Day: April 18, 2021

ಲಾಕ್ಡೌನ್ ಕಾಲಘಟ್ಟದ ದಾಂಪತ್ಯ

ಲೇಖನ ಲಾಕ್ಡೌನ್ ಕಾಲಘಟ್ಟದ ದಾಂಪತ್ಯ ಅಂಜಲಿ ರಾಮಣ್ಣ ಬೆಳಗಿನಲ್ಲಿ ಅವನು ಬಲು ಸುಭಗ. ರಾತ್ರಿಯಾಯಿತೆಂದರೆ ಕೀಚಕನೇ ಮೈಯೇರಿದ್ದಾನೆ ಎನ್ನುವಂತೆ ಇರುತ್ತಿದ್ದ. ಅವಳ ಮೈಮೇಲಿನ ಹಲ್ಗುರುತು, ಉಗುರ್ಗೆರೆ, ಸಿಗರೇಟಿನ ಬೊಟ್ಟು ಕತ್ತಲಲ್ಲೂ ಮಿರಮಿರ ಉರಿಯುತ್ತಿತ್ತು. ಸಹಿಸುತ್ತಲೇ ಅವಳ ದಾಂಪತ್ಯಕ್ಕೆ ಮೂರು ವರ್ಷ ಕಳೆದುಹೋಗಿತ್ತು. ಸ್ನಾನದ ನೀರು ಬಿದ್ದರೆ ಧಗಧಗ ಎನ್ನುವ ದೇಹ ದಹನಕ್ಕೆ ಹೆದರಿದ್ದ ದಾಕ್ಶಾಯಣಿ  ಅವಳು ಅದೆಷ್ಟೋ ದಿನಗಳಿಗೆ ಒಮ್ಮೆ ಸ್ನಾನ ಮಾಡುತ್ತಿದ್ದಳು. ಕತ್ತಲಲ್ಲಿ ಅವಳಾತ್ಮವನ್ನು ಹೀಗೆ ಚರ್ಮದಂತೆ ಸಂಸ್ಕರಿಸುತ್ತಿದ್ದವ ಬೆಳಕಿನಲ್ಲಿ ಬೆಕ್ಕಿನ ಮರಿಯಂತೆ ಆಗುತ್ತಿದ್ದ. ಆಫೀಸಿನಲ್ಲಿ […]

ಪರಿಣಾಮ

ಲೇಖನ ಪರಿಣಾಮ ಡಾ. ಅರಕಲಗೂಡು ನೀಲಕಂಠ ಮೂರ್ತಿ ಮನುಷ್ಯ ಸಾಮಾನ್ಯವಾಗಿ ಯಾವುದೇ ಕೆಲಸ ಮಾಡಬೇಕಾದರೆ, ಅಥವ ಯಾವುದೇ ತೀರ್ಮಾನ ತೆಗೆದುಕೊಳ್ಳುವ ಮೊದಲು, ಅದರ ಪರಿಣಾಮದ ಬಗ್ಗೆ ಖಂಡಿತ ಕೂಲಂಕುಷವಾಗಿ ಚಿಂತಿಸುತ್ತಾನೆ. ಆದರೆ ಎಂಥ ಸಂದರ್ಭಗಳಲ್ಲೂ ಸಹ ಕೆಲವರು, ಉಡಾಫೆ ಬದುಕಿನವರು, ಪ್ರಪ್ರಥಮವಾಗಿ ಆಳವನ್ನೂ ಅಂದಾಜಿಸದೆ, ನೇರ ಭಾವಿಗೇ ದಿಢೀರಂತ ಧುಮಿಕಿಬಿಡುತ್ತಾರೆ. ನಂತರ ಪರಿಣಾಮದತ್ತ ಗಮನ ಹರಿಸಿದ ಹಾಗೆ, ಕೈಕಾಲುಗಳನ್ನು ಆತುರಾತುರವಾಗಿ ಬಡಿಯತೊಡಗುತ್ತಾರೆ. ಆಗ ತುಂಬ ತಡವಾಗಿ ಪಶ್ಚಾತ್ತಾಪ ಪಟ್ಟು ಸಂಕಟದ ಕೆಸರೊಳಗೆ ಒದ್ದಾಡುತ್ತಾರೆ. ಬಹಳ ಒಳ್ಳೆಯ, ಆದರೆ […]

ನಾನು ದೀಪ ಹಚ್ಚಬೇಕೆಂದಿದ್ದೆ ಕವನಗಳು

ಪುಸ್ತಕ ಸಂಗಾತಿ ನಾನು ದೀಪ ಹಚ್ಚಬೇಕೆಂದಿದ್ದೆ ಕವನಗಳು ಈಗಾಗಲೇ ಆರು ಕೃತಿಗಳನ್ನು ಬರೆದಿರುವ ಅಕ್ಷತಾ ಕೃಷ್ಣಮೂರ್ತಿ ನಾಡಿಗೆ ಚಿರಪರಿಚಿತರು. ನಾನು ದೀಪ ಹಚ್ಚಬೇಕೆಂದಿದ್ದೆ ಇವರ ಏಳನೇ ಪುಸ್ತಕ. ಕಡೆಂಗೋಡ್ಲು ಶಂಕರಭಟ್ಟ ಕಾವ್ಯ ಪ್ರಶಸ್ತಿ ಪಡೆದ ಕೃತಿ ಇದು. ಅಂಕಣ, ವ್ಯಕ್ತಿಚಿತ್ರ, ವಿಮರ್ಶೆ, ಸಂಪಾದನೆ, ಕವಿತೆ ಹೀಗೆ ಅಕ್ಷತಾ ಅವರು ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃಷಿ ಮಾಡಿದ್ದಾರೆ.  ೪೨ ಕವಿತೆಗಳ ಈ ಸಂಕಲನದಲ್ಲಿ ಮಕ್ಕಳ ಕವನಗಳು ಇವೆ. ನನ್ನ `ವಿಷಕನ್ಯೆ’ಯ `ಅವನು’ ಇಲ್ಲಿಯೂ ಪ್ರಧಾನವಾಗಿರುವುದು ನನಗೆ ಖುಷಿಯೆನಿಸಿತು. ಹರೆಯದ […]

ಮಣ್ಣು ,ಅನ್ನ ಮತ್ತು ಪ್ರಭು

ಕವಿತೆ ಮಣ್ಣು ,ಅನ್ನ ಮತ್ತು ಪ್ರಭು ಬಿ.ಶ್ರೀನಿವಾಸ ನೆಲಕೆ ಬಿದ್ದರೆ ಅನ್ನದಾತದಂಗೆಯೇಳುತ್ತದೆ ಅನ್ನ * ಮಕ್ಕಳ ಮುಂದೆ ಅಪ್ಪ ಅಳಬಾರದು ಅಪ್ಪನ ಮುಂದೆ ಮಕ್ಕಳು ಸಾಯಬಾರದು ಪ್ರಭುಗಳ ಮುಂದೆ ಪ್ರಜೆಗಳು ನರಳಬಾರದು ಸುಳ್ಳಾಯಿತುಲೋಕರೂಢಿಯ ಮಾತು. * ಮಣ್ಣಿನೆದೆಯ ಮೇಲೆಯೆ ಇದ್ದವು ಪಾದಗಳುನೆಲದ ಮೇಲಿರುವ ತನಕ ಅದೇ ಮಣ್ಣಿನ ಮೃದು ಪಾದಗಳುನೆಲದಡಿಗೆ ಸೇರಿದವನ ಎದೆಯ ಮೇಲೆ * ಮಣ್ಣಿಗೂಅಪ್ಪನಿಗೂ ಸಂಬಂಧ ಕೇಳುವಿರಿ ನೀವು ಇದೆಅಜ್ಜ-ಮೊಮ್ಮಗನ ಸಂಬಂಧ! * ಉಣ್ಣುವ ಅನ್ನದ ಕಣ್ಣುಎದುರಿಸಲಾಗದ ಕೊಲೆಗಾರ ಹೇಡಿಹೇಡಿಯೆಂದು ಕಿರುಚಾಡುತ್ತಾನೆ * ಕಳಚಿ […]

ತೀಡುವ ತಂಗಾಳಿಯಲ್ಲಿ ನಿನ್ನ ದನಿಯು ಕೇಳಿದೆ

ಕವಿತೆ ತೀಡುವ ತಂಗಾಳಿಯಲ್ಲಿ ನಿನ್ನ ದನಿಯು ಕೇಳಿದೆ ನಾಗರಾಜ್ ಹರಪನಹಳ್ಳಿ. ಆಗೋ ನೋಡುಈ ಉರಿಬಿಸಿಲಲ್ಲಿ ಸಮುದ್ರ ನಿದ್ದೆ ಹೋಗಿದೆ ||ತೀಡುವ ತಂಗಾಳಿಯಲ್ಲಿ ನಿನ್ನ ದನಿಯು ಕೇಳಿದೆ|| ತಂಗಾಳಿ ನಿನ್ನ ಪ್ರೀತಿಯ ಮಿಂದು ಬಂದಿದೆ ||ಈ ಕಾರಣಮರಗಿಡಗಳು ಹೂ ಬಟ್ಟೆ ತೊಟ್ಟಿದೆ ||ಮೈತುಂಬಿದ ಮಾವುಬಯಲಲಿ ನಿಂತು ನಕ್ಕಿದೆ || ನೀನಲ್ಲಿ ಕೈ ತುಂಬಾ ಬಳೆ ತೊಟ್ಟು ||ತೆಳು ನೀಲಿ ಮಿಶ್ರಿತ ಹಳದಿ ಬಣ್ಣದ ರೇಶಿಮೆ‌ ಸೀರೆಯುಟ್ಟು ||ಹೊಸದಾಗಿ ತಂದ ಬಂಗಾರದ ಓಲೆ ತೊಟ್ಟು ||ನಿನ್ನ ನೀನೇ ಕನ್ನಡಿಯಲ್ಲಿ ದೃಷ್ಟಿ […]

ದಾರಾವಾಹಿ- ಅದ್ಯಾಯ-12 ತನ್ನ ಕುತಂತ್ರಕ್ಕೆ ಬಲಿಯಾಗಿ ಬೀದಿ ಬಿಕಾರಿಯಾದ ಸಂತಾನಪ್ಪ, ಇಂದಲ್ಲ ನಾಳೆ ರಾತ್ರೋರಾತ್ರಿ ಊರು ಬಿಟ್ಟೇ ಓಡಿ ಹೋಗುತ್ತಾನೆ ಅಥವಾ ಮುಂಚಿನಂತೆಯೇ ಬಾಲ ಮುದುರಿ ಕೂಲಿನಾಲಿ ಮಾಡಿಕೊಂಡು ಬದುಕುತ್ತಾನೆ ಎಂದು ಭಾವಿಸಿದ್ದ ಶಂಕರನ ಯೋಚನೆಯು ಪರಮೇಶನ ಬಿಸಿಬಿಸಿ ಸುದ್ದಿಯಿಂದ ಪೂರ್ತಿ ತಲೆಕೆಳಗಾಗಿಬಿಟ್ಟಿತು. ಬಯಲುಸೀಮೆಯ ಒಣಹವೆಯನ್ನೂ ಖಡಕ್ ಜೋಳದ ರೊಟ್ಟಿಯೊಂದಿಗೆ ಈರುಳ್ಳಿ ಮತ್ತು ಹಸಿ ಮೆಣಸಿನಕಾಯಿಯಂಥ ವ್ಯಂಜನವನ್ನು ಜಜ್ಜಿ ಜಗಿದುಣ್ಣುತ್ತ ಒರಟು ಮಂದಿಯ ನಡುವೆ ಹುಟ್ಟಿ ಬೆಳೆದ, ಆರಡಿ ಎತ್ತರದ ಆಜಾನುಬಾಹು ಸಂತಾನಪ್ಪ ಬಡತನದ ಬೇಗೆಯಿಂದ ಮುಗ್ಧ […]

Back To Top