Day: November 4, 2021

ಕಾವ್ಯಯಾನ

ನೇಗಿಲು ಹೆಗಲು ಬದಲಾಗಿ

ಕಾವ್ಯ ಸಂಗಾತಿ ನೇಗಿಲು ಹೆಗಲು ಬದಲಾಗಿ ಮೋಹನ.ವಿ.ಹೊಸೂರ ಯಾರ ಬೀಜವೊಇನ್ನಾರದೋ ಗರ್ಭದಲಿಬಿತ್ತಿದ ಪರಿಯಲಿ ಸೇರಿಎಲ್ಲೋ ಇದ್ದವರು ನಾವುಮೊಳೆತು ಹೂ ಮಗುವಾಗರಳಿ ಹುಟ್ಟಿಸಿದ ಕಾರಣಕೆತಂದೆ ತಾಯಿ ಎನಿಸಿದವರಮಗುವಾಗಿ ಬೆಳೆದು ಆರೈಕೆಯಲಿಅರ್ಥ ಪೂರ್ಣ ಬದುಕು ಎಲ್ಲ ಸೇರಿನಮ್ಮದು ಒಂದೇ ಸಂಸಾರವಾಗಿ ಎಲ್ಲವೂ ನಾನುನನ್ನದೆಂಬ ಅಪ್ಯಾಯಮಾನದಲಿಬೆಳೆದು ನಲಿ ನಲಿದುಬಲಿತು ಮತ್ತೆ ಬೀಜವಾಗಿಇನ್ನಾರದೋ ಗರ್ಭದಲಿ ಮೊಳೆತುಇನ್ನೊಂದು ಜೀವಕೆ ಜೀವ ತುಂಬಿಧಾರೆಯೆರೆದು ಹೆಗಲ ನೊಗನೇಗಿಲು ಹೆಗಲು ಬದಲಾಗಿ ಬ್ಯಾಟನ್ ಒಪ್ಪಿಸಿ ರಿಲೇ ಆಟದ ರೀತಿನಾನು ನನ್ನದೆಂಬೆಲ್ಲವನೂ ಕೊಟ್ಟು ಬಿಟ್ಟುಕೋ ಕೋ ಆಟದಲಿ ಮುಟ್ಟಿ ಓಡುವ […]

Read More
ಅಂಕಣ
ಗಜಲ್ ಲೋಕ

ಅಂಕಣ ಸಂಗಾತಿ ಗಜಲ್ ಲೋಕ ಸಾಲಿಯವರ ಗಜಲ್ ಉದ್ಯಾನವನ… ನಮಸ್ಕಾರ… ಎಂದಿನಂತೆ ಇಂದೂ ಸಹ ನಾಡಿನ ಖ್ಯಾತ ಗಜಲ್ ಕಾರರೊಬ್ಬರ ಪರಿಚಯದೊಂದಿಗೆ ತಮ್ಮ ಮುಂದೆ ಬಂದಿದ್ದೇನೆ. ಓದಲು ತಾವು ಕಾತುರರಾಗಿದ್ದೀರೆಂದು ಬಲ್ಲೆ. ಸಮಯವನ್ನು ಹಾಳು ಮಾಡದೆ, ನೇರವಾಗಿ ವಿಷಯಕ್ಕೆ ಬರುತ್ತೇನೆ. “ಪ್ರೇಮಿಯ ಕಾರಣ ಇತರ ಎಲ್ಲ ಕಾರಣಗಳಿಂದ ಪ್ರತ್ಯೇಕವಾಗಿದೆ ಪ್ರೀತಿಯು ದೇವರ ರಹಸ್ಯಗಳ ಖಗೋಳ“                                    –ರೂಮಿ              ಉರ್ದು ತುಂಬಾ ಕಾವ್ಯಾತ್ಮಕ ಭಾವದ ಭಾಷೆ.‌ ‘ಕಾವ್ಯಾತ್ಮಕ ಭಾಷೆ’ ಎಂದರೆ ಆ ಭಾಷೆಯೂ ಶಬ್ಧಗಳಿಗಿರುವ ಅರ್ಥಬಾಹುಳ್ಯ ಎಂದರ್ಥ. […]

Read More
ಅಂಕಣ
ತೊರೆಯ ಹರಿವು

ಅಂಕಣ ಸಂಗಾತಿ ತೊರೆಯ ಹರಿವು ಭಾವಶುದ್ಧ ಇರದವರಲ್ಲಿ….             ತನು ಕರಗದವರಲ್ಲಿ ಮಜ್ಜನವನೊಲ್ಲೆಯಯ್ಯಾ ನೀನು. ಮನ ಕರಗದವರಲ್ಲಿ ಪುಷ್ಪವನೊಲ್ಲೆಯಯ್ಯಾ ನೀನು. ಹದುಳಿಗರಲ್ಲದವರಲ್ಲಿ ಗಂಧಾಕ್ಷತೆಯನೊಲ್ಲೆಯಯ್ಯಾ ನೀನು. ಅರಿವು ಕಣ್ದೆರೆಯದವರಲ್ಲಿ ಆರತಿಯನೊಲ್ಲೆಯಯ್ಯಾ ನೀನು. ಭಾವ ಶುದ್ಭವಿಲ್ಲದವರಲ್ಲಿ ಧೂಪನೊಲ್ಲೆಯಯ್ಯಾ ನೀನು. ಪರಿಣಾಮಿಗಳಲ್ಲದವರಲ್ಲಿ ನೈವೇದ್ಯವನೊಲ್ಲೆಯಯ್ಯಾ ನೀನು. ತ್ರಿಕರಣ ಶುದ್ಧವಿಲ್ಲದವರಲ್ಲಿ ತಾಂಬೂಲವನೊಲ್ಲೆಯಯ್ಯಾನೀನು. ಹೃದಯಕಮಲ ಅರಳದವರಲ್ಲಿ ಇರಲೊಲ್ಲೆಯಯ್ಯಾ ನೀನು. ಎನ್ನಲ್ಲಿ ಏನುಂಟೆಂದು ಕರಸ್ಥಲವನಿಂಬುಗೊಂಡೆ ಹೇಳಾ ಚೆನ್ನಮಲ್ಲಿಕಾರ್ಜುನಯ್ಯಾ     – ಅಕ್ಕ ಮಹಾದೇವಿ.   ತನು ಮನ ಕರಗದವರು, ಹದುಳಿಗರಲ್ಲದವರು, ಅರಿವು ಕಣ್ತೆರೆಯದವರು, ಭಾವಶುದ್ಧ ಇಲ್ಲದವರು, ಪರಿಣಾಮಿಗಳಲ್ಲದವರು, […]

Read More