Day: April 26, 2021

ಜೀವದಾತೆ ಪ್ರಕೃತಿ ಮಾತೆ

ಕವಿತೆ ಜೀವದಾತೆ ಪ್ರಕೃತಿ ಮಾತೆ ಸುವಿಧಾ ಹಡಿನಬಾಳ ಹೇ ಪ್ರಭು , ಋತುರಾಜ ವಸಂತನೀ ಬಂದೆ ನಸುನಗುತ‌ಪ್ರಕೃತಿಗೆ ಹೊಸ ಕಳೆಯ ನೀಡುತ್ತಆದರೆ ಕಳೆದಿಲ್ಲ ಮನುಕುಲದದುಗುಡ ದುಮ್ಮಾನ ನಿನ್ನ ಆಗಮನದಿಂದ ! ಗಿಡಮರಗಳು ಹಸಿರೆಲೆ ಚಿಗುರು ಬಿಟ್ಟುಹೂ ಹಣ್ಣು ಕಾಯಿ ತೊಟ್ಟುಕೋಗಿಲೆ ಗಿಳಿ ಗೊರವಂಕಗಳುಲಿವಾಗಮನುಜನಿಗೇಕೆ ಈ ವಿಯೋಗ ? ಜೀವಸಂಕುಲವೆ ತಿಂದುಂಡು ನಲಿದುಹಾಯಾಗಿ ಇರುವಾಗ ನಿನ್ನದೆಒಂದು ಭಾಗ ಹುಲು ಮಾನವನಿಗೇಕೆಜೀವಭಯ ತಳಮಳ ತುಮುಲ? ಹೇ ಕಾಮಧೇನು ಕರುಣಾಮಯೀಪ್ರಕೃತಿ ಮಾತೆ ಜೀವದಾತೆನಿನ್ನ ಮೇಲೆ ಅಟ್ಡಹಾಸಗೈವಸ್ವಾರ್ಥ ನರನ ಮೇಲೆ ಕೋಪವೆಅಥವಾ ನಿನ್ನ […]

ಸುಂದರ ರಾವಣ

ಕಥೆ ಸುಂದರ ರಾವಣ ವಿಶ್ವನಾಥ ಎನ್ ನೇರಳಕಟ್ಟೆ ಸಂಬಂಧಿಕರ ಮನೆಯಲ್ಲೊಂದು ಪೂಜೆ. ಪರಿಚಯಸ್ಥರಲ್ಲಿ ಮಾತನಾಡುತ್ತಾ ನಿಂತಿದ್ದೆ. “ತಗೋ ಮಾಣಿ ಹಲಸಿನ ಹಣ್ಣು” ಎನ್ನುವ ಮಾತಿನ ಜೊತೆಜೊತೆಗೇ ಬೆನ್ನ ಮೇಲೊಂದು ಗುದ್ದು. ಯಾರೆಂದು ತಿರುಗಿದರೆ ನಲುವತ್ತು- ನಲುವತ್ತೈದರ ಒಬ್ಬ ವ್ಯಕ್ತಿ. ಕಾಣುವಾಗಲೇ ವಿಕ್ಷಿಪ್ತ. ಹಲಸಿನ ಎರಡು ಸೊಳೆಗಳನ್ನು ಕೈಯ್ಯಲ್ಲಿ ಹಿಡಿದುಕೊಂಡು ವಿಚಿತ್ರವಾಗಿ, ಭಯ ಹುಟ್ಟಿಸುವಂತೆ ನಗುತ್ತಾ ನಿಂತಿದ್ದ. ಕೊಳಕಾದ ಹಲ್ಲು, ಮಣ್ಣು ಮೆತ್ತಿಕೊಂಡ ಕೈ, ಕೊಳಕು ಬಟ್ಟೆ. ಅವನು ಕೊಟ್ಟ ಹಣ್ಣು ತೆಗೆದುಕೊಳ್ಳುವುದು ಸರಿ ಕಾಣಲಿಲ್ಲ. ಹಾಗೆಂದು ತೆಗೆದುಕೊಳ್ಳದೇ […]

ಗಜಲ್ ಕ್ಷೇತ್ರದ ಮೇರು ಪರ್ವತ ಗಾಲಿಬ್

ವಿಶೇಷ ಲೇಖನ ಗಜಲ್ ಕ್ಷೇತ್ರದ ಮೇರು ಪರ್ವತ ಗಾಲಿಬ್ ಸಿದ್ಧರಾಮ ಹೊನ್ಕಲ್ . ಇತ್ತೀಚಿನ ದಿನಗಳಲ್ಲಿ ನನಗೆ ಬಹುವಾಗಿ ಕಾಡಿ ನನ್ನಿಂದ ಮೂರು ಗಜಲ್ ಕೃತಿಗಳು ಹೊರಬರಲು ಕಾರಣ ಆದ ಗಜಲ್ ಸಾಹಿತ್ಯಕ್ಕೆ ಸಂಬಂಧಿಸಿದ ಗಜಲ್ ಸಾಹಿತ್ಯದ ಮೇರು ಪರ್ವತ  ಗಾಲಿಬ್ ಕುರಿತ ನನ್ನ ಪುಟ್ಟ ಬರಹ. . ಗಾಲಿಬ್ ಹುಟ್ಟಿನಿಂದ  ಸಾವಿನವರೆಗೆ ಆತನ ಬದುಕು ಬರಹ ಹವ್ಯಾಸ ಸುಖ ದುಃಖ ಸಾಲ ಸೋಲ ನೋವು ಅವಮಾನ ಸ್ವಾಭಿಮಾನ ಎಲ್ಲ ತಿಳಿದಾಗ ಅಂತಹ ಮಹತ್ವದ ಕಾವ್ಯ ಹುಟ್ಟಲು […]

‘ಅಮ್ಮನ ನಿರಾಳತೆ’

ವಸುಂಧರಾ ಕದಲೂರು ಬರೆಯುತ್ತಾರೆ

ಒಟ್ಟಿನಲ್ಲಿ ಹೊಟ್ಟೆ ತುಂಬಿದ ಮಗು ಒಂದಷ್ಟು ಹೊತ್ತು ತರಲೆ ಮಾಡದೇ ಆಡಿಕೊಂಡೋ, ಮಲಗಿಕೊಂಡೋ ಇದ್ದರೆ ಅಮ್ಮನಿಗೆ ಸಿಗುವ ನಿರಾಳತೆ ಇದೆಯಲ್ಲಾ ಅದಕ್ಕೆ ಬೆಲೆ ಕಟ್ಟಲಾಗದು.

ಒಳ್ಳೆಯದು ಬಾಡದ ಹೂವಿನಂತೆ ನಗುತಿರಲಿ

ಪ್ರಬಂಧ ಒಳ್ಳೆಯದು ಬಾಡದ ಹೂವಿನಂತೆ ನಗುತಿರಲಿ ಜಯಶ್ರೀ.ಜೆ. ಅಬ್ಬಿಗೇರಿ    ಇಸ್ಲಾಂ ಧರ್ಮದ ಪ್ರಖ್ಯಾತ ಗುರು ‘ಸಾದಿ’ ಸಣ್ಣವರಿದ್ದಾಗ ತನ್ನ ತಂದೆಯೊಂದಿಗೆ ಮಸೀದಿಗೆ ಹೋಗಿದ್ದರು. ತಂದೆ ಮಕ್ಕಳು ಮಸೀದಿಯ ಮೇಲ್ವಿಚಾರಣೆ ನೋಡಿಕೊಳ್ಳಬೇಕಿತ್ತು. ಅಲ್ಲಿ ಪ್ರಾರ್ಥನೆಗೆ ಬಂದವರೆಲ್ಲ ನಿದ್ದೆಗೆ ಜಾರಿದ್ದರು. ಅದನ್ನು ಕಂಡ ಸಾದಿಗೆ ಆಶ್ಚರ್ಯವಾಯಿತು. ಆತ ತಂದೆಗೆ ತಿಳಿಸಿದ. ‘ನಮ್ಮಿಬ್ಬರನ್ನು ಬಿಟ್ಟು ಬಾಕಿಯವರೆಲ್ಲ ಮಲಗಿ ಬಿಟ್ಟಿದ್ದಾರೆ. ಆತನ ತಂದೆಗೆ ಕೋಪ ಬಂದಿತು.’ನಿನ್ನ ಕೆಲಸ ನೀನು ಮಾಡು. ಬೇರೆಯವರು ಏನು ಮಾಡುತ್ತಿದ್ದಾರೆಂದು ನೋಡುವುದು ನಿನ್ನ ಕೆಲಸವಲ್ಲ. ‘ಬೇರೆಯವರಲ್ಲಿ ತಪ್ಪು […]

“ಅನ್ನದಾತನ ಸ್ವಗತ “

“ಅನ್ನದಾತನ ಸ್ವಗತ “ ಗೀತಾ ಅನಘ ಮುನಿನಸ್ಯಾಕೆ ತಾಯಿ ನನ್ನ ಮ್ಯಾಲ,ಕಾರ್ಖಾನೆ ಕಟ್ಟಿ ನಿನ್ನುಸಿರ ಮಲಿನ ಗೊಳಿಸಲಿಲ್ಲ,ರಾಜಕಾರಣಿಗಳಂತೆ ಸುಳ್ಳು ಭರವಸೆನೀಡಲಿಲ್ಲ,ಬ್ಯಾಂಕಿಗೆ ಸಾಲ ಕೇಳಿದೆ ಅಷ್ಟೇ,!!!!!!ಬೆಳೆ ಬಿತ್ತಲು,,,,,,,,,,,,,ಪಚ್ಚೆ ಪೈರು ಗಳಿಂದ ನಿನ್ನೊಡಲ ತುಂಬಲು,ಅದೇಕೋ ಕಾಣೆ ನಿನಗೂ ನನ್ನ ಮೇಲೆ ಮುನಿಸು,ಕೆಲವೊಮ್ಮೆ ಇಳೆಗೆ ಮಳೆಯ ಸುರಿಸದೆ,ನನಗೆಂದು ಮೀಸಲಿಟ್ಟ ನಿನ್ನ ದೇಹದ ಒಂದಿನಿತು ಭಾಗ ಬರಡಾಯಿತು,ಇನ್ನೊಮ್ಮೆ ಬಹಳಷ್ಟು ಮಳೆ ಬಂದು ಇಳೆ ನೆಂದು ನಿನ್ನೊಡಲ ಹಸಿರಾಗಿಸಿ ಫಸಲು ನೋಡಿ,ಸಂಭ್ರಮಿಸುವ ಸಮಯದಿಯಾಕೆ ನಿನ್ನಯ ರುದ್ರನರ್ತನ?! ಬಯಸಿದ್ದಕ್ಕಿಂತ ಹೆಚ್ಚು ಮಳೆರಾಯನ ಆರ್ಭಟ ಹೆಸರೆಂಬುದು ಪ್ರವಾಹ, […]

ಅಂಕಣ ಬರಹ ಬೆಳೆದು ದೊಡ್ಡವರಾಗುವುದೆಂದರೆ ಬೆಳೆದು ದೊಡ್ಡವರಾಗುವುದೆಂದರೆ ಪ್ರಜ್ಞೆ ಮತ್ತು ಸೂಕ್ಷ್ಮತೆಗಳನ್ನು ಕಳೆದುಕೊಳ್ಳುವುದಲ್ಲ.ಹದಿಹರೆಯದಲ್ಲಿ ಮಕ್ಕಳು ಬೆಳೆಸಿಕೊಳ್ಳುವ ಮನೋಧೋರಣೆಯನ್ನ ನಂತರ ಬದಲಿಸುವುದು ಬಹಳ ಕಷ್ಟ. ಇದೇ ಕಾರಣಕ್ಕೆ ಹದಿಹರೆಯದ ಮಕ್ಕಳ ತಾಯ್ತಂದೆಯರು ಬಹಳ ವ್ಯಥಿತರಾಗುವುದು.ಮಕ್ಕಳು ಹೇಳುವ ಒಂದು ಸಣ್ಣ ಸುಳ್ಳು , ಅವರು ತೋರುವ ಒಂದು ಸಣ್ಣ ನಿರ್ಲಕ್ಷ್ಯ ತಂದೆ ತಾಯಿಗೆ ಬಹಳ ನೋವನ್ನುಂಟುಮಾಡುತ್ತದೆ. ಮಕ್ಕಳೇ ಅವರ ಜಗತ್ತು.ಮಕ್ಕಳಿಗಾಗೇ ಬದುಕು ಸವೆಸುವ ತಾಯ್ತಂದೆಯರನ್ನ ಮಕ್ಕಳು ಅರ್ಥ ಮಾಡಿಕೊಳ್ಳುವಲ್ಲಿ ಬಹಳಷ್ಟು ಸಲ ಎಲ್ಲೋ ಸೋಲುತ್ತಾರೆ. ಹಾಗೊಮ್ಮೆ ಅರ್ಥ ಮಾಡಿಕೊಂಡರೂ ಕಾಲ […]

Back To Top