Day: January 19, 2021

ಪ್ರತಿಫಲ

ಮಕ್ಕಳ ಕಥೆ ಪ್ರತಿಫಲ ಬಸವರಾಜ ಕಾಸೆ ದಿನವೂ ಏನಾದರೂ ಒಂದು ಒಳ್ಳೆಯ ಕೆಲಸ ಮಾಡಿ ಅದನ್ನು ಬರೆದುಕೊಂಡು ಬರಬೇಕು ಎಂದು ಕ್ಲಾಸ್ ಟೀಚರ್ ಹೇಳುತ್ತಿದ್ದರು. ಆದರೆ ಅವಕಾಶ ಇದ್ದಾಗಲೂ ಅಂತಹ ಕೆಲಸವನ್ನು ಯಾವ ಮಕ್ಕಳು ಮಾಡುತ್ತಿರಲಿಲ್ಲ. ಅದರಲ್ಲಿ ವಿಶೇಷವಾಗಿ ಚೂಟಿ ಮಾಡುತ್ತಾನೆ ಇರಲಿಲ್ಲ. ಆದರೆ ದಿನವೂ “ಇಂದು ರಸ್ತೆಯಲ್ಲಿ ಬಿದ್ದ ಮುಳ್ಳು ತೆಗೆದು ಹಾಕಿದೆ”, “ಕಲ್ಲು ತೆಗೆದು ಹಾಕಿದೆ”, “ವೃದ್ಧರಿಗೆ ರಸ್ತೆ ದಾಟಲು ಸಹಾಯ ಮಾಡಿದೆ”, “ಮನೆ ಕಸ ಗುಡಿಸಿದೆ”, “ಅಮ್ಮನಿಗೆ ಅಡುಗೆಯಲ್ಲಿ ನೆರವಾದೆ” ಹೀಗೆ ಸುಮ್ಮಸುಮ್ಮನೆ […]

ಅಂಕಣ ಬರಹ ಕಬ್ಬಿಗರ ಅಬ್ಬಿ ಕಾವ್ಯೋದ್ಭವ “ಗುರುಗಳೇ, ನನಗೆ ಸಂಗೀತ ಕಲಿಯಬೇಕು! ಕಲಿಸುವಿರಾ..” ಅಲ್ಲಲ್ಲಿ ಹರಿದರೂ ತಕ್ಕಮಟ್ಟಿಗೆ ಒಪ್ಪವಾಗಿದ್ದ ಅಂಗಿ, ಖಾಕಿ ಚಡ್ಡಿ ಧರಿಸಿದ ಹುಡುಗ, ‘ಧ್ರುಪದ್ ಗಂಧರ್ವ’ ಮನೆ ತಲಪಿದ್ದ. ಮನೆಯ ಬಂಧನ ಬಿಟ್ಟು, ಎರಡು ದಿನ, ಮೂರು ರಾತ್ರೆ ರೈಲು ಯಾತ್ರೆ ಮಾಡಿದಾಗ, ಹೊತ್ತು ತಂದದ್ದು ಕಪ್ಪು ಕಣ್ಣುಗಳ ತುಂಬಿದ ಕನಸು ಮಾತ್ರ. ಕಣ್ಣಲ್ಲಿ ಕಣ್ಣಿಟ್ಟು ಒಳಗಿನ ಭಾಷೆಯನ್ನು ಅರ್ಥ ಮಾಡಿಕೊಂಡವರಂತೆ ಗುರುಗಳು ಒಪ್ಪಿಕೊಂಡರು. ಗುರುಗಳ ಮನೆಯಲ್ಲಿಯೇ ವಾಸ. ಬೆಳಗ್ಗೆ ಗಡಿಯಾರದ ಲೋಲಕ ಢಣ್ […]

Back To Top