Day: August 11, 2021

ತರಹಿ ಗಜಲ್

ಸದಾ ಬಹಾರ್ ಗಂಧದೊಡತಿಗೆ ಹರಿದ್ವರ್ಣದ ಭವ್ಯ ಸ್ವಾಗತ
ಸಿರಿ ಸಮೃದ್ಧಿಯ ಒಲವ ಒಸಗೆಗೆ ಮೀಸಲು ವಧುವಾದಳು ವಸುಧೆ!

ತಲಿಮೇಟು ಆಲಿಯಾಸ್ ಹೆಲ್ಮೇಟು

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಬೆಂಗಳೂರು ನಗರದಲ್ಲಿ ದ್ವಿಚಕ್ರ ವಾಹನ ಸಂಬಂಧಿತ ಅಪಘಾತದಿಂದ ಪ್ರತಿನಿತ್ಯ ಒಬ್ಬ ವ್ಯಕ್ತಿ ಸಾವಿಗೀಡಾಗುತ್ತಿದ್ದಾನೆ. ದ್ವಿಚಕ್ರ ವಾಹನದ ಅಪಘಾತದಿಂದ ಮರಣಿಸುವ ನಾಲ್ವರಲ್ಲಿ ಒಬ್ಬರು ಹಿಂಬದಿ ಸವಾರರಾಗಿರುತ್ತಾರೆ.‌ ಪ್ರತಿವರ್ಷ 1.2 ಮಿಲಿಯನ್ ಜನರು ರಸ್ತೆ ಅಪಘಾತಗಳಲ್ಲಿ ಮರಣಿಸುತ್ತಾರೆ ಮತ್ತು ಲಕ್ಷಾಂತರ ಮಂದಿ ಗಾಯಗೊಳ್ಳುತ್ತಾರೆ ಮತ್ತು ವಿಕಲತೆ ಹೊಂದುತ್ತಿದ್ದಾರೆ.

ಗಜಲ್

ವಿರಹದ ರಾಗಾಲಾಪ ಹಕ್ಕಿಯ ಹಾಡಿನಲಿ ಕಾಡುವುದೇಕೆ ?
ಒಲವ ತೆಕ್ಕೆಯಲಿ ಸುಖಿಸಲು ಮನ ಹೇಳುವುದು ನಿನ್ನ ಹೆಸರನ್ನೇ

ಜೂನಿಯರ್ಸ್

ತಾಯಿಯ ಅನಾರೋಗ್ಯದ ಆತಂಕ, ಅನುಭವೀ ಗುಮಾಸ್ತರ ಅಮಾನುಷ ವರ್ತನೆಯಿ೦ದ ರೋಷಗೊಂಡ ನಾನು ಬದಲು ಮಾತನಾಡದೆ ಅರ್ಜಿಯನ್ನು ಅವರ ಮುಂದಿಟ್ಟು ನಿರ್ಗಮಿಸಬೇಕೆನ್ನುವಾಗ ಇಲಾಖೆಯಲ್ಲಿ ೧೫ ವರ್ಷ ಹಳಬರಾದ ಮಹಿಳೆಯೊಬ್ಬರು ರಜಾ ಅರ್ಜಿಯೊಂದಿಗೆ ಹಾಜರಾದರು. ಅವರನ್ನು ಕಂಡ ಕೂಡಲೇ ನಾಟಕೀಯ ವಾಗಿ ನಗುತ್ತ “ಏನ್ ಮೇಡಂ ಏನಾಗಬೇಕಿತ್ತು’ ಎಂದು ವಿನೀತನಾಗಿ ಕೇಳಿದ ಅವರನ್ನು ನೋಡಿ ಈಗ ತಾನೇ ಮಾನವೀಯತೆ ಇಲ್ಲದ ಗುರುಗುಟ್ಟಿದ ಮನುಷ್ಯ ಈತನೇನ ಅನ್ನಿಸಿತು.

ಅಂಕಣ ಬರಹ ತೊರೆಯ ಹರಿವು ಅಕ್ಷಯ ವಸ್ತ್ರವೂ.. ಅಕ್ಷೋಹಿಣಿ ಸೈನ್ಯವೂ… ತಂದೆ ಕೊಡಿಸೋ ಸೀರೆ; ಮದುವೆ ಆಗೋವರೆಗೆ. ತಾಯಿ ಕೊಡಿಸೋ ಸೀರೆ; ತಾಯಿ ಆಗೋವರೆಗೆ, ಬಂಧು ಕೊಡಿಸೋ ಸೀರೇ ಬಣ್ಣ ಹೋಗೋವರೆಗೆ, ಗಂಡಾ ಕೊಡಿಸೋ ಸೀರೇೇೇ… ಕುಂಕುಮ ಇರುವವರೆಗೆ, ಹೆಣ್ಣಿನ ಜನುಮ ಕಳೆಯುವವರೆಗೆ, ಮಣ್ಣಿನ ಮಮತೆ ಮರೆಯೋವರೆಗೆ…’ ಹೆಣ್ಣು ಮನಸ್ಸುಗಳನ್ನು ಕಲಕಿ ಬಿಡುವ ಅಣ್ಣಾವ್ರ ದನಿಯಲ್ಲಿ ಬಂದ ಈ ಹಾಡಿಗಿರುವ ವೈಟೇಜೇ ಬೇರೆ…             ಸ್ತ್ರೀವಾದ, ಸ್ವಾಭಿಮಾನ ಮುಂತಾದವೆಲ್ಲಾ ಅರ್ಥವಾಗದ ಮುಗ್ಧೆಯರಿಂದ […]

Back To Top