ಜ್ಞಾನಪೀಠ ವಿಜೇತರು

ವಿ.ಕೃ. ಗೋಕಾಕ್

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ವಿ.ಕೃ. ಗೋಕಾಕ್..!

ಕನ್ನಡದಲ್ಲಿ ನವ್ಯಕಾವ್ಯ ಪ್ರವರ್ತಕರಾಗಿ ‘ವಿನಾಯಕ’ ಕಾವ್ಯನಾಮದಿಂದ ಕೃತಿಗಳ ರಚನೆ ಮಾಡಿರುವ ವಿನಾಯಕ ಕೃಷ್ಣ ಗೋಕಾಕರು ಕೃಷ್ಣರಾಯ-ಸುಂದರಮ್ಮ ದಂಪತಿಗಳಿಗೆ ೯-೮-೧೯0೯ರಲ್ಲಿ ಜನಿಸಿದರು.

ಸವಣೂರಿನಲ್ಲಿ ಶಾಲಾ ವಿದ್ಯಾಭ್ಯಾಸ ಮುಗಿಸಿ ಧಾರವಾಡದಲ್ಲಿ ಕರ್ನಾಟಕ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದು. ೧೯೩೧ರಲ್ಲಿ ಪುಣೆಯ ಫಗ್ರ್ಯುಸನ್ ಕಾಲೇಜಿನಲ್ಲಿ ಅನಂತರ ಆಕ್ಸಫರ್ಡ್ ವಿಶ್ವವಿದ್ಯಾನಿಲಯದಲ್ಲಿ ಎಂ.ಎ. ಪದವಿ ಗಳಿಸಿದರು…

ಉನ್ನತ ಶಿಕ್ಷಣ ಪಡೆದು ವಿದೇಶದಿಂದ ಬಂದ ಮೇಲೆ ಸಾಂಗ್ಲಿಯ ವಿಲ್ಲಿಂಗ್‍ಟನ್ ಕಾಲೇಜಿನಲ್ಲಿ, ಅನಂತರ ಕೊಲ್ಲಾಪುರದ ರಾಜಾರಾಮ್ ಕಾಲೇಜಿನಲ್ಲಿ, ಧಾರವಾಡದ ಕರ್ಣಾಟಕ ಕಾಲೇಜಿನಲ್ಲಿ (೧೯೫೨) ಪ್ರಿನ್ಸಿಪಾಲರಾಗಿ ಕಾರ್ಯನಿರ್ವಹಿಸಿದರು…

೧೯೬೬ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾದರು. ೧೯೭0ರಲ್ಲಿ ಸಿಮ್ಲಾದ ಇನ್ಸ್ಟಿಟ್ಯೂಟ್ ಆಫ್ ಸ್ಟಡೀಸ್ ನಿರ್ದೇಶಕರಾದರು…

ಆಂಧ್ರದ ಪುಟ್ಟಪರ್ತಿಯ ಸತ್ಯಸಾಯಿ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಗೋಕಾಕರು, ಪಿ. ಇ. ಎನ್. ಅಧಿವೇಶನಕ್ಕೆ ೧೯೫೭ರಲ್ಲಿ ಜಪಾನಿಗೆ ತೆರಳಿದರು. ಬೆಲ್ಜಿಯಂನಲ್ಲಿ ಕವಿ ಸಮ್ಮೇಳನದಲ್ಲಿ ಭಾಗವಹಿಸಿದರು, ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದರು…

ಗೋಕಾಕರಿಗೆ ಹಲವಾರು ಪ್ರಶಸ್ತಿ ಗೌರವಗಳು ಸಂದಿವೆ. ಭಾರತ ಸರ್ಕಾರದ ಪದ್ಮಭೂಷಣ ಪ್ರಶಸ್ತಿ (೧೯೫೮), ಅಮೆರಿಕಾದ ಫೆಸಿಫಿಕ್ ವಿಶ್ವವಿದ್ಯಾಲಯ, ಕರ್ನಾಟಕ, ಮೈಸೂರು, ಬೆಂಗಳೂರು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ ಗಳನ್ನು ನೀಡಿವೆ…

ಕನ್ನಡ ಸಾಹಿತ್ಯ ಪರಿಷತ್ತು ೧೯೫೮ರಲ್ಲಿ ಬಳ್ಳಾರಿಯಲ್ಲಿ ನಡೆದ ೪೦ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಪದವಿಗೆ ಆಯ್ಕೆ ಮಾಡಿ ಗೌರವಿಸಿದೆ. ದ್ಯಾವಾ ಪೃಥಿವಿ ಖಂಡಕಾವ್ಯಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಿಕ್ಕಿದೆ ವಿ.ಕೆ.ಗೋಕಾಕರಿಗೆ…

ತಮ್ಮ ‘ಭಾರತ ಸಿಂಧುರಶ್ಮಿ’ ಮಹಾಕಾವ್ಯಕ್ಕೆ ಜ್ಞಾನಪೀಠ ಪ್ರಶಸ್ತಿ ಪಡೆದಿರುವ ಗೋಕಾಕರು ಕನ್ನಡಕ್ಕೆ ಉತ್ತಮ ಕೃತಿಗಳನ್ನು ನೀಡಿದ್ದಾರೆ. ಸಮರಸವೇ ಜೀವನ (ಇಜ್ಜೋಡು) ಬೃಹತ್ ಕಾದಂಬರಿ ಇವರಿಗೆ ಹೆಸರನ್ನು ತಂದುಕೊಟ್ಟಿದೆ.
ಇವರು ಭಾಷಾ ಆಯೋಗದ ಅಧ್ಯಕ್ಷರಾಗಿ ಸಲ್ಲಿಸಿದ ಗೋಕಾಕ ವರದಿ ಇತಿಹಾಸವನ್ನೇ ಸೃಷ್ಟಿಸಿತು…

ನವ್ಯತೆ ಹಾಗೂ ಕಾವ್ಯ ಜೀವನ, ವಿಶ್ವಮಾನವ ದೃಷ್ಟಿ, ಸೌಂದರ್ಯ ಮೀಮಾಂಸೆ, ಆಂಗ್ಲ ಸಾಹಿತ್ಯಕ್ಕೆ ನೀಡಿದ ಸ್ಫೂರ್ತಿ ಇತ್ಯಾದಿ ವಿಮರ್ಶಾ ಗ್ರಂಥಗಳು, ಜನನಾಯಕ, ವಿಮರ್ಶಕ ವೈದ್ಯ, ಯುಗಾಂತರ, ಮುಂತಾದ ನಾಟಕಗಳು ಇವರಿಂದ ರಚಿತವಾಗಿವೆ.
ಇಂಗ್ಲಿಷಿನಲ್ಲಿಯೂ ಹಲವಾರು ಕೃತಿಗಳನ್ನು ರಚಿಸಿದ್ದಾರೆ…

ಅರವಿಂದ ಭಕ್ತರು, ಬೇಂದ್ರೆ ಆರಾಧಕರೂ ಆಗಿದ್ದ ಗೋಕಾಕರು ೨೮-೪-೧೯೯೨ರಲ್ಲಿ ಮುಂಬಯಿಯಲ್ಲಿ ನಿಧನರಾದರು..!

*******
— ಕೆ.ಶಿವು.ಲಕ್ಕಣ್ಣವರ

Leave a Reply

Back To Top