ರಂಗ ಸಂಗಾತಿ
ಗೊರೂರು ಅನಂತರಾಜು
“ಹೆಜ್ಜೆ ಗೆಜ್ಜೆ ತಂಡದಿಂದ
ಯುಗಾದಿ ರಂಗ ಸಂಭ್ರಮ
ನಾಟಕೋತ್ಸವ”

50 ವರ್ಷದ ಸನಿಹದಲ್ಲಿರುವ ಬೆಂಗಳೂರಿನ ಗೆಜ್ಜಹೆಜ್ಜೆ ರಂಗತಂಡವು ಬೆಂಗಳೂರು ಸೇವಾ ಸದನ ರಂಗಮಂದಿರದಲ್ಲಿ ದಿನಾಂಕ 12.03.206 ರಂದು ಯುಗಾದಿ ರಂಗ ಸಂಭ್ರಮ ನಾಟಕೋತ್ಸವ ಏರ್ಪಡಿಸಿತ್ತು. ರಂಗಭೀಷ್ಮ ಬಿ ವಿ ಕಾರಂತರ ಸಂಗೀತ ಸುಂಯೋಜನೆಯಲ್ಲಿ ಮೂಡಿ ಬಂದ ಗಜವದನ ಏರಂಬ ಎಂಬ ಗೀತೆಯನ್ನು ಗಣೇಶಯ್ಯನವರು ಆಡುವುದರ ಮುಖೇನ ನಾಟಕೋತ್ಸವಕ್ಕೆ ಚಾಲನೆ ನೀಡಿದರು ಹಲವಾರು ಪ್ರಸಿದ್ಧ ನಾಟಕಗಳ ರಂಗಗೀತೆಗಳನ್ನು ಒಂದು ಗಂಟೆಗಳ ಕಾಲ ಹಾಡಲಾಯಿತು ತಂಡದ ಹೊಸ ಪ್ರಯೋಗ ಮಾದಕ ಯುವ ಮಾರಕ ಪ್ರದರ್ಶಿಸಲಾಯಿತು. ಯುವ ಜನತೆ ದುಶ್ಚಟಕ್ಕೆ ದಾಸರಾಗ್ತ ಇದ್ದಾರೆ. ಇದರ ಸುತ್ತ ಹೆಣೆಯಲಾದ ಕಥಾ ಹಂದರ ಮನುಷ್ಯ ಅನುಮಾನ ಮತ್ತು ಅವಮಾನದಿಂದ ಕೋಪ ತಾಪ ಆವೇಶ ಚಟ ಬಿದ್ದು ಚಟ್ಯಕೆ ಏರುತ್ತಾನೆ. ಬೀದಿ ಬದಿಗಳಲ್ಲಿ ಜನಸಂದಣಿ ಇರುವ ಜಾಗಗಳಲ್ಲಿ ಶಾಲಾ-ಕಾಲೇಜುನ ಸಮೀಪ ಏರ್ಪೋರ್ಟ್ ಬಸ್ಟ್ಯಾಂಡ್ ರೈಲು ನಿಲ್ದಾಣ ಮುಂತಾದ ಕಡೆಗಳಲ್ಲಿ ಗಾಂಜಾ ಅಫೀಮು ಎಲಾಯಿನ್ ಮತ್ತೇರಿಸುವ ಪದಾರ್ಥಗಳನ್ನು ಮಾರುತಿರುತ್ತಾರೆ. ಯುವಕ ಯುವತಿಯರನ್ನು ದುಶ್ಚಟಕ್ಕೆ ದಾಸರನ್ನಾಗಿಸುವ ವಂಚಕರ ಜಾಲವೇ ವಿಪರೀತವಾಗಿದೆ. ಪ್ರೇಕ್ಷಕರಿಗೆ ನೇರವಾಗಿ ಡ್ರಗ್ಸ್ ಮಾರಾಟ ಕಂಡು ಬಂದಲ್ಲಿ ನಿಮ್ಮ ಹತ್ತಿರದ ಪೊಲೀಸ್ ಠಾಣೆಗೆ ತಿಳಿಸಬೇಕೆಂದು ಒಂದು ಪಾತ್ರ ಹೇಳುತ್ತದೆ. ಯುವ ಜನತೆಯನ್ನು ದುಸ್ಥಿತಿಯಿಂದ ಕಾಪಾಡಬೇಕಾದ ಪರಿಸ್ಥಿತಿ ಒದಗಿ ಬಂದಿರುವುದು ನೋವಿನ ಸಂಗತಿ.

ಧರೆಗೆ ತಂದು ಬಿಟ್ಬಿಟ್ನಪ್ಪ ಆಟ ಆಡ್ಸೋಕೆ ಪಾಠ ಕಲ್ಸೋಕೆ ಈ ಭೂಮಿ ಎಂಬ ರಂಗದ ಮೇಲೆ ಹಾಡೋಕ್ ಬಿಟ್ಟವ್ನೆ, ಕಾಮ ನೇಮ ಲೋಭ ಲಾಭದ ಪಾತ್ರ ಕೊಟ್ಟವ್ನೆ ಅಂತ ಹೇಳ್ತಾ ಪ್ರಹಸನ ಮುಕ್ತಾಯವಾಗುತ್ತದೆ. ನಿಂತ್ಕೋಳಿ ಅಲ್ಲಲ್ಲ ಕುಳಿತುಕೊಳ್ಳಿ ಎಂಬ ಹಾಸ್ಯ ಕಿರು ನಾಟಕ ಮತ್ತು ಎಂಡ್ ಇಲ್ಲದ ಬಂಡ್ ಅವತಾರ ರಾಜಕೀಯ ವಿಡಂಬನಾತ್ಮಕ ನಗೆ ನಾಟಕ ಪ್ರದರ್ಶಿಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗುತ್ತದೆ ತಂಡ. ರಂಗ ಉಪನ್ಯಾಸ ರಂಗ ಗೀತೆಗಳು, ಕಿರು ನಾಟಕ ರಂಗದ ಬಗ್ಗೆ ಮಾತುಗಳು ರಂಗ ಹಾಸ್ಯ ಪಟಾಕಿ ಎಲ್ಲಾ ಸರಿಸುಮಾರು ನಾಲ್ಕು ಗಂಟೆಗಳ ಕಾಲ ನಿರಂತರವಾಗಿ ಪ್ರೇಕ್ಷಕರಿಗೆ ಮನರಂಜನೆಯನ್ನು ನೀಡಿತು ಚಿಂತನೆಗೂ ಚಾಲನೆ ನೀಡಿತು. ಬೆಳಕು ವಿನ್ಯಾಸ ರವಿಶಂಕರ್ ಪ್ರಸಾದನ ಶಿವು, ಉಪನಿಷ ವಸ್ತ್ರಾಲಂಕಾರ ಪುಷ್ಪಲತಾ. ಪ್ರಚಾರ ಅಮಿತಾನಂದ ಶೇಖ ಪಾತ್ರವರ್ಗದಲ್ಲಿ ಮೈಸೂರು ರಮಾನಂದ್, ಶೇಖರ್ ಸೂರ್ಯನಾರಾಯಣರಾವ್, ಲಲಿತಾ ಗಣೇಶಯ್ಯ, ಟಿ.ಜಿ ಹರೀಶ್ ಸಂಗೀತ. ನಾಟಕ ಬರೆದಾಡಿಸಿದವರು ಮೈಸೂರು ರಮಾನಂದ.
ಗೊರೂರು ಅನಂತರಾಜು




