ಗಾಯಕ ‘ಶಿವಮೊಗ್ಗ ಸುಬ್ಬಣ್ಣ’ ಇನ್ನು ನೆನಪು ಮಾತ್ರವೂ

.‘ಕಾಡು ಕುದುರೆ ಓಡಿ ಬಂದಿತ್ತ’

ಖ್ಯಾತಿಯ ಗಾಯಕ ‘ಶಿವಮೊಗ್ಗ ಸುಬ್ಬಣ್ಣ’

ಇನ್ನು ನೆನಪು ಮಾತ್ರ!

‘ಕಾಡು ಕುದುರೆ ಓಡಿ ಬಂದಿತ್ತ’ ಖ್ಯಾತಿಯ ಗಾಯಕ ‘ಶಿವಮೊಗ್ಗ ಸುಬ್ಬಣ್ಣ’ ಇನ್ನು ನೆನಪು ಮಾತ್ರವೂ..!

ಕನ್ನಡದ ಖ್ಯಾತ ಸುಗಮ ಸಂಗೀತದ ಪ್ರಸಿದ್ಧ ಗಾಯಕ ಶಿವಮೊಗ್ಗ ಸುಬ್ಬಣ್ಣ ಹೃದಯಾಘಾತದಿಂದ ನಿನ್ನೆ ಅಂದರೆ ಗುರುವಾರ ರಾತ್ರಿ ನಿಧನಅರಾಗಿದ್ದಾರೆ. ಹೀಗಂತ ಹೇಳಲು ಮನಸ್ಸಿಗೆ ನೋವಾಗುತ್ತದೆ..!

‘ಕಾಡು ಕುದುರೆ ಓಡಿ ಬಂದಿತ್ತಾ’ ಗೀತೆಯು ಇವರಿಗೆ ಖ್ಯಾತಿಯನ್ನು ತಂದುಕೊಟ್ಟಿತು..!

ಇತ್ತೀಚಿಗೆ ಸುಬ್ಬಣ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಹೀಗಾಗಿಯೇ ಅವರನ್ನು ಜಯನಗರದ ಶಾಂತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರಿಗೆ ಹೃದಯಾಘಾತವಾಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲು ಆಂಬುಲೆನ್ಸ್ ನಲ್ಲಿ ಕರೆದೊಯ್ಯಲಾಗುತ್ತಿತ್ತು. ಆಗ ಮಾರ್ಗಮಧ್ಯೆ ಆಂಬುಲೆನ್ಸ್ ನಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ..!

# ಶಿವಮೊಗ್ಗ ಸುಬ್ಬಣ್ಣ ಅವರ ಹಿನ್ನಲೆ..! —

ಕನ್ನಡದ ಸುಗಮ ಸಂಗೀತ ಕ್ಷೇತ್ರದ ಹಿರಿಯ ಗಾಯಕರಲ್ಲಿ ಸುಬ್ಬಣ್ಣ ಒಬ್ಬರಾಗಿದ್ದು, ಸುಬ್ಬಣ್ಣ ಅವರ ನಿಜ ನಾಮಧೇಯ ಜಿ.ಸುಬ್ರಹ್ಮಣ್ಯಂ ಅಂತ.

ಶ್ರೀ ಗಣೇಶ್ ರಾವ್ ಹಾಗೂ ರಂಗನಾಯಕಮ್ಮನವರ ಮಗನಾದ ಸುಬ್ಬಣ್ಣ ಶಿವಮೊಗ್ಗ ಜಿಲ್ಲೆಯ ನಗರ ಗ್ರಾಮದಲ್ಲಿ 1938 ರಲ್ಲಿ ಜನಿಸಿದವರು. ಶಿವಮೊಗ್ಗ ಸುಬ್ಬಣ್ಣ ಬಿ.ಎ., ಬಿ.ಕಾಂ., ಎಲ್.ಎಲ್.ಬಿ., ಪದವೀದರರು. ವಕೀಲರಾಗಿ ವೃತ್ತಿ ಬದುಕು ಆರಂಭಿಸಿದ ಇವರು ಬಳಿಕ ನೋಟರಿಯಾಗಿ ನೇಮಕಗೊಂಡು ಕೆಲವು ವರ್ಷಗಳ ಕಾಲ ನೋಟರಿಯಾಗಿ ಕೆಲಸ ಮಾಡಿದ್ದರು..!

ಆರಂಭದಲ್ಲಿ ಶಾಲಾ ಸಮಾರಂಭಗಳಲ್ಲಿ ಹಾಡುತ್ತಿದ್ದ ಶಿವಮೊಗ್ಗ ಸುಬ್ಬಣ್ಣ ಹಲವಾರು ಪ್ರಶಸ್ತಿ ಪಡೆದಿದ್ದವರು. ಆ ಮೂಲಕ ಹಾಡಿನ ಶಿವಮೊಗ್ಗ ಸುಬ್ಬಣ್ಣ ಎಂದೇ ಖ್ಯಾತಿಗಳಿಸಿದ್ದರು..!

ಮುಂದೆ ಕನ್ನಡ ಗಾಯನ ಕ್ಷೇತ್ರದಲ್ಲಿ ತಮ್ಮನ್ನು ಗುರುತಿಸಿಕೊಂಡ ಸುಬ್ಬಣ್ಣ 1963 ರಲ್ಲಿ ಆಕಾಶವಾಣಿಯ ಗಾಯಕರಾಗಿಯೂ ಆಯ್ಕೆಯಾದವರು. ಸಿನಿಮಾ ರಂಗಕ್ಕೆ ಶಿವಮೊಗ್ಗ ಸುಬ್ಬಣ್ಣ ಹಿನ್ನೆಲೆ ಗಾಯಕರಾಗಿ ಚಿತ್ರರಂಗ ಪ್ರವೇಶಿಸಿದ್ದು ನಾಟಕಕಾರರಾಗಿಯೇ. ಅದೂ ಚಿತ್ರ ನಿರ್ದೇಶಕ ಕವಿ ಚಂದ್ರಶೇಖರ ಕಂಬಾರರ ‘ಕರಿಮಾಯಿ’ ಮೂಲಕ..!

1979 ರಲ್ಲಿ ಅಂದಿನ ರಾಷ್ಟ್ರಪತಿ ನೀಲಂ ಸಂಜೀವ ರೆಡ್ಡಿ ಅವರಿಂದ ರಜತಕಮಲ ಪ್ರಶಸ್ತಿ ಸ್ವೀಕರಿಸಿದ ಶಿವಮೊಗ್ಗ ಸುಬ್ಬಣ್ಣ ಯಶಸ್ಸಿನ ಕುದುರೆಯೇರಿ ನಡೆದರು. ಆಕಾಶವಾಣಿ ಎಂ.ಎಸ್.ಐ.ಎಲ್. ಪ್ರಾಯೋಜಕತ್ವದಲ್ಲಿ ಪ್ರಸಾರ ಮಾಡಿದ ಜನಪ್ರಿಯ ಕಾರ‍್ಯಕ್ರಮದಲ್ಲಿ ‘ಕೋಡಗನ ಕೋಳಿ ನುಂಗಿತ್ತಾ..’, ‘ಅಳಬೇಡಾ ತಂಗಿ ಅಳಬೇಡ…’ ‘ಬಿದ್ದೀಯಬ್ಬೇ ಮುದುಕಿ..’ ಮೊದಲಾದ ಶಿಶುನಾಳ ಷರೀಫರ ಗೀತೆಗಳನ್ನು ಹಾಡಿದ ಶಿವಮೊಗ್ಗ ಸುಬ್ಬಣ್ಣ ಎಲ್ಲರ ಮನೆ ಮಾತಾದವರು..!

ಇಂತಹ ಶಿವಮೊಗ್ಗ ಸುಬ್ಬಣ್ಣ ಅವರಿಗೆ ಹಲವಾರು ಪ್ರಶಸ್ತಿಗಳೂ ಬಂದವು. ಶಿವಮೊಗ್ಗ ಸುಬ್ಬಣ್ಣ ಅವರ ಸಾಧನೆಯನ್ನು ಮನ್ನಿಸಿ ರಾಜ್ಯ ಸರ್ಕಾರ ಪ್ರತಿಷ್ಠಿತ ಸಂತ ಶಿಶುನಾಳ ಶರೀಫ್ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಸಂಗೀತ ಅಕಾಡಮಿಯ ಕರ್ನಾಟಕ ಕಲಾ ತಿಲಕ ಪ್ರಶಸ್ತಿ ನೀಡಿ ಗೌರವಿಸಿದರೆ, ಅಭಿಮಾನಿಗಳು ನೂರಾರು ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿದರು..!

1974 ರಲ್ಲಿ ಪ್ರಥಮ ಬಾರಿಗೆ ಕರ್ನಾಟಕಕ್ಕೆ ಸಂದ ‘ರಜತಕಮಲ್’ ಪುರಸ್ಕಾರವನ್ನು ಪಡೆದ ಹೆಗ್ಗಳಿಕೆ ಇವರದು..!

ಇಂತಹ ಶಿವಮೊಗ್ಗ ಸುಬ್ಬಣ್ಣ ಈಗ ಕಾಲವಶವಾಗಿದ್ದಾರೆ. ಅವರಿಗೆ ಶಾಂತಿ ದೊರಕಲಿ ಎಂದು ನಮ್ಮ ಅಂತಿಮ ಆಶಯವೂ..!


 ಕೆ.ಶಿವು.ಲಕ್ಕಣ್ಣವರ

Leave a Reply

Back To Top