ಕಾವ್ಯಯಾನ

ಗಝಲ್

woman in purple and gold dress

ಮರುಳಸಿದ್ದಪ್ಪ ದೊಡ್ಡಮನಿ

ನನ್ನೆದೆಯ ಒಳಗ ನೋವು ತಂದಿರುವೆ ಹೇಳಿ ಹೋಗುಕಾರಣ
ಸತ್ತ ಕನಸುಗಳ ಹೊತ್ತು ಹರದಾರಿ ನಡೆದಿರುವೆ ಹೇಳಿಹೋಗುಕಾರಣ

ಜೀವ ಪ್ರೀತಿಯ ಒಡಲೊಳಗೆ ತುಂಬಿಕೊಂಡಿದ್ದೆನೆ
ಗಂಜಿಯಾದರು ಕುಡಿದು ಬದುಕಿಸುವೆ ಹೇಳಿ ಹೋಗುಕಾರಣ

ಸಂದುಕದಲ್ಲಿದ್ದ ಒಂಕಿ ಡಾಬು ಜೂಲ್ಪಿಹೂ ತೋಳ್ ಬಂದಿ ತೊಡಿಸಿರುವೆ
ರೇಶ್ಮಿ ಇಳಕಲ್ಲ ಜರತಾರಿ ಸಿರೆ ಉಡಿಸಿರುವೆ ಹೇಳಿ ಹೋಗುಕಾರಣ

ನನ್ನೊಂದಿಗೆ ಒಮ್ಮೆಯೂ ಮಾತನಾಡಲಿಲ್ಲ ಮೌನ ಮುರಿದು
ನಿನ್ನೊಳಗೆ ಎನು ತುಂಬಿಕೊಂಡಿರುವೆ ಹೇಳಿ ಹೋಗುಕಾರಣ

ಅನುಮಾನಗಳಿದ್ದರೆ ಬಿಡು ಅಗ್ನಿ ಪರಿಕ್ಷೆಯ ನೇಪ ಮಾತ್ರ ಬೇಡ
ಮರುಳ ನಿನ್ನ ಜೊತೆಯಾಗಿ ಹೆಜ್ಜೆ ಹಾಕ ಬೇಕೆಂದಿರುವೆ ಹೇಳಿ ಹೋಗುಕಾರಣ

******

Leave a Reply

Back To Top