ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ, ಮಕ್ಕಳ ವಿಭಾಗ

ಪ್ರತಿಫಲ

ಮಕ್ಕಳ ಕಥೆ ಪ್ರತಿಫಲ ಬಸವರಾಜ ಕಾಸೆ ದಿನವೂ ಏನಾದರೂ ಒಂದು ಒಳ್ಳೆಯ ಕೆಲಸ ಮಾಡಿ ಅದನ್ನು ಬರೆದುಕೊಂಡು ಬರಬೇಕು ಎಂದು ಕ್ಲಾಸ್ ಟೀಚರ್ ಹೇಳುತ್ತಿದ್ದರು. ಆದರೆ ಅವಕಾಶ ಇದ್ದಾಗಲೂ ಅಂತಹ ಕೆಲಸವನ್ನು ಯಾವ ಮಕ್ಕಳು ಮಾಡುತ್ತಿರಲಿಲ್ಲ. ಅದರಲ್ಲಿ ವಿಶೇಷವಾಗಿ ಚೂಟಿ ಮಾಡುತ್ತಾನೆ ಇರಲಿಲ್ಲ. ಆದರೆ ದಿನವೂ “ಇಂದು ರಸ್ತೆಯಲ್ಲಿ ಬಿದ್ದ ಮುಳ್ಳು ತೆಗೆದು ಹಾಕಿದೆ”, “ಕಲ್ಲು ತೆಗೆದು ಹಾಕಿದೆ”, “ವೃದ್ಧರಿಗೆ ರಸ್ತೆ ದಾಟಲು ಸಹಾಯ ಮಾಡಿದೆ”, “ಮನೆ ಕಸ ಗುಡಿಸಿದೆ”, “ಅಮ್ಮನಿಗೆ ಅಡುಗೆಯಲ್ಲಿ ನೆರವಾದೆ” ಹೀಗೆ ಸುಮ್ಮಸುಮ್ಮನೆ ಏನಾದರೂ ಬರೆದುಕೊಂಡು ಹೋಗುತ್ತಿದ್ದಳು. ಚೂಟಿಯ ಗೆಳತಿಯಾದ ಪುಟ್ಟಿಯು ನಿಜವಾಗಿಯೂ ಮಾಡುವ ಮನಸ್ಸು ಹೊಂದಿದ್ದಳು ಮತ್ತು ಗಮನಕ್ಕೆ ಬಂದರೆ ಮಾಡುತ್ತಿದ್ದಳು. ಆದರೆ ಇದನ್ನೆಲ್ಲಾ ಎಷ್ಟೋ ಸಲ ಚೂಟಿಯೇ ತಡೆದಿದ್ದಳು. ಅವತ್ತು ಒಂದು ದಿನ ಚೂಟಿ ಮತ್ತು ಪುಟ್ಟಿ ರಸ್ತೆಯಲ್ಲಿ ಹೋಗುತ್ತಿದ್ದಾಗ ಯಾರೋ ಮಾವಿನ ಹಣ್ಣು ತಿನ್ನುತಿರುವದನ್ನು ಕಂಡು ಇವರಿಬ್ಬರಿಗೂ ತಿನ್ನಬೇಕು ಎನಿಸಿತು. ಆದರೆ ಇಬ್ಬರ ಬಳಿಯೂ ದುಡ್ಡು ಇರಲಿಲ್ಲ. ಹಾಗೆ ಆಸೆಗಣ್ಣಿನಲ್ಲಿ ಮುಂದೆ ಮುಂದೆ ಬರುವಾಗ ಅಲ್ಲಿ ಒಬ್ಬಳು ಅಜ್ಜಿ ರಸ್ತೆ ದಾಟಲಾಗದೆ ತಲೆ ಮೇಲೆ ಬುಟ್ಟಿ ಹೊತ್ತು ನಿಂತಿದ್ದಳು. ಒಂದಾದ ಮೇಲೆ ಒಂದು ವಿಪರೀತ ವಾಹನಗಳ ಓಡಾಟ. “ಪಾಪ, ನೋಡೇ… ಆ ಅಜ್ಜಿಗೆ ಸಹಾಯ ಮಾಡೋಣ, ಬಾ ಆ ಕಡೆ ಹೋಗೋಣ” ಎಂದರೂ “ಹೋಗೇ, ಯಾರು ಬರತಾರೆ” ಎಂದಳು. ಆಗ ಪುಟ್ಟಿ ಒಬ್ಬಳೇ ಹೋಗಿ ಮೆಲ್ಲಗೆ ಅಜ್ಜಿಯ ಕೈ ಹಿಡಿದು ರಸ್ತೆ ದಾಟಿಸಿದಳು. “ಸ್ವಲ್ಪ ಬುಟ್ಟಿ ಇಳಿಸು ಮರಿ ಹಾಗೆ” ಎಂದಾಗ ಅಜ್ಜಿ, ಪುಟ್ಟಿ ಇಳಿಸಿದಳು. ನೋಡಿದರೆ ಆ ಬುಟ್ಟಿ ತುಂಬಾ ಮಾವಿನ ಹಣ್ಣು “ತಗೋ, ತಿನ್ನು” ಅಂತ ಅಜ್ಜಿ ಕೊಟ್ಟರೂ “ಬೇಡ ಬೇಡ” ಎಂದು ಆಮೇಲೆ ತೆಗೆದುಕೊಂಡಳು. ದೂರದಲ್ಲಿಯೇ ನಿಂತು ನೋಡತಾ ಚೂಟಿ ಹೊಟ್ಟೆಕಿಚ್ಚು ಪಟ್ಟುಕೊಂಡು ಮುಖ ಉದಿಸಿಕೊಂಡಳು. “ಅಜ್ಜಿ ಅವಳು ನನ್ನ ಪ್ರೇಂಡ್” ಎಂದಾಗ ಅವಳನ್ನು “ಬಾ ಇಲ್ಲಿ, ಮಾವಿನ ಹಣ್ಣು ತಗೋ” ಎಂದಾಗ ಆಸೆಗಣ್ಣಿನಿಂದ ಓಡಿ ಬರಲು ಕಾಲಿಗೆ ಮುಳ್ಳು ಚುಚ್ಚಿತು. “ಯಾರಾದರೂ ಸೈಡಿಗೆ ಈ ಮುಳ್ಳು ಹಾಕಿದರೆ ನನ್ನ ಕಾಲಿಗೆ ಹೀಗೆ ಆಗ್ತಾ ಇರಲಿಲ್ಲ” ಎಂದು ಬೈಯಿಕೊಂಡಳು. ಹಾಗೆ ಕುಂಟುತ್ತಾ ಬಂದ ಅವಳಿಗೂ ಅಜ್ಜಿ ಮಾವಿನ ಹಣ್ಣು ನೀಡಿದಳು. ಅದರಿಂದ ಸಂತುಷ್ಟಳಾದ ಚೂಟಿ “ನಾವು ಇನ್ನೊಬ್ಬರಿಗೆ ಸಹಾಯ ಮಾಡಿದರೆ ನಮಗೂ ಮತ್ತೆ ಯಾರೋ ಸಹಾಯ ಮಾಡುತ್ತಾರೆ, ಒಳ್ಳೆಯ ಕೆಲಸಕ್ಕೆ ಒಳ್ಳೆಯ ಪ್ರತಿಫಲ” ಎಂದು ಖುಷಿಗೊಂಡು ತನ್ನ ನಡವಳಿಕೆಯನ್ನು ಬದಲಿಸಿಕೊಳ್ಳಬೇಕು ಎಂದು ನಿರ್ಧರಿಸಿ ಮಾವಿನ ಹಣ್ಣು ತಿಂದಳು ***********************************************

ಪ್ರತಿಫಲ Read Post »

ಅಂಕಣ ಸಂಗಾತಿ, ಕಬ್ಬಿಗರ ಅಬ್ಬಿ

ಅಂಕಣ ಬರಹ ಕಬ್ಬಿಗರ ಅಬ್ಬಿ ಕಾವ್ಯೋದ್ಭವ “ಗುರುಗಳೇ, ನನಗೆ ಸಂಗೀತ ಕಲಿಯಬೇಕು! ಕಲಿಸುವಿರಾ..” ಅಲ್ಲಲ್ಲಿ ಹರಿದರೂ ತಕ್ಕಮಟ್ಟಿಗೆ ಒಪ್ಪವಾಗಿದ್ದ ಅಂಗಿ, ಖಾಕಿ ಚಡ್ಡಿ ಧರಿಸಿದ ಹುಡುಗ, ‘ಧ್ರುಪದ್ ಗಂಧರ್ವ’ ಮನೆ ತಲಪಿದ್ದ. ಮನೆಯ ಬಂಧನ ಬಿಟ್ಟು, ಎರಡು ದಿನ, ಮೂರು ರಾತ್ರೆ ರೈಲು ಯಾತ್ರೆ ಮಾಡಿದಾಗ, ಹೊತ್ತು ತಂದದ್ದು ಕಪ್ಪು ಕಣ್ಣುಗಳ ತುಂಬಿದ ಕನಸು ಮಾತ್ರ. ಕಣ್ಣಲ್ಲಿ ಕಣ್ಣಿಟ್ಟು ಒಳಗಿನ ಭಾಷೆಯನ್ನು ಅರ್ಥ ಮಾಡಿಕೊಂಡವರಂತೆ ಗುರುಗಳು ಒಪ್ಪಿಕೊಂಡರು. ಗುರುಗಳ ಮನೆಯಲ್ಲಿಯೇ ವಾಸ. ಬೆಳಗ್ಗೆ ಗಡಿಯಾರದ ಲೋಲಕ ಢಣ್ ಢಣ್ ಎಂದು ನಾಲ್ಕು ಬಾರಿ ಆಂದೋಳಿಸಿದಾಗ ಎದ್ದು ಮನೆ,ಅಂಗಳ ಗುಡಿಸಬೇಕು. ಆ ಮೇಲೆ ಬಾವಿಯೊಳಗೆ ಬಿಂದಿಗೆಯಿಳಿಸಿ ಒಂದೊಂದೇ ಬಿಂದಿಗೆ ನೀರನ್ನು ತಂದು ಮನೆಯ, ಬಚ್ಚಲು ಮನೆಯ,ಅಡುಗೆ ಮನೆಯ ಹಂಡೆ ತುಂಬುವ ಕೆಲಸ. ಗುರುಗಳ ಅಂಗಳದಲ್ಲಿ ತಂಬೂರಿ ಕೂಡಾ ೫ ಗಂಟೆಗೇ ಎದ್ದು ಸ್ವರ ಹಚ್ಚಲು ತಂತಿ ಬಿಗಿ ಮಾಡುತ್ತಿತ್ತು. ತಂಬೂರಿಯ ಮಂದ್ರ ಶಡ್ಜಕ್ಕೆ  ಗುರುಗಳು ಸ್ವರ ಹಚ್ಚುವಾಗ, ಉಳಿದ ಶಿಷ್ಯರು ತಮ್ ತಮ್ಮ ಕೊರಳನ್ನೂ ಸೇರಿಸಿದಾಗ ಅನುರಣನೆಗೆ, ಬೆಳಗಿನ ಮಂಜು ಕರಗುತ್ತಿತ್ತು. ಪೂರ್ವದಿಗಂತ ವರ್ಣಮಯವಾಗುತ್ತಿತ್ತು. ಗುರುಗಳ ಮನೆಗೆ ತಲಪಿದ್ದು ಅಮವಾಸ್ಯೆಯ ದಿನ. ಇಂದು ಆಗಲೇ ಹುಣ್ಣಿಮೆ. ರಾತ್ರೆ ಗುರುಗಳ ಪಾದ ಒತ್ತುತ್ತಾ ಹುಡುಗ ಅನ್ನುತ್ತಾನೆ. ” ಗುರುಗಳೇ, ನನಗೆ ಸಂಗೀತ ಪಾಠ ದಯವಿಟ್ಟು ಶುರುಮಾಡಿ” ” ಬೇಟೇ! ನಿನ್ನ ಸಂಗೀತ ಪಾಠ ಆಗಲೇ ಆರಂಭವಾಗಿದೆ. ರಾತ್ರೆಯ ಮೌನದಲ್ಲಿಯೂ ಪ್ರಕೃತಿಯ ಸಂಗೀತ ಆಲಿಸು. ಗಡಿಯಾರದ ಲೋಲಕದ ಆಂದೋಲನದಲ್ಲಿ ಇಂಪಿನಲೆ ಇಲ್ಲವೇ?. ಬಾವಿಯೊಳಗೆ ಬಿಂದಿಗೆ ನೀರನ್ನು ಸ್ಪರ್ಶಿಸಿದಾಗ ಆದ ಕಂಪನ ಬಾವಿಯೊಳಗಿಂದ ಮೊಳಗುವಾಗ ಅದರಲ್ಲಿ ಸಂಗೀತ ಆಲಿಸಿರುವೆಯಾ?. ಇಬ್ಬನಿಯ ಒಂದೊಂದೇ ಬಿಂದುಗಳು ತೊಟ್ಟಿಕ್ಕುವಾಗ ಅದರೊಳಗಿಂದ ಸ್ಪಂದಿಸುವ ಸ್ವರ ಸಾಮರಸ್ಯ ನೋಡಿರುವೆಯಾ?. ಇಂದು ಹುಣ್ಣಿಮೆಯ ರಾತ್ರಿ. ಕಿಟಿಕಿಯ ಹೊರಗೆ ನೋಡು. ಚಂದ್ರನ ಬೆಳಕಿನ ಉತ್ಕರ್ಷದಲ್ಲಿ ಪ್ರಕೃತಿಯ ಜೀವತಂತುಗಳು ಮಿಡಿಯುವ ಸಂಗೀತ ಕೇಳಿಸುತ್ತಿದೆಯಾ?. ಮಗೂ, ನಿನಗದು ಕೇಳಿಸಲು ನಿನ್ನ ಮನಸ್ಸೊಳಗೆ ಮೌನವನ್ನು ತುಂಬಿಸಬೇಕು. ಅಲೆಗಳು ಮೌನದ ನೆಲೆಯಲ್ಲಿ ಯೋಗ ಸಮಾಧಿ ಹೊಂದಬೇಕು.ಬೇಟಾ, ಅಂತಹ ಒಂದು ಶಾಂತಿಯ ಪ್ರಜ್ಞೆಯನ್ನು ಕ್ಷಣ ಕ್ಷಣವೂ ಅನುಭವಿಸುತ್ತಾ ಪ್ರಕೃತಿಯನ್ನು ಗಮನಿಸು. ಆಗ ಜೀವಕ್ರಿಯೆಯ ಪ್ರತೀ ಕ್ಷಣಗಳಲ್ಲಿ ಜೀವಲಯ, ಜೀವಸ್ವರ, ಭಾವತರಂಗ ನಿನಗೆ ಕೇಳಿಸುತ್ತೆ. ಆ ಸ್ವರ ಲಯ,ಭಾವದಲ್ಲಿ ಒಂದಾಗುವ, ತಾದಾತ್ಮ್ಯ ಅನುಭವಿಸುವ ಮನಸ್ಸು ನಿನಗೆ ಸಂಭವಿಸಲಿ. ಸಂಗೀತದ ಜೀವಾತ್ಮ ನಿನ್ನೊಳಗೆಯೇ ಸಾಕ್ಷಾತ್ಕಾರ ಆಗಲು ಇದೊಂದೇ ಮಾರ್ಗ. ಪ್ರಕೃತಿಯೇ ನಿನ್ನ ಸಂಗೀತದ ಮೊದಲ ಗುರು, ಮಗೂ.” ಕ್ಷಮಿಸಿ! ಮೇಲಿನ ಕಥೆಯಂತಹಾ ಕಥೆ ಕಳೆದ ಶತಮಾನದಲ್ಲಿ ಸಂಗೀತ ಕಲಿತ ಹಲವು ಮಹಾನ್ ಸಂಗೀತ ಕಲಾಕಾರರ ಬಾಲ್ಯದ ಕಲಿಕೆಯ, ಕಷ್ಟದ, ಸಮರ್ಪಣೆಯ ಕಥೆಯೇ. ಪ್ರಪಂಚದ ಪ್ರತಿಯೊಂದು ಸ್ಥಿತಿಯಲ್ಲೂ ಸಿಮ್ಮಟ್ರಿ, ಸೌಂದರ್ಯ ಇರುವ ಹಾಗೆಯೇ, ಪ್ರತೀ ಕ್ರಿಯೆಯಲ್ಲಿ, ಲಯವಿದೆ, ತರಂಗವಿದೆ, ಆವರ್ತನವಿದೆ ಮತ್ತು ಸಂಗೀತವೂ ಇದೆ. ಕಾವ್ಯದ ಉಗಮದಲ್ಲಿಯೂ,ಈ ಭಾವಲಯ, ಭಾವತರಂಗ, ಮತ್ತು ತುರೀಯಾವಸ್ತೆ ಅಂತರ್ಗತವಾಗಿದೆ. ಸಂಗೀತವಿರಲಿ ಕಾವ್ಯವಿರಲಿ, ಮೂಡುವ ಕ್ಯಾನುವಾಸು ಮನಸ್ಸೇ ತಾನೇ. ಹೆಣ್ಣುಗಂಡಿನ ಮಿಲನದಿಂದ ಎರಡು ಜೀವಕೋಶಗಳು ಒಂದಾಗಿ, ಆ ಕೋಶ, ಸ್ವವಿಭಜನೆಯಿಂದ, ಎರಡಾಗಿ, ಮತ್ತೆ ನಾಲ್ಕಾಗಿ, ಹಲವು ಲಕ್ಷ ಪುನರಾವರ್ತನೆಗಳ ನಂತರ 27 ಟ್ರಿಲಿಯನ್ ( 27 ಲಕ್ಷ ಕೋಟಿ ) ಜೀವಕೋಶಗಳ ದೇಹರೂಪೀ ಮಗುವಾಗುವುದು ಸೃಷ್ಟಿಯ ವಿಸ್ಮಯ. ಅದಕ್ಕಿಂತ ದೊಡ್ಡ ವಿಸ್ಮಯ,  ಮನುಷ್ಯ ದೇಹದ, ಹೃದಯ, ಶ್ವಾಸಕೋಶ,, ಉದರ, ಕೈಕಾಲುಗಳು, ಮಿದುಳು, ಅಸಂಖ್ಯ ರಕ್ತನಾಳಗಳು ಹೇಗಿರಬೇಕು, ಎಲ್ಲಿರಬೇಕು, ಹೇಗೆ ಕೆಲಸ ಮಾಡಬೇಕು, ಇಷ್ಟೊಂದು ಎಂಜಿನಿಯರಿಂಗ್ ವ್ಯವಸ್ಥೆಗಳು ಹೇಗೆ ಟೀಮ್ ವರ್ಕ್ ಮಾಡ ಬೇಕು ಎಂಬ ಎಲ್ಲಾ ಜ್ಞಾನವೂ ಆ ಒಂದು ಕೋಶದೊಳಗಿಂದಲೇ ವಿಕಸಿತವಾಯಿತು ಎಂಬುದು. ಮಿದುಳಿನೊಳಗಿನ ಸಾಫ್ಟ್‌ವೇರ್ ಕೂಡಾ ಆ ಒಂದು ಕೋಶದೊಳಗಿಂದಲೇ ಇವಾಲ್ವ್ ಆಗಿ ಮಿದುಳಿನೊಳಗೆ ಇನ್‌ಸ್ಟಾಲ್ ಆಗಿದೆ. ಹುಟ್ಟಿದ ಮಗುವಿನ ಹಲವು ಪ್ರತಿಭೆಗಳೂ, ಆ ಕೋಶದಲ್ಲಿ ಬೀಜವಾಕ್ಯವಾಗಿದ್ದವು. ಹೀಗೆ ಎಲ್ಲವನ್ನೂ ತನ್ನ ಕೇಂದ್ರದಿಂದ ಸೃಜಿಸಿ, ಸೃಷ್ಟಿಯಾಗುವ ಕ್ರಿಯೆ, ಅಂತರಂಗದಿಂದ ಚಿಲುಮಿಸಿ ಹೊರಬರುವ ಕ್ರಿಯೆ, ಕಾವ್ಯೋದ್ಭವದ ಹಲವು ಸಾಧ್ಯತೆಗಳಲ್ಲಿ ಮೊದಲನೆಯದೂ ಹೌದು, ಮತ್ತು ಅತ್ಯಂತ ಸಂಕೀರ್ಣವೂ ಹೌದು. ಆದರೆ ಇಂತಹ ಪ್ರಯತ್ನದಿಂದ ಮೊಳೆತ ಕವಿತೆ, ಅನನ್ಯವೂ ಆತ್ಮಾರ್ಥಪೂರ್ಣವೂ ಆಗಿರುತ್ತೆ. ಇಂತಹ ಕವಿತೆಗಳನ್ನು ಸೃಜಿಸುವ ಕವಿ ರಸ ಋಷಿಗಳೇ ಆಗಿರುತ್ತಾರೆ. ಕುವೆಂಪು ಅವರ “ಓ ನನ್ನ ಚೇತನ, ಆಗು ನೀ ಅನಿಕೇತನ” ಇಂತಹ ಒಂದು ಸೃಷ್ಟಿ. ದ.ರಾ. ಬೇಂದ್ರೆಯವರ ‘ ನಾಕುತಂತಿ’ ,  ‘ಚೈತನ್ಯದ ಪೂಜೆ’ ಕವಿತೆಗಳೂ ಅಷ್ಟೇ. ” ಚೈತನ್ಯದ ಪೂಜೆ ನಡೆದSದ ನೋಡS ತಂಗಿ।। ಅಭಂಗದ ಭಂಗೀS ಸತ್ಯ ಎಂಬುವ ನಿತ್ಯದ ದೀಪ ಸುತ್ತೆಲ್ಲಾ ಅವನದೇ ರೂಪ ಪ್ರೀತಿ ಎಂಬುವ ನೈವೇದ್ಯ ಇದು ಎಲ್ಲರ ಹೃದಯದ ಸಂವೇದ್ಯ. ಸೌಂದರ್ಯ ಧ್ಯಾನಾ ಎದೆಯಲ್ಲಿ ಅಸ್ಪರ್ಶಾ ಚಿನ್ಮಯದಲ್ಲಿ ಆನಂದಗೀತ ಸಾಮSವೇದಾ ಸರಿಗಮ ನಾದಾ” ಇಂತಹ ಕವಿತೆಯನ್ನು ಬರೆಯಲು ಧ್ಯಾನಸ್ಥ ಸ್ಥಿತಿಯಲ್ಲಿ ಕವಿ ಹಗಲಿರುಳು ಸಾಧನೆ ಮಾಡಬೇಕು. ಕವಿತೆಯೇ , ತಪಸ್ಸಾಗಿ ಬದುಕಬೇಕು. ಒಳಗೊಳಗಿಂದಲೇ ಅರಳಬೇಕು. ಒಳಲೋಕದಿಂದ ಕವಿತೆ ಹುಟ್ಟುವ ಇನ್ನೊಂದು ವಿಧಾನ, ಕವಿಯ ತೀವ್ರ ಭಾವೋತ್ಕರ್ಷದ ಹರಿವು. ಬೇಂದ್ರೆಯವರ ಮಗನ ಸಾವಿನ ಸಂದರ್ಭದಲ್ಲಿ ತಮ್ಮ ಪತ್ನಿಯ ಕಣ್ಣೊಳಗೆ ಕಣ್ಣಿಟ್ಟು ನೋಡುವ ಕವಿ, ನೋವಿನ, ಹತಾಶೆಯ, ಅಸಹಾಯಕತೆಯ ಭಾವದ ತುರೀಯಕ್ಕೆ ತಲಪಿದಾಗ” ನೀ ಹೀಂಗ ನೋಡ ಬ್ಯಾಡ ನನ್ನ” ದಂತಹಾ ಕವಿತೆ ಜನ್ಮಿಸುತ್ತೆ. ಹೀಗೆ ಅಂತರಾಳದಿಂದ ರೂಪ ಪಡೆದು ಹೊರಬರುವ ಕವಿತೆಯ ಸ್ವರೂಪದಲ್ಲಿ ಯಾವುದೇ ಪೂರ್ವಯೋಜನೆ ಇರುವುದಿಲ್ಲ. ಈ ಕವಿತೆಯ,ಚಂದ, ಛಂದ, ಅರ್ಥ ಎಲ್ಲವೂ ಆ ಕ್ಷಣದ ಆ ಸ್ಥಿತಿಯ ಕ್ರೋಮೋಸೋಮ್ ಗಳ ಅಭಿವ್ಯಕ್ತಿ. ಕಾವ್ಯ ಹುಟ್ಟುವ ಇನ್ನೊಂದು ಬಗೆ, ಕಥಾ ಪಾತ್ರದೊಳಗೆ ಕವಿ ಮಾಡುವ ಪರಕಾಯ ಪ್ರವೇಶ. ಹಾಗೆ ಪ್ರವೇಶಿಸಿದ ಕವಿ, ಆ ಪಾತ್ರದ ಅಷ್ಟೂ ಅನುಭವಗಳನ್ನು, ಸ್ವಂತವಾಗಿಸಿ, ಹನಿಯಾಗಿ ಜಿನುಗುತ್ತಾನೆ. ಹೆಚ್.ಎಸ್.ವಿ. ಅವರು ಅಭಿನಯ ಮತ್ತು ಕಾವ್ಯ ಸೃಷ್ಟಿಯ ಬಗ್ಗೆ ಹೀಗೆ ಹೇಳುತ್ತಾರೆ. ” ಬರವಣಿಗೆಯಲ್ಲಿ ಅಭಿನಯವೇ ಇದೆಯಲ್ಲವೇ? ಕಾವ್ಯ, ಕಥೆ ಬರೆಯುವಾಗ ಅನೇಕ ಪಾತ್ರಗಳು ಬರುತ್ತವೆ. ಆ ಪಾತ್ರ ನಾನಾಗದೇ ಬರಹದಲ್ಲಿ ಸಹಜತೆ ಬರುವುದಿಲ್ಲ. ಬುದ್ಧಚರಿತವನ್ನೇ ನೋಡು, ರಾಹುಲನ ಮಾತುಗಳನ್ನು ನಾನು ಬರೆಯಬೇಕಾದರೆ ರಾಹುಲನನ್ನು ನಾನು ಆವಾಹಿಸಿಕೊಳ್ಳಬೇಕು. ಸೀತೆಯಾಗಬೇಕಾದರೆ ಸೀತೆಯ ಹೆಣ್ತನವನ್ನು ನಾನು ಪಡೆಯದಿದ್ದರೆ ಸಹಜತೆ ಬರುವುದಿಲ್ಲ. ಕವಿಯ ಮನಸ್ಸು ಅನೇಕ ಸ್ಥರಗಳಲ್ಲಿ ಸಂಚಾರ ಮಾಡುತ್ತಿರುತ್ತದೆ. ವಿಫುಲ ರೂಪ ಧಾರಿಣಿ ಕವಿಯ ಮನಸ್ಸು ಎಂದು ಕುವೆಂಪು ಹೇಳಿಲ್ಲವೇ. ಹಾಗೆ ಬರವಣಿಗೆ ಎಂಬುದು ಅಂತರಂಗದಲ್ಲಿ ಅಭಿನಯ.  ಸಿನಿಮಾ, ನಾಟಕ ಎಂಬುದು ಬಹಿರಂಗದಲ್ಲಿ ತೋರಿಸಬೇಕಾದ್ದು.ಕವಿತೆ ಕಷ್ಟ ಏಕೆಂದರೆ ಅದರಲ್ಲಿ ಬರುವ ಎಲ್ಲಾ ಪಾತ್ರಗಳನ್ನೂ ಕವಿ ಅಭಿನಯಿಸಬೇಕು” ಹರಿಶ್ಚಂದ್ರ ಕಾವ್ಯದಲ್ಲಿ, ಚಂದ್ರಮತಿ, ತನ್ನ ಮಗ ಹಾವು ಕಚ್ಚಿ ಸತ್ತಾಗ, ವಿಲಪಿಸುವ ಸಾಲುಗಳು ಹೀಗಿವೆ. “ಬಂದರಂ ಲೋಹಿತಾಶ್ವಾ ಎಂದು ಬಟ್ಟೆಯೊಳು ನಿಂದರಂ ಲೋಹಿತಾಶ್ವಾ ಎಂದು ಗಾಳಿ ಗಿಱಿಕೆಂದಡಂ ಲೋಹಿತಾಶ್ವಾ ಎಂದು ಕರೆಕರೆದು ಬಿಡೆ ಬೀದಿಗಱುವಿನಂತೆ ಮಂದಮತಿಯಾಗಿರ್ದ ಚಂದ್ರಮತಿಗೊಬ್ಬನೈ ತಂದಿಂದು ಕೂಡೆ ಹೋಗಿರ್ದು ಕಂಡೆಂ ನಿನ್ನ ಕಂದನೊಂದುಗ್ರಫಣಿ ತಿಂದು ಜೀವಂಗಳೆದನೆಂದು ಹೇಳಿದನಾಗಳು” ಚಂದ್ರಮತಿಯ ಪ್ರಲಾಪ,  ಕನ್ನಡ ಕಾವ್ಯಜಗತ್ತಿನ ಇತಿಹಾಸದಲ್ಲಿ ದುಃಖ ರಸದ ಮನಮುಟ್ಟುವ ಅಭಿವ್ಯಕ್ತಿಯಾಗಿ ಪರಿಗಣಿಸಲ್ಪಡುವುದರ ಹಿಂದೆ, ರಾಘವಾಂಕ ಕವಿ, ಚಂದ್ರಮತಿಯ ಪಾತ್ರದೊಳಗೆ ಹೊಕ್ಕು, ಮಗನ ಸಾವಿನ ತೀವ್ರ ಶೋಕದ ಅನುಭೂತಿಯನ್ನು ಅನುಭವಿಸಿ ಪಾತ್ರವೇ ತಾನಾಗಿ,ಬರೆದದ್ದು ಕಾರಣವಲ್ಲವೇ. ಕವಿತೆ ಹುಟ್ಟಲೇಬೇಕೇ?. ಕವಿತೆಯನ್ನು ಕಟ್ಟಲೂ ಬಹುದು. ಪ್ರಕೃತಿಯಿಂದ ಪ್ರೇರಣೆ ಪಡೆದು, ಬದುಕು ಕಟ್ಟಿಕೊಡುವ ಅನುಭವದ ಕಡುಬನ್ನು ಮೆದ್ದು ಅದರ ಆಧಾರದಲ್ಲಿ, ನವರಸಗಳ ಪಾಕ ಬಡಿಸಬಹುದು. ದೇಶ, ಸಮಾಜ, ಗಗನ, ಸೂರ್ಯ,ನದಿ, ಪ್ರೀತಿ, ಹೀಗೆ ಹತ್ತು ಹಲವು ನೂಲೆಳೆಗಳನ್ನು ನೇಯ್ದು ಪದ್ಯಮಾಡಬಹುದು.  ಕವಿಗೆ ನಿಜ ಜೀವನದ ವಸ್ತುವೇ ಕಾವ್ಯ ವಾಸ್ತುವಾಗಿ ಕೆಲವೊಮ್ಮೆ ಹೊಲದ ನಡುವಿನ ಗುಡಿಸಲು, ಮತ್ತೊಮ್ಮೆ ಗಗನ ಚುಂಬಿ ಕಟ್ಟಡಗಳು, ಬಗೆ ಬಗೆಯ ಕಟ್ಟಡಗಳಂತಹ ಕವಿತೆಗಳು ನೆಲದ ಅಡಿಪಾಯದ ಮೇಲೆ ಎದ್ದು ನಿಲ್ಲುತ್ತವೆ. ಗುಂಪು ಗುಂಪಾಗಿ ಓಡುವ ಕುರಿಮಂದೆಯನ್ನು ಕಂಡಾಗ, ಕವಿ ನಿಸಾರ್ ಅಹಮದ್ ಅವರು ಹೀಗೊಂದು ಅಪೂರ್ವ ಕವಿತೆ ಬರೆಯುತ್ತಾರೆ. ” ಕುರಿಗಳು ಸಾರ್ ಕುರಿಗಳು ಸಾಗಿದ್ದೇ ಗುರಿಗಳು ಮಂದೆಯಲ್ಲಿ ಒಂದಾಗಿ ಸ್ವಂತತೆಯೇ ಬಂದಾಗಿ ಅದರ ಬಾಲ ಇದು ಮತ್ತೆ ಇದರ ಬಾಲ ಅದು ಮೂಸಿ ದನಿ ಕುಗ್ಗಿಸಿ ತಲೆ ತಗ್ಗಿಸಿ ಅಂಡಲೆಯುವ ನಾವು ನೀವು ಎಡ ದಿಕ್ಕಿಗೆ ಬಲ ದಿಕ್ಕಿಗೆ, ಒಮ್ಮೆ ದಿಕ್ಕುಪಾಲಾಗಿ ಹೇಗೆ ಹೇಗೋ ಏಗುತಿರುವ ಬರೀ ಕಿರುಚಿ ರೇಗುತಿರುವ ನೊಣ ಕೂತರೆ ಬಾಗುತಿರುವ ತಿನ್ನದಿದ್ದರು ತೇಗುತಿರುವ ಹಿಂದೆ ಬಂದರೊದೆಯದ ಮುಂದೆ ಬರಲು ಹಾಯದ ನಾವು ನೀವು ಅವರು ಇವರು ನಮ್ಮ ಕಾಯ್ವ ಕುರುಬರು” ಕಾಣುವ ವಸ್ತು, ಕ್ರಿಯೆ ಮತ್ತು ಡೈನಾಮಿಕ್ಸ್, ಕವಿಯ ಮನಸ್ಸೊಳಗೆ ಹಲವು ಕಲ್ಪನೆಗಳಿಗೆ, ಚಿಂತನೆಗಳಿಗೆ ಪ್ರೇರಣೆಯಾಗುತ್ತೆ. ಏನೋ ಹೇಳಬೇಕಾದ ತುಡಿತ, ಸಂದೇಶದ ಸಮೀಕರಣವಾಗಿ, ಹಲವು ಪ್ರತಿಮೆಗಳ ಮೂಲಕ ಕಾವ್ಯಕಟ್ಟಡವನ್ನು ಕವಿ ಕಟ್ಟುತ್ತಾರೆ. ಬೇಲೂರಿನ ಚನ್ನಕೇಶವ ದೇವಾಲಯದ ಶಿಲಾ ಪ್ರತಿಮೆಗಳು  ಗೋಡೆಗಳಲ್ಲಿ ಸಾಲುಗಟ್ಟಿ  ಒಂದು ಕತೆಯನ್ನು ಹೇಳುವ ಹಾಗೆಯೇ ಇದೂ. ಮೇಲಿನ ಕವಿತೆಯಲ್ಲಿ, ಕುರಿಗಳು ಅಂದರೆ ಬಹುಮುಖೀ ಪ್ರತಿಮೆ ಎಂದು ಬೇರೆ ಹೇಳಬೇಕಾಗಿಲ್ಲ ತಾನೇ. ನವ್ಯ ಮತ್ತು ನಂತರದ ಇಂತಹಾ ಕವಿತೆಗಳು ಅಬ್ಸ್ಟ್ರಾಕ್ಟ್ ಆಗಿರುವುದರಿಂದ, ಇವುಗಳ ಅರ್ಥ ಓದುಗನ ಗ್ರಹಿಕೆಗೆ, ಹ್ರಹಿಸುವ ಮನಸ್ಸಿನ ಪರದೆಯ ವಿನ್ಯಾಸಕ್ಕೆ ಸಾಪೇಕ್ಷವಾಗಿರುತ್ತೆ. ಕವಿತೆ ಕಟ್ಟುವ ಕ್ರಿಯೆಯಲ್ಲಿ, ಕವಿ ಮೊದಲೇ ಒಂದು ಪದಹಂದರದೊಳಗೆ ತನಗೆ ಹೇಳಬೇಕಾದ ಅರ್ಥ ತುಂಬಿ, ವ್ಯವಸ್ಥೆ ಯೊಳಗೆ ಹರಿಯಬಿಟ್ಟು, ಸಂಚಲನವೆಬ್ಬಿಸುವುದೂ ಒಂದು ಬಗೆ. ಸಮಾಜವಾದ, ಮಾರ್ಕ್ಸ್ ವಾದ, ಮಾನವತಾವಾದ, ಪರಿಸರವಾದ, ಹೀಗೆ ಹತ್ತು ಹಲವು ‘ಇಸಂ’ ಗಳನ್ನು ತನ್ನ ವಾಸ್ತುವಿನೊಳಗೆ ತುಂಬಿಸಿಕೊಂಡ ಕವಿತೆಗಳು ಕಳೆದ ಹಲವು ದಶಕಗಳಲ್ಲಿ ಮೂರ್ತರೂಪ ಪಡೆದಿವೆ. ಸಮಾಜದ ಬದಲಾವಣೆಗಾಗಿ, ಸಾಮಾಜಿಕ ಪ್ರಜ್ಞೆಯನ್ನು ಬಡಿದೆಬ್ಬಿಸಿ, ಸಮಾಜದ ಅಂಕು ಡೊಂಕುಗಳನ್ನು ತಿದ್ದುವತ್ತ ಕವಿತೆಯನ್ನು ದುಡಿಸಿಕೊಳ್ಳುವ ಪ್ರಯತ್ನ ಇದು. ಕವಿತೆ ಬರೆಯಲು ಏಕಾಂತ ಬೇಕು. ಏಕಾಂತದೊಳಗೆ ಮನಸ್ಸು ಮೌನವಾಗ ಬೇಕು. ಇದೊಂದು ಥರಾ ಧ್ಯಾನದ ಹಾಗೆ. ನಿಧಾನವಾಗಿ ಮನಸ್ಸು ಅದರೊಳಗೆ ಇಳಿಯುತ್ತಾ, ಇಳಿದಂತೆ ಮನಸ್ಸು, ಕಾವ್ಯವಸ್ತುವಿನಲ್ಲಿ ಕೇಂದ್ರೀಕರಿಸಿ ಯಾವುದೋ ಒಂದು ಹಂತದಲ್ಲಿ ಕವಿತೆ ಅವತರಿಸಿ ಸಾಲುಗಳು ಹರಿಯುತ್ತವೆ. ಯಶವಂತ ಚಿತ್ತಾಲರು ಬೆಳಗ್ಗೆ ಮೂರು ಗಂಟೆಗೆ ಎದ್ದು, ದೀಪದ ಬೆಳಕಿನಲ್ಲಿ ಕತೆ ಬರೆಯುತ್ತಿದ್ದರಂತೆ. ಸುತ್ತಲೂ ಕತ್ತಲು, ದೀಪವೊಂದೇ ಜ್ಯೋತಿ. ಆ ಏಕಾಂತದಲ್ಲಿ ಜ್ಯೋತಿಗೆ ನೋಟ ಸಂಧಿಸಿದಾಗ ಕತೆಯ ಪಾತ್ರಗಳು ನಿಧಾನವಾಗಿ ನಿಚ್ಚಳವಾಗಿ ಕಣ್ಣಲ್ಲಿ ರೂಪುಗೊಂಡು ಕತೆಯಾಗುತ್ತಿದ್ದವಂತೆ. ಬೆಳಗಾದಂತೆ, ದೀಪದ ಜ್ಯೋತಿ ಮಂಜಾಗಿ ಕತೆಯ ಪಾತ್ರಗಳೂ ಮಾಯವಾದಾಗ ಕತೆ ಬರೆಯುವುದು ನಿಲ್ಲಿಸುತ್ತಿದ್ದರು,ಎಂದು ಹಿಂದೆಂದೋ ಓದಿದ ನೆನಪು. ಇಂತಹಾ ಅನುಸಂಧಾನದ ಜತೆಗೆ ಕವಿತೆ ಬರೆಯಲು ಅಗತ್ಯವಾದ ಸಾಹಿತ್ಯದ ಪರಿಣತಿ, ಪರಿಸರದತ್ತ, ಜೀವಪ್ರಪಂಚದ ಕಷ್ಟ ಸುಖಗಳತ್ತ  ಸೂಕ್ಷ್ಮ ಸ್ಪಂದನೆ, ಕಲ್ಪನಾ ಸಾಮರ್ಥ್ಯ ಕೂಡಾ ಅಗತ್ಯ.  ಹಾಗೆ ಪಕ್ವವಾದ ಕವಿಗೆ ಕವಿತೆ ಬರೆಯುವ ಚಾಲೆಂಜ್ ನೀವು ಕೊಡಬಹುದು. ಸಿನೆಮಾ, ನಾಟಕ, ಸೀರಿಯಲ್, ಗಳ ದೃಶ್ಯಕ್ಕೆ ಪೂರಕವಾದ ಕವಿತೆಗಳು ಒಂದು ರೀತಿಯಲ್ಲಿ ಹೊಸತನದ ತೆನೆಯೇ. ಉದಾಹರಣೆಗೆ, ಮುಕ್ತ

Read Post »

You cannot copy content of this page

Scroll to Top