ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಗಝಲ್

ಶಂಕರಾನಂದ ಹೆಬ್ಬಾಳ

ಬಡತನದ ಬವಣೆ ನೋವು ನಲಿವುಗಳಲಿ ಕಂಡೆ
ಒಳಿತು ಕೆಡಕುಗಳ ನಿತ್ಯಸತ್ಯವ ಆಂತರ್ಯದಲಿ ಕಂಡೆ….!!!

ಬಣ್ಣನೆಗೆ ನಿಲುಕದ ಮಾರ್ಮಿಕ ಕಟುಸತ್ಯಗಳ ಜೊತೆ
ಜೀವಂತ ಹೆಣದಂತೆ ಬದುಕಿ ಇರುವವರಲಿ ಕಂಡೆ…!!!

ಸೋತು ಸೊರಗಿ ಮೂಕವಾದ ಬದುಕಿನಲಿ
ಸುಕ್ಕುಗಟ್ಟಿದ ಚರ್ಮ ಬತ್ತಿದ ಬೆವರಿನಲಿ ಕಂಡೆ…!!!

ಹರಿದ ಚಿಂದಿ ಬಟ್ಟೆಗಳ ನಡುವೆ ನಾಳೆ ಶ್ರೀಮಂತನಾಗುವೆ
ಎನ್ನುವ ಕನಸ ಹೊತ್ತುಕೊಂಡಿರುವ ಬಡವರಲಿ ಕಂಡೆ…!!!

ಕೊನೆತನಕ ದುಡಿದರು ಬಡತನ ದೂರಾಗಲಿಲ್ಲ ಎಂಬ
ಅಭಿನವನ ಮಾತು ಸುಳ್ಳಲ್ಲ ಎನ್ನುವರ ಮನದಲಿ ಕಂಡೆ…!!!

************

About The Author

Leave a Reply

You cannot copy content of this page

Scroll to Top