Day: June 19, 2021

ಬಯಲಾಗುವುದೇ ಜೀವನ?

ಉಡಲು ಬಟ್ಟೆ ಇಲ್ಲದ ಸ್ಥಿತಿಯಿಂದ
ಯಾವ ಬಟ್ಟೆ ಹಾಕಬೇಕೆಂಬ ಗೊಂದಲಕ್ಕೆ ಬಂದು ನಿಲ್ಲುತಾ

ಊಟ ಮುಗಿಸಿದ ನಮ್ಮಿಬ್ಬರ ಕೈಯಲ್ಲಿಯೂ ಮನೆಗೆ ಮುಟ್ಟಿಸುವಂತೆ ನೀಡಿದ ಕೋಳಿ ಮಸಾಲೆ ಡಬ್ಬಗಳ ಚೀಲ ಹಿಡಿದು ಮತ್ತೆ ಮಂಜಗುಣಿ ತಾರಿಯತ್ತ ಸಂತೃಪ್ತಿಯ ಹೆಜ್ಜೆ ಹಾಕಿದೆವು. ದಾರಿಯುದ್ಧದ ನಮ್ಮ ಚರ್ಚೆಯಲ್ಲಿ ಬಿ.ಎ. ಓದು ಮುಗಿಸಿದ ಬಳಿಕ ನಾವು ನೌಕರಿ ಸೇರುವುದಿದ್ದರೆ ಅದು ಸಾಲೆಯ ತಪಾಸಣಾಧಿಕಾರಿಯಾಗಿಯೇ ತೀರಬೇಕು ಎಂದು ಮನದಲ್ಲಿಯೇ ಸಂಕಲ್ಪ ಮಾಡಿಕೊಂಡಿದ್ದೆವು!

ತನ್ನ ಕೋಳಿಗಳು ಸುಮಿತ್ರಮ್ಮನ ಅಂಗಳದಲ್ಲಿ ಹರಡಿದ ಕೊಳಕನ್ನು ತೊಳೆದುಕೊಟ್ಟ ರಾಧಾ ಅವುಗಳ ಮೇಲೆ ಬೇಸರಗೊಂಡು ಮನೆಗೆ ಹೊರಟಳು. ಅವಳ ಸ್ವಚ್ಛತಾ ಅಭಿಯಾನ ಮುಗಿಯುವವರೆಗೆ ತಮ್ಮ ಆವರಣದ ಹೊರಗೆಯೇ ನಿಂತುಕೊಂಡು ಗಮನಿಸುತ್ತಿದ್ದ ಸುಮಿತ್ರಮ್ಮನಿಗೆ ಅವಳು ಹೊರಟು ಹೋಗುತ್ತಲೇ ರಪ್ಪನೆ ಒಂದು ವಿಷಯವು ನೆನಪಾಯಿತು.

Back To Top