ಕಾವ್ಯದಿನಕ್ಕೊಂದುಕವಿತೆ- ನಾಗರಾಜ್ ಹರಪನಹಳ್ಳಿ

1-
ಸುಡು ಬಿಸಿಲು
ಉರಿಬಿಸಿಲು
ಬಯಲು ಸುಡುತ್ತಿದೆ
ನಾಲ್ಕು ಹನಿ ಉದುರಬೇಕಿತ್ತು
ಪ್ರೀತಿಯಂತೆ
…ದೂರವಾದೆ
ಬಿಸಿಲು ಉಲ್ಬಣಿಸಿದೆ



-2-
ಉರಿ ಬಿಸಿಲ ದಾರಿ
ದಾರಿಯಲ್ಲಿ ಕಂಡವರು
ನಕ್ಕರು, ಮಾತಾಡಿದರು
ಆದರೂ
ಸಮಾಧಾನವಾಗಲಿಲ್ಲ



ಉರಿ ಬಿಸಿಲಿನದ್ದೇ ಮಾತು
ಒಂದು ಹನಿ ಪ್ರೀತಿಗಾಗಿ
ಎಲ್ಲರದ್ದೂ ಹುಡುಕಾಟವೇ
ಬಿಸಿಲಿನ  ಅರ್ಥ
ಇಮ್ಮಡಿಸಿತು



-3-
ಭೂಮಿ ತಲ್ಲಣಿಸಿದೆ
ಕಾವ್ಯ ಕಾಣೆಯಾಗಿದೆ
ನೀನು ಹೋದ ಮೇಲೆ
ಯಾರಿಗೆ ಬೇಕು ಈ ಕಾವ್ಯ ?


ಅಕ್ಷರಗಳು ಸಹ
ಬಿಸಿನ ದಾಹಕ್ಕೆ
ಬಳಲಿವೆ



-4-
ನದಿ ದಂಡೆಗೆ ಬಂದೆ
ನದಿ  ಬಾಯರಿಕೆ ಎಂದಿತು
ಕಡಲದಡಕ್ಕೆ ಬಂದೆ
ಅದು ಸಹ ಅಬ್ಬರಿಸಿತು
ಮೋಡ ಕಟ್ಟುವ ಮುಗಿಲಿಗಾಗಿ
ಕಾದಿದ್ದೇನೆ ಎಂದಿತು
ನನ್ನದು
ನಿನ್ನ ಹಸಿವೆಯೇ ಎಂದು
ಮೌನಿಯಾದೆ


3 thoughts on “ಕಾವ್ಯದಿನಕ್ಕೊಂದುಕವಿತೆ- ನಾಗರಾಜ್ ಹರಪನಹಳ್ಳಿ

Leave a Reply

Back To Top