ವಿರಮಿಸಿದ ವಿಜಯಪುರದ ವಿರಾಗಿಯು

ವಿಶೇಷ ಲೇಖನ

ವಿರಮಿಸಿದ ವಿಜಯಪುರದ ವಿರಾಗಿಯೂ..!
ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮಿಗಳ ಅಗಲಿಕೆಯಿಂದ ಬಡವಾದ ಕರುನಾಡೂ.!!

ವಿಜಯಪುರ ಜ್ಞಾನಯೋಗಾಶ್ರಮದ ಪರಮ ಪೂಜ್ಯರಾದ ಸಿದ್ಧೇಶ್ವರ ಸ್ವಾಮೀಜಿಗಳು ತೀರಿದ್ದಾರೆ.

ಉಪನಿಷತ್ತುಗಳು, ಭಗವದ್ಗೀತೆ, ಯೋಗಸೂತ್ರ, ವಚನಶಾಸ್ತ್ರ ಸೇರಿದಂತೆ ಬೋಧಪ್ರದ ಪ್ರವಚನಗಳನ್ನು ನೀಡುತ್ತಿದ್ದ ಸಿದ್ದೇಶ್ವರ ಸ್ವಾಮಿಗಳು ಮರೆಯಾದ ಭಕ್ತರ ಪಾಲಿನ ಆರಾಧ್ಯದೈವರಾಗಿದ್ದರು..!

ಜ್ಞಾನಯೋಗಿ, ನಡೆದಾಡುವ ದೇವರೆಂದೇ ಖ್ಯಾತರಾದ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಮಹಾಸ್ವಾಮಿಗಳು ಇಹಲೋಕ ತ್ಯಜಿಸಿದ್ದಾರೆ..

ಬಿಜಾಪುರದ ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದಲ್ಲಿ ಜನಿಸಿದ್ದ ಸಿದ್ದೇಶ್ವರ ಮಹಾಸ್ವಾಮೀಜಿಗಳು ಎರಡನೇ ವಿವೇಕಾನಂದ ಎನಿಸಿಕೊಂಡಿದ್ದರು.

# ಸಿದ್ದೇಶ್ವರ ಶ್ರೀಗಳ ವಿದ್ಯಾಭ್ಯಾಸವೂ..! —

1941ರ ಅಕ್ಟೋಬರ್ 24 ರಂದು ಸಿದ್ದೇಶ್ವರ ಮಹಾಸ್ವಾಮೀಜಿಗಳು ಜನಿಸಿದ್ದರು. ಸ್ವಗ್ರಾಮ ಬಿಜ್ಜರಗಿಯ ಶಾಲೆಯಲ್ಲಿಯೇ ನಾಲ್ಕನೇ ತರಗತಿವರೆಗೆ ಓದಿದ ನಂತರ ಅವರು ಮಲ್ಲಿಕಾರ್ಜುನ ಸ್ವಾಮಿಗಳ ಬಳಿ ಬಂದಿದ್ದರು. ‘ಬೆಳೆಯುವ ಪೈರು ಮೊಳಕೆಯಲ್ಲೇ’ ಎಂಬಂತೆ ಬಾಲಕ ಸಿದ್ಧೇಶ್ವರನ ಚುರುಕುತನ ಮಲ್ಲಿಕಾರ್ಜುನ ಸ್ವಾಮಿಗಳ ಗಮನಕ್ಕೆ ಬರಲು ತಡವಾಗಲಿಲ್ಲ..!

ಮಲ್ಲಿಕಾರ್ಜುನ ಸ್ವಾಮಿಗಳು ತಾವು ಪ್ರವಚನಗಳನ್ನು ಮಾಡುವ ಸ್ಥಳಗಳಿಗೆ ಸಿದ್ಧೇಶ್ವರರನ್ನು ಕರೆದೊಯ್ಯ ತೊಡಗಿದರು. ಜೊತೆಯಲ್ಲಿಯೇ ಅವರ ಶಾಲಾ — ಕಾಲೇಜುಗಳ ವಿದ್ಯಾಭ್ಯಾಸವೂ ಮುಂದುವರಿಯುವಂತೆ ನೋಡಿಕೊಂಡರು. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ನಂತರ ಸ್ನಾತಕೋತ್ತರ ವಿದ್ಯಾಭ್ಯಾಸಕ್ಕೆ ಕೊಲ್ಹಾಪುರ ವಿಶ್ವವಿದ್ಯಾನಿಲಯದಿಂದ ತತ್ವಶಾಸ್ತ್ರದ ವಿಷಯದಲ್ಲಿ ಎಂಎ ಪದವಿಯನ್ನು ಉನ್ನತ ಶ್ರೇಣಿಯಲ್ಲಿ ಮಹಾಸ್ವಾಮಿಜಿಗಳು ಪಾಸ್​ ಮಾಡಿದ್ದರು..!

# ಇಂತಹ ಸಿದ್ದೇಶ್ವರ ಸ್ವಾಮಿಗಳ ಆಧ್ಯಾತ್ಮದ ಹಿನ್ನೆಲೆಯೂ..! —

ವಿಜಯಪುರ ಜ್ಞಾನಯೋಗಾಶ್ರಮದ ಪರಮ ಪೂಜ್ಯರಾದ ಸಿದ್ಧೇಶ್ವರ ಸ್ವಾಮೀಜಿಗಳು ಆಧ್ಯಾತ್ಮದ ಬಗೆಗೆ ತುಂಬಾ ಆಳವಾದ ಅಧ್ಯಯನ ಚಿಂತನೆಗಳನ್ನು ನಡೆಸಿದ್ದರು.

ಶ್ರೇಷ್ಠ ಅನುಭಾವಿಗಳೂ, ಮಧುರ ಮೃದು ಸ್ವಭಾವದವರೂ ಆಗಿದ್ದ ಅವರು, ಕನ್ನಡ, ಸಂಸ್ಕೃತ, ಇಂಗ್ಲಿಷ್, ಮರಾಠಿ ಮತ್ತು ಹಿಂದಿ ಭಾಷೆಗಳನ್ನೂ ಬಲ್ಲವರಾಗಿದ್ದರು..!

ಅತ್ಯಂತ ಸರಳ ಸಜ್ಜನಿಕೆಯ ಸಾಕಾರ ಮೂರ್ತಿ, ನನ್ನದು — ತನ್ನದೆಂಬ ಮಮಕಾರ ತೊರೆದ ಮಹಾಪುರುಷರು ಸಿದ್ಧೇಶ್ವರ ಸ್ವಾಮಿಗಳು.

ಇವರು ಸಂತರಷ್ಟೇ ಅಲ್ಲ, ಜ್ಞಾನೋಪಾಸಕರು ಕೂಡ ಆಗಿದ್ದರು. ಸಂತರು ನಾಡಿನಲ್ಲಿ ಬಹಳ ಜನ ಇದ್ದರು, ಈಗಲೂ ಇದ್ದಾರೆ. ಆದರೆ, ಜ್ಞಾನಯೋಗಿಗಳು ಬಹಳ ಅಪರೂಪ..! ಅಂಥವರಲ್ಲೊಬ್ಬರು ಸಿದ್ಧೇಶ್ವರ ಸ್ವಾಮಿಗಳು.

ವಿಜಯಪುರದ ಜ್ಞಾನಯೋಗಾಶ್ರಮ ಜನತೆಗೆ ಜ್ಞಾನದಾಸೋಹ ನೀಡುವ ವಿಶಿಷ್ಟವಾದ ಕೇಂದ್ರ. ಗದುಗಿನ ಶಿವಾನಂದ ಶ್ರೀಗಳ ಪರಂಪರೆಯಲ್ಲಿ ಬಂದ ಈ ಆಶ್ರಮ ಇವರ ಗುರುಗಳಾದ ವೇದಾಂತ ಕೇಸರಿ ಮಲ್ಲಿಕಾರ್ಜುನ ಸ್ವಾಮಿಗಳ ಕಾಲದಲ್ಲಿ ಅತ್ಯಂತ ಪ್ರವರ್ಧಮಾನಕ್ಕೆ ಬಂತು..!

ಉತ್ತರ ಕರ್ನಾಟಕದ ಜನಮಾನಸದಲ್ಲಿ ಬಹಳವಾಗಿ ಮಹತ್ವ ಪಡೆಯಿತು..!

# ಸಿದ್ದೇಶ್ವರ ಶ್ರೀಗಳ ಜೀವನ ಶೈಲಿ ಹೇಗಿತ್ತು‌ ಅಂದರೆ.!? —

ಸಿದ್ದೇಶ್ವರ ಸ್ವಾಮಿಜಿಯವರು ಸರಳವಾದ ಸ್ಪೂರ್ತಿದಾಯಕ ಜೀವನ ಶೈಲಿಯನ್ನು ಹೊಂದಿದ್ದರು. ತತ್ವಜ್ಞಾನಿ, ಆಲೋಚಕ ಸ್ವಾಮೀಜಿ ಪ್ರಪಂಚದಾದ್ಯಂತ ಆಧ್ಯಾತ್ಮಿಕ ಪ್ರವಚನಗಳನ್ನು ವಿತರಿಸಿದ್ದಾರೆ.

ಅವರು ತತ್ವಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಭಾರತದ ಸಂತರು ಮತ್ತು ಸಿಯರ್ಸ್ ಕೃತಿಗಳ ಆಧಾರದ ಮೇಲೆ ಹಲವಾರು ಪುಸ್ತಕಗಳನ್ನು ಅವರು ಬರೆದಿದ್ದಾರೆ ಕೂಡ..!

ವೇದಾಂತ, ಗೀತಾ, ಯೋಗಸೂತ್ರ, ವಚನಗಳ ಕುರಿತಾದ ಸಿದ್ದೇಶ್ವರ ಶ್ರೀಗಳ ಉಪನ್ಯಾಸಗಳು ಅವುಗಳ ಮೂಲತೆ, ಚಿಂತನೆ, ಅಭಿವ್ಯಕ್ತಿಗಾಗಿ ಹೆಸರುವಾಸಿಯಾಗಿದೆ.

ಸಿದ್ದೇಶ್ವರ ಸ್ವಾಮಿಗಳು ಅವರು ತಮ್ಮ ಪಂಥಜಿಯವರ ‘ಪಥಜಲಿಯ ಯೋಗಶಾತ್ರ’ವನ್ನು ಮಹಾನ್ ಪಾಂಡಿತ್ಯಪೂರ್ಣವಾಗಿ ಪಾಂಡಿತ್ಯದೊಂದಿಗೆ ಸಂಪಾದಿಸಿದ್ದರು..! ಸಿದ್ಧೇಶ್ವರ ಸ್ವಾಮಿಜಿಯವರ ಸರಳತೆ, ಬೇರ್ಪಡುವಿಕೆ, ಯೋಗದ ಮನೋಭಾವಗಳು, ಸಹಾನುಭೂತಿ, ಆಧ್ಯಾತ್ಮಿಕ ಸಮಸ್ಯೆಗಳಿಗೆ ಸೃಜನಶೀಲ ವಿಧಾನ ಮತ್ತು ಅವರ ಹೋಲಿಸಲಾಗದ ಶಾಂತ ಮತ್ತು ಸಂಯೋಜನೆ ನಿಜವಾಗಿಯೂ ಪ್ರೇಕ್ಷಕರು ಉತ್ಸಾಹದಿಂದ ಮತ್ತು ಪ್ರಬುದ್ಧರಾಗಿದ್ದಾರೆ..!

ಅವರ ಪ್ರವಚನವು ಅವರ ನಿಖರತೆ ಮತ್ತು ನುಗ್ಗುವಿಕೆಗೆ ಹೆಸರುವಾಸಿಯಾಗಿತ್ತು..!

# ಪ್ರಶಸ್ತಿ — ಪುರಸ್ಕಾರಗಳನ್ನು ತಿರಸ್ಕರಿಸಿದ್ದ ಸಿದ್ದೇಶ್ವರ ಸ್ವಾಮಿಗಳು..! –

ಸಿದ್ದೇಶ್ವರ ಮಹಾಸ್ವಾಮಿಗಳನ್ನು ಅರಿಸಿ ಅನೇಕಾನೇಕ ಪ್ರಶಸ್ತಿ ಮತ್ತು ಪುರಸ್ಕಾರಗಳು ಬಂದಿದ್ದವು. ಆದರೆ, ಅವುಗಳನ್ನು ವಿನಯದಲ್ಲೇ ಶ್ರೀಗಳು ತಿರಸ್ಕರಿಸುತ್ತಿದ್ದರು.

ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ‘ಪದ್ಮಶ್ರೀ’ ಪ್ರಶಸ್ತಿ ಬಂದಾಗ ಸಿದ್ದೇಶ್ವರ ಮಹಾಸ್ವಾಮಿಗಳು ಹೀಗೆ ಹೇಳಿದ್ದರು..!

‘ಭಾರತ ಸರ್ಕಾರ ನೀಡುವ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿಗಳ ಮೇಲೆ ನನಗೆ ಅಪಾರ ಗೌರವವಿದೆ. ‘ಪದ್ಮಶ್ರೀ’ ಪ್ರಶಸ್ತಿ ಘೋಷಿಸಿದ್ದಕ್ಕೆ ಧನ್ಯವಾದಗಳು. ಆದರೆ, ನಾನೊಬ್ಬ ಸರಳ ವ್ಯಕ್ತಿ. ಸಾಮಾನ್ಯ ಜೀವನ ನಡೆಸುತ್ತ, ಆಧ್ಯಾತ್ಮಿಕ ಬೋಧನೆಯ ಮೂಲಕ ಜನರ ಜೀವನ ಉದಾತ್ತಗೊಳಿಸುವುದು ಉದ್ದೇಶ ನನ್ನದು. ಹಾಗಾಗಿಯೇ ಪ್ರಶಸ್ತಿಗಳ ಅವಶ್ಯತೆಯು ನನಗಿಲ್ಲ. ಎಲ್ಲಾ ಗೌರವಾಧರಗಳೊಂದಿಗೆ ಈ ಪ್ರಶಸ್ತಿಯನ್ನು ಹಿಂದಿರುಗಿಸುತ್ತಿದ್ದೇನೆ..!

ಅನ್ಯಥಾ ಭಾವಿಸದಿರಿ’ ಎಂದ ಸಿದ್ದೇಶ್ವರ ಸ್ವಾಮೀಜಿಗಳು ‘ಪದ್ಮಶ್ರೀ’ ಪ್ರಶಸ್ತಿಯನ್ನು ಸ್ವೀಕರಿಸುವುದನ್ನು ನಿರಾಕರಿಸಿದ್ದರು..!

# ಗೌರವ ಡಾಕ್ಟರೇಟ್ ಸಹ ಸ್ವೀಕರಿಸಿರಲಿಲ್ಲ ಶ್ರೀಗಳು..! —

ಕರ್ನಾಟಕ ವಿಶ್ವವಿದ್ಯಾಲಯ ಸಿದ್ದೇಶ್ವರ ಸ್ವಾಮೀಜಿಗಳಿಗೆ ಗೌರವ ಡಾಕ್ಟರೇಟ್ ಪ್ರಕಟಿಸಿತ್ತು. ಅದನ್ನೂ ಶ್ರೀಗಳು ಸ್ವೀಕರಿಸಿರಲಿಲ್ಲ. ಹೀಗೆಯೇ ತಮಗೆ ಸಂದ ಎಷ್ಟೋ ಪ್ರಶಸ್ತಿ ಮತ್ತು ಪುರಸ್ಕಾರಗಳನ್ನು ಅವರು ವಿನಮ್ರವಾಗಿಯೇ ನಿರಾಕರಿಸಿದ್ದರು. ಇದಕ್ಕೆ ಕಾರಣವೇನು? ಎಂಬ ಪ್ರಶ್ನೆಗೆ, ಸಿದ್ದೇಶ್ವರ ‘ಶ್ರೀಗಳು ಆಧ್ಯಾತ್ಮ, ಆದರ್ಶ ಮತ್ತು ನೈತಿಕತೆ ಬಗೆಗೆ ಕೇವಲ ಬೋಧನೆ ಮಾಡುವುದಷ್ಟೇ ಅಲ್ಲ. ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದಾರೆ. ನುಡಿದಂತೆ ನಡೆಯುವ ಮತ್ತು ನಡೆದಂತೆಯೇ ನುಡಿಯುವ ವ್ಯಕ್ತಿತ್ವ ಅವರದ್ದಾಗಿತ್ತು’ ಎಂದು ಸ್ವಾಮೀಜಿಯನ್ನು ಹತ್ತಿರದಿಂದ ಕಂಡಿರುವವರೊಬ್ಬರು ಸ್ಮರಿಸುತ್ತಾರೆ..!

ಸಿದ್ದೇಶ್ವರ ಸ್ವಾಮಿಗಳಿಗೆ ಓದಿನ ಮೇಲೆ ಅಪಾರ ಪ್ರೀತಿ ಇತ್ತು..! —

ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ನಂತರ ಸ್ನಾತಕೋತ್ತರ ವಿದ್ಯಾಭ್ಯಾಸಕ್ಕೆ ಕೊಲ್ಹಾಪುರ ವಿಶ್ವವಿದ್ಯಾನಿಲಯದಿಂದ ತತ್ವಶಾಸ್ತ ವಿಷಯದಲ್ಲಿ ಎಂ.ಎ. ಪದವಿಯನ್ನು ಶ್ರೀಗಳು ಉನ್ನತ ಶ್ರೇಣಿಯಲ್ಲಿ ಪಾಸ್​ ಮಾಡಿದ್ದರು. ಎಂ.ಎ. ಪದವಿಯ ಅಭ್ಯಾಸದ ಸಮಯದಲ್ಲಿ ಸಿದ್ಧೇಶ್ವರರರು ಕೊಲ್ಹಾಪುರದಲ್ಲಿ ವಿಜಯ ಪಾಟೀಲರ ಮನೆಯಲ್ಲಿ ವಾಸವಿದ್ದರು..!

ಆ ಅವಧಿಯಲ್ಲಿಯೇ ತಮ್ಮ ಗುರುಗಳಾದ ಮಲ್ಲಿಕಾರ್ಜುನ ಸ್ವಾಮಿಗಳು ಮಾಡಿದ ಪ್ರವಚನಗಳನ್ನು ಒಂದುಗೂಡಿಸಿ ‘ಸಿದ್ಧಾಂತ ಶಿಖಾಮಣಿ’ ಎಂಬ ಪುಸ್ತಕ ಬರೆದು ಗುರುಗಳ ಹೆಸರಿನಲ್ಲೇ ಪ್ರಕಟಿಸಿದ್ದರು..!

ಆಗ ಅವರಿಗೆ ಕೇವಲ 19 ವರ್ಷ ಮಾತ್ರ ಆಗಿತ್ತೆಂಬುದು ಗಮನಾರ್ಹವಾಗಿದೆ. ಸಿದ್ದೇಶ್ವರರ ಮಾತು ಎಂದರೆ ಮಲ್ಲಿಕಾರ್ಜುನ ಸ್ವಾಮಿಗಳಿಗೆ ಬಲು ಪ್ರೀತಿ.

ಆತ ಮಹಾ ಬುದ್ದಿವಂತ, ಆಧ್ಯಾತ್ಮಿಕದಂತೆ ಲೌಕಿಕ ವಿಷಯಗಳಲ್ಲೂ ವಿಶೇಷ ಪರಿಜ್ಞಾನವಿತ್ತು.

ಮುಂದೆ ಜಗತ್ತಿಗೇ ದೊಡ್ಡವನಾಗುತ್ತಾನೆ ಎಂದು ವಿಶ್ವಾಸದಿಂದ ಎಲ್ಲರೆದುರು ಹೇಳುತ್ತಿದ್ದರು ಅವರು..!

ಸ್ನಾತಕೋತ್ತರ ಪದವಿ ಪಡೆದು ವಿಜಯಪುರಕ್ಕೆ ಹಿಂದಿರುಗಿದ ನಂತರ ಸಿದ್ದೇಶ್ವರರಿಗೆ ಭಗವದ್ಗೀತೆ, ಉಪನಿಷತ್ತುಗಳ ಬಗೆಗೆ ಮಲ್ಲಿಕಾರ್ಜುನ ಸ್ವಾಮಿಗಳು ವ್ಯಾಖ್ಯಾನವನ್ನು ನೀಡಿ ಅವರ ಜ್ಙಾನದಿಗಂತವನ್ನು ವಿಸೃತಗೊಳಿಸಿದ್ದರು. ಪೂಜ್ಯರು ಉಪನಿಷತ್ತುಗಳು, ಭಗವದ್ಗೀತೆ, ಯೋಗಸೂತ್ರ, ವಚನಶಾಸ್ತ್ರ ಮುಂತಾದ ವಿಷಯಗಳ ಬಗೆಗೆ ತಾವು ಹೇಗೆ ಗುರು ಮುಖೇನ ಕಲಿತ ಜ್ಙಾನವನ್ನು ಬಳಸಿಕೊಂಡು ಬೋಧಪ್ರದ ಪ್ರವಚನಗಳನ್ನು ನೀಡುತ್ತಿದ್ದರು..!

ಗಹನವಾದ ವೇದಾಂತ ತತ್ವಗಳನ್ನು ಅತ್ಯಂತ ಸರಳವಾಗಿ ಜನಮಾನಸದಲ್ಲಿ ಉಳಿಯುವಂತೆ ವಿವರಿಸುವುದೇ ಅವರ ವೈಶಿಷ್ಟ್ಯವಾಗಿತ್ತು..!

# ನಡೆದಾಡುವ ದೇವರು ಎಂದೇ ಪ್ರಸಿದ್ಧಿಯಾಗಿದ್ದರು ಸಿದ್ದೇಶ್ವರ ಸ್ವಾಮಿಗಳು..! —

ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿ ವಿಜಯಪುರದ ಜೀವಂತ ನಡೆದಾಡುವ ದೇವರು ಎಂದು ಪ್ರಸಿದ್ಧರಾಗಿದ್ದರು..!

ಅವರ ಮಾಡಿದ ಭಾಷಣಗಳು ಪ್ರತಿಯೊಬ್ಬರ ಜೀವನದಲ್ಲಿ ಅದ್ಭುತ ರೂಪಾಂತರವನ್ನು ತರುತ್ತವೆ ಮತ್ತು ಅಂತಿಮವಾಗಿ ಶಾಂತಿಯುತ ಮತ್ತು ಸಂತೋಷದ ಜೀವನಕ್ಕೆ ಕಾರಣವಾಗುತ್ತದೆ.

ಅವರ ಗುಣಗಳನ್ನು ವಿವರಿಸುವಲ್ಲಿ ಪದಗಳು ಕಡಿಮೆಯಾಗಬಹುದು. ಅವರ ಅನಿಸಿಕೆಗಳನ್ನು ಅನಕ್ಷರಸ್ಥರಿಂದಲೂ ಚೆನ್ನಾಗಿ ಅರ್ಥಪೂರ್ಣವಾಗಿ ಅರ್ಥೈಸಿಕೊಳ್ಳಬಹುದು. ಸಂತೋಷದಿಂದ ಸಾವಿರಾರು ಜನರು ಜೀವನವನ್ನು ನಡೆಸುವಂತೆ ಮಾಡಿರುವ ಶ್ರೇಯ ಅವರಿಗೇ ಸಲ್ಲುತ್ತದೆ..!

.# ಪತ್ರಕರ್ತರ ರಾಜ್ಯ ಸಮ್ಮೇಳನದ ಮುಂದೂಡಿದ್ದಾರೆ‌ ‘ಪತ್ರಕರ್ತರ ಸಂಘದ ಅಧ್ಯಕ್ಷ’ರಾದ ಶಿವಾನಂದ ತಗಡೂರು ಅವರು..! —

ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ‘ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ’ರಾದ ಶಿವಾನಂದ ತಗಡೂರು ಅವರು ಸಿದ್ದೇಶ್ವರ ಸ್ವಾಮಿಗಳನ್ನು ಅಹ್ವಾನಿಸಿದ್ದರು. ಆಗ ಬಲು ನಗುಮುಖವಾಗಿಯೇ ಒಪ್ಪಿಕೊಂಡಿದ್ದರು ಸಿದ್ದೇಶ್ವರ ಸ್ವಾಮಿಗಳು. ಇಂತಹ ಸಿದ್ದೇಶ್ವರ ಸ್ವಾಮಿಗಳು ಈಗ ನಗುಮುಖದಲ್ಲಿಯೇ ನಮ್ಮೆನ್ನೆಲ್ಲಾ ಅಗಲಿದ್ದಾರೆ. ಆ ಕಾರಣಕ್ಕೇ ಬಿಜಾಪುರದ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಮುಂದೆ ಹಾಕಿದ್ದಾರೆ ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರು..!


 ಕೆ.ಶಿವು.ಲಕ್ಕಣ್ಣವರ

One thought on “ವಿರಮಿಸಿದ ವಿಜಯಪುರದ ವಿರಾಗಿಯು

Leave a Reply

Back To Top