“ಮಾಸ್ತಿ ವೆಂಕಟೇಶ ಅಯ್ಯಂಗಾರ್ ಪ್ರಶಸ್ತಿ”

ಕಾ.ಹು.ಚಾನ್‌ಪಾಷ ಅವರಿಗೆ
೨೦೨೧ ನೇ ಸಾಲಿನ “ಮಾಸ್ತಿ ವೆಂಕಟೇಶ ಅಯ್ಯಂಗಾರ್ ಪ್ರಶಸ್ತಿ” ಪ್ರದಾನ

ಕಾ.ಹು.ಚಾನ್‌ಪಾಷ ಅವರಿಗೆ
೨೦೨೧ ನೇ ಸಾಲಿನ “ಮಾಸ್ತಿ ವೆಂಕಟೇಶ ಅಯ್ಯಂಗಾರ್ ಪ್ರಶಸ್ತಿ” ಪ್ರದಾನ

ಚಿಂತಾಮಣಿಯ ಕನ್ನಡ ಸಾಹಿತ್ಯ ವೇದಿಕೆಯು ಚುಟುಕು ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ಆಯೋಜಿಸಿದ್ದ ತಿಂಗಳ ಕವಿಸ್ಮರಣೆ ಕಾರ್ಯಕ್ರಮದಲ್ಲಿ ಕಾ.ಹು.ಚಾನ್‌ಪಾಷ ಅವರಿಗೆ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಫಲಕ, ಐದು ಸಾವಿರ ನಗದು, ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.
ಅವಿಭಜಿತ ಕೋಲಾರ ಜಿಲ್ಲೆಯ (ಕೋಲಾರ – ಚಿಕ್ಕಬಳ್ಳಾಪುರ) ಸಾಹಿತಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ೨೦೨೧ ರಲ್ಲಿ ಪ್ರಕಟಿಸಿರುವ ಪುಸ್ತಕಗಳನ್ನು ಪರಿಗಣಿಸಿ ಅವಿಭಜಿತ ಕೋಲಾರ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ನೀಡಲಾಗಿದೆ. ಇವರು ತೆಲುಗು ಭಾಷೆಯ ಹಿರಿಯ ಸಾಹಿತಿಗಳಾದ ಸೈಯದ್ ನಸೀರ್ ಅಹಮ್ಮದ್ ಅವರ ಪುಸ್ತಕವನ್ನು ಕನ್ನಡಕ್ಕೆ ಅನುವಾದಿಸಿರುವ “ಫಾತಿಮಾ ಶೇಖ್ : ಆಧುನಿಕ ಭಾರತದ ಮೊದಲ ಮುಸ್ಲಿಂ ಶಿಕ್ಷಕಿ” ಎಂಬ ಪುಸ್ತಕಕ್ಕೆ ಈ ಪ್ರಶಸ್ತಿ ಲಭಿಸಿದೆ.


Leave a Reply

Back To Top