Day: November 9, 2021

ಸಾವಿನ ಸಾಂಗತ್ಯದಲಿ

ಸಾವೆಂಬ ಬುಟ್ಟಿಯಲಿ
ಕಣ್ಕಟ್ಟಿನ ಯಕ್ಷಿಣಿಕಾರನ
ಯಕ್ಷಿಣಿ ಕೋಲಿನ
ಮಂತ್ರಕೆ ಅತಳ ಸುತಳ ಪಾತಾಳ ಸೇರುವವರೆಷ್ಟೋ
ಬಲ್ಲವರು ಯಾರು

ಗಜಲ್

ದೊಡ್ಡ ನಗರದ ತುಂಬ ಅಡ್ಡಾಡಿದರು ಮುಟ್ಟದ ನೀಲಿ ಬಾನಿನ ಬೆಳಗಿದೆ,
ಬೆಡಗಿನ ಬೆರಗಿನ ದೂರದ ಆಸೆಯನು ದೂರದಿ
ಅರಸುತಲಿ ನಿನ್ನನೆ ಹುಡುಕುವೆ ದೊರೆ

ಕನ್ನಡಿ ಮುಂದಿನ ನಗ್ನ ಚಿತ್ರಗಳು

ಕೃತಿ: ಕನ್ನಡಿ ಮುಂದಿನ ನಗ್ನ ಚಿತ್ರಗಳು (ಗಜಲ್ ಸಂಕಲನ)
ಲೇ: ಪ್ರಶಾಂತ ಅಂಗಡಿ (ಶ್ವೇತಪ್ರಿಯ)
ಪ್ರಕಾಶಕರು: ನೇರಿಶಾ ಪ್ರಕಾಶನ
ಪುಟಗಳು: ೧೦೪
ಬೆಲೆ: ೧೧೦/-
8147403964

ಪಕ್ಷಿಗಳೋ… ಪಕ್ಷಿವೀಕ್ಷಕರೋ

ಲೇಖನ ಪಕ್ಷಿಗಳೋ… ಪಕ್ಷಿವೀಕ್ಷಕರೋ ಸಂಧ್ಯಾ ಕೋಟೇಶ್ವರ “ಸರ್ ಸರ್,  ನನ್ನ ಫೋಟೋನೂ ತೆಗೀರಿ ಸರ್.  ಮೇಡಂ,  ನಾನು ಪ್ರತಿದಿನದ  ಹಾಗೇ ಇವತ್ತೂ ತುಂಬಾ ಕಲರ್ ಫುಲ್ ಆಗಿ ಬಂದಿದೀನಿ. ನನ್ನ ಫೋಟೋ ತೆಗೀರಿ.  ಇವಾಗ ತಿರುಗಿ ನಿಲ್ಲುತ್ತೇನೆ.  ಈ ಕಡೆ ಕ್ಲಿಕ್ ಮಾಡಿ”.  ಹೀಗೇ ಬೇಡಿಕೆಗಳ ಪಟ್ಟಿ ಮುಗಿಯದಷ್ಟು.  ಎಷ್ಟು ಫೋಟೋ ಹೊಡೆದರೂ ಹೊಡೆಯುವವರಿಗೆ ಬೇಜಾರಾಗುತ್ತಿಲ್ಲ.  ಹೊಡೆಸಿಕೊಳ್ಳುವವರಿಗಂತೂ ಒಂದು ಚೂರು ಮುಲಾಜಿಲ್ಲ.  ಇದು ಯಾವ ಸ್ಟುಡಿಯೋ ಅಂದುಕೊಳ್ತಾ ಇದ್ದೀರಾ?  ಚಳಿಗಾಲ ಬಂತೆಂದರೆ ಸಾಕು,  ಫೋಟೋಗಾಗಿ ಬೇಡಿಕೆ ಇಡುವವರು […]

ಸಂತೆಯೊಳಗೆ ನಿಂತ ಕಬೀರ: ಅಕ್ಷರ ಸಂತ ಹಾಜಬ್ಬ

ಸಂತೆಯೊಳಗೆ ನಿಂತ ಕಬೀರ: ಅಕ್ಷರ ಸಂತ ಹಾಜಬ್ಬ   ಒಬ್ಬ ಮನುಷ್ಯ ಸಮಾಜಮುಖಿಯಾಗಿ ಚಿಂತಿಸಲು ಒಂದು ಕಾರಣ, ಘಟನೆ ಆತನೊಳಗೆ ಅಡಗಿರುತ್ತದೆ. ಪ್ರತಿಯೊಬ್ಬ ಮನುಷ್ಯನು ಶಿಕ್ಷಣವಂತನಾಗಬೇಕು, ಯಾರೂ ಕೂಡ ಶಿಕ್ಷಣದಿಂದ ವಂಚಿತನಾಗಬಾರದು ಎಂದು ಶಿಕ್ಷಣಕ್ಕಾಗಿಯೇ ದುಡಿಯುತ್ತ ಅದರ ಸೇವೆಯಲ್ಲಿಯೇ ನಿರತರಾಗಿರುವ ಹರೇಕಳ ಹಾಜಬ್ಬರು ಸರ್ಕಾರಕ್ಕಲ್ಲದೆ ಜನ ಸಾಮಾನ್ಯರಿಗೂ ಮಾದರಿ. ಮಂಗಳೂರು ತಾಲ್ಲೂಕಿನ ಹರೇಕಳ ಗ್ರಾಮದವರಾದ ಹಾಜಬ್ಬರು ತೀರಾ ಹಿಂದುಳಿದ ಗ್ರಾಮೀಣ ಪ್ರದೇಶದವರು. ಬೀದಿಬದಿಯಲ್ಲಿ ಬುಟ್ಟಿಯೊತ್ತು ಕಿತ್ತಲೆ ಹಣ್ಣನ್ನು ಮಾರಿ ಅದರಿಂದಲೇ ತಮ್ಮ ಕುಟುಂಬದ ಜೀವನ ನಡೆಸುವ ಕಾಯಕ […]

Back To Top