ಬಿಳಿ ಸಾಹೇಬನ ಭಾರತ

ಪುಸ್ತಕ ಸಂಗಾತಿ

ಬಿಳಿ ಸಾಹೇಬನ ಭಾರತ

ಪುಸ್ತಕ: ಬಿಳಿ ಸಾಹೇಬನ ಭಾರತ
ಲೇಖಕರು: ಜಗದೀಶ್ ಕೊಪ್ಪ
ಪ್ರಕಾಶನ: ಮನೋಹರ ಗ್ರಂಥಮಾಲೆ ‌
ಬೆಲೆ: 90 ರೂ
ಲಭ್ಯತೆ : ಸಂಗಾತ ಪುಸ್ತಕ, ಧಾರವಾಡ

ಜಿಮ್ ಕಾರ್ಬೆಟ್ ಅವರ ಪುಸ್ತಕಗಳು ಎಷ್ಟು ಓದಿದರು ಮುಗಿಯದ ಕುತೂಹಲ ಭರಿತ ಪುಸ್ತಕಗಳು .ಈ ಪುಸ್ತಕ ಕಾರ್ಬೆಟ್ ಅವರ ಜೀವನದ ಮತ್ತಷ್ಟು ವಿಶೇಷ ಸಂಗತಿಗಳನ್ನು ಓದುಗರಿಗೆ ಪರಿಚಯಿಸುತ್ತವೆ .

ಇದು ಶಿಕಾರಿ ,ಕಾಡಿನ ಅನುಭವದ ಹೊತ್ತಿಗೆ ಅಲ್ಲ ಪುಸ್ತಕ ಅವರ ವೈಯಕ್ತಿಕ ಬದುಕಿನ ಅನುರೂಪ ಮಾಹಿತಿ ನೀಡುತ್ತದೆ . ಇಲ್ಲಿ ಆತ್ಮೀಯತೆ ,ಮಾನವೀಯತೆ, ದಕ್ಷತೆ, ಪ್ರಮಾಣಿಕತೆ ಬಹು ಪ್ರಧಾನವಾಗಿ ಕಾಣುವ ಅಂಶಗಳು .

ಪ್ರಾಮಾಣಿಕತೆ ,ದಕ್ಷತೆ ಸರಳತೆ ,ಮಾನವೀಯತೆ ಎಲ್ಲರಗೂ ಬೇಕು ಆದರೆ ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಲು ಯಾರೂ ಸಿದ್ದರಿಲ್ಲ..!!!?? .ಬರಿಯ ಪುಸ್ತಕದ ಮಾತಾಗಿ ಇವು ಉಳಿಯುವಂತಾಗಿದೆ .ಹೀಗಿರುವಾಗ ಭಾರತವನ್ನು ಭಾರತೀಯರಿಗಿಂತ ಹೆಚ್ಚಿನದಾಗಿ ಪ್ರೀತಿಸಿ ,ಅವರಿಗೆ ಗೆಳಯನಾಗಿ ,ಕಾವಲಿಗಾರನಾಗಿ ,ಅವರೊಂದಿಗೆ ಕಾರ್ಮಿಕನಾಗಿ ,ವೈದ್ಯನಾಗಿ ,ಬಾಳಿ ಸಾರ್ಥಕ ಸಮರ್ಥ ಜೀವನ್ನು ಉಳಿಸಿಹೋದ ಜಿಮ್ ಕಾರ್ಬೆಟ್ ಅಸಮಾನ್ಯ ರಾಗಿ ಉಳಿಯುತ್ತಾರೆ ಸ್ಮೃತಿ ಪಟಲದಲ್ಲಿ .

ಸರಳತೆಯನ್ನು ಅನಾಯಾಸವಾಗಿ ಪಾಲಿಸಿ ,ಮುಗ್ದ ಜನರ ಬದುಕಿಗಾಗಿ ಸದಾ ಚಿಂತಿಸಿ, ಅವರಿಗಾಗಿ ಬಂಡಯವನ್ನು ಹಾರಿಸಿದ ಜಿಮ್ ಕಾರ್ಬೆಟ್. ನೂರಾರು ಮರಗಳು ಒಂದೇ ದಿನದಲ್ಲಿ ರೈಲಿಗಾಗಿ ಧರೆಗುರುಳಿದಾಗ ಅತೀವ ನೋವನ್ನು ಅನುಭವಿಸುತ್ತಾರೆ .ಪಕ್ಷಿಗಳ ನೋವು ,ಬದುಕಿನ ಕುರಿತು ಬಾಲ್ಯದ ಆಸಕ್ತಿ ಮುಂದೆ ಅವರು
ಪರಿಸರದ ಕಾಳಜಿಯನ್ನು ಮಾಡಿ ಜನರಲ್ಲಿ ಜಾಗೃತಿ ಮೂಡಿಸುವ ಲ್ಲಿ ಯಶಸ್ವಿಯಾಗುವಂತೆ ಮಾಡಿತ್ತದೆ …!

ದಮನಕಾರಿ ಬ್ರಿಟಿಷ್ ರ ಬಗ್ಗೆ ನಾವು ಇತಿಹಾಸದಲ್ಲಿ‌ಓದಿರುತ್ತೇವೆ .ಆದರೆ ಇಲ್ಲಿ ಹಲವು ಮಾನವೀಯ ಬ್ರಿಟಿಷ್ ಅಧಿಕಾರಗಳು ಭಾರತೀಯರಿಗಾಗಿ ಶ್ರಮಿಸುವದನ್ನು ಕಾಣುತ್ತೇವೆ . ತನ್ನ ಮನೆಯನ್ನು ಮಿನಿ ಭಾತವನ್ನಾಗಿಸಿ ,ಸರ್ವಜನಿಕ ಆರೋಗ್ಯ ಕೆಂದ್ರವಾಗಿಸಿ ದ
ಜಿಮ್ ಕಾರ್ಬೆಟ್ ಅವರ ಹೃದಯ ವೈಶಾಲ್ಯತೆಗೆ ಭಾರತ ಸೋತಿದೆ .

ಭಾರತೀಯ ರ ನಂಬಿಕೆಗಳನ್ನು ಅಲ್ಲಗೆಳಯದೆ ,ಗೌರವಿಸಿ ಅವರನ್ನು ಪ್ರೀತಿಸಿದ ಬಿಳಿ ಸಾಹೇಬ ಅನನ್ಯ .ನಾವು ಭಾರತೀಯರು ಎನನ್ನು ಕಲಿಯುತ್ತೇವಯೊ ಗೊತ್ತಿಲ್ಲ ಆದರೆ ಏತೇಚ್ಛವಾದ ಮೂಢನಂಬಿಕಗೆಳು ಬಲವಾಗಿ ನಮ್ಮಲ್ಲಿ ನಮಗರಿಯದೆ ಬೇರೊರಿರುತ್ತವೆ .ಆದರೆ ಕಾರ್ಬೆಟ್ ಅವರ ಪುಸ್ತಕಗಳು ಸಾರಾಸಗಟಾಗಿ ಈ ನಂಬಿಕೆಗಳನ್ನು ತಳ್ಳಿಹಾಹುತ್ತವೆ . ತಾರ್ಕಿಕ ಆಲೋಚನೆಗೆ ಓದುಗನನ್ನು‌ ಇಳಿಸುತ್ತವೆ

ಕಾಲ ,ಜಾಗ ,ಸಮಯ ಇವುಗಳು ಬಹಳ ಸರಳವಾಗಿ ಅವರು ನಡುದುಬರುತ್ತಾರೆ .”ಏಕಾಂತವಾಗಿ ಭಾರತದ ಕಾಡುಗಳಲ್ಲಿ ಸಂಚರಿಸಿ ಬೆಳದಿಂಗಳ “ಸುಬಗು, “ಕಾಶ್ಮಿರದ
ಸೂರ್ಯೋದಯದ ” ಬೆಡಗನ್ನು ತಮ್ಮ ಹಲವು ಪುಸ್ತಕಗಳಲ್ಲಿ ಅವರು ವರ್ಣಿಸಿದ್ದಾರೆ .

ತನಾಗಾಗಿ ಎನನ್ನು ಪಡೆಯದೆ ಬಡ ಭಾರತೀಯರಿಗಾಗಿ ಬದುಕಿ . ಇಳಿಯ ವಯಸ್ಸಿನಲ್ಲಿ ಅನಿವಾರ್ಯ ವಗಿ ಭಾತವನ್ನು ತೊರೆದು ಕೀನ್ಯಾದಲ್ಲಿ ಇಹಲೋಕ ತ್ಯಜಿಸಿದರು. ಇಂದಿಗೂ ಇವರು ನಿರ್ಮಿಸಿದ ಶಾಲೆ , ಮನೆಗಳು ಬಹು ಪ್ರೀತಿಸಿದ ಕಾಡು ಮನೆಯ ಮುಂದಿನ ಮಾವಿನ ಮರ ಎಲ್ಲವು ಅವರ ಇರುವಿಕೆಯನ್ನು ಸಾರುತ್ತವೆ ಎಂದು ಲೇಖಕರು ಹೇಳುತ್ತಾರೆ .

ಲೇಖಕರು ಅಲ್ಲಿನ ಪರಿಸರದಲ್ಲಿ ಸಂಚರಿಸಿ ಸಲೂನ್ , ಟೀ ಅಂಗಡಿ ಎಲ್ಲದಕ್ಕೊ‌ ಕಾರ್ಬೆಟ್ ಅವರ ಹೆಸರು ಇರುವದು ತಿಳಿದಿದ್ದಾರೆ .ಇನ್ನೊ ಅಲ್ಲಿ ಜನಮಾನಸ ಅವರಿಗಾಗಿ ಕಾಯುತ್ತಿದೆ .” ಭಾರತವೇ ನನ್ನ ಪತ್ನಿ ಭಾರತೀಯರೇ ನನ್ನ ಮಕ್ಕಳು ” ಎಂದ ಬಿಳಿ ಸಾಹೇಬರನ್ನು ಹೇಗೆ ಮರೆಯಲು ಸಾದ್ಯ ಭಾರತೀಯರಿಗೆ .

ಶಿಕಾರಿಗಾಗಿ ಕೋವಿ ಹೀಡಿದು ನರಭಕ್ಷಕ ರನ್ನು ಹೊಡೆದುರುಳಿಸಿ ತದನಂತರ ಕ್ಯಾಮರಾ ಹೀಡಿದು ವನ್ಯಸಂಕುಲವ ಜಗತ್ತಿಗೆ ಪರಿಚಯಿಸಿ , ನಂತರ ಲೇಖಕನಾಗಿ ಪರಿವರ್ತನೆ ಹೂಂದಿ ಯಶಸ್ಸುಕಂಡು
ತನ್ನ ನಿಸರ್ಗ ಪ್ರೇಮವನ್ನು ಜಗತ್ತಿಗೆ ಅನಾವರಣಗೂಳಿಸಿದ ಸರಳ ಜೀವಿ ಕಾರ್ಬೆಟ್ ಅವರ ಜೀವನದ ಹಲವು ಮಜಲುಗಳ ವಿವರಣೆ ಜೊತೆಗೆ ಅವರ ತಾಯಿಯ ಛಲ ,ಸಹೋದರಿ ಮ್ಯಾಗಿ ಯ ಮಮತೆ ಎಲ್ಲವು ಈ ಹೊತ್ತಿಗೆಯಲ್ಲಿ‌ ಕಾಣಸಿಗುತ್ತವೆ .

ಕಾಲದೊಂಗಿ ಮತ್ತು ಚೋಟಿ ಹವಾಲ್ದನಿಯಲ್ಲಿ ಕಾಣುವ ಕರ್ಬೆಟ್ ನೆನಪುಗಳು ನೈನಿತಾಲ್ ನಿಂದ ಮರೆಯಾದದು ಏಕೆ ಎಂದು ಲೇಖಕರು ಬಹು ವಿಷಾದಿಸುತ್ತಾರೆ . ಇದು ಓದುಗರಿಗು ಕಾಡುವ ಪ್ರಶ್ನೆ .

*********************

ರೇಶ್ಮಾಗುಳೇದಗುಡ್ಡಾಕರ್

Leave a Reply

Back To Top