Day: December 1, 2021

ಸಿರಿವೆನ್ನಲ ಸೀತಾರಾಮ ಶಾಸ್ತ್ರಿ ನೆನಪಿಗೆ.

ಶ್ರೀಸಿರಿವೆನ್ನಲ‌ ಸೀತಾರಾಮಶಾಸ್ತ್ರಿಯವರುತೆಲುಗಿನಖ್ಯಾತಚಲನಚಿತ್ರಗೀತೆರಚನಾಕಾರರು. ಇವರು೩೦-೧೧-೨೦೨೧ರಂದುಮರಣಿಸಿದರು. ಈಸಂತಾಪದಸಂದರ್ಭದಲ್ಲಿಅವರಿಗೆಅವರದೇಗೀತೆಯಅನುವಾದದಮೂಲಕಸಂಗಾತಿ ಪತ್ರಿಕೆಶ್ರದ್ಧಾಂಜಲಿಅರ್ಪಿಸುತ್ತದೆ

ಶಿಶುಗೀತೆ

ಶಿಶುಗೀತೆ ಚೈತ್ರಾ ತಿಪ್ಪೇಸ್ವಾಮಿ ಗಾಳಿ ಬೇಕಣ್ಣ ನಮಗೆ ಗಾಳಿಯು ಬೇಕಣ್ಣಬದುಕಲು ನಮಗೆ ಗಾಳಿಯು ಬೇಕಣ್ಣ||ಪ|| ಗಾಳಿಯಿಲ್ಲದೆ ಯಾರು ಉಳಿಯರುಅದುವೆ ನಮ್ಮ ಪ್ರಾಣವಾಯುವುಕ್ಷಣವೂ ತೊರೆದು ಉಳಿಯಲಾರೆವು.||ಗಾಳಿಯು|| ಶುದ್ಧ ಗಾಳಿಯು ದೇಹಕೆ ಉತ್ತಮಪರಿಸರದಿಂದಲೆ ಗಾಳಿಯ ಹರಿವುಚೆಂದದಿ ಗಿಡಮರ ಬೆಳೆಸಬೇಕಣ್ಣ.|| ಗಾಳಿಯು|| ಮೀರಿದ ಜನಸಂಖ್ಯೆ ಭೂಮಿ ಮೇಲೆಹೆಚ್ಚಿದೆ ವಾಹನ ರಸ್ತೆಯ ತುಂಬಾಕೆಟ್ಟಿದೆ ಗಾಳಿ ವಿಷಾನಿಲ ಸೇರುತ.||ಗಾಳಿಯು|| ಮಲಿನಗೊಂಡ ಗಾಳಿಯ ಸೇವಿಸಿಶ್ವಾಸ ರೋಗಗಳು ಬಂದವು ನೋಡಿಮಲಿನ ತಡೆದರ ನಮಗೆ ಉಳಿವು.‌‌‌‌ ||ಗಾಳಿಯು||

ಅನುವಾದಿತ ಅಬಾಬಿಗಳು

ಅನುವಾದಿತ ಅಬಾಬಿಗಳು

ಆಕರ : ಕಾಲಂ ಸಾಕ್ಷಿಗಾ
(ತೆಲುಗು ಅಬಾಬಿಗಳ ಸಂಕಲನ)

ಮೂಲ ಲೇಖಕರು : ಷೇಕ್ ಅಬ್ದುಲ್ ಹಕೀಮ್
ಕನ್ನಡಾನುವಾದ : ಧನಪಾಲ ನಾಗರಾಜಪ್ಪ

ಸರಣಿ ಬರಹ ಅಂಬೇಡ್ಕರ್ ಓದು ಭಾಗ-4 ಬಾಲ್ಯ ಉನ್ನತ ವ್ಯಾಸಂಗ  ತಂದೆಯ ಸಾವು ಅಂಬೇಡ್ಕರರಿಗೆ ಮರೆಯಲಾಗದ ದು:ಖವನ್ನುಂಟು ಮಾಡಿತು. ತಂದೆಯ ನೆನಪು ಮರುಕಳಿಸುತಿತ್ತು. ಆದರೂ ಅವರಲ್ಲಿ ಉನ್ನತ ವ್ಯಾಸಂಗದ ಮಹತ್ಪಾಕಾಂಕ್ಷೆ ಉತ್ಕಟಗೊಂಡಿತು. ಅದೇ ಸಂದರ್ಭದಲ್ಲಿ ಬರೋಡಾದ ಮಹಾರಾಜರು ನಾಲ್ಕು ವಿದ್ಯಾರ್ಥಿಗಳನ್ನು ಉನ್ನತ ವ್ಯಾಸಂಗಕ್ಕಾಗಿ ಅಮೇರಿಕಾದ ಕೊಲಂಬಿಯಾ ವಿಶ್ವವಿದ್ಯಾಲಯಕ್ಕೆ ಕಳುಹಿಸಿ ಕೊಡುವುದಾಗಿ ಪ್ರಕಟಣೆ ಹೊರಡಿಸಿದ್ದರು. ಪ್ರಕಟಣೆಯಲ್ಲಿ ಕರಾರೊಂದನ್ನು ಹಾಕಿದ್ದರು ಅದೇನೆಂದರೆ ಮಹಾರಾಜರು ಕೊಡುವ ಶಿಷ್ಯವೇತನವನ್ನು ವಿದ್ಯಾಭ್ಯಾಸಕ್ಕಾಗಿ ಮಾತ್ರ ಉಪಯೋಗಿಸಿಕೊಳ್ಳಬೇಕು, ಬೇರೆಯದಕ್ಕೆ ಹಣ ಬಳಸಿಕೊಳ್ಳುವಂತಿಲ್ಲಅಲ್ಲದೆ ವಿದ್ಯಾರ್ಜನೆ ಪೂರ್ಣಗೊಳಿಸಿ ಬಂದನಂತರ ಬರೋಡಾ […]

ಅಂಕಣ ಸಂಗಾತಿ ನೆನಪಿನದೋಣಿಯಲಿ ಜಟಕಾ ವಿಧಿಯೆಂಬ ಚಾಲಕನು ಓಡಿಸುತಿಹ  ಬಂಡಿಯಲಿ ಕುಳಿತು ನಡೆದಿದೆ ಬಾಳಪಯಣ.  ಅಲ್ಲಿಷ್ಟು ಇಲ್ಲಿಷ್ಟು ಒಂದಷ್ಟು ನೆನಪುಗಳ ಬುತ್ತಿ ಔತಣ .  ** ಕಾಲನ ನಾಗಾಲೋಟದ ಪಯಣವು  ಗಾಡಿಗೆ ಕಟ್ಟಿದ ಕುದುರೆಗಳು ನಾವು  ವಿಧಿಯ ಕಡಿವಾಣದ ಬಿಗಿ ಅಂಕೆ  ನಡೆದಿಹೆವು ಆಮಿಷಕೆ , ಚಾಟಿಯಾ ಭಯಕೆ “ಹಾಯ್ ಹಾಯ್ ಬಾಜೂ ಬಾಜೂ”  ಟಕ್ ಟಕ್ ಅನ್ನುವ ಕುದುರೆಗಳ ಖರಪುಟದ ಶಬ್ದದೊಂದಿಗೆ ಈ ಪದಗಳು ಕಿವಿಗೆ ಬಿತ್ತೆಂದರೆ ರಸ್ತೆಯಲ್ಲಿ ಆಡುತ್ತಿದ್ದ ಮಕ್ಕಳೆಲ್ಲ ಬದಿಗೆ ಸರಿದು ಗೌರವ […]

Back To Top