನನ್ನ ಉದ್ದದ ಎರಡು ಜಡೆ ಕಂಡರೆ ಇಷ್ಟ. ಆದರೆ ನಾನು ಕ್ಲಾಸಿನ ಹೊರಗೆ ಬಾಗಿಲ ಬಳಿ ಕೈಯಲ್ಲಿ ಹೂವನ್ನು ಹಿಡಿದು ಬಲು ಆಸೆಯಿಂದ ಶಂಕಿ ಟೀಚರ್ ಗೆ ಕೊಡಲು ಕಾಯುತ್ತಿದ್ದೆ. ನಮ್ಮ ಶಾಲೆಗೆ ಒಂದು ದಿನಪತ್ರಿಕೆಯೂ ಬರುತ್ತಿತ್ತು. ಅದನ್ನು ದಿನಕೊಬ್ಬರಂತೆ ಓದಿ ಮುಖ್ಯ ವಿಷಯಗಳನ್ನು ಬೋರ್ಡಿನಲ್ಲಿ ಕ್ರಮಪ್ರಕಾರ ಬರೆಯಬೇಕಿತ್ತು. ನಾವೆಲ್ಲ ಆಕಾಶವಾಣಿಯ ವಾರ್ತಾವಾಚಕರಿಗಿಂತಲೂ ಹೆಚ್ಚಿನ ಚೆಂದದಲ್ಲಿ ನಮ್ಮದೇ  ಶೈಲಿಯಲ್ಲಿ ಓದುವುದು, ಕೆಲವೊಮ್ಮೆ ಹಿಂದಿನಿಂದ ಬಂದ ಟೀಚರ್ ಕೈಯಲ್ಲಿ ಪೆಟ್ಟು ತಿಂದು ನಮ್ಮ ಬೆಂಚ್ ಗೆ ಓಡುವುದೂ ಆಗಾಗ ಚಾಲ್ತಿಯಲ್ಲಿದ್ದ  ವಿಷಯ. ಆಗ ನಾಲ್ಕನೆಯ ಎ ತರಗತಿಗೆ ರಾಘವ ಮೇಷ್ಟ್ರು , ಅವರು ಆಗಾಗ ಮಧ್ಯಾಹ್ನ ಎರಡೂ ತರಗತಿ ಸೇರಿಸಿ ಪಾಠ ಮಾಡುತ್ತಿದ್ದರು. ಜೊತೆಗೆ ಹಾಡು ಹಾಡುವಂತೆ ಪ್ರತಿಯೊಬ್ಬರಿಗೂ ತಾಕೀತು. ನನಗೆ ಅಂಜಿಕೆ,ನಾಚಿಕೆ. ಆದರೆ ಅಜ್ಜಿ ಹೇಳಿದ್ದಾಳೆ ದಂಡನಾಯಕಿಯಾಗಬೇಕು. ಆಗ ಒಂದು ಹಾಡು ಕಂಠಪಾಠ. ನನ್ನ ಕೆಲವು ಗೆಳತಿಯರೂ ಒಂದೊಂದು ಹಾಡು ಹಾಡುತ್ತಿದ್ದರು. ಈ ಒಂದೊಂದು ಹಾಡು ಎಂದರೆ ನಮಗೆ ಆ ವರ್ಷ ಪೂರ್ತಿಯಾಗಿ ಅದನ್ನು ಉಪಯೋಗಿಸಿ ಮುಂದಿನ ತರಗತಿಯಲ್ಲೂ ಹಾಡಲು ಹೇಳಿದರೆ ಅದೇ ಪದ್ಯ ಅಷ್ಟೇ  ಚೆಂದದಲ್ಲಿ  ಹಾಡುತ್ತಿದ್ದೆವು. ನನ್ನದು ಧರ್ಮಸೆರೆ ಚಿತ್ರದ ” ಕಂದಾ ಓ ನನ್ನ ಕಂದ..” ಎಂಬ ಹಾಡು. ನನಗೆ ಆ ಹಾಡಿನ ಮೇಲೆ ಎಂತಹ ಅಭಿಮಾನವೆಂದರೆ ಅಷ್ಟು ಉತ್ತಮವಾದ ಹಾಡು ಬೇರೊಂದಿಲ್ಲ. ನಾನು ಎದ್ದ ತಕ್ಷಣ ಎಲ್ಲ ಗಂಡು,ಹೆಣ್ಣೂ ಮಕ್ಕಳೂ “ಕಂದಾ..” ಎಂಬ ಆಲಾಪ ಶುರು ಮಾಡುತ್ತಿದ್ದರು. ಆದರೆ ಇದು ನನ್ನ ಒಬ್ಬಳದೇ ಸಮಸ್ಯೆಯಲ್ಲ. ಎಲ್ಲರ ಒಳಗೂ ಒಂದೊಂದು ಹಾಡಿನ ಮುದ್ರಿಕೆ ಅಚ್ಚಾಗಿ ಬಿಟ್ಟಿತ್ತು.  ನನಗೆ ನನ್ನ ಈ  ಹಾಡಿನ ವೃತ್ತದಿಂದ ಮೇಲೆದ್ದು ಹೊಸತೊಂದು ಹಾಡು ಹಾಡಬೇಕು  ಎಂಬ ಯೋಚನೆ, ಹಠದಿಂದ  ಬೇರೆ ಹಾಡನ್ನೂ ಕಲಿತಿದ್ದೆ. ಅದನ್ನು ಹಾಡಿ ಭೇಷ್ ಎನಿಸಿಕೊಳ್ಳಬೇಕು. ಈ ಹುಡುಗರ ” ಕಂದಾಆಆಅ” ಎಂಬ ಲೇವಡಿಯಿಂದ ಬಚಾವಾಗಬೇಕು. ನನಗೆ ಸಿಕ‌್ಕಿತು ಹೊಸ ಹಾಡು. ಹಾಡಲೂ ತಯಾರಾದೆ. ಹೊಸ ಹಾಡು. ಹಾಡಿನ ಸರದಿ ಆರಂಭ ಆಗುತ್ತಿದ್ದಂತೆ ಮನಸ್ಸಿನೊಳಗೆ ವೇಗವಾಗಿ,ನಿಧಾನವಾಗಿ ಶ್ರುತಿಬದ್ದವಾಗಿ ಹಾಡಿ ಅನುವಾದೆ. ಹೊಸದರ  ಪುಳಕ. ನನ್ನ ಹೆಸರು ಬಂದಾಗ‌ ಎದ್ದು ಮನದೊಳಗೆ ಮತ್ತೆ ಹೊಸ ಹಾಡು ಉರು ಹೊಡೆಯುತ್ತ ಎದುರು ಹೋದೆ. ಏಕ ಚಿತ್ತದಲ್ಲಿ ನಿಂತು  ಶುರು ಮಾಡಿದರೆ  ಕಂಠದಿಂದ ಮೈಕೊಡವಿ ಎದ್ದು  ಹೊರಬಂದದ್ದು “ಕಂದಾ..ಓ ನನ್ನ..”  ಇಂತಹ ಒಂದೆರಡು ಪ್ರಯತ್ಮ ಮತ್ತೆ ಮಾಡಿ ಕೊನೆಗೆ ನನ್ನ  ಈ ಹಾಡಿನೊಂದಿಗೆ ಜೊತೆಯಾಗಿ ಇರುವ ಸಂಕಲ್ಪವನ್ನೇ ಗಟ್ಟಿ ಮಾಡಿದ್ದೆ. ಈಗಲೂ ನಮ್ಮ ಕ್ಲಾಸಿನ ಸಹಪಾಠಿ ಗಳು ಸಿಕ್ಕರೆ ಅವರು ಹಾಡುತ್ತಿದ್ದ ಹಾಡು ನೆನಪಾಗುತ್ತದೆ. ಅದು ಉಳಿದವರಿಗೂ ಕಂಠಪಾಠ. ಬೆಲ್ಲದ ಸವಿ. ನಮ್ಮ ಶಾಲೆಯಲ್ಲಿ ಆಗ ಫ್ಯಾನ್ ಗಳು ಇರಲಿಲ್ಲ. ಹಾಗಾಗಿ  ಬೇಸಿಗೆ ಸಮಯದಲ್ಲಿ ಮಧ್ಯಾಹ್ನದ ತರಗತಿ ಸೆಖೆ. ಅದು ನಮಗೇನೂ ಆಗ ಭಾದೆ ಎಣಿಸುತ್ತಿರಲಿಲ್ಲ.  ಮಾಸ್ಟರ್ರು ಮಾತ್ರ ಕೆಲವು ಸಲ ಶಾಲೆಯ ಹೊರಗೆ ಹಿಂಬದಿಯ  ದೇಗುಲದ ತೋಪಿನಲ್ಲಿ ಪಾಠ ಮಾಡುತ್ತಿದ್ದರು.ಅಲ್ಲಿ ಹಳೆಯ ಹುಣಿಸೆ, ಮಾವು, ದೇವದಾರು ಮರಗಳಿದ್ದವು. ನಮಗದು ಬಹಳ ಮೋಜಿನ ತರಗತಿ. “ಸರ್, ಸಾರ್..ಇವತ್ತು ಕ್ಲಾಸ್ ಹೊರಗೆ ಮಾಡುವ. ಸಾರ್..ಅಲ್ಲಿ ಪಾಠ ಮಾಡಿ”  ನಮ್ಮದು ಗೋಗರೆತ. ಅವರು ” ಆಯಿತು” ಎಂದದ್ದೇ ತಡ ಹುಡುಗರು ಅವರು ಕುಳಿತುಕೊಳ್ಳುವ ಕುರ್ಚಿ ಎತ್ತಿ ಹಿಡಿದು ಓಡುತ್ತಿದ್ದರು. ನಾವು ಬೇಗ ಓಡಿ ಮೊದಲು ಹುಣಿಸೆ ಹಣ್ಣು ಬಿದ್ದಿದೆಯಾ ಎಂದು ಹುಡುಕಾಡಿ ಹೆಕ್ಕುತ್ತಿದ್ದೆವು. ಸಿಕ್ಕಿದರೆ ಸ್ವಲ್ಪ ಪಾಟಿ ಚೀಲದಲ್ಲಿ ಅಡಗಿಸಿ, ನಂತರ ಸಿಗದವರಿಗೆ ತೋರಿಸಿ  ಹಂಚಿ ತಿನ್ನುವ ಗಮ್ಮತ್ತು. ನಮ್ಮ‌ ಮೇಸ್ಟರಿಗೆ ಮಾತ್ರ ಕುರ್ಚಿ. ನಾವು ಅಲ್ಲಿ

Read Post »

You cannot copy content of this page

Scroll to Top