ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಗಝಲ್

Image result for photos of love sculptures

ಡಾ.ಗೋವಿಂದ ಹೆಗಡೆ

ಅವಳ ತನ್ಮಯತೆಗೆ ಸ್ವಲ್ಪವೂ ಭಂಗ ಬಾರದಿರಲಿ
ಕಡಲು ಅಷ್ಟೊಂದು ಜೋರಾಗಿ ಮೊರೆಯದಿರಲಿ

ಚರಿತ್ರೆಯಲಿ ಕಾಲು ಹೂತು ಕೂತಿದ್ದಾಳೆ ಅವಳು
ವಿವಶತೆಯಲ್ಲೂ ಮುಂಗುರುಳು ನಲುಗದೆ ಇರಲಿ

ಮಧುಶಾಲೆಯೇಕೆ ಹೀಗೆ ಪಾಳು ಬಿದ್ದಿದೆ ಗೆಳೆಯ
ಒಡಲ ತಣಿಸುವ ಮಧುಭಾಂಡ ಬರಿದಾಗದಿರಲಿ

ಅದೆಂಥ ಕ್ಷುಬ್ಧತೆಯಲ್ಲಿ ದಾರಿ ಸವೆಸುವೆ ನೀನು
ಸೈರಿಸಿ ಪಾಲಿಸುವ ಮಡಿಲು ಮುಕ್ಕಾಗದಿರಲಿ

ಎದೆಗುದಿಗೇಕೆ ಬಿಡದೆ ತುಪ್ಪ ಸುರಿಯುವೆ ‘ಜಂಗಮ’
ತಡೆ,ಕಾಪಿಡುವ ರೆಪ್ಪೆ ನಡುವೆ ಬದುಕು ವಿಶ್ರಮಿಸಲಿ

********

About The Author

2 thoughts on “ಕಾವ್ಯಯಾನ”

  1. ಶ್ರೀನಿವಾಸ್ ಬಿ.ಎಸ್

    ಸುಂದರ ಭಾವಪೂರ್ಣ ಗಝಲ್! ಅಭಿನಂದನೆಗಳು

Leave a Reply

You cannot copy content of this page

Scroll to Top