ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಗಝಲ್

ಎ.ಹೇಮಗಂಗಾ

ಅವನಿಗಾಗಿ ಕಾದ ಕಣ್ಣ ನೋಟ ಮಬ್ಬಾಗಿದೆ ಸಖಿ
ಅವನಿಲ್ಲದೇ ಯಾವ ಹಬ್ಬವೂ ಬೇಡವಾಗಿದೆ ಸಖಿ

ವಚನ ಮೀರದವ ಇಂದು ವಚನ ಮೀರಿದನೇಕೋ
ಮಿಲನವಿಲ್ಲದ ಯಮುನೆ ತಟ ಭಣಗುಡುತಿದೆ ಸಖಿ

ಒಮ್ಮೆಗೇ ಬಂದು ಪರಿಪರಿಯಾಗಿ ಕಾಡುವ ಅವನು
ರಾಸಲೀಲೆಯಿಲ್ಲದ ಬಾಳು ನೀರಸಗೊಂಡಿದೆ ಸಖಿ

ಸುತ್ತಲಿನ ಗಾಳಿಯೂ ಅವನ ಬರುವಿಕೆ ಸೂಚಿಸುತ್ತಿಲ್ಲ
ಸೊಲ್ಲಿಲ್ಲದೇ ನಗುವಿಲ್ಲದೇ ಮನ ಮಸಣವಾಗಿದೆ ಸಖಿ

ತೊರೆದು ಹೋದ ಶ್ಯಾಮ ಮತ್ತೆ ಬರುವನೇ ಹೇಳು
ಅವನಿರದೇ ಸಾವೇ ಹಿತವಾಗಿ ಹತ್ತಿರ ಸೆಳೆದಿದೆ ಸಖಿ

********

About The Author

Leave a Reply

You cannot copy content of this page

Scroll to Top