ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಸತ್ಯ ಸೆರೆಯಾಗಿದೆ ಇಂದು ನರಳುತಿದೆ ನೊಂದು
ಸುಳ್ಳೆಂಬ ಮುಳ್ಳು ಕಂಟಿಯಾ ಬೇಲಿಯೊಳು
ಸತ್ಯ ನಲುಗುತಿದೆ ಬೆಂದು ಹೆದರೆನು ನಾನೆಂದು
ಮೋಸದ ಸರಳುಗಳ ಬಲೆಯ ಬಿಲದೊಳು //

ನೋಟಿನಾ ಕಂತೆ ಕಂತೆಯೊಳು
ಅಧಿಕಾರ ಅಂತಸ್ತಿನ ಸುಳಿಯೊಳಗೆ
ಅಳಲಾರದೆ ನಗಲಾರದೆ ಮುಖ ತೋರಲಾಗದೆ
ಹೆಡೆಮುರಿ ಕಟ್ಟಿಸಿಕೊಂಡು ರಟ್ಟೆ ಮುರಿಸಿಕೊಂಡು
ಸೆರೆಯಾಗಿದೆ. ಸತ್ಯ ಸೆರೆಯಾಗಿದೆ. ಮಿಸುಕಾಡದೆ //

ಅಬ್ಬರದ ಮಾತಿನೊಳು ಬೊಬ್ಬಿಡುವ ಸುಳ್ಳಿನೊಳು
ವ್ಯಾಪಾರದ  ರಂಪ ರಟ್ಟು ರಾಡಿಯೊಳು
ಅಸತ್ಯದ ಗೊಬ್ಬರ ತುಂಬಿದ ಆಡಿಯೊಳು
ಚಿಗುರಲಾರದೆ ಮೊಳೆಯಲಾರದೆ
ಮಣ್ಣು ಗೊಬ್ಬರ ಮೀಟಿ ಏಳುವ ಪ್ರಯತ್ನದಲ್ಲಿ
ಸತ್ಯ ಸೆರೆಯಾಗಿದೆ ಸತ್ಯ ಸೆರೆಯಾಗಿದೆ  
ಅಲುಗಾಡದೆ ಮಿಡುಕಾಡದೇ//

ಮೋಸ ವಂಚನೆಯ ಸಂಚಲಿ
ಭ್ರಷ್ಟಾಚಾರದ ಭೂತ ಪ್ರೇತಗಳ ಕುಣಿತದಲಿ
ಲಂಚಕೋರ ಲಪಂಗರ ಕಿಸೆ ನಿಶೆಯೊಳಗೆ
ಅತ್ಯಾಚಾರದ ಕಾಲ್ತುಳಿತದ ನೋವಿನಾ
ಹೆಜ್ಜೆ ಗೆಜ್ಜೆ ಸಪ್ಪಳದ ಮಂಪರಿನಲ್ಲಿ
ಸತ್ಯ ಸೆರೆಯಾಗಿದೆ ಹೆಣ್ಣಿನ ಎದೆಯೊಳಗೆ//

ಗೆಲುವಿನ ನಾಗಾಲೋಟ ಅಟ್ಟಹಾಸ
ಅಧಿಕಾರ ಅಂತಸ್ತು ಸಿರಿವಂತಿಕೆಯ ಭ್ರಮೆ
ಸೊಕ್ಕು ಮದ ದಿಮಾಕಿನ ಅಮಲೊಳಗೆ
ಅಹವಾಲುಗಳ ಉರಿ ಸವಾಲುಗಳ ಜ್ವಾಲೆ
ಬದುಕು ಬಂಡಿಯ ಕೀಲಿಲ್ಲದ ಗಾಲಿಯ ಅಡಿಯೊಳು
ಪುಡಿಯಾಗದೆ ಹುಡಿಗೆ  ಕಣ್ಮುಚ್ಚುತ
ಬೆಳಕಾಗದ ದಿನಗಳ ಹಿಂಸೆಯಲಿ
ಸತ್ಯವೆಂಬ ಕಳಸ ಮಿಂಚಲಾರದೆ
ಸೆರಿಯಾಗಿದೆ ಸತ್ಯ ಸುಳ್ಳಿನಾ  ಕತ್ತಲೆಯೊಳು//


About The Author

8 thoughts on “ಡಾ ಅನ್ನಪೂರ್ಣ ಹಿರೇಮಠ ಅವರ ಕವಿತೆ-ಸತ್ಯ ಸೆರೆಯಾಗಿದೆ”

    1. ಸತ್ಯ ಸೆರೆಯಾಗಿದೆ ಕವಿತೆ ಇಂದಿನ ಕಾಲಮಾನದ ನಿಜ ಸ್ಥಿತಿಯ ಅರಿವು ಮೂಡಿಸುವ ಕಾರ್ಯ ನಿರ್ವಹಿಸಿದೆ. ಡಾ. ಅನ್ನಪೂರ್ಣ ಮೇಡಂ ಅವರಿಗೆ ಅಭಿನಂದನೆಗಳು ಮತ್ತು ಧನ್ಯವಾದಗಳು.

      1. ವಸ್ತು ಸ್ಥಿತಿಯನೊಳಗೊಂಡು ಪ್ರಸ್ತುತ ದಿನಮಾನಕ್ಕೆ ಅರಿತು ನಡೆಯುವ ಕವನ …ಶುಭವಾಗಲಿ

Leave a Reply

You cannot copy content of this page

Scroll to Top