ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ, ಜೀವನ

ಯಶಸ್ಸು ಮತ್ತು ಸಾಧನೆ

ಲೇಖನ ಯಶಸ್ಸು ಮತ್ತು ಸಾಧನೆ ಮಾಲಾ ಕಮಲಾಪುರ್ ಪ್ರತಿಯೊಬ್ಬ ಮನುಷ್ಯನು ಯಶಸ್ಸನ್ನು ಬಯಸುತ್ತಾನೆ. ಅತ್ತ್ಯುತ್ತಮ ಗುಣ ಮಟ್ಟದ ಜೀವನ ವನ್ನು ಅನುಭವಿಸಲು ಹಂಬಲಿಸುತ್ತಾನೆ. ಆದರೆ ಅದನ್ನು ಸಾಧಿಸಿ ಅಂಥ ಜೀವನ ನಡೆಸುವವರು ಕೆಲವರು ಮಾತ್ರ ಬಲವಾದ ನಂಬಿಕೆ ವಿಶ್ವಾಸ ಇದ್ದವರು ಹಿಡಿದ ಕಾರ್ಯ ವನ್ನು ಸಾಧಿಸಿಯೇ ತೀರುತ್ತಾರೆ. ಇಂಥವರಿಗೆ ಕಾಲು ಎಳೆಯುವವರು ಸಾವಿರಾರು.ಎಲ್ಲಿ ಸಾಧನೆ ಮಟ್ಟ ಇರುತ್ತದೆಯೋ ಅಲ್ಲಿ ಟೀಕಿಸುವವರು ನಮ್ಮ ಹಿಂದೆಯೇ ಇರುವರು . ನಾವುಹಿಂದೆ ನೋಡದೆ ಮುಂದೆ ಸಾಗುತ್ತ ಹೋಗಬೇಕು ಹಿತೈಷಿಗಳ ಮಾರ್ಗ ದರ್ಶನಇದ್ದರೆ ಸಾಕು ನಾವು ಗುರಿ ಮುಟ್ಟುವುದರಲ್ಲಿ ಸಂಶಯವೇ ಇಲ್ಲಾ.ಅಬ್ರಹಾಂಲಿಂಕನ್ ಜೀವನದಲ್ಲಿ ಸಾಕಷ್ಟು ನೋವು ಸಂಕಟ ಜನರ ಅಸೂಹೆ ಇವೆಲ್ಲದರ ನಡುವೆ ದೃತಿ ಗೆಡದೆ ಸಂಪೂರ್ಣ ಆತ್ಮ ವಿಶ್ವಾಸ ದಿಂದ ತಮ್ಮ ಗುರಿ ತಲುಪಿದರು.ಮುಖ್ಯ ವಾಗಿ ನಮ್ಮಲ್ಲಿ ಪ್ರಾಮಾಣಿಕತೆ ಇದ್ದು ಸರಳ ಭಾವನೆ ಇದ್ದಾಗ ನಮಗೆ ದೇವರಲ್ಲಿ ಅಚಲವಾದ ಭಕ್ತಿ ವಿಶ್ವಾಸ ಇದ್ದರೆ ನಾವು ನಮ್ಮ ಗುರಿ ಮುಟ್ಟುತ್ತೇವೆ.ವಿನಯ ಮತ್ತು ಸೌಜನ್ಯ ಸ್ವಭಾವ ನಮ್ಮ ಮನಸಿನ ಕನ್ನಡಿ ನಾವು ಮತ್ತೊಬ್ಬರಾಗುವದು ಬೇಡ ನಾವು ನಾವಾದರೆ ಸಾಕು ನಮ್ಮ ಜೀವನ ದಲ್ಲಿ ಅದೆಷ್ಟೋ ಆನಂದ ಅನುಭವಿಸುತ್ತವೆ. ಇದನ್ನು ನೋಡಿ ಕೆಲವರು ಅಸೂಹೆ ಮಾಡಿ ಕುಹಕ ನಗು ತೋರಿಸಿದರು ನಾವು ನಿರ್ಲಕ್ಷಿಸಬೇಕು ಅದೊಂದೇ ದಾರಿ. ಮುಖ್ಯವಾಗಿ ನಾವು ಮಾಡುವ ಕೆಲಸ ಕಾರ್ಯ ಮತ್ತು ಯಾವುದೇ ವಿದ್ಯೆ ಯಲ್ಲಿ ವಿಚಾರದಲ್ಲಿ ನಿಖರ ಮತ್ತು ದಿಟ್ಟ ವಿಚಾರವೇ ನಮಗೆ ಇದ್ದರೆ ಸಾಕು. ನಮ್ಮಲ್ಲಿ ಆತ್ಮ ವಿಶ್ವಾಸವೇ ನಮ್ಮನ್ನು ಎತ್ತಿ ಹಿಡಿಯುತ್ತದೆ. ನಾವು ಯಾವುದೇ ಸನ್ಮಾರ್ಗದಲ್ಲಿ ಇದ್ದಾಗ ನಮ್ಮ ಮನಸು ಯಾರಿಗೂ ಬಗ್ಗುವುದಿಲ್ಲ ನಾವು ಯಾವುದೇ ಕಲೆ ಮತ್ತು ವಿದ್ಯೆ ಕಲಿಯಬೇಕಾದರೆ ವಯಸ್ಸು ಬೇಕಾಗಿಲ್ಲ ನಮ್ಮ ದೇಹಕ್ಕೆ ವಯಸ್ಸಾದರೂ ನಮ್ಮ ಮನಸ್ಸಿಗೆ ಆಗಿರುವುದಿಲ್ಲ. ನಮ್ಮಲ್ಲಿ ಸದ್ರಡ ಮನಸ್ಸು ವಿವೇಚನಾ ಶಕ್ತಿ, ಸಾಧಿಸುವ ಸಂಕಲ್ಪವೇ ನಮ್ಮ ಯಶಸ್ಸಿನ ಮೆಟ್ಟಲುಗಳು.ಇದಕ್ಕೆ ಉದಾಹರಣೆ ಯಾಗಿ ನೋಡಬೇಕೆಂದರೆ ಅಕ್ಷರ ಕಲಿಯದೆ ನಿಸ್ವಾರ್ಥ ಮನಸ್ಸಿನಿಂದ ಸೇವೆ ಮಾಡಿದ ಸಾಲು ಮರದ ತಿಮ್ಮಕ್ಕ ಅದೆಷ್ಟು ಗಿಡ ಮರಗಳನ್ನು ಮಕ್ಕಳಂತೆ ಪ್ರೀತಿಸಿ ಬೆಳೆಸಿದವರು ಮುಪ್ಪು ವಯಸ್ಸಿನಲ್ಲೂ ಹುರುಪು ಅವರಿಗೆ.ಅವರ ಸೇವೆ ಇಡೀ ಜಗತ್ತು ಬೆರಗಾಗುವಂತೆ ನೋಡುತ್ತಿದೆ. ಹಿಂದೆ ನಮ್ಮೆಲ್ಲರ ಪೂರ್ವಜರು ಯಾವುದೇ ಪೈಪೋಟಿ ಮಾಡದೇ ಅಚಲ ನಿರ್ಧಾರ ಮತ್ತು ನಿಷ್ಕಲ್ಮಶ ಮನಸ್ಸು, ನಿಸ್ವಾರ್ಥ ಸೇವಾ ಮನೋಭಾವದಿಂದ, ಯಾರಿಗೂ ಮನಸ್ಸನ್ನು ನೋಯಿಸದೆ ಬದುಕಿನಲ್ಲಿ ತನ್ನದೇ ಛಾಪು ಮೂಡಿಸಿದವರು.ನಾವು ಸಮಯಕ್ಕೆ ಮತ್ತು ನಮಗೆ ದಾರಿತೋರಿಸುವ ಗುರುಗಳಿಗೆ ಬೆಲೆ ಕೊಟ್ಟಾಗ ನಮ್ಮ ಜೀವನ ಸ್ವಲ್ಪ ಮಟ್ಟಿಗಾದರೂ ಸಾರ್ಥಕವಾದಿತು.ನಾವು ಒಂದಿಷ್ಟು ಅವರ ಮಾರ್ಗ ದಲ್ಲಿ ಸಾಗೋಣ. ಇದ್ದುದರಲ್ಲಿ ನೈಜ ಸುಖ, ಶಾಂತಿ ಪಡೆಯೋಣ.ಸಾತ್ವಿಕ ವಿಚಾರ, ಸಂತೃಪ್ತಿ ಮತ್ತು ಸಕಾರಾತ್ಮ ವಿಚಾರ ಇವು ನಮ್ಮ ಯಶಸ್ಸಿಗೆ ಬೆಳಕು ತೋರಿಸುವ ದಾರಿ ದೀಪಗಳೆಂದರೆ ತಪ್ಪಾಗದು. ********************************

ಯಶಸ್ಸು ಮತ್ತು ಸಾಧನೆ Read Post »

ಪುಸ್ತಕ ಸಂಗಾತಿ

ಪುಸ್ತಕ ಬಿಡುಗಡೆ

ಪುಸ್ತಕ ಸಂಗಾತಿ ‘ಗೌರಿಯೊಂದಿಗೆ ಏಕಾಂತ_ಲೋಕಾಂತ‘ ಸ್ನೇಹಿತರೆ…ಗೌರಿಯೊಂದಿಗೆ ಏಕಾಂತ_ಲೋಕಾಂತ ಪುಸ್ತಕ ಬಿಡುಗಡೆಯ ಆಹ್ವಾನ ಪತ್ರಿಕೆ ಇಲ್ಲಿದೆ. ಆಸಕ್ತರೆಲ್ಲರೂ ಸಮಯ ಸರಿದೂಗಿಸಿಕೊಂಡು ನಮಗೆ ಜೊತೆಯಾಗಿ…!! ಭೇಟಿಯಾಗಿ ಬಾಂಧವ್ಯ ಬೆಸೆದುಕೊಳ್ಳುವ. ಪ್ರೀತಿಯಿಂದ- ಚಾರು ಪ್ರಕಾಶನ ಒಟ್ಟು ಪುಟಗಳು 200ಬೆಲೆ ರೂ 150/- ಪ್ರತಿಗಳಿಗಾಗಿ ಸಂಪರ್ಕಿಸಿ94483806379380788349080-266603037.Charu PrakashanaCurrent Account number64054262366IFSC Code SBI no 040014State Bank Of India.Basavanagudi BranchBengaluru 560004 Parvateesh Bilidaale Charu Prakashana No 83, 3rd Floor Pride plaza building 5th Main Near Adarsha College T R Mill Road Chamaraja pete Bangaluru_560018 Phone 080 _26603637Mobile 9448380637. *********************************************************************** ರಾಜೇಶ್ವರಿ ಭೋಗಯ್ಯ

ಪುಸ್ತಕ ಬಿಡುಗಡೆ Read Post »

ನಿಮ್ಮೊಂದಿಗೆ

ಕೊರೆವ ನಡುಕವಂತೆ!

ಕವಿತೆ ಕೊರೆವ ನಡುಕವಂತೆ! ಸುವಿಧಾ ಹಡಿನಬಾಳ ಅವನ್ಯಾವನೊ ತಲೆಕಟ್ಟ ಸ್ವಾಮಿಯಂತೆಸ್ವಯಂ ಘೋಷಿತ ದೇವ ಮಾನವನಂತೆಬಿತ್ತಿದ ಇವರ ತಲೆಯಲಿ ಮೌಢ್ಯದ ಕಂತೆಕಲಿಯುಗದ ಅಂತ್ಯವಂತೆ ಸತ್ಯ ಯುಗದ ಆರಂಭವಂತೆಅದಕೆ ಮಾಡಬೇಕು ಮಕ್ಕಳ ಬಲಿದಾನವಂತೆ ಮುಠ್ಠಾಳ ತಾಯಿಯಿಂದಲೇ ಕುಡಿಗಳ ಕಗ್ಗೊಲೆಯಂತೆಇದಕೆ ತಂದೆಯ ಮೌನ ಸಾಥ್ ಅಂತೆಹೆಣಗಳ ಬಾಯಲಿ ಕಲಶ ಹೂಡಿದ್ದರಂತೆ!!ಮರುದಿನ ಮಕ್ಕಳ ಮರುಹುಟ್ಟಿಗೆ ಕಾದರಂತೆಮರಣೋತ್ತರ ಪರೀಕ್ಷೆಗೆ ಪ್ರತಿರೋಧವಂತೆ ಆ ತಾಯಿ ಬೇರೆ ಗೋಲ್ಡ್ ಮೆಡಲಿಸ್ಟಂತೆ!!!ಮಕ್ಕಳೂ ಡಿಗ್ರಿ ಮೆಟ್ಡಿಲೇರಿದ್ದವಂತೆಪಕ್ಕಾ ಇವರೆಲ್ಲರ ತಲೆಯೆಂಬುದು ಅಜ್ಞಾನದ ಬೊಂತೆಎತ್ತ ಸಾಗುತ್ತಿದೆ ವಿದ್ಯೆ ವಿಜ್ಞಾನ ಎಂಬ ಚಿಂತೆಕೇಳಿದವರ ಎದೆಯಲಿ ಕೊರೆವ ನಡುಕವಂತೆ!! ***************

ಕೊರೆವ ನಡುಕವಂತೆ! Read Post »

ಕಾವ್ಯಯಾನ, ನಿಮ್ಮೊಂದಿಗೆ

ಮೌನ ಹನಿಗಳು

ಕವಿತೆ ಮೌನ ಹನಿಗಳು ಸುಧಾ ಎನ್.ತೇಲ್ಕರ್ ೧ಹೊಂದಿಕೆಯಿರದ ಭಾವಗಳಲಿಮಾತು ಮದ್ದಳೆ ಬಾರಿಸಿತ್ತುಉಸಿರು ಬಿಗಿ ಹಿಡಿದ ಮೌನಸದ್ದಿಲ್ಲದೆ ಪಟ್ಟು ಬಿಗಿದಿತ್ತು ೨ಮೌನದ ಕಪ್ಪೆ ಚಿಪ್ಪಲ್ಲಿ ಅಡಗಿತ್ತುಮಾತಿನ ಸ್ವಾತಿ ಮುತ್ತುಕಣ್ರೆಪ್ಪೆಯಲಿ ಜಾರದೆ ಕುಳಿತಿತ್ತುಮಡುಗಟ್ಟಿದ ಹನಿ ಮುತ್ತು ೩ಮಾತಿನ ಚೂರಿ ಮೊನಚಿಗೆಹೃದಯ ರಕ್ತ ಒಸರಿತ್ತುನಿಟ್ಟುಸಿರಿನ ಮೌನವೇಗಾಯಕ್ಕೆ ಮುಲಾಮು ಸವರಿತ್ತು ೪ಮಾತು ಕಲಹದ ಹೊನಲಾಗಿಹರಿದಿತ್ತುಮೌನವೇ ಅದರ ರಭಸಕೆಆಣೆಕಟ್ಟು ಹಾಕಿತ್ತು ೫ಬೆಳ್ಳಿ ನುಡಿಗಳುತುಂಬಿದ್ದ ಖಜಾನೆಗೆಹಾಕಿತ್ತು ಚಿನ್ನದಮೌನದ ಬೀಗ ********************

ಮೌನ ಹನಿಗಳು Read Post »

ಅಂಕಣ ಸಂಗಾತಿ, ಮುಖಾಮುಖಿ

ಅಂಕಣ ಬರಹ ಪ್ರಸ್ತುತ ಸಾಂಸ್ಕೃತಿಕ ವಾತಾವರಣದಲ್ಲಿ ಫೇವರಟಿಸಂ, ಜಾತೀಯತೆ, ಧಾರ್ಮಿಕತೆ, ಎಡ-ಬಲ, ವಶೀಲಿ ಎಲ್ಲವೂ ಇವೆ ಡಾ ಪ್ರೇಮಲತ .ಬಿ. ಪರಿಚಯ ಮೂಲತಃ ತುಮಕೂರಿನವರಾದ ಪ್ರೇಮಲತ ವೃತ್ತಿಯಲ್ಲಿ ದಂತವೈದ್ಯೆ. ಕಳೆದ 18 ವರ್ಷಗಳಿಂದ ಇಂಗ್ಲೆಂಡಿನಲ್ಲಿ ವಾಸ.ದಿನಪತ್ರಿಕೆ, ವಾರಪತ್ರಿಕೆ,ಮಾಸಪತ್ರಿಕೆ ಮತ್ತು ಅಂತರ್ಜಾಲ ತಾಣಗಳಲ್ಲಿ ಲೇಖನಗಳು,ಅಂಕಣ ಬರಹ, ಕಥೆ, ಕವನಗಳು ಮತ್ತು ಪ್ರಭಂದಗಳನ್ನು ಬರೆದಿದ್ದಾರೆ.ತುಷಾರ ಚಿತ್ರಕವನ ಸ್ಪರ್ಧೆಯ ಬಹುಮಾನ, ಪ್ರಜಾವಾಣಿ ಪ್ರೇಮ ಪತ್ರ ಬರೆಯುವ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, ಸುಧಾ ಯುಗಾದಿ ಪ್ರಭಂದ ಸ್ಪರ್ದೆಯಲ್ಲಿ ಸಮಾಧಾನಕರ ಬಹುಮಾನ, ಕರ್ನಾಟಕ ಲೇಖಕಿಯರ ಸಂಘದ ಕವನ ಸ್ಪರ್ಧೆಯ ಬಹುಮಾನ, ಸಿಂಗಾಪೂರ್ ನಡೆಸುವ ಕಥಾ ಸ್ಪರ್ಧೆಯಲ್ಲಿ ಪ್ರಥಮ ಮತ್ತು ಕವನ ಸ್ಪರ್ದೆಯಲ್ಲಿ ದ್ವಿತೀಯ ಬಹುಮಾನಗಳನ್ನು ಪಡೆದಿದ್ದಾರೆ. ೨೦೨೦ ರ ಕಹಳೆ ಕಥಾ ಸ್ಪರ್ಧೆಯಲ್ಲಿ ಅವರದೊಂದು ಕಥೆ ಅತ್ಯುತ್ತಮ ಕಥೆಯೆನ್ನುವ ಗೌರವಕ್ಕೆ ಪಾತ್ರವಾಗಿದೆ. ಅವರ ಪ್ರಥಮ ಕಥಾ ಗುಚ್ಛ ’ಛಂದ ಪ್ರಕಾಶನದ’ ಅಂತಿಮ ಸುತ್ತಿಗೆ ಆಯ್ಕೆಯಾಗಿತ್ತು. ಸುಧಾ, ತರಂಗ, ಮಯೂರ, ಕನ್ನಡ ಪ್ರಭಾ ಪತ್ರಿಕೆಗಳಲ್ಲಿ ಕಥೆಗಳು ಪ್ರಕಟವಾಗಿವೆ.’ಬಾಯೆಂಬ ಬ್ರಂಹಾಂಡ’ ಎನ್ನುವ ವೃತ್ತಿಪರ ಕಿರು ಪುಸ್ತಕವನ್ನು ಜನಸಾಮಾನ್ಯರಿಗಾಗಿ ಕನ್ನಡ ಸಂಸ್ಕೃತಿ ಇಲಾಖೆಯ ಮೂಲಕ ಪ್ರಕಟಿಸಿದ್ದಾರೆ. ಕನ್ನಡಪ್ರೆಸ್.ಕಾಂ ನಲ್ಲಿ ಆರು ತಿಂಗಳ ಕಾಲ ಅಂಕಣ ಬರಹವಾಗಿ ಪ್ರಕಟಗೊಂಡ ಅವರ ಬರಹಗಳು ಇದೀಗ ಪುಸ್ತಕ ರೂಪದಲ್ಲಿ ಹೊರಬಂದಿದೆ. ’ಕೋವಿಡ್ ಡೈರಿ’ ಎನ್ನುವ ಈ ಬರಹಗಳ ಗುಚ್ಛದ ಈ ಪುಸ್ತಕ ಈ ತಿಂಗಳ ನವಕರ್ನಾಟಕ ನಡೆಸಿದ ಸಮೀಕ್ಷೆಯಲ್ಲಿ ಟಾಪ್-ಟೆನ್ ಪುಸ್ತಕಗಳ ಪಟ್ಟಿಯಲ್ಲಿ ಸೇರಿದೆ.…………………………… ಕವಿತೆ, ಕಥೆಗಳನ್ನು ಯಾಕೆ ಬರೆಯುತ್ತೀರಿ? ಸೃಜನಾತ್ಮಕವಾಗಿ ಯಾವುದೋ ಒಂದು ನಿಮಿಷವನ್ನು ಕಟ್ಟಿಕೊಡುವ ತುಡಿತದಿಂದ. ಅದು ಮನಸ್ಸಿಗೆ ಸಂತೋಷವನ್ನು ನೀಡುವುದರಿಂದ. ಸಾಹಿತ್ಯ, ಕಥೆ, ಕವಿತೆಗಳನ್ನು ಓದುವುದರಿಂದ. ಕವಿತೆ, ಕತೆ ಹುಟ್ಟುವ ಕ್ಷಣ ಯಾವುದು? ಯಾವಾಗ ಬೇಕಾದರೂ ಆಗಬಹುದು. ಆದರೆ ಮನಸ್ಸಿನ ಮೇಲೆ ಯಾವುದೋ ಒಂದು ವಿಚಾರ ಮೋಡಕಟ್ಟಿದ ರೀತಿ ಆವರಿಸಿಕೊಂಡ ನಂತರ ಮಳೆಯಾಗಲೇ ಬೇಕು ಎನ್ನುವ ಧಾವಂತದ ರೀತಿಯಲ್ಲಿ ಬರಹಗಳೂ ಹುಟ್ಟಿ ಬಿಡುತ್ತವೆ. ಅಗಲೇ ತೃಪ್ತಿ ಮತ್ತು ಸಮಾಧಾನ. ಆದರೆ ಇದು ನನಗೆ ಬೇಕೆಂದಾಗ ಆಗುವುದಿಲ್ಲ. ನಿಮ್ಮ ಕವಿತೆ, ಕತೆಗಳ ವಸ್ತು, ವ್ಯಾಪ್ತಿ ಹೆಚ್ಚಾಗಿ ಯಾವುದು? ಪದೇ ಪದೇ ಕಾಡುವ ವಿಷಯ ಯಾವುದು ? ಕವಿತೆಗಳು ಪ್ರೀತಿ, ಭಾವನೆ ಮತ್ತು ಪರಿಸರದ ಮೇಲೆ ಹೆಚ್ಚಿವೆ. ಪ್ರಚಲಿತ ಸಮಸ್ಯೆಗಳ ಬಗ್ಗೆ ಭಾವನಾತ್ಮಕವಾಗಿ ಬರೆದಿರುವುದು ಕಡಿಮೆ. ಕಾರಣ ಎಂದರೆ ಅಂಥಹ ವಿಚಾರಗಳು ಕವಿತೆಯ ಅಲಂಕಾರ, ರೂಪಕಗಳನ್ನು ನಿರ್ಲ್ಯಕ್ಷಿಸಿ ವಸ್ತುನಿಷ್ಠ ಮತ್ತು ವಾಸ್ತವಕ್ಕೆ ಸಂಭಂದಿಸಿದ ಲೇಖನಗಳೋ ಮತ್ತೊಂದೋ ಆಗಿರುವುದೇ ಹೆಚ್ಚು. ಕಥೆಗಳಲ್ಲಿ ಮನುಷ್ಯನ ಮನೋವ್ಯಾಪಾರದ ಬಗ್ಗೆ ಹೆಚ್ಚು ಬರೆದಿದ್ದೇನೆ. ನನ್ನ ಕಥೆಗಳ ವ್ಯಾಪ್ತಿಯಲ್ಲಿ ಸಮಾಜದ ಶೀತಲ ಕ್ರೌರ್ಯಗಳು ಎದ್ದು ಕಾಣುವಷ್ಟು ಇರುತ್ತವೆ.ಆದರೆ ತೀರ್ಮಾನಗಳಿರುವುದಿಲ್ಲ.ಅತಿಯಾದ ಭಾವುಕತೆ, ಉತ್ಪ್ರೇಕ್ಷೆ ಇರುವುದಿಲ್ಲ. ಆ ಮಟ್ಟಕ್ಕೆ ಮಿತವೂ ಹೌದು.ಪದೇ ಪದೇ ಕಾಡವ ವಿಷಯವೆಂದರೆ ಅದು ಮನುಷ್ಯ ಸಂಬಂಧಗಳ ನಡುವಿನ ಭಾವನಾತ್ಮಕ ಮತ್ತು ವಿನೋದತ್ಮಕ ಮನೋವ್ಯಾಪಾರ. ಕವಿತೆ, ಕತೆಗಳಲ್ಲಿ ಬಾಲ್ಯ, ಹರೆಯ ಇಣುಕಿದೆಯೇ? ಖಂಡಿತ. ಹರೆಯವನ್ನಾದರೂ ಹತ್ತಿಕ್ಕಬಹುದು ಆದರೆ ಬಾಲ್ಯದ ನೆನಪುಗಳದ್ದು ಗಾಢ ಬಣ್ಣಗಳು. ಅವು ಬೇರೆ,ಬೇರೆ ಆಯಾಮಗಳಲ್ಲಿ ಮತ್ತೆ ಡಣಾ ಡಾಳಾಗಿ ಇಣುಕುತ್ತವೆ. ಸಮಕಾಲೀನ ಬದುಕಿನ ಸ್ಪಂದನೆಗಳೊಂದಿಗೆ ಉತ್ತಮ ಸಾಥ್ ನೀಡುತ್ತವೆ. ನೀವು ವೃತ್ತಿಯಿಂದ ದಂತ ವೈದ್ಯರು. ಇದು ನಿಮ್ಮ ಸೃಜನಶೀಲತೆಗೆ ನೆರವಾಗಿದಿಯ ಸದಾ ಜನರೊಂದಿಗೆ ಆತ್ಮೀಯವಾಗಿ ಒಡನಾಡಲು ಅವಕಾಶವಿರುವ ನನ್ನ ಕೆಲಸ ಜನರ ಬದುಕಿನ ಬಗ್ಗೆ ಬರೆಯುವ ಅವಕಾಶವನ್ನು ಕೂಡ ಹಿಗ್ಗಿಸುತ್ತದೆ. ದಿನಕ್ಕೆ ಇಪ್ಪತ್ತೈದು ಹೊಸ ಮುಖಗಳನ್ನು ನೋಡುತ್ತ, ಹೊಸ ಕಥೆಗಳನ್ನು ಕೇಳುತ್ತಲೇ ಇರುತ್ತೇವೆ. ಆದರೆ, ಈ ಅತಿವೃಷ್ಟಿ ಒಮ್ಮೊಮ್ಮೆ ಬರೆಯುವ ಗೀಳನ್ನು ತಗ್ಗಿಸುತ್ತದೇನೋ.ಕೆಲಸಮಾಡುವಾಗ ಇರುವ ಕರ್ತವ್ಯದ ದೃಷ್ಟಿಗೂ, ಬರಹಕ್ಕೆ ಕುಳಿತಾಗ ಬರುವ ಉಮೇದಿಗೂ ಯಾವ ನೇರ ತಾಳೆಯೂ ಇಲ್ಲದಿರಬಹುದು.ಆದರೆ ರೋಗಿಗಳನ್ನು ನಿಭಾಯಿಸಿದಂತೆಯೇ ಕಥೆಯ ಪಾತ್ರಗಳನ್ನು ಕೂಡ ನಿಭಾಯಿಸಲು ಪರೋಕ್ಷವಾದ ಪ್ರಭಾವ ಇದ್ದಿರಬಹುದು. ಬರೇ ಮೇಜು, ಕುರ್ಚಿ, ಕಂಪ್ಯೂಟರಿನ ನಡುವೆ ಕುಳಿತವರು ಕೂಡ ಅದ್ಭತವಾದ ಕಥೆಗಳನ್ನು ಹೆಣೆಯುವುದನ್ನು ಗಮನಿಸಿದ್ದೇನೆ.ಹಾಗಾಗಿ ಯಾರು ಬೇಕಾದರೂ ಬರೆಯಬಲ್ಲರು ಅನ್ನೋದರಲ್ಲಿ ಸಂಶಯವಿಲ್ಲ.ವೃತ್ತ ಪರಿಜ್ಞಾನ ಮತ್ತು ಬರಹದ ಭಾವುಕಥೆಯ ಜೊತೆಗೆ ವೃತ್ತಿಯ ಪ್ರಭಾವದಿಂದ ಬರುವ ಸ್ಥಿತಪ್ರಜ್ಞತೆಯನ್ನಂತೂ ನನ್ನ ಬರಹದಲ್ಲಿ ಖಂಡಿತ ನೋಡಬಹುದು. ಕೆಲವೊಮ್ಮೆ ಅದನ್ನು ಕಳೆದು ಬರೆಯುವುದು ಕೂಡ ತೊಡಕಾಗಿದೆಯೆನ್ನಬಹುದು. ವೃತ್ತಿ ಹಾಗೂ ಸೃಜನಶೀಲತೆ ಮತ್ತು ಅಪ್ತ ಬದುಕನ್ನು ನಿಭಾಯಿಸುವ ಕೌಶಲ್ಯ ಹೇಗದು? ದಿನದಲ್ಲಿ ಎಲ್ಲರಿಗೂ ಇರುವ ಅವೇ ೨೪ ಗಂಟೆಗಳನ್ನು ಪ್ರೀತಿಪಾತ್ರವಾದ ಮೂರಕ್ಕೂ ಹಂಚಲು ಇರುವ ಒಂದೇ ವಿಧಾನ ಎಂದರೆ, ಬರೇ ಎರಡರಲ್ಲಿ ಅಥವಾ ಒಂದರಲ್ಲೇ ತೊಡಗಿದವರಿಗಿಂತ ಹೆಚ್ಚು ಕಷ್ಟಪಟ್ಟು ಕೆಲಸಮಾಡುವುದು. ಜಾಣತನದಿಂದ ಸಮಯ ಪೋಲಾಗದಂತೆ ನೋಡಿಕೊಳ್ಳುವುದು. ಅಲಂಕಾರ, ಕಾಡು ಹರಟೆ, ಗಾಸಿಪ್, ಸಾಮಾಜಿಕ ಜಾಲತಾಣಗಳಿಂದ ಸ್ವಲ್ಪ ದೂರವಿದ್ದು ಏಕಾಂತದ ಸಮಯವನ್ನು ಉಳಿಸಿಕೊಳ್ಳುವುದು. ಕೆಲಸಗಳನ್ನು ಇತರರೊಂದಿಗೆ ಹಂಚಿಕೊಳ್ಳುವುದು. ಅತಿಯಾದ ನಿಯಮಗಳನ್ನು ಹಾಕಿಕೊಳ್ಳದೆ, ಅತಿಯಾಗಿ ಯಾವುದನ್ನೂ ಹಚ್ಚಿಕೊಳ್ಳದೆ ನಮ್ಮತನವನ್ನು ಕಾಪಾಡಿಕೊಳ್ಳುವ ಉಪಾಯಗಳನ್ನು ಪಾಲಿಸುವುದು.ಮಲ್ಟಿ ಟಾಸ್ಕಿಂಗ್ ಮೊದಲಿಂದಲೂ ಇತ್ತು.ಕಾಲ ಕ್ರಮೇಣ ಬದುಕು ಅವುಗಳನ್ನು ನಿಭಾಯಿಸುವ ಕಲೆಯನ್ನು ಕಲಿಸಿತು ಎನ್ನಬಹುದು. ಪ್ರಸ್ತುತ ರಾಜಕೀಯ ಸನ್ನಿವೇಶದ ಬಗ್ಗೆ ನಿಮ್ಮ ಪ್ರತಿಕ್ರಿಯೆ ಏನು? ಅದೊಂದು ಅವಿರತ ಚಕ್ರ. ಹಿಂದೊಮ್ಮೆ ಏಕತ್ವದ ಸಂಕುಚಿತ ಲೋಕವಿತ್ತು. ಅದು ಜಾಗತೀಕರಣದೊಂದಿಗೆ ಬಹುತ್ವಕ್ಕೆ ತೆರೆದುಕೊಂಡಿತು. ಅದಕ್ಕೆ ಬಹಳ ಸಮಯ ಹಿಡಿಯಿತು. ಅದು ಪೂರ್ಣವಾಗುವ ಮೊದಲೇ ನ್ಯಾಷನಲಿಸ್ಟಿಕ್ ಮೂವ್ ಮೆಂಟ್ ಗಳು ಶುರುವಾಗಿವೆ. ಅದು ಪೂರ್ಣವಾಗುವ ಮಾತಂತು ಖಂಡಿತ ಸಾಧ್ಯವಿಲ್ಲ. ಏಕೆಂದರೆ ಈ ಪ್ರಪಂಚ ವೈವಿಧ್ಯಮಯ. ಅದರಲ್ಲು ವೈಜ್ಞಾನಿಕ ಆವಿಷ್ಕಾರಗಳೊಂದಿಗೆ ಪ್ರಪಂಚ ಈಗ ಮುಷ್ಠಿಗಾತ್ರಕ್ಕೆ ತಿರುಗಿದೆ.ಸಾಮಾಜಿಕ ಮತ್ತು ಸಾಂಸ್ಕೃತಿಕ ಒಡನಾಟಗಳು, ವಾಣಿಜ್ಯ ವಿಚಾರಗಳು,ಜಾಗತಿಕ ಮಾರುಕಟ್ಟೆ , ಪ್ರವಾಸ, ಮಾಹಿತಿ ತಂತ್ರಜ್ಞಾನ ಇವೆಲ್ಲವೂ ಅಗಾಧವಾಗಿ ಜಾಗತಿಕ ಮಟ್ಟದಲ್ಲಿ ಬೆಳೆದಿರವ ಈ ಕಾಲದಲ್ಲಿ ಒಂದು ದೇಶದ ಜನರು ಹಲವು ದೇಶಗಳಲ್ಲಿ ಹಂಚಿಹೋಗಿದ್ದಾರೆ. ಇವೆಲ್ಲ ಸಾವಿರಾರು ವರ್ಷಗಳ ಕಾಲ ನಡೆದ ಸಂಘರ್ಷಗಳ, ಪರಿವರ್ತನೆಗಳ ಪರಿಣಾಮವೂ ಹೌದು. ಹಾಗಿರುವಾಗ ಅದನ್ನೆಲ್ಲ ಇಲ್ಲವಾಗಿಸಿ ಏಕತ್ವ ಅಥವಾ ಸ್ವ-ಹಿರಿಮೆಯ ಸಂಕುಚಿತ ಲೋಕಕ್ಕೆ ಹಿಂತಿರುಗಿ ಹೋಗುವ ಪ್ರಯತ್ನ ಅಪಹಾಸ್ಯದ್ದು. ಸ್ವಾರ್ಥಕ್ಕಾಗಿ ದೇಶವನ್ನು ಆಳವಾಗಿ ಒಡೆದು ಒಂದು ಬಣದ ಶ್ರೇಷ್ಠತೆಯನ್ನು ಮಾತ್ರ ಮೆರೆಸಲು ಮಾಡುವ ಪ್ರಯತ್ನ ಅಮೆರಿಕಾದಲ್ಲಾದಂತಹ ಅರಾಜಕತೆಯನ್ನು, ಅಧೀರತೆಯನ್ನು ಸೃಷ್ಠಿಸಬಲ್ಲದು.ಅದನ್ನು ಹೊರಗಿಟ್ಟು ಇಡೀ ದೇಶ ಒಂದು ಎನ್ನುವ ಒಗ್ಗಟ್ಟಿನ ಭಾವಕ್ಕೆ ಪುಷ್ಟಿ ಕೊಟ್ಟು ದೇಶದ ಏಳ್ಗೆಯ ಬಗ್ಗೆ ಯೋಚಿಸುವ ರಾಜಕಾರಣದ ಅಗತ್ಯವಿದೆ.ಪ್ರಪಂಚವೆಂಬ ಮನೆಯಲ್ಲಿ ಮನಸ್ಸನ್ನು ತೆರೆದಿಟ್ಟು ಬದುಕುವಲ್ಲಿನ ವೈವಿಧ್ಯತೆ, ವೈರುದ್ಧ್ಯತೆ, ಸಾಮ್ಯತೆ ಸೃಜನಶೀಲ ಮನಸ್ಸುಗಳ ವಿಕಸನಕ್ಕೆ ಅತ್ಯಗತ್ಯ. ಸ್ವಾರ್ಥದ ರಾಜಕೀಯ ಬೇರೆ ಬೇರೆ ರೂಪಗಳಲ್ಲಿ ಇದ್ದೆ ಇರುತ್ತದೆ. ದೊಡ್ಡ ಪ್ರಜಾ ಪ್ರಭುತ್ವದ ದೇಶಗಳಲ್ಲು ಸಹ. ಅದನ್ನು ಹಿತ ಮಿತವಾಗಿಡುವಲ್ಲಿ ಎಲ್ಲೆಡೆಯ ರಾಜಕೀಯ ಹೋರಾಟಗಳು ಸಮತೋಲನ ಸಾಧಿಸಬೇಕಷ್ಟೆ. ಎಡ-ಬಲಗಳ ತಿಕ್ಕಾಟ ಅಗತ್ಯವಿಲ್ಲದ ಸ್ವಾರ್ಥದ ರಾಜಕೀಯ ಮಾತ್ರ. ದೇಶ ಭಕ್ತಿಯೆನ್ನುವುದು ಎಡ-ಬಲಗಳ ರಾಜಕೀಯ ದಿಂದ ಹೊರತಾದ ವಿಚಾರ. ಧರ್ಮ, ದೇವರು ವಿಷಯದಲ್ಲಿ ನಿಮ್ಮ ನಿಲುವೇನು? ದೇವರನ್ನು ನಂಬುತ್ತೇನೆ. ನಾಸ್ತಿಕಳೇನಲ್ಲ. ಆದರೆ ಧರ್ಮದ ವಿಚಾರ ಬಂದಾಗ ಸಂಪ್ರದಾಯಸ್ಥಳಲ್ಲ. ಬೇರೆಲ್ಲ ಧರ್ಮಗಳನ್ನು ನಾನು ಗೌರವಿಸುತ್ತೇನೆ. ಆ ಬಗ್ಗೆ ನಾನು ಸಹಿಷ್ಣು. ದ್ವೇಷವನ್ನು ಬಿತ್ತುವ ನಂಜಿನ ಮಾತುಗಳು ನನಗೆ ಸಹ್ಯವಲ್ಲ.ನನಗೆ ಬೇಕಾದ ರೀತಿಯಲ್ಲಿ ಬದುಕುವ ಹಿಂದೂ ಆಗಿರುವ ಬಗ್ಗೆ ನನಗೆ ಹೆಮ್ಮೆಯಿದೆ. ಅದರ ಭಾವ ವೈಶಾಲ್ಯತೆಯ ಬಗ್ಗೆ ಪ್ರೀತಿಯಿದೆ. ಶಾಂತಿಯುತವಾಗಿ ಬದುಕಬೇಕಿದ್ದಲ್ಲಿ ನಾವು ಇತರರ ಬಗ್ಗೆ ಸಹಿಷ್ಣುತೆಯನ್ನು ಮೈಗೂಡಿಸಿಕೊಳ್ಳುವುದು ಅತ್ಯಗತ್ಯ.ಹಾಗೆ ಹಿಂದೂ ಧರ್ಮಕ್ಕೆ ’ಅಸಹಿಷ್ಣು’ ಎನ್ನುವ ಹಣೆ ಪಟ್ಟಿಯನ್ನು ಅಂಟಿಸುವ ಕೆಲಸ ನಡೆಯದಿರಲಿ.ಅವರವರ ಧರ್ಮ ಅವರವರಿಗೆ ದೊಡ್ಡದು. ಇನ್ನೊಂದು ಧರ್ಮವನ್ನು ಗೌರವಿಸದ ಎಲ್ಲರೂ ತಪ್ಪಿತಸ್ಥರೇ. ಪ್ರಸ್ತುತ ಸಾಂಸ್ಕೃತಿಕ ವಾತಾವರಣದ ಬಗ್ಗೆ ನಿಮಗೆ ಏನನ್ನಿಸುತ್ತಿದೆ? ಇದು ಜಾಗತಿಕ ಯುಗ. ತೊರೆ-ಹಳ್ಳಗಳು ಹರಿದು ನದಿಯಾಗಿರುವ ಕಾಲ. ಅದರಲ್ಲಿ ರಾಜಕೀಯದ , ಸ್ವಾರ್ಥದ ಕಶ್ಮಲಗಳನ್ನು ಸೇರಿಸದಿದ್ದಲ್ಲಿ ಅದು ಹಲವು ಜೀವಗಳನ್ನು, ಸೃಜನಶೀಲತೆಯನ್ನು ಸಮೃದ್ಧವಾಗಿ ಬೆಳೆಸಬಲ್ಲದು. ಸಾಂಸ್ಕೃತಿಕ ಅರಿವು-ಆಳಗಳು ಹಿಗ್ಗಿಸಬಲ್ಲವು.ಪ್ರಸ್ತುತ ಸಾಂಸ್ಕೃತಿಕ ವಾತಾವರಣದಲ್ಲಿ ಫೇವರಟಿಸಂ, ಜಾತೀಯತೆ, ಧಾರ್ಮಿಕತೆ, ಎಡ-ಬಲ, ವಶೀಲಿ ಎಲ್ಲವೂ ಇವೆ. ಅದು ತಿಳಿಗೊಳ್ಳಬೇಕು. ಹೃದಯ ವೈಶಾಲ್ಯತೆ ಹೆಚ್ಚಾಗಬೇಕು.ಇವೆಲ್ಲ ಮೊದಲಿಂದಲೂ ಇದ್ದವಾದರೂ ಈಗೀಗ ’ಅತಿ ’ ಎನ್ನುವ ಮಟ್ಟಕ್ಕೆ ಬೆಳೆಯುತ್ತಿದೆ. ಒಳ್ಳೆಯ ವಿಚಾರ ಎಂದರೆ ಇವೆಲ್ಲದರಿಂದ ದೂರವಿರುವ, ಮುಕ್ತರಾಗಿರುವ ಜನರೂ ಇರುವುದು. ಸಾಹಿತ್ಯ ವಲಯದ ರಾಜಕಾರಣದ ಬಗ್ಗೆ ನೀವು ಹೇಗೆ ಪ್ರತಿಕ್ರಿಯಿಸುವಿರಿ? ಮೇಲಿನ ಮಾತೇ ಅನ್ವಯವಾಗುತ್ತದೆ. ಅದರಲ್ಲೂ ಹೊಸತಿನ ನಿರೀಕ್ಷೆಯಲ್ಲಿ ಸದಾ ತುಡಿಯುವ ಕನ್ನಡ ಸಾಹಿತ್ಯಕ್ಕೆ ದಡ ಕಟ್ಟಬಾರದು. ತಮಗೆ ತಿಳಿದ, ತಮ್ಮೂರಿನ, ತಮ್ಮ ಪ್ರಪಂಚದ ಬಗ್ಗೆ ಬರೆದದ್ದಷ್ಟೆ ಸಾಹಿತ್ಯ ಆಗಬಾರದು. ರಾಜಕೀಯ ಘೋಷಣೆಗಳು ಸಾಹಿತ್ಯಕ್ಕೆ ಅಗತ್ಯವಿಲ್ಲ. ಅರಿವೇ ಇಲ್ಲದೆ ಎಡ-ಬಲ ಎಂದು ಹಣೆಪಟ್ಟಿ ಹೊರುವ ಭಯದಲ್ಲಿ ಹಲವರು ವೈಚಾರಿಕ ಸಾಹಿತ್ಯರಚನೆಯನ್ನು ಮಾಡಲು ಹಿಂಜರಿಯಬೇಕಾದ ಕಾಲ ಘಟ್ಟವಿದು. ಇದು ನಿಜಕ್ಕೂ ವಿಶಾದನೀಯ.ವಿಮರ್ಶಕನೊಬ್ಬ ’ನಮ್ಮೂರಿನ ಬರಹಗಾರ” ಎಂಬ ಮೊಳ ಹಿಡಿದು ಸಾಹಿತ್ಯವನ್ನು ಅಳೆವಾಗ ಅತ್ಯಂತ ಬೇಸರವಾಗುತ್ತದೆ. ಪ್ರಾಂತೀಯತೆಯ ಸೊಗಡು ಸುಂದರವಾದರೂ ಮುಖ್ಯವಾಹಿನಿಯಲ್ಲಿ ಸೇರಿದಾಗ ಬರಹಗಳನ್ನು ಅವುಗಳ ತಂತ್ರ, ಸರಾಗತೆ, ವೈಚಾರಿಕತೆ, ಭಿನ್ನತೆ, ಪ್ರಾಮಾಣಿಕತೆ, ಕುಶಲತೆ, ನವಿರು, ಸೂಕ್ಷ್ಮತೆ ಮತ್ತು ಹೊಸತನ ಇನ್ನೂ ಮುಂತಾದ ಅಳತೆಗೋಲಿನಿಂದ ಅಳೆಯುವುದು ಸಾಹಿತ್ಯದ ಬೆಳವಣಿಗೆಗೆ ಅಗತ್ಯವೆನಿಸುತ್ತದೆ.ನಿಜವಾದ ವಿಮರ್ಶಾ ಸಾಹಿತ್ಯವೂ ವಿರಮಿಸಿ ಕುಳಿತಿರುವ ಕಾಲವಿದು. ಈ ದೇಶದ ಚಲನೆಯ ಬಗ್ಗೆ ನಿಮ್ಮ ಮನಸು ಏನು ಹೇಳುತ್ತಿದೆ? ನಾನು ಅನಿವಾಸಿ ಭಾರತೀಯಳಾದ ಕಾರಣ, ಭಾರತದ ಚಲನೆಯನ್ನು ಅದರದ್ದೇ ಆದ ಚೌಕಟ್ಟಿನಿಂದ ಹೊರಗೆ ನಿಂತು ನೋಡಬಲ್ಲೆ.ಭಾತರ ಎಂತಹ ಅಗಾಧ ಮತ್ತು ಹೇಗೆ ಇತರೆ ದೇಶಗಳಿಗಿಂತ ಭಿನ್ನ ಎಂಬುದನ್ನು ಕಾಣಬಲ್ಲೆ.ತನ್ನದೇ ಸುಳಿಗಳ ಸೆಳೆತಕ್ಕೆ ಸಿಲುಕಿ ಚಲಿಸುವ ದೇಶ ನಮ್ಮದು. ಅದರ ಶಕ್ತಿ ಅಗಾಧವಾದ್ದು. ಹಿಂದೂಗಳು ಅತ್ಯಧಿಕ ಸಂಖ್ಯೆಯಲ್ಲಿರುವ ಏಕೈಕ ದೇಶವಾಗಿ ಭಾರತ ನೂರಾರು ಭಾಷೆ, ಸಂಸ್ಕೃತಿಗಳನ್ನು ಒಡಲಲ್ಲಿಟ್ಟುಕೊಂಡು ಸದಾ ಚೈತನ್ಯಮಯಿಯಾಗಿ ಮಿಡಿಯುವಂತದ್ದು. ಅಪಾರವಾದ ಜನಶಕ್ತಿಯನ್ನು ಪಡೆದ ಶಕ್ತಿಶಾಲಿ ದೇಶವಿದು. ಪ್ರತಿಭೆಗಂತೂ ಇಲ್ಲಿ ಕೊರತೆಯೇ ಇಲ್ಲ.ಆದರೆ ವ್ಯವಸ್ಥೆಗಳು ಒಟ್ಟಾಗಿ ದುಡಿಯಲು ಹೆಣಗುತ್ತವೆ. ಅತಿಯಾದ ಧಾರ್ಮಿಕತೆ ನಮ್ಮ ದೇಶದ ಅತ್ಯಂತ ದೊಡ್ಡ ತೊಡಕಾಗಿದೆ. ಅದರಿಂದ ಹೊರತಾಗಿ ಜಗತ್ತನ್ನು ನೋಡಲು ಬಹಳ ಜನರು ಅಶಕ್ತರಾಗುತ್ತಾರೆ. ಕಾನೂನು, ಪೋಲೀಸರು ಮತ್ತು ಭದ್ರತೆ ಇವು ಜನಸಾಮಾನ್ಯರ ಪರವಾಗಿ ಕೆಲಸಮಾಡಬೇಕಾಗಿರುವ ಅತ್ಯಂತ ಮುಖ್ಯ ವಿಚಾರಗಳು. ಅವುಗಳನ್ನು ಭದ್ರಪಡಿಸುವ,ಎಲ್ಲರಿಗೂ ಸಮಾನ ಸವಲತ್ತನ್ನು ನೀಡಬಲ್ಲ ರಾಜಕಾರಣ ಅತ್ಯಂತ ಮುಖ್ಯ.ಇಂತಹ ದೊಡ್ಡ ದೇಶ ಸಾಧ್ಯವಾದಷ್ಟು ಒಟ್ಟಾಗಿ ತುಡಿಯಬೇಕೆಂದರೆ ಒಗ್ಗಟ್ಟಿನ ಮಂತ್ರ ಪಠಣೆ ಅತ್ಯಂತ ಮುಖ್ಯ. ಒಡಕಿನ ಮಾತುಗಳು ಈ ದೇಶದ ಚಲನೆಗೆ ಮಾರಕ. ಕಾಲಚಕ್ರದ ಹೊಡೆತಕ್ಕೆ ಸಿಕ್ಕ ಭಾರತ ನಗರ ಪ್ರದೇಶಗಳಲ್ಲಿ ಬಹಳ ಬದಲಾಗುತ್ತ ನಡೆಯುತ್ತಿದೆ ಎನ್ನುವುದು ಕೂಡ ಸುಳ್ಳಲ್ಲ. ಸಾಹಿತ್ಯದ ಬಗ್ಗೆ ನಿಮ್ಮ ಕನಸುಗಳೇನು ? ಸಾಹಿತ್ಯ ನನ್ನ ಅಂದಂದಿನ ತೃಪ್ತಿ.ಇನ್ನೂ ಬರೆಯಬೇಕನ್ನುವ ಹಂಬಲವಿದೆ. ಅದಕ್ಕಿಂತ ಹೆಚ್ಚೇನು ಕನಸೇನಿಲ್ಲ.ಸವಾಲುಗಳಿಗೆ ತೆರೆದುಕೊಂಡು ಸೃಜನಶೀಲವಾದದ್ದೇನನ್ನೋ ರಚಿಸಬೇಕೆನ್ನುವ ತುಡಿತ ಇರುವವರೆಗೆ ಸಾಹಿತ್ಯ ರಚನೆ ನಡೆಯುತ್ತಿರುತ್ತದೆ. ಕನ್ನಡ ಹಾಗೂ ಆಂಗ್ಲ ಭಾಷೆಯ ಸಾಹಿತ್ಯದಲ್ಲಿ ನಿಮ್ಮ ಇಷ್ಟದ ಹಾಗೂ ಕಾಡಿದ ಕವಿ, ಸಾಹಿತಿ ಯಾರು ? ನಾನು ಸಾಹಿತ್ಯವನ್ನು ಅಗಾಧವಾಗಿ ಓದಿಕೊಂಡವಳಲ್ಲ.ಸಾಹಿತ್ಯದ ವಿದ್ಯಾರ್ಥಿಯಲ್ಲ. ಸಾಹಿತ್ಯದ ವಾತಾವರಣದಲ್ಲಿ ಬೆಳೆದವಳಲ್ಲ. ವಶೀಲಿಯಂತೂ

Read Post »

You cannot copy content of this page

Scroll to Top