Day: January 1, 2022

ಧಾರಾವಾಹಿ ಆವರ್ತನ ಅದ್ಯಾಯ-49 ಗುರೂಜಿಯವರ ತಂಡದ ಹಲವರ ಮೇಲೆ ಚಿಟ್ಟೆಹುಲಿಗಳು ಭೀಕರ ದಾಳಿ ನಡೆಸಿದ ಪರಿಣಾಮವಾಗಿ ಮೂವರು ಮಾರಣಾಂತಿಕವಾಗಿ ಗಾಯಗೊಂಡರು. ಹೆಣ್ಣು ಚಿಟ್ಟೆಹುಲಿಯ ಕೈಗೆ ಮೊದಲು ಸಿಲುಕಿದವನು ತಂಗವೇಲು. ಅದು ಅವನ ಮುಖವನ್ನೂ, ಕೆಳತುಟಿಯನ್ನೂ ಹರಿದು ಬಲಗೈಯ ಮಾಂಸಖಂಡವನ್ನು ಸೀಳಿ ಹಾಕಿತ್ತು. ಅದನ್ನು ಕಂಡರೆ ಅವನು ಮುಂದೆಂದೂ ಬಂಡೆ ಒಡೆಯುವ ಕೆಲಸಕ್ಕೆ ನಾಲಾಯಕ್ಕು ಎಂಬಂತೆ ತೋರುತ್ತಿತ್ತು. ಗಂಡು ಚಿರತೆಯ ಬಲವಾದ ಪಂಜದ ಹೊಡೆತವೊಂದು ಶಿಲ್ಪಿಗಳ ಮುಖಂಡ ಶರವಣನ ಹಿಂತಲೆಗೆ ಅಪ್ಪಳಿಸಿತ್ತು. ಅದರಿಂದ ಅವನ ಬುರುಡೆಯ ಮೇಲ್ಪದರವು ಆಮೆಯ […]

Back To Top